AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah

Siddaramaiah

ಕರ್ನಾಟಕ ರಾಜಕಾರಣದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ನಾಯಕರ ಪೈಕಿ ಸಿದ್ದರಾಮಯ್ಯ ಪ್ರಮುಖರು. ಮೈಸೂರಿನ ವರುಣಾ ಹೋಬಳಿಯ ಸಿದ್ಧರಾಮನಹುಂಡಿಯಲ್ಲಿ 1948ರ ಆಗಸ್ಟ್ 12ರಂದು ಜನಿಸಿದ ಸಿದ್ದರಾಮಯ್ಯನವರ ಪ್ರಾಥಮಿಕ ಶಿಕ್ಷಣ ಹುಟ್ಟೂರಿನಲ್ಲೇ ಆಯಿತು. ಮೈಸೂರಿನಲ್ಲಿ ಬಿಎಸ್ಸಿ ಹಾಗೂ ಕಾನೂನು ಪದವಿ ಪಡೆದ ಅವರು 1978ರ ವರೆಗೆ ವಕೀಲಿ ವೃತ್ತಿ ನಡೆಸುತ್ತಿದ್ದು, ನಂತರ ರಾಜಕೀಯಕ್ಕೆ ಧುಮುಕಿದರು.

1983ರ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾರತೀಯ ಲೋಕದಳದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಸಿದ್ದರಾಮಯ್ಯ, ನಂತರ ರಾಜಕೀಯದಲ್ಲಿ ಹಿಂತಿರುಗಿ ನೋಡಲೇ ಇಲ್ಲ. ಬಳಿಕ ಜನತಾ ದಳಕ್ಕೆ ಸೇರಿದ ಅವರು, ತರುವಾಯ ನಾಯಕತ್ವದ ವಿರುದ್ಧ ಅಸಮಾಧಾನದಿಂದ ಪಕ್ಷ ತೊರೆದು ಕಾಂಗ್ರೆಸ್ ಸೇರಿದರು. ಎರಡು ಬಾರಿ ಉಪಮುಖ್ಯಮಂತ್ರಿಯಾಗಿದ್ದ ಅವರು ಹಣಕಾಸು ಸಚಿವರಾಗಿ ಹಲವು ಬಾರಿ ಕಾರ್ಯನಿರ್ವಹಿಸಿದ್ದಾರೆ. ಇದೀಗ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಹಿಂದುಳಿದ ವರ್ಗಗಳ ನಾಯಕನೆಂದು ತಮ್ಮನ್ನು ಬಿಂಬಿಸಿಕೊಂಡಿರುವ ಸಿದ್ದರಾಮಯ್ಯ, 2013ರ ವಿಧಾನಸಭೆ ಚುನಾವಣೆಗೂ ಮುನ್ನ ಬೃಹತ್ ಅಹಿಂದ ಸಮಾವೇಶ ಆಯೋಜಿಸಿ ರಾಜಕೀಯ ಬಲ ಪ್ರದರ್ಶನ ಮಾಡಿದ್ದರು.

ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಅಧಿಕಾರ ಚಲಾಯಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಯೂ ಸಿದ್ದರಾಮಯ್ಯ ಅವರದ್ದಾಗಿದೆ.

ಮುಖ್ಯಮಂತ್ರಿಯಾಗಿ ಮೊದಲ ಅವಧಿಯಲ್ಲಿ (2013 – 2018) ಅನ್ನಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯಗಳಂತಹ ಹಲವು ‘ಭಾಗ್ಯ’ಗಳನ್ನು ಘೋಷಣೆ ಮಾಡಿದ್ದ ಸಿದ್ದರಾಮಯ್ಯ, ಭಾರೀ ಜನಪ್ರಿಯತೆಯ ಹೊರತಾಗಿಯೂ ಸ್ವಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿರುದ್ಧ ಸೋಲನುಭವಿಸಿದ್ದರು. ಆದರೆ, ಬಾದಾಮಿಯಿಂದಲೂ ಸ್ಪರ್ಧಿಸಿದ್ದ ಅವರು, ಅಲ್ಲಿ ಗೆಲುವು ಸಾಧಿಸಿದ್ದರು. 2023ರ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ಇದೀಗ ಎರಡನೇ ಅವಧಿಗೆ (2023 ಮೇ) ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇನ್ನೂ ಹೆಚ್ಚು ಓದಿ

