AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah

Siddaramaiah

ಕರ್ನಾಟಕ ರಾಜಕಾರಣದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ನಾಯಕರ ಪೈಕಿ ಸಿದ್ದರಾಮಯ್ಯ ಪ್ರಮುಖರು. ಮೈಸೂರಿನ ವರುಣಾ ಹೋಬಳಿಯ ಸಿದ್ಧರಾಮನಹುಂಡಿಯಲ್ಲಿ 1948ರ ಆಗಸ್ಟ್ 12ರಂದು ಜನಿಸಿದ ಸಿದ್ದರಾಮಯ್ಯನವರ ಪ್ರಾಥಮಿಕ ಶಿಕ್ಷಣ ಹುಟ್ಟೂರಿನಲ್ಲೇ ಆಯಿತು. ಮೈಸೂರಿನಲ್ಲಿ ಬಿಎಸ್ಸಿ ಹಾಗೂ ಕಾನೂನು ಪದವಿ ಪಡೆದ ಅವರು 1978ರ ವರೆಗೆ ವಕೀಲಿ ವೃತ್ತಿ ನಡೆಸುತ್ತಿದ್ದು, ನಂತರ ರಾಜಕೀಯಕ್ಕೆ ಧುಮುಕಿದರು.

1983ರ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾರತೀಯ ಲೋಕದಳದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಸಿದ್ದರಾಮಯ್ಯ, ನಂತರ ರಾಜಕೀಯದಲ್ಲಿ ಹಿಂತಿರುಗಿ ನೋಡಲೇ ಇಲ್ಲ. ಬಳಿಕ ಜನತಾ ದಳಕ್ಕೆ ಸೇರಿದ ಅವರು, ತರುವಾಯ ನಾಯಕತ್ವದ ವಿರುದ್ಧ ಅಸಮಾಧಾನದಿಂದ ಪಕ್ಷ ತೊರೆದು ಕಾಂಗ್ರೆಸ್ ಸೇರಿದರು. ಎರಡು ಬಾರಿ ಉಪಮುಖ್ಯಮಂತ್ರಿಯಾಗಿದ್ದ ಅವರು ಹಣಕಾಸು ಸಚಿವರಾಗಿ ಹಲವು ಬಾರಿ ಕಾರ್ಯನಿರ್ವಹಿಸಿದ್ದಾರೆ. ಇದೀಗ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಹಿಂದುಳಿದ ವರ್ಗಗಳ ನಾಯಕನೆಂದು ತಮ್ಮನ್ನು ಬಿಂಬಿಸಿಕೊಂಡಿರುವ ಸಿದ್ದರಾಮಯ್ಯ, 2013ರ ವಿಧಾನಸಭೆ ಚುನಾವಣೆಗೂ ಮುನ್ನ ಬೃಹತ್ ಅಹಿಂದ ಸಮಾವೇಶ ಆಯೋಜಿಸಿ ರಾಜಕೀಯ ಬಲ ಪ್ರದರ್ಶನ ಮಾಡಿದ್ದರು.

ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಅಧಿಕಾರ ಚಲಾಯಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಯೂ ಸಿದ್ದರಾಮಯ್ಯ ಅವರದ್ದಾಗಿದೆ.

ಮುಖ್ಯಮಂತ್ರಿಯಾಗಿ ಮೊದಲ ಅವಧಿಯಲ್ಲಿ (2013 – 2018) ಅನ್ನಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯಗಳಂತಹ ಹಲವು ‘ಭಾಗ್ಯ’ಗಳನ್ನು ಘೋಷಣೆ ಮಾಡಿದ್ದ ಸಿದ್ದರಾಮಯ್ಯ, ಭಾರೀ ಜನಪ್ರಿಯತೆಯ ಹೊರತಾಗಿಯೂ ಸ್ವಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿರುದ್ಧ ಸೋಲನುಭವಿಸಿದ್ದರು. ಆದರೆ, ಬಾದಾಮಿಯಿಂದಲೂ ಸ್ಪರ್ಧಿಸಿದ್ದ ಅವರು, ಅಲ್ಲಿ ಗೆಲುವು ಸಾಧಿಸಿದ್ದರು. 2023ರ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ಇದೀಗ ಎರಡನೇ ಅವಧಿಗೆ (2023 ಮೇ) ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇನ್ನೂ ಹೆಚ್ಚು ಓದಿ

ಕೊನೆಗೂ ಎಚ್ಚೆತ್ತ ಸರ್ಕಾರ: ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ

ಸಚಿವ ಸಂಪುಟ ಬಳಿಕ ಕಾನೂನು ಸಚಿವ ಎಚ್​​​​ಕೆ ಪಾಟೀಲ್ ಮಾತನಾಡಿ, ನೇಮಕಾತಿ ಪ್ರಕ್ರಿಯೆ ತಕ್ಷಣ ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ. ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಯಾಗಲಿದೆ. ಪರಿಶಿಷ್ಟ ಜಾತಿ ಒಳಮೀಸಲಾತಿಯ ವಿಚಾರ ಹೈಕೋರ್ಟ್​ನಲ್ಲಿದೆ. ಹೆಚ್ಚುವರಿ ಮೀಸಲಾತಿ ವಿಚಾರವಾಗಿ ಹೈಕೋರ್ಟ್ ತಡೆ ನೀಡಿರುತ್ತದೆ. ಹೀಗಾಗಿ ಮೀಸಲಾತಿ 50% ಮೀರದಂತೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗುತ್ತೆ. ಸದ್ಯ ಎಸ್​ಸಿ 15% ಮೀಸಲಾತಿ ಅನ್ವಯವೇ ನೇಮಕಾತಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಸರ್ಕಾರವನ್ನ ಬಡಿದೆಬ್ಬಿಸಿದ ಉದ್ಯೋಗಾಕಾಂಕ್ಷಿಗಳು: 56 ಸಾವಿರ ಹುದ್ದೆ ನೇಮಕಕ್ಕೆ ಸಂಪುಟ ಒಪ್ಪಿಗೆ

ಧಾರವಾಡದಲ್ಲಿ ಮೊನ್ನೆ ನಡೆದ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ರಾಜ್ಯ ಸರ್ಕಾರವನ್ನ ಬಡಿದೆಬ್ಬಿಸಿದೆ. ಖಾಲಿ ಇರುವ ಎರಡೂವರೆ ಲಕ್ಷ ಖಾಲಿ ಹುದ್ದೆ ಭರ್ತಿಗೆ ಸರ್ಕಾರ ಹರಸಾಹಸ ಪಡುತ್ತಿದೆ. ಗ್ಯಾರಂಟಿ ಹೊರೆ ಮಾಡ್ಕೊಂಡಿರೋ ಸರ್ಕಾರಕ್ಕೆ ಹಣಕಾಸಿನ ಸವಾಲಾಗಿದೆ. ಇನ್ನೊಂದೆಡೆ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ಭಾರೀ ಸುದ್ದು ಮಾಡಿದೆ. ಇದೆಲ್ಲದರ ನಡುವೆ ಕೊನೆಗೂ ಸಿದ್ದರಾಮಯ್ಯ ಸರ್ಕಾರ 56 ಸಾವಿರ ಹುದ್ದೆ ನೇಮಕಕ್ಕೆ ಮುಂದಾಗಿದೆ.

ಖಾಲಿ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರದ ಮುಂದಿರುವ ಸವಾಲುಗಳೇನು? ಇಲ್ಲಿದೆ ಮಾಹಿತಿ

ಕರ್ನಾಟಕದಲ್ಲಿ 2.84 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿಯಿದ್ದು, ಅವುಗಳನ್ನು ಭರ್ತಿ ಮಾಡಲು ಸರ್ಕಾರಕ್ಕೆ ಹಲವು ಸವಾಲುಗಳಿವೆ. ಒಳ ಮೀಸಲಾತಿ ಗೊಂದಲ, ಗ್ಯಾರಂಟಿ ಯೋಜನೆಗಳಿಂದಾದ ಆರ್ಥಿಕ ಹೊರೆ ಸೇರಿ ಕೆಲ ವಿಚಾರಗಳು ಸರ್ಕಾರಕ್ಕೆ ತಲೆನೋವಾಗಿ ಮಾರ್ಪಟ್ಟಿದೆ. ಈ ನಡುವೆ ಪೊಲೀಸ್​​ ಅನುಮತಿ ನಿರಾಕರಣೆ ನಡುವೆ ಧಾರವಾಡದಲ್ಲಿ ಪ್ರತಿಭಟನೆ ಹಿನ್ನೆಲೆ ಸಂಘಟನೆಗಳ ಮುಖಂಡರ ವಿರುದ್ಧ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಹೊರೆಯಾಗುತ್ತಿದ್ದರೂ ಗ್ಯಾರಂಟಿ ಕೊಡುತ್ತಿದ್ದೇವೆ, ಕೊಡುತ್ತೇವೆ: ಡಿಕೆಶಿ, ಸಿದ್ದರಾಮಯ್ಯ ಮಾತಿನ ಮರ್ಮ ಏನು?

ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕೊನೆಗೂ ಒಪ್ಪಿಕೊಂಡಿದ್ದು, ಆದರೂ ಅವುಗಳನ್ನು ಸಮರ್ಥಿಸಿಕೊಂಡಿದ್ದಾರೆ. ಏತನ್ಮಧ್ಯೆ, ಬಾಕಿ ಹಣ ಪಾವತಿಗೆ ಗುತ್ತಿಗೆದಾರರು, ವೇತನಕ್ಕಾಗಿ ಸರ್ಕಾರಿ ವೈದ್ಯರು ಮತ್ತು ಖಾಲಿ ಹುದ್ದೆ ಭರ್ತಿಗೆ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆಗೆ ಸಜ್ಜಾಗಿದ್ದು, ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ.

3 ವರ್ಷಗಳಲ್ಲಿ ರಾಜ್ಯ ಸರ್ಕಾರ ಭರ್ತಿ ಮಾಡಿರುವ ಉದ್ಯೋಗ 40 ಸಾವಿರವಲ್ಲ, ಕೇವಲ 8 ಸಾವಿರ?

ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಕುರಿತು ದೊಡ್ಡ ವಿವಾದ ಭುಗಿಲೆದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2.5 ವರ್ಷಗಳಲ್ಲಿ 40,000 ಹುದ್ದೆಗಳನ್ನು ಭರ್ತಿ ಮಾಡಿರುವುದಾಗಿ ಹೇಳಿದ್ದಾರೆ. ಆದರೆ, ವಿರೋಧ ಪಕ್ಷ ಬಿಜೆಪಿ ಇದು ಸುಳ್ಳು ಎಂದು ಆರೋಪಿಸಿದೆ. ಸದನದ ಒಳಗೊಂದು ಮಾಹಿತಿ, ಹೊರಗೆ ಸುಳ್ಳಿನ ಪ್ರದರ್ಶನ ಮಾಡಿ ಇನ್ನೂ ಎಷ್ಟು ದಿನ ಜನರನ್ನು ವಂಚಿಸುವಿರಿ? ಎಂದು ಪ್ರಶ್ನಿಸಿದೆ.

ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ ಅರಾಜಕತೆ! ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯ

ವಿಪಕ್ಷ ನಾಯಕ ಆರ್. ಅಶೋಕ್ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ತೀವ್ರವಾಗಿ ಟೀಕಿಸಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದು, ಭ್ರಷ್ಟಾಚಾರ ಮತ್ತು ಅರಾಜಕತೆಯ ಆರೋಪ ಮಾಡಿದ್ದಾರೆ. ಖಾಲಿ ಹುದ್ದೆ ಭರ್ತಿಗಾಗಿ ವೈದ್ಯರು, ಧಾರವಾಡದಲ್ಲಿ ವಿದ್ಯಾರ್ಥಿಗಳು ಹಾಗೂ ಇತರೆ ಸಮುದಾಯಗಳ ಪ್ರತಿಭಟನೆಗಳನ್ನು ಉದಾಹರಿಸಿದ್ದಾರೆ. ನಿಮ್ಮ ಆಡಳಿತದಲ್ಲಿ ಜನ ನೆಮ್ಮದಿಯಿಂದ ಇದ್ದಾರಾ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟು: ಒಟ್ಟೊಟ್ಟಿಗೇ ಹಲವು ಮಹತ್ವದ ಬೆಳವಣಿಗೆ! ಮಂಗಳವಾರ ಏನೇನಾಯ್ತು ಗೊತ್ತೇ?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಬಿಕ್ಕಟ್ಟು ತೀವ್ರಗೊಂಡಿರುವ ಬೆನ್ನಲ್ಲೇ ಹಲವು ಪ್ರಮುಖ ಬೆಳವಣಿಗೆಗಳು ನಡೆದಿವೆ. ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪಟ್ಟು ಹಿಡಿದರೆ, ದಲಿತ ಸಿಎಂ ಕೂಗು ಜೋರಾಗಿದೆ. ಹೊಸ ಶಾಸಕರು ಸಚಿವ ಸ್ಥಾನಕ್ಕಾಗಿ ಹೈಕಮಾಂಡ್‌ಗೆ ಪತ್ರ ಬರೆದಿದ್ದು, ಹಲವು ರಾಜಕೀಯ ಬೆಳವಣಿಗೆಗಳು ಕುತೂಹಲ ಮೂಡಿಸಿವೆ.

ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳ ಹೋರಾಟ ಬೆನ್ನಲ್ಲೇ 56 ಸಾವಿರ ಹುದ್ದೆ ಭರ್ತಿಗೆ ಮುಂದಾದ ಸಿದ್ದರಾಮಯ್ಯ

ಕಳೆದ ಕೆಲವು ದಿನಗಳಿಂದ ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಸರಣಿ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿದ್ದರಾಮಯ್ಯ ಸರ್ಕಾರ, ಅಭ್ಯರ್ಥಿಗಳಿಗೆ ದೊಡ್ಡ ಸಮಾಧಾನಕರ ಸುದ್ದಿಯೊಂದನ್ನು ನೀಡಿದ್ದಾರೆ. ಈ ಬಜೆಟ್​​ನಲ್ಲಿ 56 ಸಾವಿರ ಹುದ್ದೆ ಭರ್ತಿಗೆ ನಿರ್ಧರಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಮಾಹಿತಿ ನೀಡಿದ್ದಾರೆ.

ಧಾರವಾಡದಲ್ಲಿ ಉಗ್ರ ಹೋರಾಟ ಬೆನ್ನಲ್ಲೇ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್

ಉದ್ಯೋಗಾಕಾಂಕ್ಷಿಗಳ ತಾಳ್ಮೆ ಕಟ್ಟೆಯೊಡೆದಿದ್ದು, ಧಾರವಾಡದಲ್ಲಿ ರೋಷಾಗ್ನಿ ಧಗಧಗ ಹೊತ್ತಿ ಉರಿಯುತ್ತಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ವಿದ್ಯಾಕಾಶಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಇತ್ತ ನಿರುದ್ಯೋಗಿ ಯುವ ಜನತೆಗೆ ರಾಜ್ಯ ಸರ್ಕಾರ ಗುಡ್​​ನ್ಯೂಸ್ ನೀಡಿದೆ.

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಸಿಎಂ ಸ್ಪಂದನೆ: ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ ಸಿದ್ದರಾಮಯ್ಯ

ಖಾಲಿ ಹುದ್ದೆಗಳ ಭರ್ತಿಗೆ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದಲೇ ಹುದ್ದೆಗಳು ಖಾಲಿಯಾಗಿವೆ ಎಂದು ಆರೋಪಿಸಿರುವ ಅವರು, ನೇಮಕಾತಿಗಳಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಮರುಸ್ಥಾಪಿಸಲು ಸರ್ಕಾರ ಬದ್ಧವಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ನೇಮಕಾತಿ ನಡೆಸುವ ಭರವಸೆ ನೀಡಿದ್ದು, ಯುವಕರು ತಮ್ಮ ಕೌಶಲ್ಯ ವೃದ್ಧಿಗೆ ಗಮನ ನೀಡುವಂತೆ ಕರೆ ನೀಡಿದ್ದಾರೆ.

ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ವಿಡಿಯೋ ನೋಡಿ

ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಕಾಂಗ್ರೆಸ್​​ನ ಮನ್​ರೇಗಾ ಬಚಾವ್​ ಆಂದೋಲನ ಸಮಾವೇಶ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ತಲೆ ಮೇಲೆ ಮಣ್ಣಿನ ಬುಟ್ಟಿ ಹೊತ್ತು ಸಮಾವೇಶಕ್ಕೆ ಚಾಲನೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ವೇದಿಕೆ ಮೇಲೆನೆ ಮಣ್ಣನ್ನು ತೋಡಿ ಪುಟ್ಟಿಗೆ ಹಾಕಿದ್ದು, ಇದನ್ನು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ತಲೆಗೆ ಟವೆಲ್ ಸುತ್ತಿಕೊಂಡು ಮಣ್ಣಿನ ಪುಟ್ಟಿ ಹೊತ್ತು ಕೇಂದ್ರ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ.

ದಲಿತ ಸಿಎಂ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ: ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದು ಬಾಣ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ‘ದಲಿತ ಸಿಎಂ ಕಾಂಗ್ರೆಸ್‌ನಿಂದ ಮಾತ್ರ’ ಎಂಬ ಸಂದೇಶ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ. ವಿಪಕ್ಷಗಳ ಟೀಕೆ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಹೇಳಿಕೆ ಎಂಬ ವಾದಗಳ ನಡುವೆ, ಸಿದ್ದರಾಮಯ್ಯ ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಈ ಹೇಳಿಕೆಯು ಕಾಂಗ್ರೆಸ್ ಪಕ್ಷದೊಳಗಿನ ನಾಯಕತ್ವ ಬದಲಾವಣೆ ಮತ್ತು ಅಧಿಕಾರದ ಕದನಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ.

ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ!
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ!
ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮುತ್ಯಾನ ಬಗ್ಗೆ ಹೇಳಿದ್ದಿಷ್ಟು
ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮುತ್ಯಾನ ಬಗ್ಗೆ ಹೇಳಿದ್ದಿಷ್ಟು