Sonia Gandhi
ರಾಜಕಾರಣಿ ಮತ್ತು ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ. ಡಿಸೆಂಬರ್ 9, 1946 ರಂದು ಜನನ. ಇಟಲಿಯಲ್ಲಿ ಜನಿಸಿದ ಅವರು ಪ್ರಧಾನಿ ಇಂದಿರಾ ಗಾಂಧಿಯವರ ಮಗ ರಾಜೀವ್ ಗಾಂಧಿ ಅವರನ್ನು ವಿವಾಹವಾದರು ಮತ್ತು ಭಾರತದ ರಾಜಕೀಯದ ಅವಿಭಾಜ್ಯ ಅಂಗವಾದರು. ಪತಿಯ ದುರಂತ ಹತ್ಯೆಯ ನಂತರ ಸೋನಿಯಾ ಗಾಂಧಿ ಆರಂಭದಲ್ಲಿ ರಾಜಕೀಯದಿಂದ ದೂರವೇ ಉಳಿದಿದ್ದರು. ಆದಾಗ್ಯೂ, ಅವರು 1997 ರಲ್ಲಿ ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿದರು ಮತ್ತು 1998 ರಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತವನ್ನು ವಹಿಸಿಕೊಂಡರು. ಅವರ ವಿದೇಶಿ ಮೂಲದ ಕಾರಣದಿಂದಾಗಿ ಆರಂಭಿಕ ಟೀಕೆಗಳ ಹೊರತಾಗಿಯೂ, 2004 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಗೆಲುವಿನತ್ತ ಮುನ್ನಡೆಸುವಲ್ಲಿ ಸೋನಿಯಾ ಗಾಂಧಿ ಪ್ರಮುಖ ಪಾತ್ರ ವಹಿಸಿದರು.ಪ್ರಧಾನಿ ಸ್ಥಾನವನ್ನು ನಿರಾಕರಿಸಿದ ಅವರು ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ಸೋನಿಯಾ ಗಾಂಧಿ ಅವರು ಭಾರತದ ರಾಜಕೀಯದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದಾರೆ. ಕಾಂಗ್ರೆಸ್ನ ರಾಜಕೀಯ ಕಾರ್ಯತಂತ್ರಕ್ಕೆ ಕೊಡುಗೆ ನೀಡಿರುವ ಸೋನಿಯಾ ವಿವಿಧ ರಾಷ್ಟ್ರೀಯ ವಿಷಯಗಳ ಬಗ್ಗೆ ಪಕ್ಷದ ನಿಲುವನ್ನು ರೂಪಿಸಿದ್ದಾರೆ.
ಇನ್ನೂ ಹೆಚ್ಚು ಓದಿ‘ಅಪ್ಪನ ಸಾವಿನ ಬಳಿಕ ಅಮ್ಮ ಪಟ್ಟ ಕಷ್ಟ ನಮಗಷ್ಟೇ ಗೊತ್ತು’; ಸೋನಿಯಾ ಗಾಂಧಿ ಬಗ್ಗೆ ರಾಹುಲ್ ಗಾಂಧಿ ಭಾವನಾತ್ಮಕ ಬರಹ
ರಾಜೀವ್ ಗಾಂಧಿಯವರ ಜನ್ಮದಿನವಾದ ಇಂದು ತಮ್ಮ ತಾಯಿ ಸೋನಿಯಾ ಗಾಂಧಿಯವರ ಬಗ್ಗೆ ಭಾವನಾತ್ಮಕ ಪೋಸ್ಟ್ ಒಂದನ್ನು ಮಾಡಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತಮ್ಮ ತಂದೆಯಾದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯ ಮರಣದ ನಂತರ ಸೋನಿಯಾ ಗಾಂಧಿ ಜೀವನದ ಪ್ರತಿಯೊಂದು ಸವಾಲನ್ನು ಯಾವ ರೀತಿ ಧೈರ್ಯ ಮತ್ತು ಘನತೆಯಿಂದ ಎದುರಿಸಿದ್ದಾರೆ ಎಂಬುದನ್ನು ಮೆಲುಕು ಹಾಕಿದ್ದಾರೆ. ರಾಜೀವ್ ಗಾಂಧಿಯವರ 82ನೇ ಜನ್ಮ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಇಂದು ರಾಹುಲ್ ಗಾಂಧಿ ಈ ಪೋಸ್ಟ್ ಮಾಡಿದ್ದಾರೆ. ನವೆಂಬರ್ 10ರಂದು ಬಿಡುಗಡೆಯಾಗಲಿರುವ ತಮ್ಮ ತಾಯಿಯ ಆತ್ಮಚರಿತ್ರೆ 'ಬಿಲಾಂಗಿಂಗ್: ಎ ಜರ್ನಿ ಆಫ್ ಲವ್' ಕುರಿತಾಗಿಯೂ ಅವರು ಪ್ರಸ್ತಾಪಿಸಿದ್ದಾರೆ.
