AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC

SSLC

ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದರೆ ಅದು 10ನೇ ತರಗತಿ ಅಂದರೆ ಎಸ್​ಎಸ್​ಎಲ್​ಸಿ ವಾರ್ಷಿಕ ಪರೀಕ್ಷೆ. ಈ ಪರೀಕ್ಷೆಯಲ್ಲಿ ತೇರ್ಗಡೆಯಾದ ಬಳಿಕ ಸಿಗುವ ಅಂಕಪಟ್ಟಿ ಪ್ರತಿಯೊಬ್ಬರ ಜೀವನದಲ್ಲಿ ಮಹತ್ವಪೂರ್ಣವಾದ ದಾಖಲೆಯಾಗಿದೆ. ಹೆಸರು, ಜನ್ಮ ದಿನಾಂಕ ಪರಿಶೀಲಿಸಲು ಎಸ್.ಎಸ್.ಎಲ್.ಸಿ. ಪರೀಕ್ಷೆಯ ಅಂಕಪಟ್ಟಿಯನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ. ಮುಂದಿನ ವಿದ್ಯಾಭ್ಯಾಸಕ್ಕೆ ಈ ಪ್ರಮಾಣ ಪತ್ರ ಅತ್ಯವಶ್ಯಕ. ಅದೇ ರೀತಿ ಉದ್ಯೋಗ, ಸರ್ಕಾರದ ಸೌಲಭ್ಯಗಳು ಪಡೆಯಬೇಕಾದರೆ, ಇನ್ನೂ ಅನೇಕ ರೀತಿಯ ಕೆಲಸ ಕಾರ್ಯಗಳಿಗೆ ಈ ಪ್ರಮಾಣ ಪತ್ರ ಬೇಕೇ ಬೇಕು. ಇಷ್ಟೆಲ್ಲಾ ಮಹತ್ವವುಳ್ಳ ಪ್ರಮಾಣ ಪತ್ರ ಪಡೆಯಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಡೆಸುವ 10ನೇ ತರಗತಿ ಉತ್ತೀರ್ಣರಾಗಬೇಕು. ಈ ಪರೀಕ್ಷೆ ಪ್ರತಿ ವರ್ಷ ನಡೆಯುತ್ತದೆ. ಇದು ಪಬ್ಲಿಕ್ ಪರೀಕ್ಷೆಯಾಗಿರುವುದರಿಂದ ಬಿಗಿ ಬಂದೋಬಸ್ತ್​ನಲ್ಲಿ ನಡೆಸಲಾಗುತ್ತದೆ. ಆಯ್ದು ಕೊಂಡ ವಿಷಯಗಳ ಆಧಾರದ ಮೇಲೆ ಪರೀಕ್ಷೆಗಳು ನಡೆಯುತ್ತವೆ. ಆಯಾ ಶಾಲೆಗಳು ಕಳುಹಿಸಿದ ಮಾಹಿತಿ ಆಧಾರದ ಮೇಲೆ ವಿದ್ಯಾರ್ಥಿಗಳ ಹೆಸರಿನ ಮೇಲೆ ಹಾಲ್​ ಟಿಕೆಟ್​ ನೀಡಲಾಗುತ್ತೆ. ಆ ಹಾಲ್​ ಟಿಕೆಟ್​ ಇದ್ದರೆ ಮಾತ್ರ ಪರೀಕ್ಷೆ ಬರೆಯಲು ಅನುಮತಿ ಇರುತ್ತದೆ. ಕಾಲೇಜು ಮೆಟ್ಟಿಲು ಹತ್ತಲು ಈ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲೇಬೇಕು. ಹಾಗಾಗಿ ವಿದ್ಯಾರ್ಥಿ ಜೀವನದಲ್ಲಿ ಬರುವ ಮೊದಲ ಘಟ್ಟವನ್ನು ಎಸ್​ಎಸ್​ಎಲ್​ಸಿ ಪರೀಕ್ಷೆ ಎಂದು ಪರಿಗಣಿಸಲಾಗುತ್ತದೆ

ಇನ್ನೂ ಹೆಚ್ಚು ಓದಿ

SSLC ಟಾಪರ್​ಗಳಿಗೆ ಇನ್ಮುಂದೆ ಲ್ಯಾಪ್‌ಟಾಪ್ ಬದಲು ನಗದು ಬಹುಮಾನ

ಎಸ್​​ಎಸ್​​ಎಲ್​​ಸಿಯಲ್ಲಿ ಹೆಚ್ಚಿನ ಅಂಕ ಗಳಿಸಿ ಜಿಲ್ಲಾ ಮಟ್ಟದಲ್ಲಿ ಟಾಪರ್​ಗಳಾಗಿ ಹೊರಹೊಮ್ಮಿದ ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್​ಟಾಪ್ ನೀಡುವ ಯೋಜನೆಯಲ್ಲಿ ಸರ್ಕಾರ ತುಸು ಮಾರ್ಪಾಡು ಮಾಡಿದೆ. ಇನ್ನು ಮುಂದೆ ಲ್ಯಾಪ್​ಟಾಪ್ ಬದಲಿಗೆ ನಗದು ಬಹುಮಾನವನ್ನು ನೀಡುವುದಾಗಿ ಘೋಷಿಸಿದೆ. ಇದರಂತೆ, ವಿದ್ಯಾರ್ಥಿಗಳು ತಲಾ 50,000 ರೂ. ಪಡೆಯಲಿದ್ದಾರೆ.

SSLC ಪರೀಕ್ಷೆಗೆ ಹೊಸ ಗೈಡ್​ಲೈನ್ಸ್ ಪ್ರಕಟ: ವಿದ್ಯಾರ್ಥಿ, ಶಿಕ್ಷಕರಿಗೆ ಖಡಕ್ ಸೂಚನೆ

ಎಸ್​​ಎಸ್​​ಎಲ್​​ಸಿ ಪೂರ್ವ ಸಿದ್ಧತೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಮ್ಮ ಶಾಲೆಗಳ ಫಲಿತಾಂಶ ಹೆಚ್ಚಳಕ್ಕೆ ಕೆಲ ಶಾಲಾ ಮುಖ್ಯಶಿಕ್ಷಕರು ಪ್ರಯತ್ನಿಸಿದ್ದರು. ಇದಕ್ಕಾಗಿ ಪೂರಕವಾಗಿ ವಿದ್ಯಾರ್ಥಿಗಳನ್ನು ತಯಾರಿಗೊಳಿಸುತ್ತಿದ್ದ ಶಾಲೆಗಳು, ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ತಾವಾಗಿಯೇ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಿದ್ದರು ಎಂದು ತಿಳಿದು ಬಂದಿದೆ. ಈ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಶಿಕ್ಷಣ ಇಲಾಖೆ ಅಲರ್ಟ್​ ಆಗಿದ್ದು, ಪರೀಕ್ಷೆಯ ಹೊಸ ಗೈಡ್​ಲೈನ್ಸ್ ಬಿಡುಗಡೆ ಮಾಡಿದೆ.

ಪ್ರಶ್ನೆಪತ್ರಿಕೆ ಲೀಕ್ ತಡೆಗೆ ಕಠಿಣ ಕ್ರಮ: ಆರೋಪಿಗಳಷ್ಟೇ ಅಲ್ಲ ಕಾಲೇಜುಗಳೂ ಬ್ಲಾಕ್ ಲಿಸ್ಟ್​ಗೆ, ಮಾನ್ಯತೆ, ಅನುದಾನಕ್ಕೂ ಕತ್ತರಿ

ಪಿಯುಸಿ, ಎಸ್ಎಸ್ಎಲ್​ಸಿ ಪರೀಕ್ಷೆ ಸಮೀಪಿಸುತ್ತಿದ್ದಂತೆಯೇ ಕಿಡಿಗೇಡಿಗಳು ಪ್ರಶ್ನೆ ಪತ್ರಿಕೆಗಳನ್ನು ಲೀಕ್ ಮಾಡಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಲು ಮುಂದಾಗುತ್ತಿದ್ದಾರೆ. ಇನ್ನು ಕೆಲವರು ಸಮಾಜಿಕ ಜಾತಣದಲ್ಲಿ ಪ್ರಶ್ನೆ ಪತ್ರಿಕೆ ಲೀಕ ಮಾಡಿ ವಿದ್ಯಾರ್ಥಿಗಳನ್ನು ವಂಚಿಸುತ್ತಿದ್ದು, ಇತಂಹ ಕಿಡಗೇಡಿಗಳನ್ನು ಮಟ್ಟ ಹಾಕಲು ಪಿಯು ಬೋರ್ಡ್ ಹೊಸ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ.

SSLC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್: ಮುಖ್ಯೋಪಾಧ್ಯಾಯರು ಸೇರಿ 8 ಮಂದಿ ಅರೆಸ್ಟ್

SSLC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಿಕ್ಷಕರು, ಮುಖ್ಯೋಪಾಧ್ಯಾಯರು ಮತ್ತು ವಿದ್ಯಾರ್ಥಿಗಳು ಸೇರಿದಂತೆ 8 ಆರೋಪಿಗಳನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ. ತುಮಕೂರು, ರಾಮನಗರ, ಕಲಬುರಗಿ ಜಿಲ್ಲೆಗಳ ಶಾಲೆಗಳ ಶಿಕ್ಷಕರು, ಸಹಾಯಕ ಶಿಕ್ಷಕರು, ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಶಾಮೀಲಾಗಿದ್ದರು.

SSLC ಪ್ರಶ್ನೆಪತ್ರಿಕೆ ಸೋರಿಕೆ: ಟಿವಿ9 ವರದಿ ಬೆನ್ನಲ್ಲೇ ಸೆಂಟರ್ ಪತ್ತೆ, ಡಿಡಿಪಿಐ ಸ್ಥಳಕ್ಕೆ ಭೇಟಿ

2026ರ ರಾಜ್ಯಮಟ್ಟದ ಎಸ್ಎಸ್ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆ-1 ಸಮಾಜ ವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿದೆ. ಪ್ರಶ್ನೆಪತ್ರಿಕೆ ಇದೀಗ ಎಲ್ಲೆಡೆ ವೈರಲ್​ ಕೂಡ ಆಗಿದೆ. ಟಿವಿ9 ವರದಿ ಗಮನಿಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಸೆಂಟರ್​​​ ಇದೀಗ ಪತ್ತೆ ಆಗಿದೆ. ಬೆಳಗಾವಿ ಡಿಡಿಪಿಐ ಲೀಲಾವತಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇಂದಿನಿಂದ ಶುರು SSLC ಪೂರ್ವ ಸಿದ್ಧತಾ ಪರೀಕ್ಷೆ; ಮೂರು ಹಂತದಲ್ಲಿ ಎಕ್ಸಾಮ್

2025-26ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಮೂರು ಹಂತದ ಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯಲಿದ್ದು, ಮೊದಲ ಹಂತದ ಪರೀಕ್ಷೆ ಜನವರಿ 5 ರಿಂದ ಪ್ರಾರಂಭವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ವೇಳಾಪಟ್ಟಿ ಪ್ರಕಟಿಸಿದ್ದು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ದಿಕ್ಸೂಚಿಯಾಗಿದೆ. ಪರೀಕ್ಷಾ ಪಾರದರ್ಶಕತೆಗೆ ಒತ್ತು ನೀಡಲಾಗಿದ್ದು, ಯಾವುದೇ ಲೋಪಗಳಿಗೆ ಕಠಿಣ ಕ್ರಮ ಎಚ್ಚರಿಕೆ ನೀಡಲಾಗಿದೆ.

SSLC ಫಲಿತಾಂಶ ಸುಧಾರಣೆ ಮಾಡುವ ಶಿಕ್ಷಕರಿಗೆ ಬಂಪರ್ ಗಿಫ್ಟ್ ಘೋಷಿಸಿದ ಸರ್ಕಾರ

ಎಸ್​ಎಸ್​​ಎಲ್​​ಸಿ ಫಲಿತಾಂಶ ಕುಸಿತವಾಗುತ್ತಿದೆ. ಇದರಿಂದ ಸರ್ಕಾರ ಮೇಲೇತ್ತಲು ಹೊಸ ತಂತ್ರರೂಪಿಸಿದೆ. 2025-26 ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಈ ವರ್ಷ 75% ಫಲಿತಾಂಶ ಸಾಧಿಸುವ ಟಾರ್ಗೇಟ್ ಸಿಎಂ ಸಿದ್ಧರಾಮಯ್ಯ ನೀಡಿದ್ದಾರೆ. ಈ ನಡುವೆ ಸರ್ಕಾರದ ಇತರೆ ಕೆಲಸಗಳ ನಡುವೆ ಫಲಿತಾಶಂ ಸುಧಾರಣೆ ಶಿಕ್ಷಕರಿಗೆ ಜಾಲೆಂಜ್ ಎದುರಾಗಿದ್ದು, ಈಗ ಸರ್ಕಾರ ಫಲಿತಾಂಶ ಸುಧಾರಣೆ ಮಾಡುವ ಶಿಕ್ಷಕರಿಗೆ ಗಿಫ್ಟ್ ನೀಡಲು ಮುಂದಾಗಿದೆ.

ಸುಳ್ಳು ಸುದ್ದಿ ಹರಡಿದರೆ ಹುಷಾರ್! ಮಧು ಬಂಗಾರಪ್ಪ ಎಚ್ಚರಿಕೆ, ಎಸ್​ಎಸ್ಎಲ್​ಸಿ-ಪಿಯುಸಿ ಪರೀಕ್ಷೆ ವಿಧಾನದ ಕುರಿತು ಸ್ಪಷ್ಟನೆ

ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಮೂರನೇ ಪರೀಕ್ಷೆ ರದ್ದಾಗಿದೆ ಎಂಬ ಸುಳ್ಳು ಸುದ್ದಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಇಲ್ಲ, ಮೂರು ಪರೀಕ್ಷೆಗಳೂ ನಡೆಯಲಿವೆ ಎಂದು ಅವರು ಖಚಿತಪಡಿಸಿದ್ದಾರೆ. ಗೊಂದಲ ಸೃಷ್ಟಿಸುವ ಮಾಧ್ಯಮಗಳಿಗೆ ಸಚಿವರು ಎಚ್ಚರಿಕೆ ನೀಡಿದ್ದು, ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೊಳಗಾಗಬಾರದು ಎಂದು ಮನವಿ ಮಾಡಿದ್ದಾರೆ.

ಶೈಕ್ಷಣಿಕ ಅವಧಿ ಕಡಿಮೆ: SSLC ಪರೀಕ್ಷೆಗೆ ಬ್ಲೂಪ್ರಿಂಟ್ ಸಿದ್ಧ, ಉತ್ತೀರ್ಣ ನಿಯಮದಲ್ಲಿ ಬದಲಾವಣೆ

ಸಾಲು ಸಾಲು ರಜೆಗಳಿಂದ ಶೈಕ್ಷಣಿಕ ಅವಧಿ ಕಡಿಮೆ ಹಿನ್ನೆಲೆ ಕರ್ನಾಟಕ ಶಿಕ್ಷಣ ಇಲಾಖೆ 8, 9, 10ನೇ ತರಗತಿಗಳಿಗೆ ವಿಶೇಷ ತರಗತಿ ನಡೆಸಲು ಸೂಚಿಸಿದೆ. 2025-26ರ SSLC ಪರೀಕ್ಷೆಯಲ್ಲಿ ಉತ್ತೀರ್ಣ ಅಂಕ 33ಕ್ಕೆ ಇಳಿಕೆ, ಹೊಸ ಬ್ಲೂಪ್ರಿಂಟ್ ಹಾಗೂ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ. ಪಠ್ಯಕ್ರಮ ಪೂರ್ಣಗೊಳಿಸಲು ಇಲಾಖೆ ಮುಂದಾಗಿದೆ.

SSLC, 2nd PUC Exam 2026 TimeTable: ಎಸ್​ಎಸ್​ಎಲ್​​ಸಿ, ಪಿಯು ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಕರ್ನಾಟಕ SSLC, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ಅಂತಿಮ ವೇಳಾಪಟ್ಟಿ: ಕರ್ನಾಟಕ ದ್ವಿತೀಯ ಪಿಯು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1 ಮತ್ತು 2ರ ಅಂತಿಮ ವೇಳಾಪಟ್ಟಿ ವೇಳಾಪಟ್ಟಿ ಪ್ರಕಟವಾಗಿದೆ. ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು (ನವೆಂಬರ್ 05) ಪ್ರಕಟಿಸಿದೆ. ಹಾಗಾದ್ರೆ, ದ್ವಿತೀಯ ಪಿಯುಸಿ ಹಾಗೂ ಎಸ್​ಎಸ್​ಎಸ್​(10ನೇ ತರಗತಿ) ಪರೀಕ್ಷೆಗಳು ಯಾವಾಗಿನಿಂದ ಆರಂಭವಾಗಿ ಯಾವಾಗ ಮುಗಿಯಲಿವೆ ಎನ್ನುವ ವೇಳಾಪಪಟ್ಟಿ ಕೆಳಗಿನಂತಿದೆ.

ವಿದ್ಯಾರ್ಥಿಗಳ ಪಾಸಿಂಗ್ ಮಾರ್ಕ್ಸ್ ಕಡಿತಗೊಳಿಸಿದ್ದಕ್ಕೆ ಹೊರಟ್ಟಿ ಬೇಸರ: ಪತ್ರದ ಮೂಲಕ ಶಿಕ್ಷಣ ಸಚಿವರಿಗೆ ಸಲಹೆ

ಇನ್ನು ಮುಂದೆ SSLCಯಲ್ಲಿ 35ರ ಬದಲಿಗೆ 33 ಅಂಕ ಪಡೆದರೆ ಉತ್ತೀರ್ಣ ಎಂದು ಘೋಷಿಸಲಾಗಿದ್ದು, ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಈಗಾಗಲೇ ಹೇಳಿದ್ದಾರೆ. ಆದ್ರೆ, ಇದೀಗ ಇದಕ್ಕೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.

SSLC ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ: ಪರೀಕ್ಷಾ ಶುಲ್ಕ ಹೆಚ್ಚಳವಾಗಿದ್ದು ಎಷ್ಟು ಗೊತ್ತಾ?

2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ (SSLC Exam) ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಜಾಲತಾಣದಲ್ಲಿ www.kseab.karnataka.gov.in ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಆದ್ರೆ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ (SSLC Exam Fee) ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಶಾಕ್‌ ಕೊಟ್ಟಿದೆ. ಹಾಗಾದ್ರೆ, ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಹೊರೆ ಎಷ್ಟಾಗಿದೆ ಎನ್ನುವ ವಿವರ ಇಲ್ಲಿದೆ.