
Supreme Court
ನವದೆಹಲಿಯಲ್ಲಿ ನೆಲೆಗೊಂಡಿರುವ ಭಾರತದ ಸರ್ವೋಚ್ಚ ನ್ಯಾಯಾಲಯವು ದೇಶದ ಅತ್ಯುನ್ನತ ನ್ಯಾಯಾಂಗ ವ್ಯವಸ್ಥೆಯಾಗಿದೆ. ಇದನ್ನು ಜನವರಿ 28, 1950 ರಂದು ಸ್ಥಾಪಿಸಲಾಯಿತು, ಇದು ಮೇಲ್ಮನವಿಯ ಅಂತಿಮ ನ್ಯಾಯಾಲಯವಾಗಿ ಮತ್ತು ಸಂವಿಧಾನದ ಖಾತರಿಗಾರನಾಗಿ ಕಾರ್ಯನಿರ್ವಹಿಸುತ್ತದೆ. ನ್ಯಾಯಾಲಯವು ಭಾರತದ ಮುಖ್ಯ ನ್ಯಾಯಾಧೀಶರ ನೇತೃತ್ವದಲ್ಲಿದೆ ಮತ್ತು ಗರಿಷ್ಠ 34 ನ್ಯಾಯಾಧೀಶರನ್ನು ಒಳಗೊಂಡಿದೆ. ಸಂವಿಧಾನವನ್ನು ವ್ಯಾಖ್ಯಾನಿಸುವಲ್ಲಿ, ನ್ಯಾಯಾಂಗ ಪರಿಶೀಲನೆಯನ್ನು ಖಾತ್ರಿಪಡಿಸುವಲ್ಲಿ ಮತ್ತು ಮೂಲಭೂತ ಹಕ್ಕುಗಳನ್ನು ರಕ್ಷಿಸುವಲ್ಲಿ ಸುಪ್ರೀಂ ಕೋರ್ಟ್ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇದು ಮೇಲ್ಮನವಿಗಳು, ರಿಟ್ ಅರ್ಜಿಗಳು ಮತ್ತು ವಿಶೇಷ ರಜೆ ಅರ್ಜಿಗಳನ್ನು ಆಲಿಸುತ್ತದೆ. ಅದರ ನಿರ್ಧಾರಗಳು ದೇಶದ ಇತರ ಎಲ್ಲಾ ನ್ಯಾಯಾಲಯಗಳಿಗೆ ಬದ್ಧವಾಗಿರುತ್ತವೆ. ನ್ಯಾಯಾಲಯವು ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ನಡುವಿನ ಅಥವಾ ರಾಜ್ಯಗಳ ನಡುವಿನ ವಿವಾದಗಳನ್ನು ಸಹ ನಿರ್ಣಯಿಸುತ್ತದೆ.ಸುಪ್ರೀಂ ಕೋರ್ಟ್ ನ್ಯಾಯದ ಸ್ತಂಭವಾಗಿ ನಿಂತಿದ್ದು, ಕಾನೂನಿನ ನಿಯಮವನ್ನು ಎತ್ತಿಹಿಡಿಯುತ್ತದೆ ಮತ್ತು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಪ್ರಜಾಪ್ರಭುತ್ವದ ತತ್ವಗಳನ್ನು ರಕ್ಷಿಸುತ್ತದೆ.
ಮನೆಯಲ್ಲಿ ಅಕ್ರಮ ಹಣ ಪತ್ತೆ; ನ್ಯಾಯಮೂರ್ತಿ ಯಶವಂತ್ ವರ್ಮಾ ಪ್ರಕರಣದ ತನಿಖೆಗೆ ಸಿಜೆಐ ಸಂಜೀವ್ ಖನ್ನಾ ಆದೇಶ
ದೆಹಲಿಯ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಭಾರೀ ಪ್ರಮಾಣದ ಹಣ ಪತ್ತೆಯಾಗಿದ್ದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ಆರೋಪಗಳ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ 3 ಸದಸ್ಯರ ಸಮಿತಿ ರಚಿಸಿದ್ದಾರೆ. ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ಆರೋಪಗಳ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರು ಆಂತರಿಕ ತನಿಖೆಯನ್ನು ಪ್ರಾರಂಭಿಸಲು ಆದೇಶಿಸಿದ್ದಾರೆ.
