AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Supreme Court

Supreme Court

ನವದೆಹಲಿಯಲ್ಲಿ ನೆಲೆಗೊಂಡಿರುವ ಭಾರತದ ಸರ್ವೋಚ್ಚ ನ್ಯಾಯಾಲಯವು ದೇಶದ ಅತ್ಯುನ್ನತ ನ್ಯಾಯಾಂಗ ವ್ಯವಸ್ಥೆಯಾಗಿದೆ. ಇದನ್ನು ಜನವರಿ 28, 1950 ರಂದು ಸ್ಥಾಪಿಸಲಾಯಿತು, ಇದು ಮೇಲ್ಮನವಿಯ ಅಂತಿಮ ನ್ಯಾಯಾಲಯವಾಗಿ ಮತ್ತು ಸಂವಿಧಾನದ ಖಾತರಿಗಾರನಾಗಿ ಕಾರ್ಯನಿರ್ವಹಿಸುತ್ತದೆ. ನ್ಯಾಯಾಲಯವು ಭಾರತದ ಮುಖ್ಯ ನ್ಯಾಯಾಧೀಶರ ನೇತೃತ್ವದಲ್ಲಿದೆ ಮತ್ತು ಗರಿಷ್ಠ 34 ನ್ಯಾಯಾಧೀಶರನ್ನು ಒಳಗೊಂಡಿದೆ. ಸಂವಿಧಾನವನ್ನು ವ್ಯಾಖ್ಯಾನಿಸುವಲ್ಲಿ, ನ್ಯಾಯಾಂಗ ಪರಿಶೀಲನೆಯನ್ನು ಖಾತ್ರಿಪಡಿಸುವಲ್ಲಿ ಮತ್ತು ಮೂಲಭೂತ ಹಕ್ಕುಗಳನ್ನು ರಕ್ಷಿಸುವಲ್ಲಿ ಸುಪ್ರೀಂ ಕೋರ್ಟ್ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇದು ಮೇಲ್ಮನವಿಗಳು, ರಿಟ್ ಅರ್ಜಿಗಳು ಮತ್ತು ವಿಶೇಷ ರಜೆ ಅರ್ಜಿಗಳನ್ನು ಆಲಿಸುತ್ತದೆ. ಅದರ ನಿರ್ಧಾರಗಳು ದೇಶದ ಇತರ ಎಲ್ಲಾ ನ್ಯಾಯಾಲಯಗಳಿಗೆ ಬದ್ಧವಾಗಿರುತ್ತವೆ. ನ್ಯಾಯಾಲಯವು ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ನಡುವಿನ ಅಥವಾ ರಾಜ್ಯಗಳ ನಡುವಿನ ವಿವಾದಗಳನ್ನು ಸಹ ನಿರ್ಣಯಿಸುತ್ತದೆ.ಸುಪ್ರೀಂ ಕೋರ್ಟ್ ನ್ಯಾಯದ ಸ್ತಂಭವಾಗಿ ನಿಂತಿದ್ದು, ಕಾನೂನಿನ ನಿಯಮವನ್ನು ಎತ್ತಿಹಿಡಿಯುತ್ತದೆ ಮತ್ತು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಪ್ರಜಾಪ್ರಭುತ್ವದ ತತ್ವಗಳನ್ನು ರಕ್ಷಿಸುತ್ತದೆ.

ಇನ್ನೂ ಹೆಚ್ಚು ಓದಿ

ಬೆಂಗಳೂರು ಅರಮನೆ ಜಮೀನು ವಿವಾದ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್

ಬೆಂಗಳೂರು ಅರಮನೆ ಮೈದಾನದ ಭೂವಿವಾದದಲ್ಲಿ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್​​ನಲ್ಲಿ ತಾತ್ಕಾಲಿಕ ರಿಲೀಫ್ ದೊರೆತಿದೆ. 3400 ಕೋಟಿ ರೂ. ಟಿಡಿಆರ್ ಪಾವತಿಗೆ ತಡೆಯಾಜ್ಞೆ ನೀಡಲಾಗಿದೆ. ರಾಜಮನೆತನಕ್ಕೆ ಟಿಡಿಆರ್ ನೀಡುವಂತೆ ಹಿಂದೆ ನೀಡಿದ್ದ ಆದೇಶವನ್ನು ಮರುಪರಿಶೀಲಿಸುವಂತೆ ಸರ್ಕಾರ ಅರ್ಜಿ ಸಲ್ಲಿಸಿತ್ತು. ಜುಲೈ 21 ಮತ್ತು ಆಗಸ್ಟ್ 18 ರಂದು ಮುಂದಿನ ವಿಚಾರಣೆ ನಿಗದಿಯಾಗಿದೆ.

