
Siddaramaiah
ಕರ್ನಾಟಕ ರಾಜಕಾರಣದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ನಾಯಕರ ಪೈಕಿ ಸಿದ್ದರಾಮಯ್ಯ ಪ್ರಮುಖರು. ಮೈಸೂರಿನ ವರುಣಾ ಹೋಬಳಿಯ ಸಿದ್ಧರಾಮನಹುಂಡಿಯಲ್ಲಿ 1948ರ ಆಗಸ್ಟ್ 12ರಂದು ಜನಿಸಿದ ಸಿದ್ದರಾಮಯ್ಯನವರ ಪ್ರಾಥಮಿಕ ಶಿಕ್ಷಣ ಹುಟ್ಟೂರಿನಲ್ಲೇ ಆಯಿತು. ಮೈಸೂರಿನಲ್ಲಿ ಬಿಎಸ್ಸಿ ಹಾಗೂ ಕಾನೂನು ಪದವಿ ಪಡೆದ ಅವರು 1978ರ ವರೆಗೆ ವಕೀಲಿ ವೃತ್ತಿ ನಡೆಸುತ್ತಿದ್ದು, ನಂತರ ರಾಜಕೀಯಕ್ಕೆ ಧುಮುಕಿದರು.
1983ರ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾರತೀಯ ಲೋಕದಳದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಸಿದ್ದರಾಮಯ್ಯ, ನಂತರ ರಾಜಕೀಯದಲ್ಲಿ ಹಿಂತಿರುಗಿ ನೋಡಲೇ ಇಲ್ಲ. ಬಳಿಕ ಜನತಾ ದಳಕ್ಕೆ ಸೇರಿದ ಅವರು, ತರುವಾಯ ನಾಯಕತ್ವದ ವಿರುದ್ಧ ಅಸಮಾಧಾನದಿಂದ ಪಕ್ಷ ತೊರೆದು ಕಾಂಗ್ರೆಸ್ ಸೇರಿದರು. ಎರಡು ಬಾರಿ ಉಪಮುಖ್ಯಮಂತ್ರಿಯಾಗಿದ್ದ ಅವರು ಹಣಕಾಸು ಸಚಿವರಾಗಿ ಹಲವು ಬಾರಿ ಕಾರ್ಯನಿರ್ವಹಿಸಿದ್ದಾರೆ. ಇದೀಗ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಹಿಂದುಳಿದ ವರ್ಗಗಳ ನಾಯಕನೆಂದು ತಮ್ಮನ್ನು ಬಿಂಬಿಸಿಕೊಂಡಿರುವ ಸಿದ್ದರಾಮಯ್ಯ, 2013ರ ವಿಧಾನಸಭೆ ಚುನಾವಣೆಗೂ ಮುನ್ನ ಬೃಹತ್ ಅಹಿಂದ ಸಮಾವೇಶ ಆಯೋಜಿಸಿ ರಾಜಕೀಯ ಬಲ ಪ್ರದರ್ಶನ ಮಾಡಿದ್ದರು.
ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಅಧಿಕಾರ ಚಲಾಯಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಯೂ ಸಿದ್ದರಾಮಯ್ಯ ಅವರದ್ದಾಗಿದೆ.
ಮುಖ್ಯಮಂತ್ರಿಯಾಗಿ ಮೊದಲ ಅವಧಿಯಲ್ಲಿ (2013 – 2018) ಅನ್ನಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯಗಳಂತಹ ಹಲವು ‘ಭಾಗ್ಯ’ಗಳನ್ನು ಘೋಷಣೆ ಮಾಡಿದ್ದ ಸಿದ್ದರಾಮಯ್ಯ, ಭಾರೀ ಜನಪ್ರಿಯತೆಯ ಹೊರತಾಗಿಯೂ ಸ್ವಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿರುದ್ಧ ಸೋಲನುಭವಿಸಿದ್ದರು. ಆದರೆ, ಬಾದಾಮಿಯಿಂದಲೂ ಸ್ಪರ್ಧಿಸಿದ್ದ ಅವರು, ಅಲ್ಲಿ ಗೆಲುವು ಸಾಧಿಸಿದ್ದರು. 2023ರ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ಇದೀಗ ಎರಡನೇ ಅವಧಿಗೆ (2023 ಮೇ) ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಚುನಾವಣೆ ಸಮಯದಲ್ಲಿ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದ್ದು ನಾನಲ್ಲ: ಹೆಚ್ ಡಿ ಕುಮಾರಸ್ವಾಮಿ
ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆ ಜಾರಿಗೆ ತರೋದಾಗಿ ಕುಮಾರಸ್ವಾಮಿ ಸಹ ಹೇಳಿದ್ದರು. ತನ್ನ ಮಾತಿಗೆ ಈಗಲೂ ಬದ್ಧ ಎಂದು ಹೇಳುವ ಅವರು ಆಣೆಕಟ್ಟು ಕಟ್ಟಲು ತಮಿಳುನಾಡುನಿಂದ ಅನುಮೋದನೆಯನ್ನು ಕಾಂಗ್ರೆಸ್ ಪಡೆದುಕೊಂಡರೆ ತಾನು ಕೇಂದ್ರ ಸರ್ಕಾರದಿಂದ ಐದು ನಿಮಿಷಗಳಲ್ಲಿ ಕ್ಲೀಯರನ್ಸ್ ಕೊಡಿಸುತ್ತೇನೆ ಎಂದು ಕೇಂದ್ರ ಸಚಿವ ಹೇಳಿದರು.
