AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SIR - ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ

SIR - ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ

Special Intensive Revision – ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ

TV9 Kannada News Live: ಕಾಮನ್‌ವೆಲ್ತ್‌ ನಲ್ಲಿ ಕಂಚು ಗೆದ್ದ ಕನ್ನಡತಿಗೆ ಸರ್ಕಾರಿ ಹುದ್ದೆ, 15 ಲಕ್ಷ ರೂ. ಬಹುಮಾನ

Karnataka News Today Live Updates: ದರ್ಶನ್ ಪ್ರಕರಣದಲ್ಲಿ A-14 ಪ್ರದೋಷ್ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿ ಮಹತ್ವದ ತಿರುವು ನೀಡಿದ್ದಾರೆ. ಹೊಸಕೋಟೆಯಲ್ಲಿ ಬಡ ಮಹಿಳೆಯರಿಗೆ ಲಕ್ಷಾಂತರ ರೂಪಾಯಿ ಲೋನ್ ವಂಚನೆ ನಡೆದಿದೆ. ಗದಗದಲ್ಲಿ ಉಪಲೋಕಾಯುಕ್ತರು ಕಸ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಯಚೂರು ಜೈಲಿನಲ್ಲಿ ಕೈದಿ ಮರಣ ಮತ್ತು ಬೀದರ್ ರಸ್ತೆ ಕಾಮಗಾರಿ ಸ್ಥಗಿತದಂತಹ ಪ್ರಮುಖ ಸುದ್ದಿಗಳು ಇಲ್ಲಿದೆ ನೋಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಹುತೇಕ ಪೂರ್ಣ: 1 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್ ಸಾಧ್ಯತೆ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದ್ದು, 1 ಕೋಟಿಗೂ ಅಧಿಕ ಮತದಾರರ ಹೆಸರು ಕರಡು ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ ಇದೆ. ASDDO ಪಟ್ಟಿಯಲ್ಲಿರುವ ಮತದಾರರಿಗೆ ಹೆಸರು ಸೇರ್ಪಡೆ ಹಾಗೂ ವಿಳಾಸ ಬದಲಾವಣೆಗೆ ಅವಕಾಶ ನೀಡಲಾಗಿದೆ.

ಮತದಾರರ ಪಟ್ಟಿ ಪರಿಷ್ಕರಣೆ: ಕರ್ನಾಟಕದಲ್ಲಿ ಪತ್ತೆಯಾಗದ 16.3 ಲಕ್ಷ ಮತದಾರರು, ಬೆಂಗಳೂರಲ್ಲಿ ಅತಿ ಹೆಚ್ಚು?

Karnataka Voter List Revision: ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬರೋಬ್ಬರಿ 16.3 ಲಕ್ಷಕ್ಕೂ ಹೆಚ್ಚು ಮತದಾರರು ಪತ್ತೆಯಾಗಿಲ್ಲ ಎಂಬ ವಿಷಯ ಬೆಳಕಿಗೆ ಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ (CEO) ವಿ. ಅನ್ಬುಕುಮಾರ್ ಅವರು ನೀಡಿರುವ ಅಧಿಕೃತ ಮಾಹಿತಿ ಹಾಗೂ ಅಂಕಿ-ಅಂಶಗಳ ಸಂಪೂರ್ಣ ವಿವರಗಳು ಇಲ್ಲಿವೆ.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಬೆಂಗಳೂರು ಉತ್ತರ ಮತ್ತು ದಕ್ಷಿಣ ವಲಯದಲ್ಲಿ ಶೇ100 ಡಿಜಿಟಲೀಕರಣ ಪೂರ್ಣ!

ಕರ್ನಾಟಕ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬಿಬಿಎಂಪಿ ಉತ್ತರ ಮತ್ತು ದಕ್ಷಿಣ ವಲಯಗಳು ಶೇ 100 ರಷ್ಟು ಫಾರ್ಮ್ ಡಿಜಿಟಲೀಕರಣ ಸಾಧಿಸಿವೆ. ಆಗಸ್ಟ್ 8 ರ ಗಡುವಿನೊಳಗೆ ಗೈರುಹಾಜರಿ ಹಾಗೂ ಸ್ಥಳಾಂತರಗೊಂಡ ಮತದಾರರ (ASDDO) ಪಟ್ಟಿಯನ್ನು ಪೂರ್ಣಗೊಳಿಸಲು ಸಿಇಒ ಕಚೇರಿ ಸಿದ್ಧತೆ ನಡೆಸಿದ್ದು, ರಾಜಕೀಯ ಪಕ್ಷಗಳ ಪರಿಶೀಲನೆಗೆ ಮಾಹಿತಿ ಹಂಚಿಕೊಳ್ಳಲಾಗುತ್ತಿದೆ.

ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ 3.49 ಲಕ್ಷ ರೂ. ವಂಚನೆ: ಖದೀಮರ ಪ್ಲ್ಯಾನ್​​ ಹೇಗಿತ್ತು ಗೊತ್ತಾ?

ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ಹೆಸರಿನಲ್ಲಿ ಸೈಬರ್ ವಂಚಕರು ವ್ಯಕ್ತಿಯೊಬ್ಬರಿಂದ ₹3.49 ಲಕ್ಷ ಹಣ ಲೂಟಿ ಮಾಡಿರುವ ಆತಂಕಕಾರಿ ಘಟನೆ ನಡೆದಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೈಬರ್ ತಜ್ಞರು ಸೂಚಿಸಿದ್ದಾರೆ. ಈ ವಂಚನೆಯ ಜಾಲ ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ವಿವರ ಇಲ್ಲಿದೆ.

SIR: ಮತದಾರರ ಪಟ್ಟಿ ಪರಿಷ್ಕರಣೆ; 4.8 ಕೋಟಿ ಉಚಿತ ಜಾತಿ ಪ್ರಮಾಣಪತ್ರ ವಿತರಣೆಗೆ ರಾಜ್ಯ ಸರ್ಕಾರ ಮುಂದು!

ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಸುಲಭಗೊಳಿಸಲು ರಾಜ್ಯ ಸರ್ಕಾರವು ಸಾರ್ವಜನಿಕರಿಗೆ 4.8 ಕೋಟಿಗೂ ಹೆಚ್ಚು ಉಚಿತ ಜಾತಿ ಪ್ರಮಾಣಪತ್ರಗಳನ್ನು ವಿತರಿಸಲು ಮುಂದಾಗಿದೆ. ಈ ಸಂಬಂಧ ಕಂದಾಯ ಇಲಾಖೆಯು ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದು, ಮೊಬೈಲ್ ಆ್ಯಪ್, ಎಸ್‌ಎಂಎಸ್ ಹಾಗೂ ವಾಟ್ಸಾಪ್ ಲಿಂಕ್ ಮೂಲಕ ಮನೆ ಮನೆಗೆ ಪಾರದರ್ಶಕವಾಗಿ ಪ್ರಮಾಣಪತ್ರ ತಲುಪಿಸಲು ಸಿದ್ಧತೆ ನಡೆಸಿದೆ.

ಕರ್ನಾಟಕ SIR: ರಾಜ್ಯದ ASDDO ಮತದಾರರ ಪೈಕಿ ಅರ್ಧದಷ್ಟು ಬೆಂಗಳೂರಿನಲ್ಲೇ!

ಕರ್ನಾಟಕದ SIR ಪ್ರಕ್ರಿಯೆಯಲ್ಲಿ ಬೆಂಗಳೂರಿನ 36.75 ಲಕ್ಷ ಮತದಾರರು ASDDO ಪಟ್ಟಿಗೆ ಸೇರಿದ್ದಾರೆ. ರಾಜ್ಯದ ಒಟ್ಟು 84 ಲಕ್ಷ ಎಸ್​​ಡಿಡಿಒ ಮತದಾರರಲ್ಲಿ ಬೆಂಗಳೂರಿನ ಪಾಲು ಶೇ 46.7ರಷ್ಟಿದ್ದು, ಆಗಸ್ಟ್ 8ರೊಳಗೆ ತಪ್ಪಾಗಿ ಗುರುತಿಸಲ್ಪಟ್ಟ ಮತದಾರರು ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಎಸ್​​ಡಿಡಿಒ ಮತದಾರರು ಎಂದರೆ ಯಾರು? ಬೆಂಗಳೂರಿನಲ್ಲೇ ಹೆಚ್ಚಿರುವುದು ಯಾಕೆ? ಇಲ್ಲಿದೆ ಮಾಹಿತಿ.

SIR ಪಟ್ಟಿಗೆ ‘ಬಾಂಗ್ಲಾದೇಶಿ, ಪಾಕಿಸ್ತಾನಿಯರ’ ಹೆಸರು ಸೇರಿಸಲ್ಲವೆಂದ ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ: ಬಿಜೆಪಿ ಆರೋಪ

ಬೆಂಗಳೂರಿನ ಪುಲಿಕೇಶಿನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅಧಿಕಾರಿ ಮೇಲೆ ಹಲ್ಲೆ ನಡೆದಿದ್ದು, ಅಕ್ರಮ ವಲಸಿಗರ ಹೆಸರು ಸೇರಿಸದಿದ್ದಕ್ಕೆ ಈ ಕೃತ್ಯ ಎಸಗಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಉಪಮೇಯರ್ ಎಸ್. ಹರೀಶ್, ಈ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ: ರಾಜ್ಯದಲ್ಲಿ 84 ಲಕ್ಷಕ್ಕೂ ಹೆಚ್ಚು ASDDO ಮತದಾರರು ಪತ್ತೆ

