AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonia Gandhi

Sonia Gandhi

ರಾಜಕಾರಣಿ ಮತ್ತು ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ. ಡಿಸೆಂಬರ್ 9, 1946 ರಂದು ಜನನ. ಇಟಲಿಯಲ್ಲಿ ಜನಿಸಿದ ಅವರು ಪ್ರಧಾನಿ ಇಂದಿರಾ ಗಾಂಧಿಯವರ ಮಗ ರಾಜೀವ್ ಗಾಂಧಿ ಅವರನ್ನು ವಿವಾಹವಾದರು ಮತ್ತು ಭಾರತದ ರಾಜಕೀಯದ ಅವಿಭಾಜ್ಯ ಅಂಗವಾದರು. ಪತಿಯ ದುರಂತ ಹತ್ಯೆಯ ನಂತರ ಸೋನಿಯಾ ಗಾಂಧಿ ಆರಂಭದಲ್ಲಿ ರಾಜಕೀಯದಿಂದ ದೂರವೇ ಉಳಿದಿದ್ದರು. ಆದಾಗ್ಯೂ, ಅವರು 1997 ರಲ್ಲಿ ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿದರು ಮತ್ತು 1998 ರಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತವನ್ನು ವಹಿಸಿಕೊಂಡರು. ಅವರ ವಿದೇಶಿ ಮೂಲದ ಕಾರಣದಿಂದಾಗಿ ಆರಂಭಿಕ ಟೀಕೆಗಳ ಹೊರತಾಗಿಯೂ, 2004 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಗೆಲುವಿನತ್ತ ಮುನ್ನಡೆಸುವಲ್ಲಿ ಸೋನಿಯಾ ಗಾಂಧಿ ಪ್ರಮುಖ ಪಾತ್ರ ವಹಿಸಿದರು.ಪ್ರಧಾನಿ ಸ್ಥಾನವನ್ನು ನಿರಾಕರಿಸಿದ ಅವರು ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ಸೋನಿಯಾ ಗಾಂಧಿ ಅವರು ಭಾರತದ ರಾಜಕೀಯದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದಾರೆ. ಕಾಂಗ್ರೆಸ್‌ನ ರಾಜಕೀಯ ಕಾರ್ಯತಂತ್ರಕ್ಕೆ ಕೊಡುಗೆ ನೀಡಿರುವ ಸೋನಿಯಾ ವಿವಿಧ ರಾಷ್ಟ್ರೀಯ ವಿಷಯಗಳ ಬಗ್ಗೆ ಪಕ್ಷದ ನಿಲುವನ್ನು ರೂಪಿಸಿದ್ದಾರೆ.

ಇನ್ನೂ ಹೆಚ್ಚು ಓದಿ

ಗುಂಪುಗಾರಿಕೆ ಇಲ್ಲ ಎನ್ನುತ್ತಲೇ ಗೇಮ್ ಪ್ಲ್ಯಾನ್: ಕರ್ನಾಟಕ ಕಾಂಗ್ರೆಸ್​ ಬಗ್ಗೆ ದೆಹಲೀಲಿ ಸೋನಿಯಾ, ರಾಹುಲ್ ಚರ್ಚೆ?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ‘ಕೊಟ್ಟ ಮಾತು’ ಕುರಿತ ವಿವಾದ ತೀವ್ರಗೊಂಡಿದೆ. ಹೈಕಮಾಂಡ್‌ಗೆ ಬಿಸಿತುಪ್ಪವಾಗಿರುವ ಈ ಚರ್ಚೆ, 2023ರ ಸಿಎಂ ಆಯ್ಕೆ ವೇಳೆ ನಡೆದ ಒಪ್ಪಂದದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಬಗ್ಗೆ ದೆಹಲಿಯಲ್ಲಿ ಸೋನಿಯಾ, ರಾಹುಲ್ ಗಾಂಧಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಗೊಂದಲ: ಸೋನಿಯಾ ಗಾಂಧಿ ನಿವಾಸದಲ್ಲಿ ಹೈವೋಲ್ಟೇಜ್ ಮೀಟಿಂಗ್, ಚರ್ಚೆ ಆಗಿದ್ದೇನು?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ತಾತ್ಕಾಲಿಕ ವಿರಾಮ ಬಿದ್ದಿದೆ. ಆದಾಗ್ಯೂ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿ ಚರ್ಚಿಸುವ ಸಾಧ್ಯತೆಯಿದೆ. ರಾಜ್ಯ ರಾಜಕೀಯ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ಸೋನಿಯಾ ಗಾಂಧಿ ಜೊತೆ ಚರ್ಚಿಸಿದ್ದು, ಗೊಂದಲಕ್ಕೆ ತೆರೆ ಎಳೆಯಲು ಮನವಿ ಮಾಡಿದ್ದಾರೆ.

