
SSLC
ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದರೆ ಅದು 10ನೇ ತರಗತಿ ಅಂದರೆ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ. ಈ ಪರೀಕ್ಷೆಯಲ್ಲಿ ತೇರ್ಗಡೆಯಾದ ಬಳಿಕ ಸಿಗುವ ಅಂಕಪಟ್ಟಿ ಪ್ರತಿಯೊಬ್ಬರ ಜೀವನದಲ್ಲಿ ಮಹತ್ವಪೂರ್ಣವಾದ ದಾಖಲೆಯಾಗಿದೆ. ಹೆಸರು, ಜನ್ಮ ದಿನಾಂಕ ಪರಿಶೀಲಿಸಲು ಎಸ್.ಎಸ್.ಎಲ್.ಸಿ. ಪರೀಕ್ಷೆಯ ಅಂಕಪಟ್ಟಿಯನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ. ಮುಂದಿನ ವಿದ್ಯಾಭ್ಯಾಸಕ್ಕೆ ಈ ಪ್ರಮಾಣ ಪತ್ರ ಅತ್ಯವಶ್ಯಕ. ಅದೇ ರೀತಿ ಉದ್ಯೋಗ, ಸರ್ಕಾರದ ಸೌಲಭ್ಯಗಳು ಪಡೆಯಬೇಕಾದರೆ, ಇನ್ನೂ ಅನೇಕ ರೀತಿಯ ಕೆಲಸ ಕಾರ್ಯಗಳಿಗೆ ಈ ಪ್ರಮಾಣ ಪತ್ರ ಬೇಕೇ ಬೇಕು. ಇಷ್ಟೆಲ್ಲಾ ಮಹತ್ವವುಳ್ಳ ಪ್ರಮಾಣ ಪತ್ರ ಪಡೆಯಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಡೆಸುವ 10ನೇ ತರಗತಿ ಉತ್ತೀರ್ಣರಾಗಬೇಕು. ಈ ಪರೀಕ್ಷೆ ಪ್ರತಿ ವರ್ಷ ನಡೆಯುತ್ತದೆ. ಇದು ಪಬ್ಲಿಕ್ ಪರೀಕ್ಷೆಯಾಗಿರುವುದರಿಂದ ಬಿಗಿ ಬಂದೋಬಸ್ತ್ನಲ್ಲಿ ನಡೆಸಲಾಗುತ್ತದೆ. ಆಯ್ದು ಕೊಂಡ ವಿಷಯಗಳ ಆಧಾರದ ಮೇಲೆ ಪರೀಕ್ಷೆಗಳು ನಡೆಯುತ್ತವೆ. ಆಯಾ ಶಾಲೆಗಳು ಕಳುಹಿಸಿದ ಮಾಹಿತಿ ಆಧಾರದ ಮೇಲೆ ವಿದ್ಯಾರ್ಥಿಗಳ ಹೆಸರಿನ ಮೇಲೆ ಹಾಲ್ ಟಿಕೆಟ್ ನೀಡಲಾಗುತ್ತೆ. ಆ ಹಾಲ್ ಟಿಕೆಟ್ ಇದ್ದರೆ ಮಾತ್ರ ಪರೀಕ್ಷೆ ಬರೆಯಲು ಅನುಮತಿ ಇರುತ್ತದೆ. ಕಾಲೇಜು ಮೆಟ್ಟಿಲು ಹತ್ತಲು ಈ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲೇಬೇಕು. ಹಾಗಾಗಿ ವಿದ್ಯಾರ್ಥಿ ಜೀವನದಲ್ಲಿ ಬರುವ ಮೊದಲ ಘಟ್ಟವನ್ನು ಎಸ್ಎಸ್ಎಲ್ಸಿ ಪರೀಕ್ಷೆ ಎಂದು ಪರಿಗಣಿಸಲಾಗುತ್ತದೆ
ಅಜಯ್ ರಾವ್ ಓದಿದ್ದು ಎಸ್ಎಸ್ಎಲ್ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಸ್ಯಾಂಡಲ್ವುಡ್ ನಟ ಅಜಯ್ ರಾವ್ ಅನೇಕ ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಸಿನಿಮಾ ಹೀರೋ ಆಗಿ ಮಿಂಚಿದ್ದಾರೆ. ಅಲ್ಲದೇ ನಿರ್ಮಾಪಕನಾಗಿಯೂ ಅವರು ಗೆಲುವು ಕಂಡಿದ್ದಾರೆ. ಇಷ್ಟೆಲ್ಲ ಸಾಧನೆ ಮಾಡಿದ ಅಜಯ್ ರಾವ್ ಶಿಕ್ಷಣ ಪಡೆದಿದ್ದು ಎಸ್ಎಸ್ಎಲ್ಸಿ ತನಕ ಮಾತ್ರ! ಇದು ಅಚ್ಚರಿಯ ವಿಷಯ.