- Sushma Chakre
- Updated on: Mar 22, 2025
- 9:26 pm
ದೆಹಲಿ ನ್ಯಾಯಮೂರ್ತಿ ವರ್ಗಾವಣೆಗೂ ನಗದು ತನಿಖೆಗೂ ಸಂಬಂಧವಿಲ್ಲ; ಸುಪ್ರೀಂ ಕೋರ್ಟ್
ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮ ಅವರ ಅಲಹಾಬಾದ್ ಹೈಕೋರ್ಟ್ಗೆ ವರ್ಗಾವಣೆಗೂ ಅವರ ನಿವಾಸದಿಂದ ನಗದು ವಶಪಡಿಸಿಕೊಳ್ಳುವಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ಸ್ಪಷ್ಟಪಡಿಸಿದೆ. ಆಂತರಿಕ ವಿಚಾರಣೆಯು ಕಾರ್ಯವಿಧಾನದ ಪ್ರಕಾರ ಪ್ರತ್ಯೇಕವಾಗಿ ನಡೆಯುತ್ತಿದೆ ಎಂದು ಸುಪ್ರೀಂ ಕೋರ್ಟ್ ಒತ್ತಿ ಹೇಳಿದೆ. ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ದೆಹಲಿ ನಿವಾಸದ ವಿವಿಧ ಕೋಣೆಗಳಲ್ಲಿ ಬೆಂಕಿಯ ನಂತರ ಅಗ್ನಿಶಾಮಕ ದಳದವರು ದೊಡ್ಡ ಪ್ರಮಾಣದ ಹಣವನ್ನು ಪತ್ತೆ ಮಾಡಿದ್ದಾರೆ ಎಂಬ ವರದಿಗಳು ಬಂದ ನಂತರ ವಿವಾದ ಭುಗಿಲೆದ್ದಿತು.
- Sushma Chakre
- Updated on: Mar 21, 2025
- 10:20 pm
ಭಾರತ ಸರ್ಕಾರ ವಿರುದ್ಧ ತಿರುಗಿನಿಂತ ಇಲಾನ್ ಮಸ್ಕ್ ಕಂಪನಿ; ಕರ್ನಾಟಕ ಹೈಕೋರ್ಟ್ನಲ್ಲಿ ಎಕ್ಸ್ನಿಂದ ಮೊಕದ್ದಮೆ
Elon Musk's X files law suit against Govt of India: ಇಲಾನ್ ಮಸ್ಕ್ ಅವರ ಸೋಷಿಯಲ್ ಮೀಡಿಯಾ ಸಂಸ್ಥೆಯಾದ ಎಕ್ಸ್ ಕರ್ನಾಟಕ ಹೈಕೋರ್ಟ್ನಲ್ಲಿ ಭಾರತ ಸರ್ಕಾರ ವಿರುದ್ಧ ಮೊಕದ್ದಮೆ ಸಲ್ಲಿಕೆ ಮಾಡಿದೆ. ಸರ್ಕಾರ ಸರಿಯಾದ ಕಾನೂನು ಪಾಲನೆ ಮಾಡದೆ ಕಂಟೆಂಟ್ ರೆಗ್ಯುಲೇಟ್ ಮಾಡುತ್ತಿದೆ ಎಂದು ಎಕ್ಸ್ ತನ್ನ ಕಾನೂನು ಮೊಕದ್ದಮೆಯಲ್ಲಿ ಆರೋಪಿಸಿದೆ. ಹಿಂದಿನ ಸುಪ್ರೀಮ್ ಕೋರ್ಟ್ ತೀರ್ಪೊಂದನ್ನು ಅದು ತನ್ನ ವಾದಕ್ಕೆ ಉಲ್ಲೇಖಿಸಿದೆ.
- Vijaya Sarathy SN
- Updated on: Mar 20, 2025
- 7:10 pm
ಬ್ಯಾಂಕ್ ಮತ್ತು ರಿಯಲ್ ಎಸ್ಟೇಟ್ ಉದ್ಯಮ ಸೇರಿ ಜನರಿಗೆ ಉಂಡೆ ನಾಮ? ಸಿಬಿಐಗೆ ತನಿಖೆ ವಹಿಸಲು ಸುಪ್ರೀಂಕೋರ್ಟ್ ನಿರ್ಧಾರ
Supreme Court wants CBI to investigate real estate builder and bank nexus: ರಿಯಲ್ ಎಸ್ಟೇಟ್ ಡೆವಲಪರ್ಗಳು ಸರಿಯಾದ ಸಮಯಕ್ಕೆ ಪ್ರಾಜೆಕ್ಟ್ ಪೂರ್ಣಗೊಳಿಸದೆ ಗ್ರಾಹಕರಿಗೆ ವಂಚನೆ ಎಸಗುತ್ತಿರುವ ಪ್ರಕರಣಗಳು ಹಲವು ಬೆಳಕಿಗೆ ಬಂದಿವೆ. ಪ್ರಾಜೆಕ್ಟ್ಗಳನ್ನು ಪರಿಶೀಲನೆ ಮಾಡದೆಯೇ ರಿಯಲ್ ಎಸ್ಟೇಟ್ ಡೆವಲಪರ್ಗಳಿಗೆ ಬ್ಯಾಂಕುಗಳು ಸಾಲ ನೀಡುತ್ತಿವೆ. ಈ ಹಣವನ್ನು ಡೆವಲಪರ್ಗಳು ಬೇರೆಡೆ ವರ್ಗಾಯಿಸಿ ಪ್ರಾಜೆಟ್ಗಳನ್ನು ಪೂರ್ಣಗೊಳಿಸುತ್ತಿಲ್ಲ. ಈ ಮಾಫಿಯಾ ವಿರುದ್ಧ ಸಿಬಿಐ ತನಿಖೆ ಆಗಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.