ಇದು ಆಡಳಿತವಲ್ಲ, ಸಂಘಟಿತ ಲೂಟಿ: ಸಿಲಿಂಡರ್ ದರ ಏರಿಕೆ ವಿರುದ್ಧ ಸಿದ್ದರಾಮಯ್ಯ ಕಿಡಿ

ದೇಶಾದ್ಯಂತ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆಯಾಗಿದ್ದು, ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಚುನಾವಣೆಯ ನಂತರ ಉದ್ದೇಶಪೂರ್ವಕವಾಗಿ ಬೆಲೆ ಹೆಚ್ಚಿಸಲಾಗಿದೆ ಎಂದು ಆರೋಪಿಸಿದ್ದಾರೆ. ಈ ಬೆಲೆ ಏರಿಕೆ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳ ಮೇಲೆ ಭಾರಿ ಪರಿಣಾಮ ಬೀರಲಿದೆ ಎಂದಿದ್ದಾರೆ.

ಒಳಮೀಸಲಾತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ: ಪರಿಷ್ಕೃತ ರೋಸ್ಟರ್ ಜಾರಿಗೆ ಸಂಪುಟ ಅಸ್ತು

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅತ್ಯಂತ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಅದರಲ್ಲೂ ಪ್ರಮುಖವಾಗಿ ಒಳಮೀಸಲಾತಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ಏ.27ರಂದು ಮಾಡಲಾಗಿದ್ದ ಆದೇಶ ಹಿಂಪಡೆಯಲು ತೀರ್ಮಾನಿಸಲಾಗಿದೆ. ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಧಾರಗಳ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ ಮಳೆಯಿಂದ ಅವಾಂತರ ಬೆನ್ನಲ್ಲೇ ಸರ್ಕಾರ ಅಲರ್ಟ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರಿನಲ್ಲಿ ಮಳೆಯಿಂದ ಸರಣಿ ಅವಾಂತರಗಳು ಹೆಚ್ಚಾಗದಂತೆ ರಾಜ್ಯ ಸರ್ಕಾರ ಫುಲ್​​ ಅಲರ್ಟ್​ ಆಗಿದೆ. ಆ ನಿಟ್ಟಿನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ಮಾಡಲಾಗಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಖಡಕ್​ ಸೂಚನೆಗಳನ್ನು ನೀಡಿದ್ದಾರೆ.

ನಾಯಕತ್ವ ಗಟ್ಟಿಮಾಡಿಕೊಳ್ಳಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್!

ರಾಜ್ಯ ಕಾಂಗ್ರೆಸ್​ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಕೋಲಾಹಲವನ್ನೇ ಸೃಷ್ಟಿಸಿದೆ. ಸಿಎಂ ಸ್ಥಾನ ಬೇಕೇ ಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಪಟ್ಟು ಹಿಡಿದಿದ್ದಾರೆ. ಈ ಸಂಬಂಧ ಈಗಾಗಲೇ ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸುತ್ತಲೇ ಬಂದಿದ್ದಾರೆ. ಆದ್ರೆ, ಇದಕ್ಕೆ ಹೈಕಮಾಂಡ್ ತಲೆಕೆಡಿಸಿಕೊಂಡಂತಿಲ್ಲ. ಇನ್ನೊಂದೆಡೆ ಡಿಕೆ ಶಿವಕುಮಾರ್ ಟಕ್ಕರ್ ಕೊಡಲು ಇತ್ತ ಸಿದ್ದರಾಮಯ್ಯ ಹಾಗೂ ತಂಡ ಮೆಗಾ ತಂತ್ರಗಾರಿಗೆ ಮಾಡುತ್ತಿದ್ದು. ಇತಿಹಾಸದಲ್ಲೇ ಮೊದಲು ಬರೋಬ್ಬರಿ ನಾಲ್ಕು ಬಾರಿ ಗುಪ್ತಚರ ಮುಖ್ಯಸ್ಥರ ಬದಲಾವಣೆ ಮಾಡಲಾಗಿದೆ.

