AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SIR - ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ

SIR - ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ

Special Intensive Revision – ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ – ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಖಚಿತಪಡಿಸಿಕೊಳ್ಳಲು ಹಾಗೂ ಅರ್ಹ ಮತದಾರರನ್ನು ಗುರುತಿಸಿ ದೋಷಮುಕ್ತ ಮತದಾರರ ಪಟ್ಟಿಯನ್ನು ತಯಾರಿಸುವ ಉದ್ದೇಶದಿಂದ ಭಾರತೀಯ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ನಡೆಸುತ್ತಿದೆ. ಮತದಾರರ ಪಟ್ಟಿಯಲ್ಲಿರುವ ಮೃತಪಟ್ಟವರು, ಬೇರೆಡೆ ಸ್ಥಳಾಂತರಗೊಂಡವರು ಹಾಗೂ ನಕಲಿ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕುವುದು ಮತ್ತು ಅರ್ಹ ಹೊಸ ಮತದಾರರನ್ನು ಸೇರಿಸುವ ಪ್ರಕ್ರಿಯೆಗಳನ್ನು ಇದು ಒಳಗೊಂಡಿದೆ. ಯಾರಾದರೂ ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಎಂದು ತಪ್ಪಾಗಿ ನಮೂದಾಗಿದ್ದರೆ ಅಥವಾ ನಿಮ್ಮ ವಿವರಗಳನ್ನು ತಿದ್ದುಪಡಿ ಮಾಡಲು ಬಯಸಿದರೆ ಸಂಬಂಧಪಟ್ಟ ಅರ್ಜಿಗಳನ್ನು ಸಲ್ಲಿಸಿ ಸರಿಮಾಡಿಕೊಳ್ಳಬಹುದಾಗಿದೆ.

ಇನ್ನೂ ಹೆಚ್ಚು ಓದಿ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಮುಖ್ಯ ಚುನಾವಣಾ ಆಯುಕ್ತರಿಗೆ ಸಿಎಂ ಡಿಕೆಶಿ ಪತ್ರ

ಮತದಾರರ ಪಟ್ಟಿ ಪರಿಷ್ಕರಣೆ (SIR) ವೇಳೆ ಕರ್ನಾಟಕದಲ್ಲಿ 1.08 ಕೋಟಿಗೂ ಅಧಿಕ ಮತದಾರರು ಎಎಸ್‌ಡಿಡಿಒ ಪಟ್ಟಿಗೆ ಸೇರಿದ ಹಿನ್ನೆಲೆ, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ವಿಸ್ತರಣೆ ಸೇರಿ ಹಲವು ಪ್ರಮುಖ ಅಂಶಗಳನ್ನು ಉಲ್ಲೇಖಿಸಿ ಸಿಎಂ ಡಿ.ಕೆ. ಶಿವಕುಮಾರ್ ಅವರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಇದಕ್ಕೆ ಅಗತ್ಯ ಸಹಕಾರ ನೀಡಲು ರಾಜ್ಯ ಸರ್ಕಾರ ಸಿದ್ಧವಾಗಿರೋದಾಗಿ ತಿಳಿಸಿದ್ದಾರೆ.

SIR: ಬೆಂಗಳೂರಿನ ಅರ್ಧದಷ್ಟು ಮತದಾರರು ASDDO ಪಟ್ಟಿಗೆ; 24 ಲಕ್ಷದಷ್ಟು ಮತದಾರರಿಗೆ ನೋಟಿಸ್​

Bengaluru voter list: ಬೆಂಗಳೂರಿನ ಮತದಾರರ ಪಟ್ಟಿಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಿಂದ ಭಾರೀ ಬದಲಾವಣೆಗಳಾಗಿವೆ. 48% ಮತದಾರರು ASDDO ಪಟ್ಟಿಗೆ ಸೇರಿದ್ದು, 24 ಲಕ್ಷಕ್ಕೂ ಹೆಚ್ಚು ಮತದಾರರಿಗೆ ನೋಟಿಸ್ ನೀಡಲಾಗುತ್ತಿದೆ. ಬೊಮ್ಮನಹಳ್ಳಿ ಸೇರಿ ಐದು ಕ್ಷೇತ್ರಗಳಲ್ಲಿ ಶೇ. 50ಕ್ಕೂ ಹೆಚ್ಚು ಮತದಾರರು ಡೇಂಜರ್ ಝೋನ್‌ನಲ್ಲಿದ್ದಾರೆ.

