![Siddaramaiah](https://images.tv9kannada.com/wp-content/uploads/2023/11/siddaramaiah-1-5.jpg)
Siddaramaiah
ಕರ್ನಾಟಕ ರಾಜಕಾರಣದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ನಾಯಕರ ಪೈಕಿ ಸಿದ್ದರಾಮಯ್ಯ ಪ್ರಮುಖರು. ಮೈಸೂರಿನ ವರುಣಾ ಹೋಬಳಿಯ ಸಿದ್ಧರಾಮನಹುಂಡಿಯಲ್ಲಿ 1948ರ ಆಗಸ್ಟ್ 12ರಂದು ಜನಿಸಿದ ಸಿದ್ದರಾಮಯ್ಯನವರ ಪ್ರಾಥಮಿಕ ಶಿಕ್ಷಣ ಹುಟ್ಟೂರಿನಲ್ಲೇ ಆಯಿತು. ಮೈಸೂರಿನಲ್ಲಿ ಬಿಎಸ್ಸಿ ಹಾಗೂ ಕಾನೂನು ಪದವಿ ಪಡೆದ ಅವರು 1978ರ ವರೆಗೆ ವಕೀಲಿ ವೃತ್ತಿ ನಡೆಸುತ್ತಿದ್ದು, ನಂತರ ರಾಜಕೀಯಕ್ಕೆ ಧುಮುಕಿದರು.
1983ರ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾರತೀಯ ಲೋಕದಳದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಸಿದ್ದರಾಮಯ್ಯ, ನಂತರ ರಾಜಕೀಯದಲ್ಲಿ ಹಿಂತಿರುಗಿ ನೋಡಲೇ ಇಲ್ಲ. ಬಳಿಕ ಜನತಾ ದಳಕ್ಕೆ ಸೇರಿದ ಅವರು, ತರುವಾಯ ನಾಯಕತ್ವದ ವಿರುದ್ಧ ಅಸಮಾಧಾನದಿಂದ ಪಕ್ಷ ತೊರೆದು ಕಾಂಗ್ರೆಸ್ ಸೇರಿದರು. ಎರಡು ಬಾರಿ ಉಪಮುಖ್ಯಮಂತ್ರಿಯಾಗಿದ್ದ ಅವರು ಹಣಕಾಸು ಸಚಿವರಾಗಿ ಹಲವು ಬಾರಿ ಕಾರ್ಯನಿರ್ವಹಿಸಿದ್ದಾರೆ. ಇದೀಗ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಹಿಂದುಳಿದ ವರ್ಗಗಳ ನಾಯಕನೆಂದು ತಮ್ಮನ್ನು ಬಿಂಬಿಸಿಕೊಂಡಿರುವ ಸಿದ್ದರಾಮಯ್ಯ, 2013ರ ವಿಧಾನಸಭೆ ಚುನಾವಣೆಗೂ ಮುನ್ನ ಬೃಹತ್ ಅಹಿಂದ ಸಮಾವೇಶ ಆಯೋಜಿಸಿ ರಾಜಕೀಯ ಬಲ ಪ್ರದರ್ಶನ ಮಾಡಿದ್ದರು.
ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಅಧಿಕಾರ ಚಲಾಯಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಯೂ ಸಿದ್ದರಾಮಯ್ಯ ಅವರದ್ದಾಗಿದೆ.
ಮುಖ್ಯಮಂತ್ರಿಯಾಗಿ ಮೊದಲ ಅವಧಿಯಲ್ಲಿ (2013 – 2018) ಅನ್ನಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯಗಳಂತಹ ಹಲವು ‘ಭಾಗ್ಯ’ಗಳನ್ನು ಘೋಷಣೆ ಮಾಡಿದ್ದ ಸಿದ್ದರಾಮಯ್ಯ, ಭಾರೀ ಜನಪ್ರಿಯತೆಯ ಹೊರತಾಗಿಯೂ ಸ್ವಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿರುದ್ಧ ಸೋಲನುಭವಿಸಿದ್ದರು. ಆದರೆ, ಬಾದಾಮಿಯಿಂದಲೂ ಸ್ಪರ್ಧಿಸಿದ್ದ ಅವರು, ಅಲ್ಲಿ ಗೆಲುವು ಸಾಧಿಸಿದ್ದರು. 2023ರ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ಇದೀಗ ಎರಡನೇ ಅವಧಿಗೆ (2023 ಮೇ) ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಪುನರ್ ರಚನೆ; ಸಚಿವರ, ಶಾಸಕರ ಮಕ್ಕಳ ನೇಮಕ
ಮುಖ್ಯಮಂತ್ರಿ ಅಧ್ಯಕ್ಷತೆಯ ಕರ್ನಾಟಕ ವನ್ಯಜೀವಿ ಮಂಡಳಿಯನ್ನು ಪುನರ್ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮುಂದಿನ ಮೂರು ವರ್ಷಗಳ ಅವಧಿಗೆ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯನ್ನು ಪುನರ್ ರಚನೆ ಮಾಡಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶಿಸಿದೆ.
