SIR - ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ
Special Intensive Revision – ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ
ಪರ್ಯಾಯ ಎಸ್ಐಆರ್ಗೆ ಆದೇಶಿಸಿದ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್
ಕೇಂದ್ರ ಚುನಾವಣೆ ಆಯೋಗ ದೇಶಾದ್ಯಂತ ಹಮ್ಮಿಕೊಂಡಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆ ಚಾಲ್ತಿಯಲ್ಲಿರುವಾಗಲೇ, ರಾಜ್ಯ ಚುನಾವಣೆ ಆಯೋಗ ಬೆಂಗಳೂರಿನ ಕೆಲವು ವಾರ್ಡ್ಗಳಿಗೆ ಪ್ರತ್ಯೇಕ ಹಾಗೂ ಸಮಾನಾಂತರ ಪರಿಷ್ಕರಣೆಗೆ ಆದೇಶಿಸಿರುವ ಕ್ರಮ ಪ್ರಶ್ನಿಸಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದ್ದು, ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಹಾಗೂ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.
- Ramesha M
- Updated on: Jul 8, 2026
- 1:12 pm
ಎಸ್ಐಆರ್ ವೇಳೆ ಬಿಎಲ್ಒಗೆ ಹೊರಗೆ ನಿಲ್ಲಿಸಿ ಜಾತಿ ನಿಂದನೆ: ಅಟ್ರಾಸಿಟಿ ಕೇಸ್ ದಾಖಲು
ಕರ್ನಾಟಕದಲ್ಲಿ ಎಸ್ಐಆರ್ ಪ್ರಕ್ರಿಯೆ ಶುರುವಾಗಿದೆ. ಅಲ್ಲಲ್ಲಿ ಕೆಲ ಗೊಂದಲ, ಗದ್ದಲಗಳ ನಡುವೆ ಎಸ್ಐಆರ್ ನಡೆದಿದೆ. ಇದರ ಮಧ್ಯೆ ಎಸ್ಐಆರ್ಗೆ ಅಂತ ಮತದಾರನ ಮನೆಗೆ ತೆರಳಿದ್ದ ಬಿಎಲ್ಒಗೆ ಜಾತಿ ನಿಂದನೆ ಮಾಡಿದ ಆರೋಪ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಳಿಬಂದಿದೆ. ಬಿಎಲ್ಒ ದಲಿತ ಎಂಬ ಕಾರಣಕ್ಕೆ ಹೊರಗೆ ನಿಲ್ಲಿಸಿ ಜಾತಿ ನಿಂದನೆ ಮಾಡಿದ್ದು, ಈ ಸಂಬಂಧ ಅಟ್ರಾಸಿಟಿ ಕೇಸ್ ದಾಖಲಾಗಿದೆ.
- Pruthviraj
- Updated on: Jul 8, 2026
- 11:48 am
ಬೆಳಗಾವಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಎಡವಟ್ಟು: ಶಾಲಾ ಮಕ್ಕಳನ್ನು ಬಳಸಿಕೊಂಡ ಮತಗಟ್ಟೆ ಅಧಿಕಾರಿಗಳು
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ - 2026: ಕರ್ನಾಟಕದಲ್ಲಿ ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿದ್ದು, ಹಲವೆಡೆ ಕೆಲ ಎಡವಟ್ಟುಗಳು ಆಗುತ್ತಿವೆ. ಚುನಾವಣೆ ಆಯೋಗವು ಬಿಎಲ್ಒಗಳಿಗೆ ಮತದಾರರ ಮನೆ ಮನೆಗೆ ತೆರಳಿ ಎಸ್ಐಆರ್ ಮಾಡುವಂತೆ ಹೇಳಿದೆ. ಆದ್ರೆ, ಕೆಲ ಬಿಎಲ್ಒಗಳು ದೇವಸ್ಥಾನ, ಮಸೀದಿ, ಊರಿನ ಕಟ್ಟೆಗಳಲ್ಲಿ ಕುಳಿತು ಎಸ್ಐಆರ್ ಪ್ರಕ್ರಿಯೆ ಮಾಡುತ್ತಿರುವುದು ಕಂಡುಬಂದಿದೆ. ಇದರ ಮಧ್ಯೆ ಇದೀಗ ಬೆಳಗಾವಿಯಲ್ಲಿ ಎಸ್ಐಆರ್ಗೆ ಶಾಲಾ ಮಕ್ಕಳನ್ನು ಬಳಕೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮರಡಿಮಠದ ಗ್ರಾಮಸ್ಥರನ್ನು ಬಿಎಲ್ಒಗಳು ಶಾಲೆಗೆ ಕರೆಸಿ ಎಸ್ಐಆರ್ ಮಾಡುತ್ತಿದ್ದು,ಫೋಟೋ ಅಂಟಿಸಲು ಮತ್ತು ಫಾರಂ ತುಂಬಲು ವಿದ್ಯಾರ್ಥಿಗಳನ್ನು ಬಳಕೆ ಮಾಡಲಾಗಿದೆ.
