SIR - ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ
Special Intensive Revision – ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ
ಪಶ್ಚಿಮ ಬಂಗಾಳದ SIR ಪ್ರಕ್ರಿಯೆಗೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಸುಪ್ರೀಂ ಕೋರ್ಟ್ ಆದೇಶ
ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಹಕ್ಕುಗಳು ಮತ್ತು ಆಕ್ಷೇಪಣೆಗಳ ನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡಲು ನ್ಯಾಯಾಂಗ ಅಧಿಕಾರಿಗಳನ್ನು ನಿಯೋಜಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪಿನ್ ಪಾಂಚೋಲಿ ಅವರ ಪೀಠ ಈ ಆದೇಶ ನೀಡಿದೆ.
- Sushma Chakre
- Updated on: Feb 20, 2026
- 5:48 pm
SIR in Karnataka: ಕರ್ನಾಟಕ ಸೇರಿ 23 ರಾಜ್ಯಗಳಲ್ಲಿ ಏಪ್ರಿಲ್ನಿಂದ ಎಸ್ಐಆರ್ ಆರಂಭ ಸಾಧ್ಯತೆ
ದೇಶದ ಹಲವೆಡೆ ಎಸ್ಐಆರ್ಗೆ ವಿರೋಧಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಮಹಾರಾಷ್ಟ್ರ, ಕರ್ನಾಟಕ, ಆಂಧ್ರಪ್ರದೇಶ ಸೇರಿದಂತೆ ಒಟ್ಟು 23 ರಾಜ್ಯಗಳಲ್ಲಿ SIR ಏಪ್ರಿಲ್ನಿಂದ ಪ್ರಾರಂಭವಾಗುವ ಸಾಧ್ಯತೆಯಿದೆ. 22 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್ಐಆರ್ ನಡೆಯಲಿದ್ದು, ಚುನಾವಣಾ ಸಂಸ್ಥೆಯು ಅಧಿಕಾರಿಗಳಿಗೆ ಸಿದ್ಧರಾಗಿರಲು ನಿರ್ದೇಶನ ನೀಡಿದೆ. ಹೊಸ ಮತದಾರರ ನೋಂದಣಿ, ಅಸ್ತಿತ್ವದಲ್ಲಿರುವ ನಮೂದುಗಳ ಪರಿಶೀಲನೆ ಮತ್ತು ಅನರ್ಹ ಹೆಸರುಗಳನ್ನು ತೆಗೆದುಹಾಕುವುದು ಸೇರಿದಂತೆ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆಯನ್ನು ಎಸ್ಐಆರ್ ಪ್ರಕ್ರಿಯೆ ಒಳಗೊಂಡಿರುತ್ತದೆ.
- Sushma Chakre
- Updated on: Feb 19, 2026
- 10:44 pm
ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ಗೆ ಫೆ. 21ರವರೆಗೆ ಗಡುವು ವಿಸ್ತರಿಸಿದ ಸುಪ್ರೀಂ ಕೋರ್ಟ್
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಅಡಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸುವ ಗಡುವನ್ನು ಸುಪ್ರೀಂ ಕೋರ್ಟ್ ಒಂದು ವಾರ ವಿಸ್ತರಿಸಿದೆ. ಈ ಮೊದಲು ಫೆಬ್ರವರಿ 14ಕ್ಕೆ ಗಡುವು ನಿಗದಿಪಡಿಸಲಾಗಿತ್ತು. ಸುಪ್ರೀಂ ಕೋರ್ಟ್ ಫೆಬ್ರವರಿ 14ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಹಾಗೇ, ವಿಶೇಷ ತೀವ್ರ ಪರಿಷ್ಕರಣೆ (SIR) ಕರ್ತವ್ಯಗಳಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಬೆದರಿಕೆ ಮತ್ತು ಹಿಂಸಾಚಾರವನ್ನು ಆರೋಪಿಸಿ ಚುನಾವಣಾ ಆಯೋಗದ ಅಫಿಡವಿಟ್ಗೆ ಪ್ರತಿಕ್ರಿಯಿಸಲು ಪಶ್ಚಿಮ ಬಂಗಾಳದ ಪೊಲೀಸ್ ಮಹಾನಿರ್ದೇಶಕರಿಗೆ ಸುಪ್ರೀಂ ಕೋರ್ಟ್ ಶೋಕಾಸ್ ನೋಟಿಸ್ ನೀಡಿದೆ.