- Prasanna Gaonkar
- Updated on: Jul 27, 2024
- 7:19 am
ನಮ್ಮ ಪಕ್ಷದ ಈ ಪರಿಸ್ಥಿತಿ ನೋಡಿ ತೀವ್ರ ಬೇಸರ ಮತ್ತು ಆತಂಕವಾಗ್ತಿದೆ: ಅರವಿಂದ ಲಿಂಬಾವಳಿ ಅಚ್ಚರಿ ಹೇಳಿಕೆ
ಕರ್ನಾಟಕ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಸಾಬೀತಾಗಿದೆ. ಮಾಜಿ ಸಚಿವ ಅರವಿಂದ್ ಲಿಂಬಾವಳಿ ಅವರೇ ಬಹಿರಂಗವಾಗಿ ಪಕ್ಷದ ನಾಯಕರ ನಡೆಗೆ ಅಸಮಾಧಾನ ಹೊರಹಾಕಿದ್ದಾರೆ. ಅದರಲ್ಲೂ ಪ್ರಮುಖವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟದ ವಿಚಾರವನ್ನು ಪ್ರಸ್ತಾಪಿಸಿ ತಮ್ಮ ನಾಯಕರ ನಡೆ ಬಗ್ಗೆ ತೀವ್ರ ಬೇಸರ ವ್ಯಕ್ತಪಪಡಿಸಿದ್ದಾರೆ.
- Gangadhar Saboji
- Updated on: Jul 26, 2024
- 9:50 pm
ಮುಡಾ ಅಸ್ತಿತ್ವಕ್ಕೆ ಬರುವ ಮೊದಲು ನನಗೆ 21,000 ಚದರ ಅಡಿಯ ಸೈಟು ಸಿಕ್ಕಿದೆ: ಕುಮಾರಸ್ವಾಮಿ
ಕುಮಾರಸ್ವಾಮಿಯವರಿಗೆ ಮುಡಾ ಅಸ್ತಿತ್ವಕ್ಕೆ ಬರುವ ಮೊದಲು ಸಿಐಟಿಬಿಯಿಂದಲೇ 21,000 ಚದರ ಅಡಿಗಳಷ್ಟು ದೊಡ್ಡ ಸೈಟು ಸಿಕ್ಕಿರಬಹುದು. ಅದರೆ ಇದಕ್ಕೆ ಮೊದಲು ಅವರು ಯಾವತ್ತೂ ಈ ಸೈಟಿನ ಬಗ್ಗೆ ಮಾತಾಡಿರಲಿಲ್ಲ. ಈg ಕಾಂಗ್ರೆಸ್ ದಾಖಲೆಗಳನ್ನು ಬಹಿರಂಗಗೊಳಿಸಿದ ಮೇಲೆ 1984ರಲ್ಲ್ಲೇ ಸಿಕ್ಕಿದ್ದು ಅಂತ ಹೇಳುತ್ತಿದ್ದಾರೆ. ತಾವಾಗಿಯೇ ಸೈಟ್ ವಿಷಯವನ್ನು ಅವರು ಬಹಿರಂಗ ಮಾಡಿದ್ದರೆ ಕಾಂಗ್ರೆಸ್ ನವರಿಗೆ ಬೆರಳು ತೋರಿಸುವ ಅವಕಾಶ ಸಿಗುತ್ತಿರಲಿಲ್ಲ.