- Sushma Chakre
- Updated on: Aug 20, 2026
- 4:38 pm
ಕೇಂದ್ರ ಸರ್ಕಾರದ ‘ವಂದೇ ಮಾತರಂ’ ನಿಯಮಾವಳಿಗೆ ಕಾಂಗ್ರೆಸ್ ಅಪಸ್ವರ; 2 ಚರಣ ಮಾತ್ರ ಹಾಡಲು ನಿರ್ಧಾರ
ರಾಷ್ಟ್ರೀಯ ಗೀತೆ 'ವಂದೇ ಮಾತರಂ' ಗಾಯನ ಮತ್ತು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ನಿಯಮಾವಳಿಗಳ ಸುತ್ತ ರಾಜಕೀಯ ಗದ್ದಲ ತೀವ್ರಗೊಂಡಿರುವ ನಡುವೆಯೇ, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು (CWC) 1937ರ ತನ್ನ ಹಳೆಯ ನಿಲುವನ್ನು ಪುನರುಚ್ಚರಿಸಿದೆ. ಕಾಂಗ್ರೆಸ್ ಪಕ್ಷದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಸಿಡಬ್ಲ್ಯೂಸಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು ನಡೆದ ಸಿಡಬ್ಲ್ಯೂಸಿ ಸಭೆಯಲ್ಲಿ ಈ ಕುರಿತು ವಿಸ್ತೃತವಾಗಿ ಚರ್ಚಿಸಲಾಗಿದ್ದು, 1937ರಲ್ಲಿ ಪಕ್ಷ ತಳೆದಿದ್ದ ನಿಲುವಿಗೆ ಬದ್ಧವಾಗಿರಲು ಹಲವು ನಾಯಕರು ಸಮ್ಮತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
- Sushma Chakre
- Updated on: Aug 19, 2026
- 10:01 pm
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್
ಉದ್ದೇಶಪೂರ್ವಕವಾಗಿ ಶಾಂತಿಭಂಗ ಮಾಡಿದ್ದಾರೆ ಎಂದು ಆರೋಪಿಸಿ ಮಂಗಳೂರು ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಎಂಬುವರು ಸೋನಿಯಾ ಗಾಂಧಿ ವಿರುದ್ಧ ಉರ್ವಾ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ವಿಕಾಸ್, 'ವಂದೇ ಮಾತರಂ' ನಮ್ಮ ರಾಷ್ಟ್ರಗೀತೆಯಾದ 'ಜನ ಗಣ ಮನ'ಕ್ಕೆ ಸಮಾನವಾಗಿದೆ. ಯಾರೇ ಆಗಲಿ ಅವರ ಹುದ್ದೆ ಅಥವಾ ಅಧಿಕಾರ ಏನೇ ಇರಲಿ ಇದನ್ನು ಅವಮಾನಿಸಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಆದ್ದರಿಂದ, ಸೋನಿಯಾ ಗಾಂಧಿ ವಿರುದ್ಧ ದಂಡನಾತ್ಮಕ ಕ್ರಮ ಕೈಗೊಳ್ಳುವಂತೆ ಮತ್ತು ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ನಾನು ಉರ್ವ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ನೀಡಿದ್ದೇನೆ' ಎಂದಿದ್ದಾರೆ.
- Pruthviraj
- Updated on: Aug 16, 2026
- 6:17 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ‘ವಂದೇ ಮಾತರಂ’ ಗೀತೆಗೆ ಅವಮಾನಿಸಿದರೇ ಸೋನಿಯಾ ಗಾಂಧಿ?
