SSLC
ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದರೆ ಅದು 10ನೇ ತರಗತಿ ಅಂದರೆ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ. ಈ ಪರೀಕ್ಷೆಯಲ್ಲಿ ತೇರ್ಗಡೆಯಾದ ಬಳಿಕ ಸಿಗುವ ಅಂಕಪಟ್ಟಿ ಪ್ರತಿಯೊಬ್ಬರ ಜೀವನದಲ್ಲಿ ಮಹತ್ವಪೂರ್ಣವಾದ ದಾಖಲೆಯಾಗಿದೆ. ಹೆಸರು, ಜನ್ಮ ದಿನಾಂಕ ಪರಿಶೀಲಿಸಲು ಎಸ್.ಎಸ್.ಎಲ್.ಸಿ. ಪರೀಕ್ಷೆಯ ಅಂಕಪಟ್ಟಿಯನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ. ಮುಂದಿನ ವಿದ್ಯಾಭ್ಯಾಸಕ್ಕೆ ಈ ಪ್ರಮಾಣ ಪತ್ರ ಅತ್ಯವಶ್ಯಕ. ಅದೇ ರೀತಿ ಉದ್ಯೋಗ, ಸರ್ಕಾರದ ಸೌಲಭ್ಯಗಳು ಪಡೆಯಬೇಕಾದರೆ, ಇನ್ನೂ ಅನೇಕ ರೀತಿಯ ಕೆಲಸ ಕಾರ್ಯಗಳಿಗೆ ಈ ಪ್ರಮಾಣ ಪತ್ರ ಬೇಕೇ ಬೇಕು. ಇಷ್ಟೆಲ್ಲಾ ಮಹತ್ವವುಳ್ಳ ಪ್ರಮಾಣ ಪತ್ರ ಪಡೆಯಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಡೆಸುವ 10ನೇ ತರಗತಿ ಉತ್ತೀರ್ಣರಾಗಬೇಕು. ಈ ಪರೀಕ್ಷೆ ಪ್ರತಿ ವರ್ಷ ನಡೆಯುತ್ತದೆ. ಇದು ಪಬ್ಲಿಕ್ ಪರೀಕ್ಷೆಯಾಗಿರುವುದರಿಂದ ಬಿಗಿ ಬಂದೋಬಸ್ತ್ನಲ್ಲಿ ನಡೆಸಲಾಗುತ್ತದೆ. ಆಯ್ದು ಕೊಂಡ ವಿಷಯಗಳ ಆಧಾರದ ಮೇಲೆ ಪರೀಕ್ಷೆಗಳು ನಡೆಯುತ್ತವೆ. ಆಯಾ ಶಾಲೆಗಳು ಕಳುಹಿಸಿದ ಮಾಹಿತಿ ಆಧಾರದ ಮೇಲೆ ವಿದ್ಯಾರ್ಥಿಗಳ ಹೆಸರಿನ ಮೇಲೆ ಹಾಲ್ ಟಿಕೆಟ್ ನೀಡಲಾಗುತ್ತೆ. ಆ ಹಾಲ್ ಟಿಕೆಟ್ ಇದ್ದರೆ ಮಾತ್ರ ಪರೀಕ್ಷೆ ಬರೆಯಲು ಅನುಮತಿ ಇರುತ್ತದೆ. ಕಾಲೇಜು ಮೆಟ್ಟಿಲು ಹತ್ತಲು ಈ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲೇಬೇಕು. ಹಾಗಾಗಿ ವಿದ್ಯಾರ್ಥಿ ಜೀವನದಲ್ಲಿ ಬರುವ ಮೊದಲ ಘಟ್ಟವನ್ನು ಎಸ್ಎಸ್ಎಲ್ಸಿ ಪರೀಕ್ಷೆ ಎಂದು ಪರಿಗಣಿಸಲಾಗುತ್ತದೆ
SSLC ತೃತೀಯ ಭಾಷೆ ವಿವಾದ: ಹೈಕೋರ್ಟ್ ಮೆಟ್ಟಿಲೇರಿದ ಸರ್ಕಾರದ ‘ಗ್ರೇಡಿಂಗ್’ ನಿರ್ಧಾರ
ಎಸ್ಎಸ್ಎಲ್ಸಿ ತೃತೀಯ ಭಾಷೆ ಪರೀಕ್ಷೆಯಲ್ಲಿ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಪಿಐಎಲ್ ಸಲ್ಲಿಕೆಯಾಗಿದೆ. ಸಾರ್ವಜನಿಕ ಚರ್ಚೆ ನಡೆಸದೆ ಹಾಗೂ ಸಚಿವ ಸಂಪುಟದ ಅನುಮೋದನೆ ಪಡೆಯದೆ ಕೈಗೊಂಡ ಈ ಏಕಪಕ್ಷೀಯ ನಿರ್ಧಾರವು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.
