SIR - ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ
Special Intensive Revision – ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ – ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಖಚಿತಪಡಿಸಿಕೊಳ್ಳಲು ಹಾಗೂ ಅರ್ಹ ಮತದಾರರನ್ನು ಗುರುತಿಸಿ ದೋಷಮುಕ್ತ ಮತದಾರರ ಪಟ್ಟಿಯನ್ನು ತಯಾರಿಸುವ ಉದ್ದೇಶದಿಂದ ಭಾರತೀಯ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ನಡೆಸುತ್ತಿದೆ. ಮತದಾರರ ಪಟ್ಟಿಯಲ್ಲಿರುವ ಮೃತಪಟ್ಟವರು, ಬೇರೆಡೆ ಸ್ಥಳಾಂತರಗೊಂಡವರು ಹಾಗೂ ನಕಲಿ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕುವುದು ಮತ್ತು ಅರ್ಹ ಹೊಸ ಮತದಾರರನ್ನು ಸೇರಿಸುವ ಪ್ರಕ್ರಿಯೆಗಳನ್ನು ಇದು ಒಳಗೊಂಡಿದೆ. ಯಾರಾದರೂ ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಎಂದು ತಪ್ಪಾಗಿ ನಮೂದಾಗಿದ್ದರೆ ಅಥವಾ ನಿಮ್ಮ ವಿವರಗಳನ್ನು ತಿದ್ದುಪಡಿ ಮಾಡಲು ಬಯಸಿದರೆ ಸಂಬಂಧಪಟ್ಟ ಅರ್ಜಿಗಳನ್ನು ಸಲ್ಲಿಸಿ ಸರಿಮಾಡಿಕೊಳ್ಳಬಹುದಾಗಿದೆ.
ಇನ್ನೂ ಹೆಚ್ಚು ಓದಿಹಿರಿಯ ನಾಗರಿಕರು, ಅಸ್ವಸ್ಥರಿಗೆ ಚುನಾವಣಾ ಆಯೋಗದಿಂದ ಬಿಗ್ ರಿಲೀಫ್: ಮನೆ ಬಾಗಿಲಲ್ಲೇ ವಿಚಾರಣೆಗೆ ಅವಕಾಶ!
ಮತದಾರರ ಪಟ್ಟಿಯ ಪರಿಶೀಲನೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ಬಿಗ್ ರಿಲೀಫ್ ನೀಡಿದೆ. ಹಿರಿಯ ನಾಗರಿಕರು, ವಿಕಲಚೇತನರು ಹಾಗೂ ಅಸ್ವಸ್ಥರ ಪರವಾಗಿ ಅವರ ಕುಟುಂಬಸ್ಥರು ಇಆರ್ಒ ಕಚೇರಿಗೆ ದಾಖಲೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ತೀವ್ರ ಅಸ್ವಸ್ಥರ ಮನೆ ಬಾಗಿಲಲ್ಲೇ ಪರಿಶೀಲನೆ ನಡೆಯಲಿದೆ.
- Bhavana Hegde
- Updated on: Sep 16, 2026
- 12:02 pm
ಸಮಂತಾ, ವಿಜಯ್ ದೇವರಕೊಂಡ ಸೇರಿ ತೆಲುಗಿನ ಹಲವರಿಗೆ ಚುನಾವಣಾ ಆಯೋಗದಿಂದ ನೋಟಿಸ್
ನೋಟಿಸ್ ನೀಡಿದ ತಕ್ಷಣವೇ ಯಾರದ್ದೇ ಮತದಾನದ ಹಕ್ಕನ್ನು ರದ್ದುಗೊಳಿಸಿಲ್ಲ ಅಥವಾ ಅನರ್ಹಗೊಳಿಸಿಲ್ಲ ಎಂದು ಚುನಾವಣಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಸಂಬಂಧಪಟ್ಟ ವ್ಯಕ್ತಿಗಳು ಅಥವಾ ಅವರ ಪರವಾಗಿ ಅಧಿಕೃತ ಪ್ರತಿನಿಧಿಗಳು ಅಗತ್ಯ ದಾಖಲೆಗಳನ್ನು ಹಿಡಿದು ವಿಚಾರಣೆಗೆ ಹಾಜರಾಗಿ ದೋಷಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..