ಕಾಂಗ್ರೆಸ್ ನಾಯಕರಿಗೆ ರಾಷ್ಟ್ರೀಯ ಗೀತೆ ಎಂದರೆ ಅಸಹನೆ, ಇದು ವಂದೇ ಮಾತರಂ ಗೀತೆಗೆ ಮಾಡಿದ ಅವಮಾನ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಕಾಂಗ್ರೆಸ್ ಕಾರ್ಯಕ್ರಮದ ಈ ವಿಡಿಯೋದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಇತರ ನಾಯಕರು ಹಾಗೂ ಕಾರ್ಯಕರ್ತರೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಭಾಗವಹಿಸಿರುವುದನ್ನು ನೋಡಬಹುದು. ಆಗ ವಂದೇ ಮಾತರಂ ಗೀತೆಯ ಗಾಯನ ಶುರುವಾಗುತ್ತಿದ್ದಂತೆ, ಸೋನಿಯಾ ಗಾಂಧಿ ಮತ್ತು ಖರ್ಗೆ ಅವರು ತಮ್ಮ ಸುತ್ತಮುತ್ತಲಿದ್ದವರಿಗೆ ಕೈಸನ್ನೆ ಮಾಡುವ ಮೂಲಕ ಹಾಡುವುದನ್ನು ಅಥವಾ ಪ್ರಸಾರ ಮಾಡುವುದನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕಾಂಗ್ರೆಸ್ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.
- Sushma Chakre
- Updated on: Aug 15, 2026
- 3:58 pm
ಪೊಲೀಸ್ ಠಾಣೆಗೆ ಸೋನಿಯಾ ಗಾಂಧಿ ಭೇಟಿ; ಕೊನೆಗೂ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬಿಡುಗಡೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಲೋಕ್ ಕಲ್ಯಾಣ್ ಮಾರ್ಗದಲ್ಲಿರುವ ಅಧಿಕೃತ ನಿವಾಸದ ಹೊರಗೆ ಬೃಹತ್ ಪ್ರತಿಭಟನೆ ನಡೆಸಿ ದೆಹಲಿ ಪೊಲೀಸರಿಂದ ವಶಕ್ಕೆ ಪಡೆಯಲಾಗಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಸಮಾಜವಾದಿ ಪಾರ್ಟಿ ಅಧ್ಯಕ್ಷ ಅಖಿಲೇಶ್ ಯಾದವ್ ಸೇರಿದಂತೆ ಹಿರಿಯ ವಿಪಕ್ಷ ನಾಯಕರನ್ನು ಪೊಲೀಸರು ಕೆಲವೇ ಗಂಟೆಗಳ ಬಂಧನದ ನಂತರ ಬಿಡುಗಡೆ ಮಾಡಿದ್ದಾರೆ. ಪ್ರತಿಭಟನಾ ಸ್ಥಳದಿಂದ ವಶಕ್ಕೆ ಪಡೆಯಲಾಗಿದ್ದ ನಾಯಕರನ್ನು ಬೇರೆ ಬೇರೆ ಸ್ಥಳಗಳಲ್ಲಿ ಬಂಧನದಲ್ಲಿಡಲಾಗಿತ್ತು.
- Sushma Chakre
- Updated on: Jul 21, 2026
- 11:02 pm
ಕೇರಳ, ತಮಿಳುನಾಡು ಮಾದರಿ: ಡಿಕೆಶಿ ಸಂಪುಟದಲ್ಲಿ 3-4 ಯುವ ಮುಖಗಳಿಗೆ ಮಣೆ ಸಾಧ್ಯತೆ
ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಖಾತೆ ಬದಲಾವಣೆಯ ಕಸರತ್ತು ಜೋರಾಗಿದ್ದು, ಸಿಎಂ ಡಿಕೆ ಶಿವಕುಮಾರ್ ಹಾಗೂ ಡಿಸಿಎಂ ಡಾ. ಜಿ ಪರಮೇಶ್ವರ್ ದೆಹಲಿ ತಲುಪಿದ್ದಾರೆ. ಭರತ್ ರೆಡ್ಡಿ, ಪ್ರದೀಪ್ ಈಶ್ವರ್ ಸೇರಿದಂತೆ ಯುವ ಮುಖಗಳಿಗೆ ಮಣೆ ಹಾಕುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಕೇರಳ, ತಮಿಳುನಾಡು ರೀತಿ ಹೊಸ ಹಾಗೂ ಯುವ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ ದಟ್ಟವಾಗಿದೆ.
- Prasanna Gaonkar
- Updated on: Jun 11, 2026
- 7:12 am
ಕಾಂಗ್ರೆಸ್ ಜೊತೆ ವಿಲೀನವಾಗುತ್ತಾ ಟಿಎಂಸಿ? ಮಮತಾ ಬ್ಯಾನರ್ಜಿಗೆ ದೊಡ್ಡ ಹುದ್ದೆಯ ಆಫರ್
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷದಲ್ಲಿ ಭುಗಿಲೆದ್ದ ಭಿನ್ನಮತದ ಹಿನ್ನೆಲೆಯಲ್ಲಿ ಟಿಎಂಸಿ ಸಂಸದರು ಮತ್ತು ನಾಯಕರು ಸಾಲು ಸಾಲು ರಾಜೀನಾಮೆ ನೀಡುತ್ತಿದ್ದಾರೆ. ಇದರ ಬೆನ್ನಲ್ಲೇ ಟಿಎಂಸಿ ಕಾಂಗ್ರೆಸ್ ಜೊತೆ ವಿಲೀನವಾಗಲಿದೆ ಎಂಬ ಸುದ್ದಿಗಳೂ ಹರಿದಾಡುತ್ತಿವೆ. ಮಮತಾ ಬ್ಯಾನರ್ಜಿ 2 ದಿನಗಳಿಂದ ಕಾಂಗ್ರೆಸ್ ನಾಯಕರೊಂದಿಗೆ ಸಾಲು ಸಾಲು ಮಾತುಕತೆ ನಡೆಸುತ್ತಿರುವುದು ಈ ವದಂತಿಗೆ ಇನ್ನಷ್ಟು ಪುಷ್ಠಿ ನೀಡಿದೆ. ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಜೊತೆ ಟಿಎಂಸಿ ವಿಲೀನವಾಗುತ್ತಾ? ಎಂಬ ಕುತೂಹಲ ಮೂಡಿದೆ.
- Sushma Chakre
- Updated on: Jun 10, 2026
- 5:27 pm
ಟಿಎಂಸಿ ಬಿಕ್ಕಟ್ಟಿನ ನಡುವೆ ಸೋನಿಯಾ ಗಾಂಧಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ
ವಿರೋಧ ಪಕ್ಷಗಳ 'ಇಂಡಿಯ' ಒಕ್ಕೂಟದ ಸಭೆಯು ಮೈತ್ರಿಕೂಟದ ಪಾಲುದಾರರ ನಡುವೆ ಒಗ್ಗಟ್ಟು ಮತ್ತು ಉತ್ತಮ ಸಮನ್ವಯಕ್ಕೆ ಒತ್ತು ನೀಡಿದ ಒಂದು ದಿನದ ಬಳಿಕ ಇಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಇತ್ತೀಚಿನ ಬಂಗಾಳ ಚುನಾವಣೆಯಲ್ಲಿ ಬಿಜೆಪಿಗೆ ತೃಣಮೂಲ ಕಾಂಗ್ರೆಸ್ ಸೋತ ನಂತರ ಪಕ್ಷದಲ್ಲಿ ಉಂಟಾಗಿರುವ ಸದಸ್ಯರ ವಲಸೆ ಮತ್ತು ಒಕ್ಕೂಟದ ಸಭೆಯ ಮುಂದಿನ ಕಾರ್ಯತಂತ್ರಗಳ ಕುರಿತು ಉಭಯ ನಾಯಕಿಯರು ಚರ್ಚಿಸಿದ್ದಾರೆ ಎಂದು ಪಿಟಿಐ ಮೂಲಗಳು ತಿಳಿಸಿವೆ.
- Sushma Chakre
- Updated on: Jun 9, 2026
- 5:36 pm
ಕೇರಳ ಸಿಎಂ ಆಯ್ಕೆಯ ಕಗ್ಗಂಟು ಬಿಡಿಸಿದ ಸೋನಿಯಾ-ಆಂಟನಿ ‘ಮಾಸ್ಟರ್ ಪ್ಲಾನ್’! ರಟ್ಟಾಯ್ತು ವಿಡಿ ಸತೀಶನ್ ಆಯ್ಕೆ ಹಿಂದಿನ ಗುಟ್ಟು
ಕೇಂದ್ರ ಸಚಿವರಾಗಿ, ಮೂರು ಬಾರಿ ಕೇರಳದ ಮುಖ್ಯಮಂತ್ರಿಯಾಗಿ ಹಾಗೂ ಕಾಂಗ್ರೆಸ್ ಹೈಕಮಾಂಡ್ಗೆ, ಅದರಲ್ಲೂ ಗಾಂಧಿ ಕುಟುಂಬಕ್ಕೆ ನಿಷ್ಠರಾಗಿ ಇರುವವರು ಎಕೆ ಆಂಟನಿ. ಇದೀಗ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಮತ್ತೆ ಪಕ್ಷವನ್ನು ಬಚಾವ್ ಮಾಡಿದ್ದಾರೆ! ಕೇರಳ ಸಿಎಂ ಆಯ್ಕೆ ಕಗ್ಗಂಟು ಬಿಡಿಸಲು ಸೋನಿಯಾ ಗಾಂಧಿಗೆ ಅವರೇ ನೆರವಾಗಿದ್ದಾರೆ. ಆಂಟನಿ ನೀಡಿದ ಸಲಹೆಯೇ ಕೇರಳ ಸಿಎಂ ಆಯ್ಕೆ ಕಗ್ಗಂಟು ಬಗೆಹರಿಸಿತು ಎಂಬ ಅಚ್ಚರಿಯ ಮಾಹಿತಿ ಉನ್ನತ ಮೂಲಗಳಿಂದ ತಿಳಿದುಬಂದಿದೆ.