Karnataka Electoral Roll Revision: ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಗತಿಯಲ್ಲಿದೆ. ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು, ಶೇ.76.99ರಷ್ಟು ಅರ್ಜಿಗಳ ಡಿಜಿಟಲೀಕರಣ ಆಗಿದ್ದು, 84 ಲಕ್ಷಕ್ಕೂ ಹೆಚ್ಚು ASDDO (ಗೈರಾದ, ಸ್ಥಳಾಂತರ, ಮೃತ, ನಕಲಿ) ಮತದಾರರನ್ನು ಪತ್ತೆ ಹಚ್ಚಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಅವಧಿ ವಿಸ್ತರಣೆ ಕೋರಿದ್ದ PIL ಇತ್ಯರ್ಥಗೊಳಿಸಿದ ಹೈಕೋರ್ಟ್

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಅವಧಿ ವಿಸ್ತರಿಸುವಂತೆ ಕೋರಿ ದೇವನೂರು ಮಹದೇವ ಹಾಗೂ ರಾಮಚಂದ್ರ ಗುಹಾ ಸಲ್ಲಿಸಿದ್ದ ಪಿಐಎಲ್ ಅನ್ನು ಕರ್ನಾಟಕ ಹೈಕೋರ್ಟ್ ಇತ್ಯರ್ಥಪಡಿಸಿದೆ. ಬಿಎಲ್‌ಒಗಳಿಗೆ ಸಮರ್ಪಕ ತರಬೇತಿಯಿಲ್ಲದೆ ಮತದಾರರು ಹೊರಗುಳಿಯುವ ಆತಂಕ ವ್ಯಕ್ತವಾಗಿತ್ತು. ಅಗತ್ಯ ಬಿದ್ದರೆ ಅವಧಿ ವಿಸ್ತರಿಸಲಾಗುವುದು ಹಾಗೂ ಕರಡು ಪಟ್ಟಿ ಬಳಿಕವೂ ಅರ್ಜಿ ಸಲ್ಲಿಸಬಹುದು ಎಂದು ಚುನಾವಣಾ ಆಯೋಗ ಕೋರ್ಟ್‌ಗೆ ತಿಳಿಸಿದೆ.

ಮತದಾರರ ಪಟ್ಟಿ ಪರಿಷ್ಕರಣೆ: 5.54 ಕೋಟಿ ನಮೂನೆಗಳ ವಿತರಣೆ ಪೂರ್ಣ; ASDDO ಪಟ್ಟಿಯಲ್ಲಿ 52.97 ಲಕ್ಷ ಮತದಾರರು !

Karnataka Voter List Revision: ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿ 5.54 ಕೋಟಿ ನಮೂನೆಗಳ ವಿತರಣೆ ಪೂರ್ಣಗೊಂಡಿದ್ದು, ಲಭ್ಯ ಮಾಹಿತಿ ಆಧಾರದ ಮೇಲೆ 52.97 ಲಕ್ಷ ಮತದಾರರನ್ನು ASDDO ಪಟ್ಟಿಯಲ್ಲಿ ಗುರುತಿಸಲಾಗಿದೆ. ಇದುವರೆಗೆ 3.85 ಕೋಟಿ ನಮೂನೆಗಳು ಸಲ್ಲಿಕೆಯಾಗಿದ್ದು, 1.56 ಕೋಟಿ ಮತದಾರರು ಸೆಲ್ಫ್​​ ಮ್ಯಾಪಿಂಗ್​​ ಮಾಡಿದ್ದಾರೆ. 1.93 ಕೋಟಿ ಮಂದಿ ಪ್ರೊಜೆನಿ ಮ್ಯಾಪಿಂಗ್ ಪೂರ್ಣಗೊಳಿಸಿದ್ದಾರೆ ಎನ್ನಲಾಗಿದೆ.

SIR ಕರ್ತವ್ಯದ ವೇಳೆ ಮತ್ತೊಂದು ದುರಂತ: ಬಿಎಲ್‌ಒ ಶಿಕ್ಷಕಿ ಹೃದಯಾಘಾತದಿಂದ ಸಾವು!

ಬೆಂಗಳೂರಿನ ಕುರುಬರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಶಮಂತಾಕುಮಾರಿ ಎಸ್‌ಐಆರ್ (SIR) ಬಿಎಲ್‌ಒ ಕರ್ತವ್ಯದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೇಲಾಧಿಕಾರಿಗಳು ಶೀಘ್ರ ಕೆಲಸ ಮುಗಿಸುವಂತೆ ನೀಡುತ್ತಿದ್ದ ತೀವ್ರ ಒತ್ತಡವೇ ಈ ದುರಂತಕ್ಕೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಿಬ್ಬಂದಿಗಳ ಮೇಲಿನ ಕೆಲಸದ ಒತ್ತಡದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