- Ganapathi Sharma
- Updated on: Apr 2, 2026
- 6:32 am
SSLC ಒಟ್ಟು ಮಾರ್ಕ್ಸ್ 625ದಿಂದ 525ಕ್ಕೆ ಇಳಿಕೆ: ಹಿಂದಿ ಅಂಕಕ್ಕೆ ಕೋಕ್
ಶಿಕ್ಷಣ ಇಲಾಖೆ SSLC ಪರೀಕ್ಷಾ ಮಾದರಿಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಇನ್ನು ಮುಂದೆ, SSLC ಪರೀಕ್ಷೆಗೆ ಒಟ್ಟು 525 ಅಂಕಗಳು ಮಾತ್ರ ನಿಗದಿ ಪಡಿಸಲಾಗಿದೆ. ಆ ಮೂಲಕ ತೃತೀಯ ಭಾಷೆ ಪರೀಕ್ಷೆಯ ಅಂಕಗಳನ್ನು ಅಂಕ ಪಟ್ಟಿಯಿಂದ ಹೊರಗಿಡಲಾಗಿದೆ. ಗ್ರೇಡ್ ಮೂಲಕ ಅಂಕ ನೀಡಲು ಮುಂದಾಗಿದೆ.
- Kiran Surya
- Updated on: Mar 27, 2026
- 3:37 pm
ಎಸ್ಎಸ್ಎಲ್ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಏಕೆ ಗೊತ್ತಾ?
ಕರ್ನಾಟಕದಲ್ಲಿ ಮಾರ್ಚ್ 30ರಂದು ನಡೆಯಬೇಕಿದ್ದ ಎಸ್ಎಸ್ಎಲ್ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದೆ. ದಿಢೀರ್ ಪರೀಕ್ಷೆ ಮುಂದೂಡಲು ಕಾರಣವೇನು ಮತ್ತು ಪರೀಕ್ಷೆ ಯಾವಾಗ ಎನ್ನುವ ಮಾಹಿತಿ ಇಲ್ಲಿದೆ.
- Vinay Kashappanavar
- Updated on: Mar 26, 2026
- 4:46 pm
ಪರೀಕ್ಷೆ ತ್ಯಜಿಸಿ ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ಕರೆತಂದ ಅಧಿಕಾರಿಗಳು!
ಗದಗದ ಮುಂಡರಗಿ ತಾಲೂಕಿನಲ್ಲಿ ಬಡತನದಿಂದ ಎಸ್ಎಸ್ಎಲ್ಸಿ ಪರೀಕ್ಷೆ ತ್ಯಜಿಸಿ ಕೂಲಿ ಕೆಲಸಕ್ಕೆ ತೆರಳಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಣ ಇಲಾಖೆಯ ಅಧಿಕಾರಿಗಳು ಮನವೊಲಿಸಿ ಮತ್ತೆ ಪರೀಕ್ಷೆ ಬರೆಯುವಂತೆ ಮಾಡಿದ್ದಾರೆ. ಈ ಮಾನವೀಯ ಕಾರ್ಯದಿಂದ ವಿದ್ಯಾರ್ಥಿನಿಯ ಭವಿಷ್ಯಕ್ಕೆ ನೆರವಾಗಿದೆ. ಅಧಿಕಾರಿಗಳ ಸಮಯೋಚಿತ ನಡೆಗೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಇದು ಶಿಕ್ಷಣದಿಂದ ವಂಚಿತರಾಗುತ್ತಿರುವ ಇತರ ವಿದ್ಯಾರ್ಥಿಗಳಿಗೂ ಸ್ಫೂರ್ತಿ ನೀಡಿದೆ.
- Sanjeev Pandre
- Updated on: Mar 23, 2026
- 2:47 pm
ಮಕ್ಕಳ ಬಾಳಲ್ಲಿ ಶಾಲಾ ಆಡಳಿತ ಮಂಡಳಿ ಚೆಲ್ಲಾಟ: ಪರೀಕ್ಷೆಯಿಂದ ವಂಚಿತರಾದ SSLC ವಿದ್ಯಾರ್ಥಿಗಳು
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟಗೇರಿಯ ಉದಯ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಶಾಲೆಯ ಎಡವಟ್ಟಿನಿಂದ ಕಣ್ಣೀರಿಡುವಂತಾಗಿದೆ. ಈ ಶಾಲೆಯ 17 ಮಕ್ಕಳು ಇಂದು ಪರೀಕ್ಷೆ ಬರೆಯಬೇಕಿತ್ತು. ಅದ್ರಂತೆ ನಿನ್ನೆ ಎಲ್ಲರಿಗೂ ಹಾಲ್ ಟಿಕೆಟ್ ಬಂದಿತ್ತು. ಆದರೆ ಇಬ್ಬರಿಗೆ ಮಾತ್ರ ಬಂದಿರಲಿಲ್ಲ. ಹೀಗಾಗಿ ಪರೀಕ್ಷೆ ಹಾಜರಾಗಲು ಸಾಧ್ಯವಾಗದಕ್ಕೆ ಬಾಲಕರು ಮತ್ತು ಪೋಷಕರು ಕಣ್ಣೀರಿಟ್ಟಿದ್ದಾರೆ.
- Gopal AS
- Updated on: Mar 18, 2026
- 6:23 pm
ಆಂಬ್ಯುಲೆನ್ಸ್ನಲ್ಲೇ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ: ವಿಡಿಯೋ ನೋಡಿ
ವಿಧಿಯಾಟಕ್ಕೆ ಸೋಲದ ಅಸಾಮಾನ್ಯ ಪ್ರತಿಭೆ ಕೋಲಾರದ ಧೀಮಂತ ವಿದ್ಯಾರ್ಥಿನಿ ಕುಸುಮಾ. ಈಕೆ ಅಪಘಾತದಲ್ಲಿ ಕಾಲು ಕಳೆದುಕೊಂಡರೂ ಎದೆಗುಂದದೆ, ಆಂಬ್ಯುಲೆನ್ಸ್ನಲ್ಲೇ ಬಂದು ಸ್ಟ್ರೆಚರ್ ಮೇಲೆ ಮಲಗಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ಮೂಲಕ ಅಚ್ಚರಿ ಮೂಡಿಸಿದ್ದಾಳೆ. ಸಾವು-ಬದುಕಿನ ಹೋರಾಟದ ನಡುವೆಯೂ ಈಕೆ ತೋರಿದ ಶಿಕ್ಷಣ ಪ್ರೇಮದ ವಿಡಿಯೋ ಇಲ್ಲಿದೆ ನೋಡಿ.
- Rajendra Simha BL
- Updated on: Mar 18, 2026
- 11:49 am
SSLC ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್ ಮನ, ವಿಡಿಯೋ ವೈರಲ್
2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1 (SSLC Exam) ನಾಳೆಯಿಂದ ಅಂದರೆ ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ನಡೆಯಲಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ (Exam) ಬರೆಯಲು ಸಜ್ಜಾಗಿದ್ದಾರೆ. ಇನ್ನು ವಿದ್ಯಾರ್ಥಿಗಳ ಪರೀಕ್ಷಾ ಪ್ರಯಾಣವನ್ನು ಸುಗಮಗೊಳಿಸಲು ಕೆಎಸ್ಆರ್ಟಿಸಿ ಉಚಿತ ಪ್ರಯಾಣ ಘೋಷಿಸಿದ್ದು, ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಬಸ್ನಲ್ಲಿ ಪ್ರಯಾಣಿಸಬಹುದು. ಇನ್ನು ಪರೀಕ್ಷೆಗೆ ಹೋಗುವ ಮಕ್ಕಳಿಗೆ ಸಹಾಯ ಮಾಡಿ ಎಂದು ಕಂಡಕ್ಟರ್ ಒಬ್ಬರು ಮನವಿ ಮಾಡಿದ್ದಾರೆ. ಡ್ರೈವರ್ ಸಾಹೇಬ್ರೆ ಎಸ್ಎಸ್ಎಲ್ಸಿ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳು ಎಲ್ಲೇ ಕೈ ಮಾಡಿದರೂ ಬಸ್ ನಿಲ್ಲಿಸಿ ಎಂದು ಕಂಡಕ್ಟರ್ ಹೇಳಿದ್ದು, ಸದ್ಯ ಈ ವಿಡಿಯೋ ಫುಲ್ ವೈರಲ್ ಆಗಿದೆ.
- Ramesh B Jawalagera
- Updated on: Mar 17, 2026
- 10:07 pm
SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ
2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1 (SSLC Exam) ಇದೇ ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ನಡೆಯಲಿದ್ದು, ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ (Exam) ಸಜ್ಜಾಗುತ್ತಿದ್ದಾರೆ. ಇನ್ನು ವಿದ್ಯಾರ್ಥಿಗಳ ಪರೀಕ್ಷಾ ಪ್ರಯಾಣವನ್ನು ಸುಗಮಗೊಳಿಸಲು ಕೆಎಸ್ಆರ್ಟಿಸಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪರೀಕ್ಷಾ ದಿನಗಳಲ್ಲಿ ಉಚಿತ ಬಸ್ ಪ್ರಯಾಣದ (Bus Travel) ಸೌಲಭ್ಯವನ್ನು ಘೋಷಿಸಿದೆ.
- Kiran Surya
- Updated on: Mar 16, 2026
- 5:21 pm
ಶಿವಮೊಗ್ಗದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಯ ಕೊಲೆ: ಅಸಲಿಗೆ ಅಲ್ಲಿ ನಡೆದಿದ್ದೇನು ಗೊತ್ತೇ? ಆಘಾತಕಾರಿ ಮಾಹಿತಿ ಬಯಲು
Shivamogga SSLC Student Murder: ಶಿವಮೊಗ್ಗ ಹೊರವಲಯದ ಸೂಳೆಬೈಲಿನಲ್ಲಿ ಸ್ಪೇಶಲ್ ಕ್ಲಾಸ್ ಮುಗಿಸಿಕೊಂಡು ವಾಪಸ್ ಮನೆಗೆ ಹೋಗುತ್ತಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿಯನ್ನು ಅದೇ ಬಡಾವಣೆಯ 9ನೇ ತರಗತಿ ಫೇಲ್ ಆಗಿರುವ ಬಾಲಕರು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಅಸಲಿಗೆ ಅಲ್ಲಿ ಏನು ನಡೆಯಿತು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
- Basavaraj Yaraganavi
- Updated on: Feb 24, 2026
- 9:25 am
SSLC, PUC Exam 2026: ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ ನಡೆಯಲಿದ್ದು, ಈ ಬಗ್ಗೆ ಹಾಸನದಲ್ಲಿ ಡಿಸಿ ಲತಾಕುಮಾರಿ ಸುದ್ದಿಗೋಷ್ಟಿ ನಡೆಸಿದರು. ಈ ಬಾರಿಯ ಪರೀಕ್ಷೆಗಳಿಗೆ ಸಂಬಂಧಿಸಿದಂತೆ, ಪರೀಕ್ಷಾ ಕೇಂದ್ರಕ್ಕೆ ತೆರಳುವ ಬಾಲಕರಿಗೆ ಹಾಲ್ ಟಿಕೆಟ್ ತೋರಿಸಿದರೆ ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಆದಾಗ್ಯೂ, ಇದರ ಲಿಖಿತ ಆದೇಶ ಇನ್ನೂ ಹೊರಬಿದ್ದಿಲ್ಲ, ಆದರೆ ಕೆಎಸ್ಆರ್ಟಿಸಿಗೆ ಮಾಹಿತಿ ತಲುಪಿದೆ ಎಂದು ಡಿಸಿ ಹೇಳಿದ್ದಾರೆ.
- Bhavana Hegde
- Updated on: Feb 20, 2026
- 12:33 pm
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಮಾರ್ಚ್ ತಿಂಗಳು ಬಂದರೆ ಸಾಕು, ವಿದ್ಯಾರ್ಥಿಗಳ (Students) ಹೃದಯ ಬಡಿತ ಜೋರಾಗುತ್ತದೆ. ಯಾಕಂದ್ರೆ ಮಾರ್ಚ್ನಿಂದಲೇ ಎಸ್ಎಸ್ಎಲ್ಸಿ (SSLC) ಹಾಗೂ ದ್ವಿತೀಯ ಪಿಯುಸಿ (PUC) ಪರೀಕ್ಷೆಗಳು ಶುರುವಾಗುತ್ತವೆ. ಹೀಗಾಗಿ ಮಾರ್ಚ್ ತಿಂಗಳನ್ನ ಪರೀಕ್ಷೆ ತಿಂಗಳು ಎಂದೇ ಕರೆಯಲಾಗುತ್ತೆ. ಇನ್ನು ಹಲವು ವಿದ್ಯಾರ್ಥಿಗಳು ಪರೀಕ್ಷೆ ಅಂದ್ರೆ ಸಾಕು ಭಯ ಹುಟ್ಟಿಸುತ್ತೆ. ಪ್ರತಿ ವಿಷಯಕ್ಕೆ ಎಷ್ಟು ದಿನಗಳು ಬೇಕು, ಯಾವ ಚಾಪ್ಟರ್ ಎಷ್ಟು ಗಂಟೆ ಓದಬೇಕು, ರಿವಿಷನ್ಗೆ ಎಷ್ಟು ಸಮಯ ಬೇಕು ಎನ್ನುವ ಗೊಂದಗಳು ವಿದ್ಯಾರ್ಥಿಗಳಲ್ಲಿ ಇದ್ದೇ ಇರುತ್ತವೆ. ಹೀಗಾಗಿ ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳು ಆತಂಕ, ಭಯಪಡಬಾರದು. ಈ ಬಗ್ಗೆ ಟಿಪ್ಸ್ ಇಲ್ಲಿವೆ ಕೇಳಿ.
- Ramesh B Jawalagera
- Updated on: Feb 19, 2026
- 7:19 pm
CBSE ವಿದ್ಯಾರ್ಥಿಗಳು, ಪೋಷಕರು ನೋಡಲೇಬೇಕಾದ ಸ್ಟೋರಿ ಇದು
ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್ಇ) 2025-26ನೇ ಶೈಕ್ಷಣಿಕ ವರ್ಷದಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿದೆ. ಈ ನಿರ್ಧಾರವು ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ರ ಶಿಫಾರಸುಗಳಿಗೆ ಅನುಗುಣವಾಗಿದ್ದು, ಹೊಸ ನಿಯಮಗಳು 2026 ರಿಂದ ಜಾರಿಗೆ ಬರಲಿವೆ. ಎಲ್ಲಾ ವಿದ್ಯಾರ್ಥಿಗಳು ಸಹ ಮೊದಲ ಪರೀಕ್ಷೆ ಕಡ್ಡಾಯ ಅಂತಿದೆ ಸಿಬಿಎಸ್ಇ. ಹಾಗಾದ್ರೆ, ಏನು ಹೇಳುತ್ತಿದೆ ಸಿಬಿಎಸ್ಇ? ಈ ಬಗ್ಗೆ ಪೋಷಕರು ಹಾಗೂ ವಿದ್ಯಾರ್ಥಿಗಳಿಗಾಗಿ ಮಾಹಿತಿ ಇಲ್ಲಿದೆ ನೋಡಿ.
- Ramesh B Jawalagera
- Updated on: Feb 17, 2026
- 3:51 pm