- Madan Kumar
- Updated on: Sep 11, 2026
- 6:25 pm
ಸಿಎಂ ತಾಯಿಗೆ ನೋಟಿಸ್ ಕೊಟ್ಟಿಲ್ಲ: ಚುನಾವಣಾ ಆಯೋಗ ಸ್ಪಷ್ಟನೆ, ಎಸ್ಐಆರ್ ಪರಿಶೀಲನೆ ಹೇಗಿರಲಿದೆ ಎಂಬ ವಿವರ ಇಲ್ಲಿದೆ
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ತಾಯಿ ಗೌರಮ್ಮ ಅವರಿಗೆ ಎಸ್ಐಆರ್ ನೋಟಿಸ್ ನೀಡಲಾಗಿದೆ ಎಂಬ ವರದಿಗೆ ಕರ್ನಾಟಕ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. ಕನಕಪುರ ಕ್ಷೇತ್ರದಲ್ಲಿ ಗೌರಮ್ಮ ಹೆಸರಿನ ಮೂವರು ಮತದಾರರಿದ್ದು, ಇಬ್ಬರಿಗೆ ಮಾತ್ರ ನೋಟಿಸ್ ನೀಡಲಾಗಿದೆ. ಹೆಸರು ಒಂದೇ ಇರುವುದರಿಂದ ಈ ಗೊಂದಲ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಎಸ್ಐಆರ್ ನೋಟಿಸ್ ಬಂದವರ ಒಟ್ಟಾರೆ ಪರಿಶೀಲನೆ ಪ್ರಕ್ರಿಯೆ ಹೇಗಿರಲಿದೆ ಎಂಬ ವಿವರವಾದ ಮಾಹಿತಿ ನೀಡಿದ್ದಾರೆ. ಆ ವಿವರಗಳು ಇಲ್ಲಿವೆ.
- Ganapathi Sharma
- Updated on: Sep 11, 2026
- 9:45 am
ಸಾರ್ವಜನಿಕರಿಗೊಂದು ಅವಕಾಶ: ಆನ್ಲೈನ್ ವೆಬಿನಾರ್ ಮೂಲಕ SIR ಗೊಂದಲಗಳಿಗೆ ಪರಿಹಾರ ಕಂಡುಕೊಳ್ಳಿ
ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಬಗ್ಗೆ ಜನರಿಗಿರುವ ಗೊಂದಲ ನಿವಾರಿಸಲು ಬೆಂಗಳೂರು ಅಪಾರ್ಟ್ಮೆಂಟ್ಸ್ ಫೆಡರೇಶನ್ ವತಿಯಿಂದ ಸೆಪ್ಟೆಂಬರ್ 12ರಂದು ಆನ್ಲೈನ್ ವೆಬಿನಾರ್ ಆಯೋಜಿಸಲಾಗಿದೆ. ಕರಡು ಪಟ್ಟಿ, ಅಗತ್ಯ ದಾಖಲೆಗಳು, ಮುಂದಿನ ಹಂತಗಳ ಕುರಿತು ತಜ್ಞರು ಮಾಹಿತಿ ನೀಡಲಿದ್ದಾರೆ. ಮುಖ್ಯವಾಗಿ ಜನಸಾಮಾನ್ಯರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.
- Gangadhar Saboji
- Updated on: Sep 9, 2026
- 7:23 pm
ಪ್ರೊ. ಸಿಎನ್ಆರ್ ರಾವ್ಗೆ ಯಾವುದೇ ನೋಟಿಸ್ ಜಾರಿ ಮಾಡಿಲ್ಲ: ಚುನಾವಣಾಧಿಕಾರಿ ಸ್ಪಷ್ಟನೆ
ಭಾರತ ರತ್ನ ಪ್ರೊ. ಸಿಎನ್ಆರ್ ರಾವ್ ಅವರಿಗೆ ಮತದಾರರ ಪಟ್ಟಿ ನೋಟಿಸ್ ಜಾರಿ ಮಾಡಿಲ್ಲ ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ನೋಟಿಸ್ ನೀಡಲಾಗಿದೆ ಎಂಬ ಸುದ್ದಿ ಸಂಪೂರ್ಣ ಸತ್ಯಕ್ಕೆ ದೂರವಾದದ್ದು ಎಂದು ಚುನಾವಣಾ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
- Arun Kumar R
- Updated on: Sep 9, 2026
- 3:43 pm
ವಿದೇಶದಲ್ಲಿರುವ ಮತದಾರರಿಗೆ ಎಸ್ಐಆರ್ ಸಂಕಷ್ಟ: ಖುದ್ದು ವಿಚಾರಣೆಗೆ ಹಾಜರಾಗದಿದ್ದರೆ ಬೇರೇನು ಆಯ್ಕೆಗಳಿವೆ? ಇಲ್ಲಿದೆ ವಿವರ
ಕರ್ನಾಟಕದ ಎಸ್ಐಆರ್ ಪ್ರಕ್ರಿಯೆಯಲ್ಲಿ ವಿದೇಶದಲ್ಲಿರುವ ಮತದಾರರಿಗೆ ಹೊಸ ಸಂಕಷ್ಟ ಎದುರಾಗಿದೆ. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದವರಿಗೆ ನೋ ಮ್ಯಾಪಿಂಗ್ ಅಥವಾ ಮಾಹಿತಿ ವ್ಯತ್ಯಾಸದ ನೋಟಿಸ್ ಬಂದಿದ್ದು, ವಿಚಾರಣೆಗೆ ಭಾರತಕ್ಕೆ ಖುದ್ದಾಗಿ ಹಾಜರಾಗುವಂತೆ ಸೂಚಿಸಲಾಗಿದೆ. ಹಾಗಾದರೆ ಈ ಸಮಸ್ಯೆ ಎದುರಿಸುತ್ತಿರುವವರು ಈಗ ಏನು ಮಾಡಬಹುದು? ಅವರ ಮುಂದಿರುವ ಆಯ್ಕೆಗಳೇನು? ಇಲ್ಲಿದೆ ವಿವರ.