ನ್ಯಾಷನಲ್ ಹೆರಾಲ್ಡ್​ ಪ್ರಕರಣ: ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಹೊಸ ಎಫ್​ಐಆರ್​

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಹಿರಿಯ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹಾಗೂ ಇತರ ಹಲವಾರು ಪ್ರಮುಖ ವ್ಯಕ್ತಿಗಳ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ. ಎಫ್‌ಐಆರ್‌ನಲ್ಲಿ ಪ್ರಮುಖ ಹೆಸರುಗಳು ಮತ್ತು ಆರೋಪಗಳು ಅಧಿಕೃತ ಮೂಲಗಳ ಪ್ರಕಾರ, ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು ಅಕ್ಟೋಬರ್ 3 ರಂದು ಗಾಂಧಿ ಕುಟುಂಬ ಮತ್ತು ಇತರ ಏಳು ಜನರ ವಿರುದ್ಧ ದೂರು ದಾಖಲಿಸಿದೆ.

ಕ್ಲೈಮ್ಯಾಕ್ಸ್ ಹಂತ ತಲುಪಿದ ಸಿಎಂ ಕುರ್ಚಿ ಕದನ: ಪದತ್ಯಾಗನಾ? ಪಟ್ಟಾಭಿಷೇಕನಾ?

ಕರ್ನಾಟಕ ಕಾಂಗ್ರೆಸ್​ನಲ್ಲಿ ಕುರ್ಚಿ ಗುದ್ದಾಟ ದಿನಕ್ಕೊಂದು ತಿರುವು, ಕ್ಷಣಕ್ಕೊಂದು ದಿಕ್ಕು ಬದಲಿಸ್ತಿದೆ. ಕುರ್ಚಿ ಗುದ್ದಾಟ ತಾರಕಕ್ಕೇರ್ತಿದ್ದು, ಸಿಎಂ ಮತ್ತು ಡಿಸಿಎಂ ಬಣಗಳ ತಂತ್ರ ಪ್ರತಿತಂತ್ರ ಜೋರಾಗಿದೆ. ಹೀಗಾಗಿ ಕೈ ಪಾಳೆಯದಲ್ಲಿ ಉಂಟಾಗಿರುವ ನಾಯಕತ್ವ ಬದಲಾವಣೆ ಗುದ್ದಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ತಿಂಗಳಾಂತ್ಯಕ್ಕೆ ಅಥವಾ ಡಿಸಿಎಂಬರ್ ಮೊದಲ ವಾರದೊಳಗೆ ಹೈಕಮಾಂಡ್ ಈ ಬಿಕ್ಕಟ್ಟಿಗೆ ಪರಿಹಾರ ಸೂತ್ರ ರೂಪಿಸುವ ಸಾಧ್ಯತೆಗಳಿವೆ.