- Madan Kumar
- Updated on: Apr 18, 2025
- 8:03 pm
SSLC Result 2025: ಮೇ ಮೊದಲ ವಾರದಲ್ಲಿ SSLC ಪರೀಕ್ಷೆ ಫಲಿತಾಂಶ ಪ್ರಕಟ, ನೋಡುವುದು ಹೇಗೆ? ಇಲ್ಲಿದೆ ವಿವರ
Karnataka SSLC Exam-1 Results 2025: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿದ SSLC ಪರೀಕ್ಷೆ-1 ರ ಫಲಿತಾಂಶ ಮೇ ತಿಂಗಳ ಮೊದಲ ವಾರದಲ್ಲಿ ಪ್ರಕಟವಾಗಲಿದೆ. ವಿದ್ಯಾರ್ಥಿಗಳು karresults.nic.in ಅಥವಾ kseab.karnataka.gov.in ವೆಬ್ಸೈಟ್ಗಳಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು. SMS ಮೂಲಕವೂ ಫಲಿತಾಂಶ ಪಡೆಯಬಹುದು. ಫಲಿತಾಂಶವನ್ನು ನೋಡುವುದು ಹೇಗೆ? ಇಲ್ಲಿದೆ ವಿವರ
- Vinay Kashappanavar
- Updated on: Apr 16, 2025
- 4:56 pm
ಮಂಗಳೂರು: 100 ಪರ್ಸೆಂಟ್ ಫಲಿತಾಂಶಕ್ಕಾಗಿ ಮಕ್ಕಳನ್ನು SSLC ಪರೀಕ್ಷೆ ಬರೆಯಲು ಬಿಡದ ಶಿಕ್ಷಕರು!
ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಸರ್ಕಾರಿ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಎಸ್ಎಸ್ಎಲ್ಸಿ ಪರೀಕ್ಷೆಗೆ ಕೂರಿಸದೇ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡಿದೆ. 100% ಫಲಿತಾಂಶದ ಆಸೆಗೆ ಬಿದ್ದು, ಶಾಲಾ ಮುಖ್ಯ ಶಿಕ್ಷಕರು ಹೀಗೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಲಾಗಿದೆ. ಪೋಷಕರ ಆಕ್ರೋಶದ ಬೆನ್ನೆಲ್ಲೇ ಉಳಿದ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
- Ashok
- Updated on: Mar 28, 2025
- 11:48 am
ವಿದ್ಯಾರ್ಥಿಗಳೇ ಗಮನಿಸಿ: ವೈರಲ್ ಆಗ್ತಿವೆ ಎಸ್ಎಸ್ಎಲ್ಸಿ ಪರೀಕ್ಷೆಯ ನಕಲಿ ಪ್ರಶ್ನೆ ಪತ್ರಿಕೆ
ವಿದ್ಯಾರ್ಥಿಗಳ ಜೀವನದ ಬಹು ಮುಖ್ಯ ಘಟ್ಟ ಎಸ್ಎಸ್ಎಲ್ಸಿ ಪರೀಕ್ಷೆ. ಈ ಪರೀಕ್ಷೆಗಳು ರಾಜ್ಯದಲ್ಲಿ ಶುರುವಾಗಿದ್ದು ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲು ಮುಂದಾಗಿದ್ದಾರೆ. ಆದರೆ, ಈ ನಡವೆ ಕೆಲ ಕಿಡಗೇಡಿಗಳು ಎಸ್ಎಸ್ಎಲ್ಸಿ ಮಕ್ಕಳ ಭವಿಷ್ಯದ ಜೊತೆ ಚೆಲ್ಲಟವಾಡಲು ಮಂದಾಗಿದ್ದಾರೆ. ನಕಲಿ ಪ್ರಶ್ನೆಪತ್ರಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಟ್ಟು ವಂಚನೆ ಎಸಗುತ್ತಿದ್ದಾರೆ.
- Vinay Kashappanavar
- Updated on: Mar 26, 2025
- 7:41 am
ಹಡೆದವ್ವ ಸಾವಿನ ನೋವಿನಲ್ಲೂ ಬಂದು SSLC ಪರೀಕ್ಷೆ ಬರೆದ ವಿದ್ಯಾರ್ಥಿ..!
ಜನ್ಮ ನೀಡಿದ ಹಡೆದವ್ವ ಪ್ರೀತಿ, ಮಮತೆಗೆ ಬೆಲೆ ಕಟ್ಟಲಾಗದು. ಮಕ್ಕಳ ವಿಚಾರಕ್ಕೆ ಬಂದರೆ ಎಂಥಹ ತ್ಯಾಗಕ್ಕಾದರೂ ತಾಯಿ ಸಿದ್ಧಳಿರುತ್ತಾಳೆ. ಹೀಗಿರುವಾಗ ಇನ್ಮುಂದೆ ಆಕೆ ಕಣ್ಣು ಮುಂದೆ ಇರುವುದಿಲ್ಲ. ತಾಯಿಯನ್ನು ನೋಡಲಾಗದು, ಮುಂದೆ ಆಕೆಯೊಂದಿಗೆ ಮಾತನಾಡಲು ಸಾಧ್ಯವಿಲ್ಲ ಎಂದಾಗ ಕರುಳಿನ ಕುಡಿ ಮನಸ್ಸಿಗೆ ಹೇಗಾಗಿರಬೇಡ. ಆ ನೋವನ್ನು ಊಹಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲ. ಆದರೂ ಸಹ ಮಗ ತಾಯಿ ಅಗಲಿಕೆಯ ನೋವಿನ ಮಧ್ಯೆಯೂ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದಾನೆ.
- Sanjayya Chikkamath
- Updated on: Mar 21, 2025
- 9:27 pm
ಅಜ್ಜಿ ಮೃತದೇಹಕ್ಕೆ ಪೂಜೆ ಸಲ್ಲಿಸಿ ದುಃಖದಲ್ಲಿಯೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ
ಇಂದು ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಿವೆ. ಆದರೆ ಗದಗ ಜಿಲ್ಲೆಯಲ್ಲಿ ಅಜ್ಜಿಯ ಸಾವಿನ ನೋವಿನಲ್ಲೂ ವಿದ್ಯಾರ್ಥಿನಿ ಧೈರ್ಯದಿಂದ ಪರೀಕ್ಷೆ ಬರೆದ ಘಟನೆ ನಡೆದಿದೆ. ಮತ್ತೊಂದು ಘಟನೆಯಲ್ಲಿ, ಪರೀಕ್ಷಾ ಕೇಂದ್ರದಲ್ಲಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆದ ಬಳಿಕ ಮತ್ತೆ ಪರೀಕ್ಷೆಗೆ ಹಾಜರಾದ ಘಟನೆ ನಡೆದಿದೆ.
- Sanjeev Pandre
- Updated on: Mar 21, 2025
- 6:04 pm
SSLC ಪರೀಕ್ಷೆಗೆ ಕ್ಷಣಗಣನೆ: ಇನ್ನೂ ಹಾಲ್ ಟಿಕೆಟ್ ಸಿಗದೇ ವಿದ್ಯಾರ್ಥಿಗಳು ಕಂಗಾಲು, ಪೋಷಕರು ಆತಂಕ
ಬಾಗಲಕೋಟೆಯ ಸರ್ಕಾರಿ ಶಾಲೆಯಲ್ಲಿ ಎಂಟು ವಿದ್ಯಾರ್ಥಿಗಳಿಗೆ ಹಾಜರಾತಿ ಕೊರತೆಯಿಂದಾಗಿ ಎಸ್ಎಸ್ಎಲ್ಸಿ ಹಾಲ್ ಟಿಕೆಟ್ ನಿರಾಕರಿಸಲಾಗಿದೆ. ಈ ವಿಚಾರವಾಗಿ ಪೋಷಕರು ಮತ್ತು ಮುಖ್ಯ ಶಿಕ್ಷಕಿರ ಮಧ್ಯ ಮಾತಿನಿ ಚಕಮಕಿ ನಡೆದಿದೆ. ಉದ್ದೇಶಪೂರ್ವಕ ಹಾಜರಾತಿ ಕಡಿಮೆ ಕೊಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಬಿಇಒ ಪರಿಸ್ಥಿತಿಯನ್ನು ಪರಿಶೀಲಿಸಿ ಎರಡನೇ ಪರೀಕ್ಷೆಗೆ ಅವಕಾಶ ನೀಡುವುದಾಗಿ ಭರವಸೆ ನೀಡಿದ್ದಾರೆ.
