Supreme Court
ನವದೆಹಲಿಯಲ್ಲಿ ನೆಲೆಗೊಂಡಿರುವ ಭಾರತದ ಸರ್ವೋಚ್ಚ ನ್ಯಾಯಾಲಯವು ದೇಶದ ಅತ್ಯುನ್ನತ ನ್ಯಾಯಾಂಗ ವ್ಯವಸ್ಥೆಯಾಗಿದೆ. ಇದನ್ನು ಜನವರಿ 28, 1950 ರಂದು ಸ್ಥಾಪಿಸಲಾಯಿತು, ಇದು ಮೇಲ್ಮನವಿಯ ಅಂತಿಮ ನ್ಯಾಯಾಲಯವಾಗಿ ಮತ್ತು ಸಂವಿಧಾನದ ಖಾತರಿಗಾರನಾಗಿ ಕಾರ್ಯನಿರ್ವಹಿಸುತ್ತದೆ. ನ್ಯಾಯಾಲಯವು ಭಾರತದ ಮುಖ್ಯ ನ್ಯಾಯಾಧೀಶರ ನೇತೃತ್ವದಲ್ಲಿದೆ ಮತ್ತು ಗರಿಷ್ಠ 34 ನ್ಯಾಯಾಧೀಶರನ್ನು ಒಳಗೊಂಡಿದೆ. ಸಂವಿಧಾನವನ್ನು ವ್ಯಾಖ್ಯಾನಿಸುವಲ್ಲಿ, ನ್ಯಾಯಾಂಗ ಪರಿಶೀಲನೆಯನ್ನು ಖಾತ್ರಿಪಡಿಸುವಲ್ಲಿ ಮತ್ತು ಮೂಲಭೂತ ಹಕ್ಕುಗಳನ್ನು ರಕ್ಷಿಸುವಲ್ಲಿ ಸುಪ್ರೀಂ ಕೋರ್ಟ್ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇದು ಮೇಲ್ಮನವಿಗಳು, ರಿಟ್ ಅರ್ಜಿಗಳು ಮತ್ತು ವಿಶೇಷ ರಜೆ ಅರ್ಜಿಗಳನ್ನು ಆಲಿಸುತ್ತದೆ. ಅದರ ನಿರ್ಧಾರಗಳು ದೇಶದ ಇತರ ಎಲ್ಲಾ ನ್ಯಾಯಾಲಯಗಳಿಗೆ ಬದ್ಧವಾಗಿರುತ್ತವೆ. ನ್ಯಾಯಾಲಯವು ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ನಡುವಿನ ಅಥವಾ ರಾಜ್ಯಗಳ ನಡುವಿನ ವಿವಾದಗಳನ್ನು ಸಹ ನಿರ್ಣಯಿಸುತ್ತದೆ.ಸುಪ್ರೀಂ ಕೋರ್ಟ್ ನ್ಯಾಯದ ಸ್ತಂಭವಾಗಿ ನಿಂತಿದ್ದು, ಕಾನೂನಿನ ನಿಯಮವನ್ನು ಎತ್ತಿಹಿಡಿಯುತ್ತದೆ ಮತ್ತು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಪ್ರಜಾಪ್ರಭುತ್ವದ ತತ್ವಗಳನ್ನು ರಕ್ಷಿಸುತ್ತದೆ.
ಇನ್ನೂ ಹೆಚ್ಚು ಓದಿಚುನಾವಣಾ ಆಯುಕ್ತರ ನೇಮಕಾತಿಗೆ ಸುಪ್ರೀಂ ಕೋರ್ಟ್ನಲ್ಲಿ ಕೇಂದ್ರ ಸರ್ಕಾರ ಸಮರ್ಥನೆ
ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಹೊರಗಿಟ್ಟಿರುವುದನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಖಾರವಾಗಿ ಉತ್ತರಿಸಿದೆ. ಲೋಕಪಾಲ್ ಹಾಗೂ ಸಿಬಿಐ ನಿರ್ದೇಶಕರ ಆಯ್ಕೆ ಸಮಿತಿಗಳಲ್ಲಿ ಸಿಜೆಐ ಭಾಗವಾಗಿದ್ದಾರೆ. ಹಾಗಿರುವಾಗ, ಪ್ರಜಾಪ್ರಭುತ್ವದ ಅತ್ಯಂತ ಪ್ರಮುಖ ಹುದ್ದೆಗಳಾದ ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆಯಿಂದ ಸಿಜೆಐ ಅವರನ್ನು ಹೊರಗಿಡಲು ಸಂಸತ್ತು ಕಾನೂನು ರೂಪಿಸುವಾಗ ನಿರ್ಧರಿಸಿದ್ದೇಕೆ ಎಂದು ಸುಪ್ರೀಂ ಕೋರ್ಟ್ ಸವಾಲೆಸೆಯಿತು.