- Arun Belly
- Updated on: Jul 5, 2025
- 2:20 pm
ಕೇವಲ ಚುನಾವಣೆ ಸಮಯದಲ್ಲಿ ಮಾತ್ರ ಕಾರ್ಯಕರ್ತರನ್ನು ನೆನೆಪಿಸಿಕೊಂಡರೆ ಪಕ್ಷ ಬೆಳೆಯಲಾರದು: ಶರಣಗೌಡ ಕಂದ್ಕೂರ್
ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ಮತ್ತು ಡಿಕೆ ಶಿವಕುಮಾರ್ ಅವರನ್ನು ಬಿಟ್ಟರೆ ಉಳಿದವರೆಲ್ಲ, ಹೆಚ್ ಡಿ ದೇವೇಗೌಡರ ಗರಡಿಯಲ್ಲಿ ಬೆಳೆದವರು ಅನ್ನೋದು ಗಮನಿಸಬೇಕಾದ ಸಂಗತಿ, ಬಹಳಷ್ಟು ನಾಯಕರು ಒಂದು ಹಂತಕ್ಕೆ ಬೆಳೆಯುವವರೆಗೆ ಪಕ್ಷವನ್ನು ಬಳಸಿಕೊಳ್ಳುತ್ತಾರೆ, ನಂತರ ಬೇರೆ ಪಕ್ಷಕ್ಕೆ ಹೋಗಿ ತಮ್ಮನ್ನು ಬೆಳೆಸಿದ ಪಕ್ಷವನ್ನು ಮರೆಯುತ್ತಾರೆ ಎಂದು ಶರಣಗೌಡ ಕಂದ್ಕೂರ್ ಹೇಳಿದರು.
- Arun Belly
- Updated on: Jul 4, 2025
- 8:19 pm
ಚನ್ನರಾಯಪಟ್ಟಣ ಬಳಿ ಚಳುವಳಿ; ಪ್ರತಿಭಟನೆ ಮಾಡುತ್ತಿರುವವರಲ್ಲಿ 10 ದಿನ ಸಮಯ ಕೇಳಿದ್ದೇನೆ: ಸಿದ್ದರಾಮಯ್ಯ
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಬಗ್ಗೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ಹಗುರವಾಗಿ ಮಾತಾಡಿರುವ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ, ಸ್ಥಳದಿಂದ ತೆರಳುತ್ತಿದ್ದ ಮುಖ್ಯಮಂತ್ರಿ ಸಿದ್ದಾರಾಮಯ್ಯ ವಾಪಸ್ಸು ಬಂದು, ವಿಷಯ ಕಾನೂನು ಇಲಾಖೆ ವ್ಯಾಪ್ತಿಗೆ ಬರುತ್ತದೆ, ಪೊಲೀಸರು ಅದನ್ನು ನೋಡಿಕೊಳ್ಳುತ್ತಾರೆ ಎಂದು ಹೇಳಿದರು.
- Web contact
- Updated on: Jul 4, 2025
- 3:34 pm
ಅಂದು ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ: ವಿಡಿಯೋ ವೈರಲ್
ಕರ್ನಾಟಕದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗಿದೆ. ನಿಂತಲ್ಲಿ ಕೂತಲ್ಲೇ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಅದರಲ್ಲೂ ಹಾಸನ ಜಿಲ್ಲೆಯಲ್ಲಿ ಅಂತೂ ಪ್ರತಿದಿನ ಸಾವಿನ ಸುದ್ದಿ ಕೇಳಿಬರುತ್ತಲೇ ಇದೆ. ಹೀಗಾಗಿ ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದ್ದು, ಸಂಬಂಧ ರಾಜ್ಯ ಸರ್ಕಾರ ಸಹ ಈ ಬಗ್ಗೆ ವರದಿ ನೀಡುವಂತೆ ಸಮಿತಿ ರಚಿಸಿದೆ. ಇದರ ಮಧ್ಯ ಸಿಎಂ ಸಿದ್ದರಾಮಯ್ಯನವರು ಕೊರೋನಾ ಲಸಿಕೆ ಕೂಡ ಈ ಸಾವುಗಳಿಗೆ ಕಾರಣವಿರಬಹುದು ಎನ್ನುವ ಮಾತುಗಳನ್ನಾಡಿದ್ದಾರೆ.
- Web contact
- Updated on: Jul 4, 2025
- 3:24 pm
ಸಿಎಂ ಬದಲಾವಣೆ ಆಗುವುದಾದರೆ ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ
ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ಅವರು ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ ಉತ್ತರಿಸುತ್ತಾ, ಪಕ್ಷದ ಶಿಸ್ತಿನ ಸಿಪಾಯಿಗಳಾಗಿ ಹೈಕಮಾಂಡ್ನ ನಿರ್ಧಾರಕ್ಕೆ ತಾವು ಬದ್ಧರಾಗಿದ್ದೇವೆ ಎಂದಿದ್ದಾರೆ. ಅಲ್ಲದೆ, ಗೃಹಲಕ್ಷ್ಮಿ ಯೋಜನೆಯಡಿ ಹಣ ಸರಿಯಾಗಿ ಫಲಾನುಭವಿಗಳಿಗೆ ತಲುಪುತ್ತಿಲ್ಲ ಎಂಬ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ವಿಡಿಯೋ ಇಲ್ಲಿದೆ.
- Ganapathi Sharma
- Updated on: Jul 4, 2025
- 12:59 pm
ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿದ ಬಳಿಕ ಶಿವಕುಮಾರ್ ನನಗೆ ಬೇಕಾಗಿದ್ದನ್ನು ಬೇಡಿಕೊಂಡಿದ್ದೇನೆ ಎಂದರು!
ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗಲಾರದು ಎಂದು ಡಿಕೆ ಶಿವಕುಮಾರ್ ಎರಡು ಸಲ ಹೇಳುತ್ತಾರೆ. ನನಗೇನೋ ಬೇಕೋ ಅದನ್ನು ಬೇಡಿಕೊಂಡಿದ್ದೇನೆ ಅಂತ ಅವರು ಹೇಳಿರುವುದನ್ನು ಅರ್ಥೈಸಿಕೊಳ್ಳುವುದು ಕನ್ನಡಿಗರಿಗೆ ಕಷ್ಟವಾಗಲಾರದು. ಎಲ್ಲರೂ ಒಟ್ಟಾಗಿ ಕೆಲಸ ಮಾಡಿ ಅಂತ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿ ಕಾರ್ಜುನ ಖರ್ಗೆ ಸಂದೇಶ ನೀಡಿದ್ದಾರೆ, ಅದನ್ನು ಪಾಲಿಸಿಕೊಂಡು ಹೋಗುತ್ತೇವೆ ಎಂದು ಡಿಸಿಎಂ ಹೇಳಿದರು.
- Arun Belly
- Updated on: Jul 4, 2025
- 12:47 pm
ಚಿಕ್ಕಬಳ್ಳಾಪುರ ಜಿಲ್ಲೆಗೆ ವರದಾನವಾದ ಸಚಿವ ಸಂಪುಟ ಸಭೆ: ಸಿಕ್ತು ಭರಪೂರ ಯೋಜನೆಗಳು
ಜುಲೈ 2ರಂದು ನಂದಿಗಿರಿಧಾಮದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಭರ್ಜರಿ ಕೊಡುಗೆ ನೀಡಲಾಗಿದೆ. 141 ಕೋಟಿ ರೂ. ವೆಚ್ಚದ ಅಂತಾರಾಷ್ಟ್ರೀಯ ಮಟ್ಟದ ಹೈ-ಟೆಕ್ ಹೂವಿನ ಮಾರುಕಟ್ಟೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಅದೇ ರೀತಿ ಬೇರೆ ಬೇರೆ ಯೋಜನೆಗಳನ್ನು ನೀಡಲಾಗಿದೆ. ಇಲ್ಲಿದೆ ಮಾಹಿತಿ.
