Sonia Gandhi
ರಾಜಕಾರಣಿ ಮತ್ತು ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ. ಡಿಸೆಂಬರ್ 9, 1946 ರಂದು ಜನನ. ಇಟಲಿಯಲ್ಲಿ ಜನಿಸಿದ ಅವರು ಪ್ರಧಾನಿ ಇಂದಿರಾ ಗಾಂಧಿಯವರ ಮಗ ರಾಜೀವ್ ಗಾಂಧಿ ಅವರನ್ನು ವಿವಾಹವಾದರು ಮತ್ತು ಭಾರತದ ರಾಜಕೀಯದ ಅವಿಭಾಜ್ಯ ಅಂಗವಾದರು. ಪತಿಯ ದುರಂತ ಹತ್ಯೆಯ ನಂತರ ಸೋನಿಯಾ ಗಾಂಧಿ ಆರಂಭದಲ್ಲಿ ರಾಜಕೀಯದಿಂದ ದೂರವೇ ಉಳಿದಿದ್ದರು. ಆದಾಗ್ಯೂ, ಅವರು 1997 ರಲ್ಲಿ ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿದರು ಮತ್ತು 1998 ರಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತವನ್ನು ವಹಿಸಿಕೊಂಡರು. ಅವರ ವಿದೇಶಿ ಮೂಲದ ಕಾರಣದಿಂದಾಗಿ ಆರಂಭಿಕ ಟೀಕೆಗಳ ಹೊರತಾಗಿಯೂ, 2004 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಗೆಲುವಿನತ್ತ ಮುನ್ನಡೆಸುವಲ್ಲಿ ಸೋನಿಯಾ ಗಾಂಧಿ ಪ್ರಮುಖ ಪಾತ್ರ ವಹಿಸಿದರು.ಪ್ರಧಾನಿ ಸ್ಥಾನವನ್ನು ನಿರಾಕರಿಸಿದ ಅವರು ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ಸೋನಿಯಾ ಗಾಂಧಿ ಅವರು ಭಾರತದ ರಾಜಕೀಯದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದಾರೆ. ಕಾಂಗ್ರೆಸ್ನ ರಾಜಕೀಯ ಕಾರ್ಯತಂತ್ರಕ್ಕೆ ಕೊಡುಗೆ ನೀಡಿರುವ ಸೋನಿಯಾ ವಿವಿಧ ರಾಷ್ಟ್ರೀಯ ವಿಷಯಗಳ ಬಗ್ಗೆ ಪಕ್ಷದ ನಿಲುವನ್ನು ರೂಪಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ? ಬಿಗ್ ಅಪ್ಡೇಟ್ ಕೊಟ್ಟ ರಾಬರ್ಟ್ ವಾದ್ರಾ
ಬೆಂಗಳೂರಿಗೆ ಆಗ್ರಹಿಸಿರುವ ರಾಬರ್ಟ್ ವಾದ್ರಾ ಇಸ್ಕಾನ್ ದೇವಸ್ಥಾನ, ಮಸೀದಿ ಮತ್ತು ಮಿಷನರೀಸ್ ಆಫ್ ಚಾರಿಟಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿದ್ದಾರೆ. ಕರ್ನಾಟಕದ ಜನರು ಪ್ರೀತಿ ತೋರಿಸಿದ್ದು, ಬೆಂಗಳೂರು ಎರಡನೇ ಮನೆಯಂತಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಒಟ್ಟಾಗಿ ಜನರ ಪ್ರಗತಿಗೆ ಶ್ರಮಿಸುತ್ತಿದ್ದು, ನಾಯಕತ್ವ ಬದಲಾವಣೆಯ ಯಾವುದೇ ಸಾಧ್ಯತೆಯ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.