SIR ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್; ಸೆ.23ರವರೆಗೆ ಆಕ್ಷೇಪಣೆಗೆ ಅವಕಾಶ

SIR process Election Commission: ರಾಜ್ಯದಲ್ಲಿ ಜೂನ್ 30ರಿಂದ ಆಗಸ್ಟ್ 17ರವರೆಗೆ ನಡೆದ ಎಸ್ಐಆರ್ ಪ್ರಕ್ರಿಯೆ ಇದೀಗ ಪೂರ್ಣಗೊಂಡಿದ್ದು, ಮೊದಲ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. ಒಟ್ಟು 4.46 ಕೋಟಿ ಮತದಾರರ ವಿವರ ಲಭ್ಯವಾಗಿದೆ. ಸೆಪ್ಟೆಂಬರ್ 23ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಅಕ್ಟೋಬರ್ 27ರಂದು ಅಂತಿಮ ಪಟ್ಟಿ ಪ್ರಕಟವಾಗಲಿದೆ.

Anbukumar Press Meet Live: ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ; ಕರಡು ಮತದಾರರ ಪಟ್ಟಿ ಬಿಡುಗಡೆ

ಕರ್ನಾಟಕ ಚುನಾವಣಾಧಿಕಾರಿ ವಿ ಅನ್ಬುಕುಮಾರ್ ಸುದ್ದಿಗೊಷ್ಠಿ ನೇರ ಪ್ರಸಾರ: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ, ಮುಖ್ಯ ಚುನಾವಣಾ ಆಯುಕ್ತ ವಿ. ಅನ್ಬುಕುಮಾರ್ ಅವರು ಮೊದಲ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಪಟ್ಟಿಯು ರಾಜ್ಯದ ಮತದಾರರ ಪಟ್ಟಿಯಲ್ಲಿ ಯಾರು ಉಳಿಯುತ್ತಾರೆ ಮತ್ತು ಯಾರು ಹೊರಗುಳಿಯುತ್ತಾರೆ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಅನ್ಬುಕುಮಾರ್ ಸದ್ಯ ಸುದ್ದಿಗೋಷ್ಠಿ ನಡೆಸಿ ಪ್ರಮುಖ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: ಮತದಾರರಿಗೆ ನೋಟಿಸ್ ಸಾಧ್ಯತೆ

ರಾಜ್ಯದಲ್ಲಿ ಇಂದು ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿಯನ್ನು ಮುಖ್ಯ ಚುನಾವಣಾ ಆಯುಕ್ತ ವಿ. ಅನ್ಬುಕುಮಾರ್ ನೇತೃತ್ವದಲ್ಲಿ ಪ್ರಕಟಿಸಲಾಗುತ್ತಿದೆ. ಪಟ್ಟಿಯಿಂದ ಹೆಸರು ಕಾಣೆಯಾದ ಅಥವಾ ಸೇರಿರುವ ಬಗ್ಗೆ ಸ್ಪಷ್ಟತೆ ಸಿಗಲಿದ್ದು, ಲಕ್ಷಾಂತರ ಮತದಾರರಿಗೆ ಚುನಾವಣಾ ನೋಂದಣಿ ಅಧಿಕಾರಿಗಳು (ERO) ನೋಟಿಸ್ ನೀಡಲಿದ್ದಾರೆ. ಆಗಸ್ಟ್ 27 ರಿಂದ ನೋಟಿಸ್ ನೀಡಲು ಸಿದ್ಧತೆ ನಡೆದಿದ್ದು, ಆಕ್ಷೇಪಣೆ ಮತ್ತು ತಿದ್ದುಪಡಿಗೆ ಅವಕಾಶವಿದೆ.

ಕರ್ನಾಟಕದ ಮತದಾರರ ಪಟ್ಟಿಯಲ್ಲಿ 11 ವಿದೇಶಿಗರು: ಚುನಾವಣಾ ಅಧಿಕಾರಿಗಳಿಂದ ಪರಿಶೀಲನೆ

ಕರ್ನಾಟಕದ ಮತದಾರರ ಗುರುತಿನ ಚೀಟಿ (EPIC) ಹಾಗೂ ಮತದಾನದ ಹಕ್ಕು ಹೊಂದಿರುವ 11 ವಿದೇಶಿ ಪ್ರಜೆಗಳ ಕುರಿತು ವಿದೇಶಿಗರ ನೋಂದಣಿ ಕಚೇರಿ (FRO) ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಮಾಹಿತಿ ಕೇಳಿದೆ. ಎಸ್‌ಐಆರ್‌ ಪ್ರಕ್ರಿಯೆ ನಡುವೆಯೇ ಈ ಪ್ರಕರಣಗಳು ಅಧಿಕಾರಿಗಳ ಗಮನ ಸೆಳೆದಿವೆ.

SIR: ಕರ್ನಾಟಕದ 43.8 ಲಕ್ಷ ಮತದಾರರಿಗೆ ಶಾಕ್; ಆಯೋಗದಿಂದ ಶೀಘ್ರದಲ್ಲೇ ಬರಲಿದೆ ನೋಟಿಸ್!

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಕರ್ನಾಟಕದಲ್ಲಿ ಮತದಾರರ ಪಟ್ಟಿ ಸರಿಪಡಿಸಲು ಕೇಂದ್ರ ಚುನಾವಣಾ ಆಯೋಗವು ಸಿದ್ಧತೆ ನಡೆಸಿದ್ದು, ರಾಜ್ಯದ 43.8 ಲಕ್ಷ ಮತದಾರರಿಗೆ ಶೀಘ್ರವೇ ನೋಟಿಸ್ ಜಾರಿಯಾಗಲಿದೆ. ಆಗಸ್ಟ್ 24 ರಿಂದ ಆರಂಭವಾಗಲಿರುವ ಈ ವಿಶೇಷ ಪರಿಷ್ಕರಣೆಯಲ್ಲಿ ಬೆಂಗಳೂರಿನಲ್ಲೇ ಸುಮಾರು 24 ಲಕ್ಷ ಜನರಿಗೆ ನೋಟಿಸ್ ತಲುಪಲಿದೆ.

SIR ಎಫೆಕ್ಟ್: ಬೆಂಗಳೂರಿನ 25 ವಿಧಾನಸಭಾ ಕ್ಷೇತ್ರಗಳು ಡೇಂಜರ್ ಝೋನ್​ನಲ್ಲಿ! 5 ಕ್ಷೇತ್ರಗಳ ಸೆ 50 ಮತದಾರರ ಹೆಸರು ಡಿಲೀಟ್ ಸಾಧ್ಯತೆ

ಬೆಂಗಳೂರಿನ 25 ವಿಧಾನಸಭಾ ಕ್ಷೇತ್ರಗಳು SIR ಪ್ರಕ್ರಿಯೆಯಲ್ಲಿ ಡೇಂಜರ್ ಝೋನ್‌ನಲ್ಲಿವೆ ಎನ್ನಲಾಗಿದೆ. ಈ ಕ್ಷೇತ್ರಗಳಲ್ಲಿ ಶೇ 40ರಿಂದ 50ಕ್ಕಿಂತ ಹೆಚ್ಚು ಮತದಾರರ ಹೆಸರುಗಳು ಡಿಲೀಟ್ ಆಗುವ ಸಾಧ್ಯತೆ ಇದೆ. ಐದು ಕ್ಷೇತ್ರಗಳಲ್ಲಿ ಶೇ 50ಕ್ಕಿಂತಲೂ ಹೆಚ್ಚು ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಆ ಕ್ಷೇತ್ರಗಳ ವಿವರ ಇಲ್ಲಿದೆ.

ರಾಜ್ಯದಲ್ಲಿ 1.08 ಕೋಟಿ ಮತದಾರರಿಗೆ ಕೊಕ್? SIR ಮೊದಲ ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಸಾಧ್ಯತೆ

ರಾಜ್ಯದಲ್ಲಿ ಜೂನ್ 30ರಿಂದ ಆರಂಭವಾಗಿದ್ದ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮನೆ-ಮನೆ ಭೇಟಿ ಕಾರ್ಯ ಮುಕ್ತಾಯಗೊಂಡಿದೆ. 1,08,31,945 ASDDO ಮತದಾರರು ಪತ್ತೆಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಮೊದಲ ಹಂತದಲ್ಲಿ 1.08 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇದೆ. ಆಗಸ್ಟ್ 24ರಂದು ಮೊದಲ ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ.

ಕರ್ನಾಟಕದಲ್ಲಿ ಕೋಟಿ ದಾಟಿದ ASDDO ವೋಟರ್ಸ್: ಡೇಂಜರ್ ಝೋನ್​​​​ನಲ್ಲಿ 1.8 ಕೋಟಿ ಮತದಾರರು!

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್​​​​ಐಆರ್) ಪ್ರಕ್ರಿಯೆ ಕರ್ನಾಟಕದಲ್ಲಿ ಅಂತಿಮ ಹಂತ ತಲುಪ್ಪಿದ್ದು, ಈವರೆಗೆ ಕರ್ನಾಟಕದಲ್ಲಿ 1.8 ಕೋಟಿ ಮತದಾರರನ್ನು ಎಎಸ್​​​​​​​​​​​​ಡಿಡಿಓ ವರ್ಗೀಕರಿಸಲಾಗಿದೆ. ಅಂದ್ರೆ 1.8 ಕೋಟಿ ಜನರು ಮತದಾರರ ಪಟ್ಟಿಯಿಂದ ಔಟ್ ಆಗಲಿದ್ದಾರೆ. ಇನ್ನು ಈ ಬಗ್ಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್, ಪ್ರಕಾಶ್ ರಾಜ್ ಆಕ್ಷೇಪಕ್ಕೆ ಆಯೋಗ ಉತ್ತರ

Prakash Raj Voting right: ರಾಜ್ಯದಾದ್ಯಂತ ಎಸ್​​ಐಆರ್ ಪ್ರಕ್ರಿಯೆ ಜಾರಿಯಲ್ಲಿದ್ದು, ಅಕ್ರಮ, ಗೊಂದಲಭರಿತ ಮತದಾರರ ಹೆಸರನ್ನು ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ. ಬೆಂಗಳೂರಿನಲ್ಲಿ ಸುಮಾರು 65 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಡಿಲೀಟ್ ಆಗಿದೆ. ನಟ ಪ್ರಕಾಶ್ ರಾಜ್ ನಿನ್ನೆ (ಆಗಸ್ಟ್ 11) ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ತಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ ಎಂದು ಆಕ್ಷೇಪಿಸಿದ್ದರು.

ಎಸ್​​ಐಆರ್ ಶಾಕ್: ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರೈ ಹೆಸರು ಡಿಲೀಟ್

Prakash Raj vote: ಚುನಾವಣೆಯನ್ನು ಪಾರದರ್ಶಕವಾಗಿಸುವ ಉದ್ದೇಶದಿಂದ ಅಕ್ರಮ ಮತದಾರು, ಒಂದಕ್ಕಿಂತಲೂ ಹೆಚ್ಚು ಕ್ಷೇತ್ರಗಳಲ್ಲಿ ಮತ ಹೊಂದಿರುವವರು ಇನ್ನೂ ಹಲವು ಸಮಸ್ಯಾತ್ಮಕ ಮತದಾರರನ್ನು ಗುರುತಿಸಿ ಎಸ್​​ಐಆರ್ ಪ್ರಕ್ರಿಯೆ ಮೂಲಕ ಸ್ವಚ್ಛ ಮಾಡಲಾಗುತ್ತಿದೆ. ಇದೀಗ ಖ್ಯಾತ ನಟ ಪ್ರಕಾಶ್ ರೈ ಅವರ ವೋಟನ್ನು ಸಹ ಎಸ್​​ಐಆರ್ ಪ್ರಕ್ರಿಯೆ ಅಡಿಯಲ್ಲಿ ಡಿಲೀಟ್ ಮಾಡಲಾಗಿದೆ. ಈ ಬಗ್ಗೆ ಇನ್​​ಸ್ಟಾಗ್ರಾಂನಲ್ಲಿ ಖುದ್ದು ಪ್ರಕಾಶ್ ರೈ ಮಾಹಿತಿ ಹಂಚಿಕೊಂಡಿದ್ದಾರೆ.