
Siddaramaiah
ಕರ್ನಾಟಕ ರಾಜಕಾರಣದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ನಾಯಕರ ಪೈಕಿ ಸಿದ್ದರಾಮಯ್ಯ ಪ್ರಮುಖರು. ಮೈಸೂರಿನ ವರುಣಾ ಹೋಬಳಿಯ ಸಿದ್ಧರಾಮನಹುಂಡಿಯಲ್ಲಿ 1948ರ ಆಗಸ್ಟ್ 12ರಂದು ಜನಿಸಿದ ಸಿದ್ದರಾಮಯ್ಯನವರ ಪ್ರಾಥಮಿಕ ಶಿಕ್ಷಣ ಹುಟ್ಟೂರಿನಲ್ಲೇ ಆಯಿತು. ಮೈಸೂರಿನಲ್ಲಿ ಬಿಎಸ್ಸಿ ಹಾಗೂ ಕಾನೂನು ಪದವಿ ಪಡೆದ ಅವರು 1978ರ ವರೆಗೆ ವಕೀಲಿ ವೃತ್ತಿ ನಡೆಸುತ್ತಿದ್ದು, ನಂತರ ರಾಜಕೀಯಕ್ಕೆ ಧುಮುಕಿದರು.
1983ರ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾರತೀಯ ಲೋಕದಳದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಸಿದ್ದರಾಮಯ್ಯ, ನಂತರ ರಾಜಕೀಯದಲ್ಲಿ ಹಿಂತಿರುಗಿ ನೋಡಲೇ ಇಲ್ಲ. ಬಳಿಕ ಜನತಾ ದಳಕ್ಕೆ ಸೇರಿದ ಅವರು, ತರುವಾಯ ನಾಯಕತ್ವದ ವಿರುದ್ಧ ಅಸಮಾಧಾನದಿಂದ ಪಕ್ಷ ತೊರೆದು ಕಾಂಗ್ರೆಸ್ ಸೇರಿದರು. ಎರಡು ಬಾರಿ ಉಪಮುಖ್ಯಮಂತ್ರಿಯಾಗಿದ್ದ ಅವರು ಹಣಕಾಸು ಸಚಿವರಾಗಿ ಹಲವು ಬಾರಿ ಕಾರ್ಯನಿರ್ವಹಿಸಿದ್ದಾರೆ. ಇದೀಗ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಹಿಂದುಳಿದ ವರ್ಗಗಳ ನಾಯಕನೆಂದು ತಮ್ಮನ್ನು ಬಿಂಬಿಸಿಕೊಂಡಿರುವ ಸಿದ್ದರಾಮಯ್ಯ, 2013ರ ವಿಧಾನಸಭೆ ಚುನಾವಣೆಗೂ ಮುನ್ನ ಬೃಹತ್ ಅಹಿಂದ ಸಮಾವೇಶ ಆಯೋಜಿಸಿ ರಾಜಕೀಯ ಬಲ ಪ್ರದರ್ಶನ ಮಾಡಿದ್ದರು.
ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಅಧಿಕಾರ ಚಲಾಯಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಯೂ ಸಿದ್ದರಾಮಯ್ಯ ಅವರದ್ದಾಗಿದೆ.
ಮುಖ್ಯಮಂತ್ರಿಯಾಗಿ ಮೊದಲ ಅವಧಿಯಲ್ಲಿ (2013 – 2018) ಅನ್ನಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯಗಳಂತಹ ಹಲವು ‘ಭಾಗ್ಯ’ಗಳನ್ನು ಘೋಷಣೆ ಮಾಡಿದ್ದ ಸಿದ್ದರಾಮಯ್ಯ, ಭಾರೀ ಜನಪ್ರಿಯತೆಯ ಹೊರತಾಗಿಯೂ ಸ್ವಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿರುದ್ಧ ಸೋಲನುಭವಿಸಿದ್ದರು. ಆದರೆ, ಬಾದಾಮಿಯಿಂದಲೂ ಸ್ಪರ್ಧಿಸಿದ್ದ ಅವರು, ಅಲ್ಲಿ ಗೆಲುವು ಸಾಧಿಸಿದ್ದರು. 2023ರ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ಇದೀಗ ಎರಡನೇ ಅವಧಿಗೆ (2023 ಮೇ) ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ತುಮಕೂರು: ಕುರುಬ ಸಾಹಿತಿಗಳ ಸಾಂಸ್ಕೃತಿಕ ಸಮಾವೇಶದಲ್ಲಿ ಸಿದ್ದರಾಮಯ್ಯ-ಪರಮೇಶ್ವರ್ ಆತ್ಮೀಯತೆ
ರಾಜ್ಯದೆಲ್ಲೆಡೆ ಈಗ ಜಾತಿ ಗಣತಿ ವರದಿಯ ಚರ್ಚೆ ನಡೆಯುತ್ತಿದೆ. ಶ್ರೀದೇವಿ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರನ್ನು ಮನಸಾರೆ ಹೊಗಳಿದ ಪರಮೇಶ್ವರ್, ದೇಶಕ್ಕೆ ಮಾದರಿಯಾಗುವ ತೀರ್ಪನ್ನು ಸಿದ್ದರಾಮಯ್ಯ ತೆಗೆದುಕೊಳ್ಳಲಿದ್ದಾರೆ ಅನ್ನುತ್ತಾರೆ. ಅವರು ಜಾತಿ ಗಣತಿ ವರದಿಗೆ ಸಂಬಂಧಿಸಿದಂತೆ ಈ ಮಾತನ್ನು ಹೇಳಿರಬಹುದೇ?
- Arun Belly
- Updated on: Apr 19, 2025
- 5:23 pm
ಅಧಿಕಾರದಲ್ಲಿ ಮುಂದುವರಿಯಲು ಸಿದ್ದರಾಮಯ್ಯರಿಂದ ಹಿಂದೂ ಸಮಾಜ ಒಡೆವ ಪ್ರಯತ್ನ: ಪ್ರತಾಪ್ ಸಿಂಹ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಾಖಲೆಯ 16 ಬಾರಿ ಬಜೆಟ್ ಮಂಡಿಸಿದ್ದರೂ ಜನಗಣತಿ ಮತ್ತು ಸಾಮಾಜಿಕ ಹಾಗೂ ಅರ್ಥಿಕ ಸಮೀಕ್ಷೆಗಳ ಬಗ್ಗೆ ಕನಿಷ್ಠ ಜ್ಞಾನ ಹೊಂದಿಲ್ಲದಿರೋದು ಆಶ್ಚರ್ಯ ಮೂಡಿಸುತ್ತದೆ, ಯಾಕೆಂದರೆ 1948ರ ಜನಗಣತಿ ಕಾಯ್ದೆ ಪ್ರಕಾರ ಪ್ರತಿ ಹತ್ತು ವರ್ಷಗಳಿಗೊಮ್ಮೆ ಜನಗಣತಿ ನಡೆಯುತ್ತದೆ ಮತ್ತು ಅದರ ಬೆನ್ನಲ್ಲೇ ಸೋಶಿಯೋ-ಇಕಾನಾಮಿಕ್ ಸರ್ವೇ ಕೂಡ ನಡೆಯುತ್ತದೆ ಎಂದು ಮಾಜಿ ಸಂಸದ ಹೇಳಿದರು.
