AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SS Rajamouli

SS Rajamouli

ರಾಜಮೌಳಿ

ಎಸ್. ಎಸ್. ರಾಜಮೌಳಿ ಪೂರ್ಣ ಹೆಸರು ಕೊಡೂರಿ ಶ್ರೀಶೈಲ ಶ್ರೀ ರಾಜಮೌಳಿ. ಇವರು ಜನಿಸಿದ್ದು1973ರ  ಅಕ್ಟೋಬರ್ 10ರಂದು. ಕರ್ನಾಟಕದ ರಾಯಚೂರಿನ ಮಾನ್ವಿಯಲ್ಲಿ ಅವರು ಜನಿಸಿದರು. ಅವರದ್ದು ತೆಲುಗು ಕುಟುಂಬ. ಅವರ ತಂದೆ ಪ್ರಸಿದ್ಧ ಚಿತ್ರಕಥೆಗಾರ ವಿ. ವಿಜಯೇಂದ್ರ ಪ್ರಸಾದ್ ಮತ್ತು ಅವರ ತಾಯಿ ರಾಜ ನಂದಿನಿ. ರಾಜಮೌಳಿ ರಮಾ ಅವರನ್ನು ವಿವಾಹವಾದರು. ಈ ದಂಪತಿಗೆ ಇಬ್ಬರು ದತ್ತು ಮಕ್ಕಳಿದ್ದಾರೆ. ರಾಜಮೌಳಿ ಭವ್ಯವಾಗಿ ಸಿನಿಮಾ ನಿರ್ದೇಶಿಸಲು ಹೆಸರುವಾಸಿಯಾಗಿದ್ದಾರೆ. ‘ಮಗಧೀರ’, ‘ಬಾಹುಬಲಿ’, ‘ಬಾಹುಬಲಿ 2, ‘ಆರ್​ಆರ್​​’ ರೀತಿಯ ಸಿನಿಮಾಗಳನ್ನು ಅವರು ನೀಡಿದ್ದಾರೆ. ಈಗ ಅವರು ‘ವಾರಣಾಸಿ’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ 2027ರಲ್ಲಿ ತೆರೆಗೆ ಬರಲಿದೆ. ಮಹೇಶ್ ಬಾಬು ಈ ಚಿತ್ರಕ್ಕೆ ಹೀರೋ ಆದರೆ, ಪ್ರಿಯಾಂಕಾ ಚೋಪ್ರಾ ಅವರು ನಾಯಕಿ.

ಇನ್ನೂ ಹೆಚ್ಚು ಓದಿ

‘ಜನ ನಾಯಗನ್’ ಬೆನ್ನಲ್ಲೇ ‘ವಾರಣಾಸಿ’ ಚಿತ್ರಕ್ಕೂ ಲೀಕ್ ಕಾಟ; ಪ್ರಮುಖ ದೃಶ್ಯವೇ ಸೋರಿಕೆ

‘ಜನ ನಾಯಗನ್’ ಬಳಿಕ ಎಸ್.ಎಸ್. ರಾಜಮೌಳಿ ನಿರ್ದೇಶನದ ‘ವಾರಣಾಸಿ’ ಚಿತ್ರಕ್ಕೂ ಲೀಕ್ ಸಮಸ್ಯೆ ಎದುರಾಗಿದೆ. ಚಿತ್ರೀಕರಣ ನಡೆಯುವಾಗ ಪ್ರಮುಖ ಆಕ್ಷನ್ ದೃಶ್ಯಗಳು ಹಾಗೂ ವಿದೇಶದಲ್ಲಿ ಶೂಟ್ ಮಾಡಿದ ದೃಶ್ಯಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿವೆ. ಇದರಿಂದ ಚಿತ್ರದ ಕುರಿತ ಗೌಪ್ಯತೆ ಹಾಳಾಗಿದ್ದು, ಅಭಿಮಾನಿಗಳ ನಿರೀಕ್ಷೆ ಕಡಿಮೆಯಾಗಬಹುದೆಂದು ರಾಜಮೌಳಿ ಆತಂಕ ವ್ಯಕ್ತಪಡಿಸಿದ್ದಾರೆ.

‘ಧುರಂಧರ್ 2’ ಹಣ ಮಾಡಿದ್ದು ನೋಡಿ ಬದಲಾದ ರಾಜಮೌಳಿ; ಎರಡು ಭಾಗದಲ್ಲಿ ‘ವಾರಣಾಸಿ’

‘ಧುರಂಧರ್ 2’ ಸಿನೆಮಾದ ಭಾರಿ ಯಶಸ್ಸು ರಾಜಮೌಳಿ ಅವರ ನಿರ್ಧಾರವನ್ನು ಬದಲಿಸಿದೆ. ಈ ಹಿಂದೆ ‘ವಾರಣಾಸಿ’ ಚಿತ್ರವನ್ನು ಒಂದೇ ಭಾಗದಲ್ಲಿ ತೆರೆಗೆ ತರಲು ರಾಜಮೌಳಿ ಯೋಜಿಸಿದ್ದರು. ಆದರೆ, ‘ಧುರಂಧರ್ 2’ ಹಣ ಮಾಡಿದ ರೀತಿಯನ್ನು ನೋಡಿ, ಈಗ ‘ವಾರಣಾಸಿ’ಯನ್ನು ಎರಡು ಭಾಗಗಳಲ್ಲಿ ನಿರ್ಮಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ.

ವಾರಣಾಸಿಯನ್ನೇ ಮರುಸೃಷ್ಟಿಸಿದ ರಾಜಮೌಳಿ; ಫೋಟೋ ವೈರಲ್

SS Rajamouli: ಮಹೇಶ್ ಬಾಬು-ರಾಜಮೌಳಿ ಸಿನಿಮಾದ ವಾರಣಾಸಿ ಸೆಟ್ ಫೋಟೋಗಳು ಲೀಕ್ ಆಗಿವೆ. ನಿಜವಾದ ವಾರಣಾಸಿಯಲ್ಲಿ ಶೂಟಿಂಗ್ ಕಷ್ಟವಾದ್ದರಿಂದ ರಾಜಮೌಳಿ ಹೈದರಾಬಾದ್‌ನಲ್ಲಿ ಭವ್ಯವಾದ ಸೆಟ್ ಮರುಸೃಷ್ಟಿಸಿದ್ದಾರೆ. ಹಿಂದಿನ ಲೀಕ್‌ಗಳಿಂದಾಗಿ ಕಠಿಣ ನಿಯಮಗಳ ನಡುವೆಯೂ ಫೋಟೋಗಳು ವೈರಲ್ ಆಗಿದ್ದು, ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಿಸಿವೆ.

‘ವಾರಣಾಸಿ’ ಸೆಟ್ ಸೇರಲು ರೆಡಿ ಆದ ಸುದೀಪ್​; ಯಾವಾಗ, ಎಷ್ಟು ದಿನ?

ಎಸ್.ಎಸ್. ರಾಜಮೌಳಿ ನಿರ್ದೇಶನದ 'ವಾರಣಾಸಿ' (SSMB29) ಚಿತ್ರಕ್ಕೆ ಕಿಚ್ಚ ಸುದೀಪ್ ಸೇರಿಕೊಳ್ಳಲಿದ್ದಾರೆ ಎಂಬ ಸುದ್ದಿ ವೈರಲ್ ಆಗಿದೆ. ರಾಮಾಯಣ ಸ್ಫೂರ್ತಿಯ ಈ ಚಿತ್ರದಲ್ಲಿ ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ನಟಿಸುತ್ತಿದ್ದು, ಏಪ್ರಿಲ್‌ನಲ್ಲಿ ಸುದೀಪ್ 15 ದಿನಗಳ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ. ಇದನ್ನು ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಮುಖ ಮೂತಿ ನೋಡದೇ ಹೊಡೆದಾಡಿಕೊಂಡ ಮಹೇಶ್ ಬಾಬು, ರಾಜಮೌಳಿ? ಸಿನಿಮಾ ಸತ್ತುಹೋಯ್ತು ಎಂದ ಆರ್​ಜಿವಿ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಈ ವಿಡಿಯೋಗೆ ಜನರಿಂದ ಬಗೆಬಗೆಯ ಕಮೆಂಟ್ ಬಂದಿದೆ. ಟಾಲಿವುಡ್​ನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಸಿನಿಮಾ ಸತ್ತುಹೋಯ್ತು’ ಎಂಬ ಕ್ಯಾಪ್ಷನ್ ಜೊತೆ ಈ ವಿಡಿಯೋವನ್ನು ಅವರು ಶೇರ್ ಮಾಡಿದ್ದಾರೆ.

