![Supreme Court](https://images.tv9kannada.com/wp-content/uploads/2024/01/supreme-court-2.jpg)
Supreme Court
ನವದೆಹಲಿಯಲ್ಲಿ ನೆಲೆಗೊಂಡಿರುವ ಭಾರತದ ಸರ್ವೋಚ್ಚ ನ್ಯಾಯಾಲಯವು ದೇಶದ ಅತ್ಯುನ್ನತ ನ್ಯಾಯಾಂಗ ವ್ಯವಸ್ಥೆಯಾಗಿದೆ. ಇದನ್ನು ಜನವರಿ 28, 1950 ರಂದು ಸ್ಥಾಪಿಸಲಾಯಿತು, ಇದು ಮೇಲ್ಮನವಿಯ ಅಂತಿಮ ನ್ಯಾಯಾಲಯವಾಗಿ ಮತ್ತು ಸಂವಿಧಾನದ ಖಾತರಿಗಾರನಾಗಿ ಕಾರ್ಯನಿರ್ವಹಿಸುತ್ತದೆ. ನ್ಯಾಯಾಲಯವು ಭಾರತದ ಮುಖ್ಯ ನ್ಯಾಯಾಧೀಶರ ನೇತೃತ್ವದಲ್ಲಿದೆ ಮತ್ತು ಗರಿಷ್ಠ 34 ನ್ಯಾಯಾಧೀಶರನ್ನು ಒಳಗೊಂಡಿದೆ. ಸಂವಿಧಾನವನ್ನು ವ್ಯಾಖ್ಯಾನಿಸುವಲ್ಲಿ, ನ್ಯಾಯಾಂಗ ಪರಿಶೀಲನೆಯನ್ನು ಖಾತ್ರಿಪಡಿಸುವಲ್ಲಿ ಮತ್ತು ಮೂಲಭೂತ ಹಕ್ಕುಗಳನ್ನು ರಕ್ಷಿಸುವಲ್ಲಿ ಸುಪ್ರೀಂ ಕೋರ್ಟ್ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇದು ಮೇಲ್ಮನವಿಗಳು, ರಿಟ್ ಅರ್ಜಿಗಳು ಮತ್ತು ವಿಶೇಷ ರಜೆ ಅರ್ಜಿಗಳನ್ನು ಆಲಿಸುತ್ತದೆ. ಅದರ ನಿರ್ಧಾರಗಳು ದೇಶದ ಇತರ ಎಲ್ಲಾ ನ್ಯಾಯಾಲಯಗಳಿಗೆ ಬದ್ಧವಾಗಿರುತ್ತವೆ. ನ್ಯಾಯಾಲಯವು ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ನಡುವಿನ ಅಥವಾ ರಾಜ್ಯಗಳ ನಡುವಿನ ವಿವಾದಗಳನ್ನು ಸಹ ನಿರ್ಣಯಿಸುತ್ತದೆ.ಸುಪ್ರೀಂ ಕೋರ್ಟ್ ನ್ಯಾಯದ ಸ್ತಂಭವಾಗಿ ನಿಂತಿದ್ದು, ಕಾನೂನಿನ ನಿಯಮವನ್ನು ಎತ್ತಿಹಿಡಿಯುತ್ತದೆ ಮತ್ತು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಪ್ರಜಾಪ್ರಭುತ್ವದ ತತ್ವಗಳನ್ನು ರಕ್ಷಿಸುತ್ತದೆ.
ಬಾಂಗ್ಲಾದೇಶ ಹಿಂಸಾಚಾರ: ಮೀಸಲಾತಿ ಕಡಿಮೆಗೊಳಿಸಿದ ಸುಪ್ರೀಂಕೋರ್ಟ್; ಪ್ರತಿಭಟನೆ ಬಿಟ್ಟು ತರಗತಿಗೆ ಮರಳುವಂತೆ ವಿದ್ಯಾರ್ಥಿಗಳಿಗೆ ಆದೇಶ
Bangladesh Supreme Court order: ಮೀಸಲಾತಿ ವಿಚಾರದಲ್ಲಿ ಬಾಂಗ್ಲಾದೇಶದ ಸರ್ವೋಚ್ಚ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ. ಶೇ. 56ರಷ್ಟಿದ್ದ ಮೀಸಲಾತಿಯನ್ನು ಶೇ. 7ಕ್ಕೆ ಇಳಿಸಿದೆ. ಆದರೆ, ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳಿಗೆ ನೀಡುತ್ತಿರುವ ಮೀಸಲಾತಿಯನ್ನು ಹಿಂಪಡೆಯಲು ಕೋರ್ಟ್ ನಿರಾಕರಿಸಿದೆ. ಆದರೆ, ಅವರಿಗೆ ಕೊಡಲಾಗುತ್ತಿದ್ದ ಶೇ. 30ರಷ್ಟು ಮೀಸಲಾತಿಯನ್ನು ಶೇ. 5ಕ್ಕೆ ಇಳಿಸಿದೆ.
- Vijaya Sarathy SN
- Updated on: Jul 21, 2024
- 3:09 pm
ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ರದ್ದತಿಗೆ ಸುಪ್ರೀಂ ಕೋರ್ಟ್ ನಕಾರ
ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಆದಾಯ ಮೀರಿ ಆಸ್ತಿ ಗಳಿಸಿದ್ದ ಆರೋಪಕ್ಕೆ ಸಂಬಂಧಿಸಿ ಸಿಬಿಐ ದಾಖಲಿಸಿದ್ದ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ಸುಪ್ರೀಂ ಕೋರ್ಟ್ನಲ್ಲಿ ತೀವ್ರ ಹಿನ್ನಡೆಯಾಗಿದೆ. ಪ್ರಕರಣವನ್ನು ರದ್ದುಗೊಳಿಸುವಂತೆ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ತಿರಸ್ಕೃತಗೊಂಡಿದೆ.
- Ganapathi Sharma
- Updated on: Jul 15, 2024
- 1:14 pm
ಮುಸ್ಲಿಮ್ ಮಹಿಳೆಯರಿಗೆ ವರವಾದ ಸಿಆರ್ಪಿಸಿ ಸೆಕ್ಷನ್ 125 ಏನಿದು? ಶಹಬಾನೋ ಪ್ರಕರಣದಲ್ಲೂ ಈ ಕಾಯ್ದೆ ಬಳಕೆಯಾಗಿತ್ತು…
Know what is section 125 of CrPC: ಸಿಆರ್ಪಿಸಿ ಸೆಕ್ಷನ್ 125 ಕಾನೂನು ಪ್ರಕಾರ ವಿಚ್ಛೇದಿತ ಮುಸ್ಲಿಮ್ ಮಹಿಳೆಗೆ ಜೀವನಾಂಶ ಕೊಡುವಂತೆ ಆಕೆಯ ಪತಿಗೆ ಕೋರ್ಟ್ ಆದೇಶ ನೀಡಿದೆ. ಫ್ಯಾಮಿಲಿ ಕೋರ್ಟ್ ತೀರ್ಪನ್ನು ತೆಲಂಗಾಣ ಹೈಕೋರ್ಟ್ ಎತ್ತಿಹಿಡಿದಿತ್ತು. ಈಗ ಸುಪ್ರೀಂ ಕೋರ್ಟ್ ಕೂಡ ಆ ತೀರ್ಪಿಗೆ ಬೆಂಬಲ ನೀಡಿದೆ. ಸಿಆರ್ಪಿಸಿ ಸೆಕ್ಷನ್ 125ಗೆ ಮುಸ್ಲಿಮ್ ಕಾನೂನು ಅಡ್ಡಿ ಮಾಡುವುದಿಲ್ಲ ಎನ್ನುವ ಮಹತ್ವದ ಅಭಿಪ್ರಾಯವನ್ನು ಸರ್ವೋಚ್ಚ ನ್ಯಾಯಪೀಠ ವ್ಯಕ್ತಪಡಿಸಿದೆ.
- Vijaya Sarathy SN
- Updated on: Jul 11, 2024
- 1:01 pm
Menstrual Leave: ಮಹಿಳೆಯರಿಗೆ ಉದ್ಯೋಗಾವಕಾಶ ಕಡಿಮೆ ಆಗಿಬಿಟ್ರೆ..? ಮುಟ್ಟು ರಜೆ ಕಡ್ಡಾಯಗೊಳಿಸಲು ಸುಪ್ರೀಂ ಹಿಂದೇಟು
Menstrual leave, Supreme court directs govt to form a policy: ಮಹಿಳೆಯರಿಗೆ ಮುಟ್ಟಿನ ದಿನಗಳು ಒಂದು ರೀತಿಯಲ್ಲಿ ಯಾತನೆಯ ಅನುಭವ ನೀಡುತ್ತವೆ. ಕೆಲಸದ ಕಡೆ ಗಮನ ಕೊಡಲು ದೈಹಿಕವಾಗಿ ಮತ್ತು ಮಾನಸಿಕವಾಗಿ ಕಷ್ಟವಾಗುತ್ತದೆ. ಅಂಥ ದಿನಗಳಲ್ಲಿ ಮಹಿಳೆಯರಿಗೆ ರಜೆ ನೀಡಬೇಕು ಎನ್ನುವ ಒತ್ತಾಯ ಸಾಕಷ್ಟು ವರ್ಷಗಳಿಂದಲೂ ಇದೆ. ಕೋರ್ಟ್ನಲ್ಲಿ ಈ ಬಗ್ಗೆ ಸಲ್ಲಿಕೆಯಾಗಿದ್ದ ಅರ್ಜಿ ತಿರಸ್ಕೃತಗೊಂಡಿದೆ. ಆದರೆ, ಸರ್ಕಾರ ಈ ಬಗ್ಗೆ ಒಂದು ನೀತಿ ರೂಪಿಸಬೇಕು ಎಂದು ಸುಪ್ರೀಂ ನ್ಯಾಯಪೀಠ ಆದೇಶಿಸಿದೆ.
- Vijaya Sarathy SN
- Updated on: Jul 8, 2024
- 3:10 pm
ರಾಮಮಂದಿರ, ಹೊಸ ಸಂಸತ್ ಬಗ್ಗೆ ಮಕ್ಕಳಿಗೆ ತಿಳಿಸುವುದು ನಮ್ಮ ಕರ್ತವ್ಯ: ಎನ್ಸಿಇಆರ್ಟಿ ನಿರ್ದೇಶಕರು
NCERT director Dinesh Prasad Saklani: ಶಾಲಾ ಪಠ್ಯಪುಸ್ತಕದಲ್ಲಿ ರಾಮಮಂದಿರದ ಪರವಾಗಿ ಸುಪ್ರೀಂಕೋರ್ಟ್ ತೀರ್ಪು ಕೊಟ್ಟಿರುವುದು, ರಥಯಾತ್ರ, ಕರಸೇವಕರು, ಹೊಸ ಸಂಸತ್ ಮೊದಲಾದ ವಿಚಾರಗಳನ್ನು ಸೇರಿಸಲಾಗಿದೆ. ಇದು ವಿವಾದಕ್ಕೆ ಕಾರಣವಾಗಿದ್ದು, ವಿಪಕ್ಷ ನಾಯಕರು ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಎನ್ಸಿಇಆರ್ಟಿ ನಿರ್ದೇಶಕ ದಿನೇಶ್ ಪ್ರಸಾದ್ ಸಕ್ಲಾನಿ, ಇದು ಕೇಸರೀಕರಣ ಅಲ್ಲ. ವಸ್ತು ವಿಚಾರಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
- Vijaya Sarathy SN
- Updated on: Jun 16, 2024
- 6:48 pm
ನೀಟ್ ಪರೀಕ್ಷಾ ಅಕ್ರಮ ಎಸಗಿದವರನ್ನು ಸುಮ್ಮನೆ ಬಿಡೋದಿಲ್ಲ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಭರವಸೆ
Dharmendra Pradhan on NEET controversy: ನೀಟ್ ಪರೀಕ್ಷೆಯಲ್ಲಿ ಅಕ್ರಮ ಎಸಗಿವರನ್ನು ಬಿಡುವುದಿಲ್ಲ ಎಂದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಭರವಸೆ ನೀಡಿದ್ದಾರೆ. ಸುಪ್ರೀಂಕೋರ್ಟ್ ಆದೇಶದಂತೆ ಅಭ್ಯರ್ಥಿಗಳ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯ ಅಧಿಕಾರಿಗಳ್ಯಾರಾದರೂ ತಪ್ಪು ಮಾಡಿದ್ದಲ್ಲಿ ಶಿಕ್ಷೆಯಿಂದ ಅವರು ತಪ್ಪಿಸಿಕೊಳ್ಳಲು ಆಗಲ್ಲ ಎಂದಿದ್ದಾರೆ.
- Vijaya Sarathy SN
- Updated on: Jun 16, 2024
- 5:54 pm
ಸರಿಸ್ಕಾ ಹುಲಿ ಸಂರಕ್ಷಿತ ಪ್ರದೇಶದ ಸುತ್ತ ಗಣಿಗಾರಿಕೆ ನಿಷೇಧ; ಸುಪ್ರೀಂ ಕೋರ್ಟ್ ಮಹತ್ವದ ಆದೇಶ
Sariska Tiger Reserve: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ, ಸಂದೀಪ್ ಮೆಹ್ತಾ ಮತ್ತು ಎಸ್ವಿಎನ್ ಭಟ್ಟಿ ಅವರ ನ್ಯಾಯಪೀಠವು ಸರಿಸ್ಕಾ ಹುಲಿ ಸಂರಕ್ಷಿತ ಪ್ರದೇಶದ ಸುತ್ತ ಗಣಿಗಾರಿಕೆಯನ್ನು ನಿಷೇಧ ಮಾಡುವಂತೆ ಆದೇಶಿಸಿದೆ. ಇದಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
- Sushma Chakre
- Updated on: May 15, 2024
- 6:30 pm
ಸಂದರ್ಶನದಲ್ಲಿ ಬೀಸು ಹೇಳಿಕೆ; ವೈದ್ಯಕೀಯ ಸಂಸ್ಥೆಯ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್
"ನಾವು ವಾಕ್ ಸ್ವಾತಂತ್ರ್ಯವನ್ನು ಎತ್ತಿಹಿಡಿಯುವಲ್ಲಿ ಮೊದಲಿಗರು. ಆದರೆ ಕೆಲವು ಸಂದರ್ಭಗಳಲ್ಲಿ ಸ್ವಯಂ ಸಂಯಮ ಇರಬೇಕು. ಐಎಂಎ ಅಧ್ಯಕ್ಷರಾಗಿ, ನೀವು ಸ್ವಯಂ ಸಂಯಮವನ್ನು ಹೊಂದಿರಬೇಕು. ನಿಮ್ಮ ಸಂದರ್ಶನದಲ್ಲಿ ನಾವು ಅದನ್ನು ನೋಡಲಿಲ್ಲ." ಎಂದು ನ್ಯಾಯಮೂರ್ತಿ ಕೊಹ್ಲಿ ಐಎಂಎ ಅಧ್ಯಕ್ಷ ಡಾ.ಆರ್.ವಿ.ಅಶೋಕನ್ ವಿರುದ್ಧ ಗರಂ ಆಗಿದ್ದಾರೆ.
