SSLC
ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದರೆ ಅದು 10ನೇ ತರಗತಿ ಅಂದರೆ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ. ಈ ಪರೀಕ್ಷೆಯಲ್ಲಿ ತೇರ್ಗಡೆಯಾದ ಬಳಿಕ ಸಿಗುವ ಅಂಕಪಟ್ಟಿ ಪ್ರತಿಯೊಬ್ಬರ ಜೀವನದಲ್ಲಿ ಮಹತ್ವಪೂರ್ಣವಾದ ದಾಖಲೆಯಾಗಿದೆ. ಹೆಸರು, ಜನ್ಮ ದಿನಾಂಕ ಪರಿಶೀಲಿಸಲು ಎಸ್.ಎಸ್.ಎಲ್.ಸಿ. ಪರೀಕ್ಷೆಯ ಅಂಕಪಟ್ಟಿಯನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ. ಮುಂದಿನ ವಿದ್ಯಾಭ್ಯಾಸಕ್ಕೆ ಈ ಪ್ರಮಾಣ ಪತ್ರ ಅತ್ಯವಶ್ಯಕ. ಅದೇ ರೀತಿ ಉದ್ಯೋಗ, ಸರ್ಕಾರದ ಸೌಲಭ್ಯಗಳು ಪಡೆಯಬೇಕಾದರೆ, ಇನ್ನೂ ಅನೇಕ ರೀತಿಯ ಕೆಲಸ ಕಾರ್ಯಗಳಿಗೆ ಈ ಪ್ರಮಾಣ ಪತ್ರ ಬೇಕೇ ಬೇಕು. ಇಷ್ಟೆಲ್ಲಾ ಮಹತ್ವವುಳ್ಳ ಪ್ರಮಾಣ ಪತ್ರ ಪಡೆಯಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಡೆಸುವ 10ನೇ ತರಗತಿ ಉತ್ತೀರ್ಣರಾಗಬೇಕು. ಈ ಪರೀಕ್ಷೆ ಪ್ರತಿ ವರ್ಷ ನಡೆಯುತ್ತದೆ. ಇದು ಪಬ್ಲಿಕ್ ಪರೀಕ್ಷೆಯಾಗಿರುವುದರಿಂದ ಬಿಗಿ ಬಂದೋಬಸ್ತ್ನಲ್ಲಿ ನಡೆಸಲಾಗುತ್ತದೆ. ಆಯ್ದು ಕೊಂಡ ವಿಷಯಗಳ ಆಧಾರದ ಮೇಲೆ ಪರೀಕ್ಷೆಗಳು ನಡೆಯುತ್ತವೆ. ಆಯಾ ಶಾಲೆಗಳು ಕಳುಹಿಸಿದ ಮಾಹಿತಿ ಆಧಾರದ ಮೇಲೆ ವಿದ್ಯಾರ್ಥಿಗಳ ಹೆಸರಿನ ಮೇಲೆ ಹಾಲ್ ಟಿಕೆಟ್ ನೀಡಲಾಗುತ್ತೆ. ಆ ಹಾಲ್ ಟಿಕೆಟ್ ಇದ್ದರೆ ಮಾತ್ರ ಪರೀಕ್ಷೆ ಬರೆಯಲು ಅನುಮತಿ ಇರುತ್ತದೆ. ಕಾಲೇಜು ಮೆಟ್ಟಿಲು ಹತ್ತಲು ಈ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲೇಬೇಕು. ಹಾಗಾಗಿ ವಿದ್ಯಾರ್ಥಿ ಜೀವನದಲ್ಲಿ ಬರುವ ಮೊದಲ ಘಟ್ಟವನ್ನು ಎಸ್ಎಸ್ಎಲ್ಸಿ ಪರೀಕ್ಷೆ ಎಂದು ಪರಿಗಣಿಸಲಾಗುತ್ತದೆ
ಸುಳ್ಳು ಸುದ್ದಿ ಹರಡಿದರೆ ಹುಷಾರ್! ಮಧು ಬಂಗಾರಪ್ಪ ಎಚ್ಚರಿಕೆ, ಎಸ್ಎಸ್ಎಲ್ಸಿ-ಪಿಯುಸಿ ಪರೀಕ್ಷೆ ವಿಧಾನದ ಕುರಿತು ಸ್ಪಷ್ಟನೆ
ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಮೂರನೇ ಪರೀಕ್ಷೆ ರದ್ದಾಗಿದೆ ಎಂಬ ಸುಳ್ಳು ಸುದ್ದಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಇಲ್ಲ, ಮೂರು ಪರೀಕ್ಷೆಗಳೂ ನಡೆಯಲಿವೆ ಎಂದು ಅವರು ಖಚಿತಪಡಿಸಿದ್ದಾರೆ. ಗೊಂದಲ ಸೃಷ್ಟಿಸುವ ಮಾಧ್ಯಮಗಳಿಗೆ ಸಚಿವರು ಎಚ್ಚರಿಕೆ ನೀಡಿದ್ದು, ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೊಳಗಾಗಬಾರದು ಎಂದು ಮನವಿ ಮಾಡಿದ್ದಾರೆ.
- Vinay Kashappanavar
- Updated on: Dec 3, 2025
- 11:27 am
ಶೈಕ್ಷಣಿಕ ಅವಧಿ ಕಡಿಮೆ: SSLC ಪರೀಕ್ಷೆಗೆ ಬ್ಲೂಪ್ರಿಂಟ್ ಸಿದ್ಧ, ಉತ್ತೀರ್ಣ ನಿಯಮದಲ್ಲಿ ಬದಲಾವಣೆ
ಸಾಲು ಸಾಲು ರಜೆಗಳಿಂದ ಶೈಕ್ಷಣಿಕ ಅವಧಿ ಕಡಿಮೆ ಹಿನ್ನೆಲೆ ಕರ್ನಾಟಕ ಶಿಕ್ಷಣ ಇಲಾಖೆ 8, 9, 10ನೇ ತರಗತಿಗಳಿಗೆ ವಿಶೇಷ ತರಗತಿ ನಡೆಸಲು ಸೂಚಿಸಿದೆ. 2025-26ರ SSLC ಪರೀಕ್ಷೆಯಲ್ಲಿ ಉತ್ತೀರ್ಣ ಅಂಕ 33ಕ್ಕೆ ಇಳಿಕೆ, ಹೊಸ ಬ್ಲೂಪ್ರಿಂಟ್ ಹಾಗೂ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ. ಪಠ್ಯಕ್ರಮ ಪೂರ್ಣಗೊಳಿಸಲು ಇಲಾಖೆ ಮುಂದಾಗಿದೆ.
- Vinay Kashappanavar
- Updated on: Nov 8, 2025
- 7:57 pm
SSLC, 2nd PUC Exam 2026 TimeTable: ಎಸ್ಎಸ್ಎಲ್ಸಿ, ಪಿಯು ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ
ಕರ್ನಾಟಕ SSLC, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ಅಂತಿಮ ವೇಳಾಪಟ್ಟಿ: ಕರ್ನಾಟಕ ದ್ವಿತೀಯ ಪಿಯು ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆ 1 ಮತ್ತು 2ರ ಅಂತಿಮ ವೇಳಾಪಟ್ಟಿ ವೇಳಾಪಟ್ಟಿ ಪ್ರಕಟವಾಗಿದೆ. ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು (ನವೆಂಬರ್ 05) ಪ್ರಕಟಿಸಿದೆ. ಹಾಗಾದ್ರೆ, ದ್ವಿತೀಯ ಪಿಯುಸಿ ಹಾಗೂ ಎಸ್ಎಸ್ಎಸ್(10ನೇ ತರಗತಿ) ಪರೀಕ್ಷೆಗಳು ಯಾವಾಗಿನಿಂದ ಆರಂಭವಾಗಿ ಯಾವಾಗ ಮುಗಿಯಲಿವೆ ಎನ್ನುವ ವೇಳಾಪಪಟ್ಟಿ ಕೆಳಗಿನಂತಿದೆ.
- Web contact
- Updated on: Nov 5, 2025
- 4:54 pm
ವಿದ್ಯಾರ್ಥಿಗಳ ಪಾಸಿಂಗ್ ಮಾರ್ಕ್ಸ್ ಕಡಿತಗೊಳಿಸಿದ್ದಕ್ಕೆ ಹೊರಟ್ಟಿ ಬೇಸರ: ಪತ್ರದ ಮೂಲಕ ಶಿಕ್ಷಣ ಸಚಿವರಿಗೆ ಸಲಹೆ
ಇನ್ನು ಮುಂದೆ SSLCಯಲ್ಲಿ 35ರ ಬದಲಿಗೆ 33 ಅಂಕ ಪಡೆದರೆ ಉತ್ತೀರ್ಣ ಎಂದು ಘೋಷಿಸಲಾಗಿದ್ದು, ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಈಗಾಗಲೇ ಹೇಳಿದ್ದಾರೆ. ಆದ್ರೆ, ಇದೀಗ ಇದಕ್ಕೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.
- Kiran Haniyadka
- Updated on: Oct 29, 2025
- 6:34 pm
SSLC ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ: ಪರೀಕ್ಷಾ ಶುಲ್ಕ ಹೆಚ್ಚಳವಾಗಿದ್ದು ಎಷ್ಟು ಗೊತ್ತಾ?
2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ (SSLC Exam) ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಜಾಲತಾಣದಲ್ಲಿ www.kseab.karnataka.gov.in ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಆದ್ರೆ, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ (SSLC Exam Fee) ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಶಾಕ್ ಕೊಟ್ಟಿದೆ. ಹಾಗಾದ್ರೆ, ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಹೊರೆ ಎಷ್ಟಾಗಿದೆ ಎನ್ನುವ ವಿವರ ಇಲ್ಲಿದೆ.
- Vinay Kashappanavar
- Updated on: Oct 6, 2025
- 7:40 pm
ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಇಲ್ಲಿದೆ ವಿವರ
SSLC and Second PUC Exam Tentative Timetable; ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ. ಆಕ್ಷೇಪಣೆಗಳನ್ನು ಸಲ್ಲಿಸಲು ಅಕ್ಟೋಬರ್ 9 ರವರೆಗೆ ಕಾಲಾವಕಾಶ ನೀಡಲಾಗಿದೆ. ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿಯ ವಿವರ ಇಲ್ಲಿದೆ.
- Ganapathi Sharma
- Updated on: Sep 20, 2025
- 8:15 pm
ಎಸ್ಸೆಸ್ಸೆಲ್ಸಿಯಲ್ಲಿ ಶೇ 94 ಅಂಕ ಪಡೆದಿದ್ದ ವಿದ್ಯಾರ್ಥಿನಿಗೆ ವಿವಾಹ ಯತ್ನ, ಸಹಾಯವಾಣಿಗೆ ಕರೆ ಮಾಡಿ ದಿಟ್ಟತನ ಮೆರೆದ ಬಾಲಕಿ
ಬಳ್ಳಾರಿಯಲ್ಲಿ ಶೇ 94 ಅಂಕಗಳೊಂದಿಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾದ ವಿದ್ಯಾರ್ಥಿನಿಯನ್ನು ಪೋಷಕರು ಮದುವೆ ಮಾಡಲು ಯತ್ನಿಸಿದ್ದು, ಬಾಲಕಿ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ದಿಟ್ಟತನ ಮೆರೆದಿದ್ದಾಳೆ. ತಹಶೀಲ್ದಾರ್, ಪೊಲೀಸರು ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಆಕೆಯನ್ನು ರಕ್ಷಿಸಿ ಕಾಲೇಜೊಂದರ ವಸತಿನಿಲಯದಲ್ಲಿ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.
- Vinayak Badiger
- Updated on: Aug 20, 2025
- 12:58 pm
SSLCಯಲ್ಲಿ ಕನ್ನಡ ಭಾಷಾ ಪರೀಕ್ಷೆಯ ಅಂಕ ಕಡಿತಕ್ಕೆ ಸಾಹಿತಿ ಬರಗೂರು ರಾಮಚಂದ್ರಪ್ಪ ವಿರೋಧ: ಸಚಿವ ಮಧು ಬಂಗಾರಪ್ಪಗೆ ಪತ್ರ
ಕರ್ನಾಟಕದಲ್ಲಿ SSLC ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ 125 ಅಂಕಗಳನ್ನು 100ಕ್ಕೆ ಇಳಿಸಲು ಪ್ರಸ್ತಾಪಿಸಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸಾಹಿತಿ ಬರಗೂರು ರಾಮಚಂದ್ರಪ್ಪ ಈ ನಿರ್ಧಾರವನ್ನು ಖಂಡಿಸಿದ್ದಾರೆ. ಈ ಕುರಿತಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಪತ್ರ ಬರೆಯುವ ಮೂಲಕ ಅಂಕಗಳನ್ನ 100ಕ್ಕೆ ಇಳಿಕೆ ಮಾಡುವುದು ಬೇಡವೆಂದು ಮನವಿ ಮಾಡಿದ್ದಾರೆ.
- Vinay Kashappanavar
- Updated on: Jul 9, 2025
- 1:22 pm
ವಿದ್ಯಾರ್ಥಿ, ಪೋಷಕರು ಗಮನಕ್ಕೆ: SSLC ಪರೀಕ್ಷಾ ನಿಯಮದಲ್ಲಿ ಮಹತ್ವದ ಬದಲಾವಣೆ
ಎಸ್ಎಸ್ಎಲ್ಸಿ ಪರೀಕ್ಷಾ ನಿಯಮದಲ್ಲಿ ಕೆಲ ಬದಲಾವಣೆ ತರಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮುಂದಾಗಿದೆ. ಸಿಬಿಎಸ್ಇ ಮಾದರಿಯಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದ್ದು, ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ. ಒಂದು ವೇಳೆ ಸರ್ಕಾರ, ಶಿಕ್ಷಣ ಇಲಾಖೆಯ ಪ್ರಸ್ತಾವಕ್ಕೆ ಒಪ್ಪಿಗೆ ಸೂಚಿಸಿದರೆ 10ನೇ ತರಗತಿ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ಹಾಗಾದ್ರೆ, ಏನೇನು ಬದಲಾವಣೆ ಎನ್ನುವ ಸಂಪೂರ್ಣ ವಿವರ ಈ ಕೆಳಗಿನಂತಿದೆ.
- Vinay Kashappanavar
- Updated on: Jul 8, 2025
- 6:03 pm
ಎಸ್ಎಸ್ಎಲ್ಸಿ ಫಲಿತಾಂಶ ಕಡಿಮೆ ಬಂದರೆ ಶಿಕ್ಷಕರ ವಾರ್ಷಿಕ ವೇತನ ಬಡ್ತಿಗೆ ತಡೆ, ಶಾಲೆ ಅನುದಾನ ಬಂದ್
ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಲು ಮುಂದಾಯ್ತಾ ಶಾಲಾ ಶಿಕ್ಷಣ ಇಲಾಖೆ ಎಂಬ ಪ್ರಶ್ನೆ ಇದಿಗ ಮೂಡಿದೆ. ವರ್ಷದಿಂದ ವರ್ಷಕ್ಕೆ ಎಸ್ಎಸ್ಎಲ್ಸಿ ಫಲಿತಾಂಶ ಕುಸಿತವಾಗುತ್ತಿದೆ. ಹೀಗಾಗಿ ಸಿಎಂ ಶಿಕ್ಷಣ ಇಲಾಖೆಗೆ ಗುರಿ ನೀಡಿದ್ದು , ಇಲಾಖೆ ಮಾತ್ರ ಎಸ್ಎಸ್ಎಲ್ಸಿ ಫಲಿತಾಂಶ ಕುಸಿತಕ್ಕೆ ಶಿಕ್ಷಕರಿಗೆ ಬರೆ ಹಾಕಲು ಮುಂದಾಗಿದೆ.
- Vinay Kashappanavar
- Updated on: Jun 20, 2025
- 7:24 am