- Sushma Chakre
- Updated on: Feb 9, 2026
- 6:30 pm
ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ; ಮಮತಾ ಬ್ಯಾನರ್ಜಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ಪಶ್ಚಿಮ ಬಂಗಾಳದಲ್ಲಿನ ತೃಣಮೂಲ ಆಡಳಿತವನ್ನು "ಕ್ರೂರ ಸರ್ಕಾರ" ಎಂದು ಟೀಕಿಸಿದ ಮೋದಿ, "ವಿಶ್ವದ ಅತ್ಯಂತ ಶ್ರೀಮಂತ ದೇಶಗಳು ಸಹ ಅಕ್ರಮ ವಲಸಿಗರನ್ನು ತಮ್ಮ ಪ್ರದೇಶಗಳಿಂದ ಹೊರಹಾಕುತ್ತಿವೆ. ಆದರೆ, ನಮ್ಮ ದೇಶದಲ್ಲಿ ಕೆಲವು ಪಕ್ಷಗಳು ಒಳನುಸುಳುಕೋರರನ್ನು ರಕ್ಷಿಸಲು ಉದ್ದೇಶಪೂರ್ವಕ ಮತ್ತು ಸಂಘಟಿತ ಪ್ರಯತ್ನಗಳನ್ನು ಮಾಡುತ್ತಿವೆ. ಅಕ್ರಮ ವಲಸಿಗರ ಪರವಾಗಿ ವಕಾಲತ್ತು ವಹಿಸುವ ನಾಯಕರನ್ನು ನಮ್ಮ ದೇಶದ ಯುವಕರು ಹೇಗೆ ಸ್ವೀಕರಿಸಲು ಸಾಧ್ಯ?" ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದಾರೆ.
- Sushma Chakre
- Updated on: Feb 5, 2026
- 8:51 pm
ಎಸ್ಐಆರ್ ಒತ್ತಡದಿಂದ ಬಂಗಾಳದಲ್ಲಿ 150 ಜನ ಸಾವು; ಸುಪ್ರೀಂ ಕೋರ್ಟ್ನಲ್ಲಿ ಮಮತಾ ಬ್ಯಾನರ್ಜಿ ವಾದ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಮಧ್ಯಾಹ್ನ ತಮ್ಮ ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR)ಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ವಾದಿಸಲು ಭಾರತದ ಮುಖ್ಯ ನ್ಯಾಯಾಧೀಶರ (CJI) ಕೊಠಡಿಗೆ ಪ್ರವೇಶಿಸಿದರು. ಈ ವೇಳೆ ಸಿಎಂ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗದ ಮೇಲೆ ಹರಿಹಾಯ್ದರು. ಎಸ್ಐಆರ್ ಒತ್ತಡದಿಂದ ಬಂಗಾಳದಲ್ಲಿ ಇದುವರೆಗೂ 150 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದರು.