- Sahadev Mane
- Updated on: Jul 7, 2026
- 4:08 pm
SIR ವೇಳೆ ಕುಸಿದುಬಿದ್ದ BLO, ಅಧಿಕಾರಿಗಳಿಗೆ ಎಷ್ಟು ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಕರ್ನಾಟಕದಲ್ಲೂ ಸಹ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ನಡೆದಿದ್ದ, ಕೆಲವು ಬಿಎಲ್ಓಗಳು ಮನೆ ಮನೆಗೆ ತೆರಳಿ ಅರ್ಜಿ ನಮೂನೆ ನೀಡುತ್ತಿದ್ದಾರೆ. ಆದ್ರೆ, ಕೆಲವಡೆ ಒಂದೇ ಸ್ಥಳದಲ್ಲಿ ಕುಳಿತು ಪರಿಷ್ಕರಣ ಮಾಡುತ್ತಿರುವುದು ಕಂಡುಬರುತ್ತಿವೆ. ಇದರ ನಡುವೆ ಎಸ್ಐಆರ್ ವೇಳೆ ಕೆಲ ದುರಂತ ಸಂಭವಿಸಿತ್ತಿವೆ. ಹೌದು....ತುಮಕೂರಿನಲ್ಲಿ SIR ಕರ್ತವ್ಯಕ್ಕೆ ತೆರಳುವಾಗ ರಸ್ತೆ ಅಪಘಾತದಲ್ಲಿ ವಿಎಒ ಭುವನಾ ಮೃತಪಟ್ಟಿದ್ದರೆ, ಇನ್ನೊಂದೆಡೆ ಬೀದರ್ನಲ್ಲಿ ಕಂದಾಯ ನೌಕರ. ಎಸ್ಐಆರ್ ಕರ್ತವ್ಯದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮತ್ತೊಂದೆಡೆ ಹಾಸನದಲ್ಲಿ ಎಸ್ಐಆರ್ ಕರ್ತವ್ಯದ ವೇಳೆ ಶಿಕ್ಷಕಿಯೊಬ್ಬರು ಅಸ್ವಸ್ಥಗೊಂಡು ಕುಸಿದು ಬಿದ್ದಿರುವ ಘಟನೆ ನಡೆದಿದೆ.
- Manjunath KB
- Updated on: Jul 5, 2026
- 4:46 pm
SIR ಕರ್ತವ್ಯಕ್ಕೆ ತೆರಳುತ್ತಿದ್ದಾಗ ಅಪಘಾತದಲ್ಲಿ ಅಧಿಕಾರಿ ಸಾವು: ಡಿಸಿ ಕಚೇರಿ ಮುಂದೆ ಅಹೋರಾತ್ರಿ ಧರಣಿ!
ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಕಂದಾಯ ಇಲಾಖೆ ನೌಕರರ ಅಹೋರಾತ್ರಿ ಧರಣಿ ತೀವ್ರಗೊಂಡಿದೆ. ಮೇಲಧಿಕಾರಿಗಳ ಕಿರುಕುಳ ಮತ್ತು SIR ಕರ್ತವ್ಯದ ಒತ್ತಡದಿಂದಾಗಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಗ್ರಾಮ ಆಡಳಿತ ಅಧಿಕಾರಿ (VAO) ಭುವನಾ ಸಾವಿಗೆ ನ್ಯಾಯ ಸಿಗಬೇಕು ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನೌಕರರು ಪಟ್ಟು ಹಿಡಿದಿದ್ದಾರೆ. ಜಿಲ್ಲಾಧಿಕಾರಿಗಳು ನಡೆಸಿದ ತಡರಾತ್ರಿಯ ಸಂಧಾನ ಮಾತುಕತೆ ವಿಫಲವಾಗಿದ್ದು, ಪ್ರತಿಭಟನೆ ಮುಂದುವರಿದಿದೆ.
