Siddaramaiah
ಕರ್ನಾಟಕ ರಾಜಕಾರಣದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ನಾಯಕರ ಪೈಕಿ ಸಿದ್ದರಾಮಯ್ಯ ಪ್ರಮುಖರು. ಮೈಸೂರಿನ ವರುಣಾ ಹೋಬಳಿಯ ಸಿದ್ಧರಾಮನಹುಂಡಿಯಲ್ಲಿ 1948ರ ಆಗಸ್ಟ್ 12ರಂದು ಜನಿಸಿದ ಸಿದ್ದರಾಮಯ್ಯನವರ ಪ್ರಾಥಮಿಕ ಶಿಕ್ಷಣ ಹುಟ್ಟೂರಿನಲ್ಲೇ ಆಯಿತು. ಮೈಸೂರಿನಲ್ಲಿ ಬಿಎಸ್ಸಿ ಹಾಗೂ ಕಾನೂನು ಪದವಿ ಪಡೆದ ಅವರು 1978ರ ವರೆಗೆ ವಕೀಲಿ ವೃತ್ತಿ ನಡೆಸುತ್ತಿದ್ದು, ನಂತರ ರಾಜಕೀಯಕ್ಕೆ ಧುಮುಕಿದರು.
1983ರ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾರತೀಯ ಲೋಕದಳದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಸಿದ್ದರಾಮಯ್ಯ, ನಂತರ ರಾಜಕೀಯದಲ್ಲಿ ಹಿಂತಿರುಗಿ ನೋಡಲೇ ಇಲ್ಲ. ಬಳಿಕ ಜನತಾ ದಳಕ್ಕೆ ಸೇರಿದ ಅವರು, ತರುವಾಯ ನಾಯಕತ್ವದ ವಿರುದ್ಧ ಅಸಮಾಧಾನದಿಂದ ಪಕ್ಷ ತೊರೆದು ಕಾಂಗ್ರೆಸ್ ಸೇರಿದರು. ಎರಡು ಬಾರಿ ಉಪಮುಖ್ಯಮಂತ್ರಿಯಾಗಿದ್ದ ಅವರು ಹಣಕಾಸು ಸಚಿವರಾಗಿ ಹಲವು ಬಾರಿ ಕಾರ್ಯನಿರ್ವಹಿಸಿದ್ದಾರೆ. ಇದೀಗ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಹಿಂದುಳಿದ ವರ್ಗಗಳ ನಾಯಕನೆಂದು ತಮ್ಮನ್ನು ಬಿಂಬಿಸಿಕೊಂಡಿರುವ ಸಿದ್ದರಾಮಯ್ಯ, 2013ರ ವಿಧಾನಸಭೆ ಚುನಾವಣೆಗೂ ಮುನ್ನ ಬೃಹತ್ ಅಹಿಂದ ಸಮಾವೇಶ ಆಯೋಜಿಸಿ ರಾಜಕೀಯ ಬಲ ಪ್ರದರ್ಶನ ಮಾಡಿದ್ದರು.
ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಅಧಿಕಾರ ಚಲಾಯಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಯೂ ಸಿದ್ದರಾಮಯ್ಯ ಅವರದ್ದಾಗಿದೆ.
ಮುಖ್ಯಮಂತ್ರಿಯಾಗಿ ಮೊದಲ ಅವಧಿಯಲ್ಲಿ (2013 – 2018) ಅನ್ನಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯಗಳಂತಹ ಹಲವು ‘ಭಾಗ್ಯ’ಗಳನ್ನು ಘೋಷಣೆ ಮಾಡಿದ್ದ ಸಿದ್ದರಾಮಯ್ಯ, ಭಾರೀ ಜನಪ್ರಿಯತೆಯ ಹೊರತಾಗಿಯೂ ಸ್ವಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿರುದ್ಧ ಸೋಲನುಭವಿಸಿದ್ದರು. ಆದರೆ, ಬಾದಾಮಿಯಿಂದಲೂ ಸ್ಪರ್ಧಿಸಿದ್ದ ಅವರು, ಅಲ್ಲಿ ಗೆಲುವು ಸಾಧಿಸಿದ್ದರು. 2023ರ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ಇದೀಗ ಎರಡನೇ ಅವಧಿಗೆ (2023 ಮೇ) ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಡಿನ್ನರ್ ಮೀಟಿಂಗ್ ಮೂಲಕ ಶಕ್ತಿ ಪ್ರದರ್ಶನನಾ ಎಂಬ ವಿಚಾರವಾಗಿ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನನ್ನ ಹಿಂದೆ ಯಾರೂ ಬರೋದು ಬೇಡ, ಯಾವ ಪ್ರದರ್ಶನ ಬೇಡ. ಕಾಂಗ್ರೆಸ್ನ 140 ಶಾಸಕರು ಕೂಡ ಒಂದೇ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.
- Anil Kalkere
- Updated on: Dec 12, 2025
- 8:10 pm
ಡಿಕೆ ಶಿವಕುಮಾರ್ ದಿಢೀರ್ ಡಿನ್ನರ್ ಮೀಟಿಂಗ್: ರಹಸ್ಯ ಸಭೆಯಲ್ಲಿ 30ಕ್ಕೂ ಹೆಚ್ಚು ಶಾಸಕರು, ಐವರು ಸಚಿವರು ಭಾಗಿ
ಬೆಳಗಾವಿಯ ಚಳಿಗಾಲ ಅಧಿವೇಶನದ ನಡುವೆ ಕಾಂಗ್ರೆಸ್ನಲ್ಲಿ ಡಿನ್ನರ್ ರಾಜಕೀಯ ತೀವ್ರಗೊಂಡಿದೆ. ಸಿಎಂ ಸಿದ್ದರಾಮಯ್ಯ ಬಣದ ಭೋಜನಕೂಟದ ನಂತರ, ಡಿಸಿಎಂ ಡಿ.ಕೆ. ಶಿವಕುಮಾರ್ ಆಪ್ತ ಶಾಸಕರು ಮತ್ತು ಸಚಿವರೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದಾರೆ. ಈ ಡಿನ್ನರ್ ಮೀಟಿಂಗ್ನಲ್ಲಿ ಏನೇನು ಚರ್ಚೆಯಾಯ್ತು? ಶಾಸಕರು, ಸಚಿವರು ಡಿಕೆಶಿಗೆ ಏನಂದ್ರು ಎಂಬ ಮಾಹಿತಿ ಇಲ್ಲಿದೆ.
- Pramod Shastri G
- Updated on: Dec 12, 2025
- 10:15 am
ಒಳ ಮೀಸಲಾತಿ ಬಡ್ತಿಗೆ ಒಪ್ಪಿಗೆ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಡಿಸುವುದಕ್ಕೆ ಸಂಪುಟ ಅಸ್ತು
ಬೆಳಗಾವಿ ಅಧಿವೇಶನದ ಬಳಿಕ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು (ಡಿಸೆಂಬರ್ 11) ಸುವರ್ಣ ಸೌಧದಲ್ಲೇ ಸಚಿವ ಸಂಪುಟ ಸಭೆ ನಡೆದಿದ್ದು, ಹಲವು ವಿಧೇಯಕಗಳ ಮಂಡನೆ ಬಗ್ಗೆ ಚರ್ಚೆ ಆಯ್ತು. ಅದರಲ್ಲೂ ಮುಖ್ಯವಾಗಿ ಒಳ ಮೀಸಲಾತಿ ಅಡಿಯಲ್ಲಿ ಬಡ್ತಿ ನೀಡಲು ಒಪ್ಪಿಗೆ ಸೂಚಿಸಿದೆ. ಅಷ್ಟೇ ಅಲ್ಲದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ ಆಡಿಸುವುದಕ್ಕೆ ಸಂಪುಟ ಅಸ್ತು ಎಂದಿದೆ. ಆದ್ರೆ, ಕೆಲ ಷರತ್ತುಗಳನ್ನು ವಿಧಿಸಿದೆ. ಇನ್ನು ಸಂಪುಟ ಸಭೆ ತೆಗೆದುಕೊಂಡು ತೀರ್ಮಾನಗಳು ಈ ಕೆಳಗಿನಂತಿವೆ.
- Prasanna Gaonkar
- Updated on: Dec 11, 2025
- 10:49 pm
ಸಿಎಂ ಬದಲಾವಣೆ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಡಿಕೆ ಶಿವಕುಮಾರ್ ಆಪ್ತ
ಡಿಕೆಶಿ ಬಣದಲ್ಲಿ ಗುರುತಿಸಿಕೊಂಡಿರುವ ಶಾಸಕ ಡಾಕ್ಟರ್ ರಂಗನಾಥ್ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಅವರು ಇವರ ಹೇಳಿಕೆಗಳಿಗೆ ಗಮನ ಕೊಡಬಾರದು. ಸಿಎಂ ಡಿಸಿಎಂ ವರಿಷ್ಠರು ಏನು ಹೇಳುತ್ತಾರೆ ಅದರಂತೆ ನಡೆಯಬೇಕು. ಯತೀಂದ್ರ ಸಿದ್ರಾಮಯ್ಯನವರು ವಯಕ್ತಿಕ ಅಭಿಪ್ರಾಯ ಯಾವ ಕಾರಣಕ್ಕೆ ಕೊಟ್ಟಿದ್ದಾರೆ ಎನ್ನುವುದನ್ನು ಅವರನ್ನ ಕೇಳಬೇಕು. ಕಾಂಗ್ರೆಸ್ ಹೈಕಮಾಂಡ್ ಸಮರ್ಥವಾಗಿದೆ. ಅತಿ ಶೀಘ್ರದಲ್ಲೇ ಸೂಕ್ತ ನಿರ್ಧಾರವನ್ನು ಕೊಡುತ್ತಾರೆ. ಎಲ್ಲವೂ ಒಳ್ಳೆಯದಾಗುತ್ತದೆ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ಡಿಕೆ ಶಿವಕುಮಾರ್ಗೆ ಒಳ್ಳೆದಾಗುತ್ತೆ. ಅವರು ಬಯಸಿದ್ದು, ಸಿಗಲಿದೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.
- Ramesh B Jawalagera
- Updated on: Dec 11, 2025
- 6:01 pm
ಕರ್ನಾಟಕದಲ್ಲಿ 2.8 ಲಕ್ಷ ಹುದ್ದೆಗಳು ಖಾಲಿ: ಯಾವ್ಯಾವ ಇಲಾಖೆಯಲ್ಲಿ ಎಷ್ಟು? ನೇಮಕಾತಿ ಎಷ್ಟು?
ಕರ್ನಾಟಕದಲ್ಲಿ ಸುಮಾರು 2.84 ಲಕ್ಷ ಸರ್ಕಾರಿ ಮತ್ತು ಅರೆ-ಸರ್ಕಾರಿ ಹುದ್ದೆಗಳು ಖಾಲಿ ಇವೆ ಎಂದು ಸರ್ಕಾರ ಅಧಿಕೃತವಾಗಿ ಮಾಹಿತಿ ನೀಡಿದೆ. ಬೆಳಗಾವಿ ಅಧಿವೇಶದಲ್ಲಿ ವಿಪಕ್ಷ ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯನವರು 2.84 ಹುದ್ದೆಗಳು ಖಾಲಿ ಇವೆ ಎಂದು ಮಾಹಿತಿ ನೀಡಿದ್ದಾರೆ. ಅಲ್ಲದೇ ಈ ಪೈಕಿ ಕೆಲ ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಹಾಗಾದ್ರೆ, ಯಾವ್ಯಾವ ಇಲಾಖೆ ಎಷ್ಟೆಷ್ಟು ಹುದ್ದೆಗಳು ಖಾಲಿ ಇವೆ? ಎಷ್ಟು ಹುದ್ದೆಗಳ ನೇಮಕ್ಕೆ ಅನುಮೋದನೆ ನೀಡಲಾಗಿದೆ ಎನ್ನುವ ಸಂಪೂರ್ಣ ವಿವರ ಈ ಕೆಳಗಿನಂತಿದೆ.