- Arun Belly
- Updated on: Jul 26, 2024
- 6:45 pm
ತಮ್ಮ ಮೇಲಿನ ಮುಡಾ ನಿವೇಶನ ಆರೋಪಕ್ಕೆ ಸ್ಪಷ್ಟನೆ ನೀಡಿದ ಕುಮಾರಸ್ವಾಮಿ
ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಜುಲೈ 26) ಮುಡಾ ಸೈಟ್ ಪಡೆದುಕೊಂಡ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಪಟ್ಟಿ ಬಿಡುಗಡೆ ಮಾಡಿದರು. ಅದರಲ್ಲೂ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಸೈಟ್ ಪಡೆದಿರುವ ಬಗ್ಗೆ ಪ್ರಸ್ತಾಪಿಸಿದ್ದಾರೆ. ಇನ್ನು ಇದೀಗ ಇದಕ್ಕೆ ಸ್ವತಃ ಎಚ್ಡಿಕೆ ನವದೆಹಲಿಯಿಂದ ಸ್ಪಷ್ಟನೆ ನೀಡಿದ್ದಾರೆ.
- Harish GR
- Updated on: Jul 26, 2024
- 6:04 pm
ರಾಮನಗರ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಬದಲಾಯಿಸಲು ಸಂಪುಟ ಅನುಮೋದನೆ: ಹೆಚ್ ಕೆ ಪಾಟೀಲ್
ಬ್ರ್ಯಾಂಡ್ ಬೆಂಗಳೂರು ಬಿಲ್ಡ್ ಮಾಡುವ ಭರದಲ್ಲಿ ತುಮಕೂರು ಜಿಲ್ಲೆಯನ್ನೂ ಬೆಂಗಳೂರಿಗೆ ಸೇರಿಸಲಾಗುತ್ತಾ ಅಂತ ಕೇಳಿದ ಪ್ರಶ್ನೆಗೆ ಸಚಿವ ಪಾಟೀಲ್, ಇಲ್ಲ ಸೇರಿಸಲ್ಲ ಯಾಕೆಂದರೆ, ತುಮಕೂರು ಯಾವತ್ತೂ ಬೆಂಗಳೂರಿನ ಭಾಗವಾಗಿರಲಿಲ್ಲ ಅದರೆ ರಾಮನಗರ ಜಿಲ್ಲೆ ಮೊದಲಿಂದಲೂ ಬೆಂಗಳೂರಿನ ಭಾಗವಾಗಿತ್ತು ಎಂದರು.
- Arun Belly
- Updated on: Jul 26, 2024
- 5:49 pm
ರಾಮನ ಹೆಸರಂತೂ ತೆಗೆಯಲು ಸಾಧ್ಯವಿಲ್ಲ, 2028ರೊಳಗೆ ಮತ್ತೆ ರಾಮನಗರವೆಂದು ಬರುತ್ತೆ: ಹೆಚ್ಡಿ ಕುಮಾರಸ್ವಾಮಿ
ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರಿಡಲು ಸಂಪುಟ ಅನುಮೋದನೆ ನೀಡಿದ ಬೆನ್ನಲ್ಲೇ ಇದೀಗ ಆಕ್ರೋಶ ವ್ಯಕ್ತವಾಗಿದೆ. ರಾಮನಗರ ಹೆಸರಿಗೆ ಕಳಂಕ ತಂದೋರು ಯಾರೂ ಉದ್ಧಾರ ಆಗಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿ ಪ್ರತಿಕ್ರಿಯಿಸಿರುವ ಹೆಚ್ಡಿ ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ ರಾಜ್ಯ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
- Syed Nizamuddin
- Updated on: Jul 26, 2024
- 8:19 pm
ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಬದಲಾವಣೆ ಸೇರಿದಂತೆ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
ವಿರೋಧದ ನಡುವೆ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಹೆಸರು ಬದಲಾವಣೆ ಮಾಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇಂದು (ಜುಲೈ 26) ನಡೆದ ಕ್ಯಾಬಿನೆಟ್ ಸಭೆಯಲ್ಲಿ ಇನ್ನೂ ಕೆಲ ಪ್ರಮುಖ ನಿರ್ಣಯಗಳನ್ನು ಕೈಗಳ್ಳಲಾಗಿದೆ. ಅವು ಈ ಕೆಳಗಿನಂತಿವೆ ನೋಡಿ.