- Ganapathi Sharma
- Updated on: Sep 9, 2026
- 1:58 pm
ಪದ್ಮಶ್ರೀ ಹರೇಕಳ ಹಾಜಬ್ಬರಿಗೂ ಎಸ್ಐಆರ್ ನೋಟಿಸ್! ನಾಲ್ಕೇ ಗಂಟೆಯಲ್ಲಿ ವಾಪಸ್ ಪಡೆದ ಅಧಿಕಾರಿಗಳು
ಎಸ್ಐಆರ್ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯ ಹೆಸರು ವ್ಯತ್ಯಾಸ ಹಿನ್ನೆಲೆಯಲ್ಲಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ದಾಖಲೆ ಹಾಜರುಪಡಿಸುವಂತೆ ನೋಟಿಸ್ ನೀಡಲಾಗಿತ್ತು. ಆದರೆ, ಅದಾದ ನಂತರದ ನಾಲ್ಕೇ ಗಂಟೆಗಳಲ್ಲಿ ಅಧಿಕಾರಿಗಳು ನೋಟಿಸ್ ವಾಪಸ್ ಪಡೆದು ಹೆಸರು ಸರಿಪಡಿಸುವ ಭರವಸೆ ನೀಡಿದ್ದಾರೆ. ಕಿತ್ತಲೆ ಮಾರಿ ಶಾಲೆ ಕಟ್ಟಿದ ಹಾಜಬ್ಬರಿಗೆ ನೋಟಿಸ್ ಕೊಟ್ಟಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಚ್ಚರಿಗೆ ಕಾರಣವಾಗಿತ್ತು.
- Pruthviraj
- Updated on: Sep 8, 2026
- 9:49 am
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಮತದಾರರ ಕರಡು ಪಟ್ಟಿಯಲ್ಲಿ ಹೆಸರಿದ್ರೂ ಬರಲಿದೆ ನೋಟಿಸ್!
ಕರ್ನಾಟಕ ಮತದಾರರ ಕರಡು ಪಟ್ಟಿಯಲ್ಲಿ ಹೆಸರಿದ್ದರೂ ಸಹ ಇಆರ್ಒಗಳಿಂದ ನೋಟಿಸ್ ಬರುವ ಸಾಧ್ಯತೆಯಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ದತ್ತಾಂಶ ಮ್ಯಾಪಿಂಗ್ ಕೊರತೆ ಹಾಗೂ ತಾಂತ್ರಿಕ ವ್ಯತ್ಯಾಸಗಳಿಂದಾಗಿ ಸುಮಾರು 43 ಲಕ್ಷ ಮತದಾರರಿಗೆ ನೋಟಿಸ್ ನೀಡಲಾಗುತ್ತಿದ್ದು, ಸೆಪ್ಟೆಂಬರ್ 23 ರೊಳಗೆ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಿ ಹೆಸರು ಕಾಯ್ದುಕೊಳ್ಳಲು ಸೂಚಿಸಲಾಗಿದೆ.