ಕೋಟಾದಲ್ಲಿ ಮಾತ್ರ ಏಕೆ ಸಾಯುತ್ತಿದ್ದಾರೆ?; ವಿದ್ಯಾರ್ಥಿಗಳ ಆತ್ಮಹತ್ಯೆ ಬಗ್ಗೆ ರಾಜಸ್ಥಾನ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ರಾಜಸ್ಥಾನದ ಕೋಟಾದಲ್ಲಿ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್​ ರಾಜಸ್ಥಾನ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಕೋಟಾದಲ್ಲಿ ಮಾತ್ರ ವಿದ್ಯಾರ್ಥಿಗಳು ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ? ಎಂದು ರಾಜಸ್ಥಾನ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆ ತೆಗೆದುಕೊಂಡಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪುನರಾವರ್ತಿತ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಮಾರ್ಚ್ 24ರಂದು ಸುಪ್ರೀಂ ಕೋರ್ಟ್ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಕಾಳಜಿಯನ್ನು ಪರಿಹರಿಸಲು ಮತ್ತು ಅಂತಹ ಘಟನೆಗಳನ್ನು ತಡೆಯಲು ರಾಷ್ಟ್ರೀಯ ಕಾರ್ಯಪಡೆಯನ್ನು ರಚಿಸಿತ್ತು.

ನ್ಯಾಯಾಲಯಗಳು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ; ವಕ್ಫ್ ಕಾಯ್ದೆ ಕುರಿತು ಸಿಜೆಐ ಮಹತ್ವದ ಹೇಳಿಕೆ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರ ಪೀಠವು ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಹಲವಾರು ಅರ್ಜಿಗಳ ವಿಚಾರಣೆ ನಡೆಸುತ್ತಿದೆ. ನ್ಯಾಯಾಲಯದ ಮುಂದಿನ ಆದೇಶದವರೆಗೆ ಕೇಂದ್ರ ವಕ್ಫ್ ಮಂಡಳಿ ಮತ್ತು ರಾಜ್ಯ ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರ ಸದಸ್ಯರನ್ನು ನೇಮಿಸಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿತ್ತು. 

ಭಾರತ ಧರ್ಮಛತ್ರವಲ್ಲ; ಶ್ರೀಲಂಕಾ ವಲಸಿಗನಿಗೆ ಆಶ್ರಯ ನಿರಾಕರಿಸಿದ ಸುಪ್ರೀಂ ಕೋರ್ಟ್

ಭಾರತ ಧರ್ಮಛತ್ರವಲ್ಲ, ಇಲ್ಲಿರುವ 140 ಕೋಟಿ ಜನಸಂಖ್ಯೆಯ ಜೊತೆಗೆ ಭಾರತ ಹೋರಾಡುತ್ತಿದೆ. ಎಲ್ಲೆಡೆಯಿಂದ ಬಂದ ನಿರಾಶ್ರಿತರಿಗೆ ಆತಿಥ್ಯ ವಹಿಸಲು ಸಾಧ್ಯವಿಲ್ಲ ಎಂದು ಶ್ರೀಲಂಕಾದ ವ್ಯಕ್ತಿಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಶ್ರೀಲಂಕಾದ ವ್ಯಕ್ತಿ ತನಗೆ ಭಾರತದಲ್ಲಿ ಆಶ್ರಯ ಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ಆ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಶ್ರೀಲಂಕಾದ ಪ್ರಜೆ ತನ್ನ ಅರ್ಜಿಯಲ್ಲಿ ತನ್ನ ದೇಶದಲ್ಲಿ ತನ್ನ ಜೀವಕ್ಕೆ ಅಪಾಯವಿದೆ ಎಂದು ಹೇಳಿಕೊಂಡಿದ್ದ. ತನ್ನ ಪತ್ನಿ ಮತ್ತು ಮಕ್ಕಳು ಭಾರತದಲ್ಲಿ ನೆಲೆಸಿದ್ದಾರೆ. ಹೀಗಾಗಿ, ತಾನು ಸುಮಾರು 3 ವರ್ಷಗಳಿಂದ ಬಂಧನದಲ್ಲಿದ್ದೇನೆ ಮತ್ತು ಗಡೀಪಾರು ಪ್ರಕ್ರಿಯೆ ಇನ್ನೂ ಪ್ರಾರಂಭವಾಗಿಲ್ಲ ಎಂದು ಅವರು ಹೇಳಿದ್ದಾರೆ.