- Bheemappa Patil
- Updated on: Jul 4, 2025
- 8:42 am
ಬಂದ್ ಆಗುವ ಆತಂಕದಲ್ಲಿ ಬಳ್ಳಾರಿ ಜೀನ್ಸ್ ಉದ್ಯಮ: ಬೀದಿಗೆ ಬೀಳಲಿದೆ ಎರಡು ಲಕ್ಷ ಜನರ ಬದುಕು
ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ, ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪಿಸುವ ಭರವಸೆ ನೀಡಿದ್ದರು ರಾಹುಲ್ ಗಾಂಧಿ. ನಂತರ, ಜಮೀನು ಗುರುತಿಸುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದು 2 ವರ್ಷ ಕಳೆದರೂ ಅದು ನನಸಾಗುವ ಸುಳಿವು ಕಾಣುತ್ತಿಲ್ಲ. ಜೀನ್ಸ್ ಪಾರ್ಕ್ ನಿರ್ಮಾಣ ಒತ್ತಟ್ಟಿಗಿರಲಿ, ಇರುವ ಜೀನ್ಸ್ ವಾಷಿಂಗ್ ಘಟಕಗಳೇ ಮೂಲಸೌಕರ್ಯ ಕೊರತೆಯಿಂದ ಮುಚ್ಚುತ್ತಿವೆ. ಇದೀಗ ಬಳ್ಳಾರಿ ಜಿನ್ಸ್ ಉದ್ಯಮ ಪೂರ್ತಿ ಬಂದ್ ಆಗುವ ಆತಂಕದಲ್ಲಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ನೋಟಿಸ್ ಇದಕ್ಕೆ ಕಾರಣ.
- Vinayak Badiger
- Updated on: Jul 4, 2025
- 8:13 am
ಸುರ್ಜೇವಾಲಾ ಬಳಿ ಕಾಂಗ್ರೆಸ್ ಶಾಸಕರು ತಮ್ಮ ಕುಂದು ಕೊರತೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ: ಬಿಕೆ ಹರಿಪ್ರಸಾದ್
ಮುಖ್ಯಮಂತ್ರಿ ಬದಲಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಟಿವಿ ಮಾಧ್ಯಮದಲ್ಲಿ ಚರ್ಚೆಗಳು ನಡೆಯುತ್ತಿವೆ, ತಾನೂ ಅದನ್ನು ಗಮನಿಸುತ್ತಿರುವುದಾಗಿ ಹೇಳಿದ ಹರಿ ಪ್ರಸಾದ್, ಮಲ್ಲಿಕಾರ್ಜುನ ಖರ್ಗೆ ಈಗಾಗಲೇ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ ಎಂದರು. ತಾನು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ಜುಲೈ 15ರಂದು ನಡೆಯಲಿರುವ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಸಭೆಯ ಹಿನ್ನೆಲೆಯಲ್ಲಿ ಎಂದು ಅವರು ಹೇಳಿದರು.
- Arun Belly
- Updated on: Jul 3, 2025
- 8:04 pm
ಬರ್ಮಣಿ ಅಧಿಕಾರದಲ್ಲಿದ್ದುಕೊಂಡೇ ದುರಹಂಕಾರಿಗಳಿಗೆ ಬುದ್ದಿ ಕಲಿಸುವ ಕೆಲಸ ಮಾಡಬೇಕಿತ್ತು: ಯತ್ನಾಳ್
ನಾರಾಯಣ ಬರ್ಮಣಿ ವಿಅರ್ಎಸ್ ನಿರ್ಧಾರ ತೆಗೆದುಕೊಳ್ಳುವ ಬದಲು ಕೆಲಸದಲ್ಲಿ ಮುಂದುವರಿದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಬೇಕಿತ್ತು, ಅಧಿಕಾರಿದಲ್ಲಿದ್ದುಕೊಂಡೇ ದುರಹಂಕಾರಿಗೆ ಪಾಠ ಕಲಿಸುವ ಕೆಲಸ ಮಾಡಬೇಕಿತ್ತು ಎನ್ನುವ ಬಸನಗೌಡ ಪಾಟೀಲ್, ರಾಜಕಾರಣಿಗಳ ದರ್ಪಕ್ಕೆ ಪೊಲೀಸ್ ಅಧಿಕಾರಿಗಳು ಬಲಿಯಾಗೋದು ಸರಿಯಲ್ಲ ಅಂತ ಹೇಳಿದರು.
- Arun Belly
- Updated on: Jul 3, 2025
- 3:50 pm