ಸಿಎಂ ಸಿದ್ದರಾಮಯ್ಯ ಮನೇಲಿದ್ದಾಗ್ಲೇ ಕಂಪೌಂಡ್ ಮೇಲೆ ಬಿದ್ದ ಮರದ ಕೊಂಬೆಗಳು, ಕಬ್ಬಿಣದ ವಾಲ್‌ಗಳು! ತಪ್ಪಿದ ಅನಾಹುತ

ಬೆಂಗಳೂರಿನಲ್ಲಿ ಏಪ್ರಿಲ್ ತಿಂಗಳ ದಾಖಲೆ ಮುರಿದ ಭಾರಿ ಮಳೆಗೆ ಸಿಎಂ ಸಿದ್ದರಾಮಯ್ಯ ಅವರ ‘ಕೃಷ್ಣ’ ನಿವಾಸದ ಗೋಡೆ ಮತ್ತು ಕಾಂಪೌಂಡ್ ಮೇಲೆ ಕಬ್ಬಿಣದ ವಾಲ್‌ಗಳು ಹಾಗೂ ಮರದ ಕೊಂಬೆಗಳು ಕುಸಿದು ಬಿದ್ದಿವೆ. ಸಿಎಂ ಮನೆಯಲ್ಲಿದ್ದಾಗ್ಲೇ ಈ ಘಟನೆ ಸಂಭವಿಸಿದ್ದು, ಭಾರಿ ದುರಂತ ತಪ್ಪಿದೆ. ವಿಡಿಯೋ ಇಲ್ಲಿದೆ ನೋಡಿ.

ಮಳೆಗೆ ಕಾಂಪೌಂಡ್ ಕುಸಿದು 7 ಜನ ಸಾವು: ಮೃತರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಆವರಣ ಗೋಡೆ ಕುಸಿದು ಏಳು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಭಾರೀ ಮಳೆಯಿಂದಾದ ಈ ದುರಂತದಲ್ಲಿ ಮೃತಪಟ್ಟ ಬಡ ಬೀದಿಬದಿ ವ್ಯಾಪಾರಿಗಳು ಹಾಗೂ ದಾರಿಹೋಕರಿಗೆ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಇಂತಹ ಘಟನೆಗಳ ಬಗ್ಗೆ ತನಿಖೆಗೆ ಆದೇಶಿಸಲಾಗಿದ್ದು, ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಲಾಗಿದೆ.

ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಸೆಳೆಯಲು ರಾಜ್ಯ ಸರ್ಕಾರದ ‘ಶಿಕ್ಷಣ ಗ್ಯಾರಂಟಿ’ ಅಸ್ತ್ರ!

2025-26ನೇ ಶೈಕ್ಷಣಿಕ ಸಾಲಿನ ಫಲಿತಾಂಶದ ಬಳಿಕ ಶಿಕ್ಷಣ ಕ್ಷೇತ್ರದಲ್ಲಿ ಪೈಪೋಟಿ ಏರ್ಪಟ್ಟಿದೆ. ಖಾಸಗಿ ಸಂಸ್ಥೆಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದರೆ, ಇತ್ತ ರಾಜ್ಯ ಸರ್ಕಾರವು ಕೂಡ ಸರ್ಕಾರಿ ಶಾಲಾ-ಕಾಲೇಜುಗಳತ್ತ ಪೋಷಕರನ್ನು ಮತ್ತು ವಿದ್ಯಾರ್ಥಿಗಳನ್ನು ಸೆಳೆಯಲು ಹೊಸ ಆಯಾಮದಲ್ಲಿ ಹೆಜ್ಜೆ ಇಟ್ಟು ಗಮನಸೆಳೆದಿದೆ. ಸರ್ಕಾರಿ ಶಾಲಾ-ಕಾಲೇಜುಗಳಲ್ಲೂ ‘ಶಿಕ್ಷಣ ಗ್ಯಾರಂಟಿ’ ನೀಡುವ ಭರವಸೆ ನೀಡಿದೆ. ಹಾಗಾದರೆ, ಸರ್ಕಾರಿ ಶಾಲಾ ಕಾಲೇಜುಗಳಿಗೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಏನು? ಸಂಪೂರ್ಣ ಮಾಹಿತಿ ಇಲ್ಲಿದೆ.

ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ದೆಹಲಿಯಲ್ಲಿ ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!

ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕಲಹ ಮುಂದುವರಿದಿದೆ. ಈಮಧ್ಯೆ ಸಿಎಂ ಸಿದ್ದರಾಮಯ್ಯ ಬಣ ದೆಹಲಿಯಲ್ಲಿ ಅಹಿಂದ ಅಸ್ತ್ರ ಪ್ರಯೋಗಿಸಿದ್ದು, ಸತೀಶ್ ಜಾರಕಿಹೊಳಿ ಮತ್ತು ಹೆಚ್.ಸಿ. ಮಹದೇವಪ್ಪ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ. ದಲಿತ ಮುಖ್ಯಮಂತ್ರಿ ಕೂಗಿಗೆ ತಾವು ಬದ್ಧವೆಂದು ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಡಿಕೆ ಶಿವಕುಮಾರ್ ಬಣ ಮೇ ತಿಂಗಳಲ್ಲಿ ಶುಭಸುದ್ದಿಯ ನಿರೀಕ್ಷೆಯಲ್ಲಿದೆ. ಅಹಿಂದ ನಾಯಕರು ತಮ್ಮ ಸ್ಥಾನಮಾನಗಳ ಕುರಿತು ಸ್ಪಷ್ಟತೆ ಬಯಸಿ ದೆಹಲಿಗೆ ತೆರಳಿದ್ದಾರೆ.