- Sushma Chakre
- Updated on: Jul 31, 2026
- 4:33 pm
ಕೆಲವು ಸಂದರ್ಭಗಳಲ್ಲಿ ಪೆಲೆಟ್ ಗನ್ ಬಳಕೆ ಕಾನೂನುಬದ್ಧ; ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆ
ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಯಂತ್ರಿಸುವ ಸಂದರ್ಭಗಳಲ್ಲಿ ಲೋಹದ ಪೆಲೆಟ್ ಗನ್ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಅತ್ಯಂತ ವಿರಳ ಹಾಗೂ ಅನಿವಾರ್ಯ ಪರಿಸ್ಥಿತಿಗಳಲ್ಲಿ ಪೊಲೀಸ್ ಪಡೆಗಳು ಪೆಲೆಟ್ ಗನ್ಗಳನ್ನು ಬಳಸಲು ಅನುಮತಿ ನೀಡಬಹುದು ಎಂದು ತಿಳಿಸಿದೆ. ಭದ್ರತಾ ಪಡೆಗಳು ಪೆಲೆಟ್ ಗನ್ಗಳನ್ನು ದುರ್ಬಳಕೆ ಮಾಡಿಕೊಂಡಿರುವ ನಿರ್ದಿಷ್ಟ ಘಟನೆಗಳು ಅಥವಾ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಲು ನಾವು ಸಿದ್ಧರಿದ್ದೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
- Sushma Chakre
- Updated on: Jul 30, 2026
- 7:13 pm
ಕಲ್ಲಿದ್ದಲು ಹಗರಣ; ನಿಧನರಾದ 2 ವರ್ಷದ ಬಳಿಕ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ಗೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್
ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಇಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ 2015ರಲ್ಲಿ ಸಮನ್ಸ್ ಜಾರಿ ಮಾಡಿದ್ದ ವಿಶೇಷ ಸಿಬಿಐ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿದೆ. ಸಿಬಿಐನ ಅಂತಿಮ ವರದಿಯನ್ನು ತಿರಸ್ಕರಿಸಲು ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಲು ವಿಚಾರಣಾ ನ್ಯಾಯಾಲಯಕ್ಕೆ ಯಾವುದೇ ಆಧಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ.
- Sushma Chakre
- Updated on: Jul 29, 2026
- 5:05 pm
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; ಎಸ್ಐಟಿ ತನಿಖೆಗೆ ಸುಪ್ರೀಂ ಕೋರ್ಟ್ ಸೂಚನೆ
ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವ್ಯವಸ್ಥಿತ ಅಕ್ರಮಗಳ ವಿರುದ್ಧ ಜುಲೈ ೨೦ ರಿಂದ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಸರಣಿ ಅರ್ಜಿಗಳ ವಿಚಾರಣೆಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ಪೀಠವು ನಡೆಸಿತು. ಗಾಯಗೊಂಡ ಪೊಲೀಸ್ ಅಧಿಕಾರಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳ ಪರವಾಗಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯನ್ನೂ ಕೋರ್ಟ್ ನಡೆಸಿತು.
- Sushma Chakre
- Updated on: Jul 28, 2026
- 8:37 pm
ರಾಮಮಂದಿರ ಹಗರಣದ ತನಿಖೆಯ ಎಸ್ಐಟಿಗೆ ಚಾರ್ಟರ್ಡ್ ಅಕೌಂಟೆಂಟ್ ನೇಮಿಸಿ; ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ
ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಯುತ, ನಿಖರ ಮತ್ತು ಪಾರದರ್ಶಕ ತನಿಖೆಯನ್ನು ಖಚಿತಪಡಿಸಿಕೊಳ್ಳಲು ರಚಿಸಲಾಗುತ್ತಿರುವ ವಿಶೇಷ ತನಿಖಾ ತಂಡದಲ್ಲಿ (SIT) ಚಾರ್ಟರ್ಡ್ ಅಕೌಂಟೆಂಟ್ ಅನ್ನು ಸೇರಿಸಿಕೊಳ್ಳಬೇಕೆಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿತು. ಉತ್ತರ ಪ್ರದೇಶ ಸರ್ಕಾರ ಸೂಚಿಸಿದ ಹೆಸರುಗಳ ಆಧಾರದ ಮೇಲೆ SIT ಅನ್ನು ರಚಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ತಂಡಕ್ಕೆ ಎಸ್. ಕಿರಣ್ ನೇತೃತ್ವ ವಹಿಸಿದ್ದಾರೆ. ಕಳೆದ ವಿಚಾರಣೆಯಲ್ಲಿ, ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಹೊಸ ಎಸ್ಐಟಿ ರಚಿಸಲು ಅಧಿಕಾರಿಗಳ ಹೆಸರುಗಳನ್ನು ಸೂಚಿಸುವಂತೆ ಕೇಳಿತ್ತು.
- Sushma Chakre
- Updated on: Jul 27, 2026
- 7:35 pm
ಸಾಮಾಜಿಕ ಜಾಲತಾಣಗಳಲ್ಲಿ ಕೋರ್ಟ್ ನೇರಪ್ರಸಾರದ ವಿಡಿಯೋ ಶೇರ್ ಮಾಡುವಂತಿಲ್ಲ; ಸುಪ್ರೀಂ ಕೋರ್ಟ್ ಆದೇಶ
ಅಧಿಕೃತ ಕೋರ್ಟ್ ಲೈವ್ ಸ್ಟ್ರೀಮ್ನಿಂದ ವೀಡಿಯೊ ತುಣುಕುಗಳನ್ನು ತೆಗೆದುಕೊಂಡು ಅನುಮತಿಯಿಲ್ಲದೆ ಸ್ವತಂತ್ರವಾಗಿ ಪೋಸ್ಟ್ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ. ಇನ್ಸ್ಟಾಗ್ರಾಮ್ ರೀಲ್ಸ್ ಅಥವಾ ಯೂಟ್ಯೂಬ್ ಶಾರ್ಟ್ಸ್ ಆಗಿ ಪೋಸ್ಟ್ ಮಾಡಲಾದ ಎಡಿಟ್ ಮಾಡಿದ ಕೋರ್ಟ್ ವಿಡಿಯೋಗಳು, ಆಡಿಯೋ, ಕ್ಯಾಪ್ಷನ್ ಅಥವಾ ಕಮೆಂಟ್ ಬದಲಾಯಿಸಿ ಹಂಚಿಕೊಳ್ಳುವ ವಿಡಿಯೋಗಳನ್ನು ಬಳಸುವಂತಿಲ್ಲ ಎಂದು ಸೂಚಿಸಲಾಗಿದೆ. ಹಾಗೇ, ಅನುಮತಿಯಿಲ್ಲದ ಕೋರ್ಟ್ ವೀಡಿಯೊಗಳ ಮರುಪೋಸ್ಟ್ ಕೂಡ ಮಾಡುವಂತಿಲ್ಲ. ಆದರೆ, ವಿಚಾರಣೆ ವೇಳೆ ನ್ಯಾಯಾಲಯದಲ್ಲಿ ನಡೆದ ಘಟನೆಗಳನ್ನು ಮಾಧ್ಯಮಗಳು ವರದಿ ಮಾಡುವುದನ್ನು ಈ ಆದೇಶ ತಡೆಯುವುದಿಲ್ಲ.
- Sushma Chakre
- Updated on: Jul 24, 2026
- 6:20 pm
‘ನಾವು ಯಂತ್ರಗಳಾಗುತ್ತಿದ್ದೇವೆ’; ಭಾರತದಲ್ಲಿ ನಶಿಸುತ್ತಿರುವ ಅವಿಭಕ್ತ ಕುಟುಂಬಗಳ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ
ಭಾರತದಲ್ಲಿ ಅವಿಭಕ್ತ ಕುಟುಂಬ ವ್ಯವಸ್ಥೆಯು ಮರೆಯಾಗುತ್ತಿರುವುದಕ್ಕೆ ಹಾಗೂ ವಿಭಕ್ತ ಕುಟುಂಬಗಳಲ್ಲಿ ಪೋಷಕರು ತಮ್ಮ ಮಕ್ಕಳೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯದೆ, ಅವರ ಕೈಗೆ ಮೊಬೈಲ್, ಟ್ಯಾಬ್ ಇತ್ಯಾದಿ ಗ್ಯಾಜೆಟ್ಗಳನ್ನು ನೀಡುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ ಗುರುವಾರ ತೀವ್ರ ಕಳವಳ ವ್ಯಕ್ತಪಡಿಸಿದೆ. ಇದು ಮುಂದಿನ ದಿನಗಳಲ್ಲಿ ದೊಡ್ಡ ಅನಾಹುತಕ್ಕೆ ದಾರಿ ಮಾಡಿಕೊಡುತ್ತದೆ. ಹೊಸ ಪೀಳಿಗೆಗೆ ಕುಟುಂಬದ ಬಾಂಧವ್ಯ ಮತ್ತು ಸಂಬಂಧಗಳ ಮೌಲ್ಯವೇ ತಿಳಿಯದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಬೇಸರ ವ್ಯಕ್ತಪಡಿಸಿದೆ.
- Sushma Chakre
- Updated on: Jul 24, 2026
- 3:32 pm
ವಿಚ್ಛೇದನ ಪ್ರಕರಣದಲ್ಲಿ ಪತಿಯ ಕಂಪನಿ ಮಾಲೀಕರಿಗೆ ಹೆಂಡತಿ ಪತ್ರ ಬರೆಯುವುದೇಕೆ? ಸುಪ್ರೀಂ ಕೋರ್ಟ್ ತರಾಟೆ
ಪತಿ-ಪತ್ನಿಯ ನಡುವಿನ ಜಗಳ ಅಥವಾ ವಿಚ್ಛೇದನದ ಮಾತುಕತೆ ನಡೆಯುತ್ತಿರುವಾಗ, ಪತಿಯ ಉದ್ಯೋಗದಾತ ಸಂಸ್ಥೆಗೆ ಅಥವಾ ಮೇಲಧಿಕಾರಿಗಳಿಗೆ ದೂರು ನೀಡಿ ಪತ್ರ ಬರೆಯುವ ಪತ್ನಿಯರ ವರ್ತನೆಯ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇಂತಹ ದೂರುಗಳಿಂದ ಪತಿ ತನ್ನ ಕೆಲಸವನ್ನೇ ಕಳೆದುಕೊಳ್ಳಬಹುದು. ಗಂಡನಿಗೆ ಕೆಲಸವೇ ಇಲ್ಲದಿದ್ದರೆ ಅದರಿಂದ ಪತ್ನಿಗೆ ಸಿಗಬೇಕಾದ ಜೀವನಾಂಶಕ್ಕೂ ತೊಂದರೆಯಾಗಲಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
- Sushma Chakre
- Updated on: Jul 21, 2026
- 3:40 pm
‘ಡಾಕ್ಟರ್ ಆಗಲು ನಾಲಾಯಕ್’; 4 ವರ್ಷದ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಆಸ್ಪತ್ರೆಗೆ ಸುಪ್ರೀಂ ಕೋರ್ಟ್ ಛೀಮಾರಿ
ಇತ್ತೀಚೆಗೆ ಘಾಜಿಯಾಬಾದ್ನಲ್ಲಿ 4 ವರ್ಷದ ಹೆಣ್ಣು ಮಗುವಿನ ಮೇಲೆ ಭೀಕರವಾಗಿ ಅತ್ಯಾಚಾರ ನಡೆಸಲಾಗಿತ್ತು. ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೆ 2 ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ನೀಡಲು ನಿರಾಕರಿಸಲಾಗಿತ್ತು. ಬಳಿಕ ಆ ಮಗು ಮೃತಪಟ್ಟಿತ್ತು. ಆ ಮಗುವಿನ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅಮಾನವೀಯವಾಗಿ ವರ್ತಿಸಿದ ಆಸ್ಪತ್ರೆಗಳ ವೈದ್ಯರನ್ನು ಕೂಡ ತರಾಟೆಗೆ ತೆಗೆದುಕೊಂಡಿದೆ. ಆ ಮಗು ಬಡವಳೆಂಬ ಕಾರಣಕ್ಕೆ ನೀವು ಚಿಕಿತ್ಸೆ ನೀಡಲಿಲ್ಲವೇ? ನಿಮ್ಮ ಹೆಸರಿನಿಂದ ವೈದ್ಯ ಎಂಬ ಹೆಸರನ್ನು ಕಿತ್ತೊಗೆಯಿರಿ ಎಂದು ಕೋರ್ಟ್ ಟೀಕಿಸಿದೆ.
- Sushma Chakre
- Updated on: Jul 17, 2026
- 6:29 pm
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿಸೆಂಬರ್ 31ರ ಡೆಡ್ಲೈನ್ ನಿಗದಿಪಡಿಸಿದ ಸುಪ್ರೀಂ ಕೋರ್ಟ್
GBA Elections; ಕರ್ನಾಟಕದಲ್ಲಿ SIR ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಯನ್ನು ನಡೆಸಲು ಸುಪ್ರೀಂ ಕೋರ್ಟ್ ಡಿಸೆಂಬರ್ 31ರ ಗಡುವು ವಿಧಿಸಿದೆ. ಎಸ್ಐಆರ್ ಪ್ರಕ್ರಿಯೆ ಕಾರಣ ಚುನಾವಣೆ ಮುಂದೂಡಲು ಸರ್ಕಾರ ಮಾಡಿದ್ದ ಮನವಿಗೆ ಕೋರ್ಟ್ ಅನುಮತಿ ನೀಡಿದೆ. ಆದರೆ, ಡಿಸೆಂಬರ್ 31ರೊಳಗೆ ಚುನಾವಣೆ ಪೂರ್ಣಗೊಳಿಸುವಂತೆ ನ್ಯಾಯಪೀಠ ನಿರ್ದೇಶನ ನೀಡಿದೆ.
- Prasanna Gaonkar
- Updated on: Jul 17, 2026
- 2:29 pm
9ನೇ ತರಗತಿಯಿಂದಲೇ ಏಕೆ?; ಸಿಬಿಎಸ್ಇ ತ್ರಿಭಾಷಾ ನೀತಿಗೆ ಸುಪ್ರೀಂ ಕೋರ್ಟ್ ಆಕ್ಷೇಪ
ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) ಅಡಿಯಲ್ಲಿ 9ನೇ ತರಗತಿಯಿಂದ ಮೂರನೇ ಭಾಷೆಯನ್ನು ಕಡ್ಡಾಯವಾಗಿ ಪರಿಚಯಿಸುವ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಇಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಬೋರ್ಡ್ ಪರೀಕ್ಷೆಗಳಿಗೆ ಸಿದ್ಧರಾಗುತ್ತಿರುವ ವಿದ್ಯಾರ್ಥಿಗಳ ಮೇಲೆ ಇದು ಅನಗತ್ಯ ಮಾನಸಿಕ ಒತ್ತಡ ಉಂಟುಮಾಡುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಸಿಬಿಎಸ್ಇ ತನ್ನ ಹೊಸ ಆದೇಶದಲ್ಲಿ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮೂರನೇ ಭಾಷೆಯನ್ನು ಕಡ್ಡಾಯ ಅರ್ಹತಾ ವಿಷಯವನ್ನಾಗಿ ಮಾಡಿತ್ತು. ಇದು 10ನೇ ತರಗತಿಯ ಮುಖ್ಯ ಬೋರ್ಡ್ ಪರೀಕ್ಷೆಯ ಅಂಕಗಳಿಗೆ ಸೇರದಿದ್ದರೂ, 2025-26ರ ಶೈಕ್ಷಣಿಕ ಸಾಲಿನಿಂದ ವಿದ್ಯಾರ್ಥಿಗಳು ಶಾಲಾ ಮಟ್ಟದ ಆಂತರಿಕ ಮೌಲ್ಯಮಾಪನದಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಬೇಕಿತ್ತು.
- Sushma Chakre
- Updated on: Jul 16, 2026
- 4:52 pm
ಉಪಸಭಾಪತಿ ಎಂಕೆ ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದು: ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ವಜಾ
ವಿಧಾನ ಪರಿಷತ್ ಉಪಸಭಾಪತಿ ಎಂಕೆ ಪ್ರಾಣೇಶ್ ಅವರ ಸದಸ್ಯತ್ವವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಇದರೊಂದಿಗೆ, ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರ ಮತದಾನದ ಮಾನ್ಯತೆ ಕುರಿತು ನಡೆದ ಕಾನೂನು ಹೋರಾಟದಲ್ಲಿ ಅವರಿಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ಭಾರಿ ಹಿನ್ನಡೆಯಾದಂತಾಗಿದೆ. ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
- Mahesha E
- Updated on: Jul 16, 2026
- 12:51 pm