- Malatesh Jaggin
- Updated on: Feb 27, 2026
- 6:45 pm
ಇಡೀ ನೆಹರು-ಗಾಂಧಿ ಕುಟುಂಬವೇ ದೇಶದ ಹಿತಾಸಕ್ತಿಯೊಂದಿಗೆ ರಾಜಿ ಮಾಡಿಕೊಂಡಿದೆ; ಪಿಯೂಷ್ ಗೋಯಲ್ ಆರೋಪ
ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದ ನಂತರ "ಪ್ರಧಾನಿ ನರೇಂದ್ರ ಮೋದಿ ದೇಶದ ಹಿತಾಸಕ್ತಿಯೊಂದಿಗೆ ರಾಜಿ ಮಾಡಿಕೊಂಡಿದ್ದಾರೆ" ಎಂದು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಪದೇಪದೆ ಆರೋಪ ಮಾಡುತ್ತಲೇ ಇದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದರು. ಇದೀಗ ಕೇಂದ್ರ ಸಚಿವ ಪಿಯೂಷ್ ಗೋಯಲ್ ಸುದ್ದಿಗೋಷ್ಠಿ ಮಾಡುವ ಮೂಲಕ ಕಾಂಗ್ರೆಸ್ ನಾಯಕರ ಹಾಗೂ ಯುಪಿಎ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
- Sushma Chakre
- Updated on: Feb 25, 2026
- 5:03 pm
ಬುಲ್ಡೋಜರ್ ಮೂಲಕ ನರೇಗಾ ನೆಲಸಮ; ಬಿಜೆಪಿ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ
ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಮಂಡಿಸಿದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಿಗೆ ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ ಗ್ರಾಮೀಣ (VB-G RAM G) ಮಸೂದೆಯನ್ನು ಸಂಸತ್ತು ಅಂಗೀಕರಿಸಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೋದಿ ಸರ್ಕಾರವು ನರೇಗಾ ಮೇಲೆ ಬುಲ್ಡೋಜರ್ ನಡೆಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
- Sushma Chakre
- Updated on: Dec 20, 2025
- 7:52 pm
ಬಹಿರಂಗವಾಗಿ ಕ್ಷಮೆ ಕೇಳಿ; ರ್ಯಾಲಿಯಲ್ಲಿ ‘ಮೋದಿ ಸಮಾಧಿ’ ಘೋಷಣೆ ಕೂಗಿದ ಕಾಂಗ್ರೆಸ್ ವಿರುದ್ಧ ಕಿರಣ್ ರಿಜಿಜು ಆಕ್ರೋಶ
ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಕಾಂಗ್ರೆಸ್ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಿವಾದಾತ್ಮಕ ಘೋಷಣೆಗಳನ್ನು ಕೂಗಲಾಗಿತ್ತು. ಮೋದಿ ಸಮಾಧಿ ಅಗೆಯಬೇಕು ಎಂಬೆಲ್ಲ ಘೋಷಣೆಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಕೂಗಿದ್ದರು. ಹೀಗಾಗಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಕ್ಷಮೆ ಯಾಚಿಸಬೇಕೆಂದು ಬಿಜೆಪಿ ಆಗ್ರಹಿಸಿದೆ.
- Sushma Chakre
- Updated on: Dec 15, 2025
- 4:45 pm
ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿಯಿಂದಲೂ ಮತಗಳ್ಳತನ; ಅಮಿತ್ ಶಾ ವಾಗ್ದಾಳಿ
ಲೋಕಸಭಾ ಅಧಿವೇಶನದಲ್ಲಿ ಮತ್ತೊಮ್ಮೆ ಎಸ್ಐಆರ್ ಕುರಿತು ಚರ್ಚೆ ಭುಗಿಲೆದ್ದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಗೃಹ ಸಚಿವ ಅಮಿತ್ ಶಾ ನಡುವೆ ಈ ಚರ್ಚೆ ಕಾವೇರಿದ್ದು, ಈ ವೇಳೆ ಅಮಿತ್ ಶಾ ಕಾಂಗ್ರೆಸ್ ನಾಯಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿಗೂ ಮತಗಳ್ಳತನಕ್ಕೂ ನಂಟಿದೆ ಎಂದು ಅವರು ಹೇಳಿದ್ದಾರೆ. ಇದರಿಂದ ಇಬ್ಬರೂ ನಾಯಕರ ನಡುವೆ ತೀವ್ರ ಚರ್ಚೆ ಏರ್ಪಟ್ಟಿತು.
- Sushma Chakre
- Updated on: Dec 10, 2025
- 7:16 pm
ಡಿಕೆಶಿ ಬುಡಕ್ಕೆ ಮತ್ತೆ ನ್ಯಾಷನಲ್ ಹೆರಾಲ್ಡ್ ಕೇಸ್: ದೆಹಲಿಯಿಂದ ಬಂತು ನೋಟಿಸ್
ನ್ಯಾಷನಲ್ ಹೆರಾಲ್ಡ್ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು, ಈಗಾಗಲೇ ಈ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಹಿರಿಯ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹಾಗೂ ಇತರ ಹಲವಾರು ಪ್ರಮುಖ ವ್ಯಕ್ತಿಗಳ ವಿರುದ್ಧ ಹೊಸ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತೆ ಕೆಪಿಸಿಸಿ ಅಧ್ಯಕ್ಷ, ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಡಕ್ಕೂ ಬಂದಿದೆ.