ಸೀಕ್ರೆಟ್ ಮೀಟಿಂಗ್​ನಲ್ಲೂ ಮನಬಿಚ್ಚಿ ಮಾತನಾಡದ ಸಿಎಂ ಸಿದ್ದರಾಮಯ್ಯ! ಆತಂಕಕ್ಕೆ ಒಳಗಾದ್ರಾ ಅಹಿಂದ ಸಚಿವರು?

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿದ್ದು, ಸಿಎಂ ಸಿದ್ದರಾಮಯ್ಯ ಅವರ ನಿಗೂಢ ಮೌನ ಅಹಿಂದ ಸಚಿವರಿಗೆ ಆತಂಕ ತಂದಿದೆ. ತಮ್ಮ ಸ್ಥಾನಮಾನ ಮತ್ತು ಭವಿಷ್ಯದ ದೃಷ್ಟಿಯಿಂದ ಸತೀಶ್ ಜಾರಕಿಹೊಳಿ ಹಾಗೂ ಮಹದೇವಪ್ಪ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸ್ಪಷ್ಟನೆ ಕೋರಿದ್ದಾರೆ.

ಡಿಕೆ ಶಿವಕುಮಾರ್ ವಾಪಸಾಗ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಬಣ ದೆಹಲಿಗೆ! ಕಾಂಗ್ರೆಸ್​ನಲ್ಲಿ ಜೋರಾಯ್ತು ಡೆಲ್ಲಿ ಟೂರ್ ಪಾಲಿಟಿಕ್ಸ್

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ಒಳಗಿಂದೊಳಗೆಯೇ ಮತ್ತೆ ತಾರಕಕ್ಕೇರಿದೆ. ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಭೇಟಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರು ಹೈಕಮಾಂಡ್ ಕದ ತಟ್ಟಿದ್ದಾರೆ. ಮೇ 4ರ ಪಂಚ ರಾಜ್ಯಗಳ ಫಲಿತಾಂಶದ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆಯ ಗಾಳಿ ಬೀಸುವ ಲಕ್ಷಣಗಳು ದಟ್ಟವಾಗಿವೆ.

ಕೆಎಎಸ್​​​ ಕಟ್ಟಡ ಉದ್ಘಾಟಿಸಿದ ಸಿಎಂ, ಡಿಸಿಎಂ: ಆದಷ್ಟು ಬೇಗ ಪ್ರಮೋಷನ್ ಎಂದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಇನ್ಫೆಂಟ್ರಿ ರಸ್ತೆಯಲ್ಲಿರುವ ಕೆಎಎಸ್ ಅಧಿಕಾರಿಗಳ ಸಂಘದ ನವೀಕೃತ ಕಟ್ಟಡವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಸನ್ಮಾನ ಪತ್ರ ಬಿಡುಗಡೆ ಮಾಡಲಾಯಿತು. 28 ವರ್ಷಗಳ ನಂತರ ನವೀಕರಣಗೊಂಡ ಈ ಕಟ್ಟಡ ಕೆಎಎಸ್ ಅಧಿಕಾರಿಗಳ ಸೇವೆಯನ್ನು ಸ್ಮರಿಸುತ್ತದೆ.

ಆಸ್ಪತ್ರೆಯಿಂದಲೇ ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ

ಯೋಜನೆ ಮತ್ತು ಸಾಂಖಿತ ಇಲಾಖೆ ಸಚಿವ ಡಿ ಸುಧಾಕರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸದ್ಯ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಸುಧಾಕರ್ ಅವರ ಆರೋಗ್ಯ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಏಪ್ರಿಲ್ 25) ಕಿಮ್ಸ್ ಆಸ್ಪತ್ರಗೆ ಭೇಟಿ ನೀಡಿ ಸುಧಾಕರ್ ಅವರ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದುಕೊಂಡರು.

  • Ramu Ram
  • Updated on: Apr 25, 2026
  • 6:10 pm