- Prasanna Gaonkar
- Updated on: Jul 26, 2024
- 5:35 pm
ಮುಡಾ ಸೈಟ್ ಪಡೆದ ಬಿಜೆಪಿ-ಜೆಡಿಎಸ್ ನಾಯಕರ ಪಟ್ಟಿ ಬಿಡುಗಡೆ ಮಾಡಿದ ಸಚಿವ ಬೈರತಿ ಸುರೇಶ್
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಶುರುವಾದ ಮುಡಾ ಮಲ್ಲಯುದ್ಧ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಕುಟುಂಬದ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿಎಂ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸಿವೆ. ಇದರ ಮಧ್ಯ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಮುಡಾದಲ್ಲಿ ಯಾರೆಲ್ಲಾ ನಾಯಕರು ಸೈಟ್ ಪಡೆದುಕೊಂಡಿದ್ದಾರೆ ಎಂದು ರಾಜಕಾರಣಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಅದು ಈ ಕೆಳಗಿನಂತಿದೆ.
- Ramesh B Jawalagera
- Updated on: Jul 26, 2024
- 2:56 pm
ನಿರ್ಗತಿಕರಿಗೆ ಸಿಗಬೇಕಿದ್ದ ಸೈಟುಗಳು ಮುಖ್ಯಮಂತ್ರಿ ಕುಟುಂಬದ ಪಾಲಾಗಿವೆ: ಬಿವೈ ವಿಜಯೇಂದ್ರ
ಹೆಚ್ ಕೆ ಪಾಟೀಲ್ ಅವರು ಕಾನೂನು ಸಚಿವರಾಗಿ ಹಳೆಯ ಹಗರಣಗಳ ಚರ್ಚೆಗೆ ಅವಕಾಶವಿಲ್ಲ ಎಂದಾಗ ಸಿದ್ದರಾಮಯ್ಯ ತಮ್ಮ ಸಚಿವನನ್ನು ತಡೆದು ಅರೋಪ ತನ್ನ ಕುಟುಂಬದ ಮೇಲೆ ಬಂದಿದೆ ಮತ್ತು ಅದಕ್ಕೆ ಉತ್ತರಿಸುವ ಜವಾಬ್ದಾರಿ ನನ್ನದಾಗಿದೆ, ನಾನು ಮಾತಾಡುತ್ತೇನೆ ಅಂತ ಹೇಳಿ ಸೈಟು ಸಿಕ್ಕಿರುವುದನ್ನು ಸಮರ್ಥನೆ ಮಾಡಿಕೊಳ್ಳಬಹುದಿತ್ತು, ಆದರೆ ಅವರು ಹಾಗೆ ಮಾಡಲಿಲ್ಲ ಎಂದು ವಿಜಯೇಂದ್ರ ಹೇಳಿದರು.
- Arun Belly
- Updated on: Jul 26, 2024
- 2:30 pm
2013ರ ಅಫಿಡವಿಟ್ನಲ್ಲಿ ಕೆಸರೆ ಆಸ್ತಿ ವಿವರ ಸಲ್ಲಿಕೆ ಮಾಡಿಲ್ಲವೆಂದು ಒಪ್ಪಿಕೊಂಡ ಸಿದ್ದರಾಮಯ್ಯ
ಮುಡಾ ಹಗರಣ ವಿಚಾರವಾಗಿ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಪ್ರತಿಭಟನೆ ತೀವ್ರಗೊಳಿಸಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಆ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ಇದೇ ವೇಳೆ ಅವರು, 2013ರ ಅಫಿಡವಿಟ್ನಲ್ಲಿ ಕೆಸರೆ ಆಸ್ತಿ ವಿವರ ಉಲ್ಲೇಖಿಸದೇ ಇರುವುದನ್ನೂ ಒಪ್ಪಿಕೊಂಡಿದ್ದಾರೆ. ಆ ಬಗ್ಗೆ ಅವರು ಹೇಳಿದ್ದೇನೆಂದು ತಿಳಿಯಲು ಮುಂದೆ ಓದಿ.
- Prasanna Gaonkar
- Updated on: Jul 26, 2024
- 2:20 pm