ದೇಶವೇ ನಾಚಿಕೆ ಪಡುವಂತಾಗಿದೆ; ಕರ್ನಲ್ ಸೋಫಿಯಾ ಕುರಿತ ಹೇಳಿಕೆಗೆ ವಿಜಯ್ ಶಾ ವಿರುದ್ಧ ಎಸ್​ಐಟಿ ತನಿಖೆಗೆ ಸುಪ್ರೀಂ ಆದೇಶ

ಆಪರೇಷನ್ ಸಿಂಧೂರದ ಬಳಿಕ ಮಧ್ಯಪ್ರದೇಶದ ಸಚಿವ ವಿಜಯ್ ಶಾ ಬಿಜೆಪಿ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಭರದಲ್ಲಿ ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಸೋಫಿಯಾ ಖುರೇಷಿಯನ್ನು ಪಾಕಿಸ್ತಾನದ ಭಯೋತ್ಪಾದಕರ ಸಹೋದರಿ ಎಂದು ಕರೆದಿದ್ದರು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಈ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ವಿಚಾರಣೆ ನಡೆಸಿದ್ದ ಜಬಲ್ಪುರ ಹೈಕೋರ್ಟ್ ವಿಜಯ್ ಶಾ ವಿರುದ್ಧ ಕೇಸ್ ದಾಖಲಿಸಲು ಸೂಚಿಸಿತ್ತು. ಈ ಆದೇಶದ ವಿರುದ್ಧ ವಿಜಯ್ ಶಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇಂದು ಸುಪ್ರೀಂ ಕೋರ್ಟ್ ಕೂಡ ವಿಜಯ್ ಶಾ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

ಬೆಂಗಳೂರು ಇಸ್ಕಾನ್ ಹರೇ ಕೃಷ್ಣ ದೇಗುಲದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಬೆಂಗಳೂರಿನ ಇಸ್ಕಾನ್ ಹರೇ ಕೃಷ್ಣ ದೇಗುಲದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇದರೊಂದಿಗೆ, ದೇವಾಲಯದ ಆಡಳಿತ ನಿರ್ವಹಣೆ ಸಂಬಂಧ ಇಸ್ಕಾನ್ ಮುಂಬೈಗೆ ಅಧಿಕಾರ ನೀಡಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶ ಅಸಿಂಧುವಾಗಿದೆ. ದೇಗುಲವು ಬೆಂಗಳೂರು ಇಸ್ಕಾನ್ ಸೊಸೈಟಿಗೆ ಸೇರಿದ್ದೆಂಬುದನ್ನು ಸರ್ವೋಚ್ಚ ನ್ಯಾಯಾಲಯ ಎತ್ತಿಹಿಡಿದಿದೆ. ಪ್ರಕರಣದ ವಿವರ ಇಲ್ಲಿದೆ.

ನ್ಯಾಯಮೂರ್ತಿ ಯಶವಂತ್ ವರ್ಮಾ ಮನೆಯಲ್ಲಿ ಹಣ ಪತ್ತೆಯಾಗಿದ್ದು ದೃಢ; ರಾಜೀನಾಮೆಗೆ ಸೂಚನೆ

ದೆಹಲಿ ಹೈಕೋರ್ಟ್‌ನಲ್ಲಿ ಬೆಂಕಿ ಅವಘಡದ ಸಂದರ್ಭದಲ್ಲಿ ನ್ಯಾಯಮೂರ್ತಿ ಯಶವಂತ್ ವರ್ಮಾ ಮನೆಯಲ್ಲಿ ನಗದು ಪತ್ತೆಯಾದ ನಂತರ ರಚಿಸಲಾದ ತನಿಖಾ ಸಮಿತಿಯು ಭಾರತದ ಮುಖ್ಯ ನ್ಯಾಯಮೂರ್ತಿಗೆ ತನ್ನ ವರದಿಯನ್ನು ಸಲ್ಲಿಸಿತು. ಅದರ ಪ್ರತಿಯನ್ನು ನ್ಯಾಯಾಧೀಶ ಯಶವಂತ್ ವರ್ಮ ಅವರಿಗೂ ಕಳುಹಿಸಲಾಗಿದೆ. ಈ ವರದಿಗೆ ಪ್ರತಿಕ್ರಿಯಿಸಲು ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿಗೆ ಎರಡು ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಭೂಷಣ್ ಪವರ್ ಹಗರಣ; 38,000 ಕೋಟಿ ರೂ ಸಾಲ ಕೊಟ್ಟು ಬೆಪ್ಪಾದ ಬ್ಯಾಂಕುಗಳು; ಖರೀದಿಸಿ ಕೈಸುಟ್ಟುಕೊಂಡ ಜೆಎಸ್​​​ಡಬ್ಲ್ಯು ಸ್ಟೀಲ್