- Sushma Chakre
- Updated on: Feb 4, 2026
- 5:11 pm
ಬಂಗಾಳದ ಎಸ್ಐಆರ್; ಹೊಂದಿಕೆಯಾಗದ 1.25 ಕೋಟಿ ಮತದಾರರ ಹೆಸರು ಘೋಷಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಆದೇಶ
ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ ಪ್ರಕ್ರಿಯೆಯನ್ನು ಸುಲಭಗೊಳಿಸಲು, ಪಂಚಾಯತ್ ಭವನಗಳು ಮತ್ತು ಬ್ಲಾಕ್ ಕಚೇರಿಗಳಲ್ಲಿ ದಾಖಲೆಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಸೌಲಭ್ಯಗಳನ್ನು ಸ್ಥಾಪಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಪ್ರಕ್ರಿಯೆಯ ಸಂದರ್ಭದಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ಸಹಾಯ ಮಾಡಲು ಸಾಕಷ್ಟು ಸಿಬ್ಬಂದಿಯನ್ನು ಒದಗಿಸುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
- Sushma Chakre
- Updated on: Jan 19, 2026
- 5:12 pm
ಪಶ್ಚಿಮ ಬಂಗಾಳದ ಎಸ್ಐಆರ್ ಕರಡಿನಲ್ಲಿ 58 ಲಕ್ಷ ಹೆಸರುಗಳು ಡಿಲೀಟ್
ಪಶ್ಚಿಮ ಬಂಗಾಳದಲ್ಲಿ ಒಂದು ತಿಂಗಳ ಕಾಲ ನಡೆದ ವಿಶೇಷ ತೀವ್ರ ಪರಿಷ್ಕರಣೆ (SIR) ಅಭಿಯಾನವು ರಾಜ್ಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇದಾದ ನಂತರ, ಭಾರತೀಯ ಚುನಾವಣಾ ಆಯೋಗ (ECI) ಇಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಈ ಕರಡು ಪಟ್ಟಿ ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ (CEO) ಅವರ ಅಧಿಕೃತ ವೆಬ್ಸೈಟ್ನಲ್ಲಿ ಮತ್ತು ಚುನಾವಣಾ ಆಯೋಗದ ಮತದಾರರ ಪೋರ್ಟಲ್ನಲ್ಲಿ ಲಭ್ಯವಿದೆ.
- Sushma Chakre
- Updated on: Dec 16, 2025
- 3:26 pm
ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ 6 ರಾಜ್ಯಗಳಲ್ಲಿ SIR ಗಡುವು 1 ವಾರ ವಿಸ್ತರಣೆ
ಚುನಾವಣಾ ಆಯೋಗವು 5 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದಲ್ಲಿ SIR ಗಡುವನ್ನು 1 ವಾರ ಮುಂದಕ್ಕೆ ಹಾಕಿದೆ. ಆದರೆ, ಪಶ್ಚಿಮ ಬಂಗಾಳಕ್ಕೆ ಯಾವುದೇ ವಿಸ್ತರಣೆ ಇಲ್ಲ. ಚುನಾವಣಾ ಆಯೋಗವು 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಯ ಎರಡನೇ ಹಂತವನ್ನು ನಡೆಸಲಾಗುತ್ತಿದೆ. ಇದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಛತ್ತೀಸ್ಗಢ, ಗೋವಾ, ಗುಜರಾತ್, ಕೇರಳ, ಲಕ್ಷದ್ವೀಪ, ಮಧ್ಯಪ್ರದೇಶ, ಪುದುಚೇರಿ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಪಶ್ಚಿಮ ಬಂಗಾಳವನ್ನು ಒಳಗೊಂಡಿದೆ.
- Sushma Chakre
- Updated on: Dec 11, 2025
- 5:03 pm
ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿಯಿಂದಲೂ ಮತಗಳ್ಳತನ; ಅಮಿತ್ ಶಾ ವಾಗ್ದಾಳಿ
ಲೋಕಸಭಾ ಅಧಿವೇಶನದಲ್ಲಿ ಮತ್ತೊಮ್ಮೆ ಎಸ್ಐಆರ್ ಕುರಿತು ಚರ್ಚೆ ಭುಗಿಲೆದ್ದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಗೃಹ ಸಚಿವ ಅಮಿತ್ ಶಾ ನಡುವೆ ಈ ಚರ್ಚೆ ಕಾವೇರಿದ್ದು, ಈ ವೇಳೆ ಅಮಿತ್ ಶಾ ಕಾಂಗ್ರೆಸ್ ನಾಯಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿಗೂ ಮತಗಳ್ಳತನಕ್ಕೂ ನಂಟಿದೆ ಎಂದು ಅವರು ಹೇಳಿದ್ದಾರೆ. ಇದರಿಂದ ಇಬ್ಬರೂ ನಾಯಕರ ನಡುವೆ ತೀವ್ರ ಚರ್ಚೆ ಏರ್ಪಟ್ಟಿತು.