- Ravi H Mooki
- Updated on: Mar 20, 2025
- 9:49 pm
ಕರ್ನಾಟಕದಲ್ಲಿ ಲೋಡ್ ಶೆಡ್ಡಿಂಗ್: ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ರೈತರು, ವಿದ್ಯಾರ್ಥಿಗಳು ಪರದಾಟ
ಕರ್ನಾಟಕದಲ್ಲಿ ಬೇಸಿಗೆ ಬೆನ್ನಲ್ಲೇ ಅನಿಯಮಿತ ಲೋಡ್ ಶೆಡ್ಡಿಂಗ್ ಶುರುವಾಗಿದೆ. ದುರಸ್ತಿ, ಕೆಲಸ, ಕಾರ್ಯಗಳ ನೆಪದಲ್ಲಿ ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಲೋಡ್ ಶೆಡ್ಡಿಂಗ್ ಜಾರಿಯಾಗಿದೆ. ವಿದ್ಯುತ್ನ ಕಣ್ಣಾಮುಚ್ಚಾಲೆಯಿಂದ ಗ್ರಾಮೀಣ ಭಾಗದ ರೈತರು ಹಾಗೂ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಒಂದು ಕಡೆ ಕರೆಂಟ್ ಇಲ್ಲದೇ ಬೆಳೆಗೆ ನೀರಿಲ್ಲದೇ ರೈತರು ಒದ್ದಾಡುತ್ತಿದ್ದರೆ, ಮತ್ತೊಂದೆಡೆ ಪರೀಕ್ಷೆ ಬರೆಯಲಿರುವ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಸಹ ಪರದಾಡುವಂತಾಗಿದೆ.
- Ramesh B Jawalagera
- Updated on: Mar 19, 2025
- 4:50 pm
ಕಾರವಾರದಲ್ಲಿ SSLC ವಿದ್ಯಾರ್ಥಿ, ತುಮಕೂರಿನಲ್ಲಿ PUC ವಿದ್ಯಾರ್ಥಿನಿ ಆತ್ಮಹತ್ಯೆ
ಕರ್ನಾಟಕದಲ್ಲಿ ಈಗ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿವೆ. ಇನ್ನು ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಪರೀಕ್ಷೆಗಳು ನಡೆಯಲಿವೆ. ಇದರ ಮಧ್ಯ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರವಾರದಲ್ಲಿ ಎಸ್ .ಎಸ್ .ಎಲ್.ಸಿ ವಿದ್ಯಾರ್ಥಿನಿ ಪ್ರಾಣಕಳೆದುಕೊಂಡಿದ್ದರೆ, ತುಮಕೂರಿನಲ್ಲೂ ಸಹ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
- Web contact
- Updated on: Mar 6, 2025
- 5:05 pm
SSLC ಪ್ರಶ್ನೆ ಪತ್ರಿಕೆ ಲೀಕ್: ಯೂಟ್ಯೂಬ್, ಇನ್ಸ್ಟಾದಲ್ಲಿ ವೈರಲ್..ವಿದ್ಯಾರ್ಥಿಗಳು ಶಾಕ್
ಏನೋ ಮಾಡಲು ಹೋಗಿ ಇನ್ನೇನೋ ಆಯ್ತು. ಬಹುಶಃ ಈ ಮಾತು ಕರ್ನಾಟಕ ಶಿಕ್ಷಣ ಇಲಾಖೆಗೆ ಪರ್ಫೆಕ್ಟ್ ಆಗಿ ಸೂಟ್ ಆಗುತ್ತೆ ಎನ್ನುವುದರಲ್ಲಿ ಯಾವುದೇ ಅನುಮಾನ ಇಲ್ಲ. ಪರೀಕ್ಷೆಗೆ ಸಿಸಿಟಿವಿ ವೆಬ್ ಕ್ಯಾಮ್ ಎಂದು ಬೀಲ್ಡಪ್ ಕೊಟ್ಟಿದ್ದೆ ಕೊಟ್ಟಿದ್ದು. ಆದ್ರೆ ಎಸ್ಎಸ್ಎಲ್ ಸಿ ಪೂರ್ವಬಾವಿ ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು, ಈ ಮೂಲಕ ಶಿಕ್ಷಣ ಇಲಾಖೆಯ ಬಣ್ಣ ಬಟಾಬಯಲಾಗಿದೆ
- Vinay Kashappanavar
- Updated on: Mar 5, 2025
- 10:49 pm