ಬೇಡ್ತಿ ಮತ್ತು ಬೆಂಗಳೂರಿನ ಟನೆಲ್​ ರಸ್ತೆ ವಿವಾದ: ಸೋನಿಯಾ ಗಾಂಧಿ ಮತ್ತು ಜೈರಾಮ್​ ರಮೇಶ್ ಪರಿಸರ ಪ್ರೇಮ ತೋರಿಸಲಿ​

ಕಾಂಗ್ರೆಸ್​ ಪಕ್ಷಕ್ಕೆ ಒಂದು ಇತಿಹಾಸವಿದೆ. ಕೇರಳದ ಸೈಲೆಂಟ್​ ವ್ಯಾಲಿ ಹೋರಾಟ ನಡೆದಾಗ, ಹೋರಾಟಗಾರರ ಮಾತಿಗೆ ಒಪ್ಪಿ ಆ ಯೋಜನೆಯನ್ನು ಕೈ ಬಿಟ್ಟಿದ್ದು ಅಂದಿನ ಇಂದಿರಾಗಾಂಧಿ ಸರಕಾರ. ಈಗ ಮತ್ತೆ ಪರಿಸರ ವಿರೋಧಿ ಯೋಜನೆಗೆ ರಾಜ್ಯ ಸರಕಾರ ಕೈ ಹಾಕಿರುವಾಗ ಕೇಂದ್ರದ ಕಾಂಗ್ರೆಸ್ ನಾಯಕರು ಮಧ್ಯಪ್ರವೇಶಿಸಿಸುವುದು ಅತೀ ಅವಶ್ಯ.

ಇಟಲಿ ಮಹಿಳೆ ಕೂಡ ಭಾರತದಲ್ಲಿ ಮತ ಚಲಾಯಿಸಿದ್ದರು, ನಿಮಗೆ ನೆನಪಿಲ್ಲವೇ?; ರಾಹುಲ್ ಗಾಂಧಿ ಆರೋಪಕ್ಕೆ ಬಿಜೆಪಿ ಲೇವಡಿ

ಹರಿಯಾಣದಲ್ಲಿ 'ಮತ ಚೋರಿ' ನಡೆದಿದೆ ಎಂಬ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯ ಆರೋಪಕ್ಕೆ ಇದೀಗ ಬಿಜೆಪಿ ತಿರುಗೇಟು ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಕಿರಣ್ ರಿಜಿಜು ರಾಹುಲ್ ಗಾಂಧಿಯನ್ನು ತೀವ್ರವಾಗಿ ಟೀಕಿಸಿದ್ದಾರೆ. ಈ ರೀತಿ ಪದೇಪದೆ ಸುದ್ದಿಗೋಷ್ಠಿ ನಡೆಸಿ ಸುಳ್ಳು ಆರೋಪ ಮಾಡುವುದು ರಾಜಕೀಯ ನಾಟಕ ಎಂದು ಹೇಳಿದ ಕಿರಣ್ ರಿಜಿಜು, ಬಿಹಾರ ಚುನಾವಣೆಗೂ ಮುನ್ನ ರಾಹುಲ್ ಗಾಂಧಿ ಜನರ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಭಾರತೀಯ ಪ್ರಜೆಯಾಗುವ 3 ವರ್ಷ ಮೊದಲೇ ಮತದಾರರ ಪಟ್ಟಿಯಲ್ಲಿ ಸೋನಿಯಾ ಗಾಂಧಿ ಹೆಸರು; ದೆಹಲಿ ಕೋರ್ಟ್​ನಲ್ಲಿ ಅರ್ಜಿ