- Sushma Chakre
- Updated on: Dec 10, 2025
- 7:16 pm
ಎಸ್ಐಆರ್ ಒತ್ತಡದಿಂದ ರಿಲ್ಯಾಕ್ಸ್ ಆಗಲು ಕೇರಳದ ಚುನಾವಣಾ ಸಿಬ್ಬಂದಿಯಿಂದ ಜುಂಬಾ ಡ್ಯಾನ್ಸ್
ಕೇರಳದ ಕಣ್ಣೂರಿನ ಬಿಎಲ್ಒ ಅನೀಶ್ ಜಾರ್ಜ್ ಅವರು ಎಸ್ಐಆರ್ ಪ್ರಕ್ರಿಯೆ ಪ್ರಾರಂಭವಾದಾಗಿನಿಂದ ಆತ್ಮಹತ್ಯೆಯಿಂದ ಸಾವನ್ನಪ್ಪಿದ ಮೊದಲಿಗರು. ಅದಾದ ನಂತರ ಚುನಾವಣಾ ಸಿಬ್ಬಂದಿ ಹಾಗೂ ಅಧಿಕಾರಿಗಳ ಸಾವಿನ ಸುದ್ದಿ ಒಂದರ ಹಿಂದೊಂದರಂತೆ ಕೇಳಿ ಬರುತ್ತಲೇ ಇದೆ. ಇದರ ನಡುವೆ ಕೇರಳದಲ್ಲಿ ಚುನಾವಣಾ ಸಿಬ್ಬಂದಿ ಹಾಗೂ ಬೂತ್ ಮಟ್ಟದ ಅಧಿಕಾರಿಗಳು ವಿರಾಮದ ವೇಳೆ ಜುಂಬಾ ಡ್ಯಾನ್ಸ್ ಮಾಡುತ್ತಾ ರಿಲ್ಯಾಕ್ಸ್ ಮೂಡ್ನಲ್ಲಿರುವ ವಿಡಿಯೋವನ್ನು ಚುನಾವಣಾ ಆಯೋಗ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ತೀವ್ರ ಚರ್ಚೆಗೂ ಕಾರಣವಾಗಿದೆ.
- Sushma Chakre
- Updated on: Dec 1, 2025
- 3:35 pm
ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನ ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಡಿಎಂಕೆ
ಚುನಾವಣಾ ಆಯೋಗ ಈಗಾಗಲೇ ಎರಡನೇ ಹಂತದ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಅನ್ನು ಪ್ರಕಟಿಸಿದೆ. ಆದರೆ, ಡಿಎಂಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಸರ್ವಪಕ್ಷ ಸಭೆ ನಡೆಸಿ ತಮಿಳುನಾಡು ಸೇರಿದಂತೆ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಘೋಷಿಸಲಾಗಿರುವ ಎರಡನೇ ಹಂತದ ಮತದಾರರ ಪಟ್ಟಿ ಪರಿಷ್ಕರಣೆಯ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೊರೆ ಹೋಗಲು ನಿರ್ಧರಿಸಿದ್ದರು. ಇಂದು ಡಿಎಂಕೆ ಎಸ್ಐಆರ್ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ.
- Sushma Chakre
- Updated on: Nov 3, 2025
- 9:38 pm
2 ರಾಜ್ಯಗಳಲ್ಲಿ ಮತದಾರರಾಗಿ ನೋಂದಣಿ; ಪ್ರಶಾಂತ್ ಕಿಶೋರ್ಗೆ ಚುನಾವಣಾ ಆಯೋಗದಿಂದ ನೋಟಿಸ್
ಬಿಹಾರ ಮತ್ತು ಪಶ್ಚಿಮ ಬಂಗಾಳ ಎರಡರಲ್ಲೂ ಮತದಾರರಾಗಿ ಸೇರ್ಪಡೆಗೊಂಡಿದ್ದಕ್ಕಾಗಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಎರಡು ಮತದಾರರ ನೋಂದಣಿಗೆ ಸಂಬಂಧಿಸಿದಂತೆ ಪ್ರಶಾಂತ್ ಕಿಶೋರ್ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದ್ದು, 3 ದಿನಗಳಲ್ಲಿ ಕಾರಣಗಳನ್ನು ವಿವರಿಸಲು ಸೂಚಿಸಲಾಗಿದೆ.
- Sushma Chakre
- Updated on: Oct 28, 2025
- 5:09 pm