- Vijaya Sarathy SN
- Updated on: Mar 19, 2025
- 2:22 pm
ಮುಸ್ಲಿಮರಿಗೆ ಶೇ 4 ಮೀಸಲಾತಿ: ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಾಗ್ತಿದೆ ಎಂದ ಬೊಮ್ಮಾಯಿ
ಸರ್ಕಾರದ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇಕಡ 4 ರಷ್ಟು ಮೀಸಲಾತಿ ನೀಡುವ ವಿಚಾರ ಈಗಾಗಲೇ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಪ್ರತಿಪಕ್ಷ ಬಿಜೆಪಿ ಸರ್ಕಾರದ ನಡೆಯನ್ನು ಖಂಡಿಸಿದೆ. ಅಲ್ಲದೆ, ಸುಪ್ರೀಂಕೋರ್ಟಿನಲ್ಲಿ ಪ್ರಶ್ನಿಸುವುದಾಗಿ ಕೂಡ ಹೇಳಿದೆ. ಈ ವಿಚಾರವಾಗಿ ಸಂಸದ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆ ಇಲ್ಲಿದೆ.
- Ganapathi Sharma
- Updated on: Mar 18, 2025
- 1:49 pm
ಸಭ್ಯತೆ ಇರಲಿ: ‘ದಿ ರಣ್ವೀರ್ ಶೋ’ ಪ್ರಸಾರಕ್ಕೆ ಸುಪ್ರೀಂ ಕೋರ್ಟ್ ಅನುಮತಿ
‘ಇಂಡಿಯಾಸ್ ಗಾಟ್ ಲೇಟೆಂಟ್’ ಕಾರ್ಯಕ್ರಮದಲ್ಲಿ ತಂದೆ-ತಾಯಿಯ ಲೈಂಗಿಕತೆ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದ ಯೂಟ್ಯೂಬರ್ ರಣ್ವೀರ್ ಅಲಹಾಬಾದಿಯಾ ಅವರಿಗೆ ಈಗ ಸಣ್ಣ ರಿಲೀಫ್ ಸಿಕ್ಕಿದೆ. ಯೂಟ್ಯೂಬ್ನಲ್ಲಿ ಹೊಸ ಎಪಿಸೋಡ್ ಅಪ್ಲೋಡ್ ಮಾಡಲು ಸುಪ್ರೀಂ ಕೋರ್ಟ್ ಅವಕಾಶ ನೀಡಿದೆ. ಆ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..
- Madan Kumar
- Updated on: Mar 3, 2025
- 6:19 pm
ಇಶಾ ಫೌಂಡೇಷನ್ಗೆ ಬಿಗ್ ರಿಲೀಫ್: ಶೋಕಾಸ್ ನೋಟಿಸ್ ರದ್ದತಿಯನ್ನು ಎತ್ತಿ ಹಿಡಿದ ಸುಪ್ರೀಂ
ಗುರು ಜಗ್ಗಿ ವಾಸುದೇವ್ ನಡೆಸುತ್ತಿರುವ ಈಶಾ ಫೌಂಡೇಶನ್ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿಯು ಇಶಾ ಫೌಂಡೇಶನ್ಗೆ ನೀಡಿದ್ದ ಶೋಕಾಸ್ ನೋಟಿಸ್ ಅನ್ನು ಮದ್ರಾಸ್ ಹೈಕೋರ್ಟ್ ರದ್ದುಗೊಳಿಸಿತ್ತು. ಇದೀಗ ಮದ್ರಾಸ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಈಗ ಸುಪ್ರೀಂಕೋರ್ಟ್ ಸಹ ಎತ್ತಿ ಹಿಡಿದೆ.
