
Sonia Gandhi
ರಾಜಕಾರಣಿ ಮತ್ತು ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ. ಡಿಸೆಂಬರ್ 9, 1946 ರಂದು ಜನನ. ಇಟಲಿಯಲ್ಲಿ ಜನಿಸಿದ ಅವರು ಪ್ರಧಾನಿ ಇಂದಿರಾ ಗಾಂಧಿಯವರ ಮಗ ರಾಜೀವ್ ಗಾಂಧಿ ಅವರನ್ನು ವಿವಾಹವಾದರು ಮತ್ತು ಭಾರತದ ರಾಜಕೀಯದ ಅವಿಭಾಜ್ಯ ಅಂಗವಾದರು. ಪತಿಯ ದುರಂತ ಹತ್ಯೆಯ ನಂತರ ಸೋನಿಯಾ ಗಾಂಧಿ ಆರಂಭದಲ್ಲಿ ರಾಜಕೀಯದಿಂದ ದೂರವೇ ಉಳಿದಿದ್ದರು. ಆದಾಗ್ಯೂ, ಅವರು 1997 ರಲ್ಲಿ ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿದರು ಮತ್ತು 1998 ರಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತವನ್ನು ವಹಿಸಿಕೊಂಡರು. ಅವರ ವಿದೇಶಿ ಮೂಲದ ಕಾರಣದಿಂದಾಗಿ ಆರಂಭಿಕ ಟೀಕೆಗಳ ಹೊರತಾಗಿಯೂ, 2004 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಗೆಲುವಿನತ್ತ ಮುನ್ನಡೆಸುವಲ್ಲಿ ಸೋನಿಯಾ ಗಾಂಧಿ ಪ್ರಮುಖ ಪಾತ್ರ ವಹಿಸಿದರು.ಪ್ರಧಾನಿ ಸ್ಥಾನವನ್ನು ನಿರಾಕರಿಸಿದ ಅವರು ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ಸೋನಿಯಾ ಗಾಂಧಿ ಅವರು ಭಾರತದ ರಾಜಕೀಯದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದಾರೆ. ಕಾಂಗ್ರೆಸ್ನ ರಾಜಕೀಯ ಕಾರ್ಯತಂತ್ರಕ್ಕೆ ಕೊಡುಗೆ ನೀಡಿರುವ ಸೋನಿಯಾ ವಿವಿಧ ರಾಷ್ಟ್ರೀಯ ವಿಷಯಗಳ ಬಗ್ಗೆ ಪಕ್ಷದ ನಿಲುವನ್ನು ರೂಪಿಸಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣ; ರಾಜಕೀಯ ಪಿತೂರಿಯಿಂದ ನಮ್ಮನ್ನು ಹೆದರಿಸಲಾಗದು ಎಂದ ಖರ್ಗೆ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧದ ಇಡಿ ಆರೋಪ ಪಟ್ಟಿ 'ರಾಜಕೀಯ ಪಿತೂರಿ'ಯಿಂದ ಕೂಡಿದೆ ಎಂದು ಟೀಕಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. "ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕೇವಲ ಎರಡು ಅಥವಾ ಮೂರು ದಿನಗಳ ಮೊದಲು, ದೆಹಲಿ, ಲಕ್ನೋ ಮತ್ತು ಮುಂಬೈನಲ್ಲಿರುವ ನ್ಯಾಷನಲ್ ಹೆರಾಲ್ಡ್ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಇದೆಲ್ಲವೂ ಸೇಡಿನ ಮನೋಭಾವದಿಂದ ಮಾಡಲಾಗುತ್ತಿದೆ ಎಂಬುದರಲ್ಲಿ ಸಂದೇಹವಿಲ್ಲ" ಎಂದು ಅವರು ಹೇಳಿದ್ದಾರೆ.