ಭಾರತೀಯ ನಾಗರಿಕರಾಗುವ 3 ವರ್ಷದ ಮೊದಲು ಮತದಾರರ ಪಟ್ಟಿಯಲ್ಲಿ ಸೋನಿಯಾ ಗಾಂಧಿಯ ಹೆಸರು ಸೇರಿಸಿದ್ದಕ್ಕಾಗಿ ದೆಹಲಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಸೋನಿಯಾ ಗಾಂಧಿಯವರು ಏಪ್ರಿಲ್ 1983ರಲ್ಲಿ ಭಾರತೀಯ ನಾಗರಿಕರಾಗಿದ್ದರೂ ಸಹ, ನವದೆಹಲಿ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಅದಕ್ಕೂ 3 ವರ್ಷ ಮೊದಲೇ ಅವರ ಹೆಸರನ್ನು ಸೇರಿಸಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಅರ್ಜಿಯ ಪ್ರಕಾರ, ಸೋನಿಯಾ ಗಾಂಧಿ 1983ರಲ್ಲಿ ಭಾರತೀಯ ನಾಗರಿಕರಾದರು. ಆದರೆ ಅವರ ಹೆಸರು 1980ರಲ್ಲಿ ನವದೆಹಲಿ ಕ್ಷೇತ್ರದ ಮತದಾರರ ಪಟ್ಟಿಯಲ್ಲಿತ್ತು.

Sonia Gandhi : ಹದಗೆಟ್ಟ ಸೋನಿಯಾ ಗಾಂಧಿ ಆರೋಗ್ಯ, ಗಂಗಾರಾಮ್ ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಆರೋಗ್ಯ ಹದಗೆಟ್ಟ ಕಾರಣ ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯ ಪ್ರಕಾರ, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಇಲ್ಲಿಗೆ ಕರೆತರಲಾಗಿತ್ತು. ಕೆಲವು ದಿನಗಳ ಹಿಂದೆ, ಹಿಮಾಚಲ ಪ್ರದೇಶದಲ್ಲಿ ಸೋನಿಯಾ ಗಾಂಧಿ ಆರೋಗ್ಯ ಕೈಕೊಟ್ಟಿತ್ತು. ಆ ಸಮಯದಲ್ಲಿ, ಅವರನ್ನು ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗಿತ್ತು. ಇದಲ್ಲದೆ, ಫೆಬ್ರವರಿ ತಿಂಗಳಲ್ಲಿಯೂ ಸಹ, ಹೊಟ್ಟೆ ಸಮಸ್ಯೆಯಿಂದಾಗಿ ಅವರನ್ನು ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ದಿಢೀರನೆ ಅನಾರೋಗ್ಯದ ಸಮಸ್ಯೆ; ಶಿಮ್ಲಾದ ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ

ಹಠಾತ್ ಅನಾರೋಗ್ಯದ ಕಾರಣದಿಂದಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಹಿಮಾಚಲ ಪ್ರದೇಶದ ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋನಿಯಾ ಗಾಂಧಿ ಅವರಿಗೆ ಇದ್ದಕ್ಕಿದ್ದಂತೆ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಶಿಮ್ಲಾದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರಿಗೆ ಸಣ್ಣಪುಟ್ಟ ಆರೋಗ್ಯ ಸಮಸ್ಯೆ ಎದುರಾಗಿದೆ ಎಂದು ಮೂಲಗಳು ತಿಳಿಸಿವೆ.

National Herald Case: ರಾಜೀವ್​ ಗಾಂಧಿ ಪುಣ್ಯ ತಿಥಿಯಂದೇ ಸೋನಿಯಾ ಗಾಂಧಿ, ರಾಹುಲ್​ಗೆ ಇಡಿ ಶಾಕ್

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ಧ ಇಡಿ ದೊಡ್ಡ ಆರೋಪ ಮಾಡಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ 142 ಕೋಟಿ ರೂಪಾಯಿ ಮೌಲ್ಯದ ಅಪರಾಧ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ತನಿಖಾ ಸಂಸ್ಥೆ ಇಡಿ ಮುಕ್ತ ನ್ಯಾಯಾಲಯಕ್ಕೆ ತಿಳಿಸಿದೆ. ನ್ಯಾಷನಲ್ ಹೆರಾಲ್ಡ್​ ಪ್ರಕರಣದಲ್ಲಿ ಸೋನಿಯಾ ಗಾಂಧಿ, ರಾಹುಲ್ ಹಾಗೂ ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿದೆ ಎಂದು ಜಾರಿ ನಿರ್ದೇಶನಾಲಯ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದೆ.

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