- Web contact
- Updated on: Feb 28, 2025
- 10:12 pm
ಬೆಂಗಳೂರಿನ ಅರಮನೆ ಜಮೀನು ವಿವಾದ; ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ಒಪ್ಪದ ಸುಪ್ರೀಂ ಕೋರ್ಟ್
ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ 15.7 ಎಕರೆ ಜಾಗಕ್ಕೆ 3,011 ಕೋಟಿ ರೂ. ಟಿಡಿಆರ್ ಪರಿಹಾರ ನೀಡುವುದರಿಂದ ಪಾರಾಗಲು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಎರಡು ಕಿ.ಮೀ. ರಸ್ತೆ ಜಾಗಕ್ಕೆ 3400 ಕೋಟಿ ಮೌಲ್ಯದ ಪರಿಹಾರ ನೀಡುವುದು ನ್ಯಾಯಬದ್ಧವಲ್ಲ ಎಂದು ರಾಜ್ಯ ಸರ್ಕಾರದ ಪರ ವಕೀಲರು ವಾದಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜ್ಯ ಸರ್ಕಾರಕ್ಕೆ ತಾತ್ಕಾಲಿಕ ಗೆಲುವು ಸಿಕ್ಕಿದೆ. ಬೆಂಗಳೂರಿನ ಅರಮನೆ ಜಮೀನಿಗೆ ಟಿಡಿಆರ್ ನೀಡುವ ವಿಚಾರವಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನ್ಯಾಯಾಂಗ ನಿಂದನೆಯಿಂದ ಪಾರಾಗಿದೆ. ಆದರೆ, ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ಸುಪ್ರೀಂ ಕೋರ್ಟ್ ಒಪ್ಪಿಲ್ಲ.
- Web contact
- Updated on: Feb 27, 2025
- 5:08 pm
ಸುಪ್ರೀಂ ಕೋರ್ಟ್ನಲ್ಲಿ ದರ್ಶನ್ ಕೇಸ್; ಹಿರಿಯ ವಕೀಲ ಕಪಿಲ್ ಸಿಬಲ್ ಭೇಟಿ
ಹೈಕೋರ್ಟ್ನಲ್ಲಿ ಜಾಮೀನು ಪಡೆದ ದರ್ಶನ್ ಅವರು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಎದುರಿಸುವುದು ಬಾಕಿ ಇದೆ. ಖ್ಯಾತ ವಕೀಲ ಕಪಿಲ್ ಸಿಬಲ್ ಅವರನ್ನು ದರ್ಶನ್ ಕುಟುಂಬದವರು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ದರ್ಶನ್ ಹಾಗೂ ಇನ್ನುಳಿದ ಆರೋಪಿಗಳ ಪರವಾಗಿ ಕಪಿಲ್ ಸಿಬಲ್ ಅವರು ಸುಪ್ರೀಂ ಕೋರ್ಟ್ನಲ್ಲಿ ವಾದ ಮಾಡಲಿದ್ದಾರೆ.
- Madan Kumar
- Updated on: Feb 18, 2025
- 4:08 pm
ಏನಾದರೂ ಮಾಡಿ; ಯೂಟ್ಯೂಬ್ನಲ್ಲಿ ಅಶ್ಲೀಲ ವಿಷಯದ ಕುರಿತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ
ಯೂಟ್ಯೂಬ್ನಲ್ಲಿ ಅಶ್ಲೀಲ ವಿಷಯದ ನಿಯಂತ್ರಣದ ಕೊರತೆಯನ್ನು ಯೂಟ್ಯೂಬ್ಗಳು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಗಮನಿಸಿದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ. ರಣವೀರ್ ಅಲ್ಲಾಬಾಡಿಯಾ ಅವರ 'ಇಂಡಿಯಾಸ್ ಗಾಟ್ ಲೇಟೆಂಟ್' ವಿವಾದದ ಮಧ್ಯೆ ಯೂಟ್ಯೂಬ್ನಲ್ಲಿ ಅಶ್ಲೀಲ ವಿಷಯವನ್ನು ನಿಯಂತ್ರಿಸುವಂತೆ ಒತ್ತಾಯಿಸಿದೆ. ಇಂಡಿಯಾಸ್ ಗಾಟ್ ಲ್ಯಾಟೆಂಟ್' ಕಾರ್ಯಕ್ರಮದಲ್ಲಿ ಅತಿಥಿ ತೀರ್ಪುಗಾರರಾಗಿ ಭಾಗವಹಿಸಿದ್ದಾಗ ರಣವೀರ್ ಅಲ್ಲಾಹಬಾಡಿಯಾ ನೀಡಿದ ಹೇಳಿಕೆ ಬಹಳ ವಿವಾದಕ್ಕೆ ಕಾರಣವಾಯಿತು. ಈ ಹೇಳಿಕೆಗಳು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾದವು. ಮಹಾರಾಷ್ಟ್ರ ಮತ್ತು ಅಸ್ಸಾಂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಕೇಸ್ಗಳ ವಿಚಾರಣೆ ನಡೆಯುತ್ತಿದೆ.
- Sushma Chakre
- Updated on: Feb 18, 2025
- 3:49 pm