- Jagadisha B
- Updated on: Jul 5, 2026
- 9:05 am
Karnataka SIR Row: ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್ ಜೋಶಿ
ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯು ಸರಿಯಾಗಿ ನಡೆಯುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ. ಸಾಮೂಹಿಕವಾಗಿ ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಲಾಗುತ್ತಿದೆ, ಇದು ಎಸ್ಐಆರ್ ಮಾಡುವ ಸರಿಯಾದ ವಿಧಾನವಲ್ಲ ಎಂದು ಅವರು ತಿಳಿಸಿದ್ದಾರೆ. ವಾರ್ಡ್ ನಂಬರ್ 69, ಬೂತ್ ನಂಬರ್ 116 ರಲ್ಲಿ ಮೂರು ಕುಟುಂಬಗಳಿಗೆ 50 ಫಾರ್ಮ್ಗಳನ್ನು ನೀಡಿರುವಂತಹ ಉದಾಹರಣೆಗಳನ್ನು ಅವರು ಉಲ್ಲೇಖಿಸಿದ್ದಾರೆ. ಬಿಎಲ್ಎಗಳು ಆಕ್ಷೇಪಿಸಿದಾಗಲೂ ಕ್ರಮ ಕೈಗೊಂಡಿಲ್ಲ ಎಂದು ಜೋಶಿ ದೂರಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಮೃತರು, ಸ್ಥಳಾಂತರಗೊಂಡವರು ಮತ್ತು ಅಕ್ರಮ ವಲಸಿಗರನ್ನು ಗುರುತಿಸಲು ಎಸ್ಐಆರ್ ಮಾಡಬೇಕೇ ಹೊರತು ಸಾಮೂಹಿಕವಾಗಿ ಫಾರ್ಮ್ ಭರ್ತಿ ಮಾಡುವುದಕ್ಕಲ್ಲ ಎಂದು ಅವರು ಹೇಳಿದ್ದಾರೆ. ಈ ಪ್ರಕ್ರಿಯೆಯಲ್ಲಿನ ಲೋಪದೋಷಗಳ ಬಗ್ಗೆ ಬಿಜೆಪಿ ಪ್ರಮುಖರೊಂದಿಗೆ ಚರ್ಚಿಸಲಾಗುವುದು ಎಂದು ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
- Bhavana Hegde
- Updated on: Jul 4, 2026
- 2:45 pm
Special Intensive Revision: ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮತ್ತು ಮತಕ್ಷೇತ್ರ ಬದಲಾಯಿಸಲು ಏನೆಲ್ಲಾ ದಾಖಲೆಗಳನ್ನು ಕೊಡಬೇಕು?
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ : ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭವಾಗಿದ್ದು, ಹೊಸದಾಗಿ ಹೆಸರು ಸೇರಿಸಲು ಫಾರ್ಮ್-6 ಹಾಗೂ ವಿಳಾಸ ಅಥವಾ ಕ್ಷೇತ್ರ ಬದಲಾವಣೆಗೆ ಫಾರ್ಮ್-8 ಸಲ್ಲಿಸಬೇಕಿದೆ. ಇದಕ್ಕೆ ಬೇಕಾಗುವ ಅಗತ್ಯ ದಾಖಲೆಗಳಾದ ಸಂಪೂರ್ಣ ವಿವರ ಇಲ್ಲಿದೆ.
- Bhavana Hegde
- Updated on: Jul 4, 2026
- 12:21 pm
ಮತದಾರರ ಪಟ್ಟಿ ಪರಿಷ್ಕರಣೆ: ಕೋಲಾರ ಮತ್ತು ಮೈಸೂರಿನಲ್ಲಿ ಗಂಭೀರ ಕರ್ತವ್ಯ ಲೋಪ; ಅಧಿಕಾರಿಗಳಿಗೆ ನೋಟಿಸ್!
ಕರ್ನಾಟಕದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ (SIR) ಲೋಪ ಎಸಗಿದ ಕೋಲಾರ ತಹಶೀಲ್ದಾರ್, ಎಸಿ ಹಾಗೂ ಬಿಎಲ್ಒಗಳಿಗೆ ನೋಟಿಸ್ ನೀಡಲಾಗಿದೆ. ಇತ್ತ ಮೈಸೂರಿನಲ್ಲೂ ನಿಯಮ ಉಲ್ಲಂಘನೆ ಆರೋಪ ಕೇಳಿಬಂದಿದ್ದು, ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಬಿ.ವೈ. ವಿಜಯೇಂದ್ರ ಆಡಳಿತ ಯಂತ್ರ ದುರುಪಯೋಗದ ಗಂಭೀರ ಆರೋಪಗಳನ್ನು ಮಾಡಿದ್ದಾರೆ.