Bhushan Power and Steel Ltd scam explained: ಭಾರತದ ಅತಿದೊಡ್ಡ ಕಾರ್ಪೊರೇಟ್ ಮತ್ತು ಬ್ಯಾಂಕಿಂಗ್ ಹಗರಣಗಳಲ್ಲೊಂದಾದ ಭೂಷಣ್ ಪವರ್ ಅಂಡ್ ಸ್ಟೀಲ್ ಲಿಮಿಟೆಡ್ ಈಗ ಮತ್ತೆ ಸುದ್ದಿಯಲ್ಲಿದೆ. ಜೆಎಸ್​​​ಡಬ್ಲ್ಯುಗೆ ಬಿಪಿಎಸ್​​ಎಲ್​​ನ ಮಾರಾಟವನ್ನು ಸುಪ್ರೀಂಕೋರ್ಟ್ ಅಸಿಂಧುಗೊಳಿಸಿದೆ. ಬಿಪಿಎಸ್​​ಎಲ್ ಅನ್ನು ಖರೀದಿಸಿ ಸಾಕಷ್ಟು ವೆಚ್ಚ ಮಾಡಿದ್ದ ಜೆಎಸ್​​ಡಬ್ಲ್ಯುಗೆ ಈಗ ಪ್ರಮುಖ ಆದಾಯ ಮೂಲವೊಂದೂ ಕೈತಪ್ಪಿ ಹೋದಂತಾಗಿದೆ.

ಭದ್ರತಾ ಪಡೆಗಳ ಆತ್ಮಸ್ಥೈರ್ಯ ಕುಗ್ಗಿಸಬೇಡಿ; ಪಹಲ್ಗಾಮ್ ದಾಳಿ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ಕಾಶ್ಮೀರದ ಪಹಲ್ಗಾಮ್​​ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ನಡೆದ ಪ್ರಕರಣಕ್ಕೆ ನ್ಯಾಯಾಂಗ ತನಿಖೆಗೆ ಕೋರಿ ಪಿಐಎಲ್ ಸಲ್ಲಿಸಲಾಗಿತ್ತು. ಉಗ್ರರ ದಾಳಿಯ ಬಗ್ಗೆ ನ್ಯಾಯಾಂಗ ತನಿಖೆಗೆ ಮನವಿ ಮಾಡಿದ್ದಕ್ಕೆ ಸುಪ್ರೀಂಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ಪಿಐಎಲ್ ಸಲ್ಲಿಸಿದ್ದ ವ್ಯಕ್ತಿಗೆ ತರಾಟೆ ತೆಗೆದುಕೊಂಡ ಸುಪ್ರೀಂಕೋರ್ಟ್‌ ಉಗ್ರರ ದಾಳಿಯ ಬಗ್ಗೆ ತನಿಖೆ ನಡೆಸುವುದು ಜಡ್ಜ್‌ಗಳ ಜವಾಬ್ದಾರಿಯಲ್ಲ. ಉಗ್ರರ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಒಗ್ಗಟ್ಟಾಗಿರಬೇಕು. ಈ ರೀತಿಯ ಮನವಿ ಸಲ್ಲಿಸುವುದರಿಂದ ಸೇನಾ ಪಡೆಗಳ ಶಕ್ತಿ ಕುಗ್ಗಲಿದೆ. ಭದ್ರತಾ ಪಡೆಗಳ ಆತ್ಮಸ್ಥೈರ್ಯ ಕುಗ್ಗಿಸುವ ಪಿಐಎಲ್​​​ ಸಲ್ಲಿಸಬೇಡಿ ಎಂದು ಹೇಳಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್. ಗವಾಯಿ ನೇಮಕ; ಮೇ 14ರಂದು ಪ್ರಮಾಣ ವಚನ

Justice BR Gavai: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್. ಗವಾಯಿ ಅವರ ನೇಮಕವನ್ನು ಅನುಮೋದಿಸಿದ್ದಾರೆ. ಮೇ 14ರಂದು ಬಿ.ಆರ್. ಗವಾಯಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಇವರು ಪರಿಶಿಷ್ಟ ಜಾತಿ ಸಮುದಾಯದಿಂದ ಎರಡನೇ ಸಿಜೆಐ ಆಗಿದ್ದಾರೆ. ಹಾಲಿ ಸಿಜೆಐ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಮೇ 13ರಂದು ನಿವೃತ್ತರಾಗಲಿದ್ದಾರೆ. ಹೀಗಾಗಿ, ಗವಾಯಿ ಮುಖ್ಯ ನ್ಯಾಯಮೂರ್ತಿಯಾಗಿ ಮೇ 14ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್​ ಚಿತಾಗಾರದ ಕರೆಂಟ್​ ಬಿಲ್​ ಬಾಕಿ ಉಳಿಸಿಕೊಂಡ ಬಿಟಿಡಿಎಗೆ ನೋಟಿಸ್
ವಿದ್ಯುತ್​ ಚಿತಾಗಾರದ ಕರೆಂಟ್​ ಬಿಲ್​ ಬಾಕಿ ಉಳಿಸಿಕೊಂಡ ಬಿಟಿಡಿಎಗೆ ನೋಟಿಸ್
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು