Supreme Court
ನವದೆಹಲಿಯಲ್ಲಿ ನೆಲೆಗೊಂಡಿರುವ ಭಾರತದ ಸರ್ವೋಚ್ಚ ನ್ಯಾಯಾಲಯವು ದೇಶದ ಅತ್ಯುನ್ನತ ನ್ಯಾಯಾಂಗ ವ್ಯವಸ್ಥೆಯಾಗಿದೆ. ಇದನ್ನು ಜನವರಿ 28, 1950 ರಂದು ಸ್ಥಾಪಿಸಲಾಯಿತು, ಇದು ಮೇಲ್ಮನವಿಯ ಅಂತಿಮ ನ್ಯಾಯಾಲಯವಾಗಿ ಮತ್ತು ಸಂವಿಧಾನದ ಖಾತರಿಗಾರನಾಗಿ ಕಾರ್ಯನಿರ್ವಹಿಸುತ್ತದೆ. ನ್ಯಾಯಾಲಯವು ಭಾರತದ ಮುಖ್ಯ ನ್ಯಾಯಾಧೀಶರ ನೇತೃತ್ವದಲ್ಲಿದೆ ಮತ್ತು ಗರಿಷ್ಠ 34 ನ್ಯಾಯಾಧೀಶರನ್ನು ಒಳಗೊಂಡಿದೆ. ಸಂವಿಧಾನವನ್ನು ವ್ಯಾಖ್ಯಾನಿಸುವಲ್ಲಿ, ನ್ಯಾಯಾಂಗ ಪರಿಶೀಲನೆಯನ್ನು ಖಾತ್ರಿಪಡಿಸುವಲ್ಲಿ ಮತ್ತು ಮೂಲಭೂತ ಹಕ್ಕುಗಳನ್ನು ರಕ್ಷಿಸುವಲ್ಲಿ ಸುಪ್ರೀಂ ಕೋರ್ಟ್ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇದು ಮೇಲ್ಮನವಿಗಳು, ರಿಟ್ ಅರ್ಜಿಗಳು ಮತ್ತು ವಿಶೇಷ ರಜೆ ಅರ್ಜಿಗಳನ್ನು ಆಲಿಸುತ್ತದೆ. ಅದರ ನಿರ್ಧಾರಗಳು ದೇಶದ ಇತರ ಎಲ್ಲಾ ನ್ಯಾಯಾಲಯಗಳಿಗೆ ಬದ್ಧವಾಗಿರುತ್ತವೆ. ನ್ಯಾಯಾಲಯವು ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ನಡುವಿನ ಅಥವಾ ರಾಜ್ಯಗಳ ನಡುವಿನ ವಿವಾದಗಳನ್ನು ಸಹ ನಿರ್ಣಯಿಸುತ್ತದೆ.ಸುಪ್ರೀಂ ಕೋರ್ಟ್ ನ್ಯಾಯದ ಸ್ತಂಭವಾಗಿ ನಿಂತಿದ್ದು, ಕಾನೂನಿನ ನಿಯಮವನ್ನು ಎತ್ತಿಹಿಡಿಯುತ್ತದೆ ಮತ್ತು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಪ್ರಜಾಪ್ರಭುತ್ವದ ತತ್ವಗಳನ್ನು ರಕ್ಷಿಸುತ್ತದೆ.
ರೆಡ್ ಕಾರ್ಪೆಟ್ ಸ್ವಾಗತ ನೀಡಬೇಕಾ?; ರೋಹಿಂಗ್ಯಾಗಳ ಅಕ್ರಮ ಪ್ರವೇಶದ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
ದೇಶಕ್ಕೆ ಅಕ್ರಮವಾಗಿ ಪ್ರವೇಶಿಸುವವರಿಗೆ ನ್ಯಾಯಾಂಗವು ರಕ್ಷಣೆ ನೀಡುತ್ತದೆಯೇ ಎಂದು ಪ್ರಶ್ನಿಸಿ, ರೋಹಿಂಗ್ಯಾ ನಿರಾಶ್ರಿತರ ಕಣ್ಮರೆ ಆರೋಪದ ಮೇಲೆ ಸಲ್ಲಿಸಲಾದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತೀಕ್ಷ್ಣವಾದ ನಿಲುವನ್ನು ತೆಗೆದುಕೊಂಡಿತು. "ನಾವು ಅವರಿಗೆ ಕೆಂಪು ಕಾರ್ಪೆಟ್ ಹಾಸಬೇಕೆಂದು ನೀವು ಬಯಸುತ್ತೀರಾ?" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಪ್ರಶ್ನಿಸಿದ್ದಾರೆ.