‘ವಾರಣಾಸಿ’ ಚಿತ್ರಕ್ಕಾಗಿ ಅತ್ಯಂತ ವೇಗದಲ್ಲಿ ಕೆಲಸ ಮಾಡುತ್ತಿದ್ದಾರೆ ರಾಜಮೌಳಿ

ಮಹೇಶ್ ಬಾಬು ಮತ್ತು ರಾಜಮೌಳಿ ಕಾಂಬಿನೇಷನ್‌ನ 'ವಾರಣಾಸಿ' ಚಿತ್ರ ಭಾರಿ ಕುತೂಹಲ ಮೂಡಿಸಿದೆ. ಶೇಕಡಾ 50ರಷ್ಟು ಚಿತ್ರೀಕರಣ ಮುಗಿದಿದ್ದು, 2026ರ ಜೂನ್‌ ವೇಳೆಗೆ ಪೂರ್ಣಗೊಳ್ಳಲಿದೆ. ಇದು ರಾಜಮೌಳಿಯ ವೃತ್ತಿಜೀವನದ ಅತ್ಯಂತ ಕಷ್ಟಕರವಾದ VFX ದೃಶ್ಯಗಳನ್ನು ಹೊಂದಿದ್ದು, ಏಪ್ರಿಲ್ 7, 2027ಕ್ಕೆ ಬಿಡುಗಡೆ ದಿನಾಂಕ ನಿಗದಿಯಾಗಿದೆ.

ಜಪನೀಸ್​ ಸ್ಟುಡಿಯೋಗಳ ಜೊತೆ ದೊಡ್ಡ ಡೀಲ್​​​ಗೆ ಮುಂದಾದ ರಾಜಮೌಳಿ

ನಿರ್ದೇಶಕ ರಾಜಮೌಳಿ 'ವಾರಣಾಸಿ' ಸಿನಿಮಾದ ಕೆಲಸಗಳ ನಡುವೆ ಜಪಾನಿ ಸ್ಟುಡಿಯೋಗಳೊಂದಿಗೆ ದೊಡ್ಡ ಒಪ್ಪಂದಕ್ಕೆ ಮುಂದಾಗಿದ್ದಾರೆ. 'ಆರ್ಆರ್ಆರ್' ಚಿತ್ರವನ್ನು ಅನಿಮೆ ರೂಪದಲ್ಲಿ ನಿರ್ಮಿಸಲು ಮಾತುಕತೆ ನಡೆಸಲಾಗುತ್ತಿದೆ. ಈ ಕುರಿತು ಅವರೇ ಖಚಿತಪಡಿಸಿದ್ದು, ಡೀಲ್ ಅಂತಿಮವಾದರೆ 'ಆರ್ಆರ್ಆರ್' ಅನಿಮೆ ಭಾಗವಾಗುವ ಸಾಧ್ಯತೆ ಇದೆ. ಮಹೇಶ್ ಬಾಬು ನಟನೆಯ 'ವಾರಣಾಸಿ' 2027ರಲ್ಲಿ ತೆರೆ ಕಾಣಲಿದೆ.

ತಾವೇ ಆರಂಭಿಸಿದ ಟ್ರೆಂಡ್ ಬಗ್ಗೆ ರಾಜಮೌಳಿಗೆ ರೇಜಿಗೆ; ದೊಡ್ಡ ನಿರ್ಧಾರಕ್ಕೆ ಬಂದ ನಿರ್ದೇಶಕ

ರಾಜಮೌಳಿ ತಾವೇ ಆರಂಭಿಸಿದ ಎರಡು ಭಾಗಗಳ ಸಿನಿಮಾ ಟ್ರೆಂಡ್‌ ಬಗ್ಗೆ ರೇಜಿಗೆಗೊಂಡು ದೊಡ್ಡ ನಿರ್ಧಾರಕ್ಕೆ ಬಂದಿದ್ದಾರೆ. ಮಹೇಶ್ ಬಾಬು ನಟನೆಯ 'ವಾರಣಾಸಿ' ಚಿತ್ರವನ್ನು ಎರಡು ಭಾಗಗಳಲ್ಲಿ ಮಾಡುವ ಬದಲು, ಒಂದೇ ಭಾಗದಲ್ಲಿ ತೆರೆಗೆ ತರಲು ನಿರ್ಧರಿಸಿದ್ದಾರೆ. ಪ್ರೇಕ್ಷಕರು ಎರಡು ಭಾಗದ ಸಿನಿಮಾಗಳ ಬಗ್ಗೆ ಅಸಮಾಧಾನಗೊಂಡಿದ್ದು, ಅರ್ಥವಿಲ್ಲದಂತೆ ಆಗಿರುವ ಈ ಟ್ರೆಂಡ್‌ಗೆ ಬ್ರೇಕ್ ಹಾಕಲು ರಾಜಮೌಳಿ ನಿರ್ಧರಿಸಿದ್ದಾರೆ.

ಸಿನಿಮಾ ಪ್ರಚಾರ ಹೀಗೂ ಮಾಡ್ತಾರಾ? ರಾಜಮೌಳಿ ಬುದ್ಧಿವಂತಿಕೆ ಮೆಚ್ಚಲೇಬೇಕು

ರಾಜಮೌಳಿ ತಮ್ಮ 'ವಾರಣಾಸಿ' ಚಿತ್ರದ ಪ್ರಚಾರಕ್ಕೆ ವಿಶಿಷ್ಟ ತಂತ್ರ ಬಳಸಿದ್ದಾರೆ. ಸಿನಿಮಾ ಹೆಸರಿಲ್ಲದೆ, ಕೇವಲ ಬಿಲ್ ಬೋರ್ಡ್‌ಗಳಲ್ಲಿ ರಿಲೀಸ್ ದಿನಾಂಕ 'ಏಪ್ರಿಲ್ 7, 2027' ಘೋಷಿಸುವ ಮೂಲಕ ದೇಶಾದ್ಯಂತ ದೊಡ್ಡ ಮಟ್ಟದ ಚರ್ಚೆ ಹುಟ್ಟುಹಾಕಿದ್ದಾರೆ. ಮಹೇಶ್ ಬಾಬು, ಪ್ರಿಯಾಂಕಾ ಹಾಗೂ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಈ ಬಹುಕೋಟಿ ವೆಚ್ಚದ ಸಿನಿಮಾ.

‘ವಾರಣಾಸಿ’ ಸಿನಿಮಾದಲ್ಲಿ ಕನ್ನಡದ ಖ್ಯಾತ ಹೀರೋಗೆ ಅವಕಾಶ ಕೊಟ್ಟ ರಾಜಮೌಳಿ

ರಾಜಮೌಳಿ ನಿರ್ದೇಶನದ 'ವಾರಣಾಸಿ' ಸಿನಿಮಾ ಮಹೇಶ್ ಬಾಬು ನಾಯಕತ್ವದಲ್ಲಿ 2027ರಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಕನ್ನಡದ ಹೀರೋ ಪ್ರಮುಖ ಪಾತ್ರದಲ್ಲಿ, ಮಹೇಶ್ ಬಾಬು ಅವರ ತಂದೆಯಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಪ್ರಿಯಾಂಕಾ ಚೋಪ್ರಾ ಕೂಡ ನಟಿಸುತ್ತಿರುವ ಈ ಬಹುಭಾಷಾ ಚಿತ್ರವು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ದೇವರ ಮೇಲೆ ನಂಬಿಕೆ ಇಲ್ಲದಿದ್ದರೂ ರಾಜಮೌಳಿಗೆ ದೊಡ್ಡ ಗೆಲುವು ಸಿಕ್ಕಿದೆ: ಆರ್​ಜಿವಿ ಬೆಂಬಲ

‘ವಾರಾಣಸಿ’ ಸಿನಿಮಾದ ನಿರ್ದೇಶಕ ರಾಜಮೌಳಿ ಅವರು ದೇವರ ಬಗ್ಗೆ ನೀಡಿದ ಹೇಳಿಕೆಯಿಂದ ವಿವಾದ ಶುರುವಾಗಿದೆ. ಈ ವಿಚಾರದಲ್ಲಿ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ರಾಜಮೌಳಿ ಪರವಾಗಿ ವಾದ ಮುಂದಿಟ್ಟಿದ್ದಾರೆ. ದೇವರನ್ನು ನಂಬದೇ ಇರುವ ವಿಷಯಕ್ಕೆ ಸಂಬಂಧಿಸಿದಂತೆ ಅವರು ತಮ್ಮ ಅಭಿಪ್ರಾಯವನ್ನು ದೀರ್ಘವಾಗಿ ತಿಳಿಸಿದ್ದಾರೆ.

ಗ್ರ್ಯಾಂಡ್ ಟೈಟಲ್ ಲಾಂಚ್ ಈವೆಂಟ್ ವ್ಯರ್ಥ; ಬದಲಾಗಲಿದೆ ‘ವಾರಣಾಸಿ’ ಟೈಟಲ್?

ಎಸ್​ಎಸ್ ರಾಜಮೌಳಿ ಅವರ 'ವಾರಣಾಸಿ' ಸಿನಿಮಾದ ಶೀರ್ಷಿಕೆ ವಿವಾದ ಸೃಷ್ಟಿ ಮಾಡಿದೆ. ಸಿಎಚ್ ಸುಬ್ಬಾ ರೆಡ್ಡಿ 'ವಾರಣಾಸಿ' (Vaaranasi) ಟೈಟಲ್ ನೋಂದಾಯಿಸಿದ್ದರೆ, ರಾಜಮೌಳಿ 'ವಾರಣಾಸಿ' (Varanasi) ಟೈಟಲ್ ನೋಂದಾಯಿಸಿದ್ದಾರೆ. ಶೀರ್ಷಿಕೆ ಬದಲಾದರೆ ₹27 ಕೋಟಿ ನಷ್ಟವಾಗುವ ಸಾಧ್ಯತೆಯಿದೆ. ಈಗ ಈ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಮಾತುಕತೆ ನಡೆಯುತ್ತಿದೆ.

ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
‘ಮಗನೇ ಈಗಲೂ ನನಗೆ ಸಿನಿಮಾ ಅರ್ಥ ಆಗಿಲ್ಲ ಅಂತಿದ್ರು’; ವಿನೋದ್
‘ಮಗನೇ ಈಗಲೂ ನನಗೆ ಸಿನಿಮಾ ಅರ್ಥ ಆಗಿಲ್ಲ ಅಂತಿದ್ರು’; ವಿನೋದ್
ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?
ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ
ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ
‘ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು’: ನಟ ವಿನೋದ್ ಪ್ರಭಾಕರ್
‘ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು’: ನಟ ವಿನೋದ್ ಪ್ರಭಾಕರ್