- Sushma Chakre
- Updated on: Apr 19, 2025
- 9:56 pm
National Herald case: ನ್ಯಾಷನಲ್ ಹೆರಾಲ್ಡ್ ಪ್ರಕರಣ; ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ ಇಡಿ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಹೆಸರನ್ನು ಚಾರ್ಜ್ಶೀಟ್ನಲ್ಲಿ ಪ್ರಸ್ತಾಪಿಸಲಾಗಿದೆ. ಏಪ್ರಿಲ್ 25ರಂದು ವಿಚಾರಣೆ ನಡೆಯಲಿದೆ. ಅಕ್ರಮ ಹಣ ಅಕ್ರಮ ವರ್ಗಾವಣೆ ಯೋಜನೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಇತರ ಹಲವಾರು ಕಾಂಗ್ರೆಸ್ ನಾಯಕರು ಮತ್ತು ಖಾಸಗಿ ಕಂಪನಿ ಯಂಗ್ ಇಂಡಿಯನ್ ಸೇರಿದಂತೆ ಹಲವಾರು ಪ್ರಮುಖ ರಾಜಕೀಯ ವ್ಯಕ್ತಿಗಳು ಕ್ರಿಮಿನಲ್ ಪಿತೂರಿ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
- Sushma Chakre
- Updated on: Apr 15, 2025
- 7:42 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ; ಸೋನಿಯಾ, ರಾಹುಲ್ ಗಾಂಧಿಯ ಆಸ್ತಿ ವಶಕ್ಕೆ ಮುಂದಾದ ಇಡಿ
2014ರಲ್ಲಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ನೀಡಿದ ದೂರಿನಿಂದ ಶುರುವಾದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಯಂಗ್ ಇಂಡಿಯನ್ ಕೇವಲ 50 ಲಕ್ಷ ರೂ.ಗೆ 2,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಎಜೆಎಲ್ ಆಸ್ತಿಗಳನ್ನು ವಂಚನೆಯಿಂದ ಸ್ವಾಧೀನಪಡಿಸಿಕೊಂಡಿದೆ ಎಂದು ಆರೋಪಿಸಲಾಗಿತ್ತು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಎಜೆಎಲ್ ಪ್ರಕಟಿಸುತ್ತಿದ್ದು, ಅದು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದೆ. ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಯಂಗ್ ಇಂಡಿಯನ್ನ ಬಹುಪಾಲು ಷೇರುದಾರರಾಗಿದ್ದು, ಇಬ್ಬರೂ ತಲಾ ಶೇ. 38ರಷ್ಟು ಷೇರುಗಳನ್ನು ಹೊಂದಿದ್ದಾರೆ. ಇದೀಗ ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಸಂಬಂಧಿಸಿದ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಜಾರಿ ನಿರ್ದೇಶನಾಲಯ (ಇಡಿ) ಕ್ರಮಗಳನ್ನು ಪ್ರಾರಂಭಿಸಿದೆ.
- Sushma Chakre
- Updated on: Apr 12, 2025
- 5:40 pm
ಸಂವಿಧಾನದ ಮೇಲಿನ ಹೀನಾಯ ದಾಳಿ; ಲೋಕಸಭೆಯಲ್ಲಿ ವಕ್ಫ್ ಮಸೂದೆ ಅಂಗೀಕಾರಕ್ಕೆ ಸೋನಿಯಾ ಗಾಂಧಿ ಆಕ್ರೋಶ
ವಕ್ಫ್ (ತಿದ್ದುಪಡಿ) ಮಸೂದೆಯ ರಾಜಕೀಯ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಕ್ರೋಶ ಹೊರಹಾಕಿದ್ದು, ಈ ಮಸೂದೆಯು "ಸಂವಿಧಾನದ ಮೇಲಿನ ನಾಚಿಕೆಗೇಡಿನ ದಾಳಿಯಾಗಿದೆ" ಎಂದಿದ್ದಾರೆ. ಲೋಕಸಭೆಯು ವಕ್ಫ್ ಮಸೂದೆಯನ್ನು ಅಂಗೀಕರಿಸಿದ ಕೆಲವೇ ಗಂಟೆಗಳ ನಂತರ ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ತಮ್ಮ ಪಕ್ಷದ ಸಂಸದರನ್ನು ಉದ್ದೇಶಿಸಿ ಮಾತನಾಡಿದ ಸೋನಿಯಾ ಗಾಂಧಿ, ಸಂಸತ್ತಿನ ಎರಡೂ ಸದನಗಳಲ್ಲಿ ವಿರೋಧ ಪಕ್ಷದ ನಾಯಕರಿಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಮತ್ತು ವಿವಿಧ ವಿಷಯಗಳ ಕುರಿತು ಚರ್ಚೆಗೆ ನಮ್ಮ ಬೇಡಿಕೆಯನ್ನು ತಿರಸ್ಕರಿಸಿದ್ದಾರೆ ಎಂದು ಆರೋಪಿಸಿದರು.
- Sushma Chakre
- Updated on: Apr 3, 2025
- 4:35 pm
ರಾಷ್ಟ್ರಪತಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಸೋನಿಯಾ ಗಾಂಧಿ ವಿರುದ್ಧ ಉತ್ತರ ಪ್ರದೇಶದಲ್ಲಿ ಪ್ರಕರಣ ದಾಖಲು
ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಸಂಕಷ್ಟಎದುರಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ಪೂವರ್ ಲೇಡಿ’ ಎಂದು ಕರೆದಿದ್ದಕ್ಕಾಗಿ ಬಿಹಾರದ ಮುಜಾಫರ್ಪುರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಫೆಬ್ರವರಿ 10 ರಂದು ಈ ಪ್ರಕರಣದ ವಿಚಾರಣೆ ನಡೆಯಲಿದೆ. ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣದ ಬಳಿಕ ಪ್ರತಿಕ್ರಿಯೆ ನೀಡಿದ ಸೋನಿಯಾ ಗಾಂಧಿ ಈ ಹೇಳಿಕೆ ನೀಡಿದ್ದರು.
- Ganapathi Sharma
- Updated on: Feb 2, 2025
- 1:08 pm
ನನ್ನ ಅಮ್ಮನಿಗೂ ವಯಸ್ಸಾಗಿದೆ; ರಾಷ್ಟ್ರಪತಿ ಕುರಿತ ಸೋನಿಯಾ ಗಾಂಧಿ ಹೇಳಿಕೆಗೆ ಪ್ರಿಯಾಂಕಾ ಗಾಂಧಿ ಸಮರ್ಥನೆ
ರಾಷ್ಟ್ರಪತಿ ದ್ರೌಪದಿ ಮುರ್ಮು ಕುರಿತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಂದು ನೀಡಿದ್ದ ಹೇಳಿಕೆ ಭಾರೀ ಚರ್ಚೆಗೆ ಒಳಗಾಗಿದೆ. ಸೋನಿಯಾ ಗಾಂಧಿ ರಾಷ್ಟ್ರಪತಿಗಳಿಗೆ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ರಾಷ್ಟ್ರಪತಿ ಭವನ ಕೂಡ ಸೋನಿಯಾ ಗಾಂಧಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ, ಪ್ರಕಟಣೆ ಬಿಡುಗಡೆ ಮಾಡಿದೆ. ಇದೀಗ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ತಾಯಿಯ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.
- Sushma Chakre
- Updated on: Jan 31, 2025
- 9:40 pm
ರಾಷ್ಟ್ರಪತಿ ಕುರಿತ ಸೋನಿಯಾ ಗಾಂಧಿ ಹೇಳಿಕೆಯನ್ನು ತಿರುಚಲಾಗಿದೆ; ಕಾಂಗ್ರೆಸ್ ಸ್ಪಷ್ಟನೆ
ರಾಷ್ಟ್ರಪತಿ ದ್ರೌಪದಿ ಮುರ್ಮು ‘ಪೂರ್ ಲೇಡಿ’ ಎಂಬ ಸೋನಿಯಾ ಗಾಂಧಿ ಹೇಳಿಕೆಗೆ ಸಂಬಂಧಿಸಿದಂತೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕಾಂಗ್ರೆಸ್ ಈ ಬಗ್ಗೆ ಸ್ಪಷ್ಟನೆ ನೀಡಿದೆ. ಕಾಂಗ್ರೆಸ್ ಪಕ್ಷ ಎಂದಿಗೂ ರಾಷ್ಟ್ರಪತಿರನ್ನು ಅವಮಾನಿಸಿಲ್ಲ, ಮುಂದೆಯೂ ಅವಮಾನಿಸುವುದಿಲ್ಲ. ಸೋನಿಯಾ ಗಾಂಧಿ ನೀಡಿದ ಹೇಳಿಕೆಯನ್ನು ತಿರುಚಲಾಗಿದೆ. ಬಿಜೆಪಿ ಸರ್ಕಾರ ಹೊಸ ಸಂಸತ್ ಕಟ್ಟಡದ ಉದ್ಘಾಟನೆಗೆ ರಾಷ್ಟ್ರಪತಿಯನ್ನು ಆಹ್ವಾನಿಸಿಲ್ಲ. ಅಲ್ಲದೇ ರಾಮಮಂದಿರ ಉದ್ಘಾಟನೆಗೂ ರಾಷ್ಟ್ರಪತಿಯರನ್ನು ಕರೆದಿರಲಿಲ್ಲ. ಇದು ನಿಜವಾದ ಅವಮಾನ ಎಂದು ಕಾಂಗ್ರೆಸ್ ಆರೋಪ ಮಾಡಿದೆ.
- Sushma Chakre
- Updated on: Jan 31, 2025
- 6:44 pm
ಬುಡಕಟ್ಟು ಜನರಿಗಾದ ಅವಮಾನ; ರಾಷ್ಟ್ರಪತಿ ದ್ರೌಪದಿ ಮುರ್ಮು ಕುರಿತ ಸೋನಿಯಾ ಗಾಂಧಿ ಹೇಳಿಕೆಗೆ ಮೋದಿ ಆಕ್ಷೇಪ
ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಅಧಿವೇಶನದಲ್ಲಿ ಮಾಡಿದ ಭಾಷಣವನ್ನು ಟೀಕಿಸಿದ್ದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ರಾಷ್ಟ್ರಪತಿ ಭವನ ಕೂಡ ಈ ಹೇಳಿಕೆಯನ್ನು ಖಂಡಿಸಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಕೂಡ ಸೋನಿಯಾ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಮೂಲಕ ಕಾಂಗ್ರೆಸ್ ದೇಶಾದ್ಯಂತ 10 ಕೋಟಿ ಬುಡಕಟ್ಟು ಜನರನ್ನು ಅವಮಾನಿಸಿದೆ ಎಂದು ಮೋದಿ ಹೇಳಿದ್ದಾರೆ. ಸೋನಿಯಾ ಗಾಂಧಿ ಕ್ಷಮೆ ಯಾಚಿಸಬೇಕೆಂದು ಬಿಜೆಪಿ ಆಗ್ರಹಿಸಿದೆ.
- Sushma Chakre
- Updated on: Jan 31, 2025
- 6:14 pm
ಘನತೆಗೆ ಧಕ್ಕೆ ತಂದಿದೆ; ದ್ರೌಪದಿ ಮುರ್ಮು ಕುರಿತ ಸೋನಿಯಾ ಗಾಂಧಿ ಟೀಕೆಗೆ ರಾಷ್ಟ್ರಪತಿ ಭವನ ಆಕ್ರೋಶ
ಇಂದಿನಿಂದ ಅಧಿವೇಶನಗಳು ಆರಂಭವಾಗಿದ್ದು, ಇಂದು ಸಂಸತ್ ಅನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಿದ್ದಾರೆ. ಈ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಕಾಂಗ್ರೆಸ್ ನಾಯಕ ಸೋನಿಯಾ ಗಾಂಧಿ, ‘ಪಾಪ, ರಾಷ್ಟ್ರಪತಿ ಮುರ್ಮು ಕೊನೆಯಲ್ಲಿ ಬಹಳ ಸುಸ್ತಾಗಿ ಬಿಟ್ಟಿದ್ದರು, ಅವರಿಗೆ ಮಾತನಾಡಲು ಕಷ್ಟವಾಗುತ್ತಿತ್ತು. ಇದು ಬೇಸರದ ಸಂಗತಿ’ ಎಂದು ಹೇಳಿದ್ದರು. ಸೋನಿಯಾ ಗಾಂಧಿಯವರ ಹೇಳಿಕೆ ವಿವಾದ ಸೃಷ್ಟಿಸಿತ್ತು. ಈ ಟೀಕೆಗೆ ರಾಷ್ಟ್ರಪತಿ ಭವನ ಪ್ರತಿಕ್ರಿಯಿಸಿದೆ.
- Sushma Chakre
- Updated on: Jan 31, 2025
- 5:31 pm
ಬೆಳಗಾವಿ ಕಾಂಗ್ರೆಸ್ ಅಧಿವೇಶನ; ಸೋನಿಯಾ ಗಾಂಧಿ ಬಡವರಿಗಾಗಿ ಅನೇಕ ಯೋಜನೆಗಳನ್ನು ನೀಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ
ಸೋನಿಯಾ ಗಾಂಧಿಯವರು ಯುಪಿಎ ಚೇರ್ಪರ್ಸನ್ ಆಗಿ ಬಡವರ ಏಳಿಗೆಗೆ ಹಲವಾರು ಕ್ರಾಂತಿಕಾರಿ ಯೋಜನೆಗಳನ್ನು ಮನಮೋಹನ್ ಸಿಂಗ್ ಪ್ರಧಾನಮಂತ್ರಿಯಾಗಿದ್ದಾಗ ತಂದರು, ಮಹಾತ್ಮಾ ಗಾಂಧಿ ನರೇಗಾ ಯೋಜನೆ, ಆಹಾರ ಭದ್ರತೆ ಯೋಜನೆ, ಆರ್ಟಿಐ ಕಾಯ್ದೆ ಮೊದಲಾದವು ಅವರು ಕೊಡುಗೆಯಾಗಿವೆ, ಅದರೆ ಎನ್ಡಿಎ ಸರ್ಕಾರ ಕೇವಲ ಗಾಂಧಿ ಕುಟುಂಬವನ್ನು ಟೀಕಿಸಿ ಅಧಿಕಾರಕ್ಕೆ ಬಂದಿದೆ ಎಂದು ಖರ್ಗೆ ಹೇಳಿದರು.
- Arun Belly
- Updated on: Jan 21, 2025
- 7:17 pm