- Sushma Chakre
- Updated on: Dec 2, 2025
- 7:31 pm
ಟ್ಯಾಕ್ಸ್ ಒಪ್ಪಂದ ಇದ್ದಾಗ ಶೇ. 20 ಟಿಡಿಎಸ್ ಮುರಿದುಕೊಳ್ಳುವಂತಿಲ್ಲ: ಐಟಿ ಇಲಾಖೆಗೆ ಸುಪ್ರೀಂ ಆದೇಶ
Supreme Court ruling on TDS over foreign companies: ಟ್ಯಾಕ್ಸ್ ಒಪ್ಪಂದ ಇರುವ ದೇಶಗಳ ಕಂಪನಿಗಳಿಗೆ ಪಾವತಿಸುವ ಹಣಕ್ಕೆ ಶೇ. 10ಕ್ಕಿಂತ ಹೆಚ್ಚು ಟಿಡಿಎಸ್ ಮುರಿದುಕೊಳ್ಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ವಿದೇಶೀ ಕಂಪನಿಗಳಿಗೆ ಹಣ ಪಾವತಿಸುವಾಗ ಭಾರತೀಯ ಕಂಪನಿಗಳು ಶೇ. 20 ಟಿಡಿಎಸ್ ಮುರಿದುಕೊಳ್ಳಬೇಕು ಎಂಬುದು ಐಟಿ ತಾಕೀತಾಗಿತ್ತು. ವಿದೇಶೀ ಕಂಪನಿಗಳಿಗೆ ಪ್ಯಾನ್ ಇಲ್ಲದಿರುವುದರಿಂದ ಶೇ. 20 ಟಿಡಿಎಸ್ ಅನ್ವಯ ಆಗುತ್ತದೆ ಎನ್ನುವುದು ಐಟಿ ವಾದ.
- Vijaya Sarathy SN
- Updated on: Nov 26, 2025
- 12:12 pm
ನ್ಯಾ| ಸೂರ್ಯಕಾಂತ್ ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ಸ್ವೀಕಾರ
Justice Surya Kant takes oath as 53rd CJI: ಹರ್ಯಾಣ ಮೂಲದ 63 ವರ್ಷದ ನ್ಯಾ| ಸೂರ್ಯಕಾಂತ್ ಅವರು ಭಾರತದ ಮುಖ್ಯನ್ಯಾಯಮೂರ್ತಿಯಾಗಿ ಪದಗ್ರಹಣ ಮಾಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನ. 24ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಸಿಜೆಐಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಹಲವಾರು ವರ್ಷಗಳಿಂದ ಬಾಕಿ ಉಳಿದಿರುವ ಪ್ರಕರಣಗಳನ್ನು ಬೇಗ ವಿಲೇವಾರಿ ಮಾಡುವುದು ನೂತನ ಮುಖ್ಯನ್ಯಾಯಮೂರ್ತಿಗಳ ಮೊದಲ ಆದ್ಯತೆಯಾಗಿದೆ.
- Vijaya Sarathy SN
- Updated on: Nov 24, 2025
- 11:20 am
ರಾಷ್ಟ್ರೀಯ ಉದ್ಯಾನವನ, ವನ್ಯಜೀವಿ ಅಭಯಾರಣ್ಯಗಳ 1 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿದ ಸುಪ್ರೀಂ ಕೋರ್ಟ್
ಎಲ್ಲಾ ರಾಷ್ಟ್ರೀಯ ಉದ್ಯಾನವನಗಳು ಮತ್ತು ವನ್ಯಜೀವಿ ಅಭಯಾರಣ್ಯಗಳಿಂದ 1 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಯನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದೆ. ರಾಷ್ಟ್ರೀಯ ಉದ್ಯಾನವನಗಳು, ವನ್ಯಜೀವಿ ಅಭಯಾರಣ್ಯಗಳ ಒಳಗೆ ಮತ್ತು ಅವುಗಳ ಗಡಿಯಿಂದ 1 ಕಿಲೋಮೀಟರ್ ಒಳಗೆ ಗಣಿಗಾರಿಕೆಗೆ ಅನುಮತಿ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
- Sushma Chakre
- Updated on: Nov 13, 2025
- 3:34 pm
ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ನಲ್ಲಿ ಗೆಲುವು, ತಮಿಳುನಾಡಿನ ಅರ್ಜಿ ವಜಾ
ಕರ್ನಾಟಕ ಸರ್ಕಾರಕ್ಕೆ ಮೇಕೆದಾಟು ಯೋಜನೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ನಲ್ಲಿ ದೊಡ್ಡ ಗೆಲುವು ಸಿಕ್ಕಿದೆ. ಯೋಜನೆಗೆ 7 ವರ್ಷಗಳಿಂದ ಅಡ್ಡಗಾಲು ಹಾಕುತ್ತಾ ಬರುತ್ತಿದ್ದ ತಮಿಳುನಾಡಿಗೆ ಮುಖಭಂಗವಾಗಿದೆ. ಯೋಜನೆ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಇದರೊಂದಿಗೆ, ಯೋಜನೆ ಸಾಕಾರಗೊಳಿಸುವ ನಿಟ್ಟಿನಲ್ಲಿ ಕರ್ನಾಟಕಕ್ಕೆ ಮೊದಲ ಜಯ ಸಿಕ್ಕಂತಾಗಿದೆ.
- Mahesha E
- Updated on: Nov 13, 2025
- 1:52 pm
ನ್ಯಾಯಾಧೀಶರ ವಿರುದ್ಧದ ಅವಹೇಳನಕಾರಿ ಆರೋಪದ ಪ್ರವೃತ್ತಿಗೆ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಎಚ್ಚರಿಕೆ
ನ್ಯಾಯಾಧೀಶರ ವಿರುದ್ಧ ದುರುದ್ದೇಶಪೂರಿತ ಆರೋಪಗಳನ್ನು ಮಾಡುವ ಹೆಚ್ಚುತ್ತಿರುವ ಪ್ರವೃತ್ತಿಯ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ತೆಲಂಗಾಣ ಹೈಕೋರ್ಟ್ನ ಹಾಲಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಮೌಶುಮಿ ಭಟ್ಟಾಚಾರ್ಯ ಅವರನ್ನು ದೂಷಿಸುವ ಅರ್ಜಿಗೆ ಸಹಿ ಹಾಕಿದ ವಕೀಲರು ಸಲ್ಲಿಸಿದ ಬೇಷರತ್ತಾದ ಕ್ಷಮೆಯಾಚನೆಯ ಬಳಿಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
- Sushma Chakre
- Updated on: Nov 10, 2025
- 7:43 pm
ಸುಪ್ರೀಂ ಛೀಮಾರಿ ಬೆನ್ನಲ್ಲೇ ಕರ್ನಾಟಕ ಅಲರ್ಟ್: ನಾಯಿ ಕಡಿತಕ್ಕೆ ಸಮಗ್ರ ಚಿಕಿತ್ಸಾ ಪ್ಲಾನ್ ರೂಪಿಸಿದ ಇಲಾಖೆ
ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಬೀದಿನಾಯಿಗಳ ಹಾವಳಿ ಹೆಚ್ಚಾಗುತ್ತಿದೆ. ಅದರಲ್ಲೂ ಪಟಾಣಿ ಮಕ್ಕಳು, ಮಹಿಳೆಯರ ಮೇಲೆಯೇ ಬೀದಿನಾಯಿಗಳ ದಾಳಿ ಹೆಚ್ಚಾಗಿದೆ. ಮಕ್ಕಳನ್ನು ಶಾಲೆಗೆ ಕಳುಹಿಸಲೂ ಪೋಷರರು ಭಯಪಡುವಂತಾಗಿದೆ. ಕರ್ನಾಟಕ ಮಾತ್ರವಲ್ಲದೆ ಇಡೀ ದೇಶದಲ್ಲಿಯೇ ನಾಯಿಗಳ ಕಡಿತ ಹೆಚ್ಚಾಗಿದ್ದು, ಈ ಬಗ್ಗೆ ವರದಿ ಸಲ್ಲಿಸದ ಕರ್ನಾಟಕಕ್ಕೂ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿತ್ತು. ಇದರ ಬೆನ್ನಲ್ಲೇ ಈಗ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ.
- Vinay Kashappanavar
- Updated on: Nov 7, 2025
- 10:14 am
ಬೀದಿನಾಯಿ ನಿಯಂತ್ರಣಕ್ಕೆ ಏನೆಲ್ಲ ಕ್ರಮ?: ಸುಪ್ರೀಂಗೆ ವರದಿ ಸಲ್ಲಿಸಿದ ಕರ್ನಾಟಕ
ಬೀದಿ ನಾಯಿಗಳ ಹಾವಳಿ ಕುರಿತು ಸುಪ್ರೀಂಕೋರ್ಟ್ ಸ್ವಯಂ ಪ್ರೇರಿತ ವಿಚಾರಣೆ ನಡೆಸುತ್ತಿದ್ದು, ಬೀದಿನಾಯಿಗಳ ಕಡಿವಾಣಕ್ಕೆ ರಾಜ್ಯಗಳು ಕೈಗೊಂಡ ಕ್ರಮಗಳ ಬಗ್ಗೆ ವರದಿ ಕೇಳಿತ್ತು. ಈ ಹಿನ್ನಲೆ ಕರ್ನಾಟಕ ಸರ್ಕಾರ ಮಾಹಿತಿ ನೀಡಿದ್ದು, ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಸಂತಾನ ಹರಣ ಚಿಕಿತ್ಸೆ, ರೇಬಿಸ್ ಲಸಿಕೆ, ಸಹಾಯವಾಣಿ ಮತ್ತು ಆಹಾರ ಸ್ಪಾಟ್ಗಳಂತಹ ಕ್ರಮಗಳನ್ನು ಕೈಗೊಂಡಿರೋದಾಗಿ ಕೋರ್ಟ್ಗೆ ತಿಳಿಸಿದೆ.
- Harish GR
- Updated on: Nov 5, 2025
- 2:15 pm
ಮಾಲೂರು ಕ್ಷೇತ್ರದ ಮರು ಮತಎಣಿಕೆಗೆ ದಿನಾಂಕ ನಿಗದಿಪಡಿಸಿದ ಚುನಾವಣಾ ಆಯೋಗ!
ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭೆ ಕ್ಷೇತ್ರದ ಮರು ಮತ ಎಣಿಕೆಗೆ ಸೂಚಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಪರಾಜಿತ ಅಭ್ಯರ್ಥಿ ಮಂಜುನಾಥಗೌಡ ಅವರು ಚುನಾವಣಾ ಆಯೋಗಕ್ಕೆ ಪತ್ರವೊಂದನ್ನು ಬರೆದಿದ್ದು,ಇದೀಗ ಈ ಪತ್ರಕ್ಕೆ ಕರ್ನಾಟಕ ಚುನಾವಣಾ ಆಯೋಗ ಸ್ಪಂದಿಸಿದೆ. ಅಲ್ಲದೇ ಮರು ಮತಎಣಿಕೆಗೆ ದಿನಾಂಕ ನಿಗದಿ ಮಾಡಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದೆ. ಹಾಗಾದ್ರೆ, ಮರು ಮತ ಎಣಿಕೆ ಕಾರ್ಯ ಯಾವಾಗ ನಡೆಯಲಿದೆ ಎನ್ನುವ ವಿವರ ಈ ಕೆಳಗಿನಂತಿದೆ.
- Rajendra Simha BL
- Updated on: Nov 4, 2025
- 7:02 pm
Justice Surya Kant: ಸುಪ್ರೀಂ ಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನ. 24ಕ್ಕೆ ನ್ಯಾ. ಸೂರ್ಯಕಾಂತ್ ಅಧಿಕಾರ ಸ್ವೀಕಾರ
ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಭಾರತದ ಸುಪ್ರೀಂ ಕೋರ್ಟ್ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನವೆಂಬರ್ 24ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರಾಷ್ಟ್ರಪತಿಗಳು ಇಂದು ಸುಪ್ರೀಂ ಕೋರ್ಟ್ನ ಎರಡನೇ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿದ್ದಾರೆ. ಪ್ರಸ್ತುತ ಸಿಜೆಐ ಆಗಿರುವ ಬಿ.ಆರ್. ಗವಾಯಿ ಅವರು ನವೆಂಬರ್ 23ರಂದು ನಿವೃತ್ತರಾಗಲಿದ್ದಾರೆ.
- Sushma Chakre
- Updated on: Oct 30, 2025
- 8:42 pm