- Ramesh B Jawalagera
- Updated on: Dec 11, 2025
- 5:30 pm
ಸಿದ್ದರಾಮಯ್ಯ ಬದಲಾಯಿಸಲು ಗಟ್ಸ್ ಯಾರಿಗಿದೆ? ಗುಡುಗಿದ ಸಚಿವ ಜಮೀರ್
ಸಿಎಂ ಬದಲಾವಣೆ ವಿಚಾರವಾಗಿ ಸಿಎಂ ಬಣದ ಸಚಿವ ಜಮೀರ್ ಅಹಮ್ಮದ್ ಖಾನ್ ಪ್ರತಿಕ್ರಿಯಿಸಿ ಸಿದ್ದರಾಮಯ್ಯ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ. 2028ರವರೆಗೂ ಸಿದ್ದರಾಮಯ್ಯನವರು ಸಿಎಂ ಅಗಿರಬೇಕು. ಇದು ನನ್ನ ವೈಯಕ್ತಿಕ ಹೇಳಿಕೆ. ಸಿದ್ದರಾಮಯ್ಯ ಬದಲಾಯಿಸಲು ಯಾರಿಗೆ ಗಟ್ಸ್ ಇದೆ? ಆ ಗಟ್ಸ್ ಇರುವುದು ಪಕ್ಷದ ಹೈಕಮಾಂಡ್ಗೆ ಮಾತ್ರ ಎಂದು ಗುಡುಗಿದ್ದಾರೆ. ಈ ಮೂಲಕ ಪರೋಕ್ಷವಾಗಿ ಡಿಕೆಶಿ ಬಣಕ್ಕೆ ಟಾಂಗ್ ಕೊಟ್ಟಿದ್ದಾರೆ.
- Ramesh B Jawalagera
- Updated on: Dec 11, 2025
- 3:46 pm
ಸಿದ್ದರಾಮಯ್ಯ ಹೆಲಿಕಾಪ್ಟರ್ ಹಾರಾಟ ಬಲು ದುಬಾರಿ: ಕೋಟ್ಯಂತರ ರೂ.ವೆಚ್ಚ, ಎಷ್ಟು ಗೊತ್ತಾ?
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಈವರೆಗೆ ಅಂದರೆ ಎರಡೂವರೆ ವರ್ಷಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಮಾನ ಹಾಗೂ ಹೆಲಿಕಾಪ್ಟರ್ ಪ್ರಯಾಣ ವೆಚ್ಚದ ಕುತೂಹಲಕಾರಿ ಮಾಹಿತಿ ಬಹಿರಂಗವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಪ್ರವಾಸಕ್ಕೆ ಹೆಚ್ಚಾಗಿ ವಿಮಾನ ಮತ್ತು ಹೆಲಿಕಾಪ್ಟರ್ನಲ್ಲೇ ಹೋಗುತ್ತಾರೆ. ಹೀಗಾಗಿ 2023ರಿಂದ 2025ರ ನವೆಂಬರ್ ವರೆಗೂ ಸಿಎಂ ಸಿದ್ದರಾಮಯ್ಯನವರ ವಿಮಾನ ಹಾಗೂ ಹೆಲಿಕಾಪ್ಟರ್ ಪ್ರಯಾಣದ ವೆಚ್ಚ ಹುಬ್ಬೇರುವಂತೆ ಮಾಡಿದೆ. ಹಾಗಾದ್ರೆ, ಸಿಎಂ ಆಗಸದಲ್ಲಿ ಪ್ರಯಾಣಕ್ಕೆ ಇಲ್ಲಿಯವರೆಗೂ ಎಷ್ಟು ಸರ್ಕಾರ ಬೊಕ್ಕಸದಿಂದ ಖರ್ಚಾಗಿದೆ ಎನ್ನುವ ವಿವರ ಈ ಕೆಳಗಿನಂತಿದೆ
- Harish GR
- Updated on: Dec 11, 2025
- 3:11 pm
ಕಾಂಗ್ರೆಸ್ ಕುರ್ಚಿ ಕಿಚ್ಚಿಗೆ ಮತ್ತೆ ತುಪ್ಪ ಸುರಿದ ಸಿಎಂ ಪುತ್ರ ಯತೀಂದ್ರ! ಡಿಕೆ ಶಿವಕುಮಾರ್ ಅಚ್ಚರಿಯ ಪ್ರತಿಕ್ರಿಯೆ
ಕರ್ನಾಟಕ ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿ ಕಿತ್ತಾಟ ಮತ್ತೆ ತಾರಕಕ್ಕೇರುವ ಲಕ್ಷಣ ಕಾಣಿಸಿದೆ. ಸಿಎಂ ಪುತ್ರ ಯತೀಂದ್ರ ಅಧಿಕಾರ ಹಂಚಿಕೆ ಇಲ್ಲ, ಹೈಕಮಾಂಡ್ ನಾಯಕತ್ವ ಬದಲಾವಣೆ ಇಲ್ಲ ಎಂದಿದೆ ಎಂದು ಪುನರುಚ್ಚರಿಸಿದ್ದಾರೆ. ಇದರ ಮಧ್ಯೆ ಬೆಳಗಾವಿಯಲ್ಲಿ ನಡೆದ ಡಿನ್ನರ್ ಮೀಟಿಂಗ್ನಲ್ಲಿ ಅಹಿಂದ ನಾಯಕರು ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿದ್ದಾರೆ.
- Sahadev Mane
- Updated on: Dec 11, 2025
- 2:28 pm
ಸಿಎಂ ಬದಲಾವಣೆಗೆ ಹೈಕಮಾಂಡ್ ಒಪ್ಪಿಲ್ಲ: ಬೆಳಗಾವಿ ಅಧಿವೇಶನ ಸಮಯದಲ್ಲೇ ಮತ್ತೆ ಯತೀಂದ್ರ ಹೇಳಿಕೆ
ಸಿಎಂ ಬದಲಾವಣೆ ಸದ್ಯಕ್ಕಿಲ್ಲ. ಡಿಸಿಎಂ ಡಿಕೆ ಶಿವಕುಮಾರ್ ಅವಕಾಶ ಕೇಳಿದ್ದರಾರದೂ,ನಾಯಕತ್ವ ಬದಲಾವಣೆ ಪರಿಸ್ಥಿತಿ ಸದ್ಯ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟಪಡಿಸಿದೆ ಎಂದು ಕೆಲವು ದಿನಗಳ ಹಿಂದೆ ಹೇಳಿದ್ದ ಕಾಂಗ್ರೆಸ್ ಎಂಎಲ್ಸಿ ಯತೀಂದ್ರ ಇದೀಗ ಮತ್ತದೇ ರಾಗ ಎಳೆದಿದ್ದಾರೆ. ಬೆಳಗಾವಿ ಅಧಿವೇಶನದ ಸಂದರ್ಭದಲ್ಲೇ ಅವರು, ಸಿಎಂ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಹೇಳಿದೆ ಎಂದಿದ್ದಾರೆ.
- Ganapathi Sharma
- Updated on: Dec 11, 2025
- 12:27 pm
ಚಳಿಗಾಲದ ಅಧಿವೇಶನದ ಮಧ್ಯೆಯೂ ಕಾಂಗ್ರೆಸ್ನಲ್ಲಿ ಡಿನ್ನರ್ ಪಾಲಿಟಿಕ್ಸ್: ಫಿರೋಜ್ ಸೇಠ್ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತರ ಸಭೆ
ಬೆಳಗಾವಿ ಚಳಿಗಾಲದ ಅಧಿವೇಶನದ ನಡುವೆಯೇ ಮಾಜಿ ಶಾಸಕ ಫಿರೋಜ್ ಸೇಠ್ ಮನೆಯಲ್ಲಿ ಕಾಂಗ್ರೆಸ್ ನಾಯಕರ ಡಿನ್ನರ್ ಮೀಟಿಂಗ್ ನಡೆದಿದೆ. ಸಿಎಂ ಸಿದ್ದರಾಮಯ್ಯ ಆಪ್ತರು ಮತ್ತು ಅಲ್ಪಸಂಖ್ಯಾತ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಗೈರು ಹಾಜರಿ ಚರ್ಚೆಗೆ ಗ್ರಾಸವಾಗಿದೆ. ಸಿದ್ದರಾಮಯ್ಯನವರೇ ನಮ್ಮ ನಾಯಕರು ಎಂದು ಅಲ್ಪಸಂಖ್ಯಾತ ನಾಯಕರು ಸಭೆಯಲ್ಲಿ ಹೇಳಿದ್ದಾರೆ.
- Sahadev Mane
- Updated on: Dec 11, 2025
- 12:03 pm
ಕರ್ನಾಟಕ ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ಕೇಂದ್ರ ಅಸ್ತು
ಕನಿಷ್ಠ ಬೆಂಬಲ ಬೆಲೆ ಅಡಿಯಲ್ಲಿ ತೊಗರಿ ಬೇಳೆ ಖರೀದಿಗೆ ನಿಗದಿ ಮಾಡಲಾಗಿರುವ ಅವಧಿ ಬದಲಾಯಿಸಿ, ಶೀಘ್ರ ಖರೀದಿ ಪ್ರಕ್ರಿಯೆ ಆರಂಭಿಸಲು ಸಂಬಂಧಪಟ್ಟ ಸಂಸ್ಥೆಗಳಿಗೆ ಸೂಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಹಾಗೇ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಹ ಕೃಷಿ ಸಚಿವರಿಗೆ ಪತ್ರ ಬರೆದಿದ್ದರು. ಇದೀಗ ಈ ಪತ್ರಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಿ ತೊಗರಿ ಖರೀದಿಗೆ ಗ್ರೀನ್ ಸಿಗ್ನಲ್ ನೀಡಿದೆ.
- Sanjayya Chikkamath
- Updated on: Dec 10, 2025
- 10:59 pm
ಸಿದ್ದರಾಮಯ್ಯ ಸರ್ಕಾರಕ್ಕೆ ಮುಖಭಂಗ: ಜನೌಷಧಿ ಕೇಂದ್ರ ಮುಚ್ಚುವ ಆದೇಶ ರದ್ದುಗೊಳಿಸಿದ ಹೈಕೋರ್ಟ್
ಸರ್ಕಾರಿ ಆಸ್ಪತ್ರೆ ಆವರಣಗೊಳಗಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ಆದೇಶಿಸಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಮುಖಭಂಗವಾಗಿದೆ. ಜನೌಷಧಿ ಕೇಂದ್ರ ಮುಚ್ಚುವಂತೆ ಹೊರಡಿಸಿದ್ದ ಸರ್ಕಾರದ ಆದೇಶವನ್ನು ಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.
- Ramesh B Jawalagera
- Updated on: Dec 10, 2025
- 10:29 pm