- Bhavana Hegde
- Updated on: Sep 6, 2026
- 8:36 am
ಮಂಗಳೂರು: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ, SIR ಪ್ರಕ್ರಿಯೆಯಲ್ಲಿ ಗಂಭೀರ ಲೋಪ ಬೆಳಕಿಗೆ
ಮಂಗಳೂರಿನ 61 ವರ್ಷದ ಡೊನಾಲ್ಡ್ ಜೋಸೆಫ್ ರೇಗೋ ಅವರನ್ನು ಚುನಾವಣಾ ಆಯೋಗದ ಕರಡು ಮತದಾರರ ಪಟ್ಟಿಯಲ್ಲಿ ಮೃತ ಎಂದು ತಪ್ಪಾಗಿ ನಮೂದಿಸಲಾಗಿದೆ. ಜೀವಂತವಿದ್ದರೂ ತನ್ನ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಿದ್ದಕ್ಕೆ ರೇಗೋ ಆಘಾತ ವ್ಯಕ್ತಪಡಿಸಿದ್ದಾರೆ. ಈ ಲೋಪವನ್ನು ಸರಿಪಡಿಸಲು ಅವರು ಚುನಾವಣಾ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ.
- Pruthviraj
- Updated on: Sep 2, 2026
- 2:02 pm
SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಮುಖ್ಯ ಚುನಾವಣಾ ಆಯುಕ್ತರಿಗೆ ಸಿಎಂ ಡಿಕೆಶಿ ಪತ್ರ
ಮತದಾರರ ಪಟ್ಟಿ ಪರಿಷ್ಕರಣೆ (SIR) ವೇಳೆ ಕರ್ನಾಟಕದಲ್ಲಿ 1.08 ಕೋಟಿಗೂ ಅಧಿಕ ಮತದಾರರು ಎಎಸ್ಡಿಡಿಒ ಪಟ್ಟಿಗೆ ಸೇರಿದ ಹಿನ್ನೆಲೆ, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ವಿಸ್ತರಣೆ ಸೇರಿ ಹಲವು ಪ್ರಮುಖ ಅಂಶಗಳನ್ನು ಉಲ್ಲೇಖಿಸಿ ಸಿಎಂ ಡಿ.ಕೆ. ಶಿವಕುಮಾರ್ ಅವರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಇದಕ್ಕೆ ಅಗತ್ಯ ಸಹಕಾರ ನೀಡಲು ರಾಜ್ಯ ಸರ್ಕಾರ ಸಿದ್ಧವಾಗಿರೋದಾಗಿ ತಿಳಿಸಿದ್ದಾರೆ.
- Prasanna Hegde
- Updated on: Aug 25, 2026
- 6:47 pm
SIR: ಬೆಂಗಳೂರಿನ ಅರ್ಧದಷ್ಟು ಮತದಾರರು ASDDO ಪಟ್ಟಿಗೆ; 24 ಲಕ್ಷದಷ್ಟು ಮತದಾರರಿಗೆ ನೋಟಿಸ್
Bengaluru voter list: ಬೆಂಗಳೂರಿನ ಮತದಾರರ ಪಟ್ಟಿಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಿಂದ ಭಾರೀ ಬದಲಾವಣೆಗಳಾಗಿವೆ. 48% ಮತದಾರರು ASDDO ಪಟ್ಟಿಗೆ ಸೇರಿದ್ದು, 24 ಲಕ್ಷಕ್ಕೂ ಹೆಚ್ಚು ಮತದಾರರಿಗೆ ನೋಟಿಸ್ ನೀಡಲಾಗುತ್ತಿದೆ. ಬೊಮ್ಮನಹಳ್ಳಿ ಸೇರಿ ಐದು ಕ್ಷೇತ್ರಗಳಲ್ಲಿ ಶೇ. 50ಕ್ಕೂ ಹೆಚ್ಚು ಮತದಾರರು ಡೇಂಜರ್ ಝೋನ್ನಲ್ಲಿದ್ದಾರೆ.
- Lakshmi Narasimha Swamy L
- Updated on: Aug 24, 2026
- 8:29 pm
SIR ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್; ಸೆ.23ರವರೆಗೆ ಆಕ್ಷೇಪಣೆಗೆ ಅವಕಾಶ
SIR process Election Commission: ರಾಜ್ಯದಲ್ಲಿ ಜೂನ್ 30ರಿಂದ ಆಗಸ್ಟ್ 17ರವರೆಗೆ ನಡೆದ ಎಸ್ಐಆರ್ ಪ್ರಕ್ರಿಯೆ ಇದೀಗ ಪೂರ್ಣಗೊಂಡಿದ್ದು, ಮೊದಲ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. ಒಟ್ಟು 4.46 ಕೋಟಿ ಮತದಾರರ ವಿವರ ಲಭ್ಯವಾಗಿದೆ. ಸೆಪ್ಟೆಂಬರ್ 23ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಅಕ್ಟೋಬರ್ 27ರಂದು ಅಂತಿಮ ಪಟ್ಟಿ ಪ್ರಕಟವಾಗಲಿದೆ.
- Arun Kumar R
- Updated on: Aug 24, 2026
- 4:28 pm