- Bhavana Hegde
- Updated on: Jul 4, 2026
- 9:01 am
ರಾಮನಗರ ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ: ನಿಷ್ಪಕ್ಷಪಾತ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ
ರಾಮನಗರ ಜಿಲ್ಲೆಯ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ಬಿಎಲ್ಒ ಅಧಿಕಾರಿಗಳನ್ನು ದುರುಪಯೋಗಪಡಿಸಿಕೊಂಡು ಸರ್ಕಾರ ಸಾಂವಿಧಾನಿಕ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿದ್ದು, ಈ ಕುರಿತು ತಕ್ಷಣವೇ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಅವರು ಆಗ್ರಹಿಸಿದ್ದಾರೆ.
- Bhavana Hegde
- Updated on: Jul 3, 2026
- 12:39 pm
ದೇಶಾದ್ಯಂತ ‘SIR’ ಮತದಾರರ ಪಟ್ಟಿ ಪರಿಷ್ಕರಣೆ: 12 ರಾಜ್ಯಗಳಲ್ಲಿ ಬರೋಬ್ಬರಿ 5.18 ಕೋಟಿ ಮತದಾರರ ಹೆಸರು ಡಿಲೀಟ್
ಭಾರತೀಯ ಚುನಾವಣಾ ಆಯೋಗದ (ECI) ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಡಿ 12 ರಾಜ್ಯಗಳಲ್ಲಿ 5.18 ಕೋಟಿಗೂ ಹೆಚ್ಚು ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಪ್ರಕ್ರಿಯೆ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದರೂ, ಸುಪ್ರೀಂ ಕೋರ್ಟ್ ಇದನ್ನು ಎತ್ತಿಹಿಡಿದಿದೆ. ಇದೀಗ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆದವರನ್ನು ಸಾಮಾಜಿಕ ಕಲ್ಯಾಣ ಯೋಜನೆಗಳಿಂದಲೂ ಹೊರಗಿಡಲಾಗುತ್ತಿದೆ.
- Akshay Pallamajalu
- Updated on: Jun 27, 2026
- 5:00 pm
ಸಿದ್ದರಾಮಯ್ಯ ರಾಜೀನಾಮೆ ಹೊತ್ತಲ್ಲೇ ನಿಕೇತ್ ಮೌರ್ಯ, ನಟಿ ಭಾವನಾ ರಾಮಣ್ಣ ಸೇರಿದಂತೆ 31 ಕೆಪಿಸಿಸಿ ಪದಾಧಿಕಾರಿಗಳಿಗೆ ಗೇಟ್ಪಾಸ್
ಕರ್ನಾಟಕ ಕಾಂಗ್ರೆಸ್ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ನಾಯಕತ್ವ ಬದಲಾವಣೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದ್ದು, ಈ ಸಂಬಂಧ ಸುದೀರ್ಘ ಸರಣಿ ಸಭೆ ನಡೆಸಿ ಸಿದ್ದರಾಮಯ್ಯನವರಿಗೆ ರಾಜೀನಾಮೆ ನೀಡಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನವನ್ನುಂಟು ಮಾಡಿದೆ. ಇದರ ಮಧ್ಯೆ ಕೆಪಿಸಿಸಿ ವಕ್ತಾರ ನಿಕೇತ್ ಮೌರ್ಯ, ನಟಿ ಭಾವನಾ ರಾಮಣ್ಣ ಸೇರಿದಂತೆ 31 ಕೆಪಿಸಿಸಿ ಪದಾಧಿಕಾರಿಗಳಿಗೆ ಡಿಕೆ ಶಿವಕಿಮಾರ್ ಗೇಟ್ಪಾಸ್ ನೀಡಿದ್ದಾರೆ.
- Ramesh B Jawalagera
- Updated on: May 27, 2026
- 7:02 pm
ಪಶ್ಚಿಮ ಬಂಗಾಳದ SIR ಪ್ರಕ್ರಿಯೆಗೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಸುಪ್ರೀಂ ಕೋರ್ಟ್ ಆದೇಶ
ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಹಕ್ಕುಗಳು ಮತ್ತು ಆಕ್ಷೇಪಣೆಗಳ ನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡಲು ನ್ಯಾಯಾಂಗ ಅಧಿಕಾರಿಗಳನ್ನು ನಿಯೋಜಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪಿನ್ ಪಾಂಚೋಲಿ ಅವರ ಪೀಠ ಈ ಆದೇಶ ನೀಡಿದೆ.
- Sushma Chakre
- Updated on: Feb 20, 2026
- 5:48 pm