AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Supreme Court

Supreme Court

ನವದೆಹಲಿಯಲ್ಲಿ ನೆಲೆಗೊಂಡಿರುವ ಭಾರತದ ಸರ್ವೋಚ್ಚ ನ್ಯಾಯಾಲಯವು ದೇಶದ ಅತ್ಯುನ್ನತ ನ್ಯಾಯಾಂಗ ವ್ಯವಸ್ಥೆಯಾಗಿದೆ. ಇದನ್ನು ಜನವರಿ 28, 1950 ರಂದು ಸ್ಥಾಪಿಸಲಾಯಿತು, ಇದು ಮೇಲ್ಮನವಿಯ ಅಂತಿಮ ನ್ಯಾಯಾಲಯವಾಗಿ ಮತ್ತು ಸಂವಿಧಾನದ ಖಾತರಿಗಾರನಾಗಿ ಕಾರ್ಯನಿರ್ವಹಿಸುತ್ತದೆ. ನ್ಯಾಯಾಲಯವು ಭಾರತದ ಮುಖ್ಯ ನ್ಯಾಯಾಧೀಶರ ನೇತೃತ್ವದಲ್ಲಿದೆ ಮತ್ತು ಗರಿಷ್ಠ 34 ನ್ಯಾಯಾಧೀಶರನ್ನು ಒಳಗೊಂಡಿದೆ. ಸಂವಿಧಾನವನ್ನು ವ್ಯಾಖ್ಯಾನಿಸುವಲ್ಲಿ, ನ್ಯಾಯಾಂಗ ಪರಿಶೀಲನೆಯನ್ನು ಖಾತ್ರಿಪಡಿಸುವಲ್ಲಿ ಮತ್ತು ಮೂಲಭೂತ ಹಕ್ಕುಗಳನ್ನು ರಕ್ಷಿಸುವಲ್ಲಿ ಸುಪ್ರೀಂ ಕೋರ್ಟ್ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇದು ಮೇಲ್ಮನವಿಗಳು, ರಿಟ್ ಅರ್ಜಿಗಳು ಮತ್ತು ವಿಶೇಷ ರಜೆ ಅರ್ಜಿಗಳನ್ನು ಆಲಿಸುತ್ತದೆ. ಅದರ ನಿರ್ಧಾರಗಳು ದೇಶದ ಇತರ ಎಲ್ಲಾ ನ್ಯಾಯಾಲಯಗಳಿಗೆ ಬದ್ಧವಾಗಿರುತ್ತವೆ. ನ್ಯಾಯಾಲಯವು ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ನಡುವಿನ ಅಥವಾ ರಾಜ್ಯಗಳ ನಡುವಿನ ವಿವಾದಗಳನ್ನು ಸಹ ನಿರ್ಣಯಿಸುತ್ತದೆ.ಸುಪ್ರೀಂ ಕೋರ್ಟ್ ನ್ಯಾಯದ ಸ್ತಂಭವಾಗಿ ನಿಂತಿದ್ದು, ಕಾನೂನಿನ ನಿಯಮವನ್ನು ಎತ್ತಿಹಿಡಿಯುತ್ತದೆ ಮತ್ತು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಪ್ರಜಾಪ್ರಭುತ್ವದ ತತ್ವಗಳನ್ನು ರಕ್ಷಿಸುತ್ತದೆ.

ಇನ್ನೂ ಹೆಚ್ಚು ಓದಿ

ಉನ್ನಾವ್ ಲೈಂಗಿಕ ದೌರ್ಜನ್ಯ ಪ್ರಕರಣ; ಕುಲದೀಪ್ ಸೆಂಗಾರ್ ಜಾಮೀನು ರದ್ದತಿಗೆ ಸುಪ್ರೀಂ ಕೋರ್ಟ್ ತಡೆ

ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಶಾಸಕ ಕುಲದೀಪ್ ಸೆಂಗಾರ್ ಅವರಿಗೆ ನೀಡಲಾಗಿದ್ದ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಅವರ ಜಾಮೀನು ರದ್ದುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದರಿಂದ ಕುಲದೀಪ್ ಸೆಂಗಾರ್​​ಗೆ ಭಾರೀ ಮುಖಭಂಗವಾಗಿದೆ. ಕುಲದೀಪ್ ಸೆಂಗಾರ್‌ಗೆ ಪರಿಹಾರ ನೀಡುವ ದೆಹಲಿ ಹೈಕೋರ್ಟ್‌ನ ನಿರ್ಧಾರಕ್ಕೆ ತಡೆ ನೀಡುವಂತೆ ಕೋರಿ ಸಿಬಿಐ ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.

ವಿವಾದದ ಬಳಿಕ ಅರಾವಳಿ ಬೆಟ್ಟದ ಕುರಿತ ತನ್ನದೇ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಅರಾವಳಿ ಬೆಟ್ಟಗಳ ಕುರಿತಾದ ತನ್ನದೇ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಅರಾವಳಿ ಬೆಟ್ಟಗಳ ಕುರಿತು ತನ್ನ ನವೆಂಬರ್ ತಿಂಗಳ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ತಜ್ಞರ ಸಮಿತಿಯು ಈ ಹಿಂದೆ ಸಲ್ಲಿಸಿದ ವರದಿಯನ್ನು ವಿಶ್ಲೇಷಿಸಲು ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ರಚಿಸಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ನೇತೃತ್ವದ ಮೂವರು ನ್ಯಾಯಮೂರ್ತಿಗಳ ನ್ಯಾಯಪೀಠ ಹೇಳಿದೆ.

ಸತ್ತ ಆರ್ಥಿಕತೆಯಷ್ಟೇ ಅಲ್ಲ, ಸತ್ತ ಸಮಾಜವೂ ಆಗುತ್ತಿದ್ದೇವೆ: ಉನ್ನಾವೋ ರೇಪ್ ಸಂತ್ರಸ್ತೆ ಭೇಟಿ ಬಳಿಕ ರಾಹುಲ್ ಗಾಂಧಿ ಆಕ್ರೋಶದ ಹೇಳಿಕೆ

Unnao rape survivor meets Rahul Gandhi: ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಹಾಗೂ ಆಕೆಯ ತಾಯಿ ಇಂದು ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಅತ್ಯಾಚಾರ ಆರೋಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡಿದ್ದನ್ನು ರೇಪ್ ಸಂತ್ರಸ್ತೆ ವಿರೋಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮೂರು ನೆರವುಗಳನ್ನು ಕೇಳಿದ್ದಾರೆ. ಪ್ರಧಾನಿಯನ್ನೂ ಭೇಟಿ ಮಾಡಬಯಸಿದ್ದಾರೆ.

ಬೇರೆ ಜಾತಿ, ಧರ್ಮದವನನ್ನು ಮದುವೆಯಾದರೆ ಮಗಳಿಗೆ ಅಪ್ಪನ ಆಸ್ತಿಯಲ್ಲಿ ಪಾಲಿಲ್ಲ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಮೊದಲೆಲ್ಲ ಗಂಡುಮಕ್ಕಳಿಗೆ ಮಾತ್ರ ಅಪ್ಪನ ಆಸ್ತಿಯಲ್ಲಿ ಪಾಲು ಎಂಬ ನಿಯಮವಿತ್ತು. ಆದರೆ, ಹೊಸ ಕಾನೂನು ಹೆಣ್ಣುಮಕ್ಕಳಿಗೂ ತಂದೆಯ ಆಸ್ತಿಯಲ್ಲಿ ಸಮಾನ ಹಕ್ಕಿನ ಅವಕಾಶ ನೀಡಿದೆ. ಹೀಗಿದ್ದರೂ, ಒಂದುವೇಳೆ ಮಗಳು ಸಮುದಾಯದಿಂದ ಹೊರಗೆ ವಿವಾಹವಾದರೆ ಅಥವಾ ಅಪ್ಪನ ಇಚ್ಚೆಗೆ ವಿರುದ್ಧವಾಗಿ ಪ್ರೀತಿಸಿ ಮದುವೆಯಾದರೆ ಆಕೆಗೆ ಆಸ್ತಿಯಲ್ಲಿ ಪಾಲು ನೀಡಲೇಬೇಕೆಂದೇನೂ ಇಲ್ಲ. ಅಂತಹ ಪರಿಸ್ಥಿತಿಯಲ್ಲಿ ಅಪ್ಪನ ನಿರ್ಧಾರವೇ ಸರ್ವೋಚ್ಚವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್​ ಹೇಳಿದೆ.

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಎಲ್ಲಿಗೆ ಹೋದ್ರೂ ತಪ್ಪುತ್ತಿಲ್ಲ ಸಂಕಷ್ಟ!

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಇನ್ನಿಲ್ಲದ ಕಾನೂನು ಹೋರಾಟ ನಡೆಸಿದ್ದಾರೆ. ಆದ್ರೆ, ಎಲ್ಲೂ ಹೋದರೂ ಸಹ ಪ್ರಜ್ವಲ್​​ಗೆ ಸಂಕಷ್ಟ ಮಾತ್ರ ತಪ್ಪುತ್ತಿಲ್ಲ. ಇದೀಗ ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನಲ್ಲೂ ಭಾರಿ ಹಿನ್ನಡೆಯಾಗಿದೆ.

ಹುಬ್ಬಳ್ಳಿ: ಕಾನೂನು ಸಚಿವರ ವಿರುದ್ಧವೇ ಹೋರಾಡಿ ಸುಪ್ರೀಂಕೋರ್ಟ್​​ನಲ್ಲಿ ಗೆದ್ದ ಅಕ್ಕ ತಂಗಿ

ಹುಬ್ಬಳ್ಳಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಜಯ ಗಳಿಸಿದ್ದಾರೆ. ಜಾಗ ತಮ್ಮದು ಎಂದು ಹೇಳಿಕೊಂಡಿದ್ದ ಸಚಿವರ ಕುಟುಂಬಕ್ಕೆ ಕೋರ್ಟ್​​ ಶಾಕ್​​ ಕೊಟ್ಟಿದ್ದು, 135 ವರ್ಷಗಳ ಬಳಿಕ ಜಾಗ ಮರಳಿ ನಮ್ಮದಾಗಿದೆ ಎಂದು ಸಹೋದರಿಯರು ಸಂತಸ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ಅವಹೇಳನ ಸರಿಯಲ್ಲ; ನಿವೃತ್ತ ನ್ಯಾಯಮೂರ್ತಿಗಳಿಂದ ಸಹಿ ಅಭಿಯಾನ

ನಾಪತ್ತೆಯಾದ 5 ರೋಹಿಂಗ್ಯಾಗಳನ್ನು ಪತ್ತೆಹಚ್ಚಲು ಕೋರಿದ ಅರ್ಜಿಯ ಪ್ರತಿಕ್ರಿಯಿಸಿದ್ದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಭಾರತ ಅಕ್ರಮ ವಲಸಿಗರಿಗೆ ರೆಡ್ ಕಾರ್ಪೆಟ್ ಹಾಸಬೇಕೇ? ಎಂದು ಕೇಳಿದ್ದರು. ಯಾರಾದರೂ ಅಕ್ರಮವಾಗಿ ಪ್ರವೇಶಿಸಿದ್ದರೆ ಅವರನ್ನು ದೇಶದಲ್ಲಿ ಇರಿಸಿಕೊಳ್ಳುವುದು ರಾಜ್ಯದ ಜವಾಬ್ದಾರಿಯೇ? ನಮ್ಮ ದೇಶದಲ್ಲಿ ಬಡವರೂ ಇದ್ದಾರೆ. ಅವರು ನಮ್ಮ ದೇಶದ ನಾಗರಿಕರು. ಅವರು ನಮ್ಮ ದೇಶದ ಸೌಕರ್ಯಗಳಿಗೆ ಅರ್ಹರಲ್ಲವೇ? ಎಂದು ಪ್ರಶ್ನಿಸಿದ್ದರು. ಇದಕ್ಕೆ ತೀವ್ರ ಆಕ್ಷೇಪಣೆಗಳು ಬಂದಿದ್ದವು. ಆದರೆ, ಸುಪ್ರೀಂ ಕೋರ್ಟ್ ಪರವಾಗಿ ನಿವೃತ್ತ ನ್ಯಾಯಮೂರ್ತಿಗಳು ಸಹಿ ಅಭಿಯಾನ ನಡೆಸಿದ್ದಾರೆ.

ಸಿದ್ದರಾಮಯ್ಯಗೆ ಸುಪ್ರೀಂ ಸಮನ್ಸ್‌: ಉಚಿತ ಗ್ಯಾರೆಂಟಿ ಕೊಟ್ಟ ಸರ್ಕಾರ ಪತನವಾಗುತ್ತೆ ಎಂದ ವಕೀಲ

ಸಿಎಂ ಕುರ್ಚಿಗಾಗಿ ಕರ್ನಾಟಕ ಕಾಂಗ್ರೆಸ್​​ನಲ್ಲಿ ಮುಸುಕಿನ ಗುದ್ದಾಟ ಶುರುವಾಗಿದೆ. ಇಂದಿನಿಂದ ಆರಂಭವಾಗಿರುವ ಚಳಿಗಾಲದ ಅಧಿವೇಶನದ ಬಳಿಕ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ ಎನ್ನುವ ಚರ್ಚೆಗಳು ನಡೆದಿವೆ. ಇದರ ಮಧ್ಯೆ ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದ್ದು, ಈ ಬಗ್ಗೆ ವಕೀಲ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಕುರ್ಚಿ ಕದನದ ನಡುವೆ ಸಿದ್ದರಾಮಯ್ಯಗೆ ಬಿಗ್​​ ಶಾಕ್​​:  ಸುಪ್ರೀಂಕೋರ್ಟ್​ನಿಂದ​​ ನೋಟಿಸ್​​

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್​​ ನೋಟಿಸ್ ಜಾರಿ ಮಾಡಿದೆ. 2023ರ ವರುಣಾ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಆಮಿಷವೊಡ್ಡಿ ಗೆದ್ದಿದ್ದಾರೆ ಎಂಬ ಕೆ. ಶಂಕರ್ ಅವರ ಆರೋಪದ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಈ ಕ್ರಮ ಕೈಗೊಂಡಿದೆ. ಚುನಾವಣಾ ಆಯೋಗಕ್ಕೂ ನೋಟಿಸ್ ನೀಡಲಾಗಿದ್ದು, ಈ ಹಿಂದೆ ಶಂಕರ್​​ ಅವರ ಅರ್ಜಿಯನ್ನು ಹೈಕೋರ್ಟ್​​ ವಜಾಗೊಳಿಸಿತ್ತು.

ರೆಡ್ ಕಾರ್ಪೆಟ್ ಸ್ವಾಗತ ನೀಡಬೇಕಾ?; ರೋಹಿಂಗ್ಯಾಗಳ ಅಕ್ರಮ ಪ್ರವೇಶದ ಬಗ್ಗೆ ಸುಪ್ರೀಂ ಕೋರ್ಟ್‌ ಪ್ರಶ್ನೆ

ದೇಶಕ್ಕೆ ಅಕ್ರಮವಾಗಿ ಪ್ರವೇಶಿಸುವವರಿಗೆ ನ್ಯಾಯಾಂಗವು ರಕ್ಷಣೆ ನೀಡುತ್ತದೆಯೇ ಎಂದು ಪ್ರಶ್ನಿಸಿ, ರೋಹಿಂಗ್ಯಾ ನಿರಾಶ್ರಿತರ ಕಣ್ಮರೆ ಆರೋಪದ ಮೇಲೆ ಸಲ್ಲಿಸಲಾದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತೀಕ್ಷ್ಣವಾದ ನಿಲುವನ್ನು ತೆಗೆದುಕೊಂಡಿತು. "ನಾವು ಅವರಿಗೆ ಕೆಂಪು ಕಾರ್ಪೆಟ್ ಹಾಸಬೇಕೆಂದು ನೀವು ಬಯಸುತ್ತೀರಾ?" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಪ್ರಶ್ನಿಸಿದ್ದಾರೆ.

ಟ್ಯಾಕ್ಸ್ ಒಪ್ಪಂದ ಇದ್ದಾಗ ಶೇ. 20 ಟಿಡಿಎಸ್ ಮುರಿದುಕೊಳ್ಳುವಂತಿಲ್ಲ: ಐಟಿ ಇಲಾಖೆಗೆ ಸುಪ್ರೀಂ ಆದೇಶ

Supreme Court ruling on TDS over foreign companies: ಟ್ಯಾಕ್ಸ್ ಒಪ್ಪಂದ ಇರುವ ದೇಶಗಳ ಕಂಪನಿಗಳಿಗೆ ಪಾವತಿಸುವ ಹಣಕ್ಕೆ ಶೇ. 10ಕ್ಕಿಂತ ಹೆಚ್ಚು ಟಿಡಿಎಸ್ ಮುರಿದುಕೊಳ್ಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ವಿದೇಶೀ ಕಂಪನಿಗಳಿಗೆ ಹಣ ಪಾವತಿಸುವಾಗ ಭಾರತೀಯ ಕಂಪನಿಗಳು ಶೇ. 20 ಟಿಡಿಎಸ್ ಮುರಿದುಕೊಳ್ಳಬೇಕು ಎಂಬುದು ಐಟಿ ತಾಕೀತಾಗಿತ್ತು. ವಿದೇಶೀ ಕಂಪನಿಗಳಿಗೆ ಪ್ಯಾನ್ ಇಲ್ಲದಿರುವುದರಿಂದ ಶೇ. 20 ಟಿಡಿಎಸ್ ಅನ್ವಯ ಆಗುತ್ತದೆ ಎನ್ನುವುದು ಐಟಿ ವಾದ.

ನ್ಯಾ| ಸೂರ್ಯಕಾಂತ್ ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ಸ್ವೀಕಾರ

Justice Surya Kant takes oath as 53rd CJI: ಹರ್ಯಾಣ ಮೂಲದ 63 ವರ್ಷದ ನ್ಯಾ| ಸೂರ್ಯಕಾಂತ್ ಅವರು ಭಾರತದ ಮುಖ್ಯನ್ಯಾಯಮೂರ್ತಿಯಾಗಿ ಪದಗ್ರಹಣ ಮಾಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನ. 24ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಸಿಜೆಐಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಹಲವಾರು ವರ್ಷಗಳಿಂದ ಬಾಕಿ ಉಳಿದಿರುವ ಪ್ರಕರಣಗಳನ್ನು ಬೇಗ ವಿಲೇವಾರಿ ಮಾಡುವುದು ನೂತನ ಮುಖ್ಯನ್ಯಾಯಮೂರ್ತಿಗಳ ಮೊದಲ ಆದ್ಯತೆಯಾಗಿದೆ.

ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು