SS Rajamouli
ರಾಜಮೌಳಿ
ಎಸ್. ಎಸ್. ರಾಜಮೌಳಿ ಪೂರ್ಣ ಹೆಸರು ಕೊಡೂರಿ ಶ್ರೀಶೈಲ ಶ್ರೀ ರಾಜಮೌಳಿ. ಇವರು ಜನಿಸಿದ್ದು1973ರ ಅಕ್ಟೋಬರ್ 10ರಂದು. ಕರ್ನಾಟಕದ ರಾಯಚೂರಿನ ಮಾನ್ವಿಯಲ್ಲಿ ಅವರು ಜನಿಸಿದರು. ಅವರದ್ದು ತೆಲುಗು ಕುಟುಂಬ. ಅವರ ತಂದೆ ಪ್ರಸಿದ್ಧ ಚಿತ್ರಕಥೆಗಾರ ವಿ. ವಿಜಯೇಂದ್ರ ಪ್ರಸಾದ್ ಮತ್ತು ಅವರ ತಾಯಿ ರಾಜ ನಂದಿನಿ. ರಾಜಮೌಳಿ ರಮಾ ಅವರನ್ನು ವಿವಾಹವಾದರು. ಈ ದಂಪತಿಗೆ ಇಬ್ಬರು ದತ್ತು ಮಕ್ಕಳಿದ್ದಾರೆ. ರಾಜಮೌಳಿ ಭವ್ಯವಾಗಿ ಸಿನಿಮಾ ನಿರ್ದೇಶಿಸಲು ಹೆಸರುವಾಸಿಯಾಗಿದ್ದಾರೆ. ‘ಮಗಧೀರ’, ‘ಬಾಹುಬಲಿ’, ‘ಬಾಹುಬಲಿ 2, ‘ಆರ್ಆರ್’ ರೀತಿಯ ಸಿನಿಮಾಗಳನ್ನು ಅವರು ನೀಡಿದ್ದಾರೆ. ಈಗ ಅವರು ‘ವಾರಣಾಸಿ’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ 2027ರಲ್ಲಿ ತೆರೆಗೆ ಬರಲಿದೆ. ಮಹೇಶ್ ಬಾಬು ಈ ಚಿತ್ರಕ್ಕೆ ಹೀರೋ ಆದರೆ, ಪ್ರಿಯಾಂಕಾ ಚೋಪ್ರಾ ಅವರು ನಾಯಕಿ.
ಬಿಗ್ ಅಪ್ಡೇಟ್: ‘ಬಾಹುಬಲಿ 3’ ಬರೋದು ಪಕ್ಕಾ; ರಿವೀಲ್ ಮಾಡಿದ ಪ್ರಭಾಸ್-ರಾನಾ ಜೋಡಿ
'ಬಾಹುಬಲಿ' ಚಿತ್ರಗಳ ಮೂರನೇ ಭಾಗದ ಕುರಿತಾದ ಅಭಿಮಾನಿಗಳ ಪ್ರಶ್ನೆಗೆ ಈಗ ಅಧಿಕೃತ ಉತ್ತರ ಸಿಕ್ಕಿದೆ. ಪ್ರಭಾಸ್, ರಾಣಾ, ಅನುಷ್ಕಾ ಶೆಟ್ಟಿ ಅವರು ಸ್ವತಃ 'ಬಾಹುಬಲಿ 3' ಖಚಿತಪಡಿಸಿದ್ದಾರೆ. ಇವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ‘ಪರಂಪರೆ ಮುಂದುವರಿಯುತ್ತದೆ’ ಎಂಬ ಸಂದೇಶ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಚಿತ್ರ ಯಾವಾಗ ಸೆಟ್ಟೇರಲಿದೆ ಎಂಬ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.
- Rajesh Duggumane
- Updated on: Jun 26, 2026
- 8:00 am
‘ವಾರಣಾಸಿ’ ದೃಶ್ಯಕ್ಕಾಗಿ ಮಹೇಶ್ ಬಾಬುಗೆ 100 ಟೇಕ್; ಸಿಟ್ಟು ಬಂದು ಪ್ಯಾಕಪ್ ಎಂದ ರಾಜಮೌಳಿ
ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರ ಕಠಿಣ ಕೆಲಸದ ಶೈಲಿಯನ್ನು ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ 'ವಾರಣಾಸಿ' ಚಿತ್ರೀಕರಣದ ಅನುಭವಗಳ ಮೂಲಕ ವಿವರಿಸಿದ್ದಾರೆ. ಒಂದು ನಿರ್ದಿಷ್ಟ ಶಾಟ್ಗಾಗಿ ಇಡೀ ದಿನ ಶೂಟಿಂಗ್ ನಡೆಸಿ, 100 ಟೇಕ್ಗಳನ್ನು ತೆಗೆದುಕೊಂಡ ಪ್ರಸಂಗವನ್ನು ಅವರು ಬಹಿರಂಗಪಡಿಸಿದ್ದಾರೆ. ಮಹೇಶ್ ಬಾಬು ಕೂಡ ಭಾಗಿಯಾಗಿದ್ದ ಈ ಘಟನೆ, ರಾಜಮೌಳಿ ಅವರ ಪರಿಪೂರ್ಣತೆ ಮತ್ತು ಚಿತ್ರದ ಮೇಲಿನ ಸಮರ್ಪಣೆಯನ್ನು ಎತ್ತಿ ತೋರಿಸುತ್ತದೆ.
- Rajesh Duggumane
- Updated on: Jun 25, 2026
- 12:33 pm
‘ವಾರಣಾಸಿ’ ಬಗ್ಗೆ ಬಾಲಿವುಡ್ ಮಂದಿಯ ಅಪಪ್ರಚಾರ; ಸಿನಿಮಾ ಮೂಲಕವೇ ಉತ್ತರಿಸುತ್ತಾರೆ ರಾಜಮೌಳಿ
ಮಹೇಶ್ ಬಾಬು-ರಾಜಮೌಳಿ ಕಾಂಬಿನೇಷನ್ನ 'ವಾರಣಾಸಿ' ಚಿತ್ರದ ಬಜೆಟ್ ಮತ್ತು ಒಟಿಟಿ ಡೀಲ್ ಬಗ್ಗೆ ಹರಿದಾಡುತ್ತಿರುವ ವದಂತಿಗಳು ಸುಳ್ಳು. ರಾಜಮೌಳಿಗೆ ಮಾರುಕಟ್ಟೆಯ ಪಲ್ಸ್ ಚೆನ್ನಾಗಿ ಗೊತ್ತಿದ್ದು, ಇದು ಭಾರತೀಯ ಮಾರುಕಟ್ಟೆ ಮಾತ್ರವಲ್ಲದೆ, ಜಾಗತಿಕ ಮಟ್ಟದಲ್ಲಿ ಸಿದ್ಧವಾಗುತ್ತಿರುವ ಸಿನಿಮಾ. ಪ್ರೀ-ರಿಲೀಸ್ ಬಿಸಿನೆಸ್ ಮೂಲಕವೇ ನಿರ್ಮಾಪಕರ ಹೂಡಿಕೆ ಸುರಕ್ಷಿತವಾಗಿದೆ ಎಂಬುದು ಅವರ ಲೆಕ್ಕಾಚಾರ.
- Rajesh Duggumane
- Updated on: Jun 16, 2026
- 7:06 am
‘ವಾರಣಾಸಿ’ ಸಿನಿಮಾದಲ್ಲಿ ರಾಮ-ಕುಂಭಕರ್ಣನ ಮಧ್ಯೆ 30 ನಿಮಿಷಗಳ ಫೈಟ್
ಎಸ್.ಎಸ್. ರಾಜಮೌಳಿ ನಿರ್ದೇಶನದ 'ವಾರಾಣಸಿ' ಚಿತ್ರದ ಕಥೆಯ ಬಗ್ಗೆ ವಿಜಯೇಂದ್ರ ಪ್ರಸಾದ್ ರೋಚಕ ಮಾಹಿತಿ ಹಂಚಿಕೊಂಡಿದ್ದಾರೆ. ರಾಮ ಮತ್ತು ಕುಂಭಕರ್ಣನ ನಡುವಿನ 30 ನಿಮಿಷಗಳ ಮಹಾ ಯುದ್ಧ ಈ ಚಿತ್ರದ ಹೈಲೈಟ್ ಆಗಲಿದೆ. ಮಹೇಶ್ ಬಾಬು ಶ್ರೀರಾಮನಾಗಿ ನಟಿಸಿದ್ದು, ಈ ಯುದ್ಧ ದೃಶ್ಯಕ್ಕಾಗಿ 60 ದಿನಗಳ ಕಾಲ ಚಿತ್ರೀಕರಣ ನಡೆದಿದೆ.
- Rajesh Duggumane
- Updated on: Jun 6, 2026
- 8:31 am
ರಾಜಮೌಳಿಯ ಐಮ್ಯಾಕ್ಸ್ ಥಿಯೇಟರ್ ಕನಸು ನನಸು ಮಾಡಿದ ನಟ ಮಹೇಶ್ ಬಾಬು
ದೃಶ್ಯ ವೈಭವ ಹಾಗೂ ಬಿಗ್ ಬಜೆಟ್ ಸಿನಿಮಾಗಳಿಗೆ ಹೆಸರಾಗಿರುವ ತೆಲುಗು ಚಿತ್ರರಂಗಕ್ಕೆ ಈ ಬೆಳವಣಿಗೆಯು ಬಹುದೊಡ್ಡ ಮೈಲಿಗಲ್ಲಾಗಿದೆ. ಪ್ರೇಕ್ಷಕರು ಇನ್ಮುಂದೆ ಜಾಗತಿಕ ಮಟ್ಟದ ಸಿನಿಮಾ ವೀಕ್ಷಣೆಯ ಅನುಭವವನ್ನು ಹೈದರಾಬಾದ್ನಲ್ಲೇ ಪಡೆಯಬಹುದಾಗಿದೆ ಎಂದು ಟಾಲಿವುಡ್ ಮಂದಿ ಖುಷಿಪಡುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..
- Madan Kumar
- Updated on: Jun 1, 2026
- 6:53 pm
‘ವಾರಣಾಸಿ’ ಸಿನಿಮಾಗೆ ಲೀಕ್ ಕಾಟ; ಭದ್ರತೆ ಹೆಚ್ಚಿಸಿದ ನಿರ್ದೇಶಕ ರಾಜಮೌಳಿ
ಈಗ ಲೀಕ್ ಆಗಿರುವ ಫೋಟೋದಲ್ಲಿ ಯಾವುದೇ ಕಲಾವಿದರು ಕಾಣಿಸಿಕೊಂಡಿಲ್ಲವಾದರೂ, ಚಿತ್ರದಲ್ಲಿ ಬಳಸಲಾಗುತ್ತಿರುವ ಬೃಹತ್ ಬ್ಲೂ-ಸ್ಕ್ರೀನ್ಗಳು ಈ ಸೀಕ್ವೆನ್ಸ್ಗೆ ಬೇಕಾದ ಹೈ-ಲೆವೆಲ್ ಗ್ರಾಫಿಕ್ಸ್ ಮತ್ತು ದೃಶ್ಯ ವೈಭವದ ಮುನ್ಸೂಚನೆಯನ್ನು ನೀಡುತ್ತಿವೆ. ಆದರೆ ಪದೇ ಪದೇ ಈ ರೀತಿ ಲೀಕ್ ಆಗುತ್ತಿರುವುದರಿಂದ ಸಿನಿಮಾದ ಹಲವು ಅಂಶಗಳು ಬಹಿರಂಗ ಆದಂತೆ ಆಗುತ್ತಿದೆ.
- Madan Kumar
- Updated on: May 31, 2026
- 12:42 pm
‘ವಾರಣಾಸಿ’ ಶೂಟಿಂಗ್ಗೆ 150 ಟ್ಯಾಂಕರ್ ನೀರು ಕೇಳಿದ ರಾಜಮೌಳಿ; ಶಾಕ್ ಕೊಟ್ಟ ಅಧಿಕಾರಿಗಳು
ರಾಜಮೌಳಿ ನಿರ್ದೇಶನದ 'ವಾರಣಾಸಿ' ಚಿತ್ರದ ಶೂಟಿಂಗ್ ನೀರಿಲ್ಲದೆ ಸ್ಥಗಿತಗೊಂಡಿದೆ. ಹೈದರಾಬಾದ್ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಸಮುದ್ರದ ಸೆಟ್ ಹಾಕಲು 150 ಟ್ಯಾಂಕರ್ ನೀರು ಕೇಳಿದ್ದ ಮನವಿಯನ್ನು ಜಲ ಮಂಡಳಿ ತಿರಸ್ಕರಿಸಿದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಮಹೇಶ್ ಬಾಬು ನಟನೆಯ ಚಿತ್ರದ ರಿಲೀಸ್ ಮುಂದಕ್ಕೆ ಹೋಗುವ ಭೀತಿ ಅಭಿಮಾನಿಗಳನ್ನು ಕಾಡುತ್ತಿದೆ.
- Rajesh Duggumane
- Updated on: May 4, 2026
- 9:42 am
‘ಜನ ನಾಯಗನ್’ ಬೆನ್ನಲ್ಲೇ ‘ವಾರಣಾಸಿ’ ಚಿತ್ರಕ್ಕೂ ಲೀಕ್ ಕಾಟ; ಪ್ರಮುಖ ದೃಶ್ಯವೇ ಸೋರಿಕೆ
‘ಜನ ನಾಯಗನ್’ ಬಳಿಕ ಎಸ್.ಎಸ್. ರಾಜಮೌಳಿ ನಿರ್ದೇಶನದ ‘ವಾರಣಾಸಿ’ ಚಿತ್ರಕ್ಕೂ ಲೀಕ್ ಸಮಸ್ಯೆ ಎದುರಾಗಿದೆ. ಚಿತ್ರೀಕರಣ ನಡೆಯುವಾಗ ಪ್ರಮುಖ ಆಕ್ಷನ್ ದೃಶ್ಯಗಳು ಹಾಗೂ ವಿದೇಶದಲ್ಲಿ ಶೂಟ್ ಮಾಡಿದ ದೃಶ್ಯಗಳು ಆನ್ಲೈನ್ನಲ್ಲಿ ಸೋರಿಕೆಯಾಗಿವೆ. ಇದರಿಂದ ಚಿತ್ರದ ಕುರಿತ ಗೌಪ್ಯತೆ ಹಾಳಾಗಿದ್ದು, ಅಭಿಮಾನಿಗಳ ನಿರೀಕ್ಷೆ ಕಡಿಮೆಯಾಗಬಹುದೆಂದು ರಾಜಮೌಳಿ ಆತಂಕ ವ್ಯಕ್ತಪಡಿಸಿದ್ದಾರೆ.
- Rajesh Duggumane
- Updated on: Apr 14, 2026
- 7:09 am
‘ಧುರಂಧರ್ 2’ ಹಣ ಮಾಡಿದ್ದು ನೋಡಿ ಬದಲಾದ ರಾಜಮೌಳಿ; ಎರಡು ಭಾಗದಲ್ಲಿ ‘ವಾರಣಾಸಿ’
‘ಧುರಂಧರ್ 2’ ಸಿನೆಮಾದ ಭಾರಿ ಯಶಸ್ಸು ರಾಜಮೌಳಿ ಅವರ ನಿರ್ಧಾರವನ್ನು ಬದಲಿಸಿದೆ. ಈ ಹಿಂದೆ ‘ವಾರಣಾಸಿ’ ಚಿತ್ರವನ್ನು ಒಂದೇ ಭಾಗದಲ್ಲಿ ತೆರೆಗೆ ತರಲು ರಾಜಮೌಳಿ ಯೋಜಿಸಿದ್ದರು. ಆದರೆ, ‘ಧುರಂಧರ್ 2’ ಹಣ ಮಾಡಿದ ರೀತಿಯನ್ನು ನೋಡಿ, ಈಗ ‘ವಾರಣಾಸಿ’ಯನ್ನು ಎರಡು ಭಾಗಗಳಲ್ಲಿ ನಿರ್ಮಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ.
- Rajesh Duggumane
- Updated on: Mar 28, 2026
- 7:40 am
ವಾರಣಾಸಿಯನ್ನೇ ಮರುಸೃಷ್ಟಿಸಿದ ರಾಜಮೌಳಿ; ಫೋಟೋ ವೈರಲ್
SS Rajamouli: ಮಹೇಶ್ ಬಾಬು-ರಾಜಮೌಳಿ ಸಿನಿಮಾದ ವಾರಣಾಸಿ ಸೆಟ್ ಫೋಟೋಗಳು ಲೀಕ್ ಆಗಿವೆ. ನಿಜವಾದ ವಾರಣಾಸಿಯಲ್ಲಿ ಶೂಟಿಂಗ್ ಕಷ್ಟವಾದ್ದರಿಂದ ರಾಜಮೌಳಿ ಹೈದರಾಬಾದ್ನಲ್ಲಿ ಭವ್ಯವಾದ ಸೆಟ್ ಮರುಸೃಷ್ಟಿಸಿದ್ದಾರೆ. ಹಿಂದಿನ ಲೀಕ್ಗಳಿಂದಾಗಿ ಕಠಿಣ ನಿಯಮಗಳ ನಡುವೆಯೂ ಫೋಟೋಗಳು ವೈರಲ್ ಆಗಿದ್ದು, ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಿಸಿವೆ.
- Rajesh Duggumane
- Updated on: Mar 25, 2026
- 3:03 pm
‘ವಾರಣಾಸಿ’ ಸೆಟ್ ಸೇರಲು ರೆಡಿ ಆದ ಸುದೀಪ್; ಯಾವಾಗ, ಎಷ್ಟು ದಿನ?
ಎಸ್.ಎಸ್. ರಾಜಮೌಳಿ ನಿರ್ದೇಶನದ 'ವಾರಣಾಸಿ' (SSMB29) ಚಿತ್ರಕ್ಕೆ ಕಿಚ್ಚ ಸುದೀಪ್ ಸೇರಿಕೊಳ್ಳಲಿದ್ದಾರೆ ಎಂಬ ಸುದ್ದಿ ವೈರಲ್ ಆಗಿದೆ. ರಾಮಾಯಣ ಸ್ಫೂರ್ತಿಯ ಈ ಚಿತ್ರದಲ್ಲಿ ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ನಟಿಸುತ್ತಿದ್ದು, ಏಪ್ರಿಲ್ನಲ್ಲಿ ಸುದೀಪ್ 15 ದಿನಗಳ ಶೂಟಿಂಗ್ನಲ್ಲಿ ಭಾಗಿಯಾಗಲಿದ್ದಾರೆ. ಇದನ್ನು ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.
- Rajesh Duggumane
- Updated on: Mar 14, 2026
- 7:03 am
ಮುಖ ಮೂತಿ ನೋಡದೇ ಹೊಡೆದಾಡಿಕೊಂಡ ಮಹೇಶ್ ಬಾಬು, ರಾಜಮೌಳಿ? ಸಿನಿಮಾ ಸತ್ತುಹೋಯ್ತು ಎಂದ ಆರ್ಜಿವಿ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಈ ವಿಡಿಯೋಗೆ ಜನರಿಂದ ಬಗೆಬಗೆಯ ಕಮೆಂಟ್ ಬಂದಿದೆ. ಟಾಲಿವುಡ್ನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಸಿನಿಮಾ ಸತ್ತುಹೋಯ್ತು’ ಎಂಬ ಕ್ಯಾಪ್ಷನ್ ಜೊತೆ ಈ ವಿಡಿಯೋವನ್ನು ಅವರು ಶೇರ್ ಮಾಡಿದ್ದಾರೆ.
- Madan Kumar
- Updated on: Feb 24, 2026
- 5:33 pm