- Ganapathi Sharma
- Updated on: May 15, 2026
- 12:54 pm
Sonia Gandhi Hospitalised: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
Sonia Gandhi admitted to Hospital: ಕಾಂಗ್ರೆಸ್ ವರಿಷ್ಠೆ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ಗುರುಗಾಂವ್ನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿಯಮಿತ ತಪಾಸಣೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿರುವುದಾಗಿ ಮೂಲಗಳಿಂದ ಮಾಹಿತಿ ದೊರೆತಿದೆ. ಆದರೆ, ಆಸ್ಪತ್ರೆಯಿಂದ ಅಧಿಕೃತ ಪ್ರಕಟಣೆ ಇನ್ನಷ್ಟೇ ಪ್ರಕಟವಾಗಬೇಕಿದೆ.
- Ganapathi Sharma
- Updated on: May 13, 2026
- 12:49 pm
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ? ಬಿಗ್ ಅಪ್ಡೇಟ್ ಕೊಟ್ಟ ರಾಬರ್ಟ್ ವಾದ್ರಾ
ಬೆಂಗಳೂರಿಗೆ ಆಗ್ರಹಿಸಿರುವ ರಾಬರ್ಟ್ ವಾದ್ರಾ ಇಸ್ಕಾನ್ ದೇವಸ್ಥಾನ, ಮಸೀದಿ ಮತ್ತು ಮಿಷನರೀಸ್ ಆಫ್ ಚಾರಿಟಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿದ್ದಾರೆ. ಕರ್ನಾಟಕದ ಜನರು ಪ್ರೀತಿ ತೋರಿಸಿದ್ದು, ಬೆಂಗಳೂರು ಎರಡನೇ ಮನೆಯಂತಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಒಟ್ಟಾಗಿ ಜನರ ಪ್ರಗತಿಗೆ ಶ್ರಮಿಸುತ್ತಿದ್ದು, ನಾಯಕತ್ವ ಬದಲಾವಣೆಯ ಯಾವುದೇ ಸಾಧ್ಯತೆಯ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.
- Malatesh Jaggin
- Updated on: Feb 27, 2026
- 6:45 pm
ಇಡೀ ನೆಹರು-ಗಾಂಧಿ ಕುಟುಂಬವೇ ದೇಶದ ಹಿತಾಸಕ್ತಿಯೊಂದಿಗೆ ರಾಜಿ ಮಾಡಿಕೊಂಡಿದೆ; ಪಿಯೂಷ್ ಗೋಯಲ್ ಆರೋಪ
ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದ ನಂತರ "ಪ್ರಧಾನಿ ನರೇಂದ್ರ ಮೋದಿ ದೇಶದ ಹಿತಾಸಕ್ತಿಯೊಂದಿಗೆ ರಾಜಿ ಮಾಡಿಕೊಂಡಿದ್ದಾರೆ" ಎಂದು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಪದೇಪದೆ ಆರೋಪ ಮಾಡುತ್ತಲೇ ಇದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದರು. ಇದೀಗ ಕೇಂದ್ರ ಸಚಿವ ಪಿಯೂಷ್ ಗೋಯಲ್ ಸುದ್ದಿಗೋಷ್ಠಿ ಮಾಡುವ ಮೂಲಕ ಕಾಂಗ್ರೆಸ್ ನಾಯಕರ ಹಾಗೂ ಯುಪಿಎ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
- Sushma Chakre
- Updated on: Feb 25, 2026
- 5:03 pm