- Harish GR
- Updated on: Dec 5, 2025
- 9:38 pm
ಗುಂಪುಗಾರಿಕೆ ಇಲ್ಲ ಎನ್ನುತ್ತಲೇ ಗೇಮ್ ಪ್ಲ್ಯಾನ್: ಕರ್ನಾಟಕ ಕಾಂಗ್ರೆಸ್ ಬಗ್ಗೆ ದೆಹಲೀಲಿ ಸೋನಿಯಾ, ರಾಹುಲ್ ಚರ್ಚೆ?
ಕರ್ನಾಟಕ ಕಾಂಗ್ರೆಸ್ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ‘ಕೊಟ್ಟ ಮಾತು’ ಕುರಿತ ವಿವಾದ ತೀವ್ರಗೊಂಡಿದೆ. ಹೈಕಮಾಂಡ್ಗೆ ಬಿಸಿತುಪ್ಪವಾಗಿರುವ ಈ ಚರ್ಚೆ, 2023ರ ಸಿಎಂ ಆಯ್ಕೆ ವೇಳೆ ನಡೆದ ಒಪ್ಪಂದದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಬಗ್ಗೆ ದೆಹಲಿಯಲ್ಲಿ ಸೋನಿಯಾ, ರಾಹುಲ್ ಗಾಂಧಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
- Prasanna Gaonkar
- Updated on: Dec 2, 2025
- 11:12 am
ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಗೊಂದಲ: ಸೋನಿಯಾ ಗಾಂಧಿ ನಿವಾಸದಲ್ಲಿ ಹೈವೋಲ್ಟೇಜ್ ಮೀಟಿಂಗ್, ಚರ್ಚೆ ಆಗಿದ್ದೇನು?
ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ತಾತ್ಕಾಲಿಕ ವಿರಾಮ ಬಿದ್ದಿದೆ. ಆದಾಗ್ಯೂ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿ ಚರ್ಚಿಸುವ ಸಾಧ್ಯತೆಯಿದೆ. ರಾಜ್ಯ ರಾಜಕೀಯ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ಸೋನಿಯಾ ಗಾಂಧಿ ಜೊತೆ ಚರ್ಚಿಸಿದ್ದು, ಗೊಂದಲಕ್ಕೆ ತೆರೆ ಎಳೆಯಲು ಮನವಿ ಮಾಡಿದ್ದಾರೆ.
- Mahesha E
- Updated on: Dec 1, 2025
- 7:40 am
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಹೊಸ ಎಫ್ಐಆರ್
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಹಿರಿಯ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹಾಗೂ ಇತರ ಹಲವಾರು ಪ್ರಮುಖ ವ್ಯಕ್ತಿಗಳ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಿದ್ದಾರೆ. ಎಫ್ಐಆರ್ನಲ್ಲಿ ಪ್ರಮುಖ ಹೆಸರುಗಳು ಮತ್ತು ಆರೋಪಗಳು ಅಧಿಕೃತ ಮೂಲಗಳ ಪ್ರಕಾರ, ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು ಅಕ್ಟೋಬರ್ 3 ರಂದು ಗಾಂಧಿ ಕುಟುಂಬ ಮತ್ತು ಇತರ ಏಳು ಜನರ ವಿರುದ್ಧ ದೂರು ದಾಖಲಿಸಿದೆ.
- Nayana Rajeev
- Updated on: Nov 30, 2025
- 12:44 pm
ಕ್ಲೈಮ್ಯಾಕ್ಸ್ ಹಂತ ತಲುಪಿದ ಸಿಎಂ ಕುರ್ಚಿ ಕದನ: ಪದತ್ಯಾಗನಾ? ಪಟ್ಟಾಭಿಷೇಕನಾ?