- Arun Belly
- Updated on: Apr 19, 2025
- 1:57 pm
ಕರ್ನಾಟಕದಲ್ಲಿ ರೋಹಿತ್ ವೇಮುಲ ಕಾಯ್ದೆ ಜಾರಿ ಮಾಡುತ್ತೇವೆ: ಸಿದ್ದರಾಮಯ್ಯ
ಕರ್ನಾಟಕ ಸರ್ಕಾರವು ರೋಹಿತ್ ವೇಮುಲ ಕಾಯ್ದೆಯನ್ನು ಶೀಘ್ರದಲ್ಲೇ ಜಾರಿಗೆ ತರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಪತ್ರಕ್ಕೆ ಪ್ರತಿಕ್ರಿಯಿಸಿ ಅವರು ಈ ವಿಷಯವನ್ನು ಖಚಿತಪಡಿಸಿದ್ದಾರೆ. ಈ ಕಾಯ್ದೆಯು ಜಾತಿ, ವರ್ಗ ಅಥವಾ ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲಿನ ತಾರತಮ್ಯವನ್ನು ತಡೆಯುವ ಗುರಿ ಹೊಂದಿದೆ.
- Vivek Biradar
- Updated on: Apr 18, 2025
- 10:06 pm
ಇತಿಹಾಸದಲ್ಲಿ ಮೊದಲ ಬಾರಿಗೆ ಮಾದಪ್ಪನ ಬೆಟ್ಟದಲ್ಲಿ ಸಂಪುಟ ಸಭೆ: ಹಲವು ನಿರೀಕ್ಷೆ
ಏಪ್ರಿಲ್ 24 ರಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಮೈಸೂರು ವಿಭಾಗದ ಅಭಿವೃದ್ಧಿಗೆ ಸಂಬಂಧಿಸಿದ ಪ್ರಸ್ತಾವನೆಗಳು ಚರ್ಚೆಗೆ ಬರಲಿವೆ. ಜಿಲ್ಲೆಯ ಪ್ರವಾಸೋದ್ಯಮ, ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನಿರೀಕ್ಷಿಸಲಾಗಿದೆ. ಸಭೆಗೆ ಸಂಪೂರ್ಣ ತಯಾರಿ ನಡೆದಿದೆ.
- Suraj Prasad SN
- Updated on: Apr 18, 2025
- 7:19 pm
ನಿನ್ನೆ ಸಂಪುಟ ಸಭೆ ನಡೆಯುತ್ತಿದ್ದಾಗ ಲಿಂಗಾಯತ ಸಚಿವರ ನಡುವೆ ವಾಗ್ವಾದ ನಡೆದಿದ್ದು ನಿಜ: ಎಂಬಿ ಪಾಟೀಲ್
ಸಭೆಯಲ್ಲಿ ಪಾಲ್ಗೊಳ್ಳುವ ಮೊದಲೇ ಲಿಂಗಾಯತ ಸಮುದಾಯವನ್ನು ಪ್ರತಿನಿಧಿಸುವ ಎಂಬಿ ಪಾಟೀಲ್, ಶಿವಾನಂದ್ ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್, ಈಶ್ವರ್ ಖಂಡ್ರೆ, ಎಸ್ ಎಸ್ ಮಲ್ಲಿಕಾರ್ಜುನ, ಡಾ ಶರಣಪ್ರಕಾಶ್ ಪಾಟೀಲ್ ಮತ್ತು ಶರಣಬಸಪ್ಪ ದರ್ಶನಾಪುರ್-ಸಭೆಯಲ್ಲಿ ಯಾವೆಲ್ಲ ವಿಷಯಗಳನ್ನು ಚರ್ಚಿಸಬೇಕು, ಸಮುದಾಯದ ಬೇಡಿಕೆಗಳೇನು ಮೊದಲಾದ ಸಂಗತಿಗಳನ್ನು ಮಾತಾಡಿಕೊಂಡಿದ್ದರಂತೆ.
- Arun Belly
- Updated on: Apr 18, 2025
- 5:17 pm
ಸಿದ್ದರಾಮಯ್ಯ ಮತ್ತು ಶಿವಕುಮಾರ್ ದಿಗ್ಗಜರು, ಧೀಮಂತ ನಾಯಕರು ಮತ್ತು ಮಣ್ಣಿನ ಮಕ್ಕಳು: ಸೋಮಶೇಖರ್
ರಾಜಕೀಯವಾಗಿ ಬೆಳೆಯಲು ತನಗೆ ಎಲ್ಲ ರೀತಿಯ ಮತ್ತು ಪ್ರತಿ ಹಂತದಲ್ಲಿ ಸಹಾಯ ಮಾಡಿದ್ದು ಶಿವಕುಮಾರ್, ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅವರು ಅದರ ಅಭಿವೃದ್ಧಿಗೆ ಪಣತೊಟ್ಟು ನಿಂತಿದ್ದಾರೆ, ನಗರದಲ್ಲಿ ವ್ಹೈಟ್ ಟಾಪಿಂಗ್ ಮತ್ತು ಪ್ರಮುಖ ರಸ್ತೆಗಳ ಡಾಂಬರೀಕರಣ ಕಾರ್ಯವನ್ನು ಕೈಗೆತ್ತಿಕೊಂಡಿದ್ದಾರೆ, ಬೆಂಗಳೂರು ಅಬಿವೃದ್ಧಿಗೆ ಸಿಎಂ 1ಲಕ್ಷ ಕೋಟಿ ರೂ ಬಿಡುಗಡೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಹೇಳಿದರು.
- Arun Belly
- Updated on: Apr 18, 2025
- 4:10 pm
ಇದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಕುಮಾರಸ್ವಾಮಿ ನೇತೃತ್ವದ ಸರ್ಕಾರವಲ್ಲ: ಮಧು ಬಂಗಾರಪ್ಪ
ಜಾತಿ ಗಣತಿ ವರದಿಯ ಬಗ್ಗೆ ಯಾರೇನು ಹೇಳುತ್ತಾರೆ ಅನ್ನೋದು ಮುಖ್ಯವಲ್ಲ, ಮಾಧ್ಯಮದವರು ದಯವಿಟ್ಟು ಇದೇ ಪ್ರಶ್ನೆಯನ್ನು ಎಲ್ಲ ಸಚಿವರಿಗೆ, ಶಾಸಕರಿಗೆ ಕೇಳಬೇಡಿ, ವರದಿಯ ಬಗ್ಗೆ ಸಮಗ್ರವಾದ ಮಾಹಿತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಿಗಿ ಅವರಲ್ಲಿ ಸಿಗುತ್ತದೆ, ಜನರಿಗೆ ಮಾಹಿತಿ ಮಾಧ್ಯಮಗಳ ಮೂಲಕವೇ ಸಿಗುತ್ತದೆ ಎಂದು ಮಧು ಬಂಗಾರಪ್ಪ ಹೇಳಿದರು.
- Arun Belly
- Updated on: Apr 18, 2025
- 12:31 pm
ಜಾತಿ ಗಣತಿ ವರದಿ ಮೇಲಿನ ಚರ್ಚೆ ಅಪೂರ್ಣ, ಮುಂದಿನ ಸಭೆಯಲ್ಲಿ ತೀರ್ಮಾನ: ಕೆಎನ್ ರಾಜಣ್ಣ
ವರದಿಯ ಬಗ್ಗೆ ಯಾವುದೇ ಸಚಿವ ವಿರೋಧ ವ್ಯಕ್ತಪಡಿಸಿಲ್ಲ, ಅವರಿಗೆ ಇರುವ ಸಂದೇಹಗಳನ್ನು ಸಭೆಯಲ್ಲಿ ವ್ಯಕ್ತಪಡಿಸಿದ್ದಾರೆ, ಬೇರೆ ಕೆಲವರು ಮತ್ತಷ್ಟು ವಿವರಗಳನ್ನು ಕೇಳಿದ್ದಾರೆ, ವರದಿಯನ್ನು ಅರ್ಥಮಾಡಿಕೊಳ್ಳಲು ಮತ್ತಷ್ಟು ಕಾಲಾವಕಾಶ ಬೇಕು ಅಂತ ಅವರು ಹೇಳಿದ್ದಾರೆ, ಸರಳವಾಗಿ ಹೇಳಬೇಕೆಂದರೆ ಸಭೆಯಲ್ಲಿ ಚರ್ಚೆ ಅಪೂರ್ಣವಾಗಿದೆ ಎಂದು ಸಚಿವ ರಾಜಣ್ಣ ಹೇಳಿದರು
- Arun Belly
- Updated on: Apr 18, 2025
- 10:23 am
ಕರ್ನಾಟಕ ಸಾರಿಗೆ ಬಸ್ಗಳಲ್ಲಿ ತಂಬಾಕು, ಸಿಗರೇಟು ಜಾಹೀರಾತು: ಮುಖ್ಯಮಂತ್ರಿ ಕಚೇರಿಯಿಂದ ಬಂತು ಖಡಕ್ ಸೂಚನೆ
ಕರ್ನಾಟಕ ಸರ್ಕಾರ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ತಂಬಾಕು, ಸಿಗರೇಟು ಮತ್ತು ಮದ್ಯದ ಜಾಹೀರಾತುಗಳನ್ನು ತೆರೆವುಗೊಳಿಸಲು ಮುಖ್ಯಮಂತ್ರಿ ಕಚೇರಿಯಿಂದ ಖಡಕ್ ಸೂಚನೆ ನೀಡಿದೆ. ಸಾರ್ವಜನಿಕರೊಬ್ಬರು ಎಕ್ಸ್ ಮೂಲಕ ಮಾಡಿದ ಮನವಿ ಬೆನ್ನಲ್ಲೇ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈಗಾಗಲೇ ನೋಟಿಸ್ ನೀಡುವ ಮೂಲಕ ಜಾಹೀರಾತುಗಳನ್ನು ತೆರವುಗೊಳಿಸಲಾಗಿದೆ.
- Gangadhar Saboji
- Updated on: Apr 18, 2025
- 9:17 am
ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಕೋಲಾಹಲ: ಸಚಿವರ ಏರು ಧ್ವನಿ, ಇಲ್ಲಿದೆ ಇನ್ಸೈಡ್ ಡಿಟೇಲ್ಸ್
ಇವತ್ತು ಇಡೀ ರಾಜ್ಯದ ಚಿತ್ತ ಸಿಎಂ ಸಿದ್ದರಾಮಯ್ಯ ನೇತೃತ್ವದ ಕ್ಯಾಬಿನೆಟ್ ಮೇಲೆ ನೆಟ್ಟಿತ್ತು. ಜಾತಿ ಗಣತಿ ವರದಿಯನ್ನ ಅನುಷ್ಠಾನ ಮಾಡೇ ಬಿಡುತ್ತಾರಾ? ಅಥವಾ ತಿರಸ್ಕಾರ ಮಾಡುತ್ತಾರಾ ಎನ್ನುವುದು ಕುತೂಹಲ ಎಲ್ಲರಲ್ಲೂ ಕೆರಳಿತ್ತು. ನಿಗದಿಯಂತೆ ಕ್ಯಾಬಿನೆಟ್ ಸಭೆಯೂ ಆರಂಭವಾಯ್ತು. ಆದ್ರೆ, ಅಲ್ಲಾಗಿದ್ದೇ ಬೇರೆ. ಕ್ಯಾಬಿನೆಟ್ನಲ್ಲಿ ಯಾವುದೇ ನಿರ್ಧಾರಕ್ಕೆ ಬಾರದೇ ಸಂಪುಟ ಸಭೆಯನ್ನ ಮುಂದೂಡಲಾಗಿದೆ. ಇನ್ನು ಸಚಿವ ಸಂಪುಟ ಸಭೆಯಲ್ಲಿ ನಾನಾ ರೀತಿಯ ಚರ್ಚೆಗಳು ಆಗಿದ್ದು, ಈ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ.
- Prasanna Gaonkar
- Updated on: Apr 17, 2025
- 8:55 pm