- Rashmi Kallakatta
- Updated on: May 14, 2024
- 4:24 pm
ಬರ ಪರಿಹಾರ: ಸುಪ್ರೀಂ ಕೋರ್ಟ್ನಲ್ಲಿ ರಾಜ್ಯಕ್ಕೆ ಮತ್ತೆ ಮುನ್ನಡೆ, ತಜ್ಞರ ವರದಿ ಸಲ್ಲಿಸುವಂತೆ ಕೇಂದ್ರಕ್ಕೆ ಸೂಚನೆ
ಕೇಂದ್ರ ಸರ್ಕಾರವು ಕರ್ನಟಕಕ್ಕೆ 3,454 ಕೋಟಿ ರೂ. ಬರ ಪರಿಹಾರವನ್ನು ಕಳೆದ ವಾರ ಬಿಡುಗಡೆ ಮಾಡಿದೆ. ಆದರೆ, ಇದು ಸಾಲದು ಎಂದು ಮತ್ತೆ ವಾದ ಮುಂದುವರಿಸಿರುವ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ನಲ್ಲಿ ಸ್ವಲ್ಪ ಮಟ್ಟಿನ ಮುನ್ನಡೆಯಾಗಿದೆ. ಕೇಂದ್ರ ಸರ್ಕಾರದ ಬರ ಅಧ್ಯಯನ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
- Harish GR
- Updated on: Apr 30, 2024
- 7:02 am
ಪತಂಜಲಿ ಸಂಸ್ಥೆಯ 15 ಉತ್ಪನ್ನಗಳ ತಯಾರಿಕೆಗೆ ಲೈಸೆನ್ಸ್ ರದ್ದು ಮಾಡಿದ ಉತ್ತರಾಖಂಡ್ ಸರ್ಕಾರ
Patanjali Ayurved loses manufacturing license for 15 products: ನ್ಯಾಯಾಲಯದ ಆದೇಶ ಉಲ್ಲಂಘಿಸಿ ತಪ್ಪಾದ ಮಾಹಿತಿ ಇರುವ ಜಾಹೀರಾತುಗಳನ್ನು ಪದೇ ಪದೇ ಪ್ರಕಟಿಸುತ್ತಿದ್ದ ಪತಂಜಲಿ ಆಯುರ್ವೇದ್ ಸಂಸ್ಥೆ ಕೋರ್ಟ್ ನಿಂದನೆಯ ಸಂಕಷ್ಟ ಎದುರಿಸುತ್ತಿದೆ. ಇದೇ ಜಾಹೀರಾತು ವಿಚಾರವಾಗಿ ಉತ್ತರಾಖಂಡ್ ಸರ್ಕಾರ ಪತಂಜಲಿಯ 15 ಉತ್ಪನ್ನಗಳ ತಯಾರಿಕೆಗೆ ನೀಡಲಾಗಿದ್ದ ಪರವಾನಿಗೆಯನ್ನು ರದ್ದು ಮಾಡಿರುವುದು ಗೊತ್ತಾಗಿದೆ. ಆದರೆ, ರಾಜ್ಯ ಸರ್ಕಾರದ ಈ ಅಧಿಸೂಚನೆ ಇನ್ನೂ ಸಾರ್ವತ್ರಿಕವಾಗಿ ನೀಡಲಾಗಿಲ್ಲ. ಸುಪ್ರೀಂಕೋರ್ಟ್ನಲ್ಲಿ ನಾಳೆ ಮಂಗಳವಾರ ಏಪ್ರಿಲ್ 30ರಂದು ಪತಂಜಲಿ ವಿರುದ್ಧ ವಿಚಾರಣೆ ಇದೆ.
- Vijaya Sarathy SN
- Updated on: Apr 29, 2024
- 9:35 pm