ಕರ್ನಾಟಕ ಕಾಂಗ್ರೆಸ್ನಲ್ಲಿ ಕುರ್ಚಿ ಗುದ್ದಾಟ ದಿನಕ್ಕೊಂದು ತಿರುವು, ಕ್ಷಣಕ್ಕೊಂದು ದಿಕ್ಕು ಬದಲಿಸ್ತಿದೆ. ಕುರ್ಚಿ ಗುದ್ದಾಟ ತಾರಕಕ್ಕೇರ್ತಿದ್ದು, ಸಿಎಂ ಮತ್ತು ಡಿಸಿಎಂ ಬಣಗಳ ತಂತ್ರ ಪ್ರತಿತಂತ್ರ ಜೋರಾಗಿದೆ. ಹೀಗಾಗಿ ಕೈ ಪಾಳೆಯದಲ್ಲಿ ಉಂಟಾಗಿರುವ ನಾಯಕತ್ವ ಬದಲಾವಣೆ ಗುದ್ದಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ತಿಂಗಳಾಂತ್ಯಕ್ಕೆ ಅಥವಾ ಡಿಸಿಎಂಬರ್ ಮೊದಲ ವಾರದೊಳಗೆ ಹೈಕಮಾಂಡ್ ಈ ಬಿಕ್ಕಟ್ಟಿಗೆ ಪರಿಹಾರ ಸೂತ್ರ ರೂಪಿಸುವ ಸಾಧ್ಯತೆಗಳಿವೆ.
- Ramesh B Jawalagera
- Updated on: Nov 28, 2025
- 4:26 pm
ಬೇಡ್ತಿ ಮತ್ತು ಬೆಂಗಳೂರಿನ ಟನೆಲ್ ರಸ್ತೆ ವಿವಾದ: ಸೋನಿಯಾ ಗಾಂಧಿ ಮತ್ತು ಜೈರಾಮ್ ರಮೇಶ್ ಪರಿಸರ ಪ್ರೇಮ ತೋರಿಸಲಿ
ಕಾಂಗ್ರೆಸ್ ಪಕ್ಷಕ್ಕೆ ಒಂದು ಇತಿಹಾಸವಿದೆ. ಕೇರಳದ ಸೈಲೆಂಟ್ ವ್ಯಾಲಿ ಹೋರಾಟ ನಡೆದಾಗ, ಹೋರಾಟಗಾರರ ಮಾತಿಗೆ ಒಪ್ಪಿ ಆ ಯೋಜನೆಯನ್ನು ಕೈ ಬಿಟ್ಟಿದ್ದು ಅಂದಿನ ಇಂದಿರಾಗಾಂಧಿ ಸರಕಾರ. ಈಗ ಮತ್ತೆ ಪರಿಸರ ವಿರೋಧಿ ಯೋಜನೆಗೆ ರಾಜ್ಯ ಸರಕಾರ ಕೈ ಹಾಕಿರುವಾಗ ಕೇಂದ್ರದ ಕಾಂಗ್ರೆಸ್ ನಾಯಕರು ಮಧ್ಯಪ್ರವೇಶಿಸಿಸುವುದು ಅತೀ ಅವಶ್ಯ.
- bhaskar hegde
- Updated on: Nov 8, 2025
- 4:40 pm
ಇಟಲಿ ಮಹಿಳೆ ಕೂಡ ಭಾರತದಲ್ಲಿ ಮತ ಚಲಾಯಿಸಿದ್ದರು, ನಿಮಗೆ ನೆನಪಿಲ್ಲವೇ?; ರಾಹುಲ್ ಗಾಂಧಿ ಆರೋಪಕ್ಕೆ ಬಿಜೆಪಿ ಲೇವಡಿ
ಹರಿಯಾಣದಲ್ಲಿ 'ಮತ ಚೋರಿ' ನಡೆದಿದೆ ಎಂಬ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯ ಆರೋಪಕ್ಕೆ ಇದೀಗ ಬಿಜೆಪಿ ತಿರುಗೇಟು ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಕಿರಣ್ ರಿಜಿಜು ರಾಹುಲ್ ಗಾಂಧಿಯನ್ನು ತೀವ್ರವಾಗಿ ಟೀಕಿಸಿದ್ದಾರೆ. ಈ ರೀತಿ ಪದೇಪದೆ ಸುದ್ದಿಗೋಷ್ಠಿ ನಡೆಸಿ ಸುಳ್ಳು ಆರೋಪ ಮಾಡುವುದು ರಾಜಕೀಯ ನಾಟಕ ಎಂದು ಹೇಳಿದ ಕಿರಣ್ ರಿಜಿಜು, ಬಿಹಾರ ಚುನಾವಣೆಗೂ ಮುನ್ನ ರಾಹುಲ್ ಗಾಂಧಿ ಜನರ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
- Sushma Chakre
- Updated on: Nov 5, 2025
- 5:26 pm