Supreme Court
ನವದೆಹಲಿಯಲ್ಲಿ ನೆಲೆಗೊಂಡಿರುವ ಭಾರತದ ಸರ್ವೋಚ್ಚ ನ್ಯಾಯಾಲಯವು ದೇಶದ ಅತ್ಯುನ್ನತ ನ್ಯಾಯಾಂಗ ವ್ಯವಸ್ಥೆಯಾಗಿದೆ. ಇದನ್ನು ಜನವರಿ 28, 1950 ರಂದು ಸ್ಥಾಪಿಸಲಾಯಿತು, ಇದು ಮೇಲ್ಮನವಿಯ ಅಂತಿಮ ನ್ಯಾಯಾಲಯವಾಗಿ ಮತ್ತು ಸಂವಿಧಾನದ ಖಾತರಿಗಾರನಾಗಿ ಕಾರ್ಯನಿರ್ವಹಿಸುತ್ತದೆ. ನ್ಯಾಯಾಲಯವು ಭಾರತದ ಮುಖ್ಯ ನ್ಯಾಯಾಧೀಶರ ನೇತೃತ್ವದಲ್ಲಿದೆ ಮತ್ತು ಗರಿಷ್ಠ 34 ನ್ಯಾಯಾಧೀಶರನ್ನು ಒಳಗೊಂಡಿದೆ. ಸಂವಿಧಾನವನ್ನು ವ್ಯಾಖ್ಯಾನಿಸುವಲ್ಲಿ, ನ್ಯಾಯಾಂಗ ಪರಿಶೀಲನೆಯನ್ನು ಖಾತ್ರಿಪಡಿಸುವಲ್ಲಿ ಮತ್ತು ಮೂಲಭೂತ ಹಕ್ಕುಗಳನ್ನು ರಕ್ಷಿಸುವಲ್ಲಿ ಸುಪ್ರೀಂ ಕೋರ್ಟ್ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇದು ಮೇಲ್ಮನವಿಗಳು, ರಿಟ್ ಅರ್ಜಿಗಳು ಮತ್ತು ವಿಶೇಷ ರಜೆ ಅರ್ಜಿಗಳನ್ನು ಆಲಿಸುತ್ತದೆ. ಅದರ ನಿರ್ಧಾರಗಳು ದೇಶದ ಇತರ ಎಲ್ಲಾ ನ್ಯಾಯಾಲಯಗಳಿಗೆ ಬದ್ಧವಾಗಿರುತ್ತವೆ. ನ್ಯಾಯಾಲಯವು ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ನಡುವಿನ ಅಥವಾ ರಾಜ್ಯಗಳ ನಡುವಿನ ವಿವಾದಗಳನ್ನು ಸಹ ನಿರ್ಣಯಿಸುತ್ತದೆ.ಸುಪ್ರೀಂ ಕೋರ್ಟ್ ನ್ಯಾಯದ ಸ್ತಂಭವಾಗಿ ನಿಂತಿದ್ದು, ಕಾನೂನಿನ ನಿಯಮವನ್ನು ಎತ್ತಿಹಿಡಿಯುತ್ತದೆ ಮತ್ತು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಪ್ರಜಾಪ್ರಭುತ್ವದ ತತ್ವಗಳನ್ನು ರಕ್ಷಿಸುತ್ತದೆ.
ಹರೀಶ್ ರಾಣಾ ದಯಾಮರಣದ ತೀರ್ಪಿಗೆ ಅಡಿಪಾಯ ಹಾಕಿತ್ತು ಅರುಣಾ ಶಾನಭಾಗ್ ಕೇಸ್; ಏನಿದು ಪ್ರಕರಣ?
ಇಂದು 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾ ಎಂಬ ವ್ಯಕ್ತಿಗೆ ದಯಾಮರಣ ನೀಡಲು ಕೋರ್ಟ್ ಅನುಮತಿ ನೀಡುವ ಮೂಲಕ ಮಹತ್ವದ ತೀರ್ಪು ಪ್ರಕಟಿಸಿದೆ. ದಯಾಮರಣ ಎಂದರೆ ರೋಗಿಯನ್ನು ಜೀವಂತವಾಗಿಡಲು ನೀಡಲಾಗುವ ಜೀವ ಉಳಿಸುವ ಚಿಕಿತ್ಸೆ ಅಥವಾ ವೈದ್ಯಕೀಯ ಬೆಂಬಲ ವ್ಯವಸ್ಥೆಯನ್ನು ಸ್ಥಗಿತಗೊಳಿಸುವ ಮೂಲಕ ಉದ್ದೇಶಪೂರ್ವಕವಾಗಿ ಸಾಯಲು ಅವಕಾಶ ನೀಡುವುದಾಗಿದೆ. ಜೀವ ಉಳಿಸುವ ವೈದ್ಯಕೀಯ ಚಿಕಿತ್ಸೆಯಲ್ಲಿ ವೆಂಟಿಲೇಟರ್ಗಳು, ಫೀಡಿಂಗ್ ಟ್ಯೂಬ್ಗಳು ಕೂಡ ಒಳಗೊಂಡಿರುತ್ತದೆ.
- Sushma Chakre
- Updated on: Mar 11, 2026
- 5:03 pm
NCERT ಪುಸ್ತಕ ವಿವಾದ; ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಅಧ್ಯಾಯ ಬರೆದ ಲೇಖಕರಿಗೆ ಸುಪ್ರೀಂ ಕೋರ್ಟ್ ನಿಷೇಧ
NCERT ಪಠ್ಯ ವಿವಾದಕ್ಕೆ ಸಂಬಂಧಿಸಿದಂತೆ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಅಧ್ಯಾಯ ಬರೆದ ಲೇಖಕರನ್ನು ಕಪ್ಪು ಪಟ್ಟಿಗೆ ಸೇರಿಸಲು ಹಾಗೂ ಅವರು ಇನ್ನು ಯಾವುದೇ ಪಠ್ಯಕ್ರಮ ತಂಡದಲ್ಲಿ ಭಾಗಿಯಾಗದಂತೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಆ್ಯಂಡ್ ಟ್ರೈನಿಂಗ್ (NCERT) ಪುಸ್ತಕ ವಿವಾದದ ಮಧ್ಯೆ, ಸುಪ್ರೀಂ ಕೋರ್ಟ್ 8ನೇ ತರಗತಿಯ ನ್ಯಾಯಾಂಗ ಅಧ್ಯಾಯದ ಲೇಖಕರನ್ನು ಕಪ್ಪುಪಟ್ಟಿಗೆ ಸೇರಿಸಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
- Sushma Chakre
- Updated on: Mar 11, 2026
- 3:15 pm
ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ: ಸುಬ್ಬಾರೆಡ್ಡಿ ಶಾಸಕ ಸ್ಥಾನಕ್ಕೆ ಮರುಜೀವ
ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಆದೇಶ ಸುಬ್ಬಾರೆಡ್ಡಿಗೆ ತಾತ್ಕಾಲಿಕ ರಿಲೀಫ್ ನೀಡಿದ್ದು, ಅವರ ಶಾಸಕ ಸ್ಥಾನಕ್ಕೆ ಮತ್ತೆ ಜೀವ ಬಂದಿದೆ. ಆಸ್ತಿ ಮಾಹಿತಿ ಮುಚ್ಚಿಟ್ಟ ಆರೋಪದ ಮೇಲೆ ಅವರ ಆಯ್ಕೆ ರದ್ದುಗೊಂಡಿತ್ತು. ಸುಪ್ರೀಂಕೋರ್ಟ್ ಮುನಿರಾಜುಗೆ ಆಕ್ಷೇಪಣೆ ಸಲ್ಲಿಸಲು 6 ವಾರ ನೀಡಿದ್ದು, ಸೆಪ್ಟೆಂಬರ್ನಲ್ಲಿ ಮುಂದಿನ ವಿಚಾರಣೆ ನಡೆಯಲಿದೆ.
- Ramesha M
- Updated on: Feb 27, 2026
- 12:48 pm
ಧಾರವಾಡ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್; ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ನಿಂದ ಜಾಮೀನು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲುವಾಸದಲ್ಲಿದ್ದ ಧಾರವಾಡ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸುಪ್ರೀಂ ಕೋರ್ಟ್ ಎರಡು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸಲು ಸೂಚನೆ ನೀಡಿದೆ. ಈ ತೀರ್ಪು ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್ ನೀಡಿದ್ದು, ನ್ಯಾಯಾಂಗ ಪ್ರಕ್ರಿಯೆಯಲ್ಲಿ ಮುಂದಿನ ಹಂತಕ್ಕೆ ಸಾಗಿದೆ.
- Mahesha E
- Updated on: Feb 27, 2026
- 12:49 pm
ಪಶ್ಚಿಮ ಬಂಗಾಳದ SIR ಪ್ರಕ್ರಿಯೆಗೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಸುಪ್ರೀಂ ಕೋರ್ಟ್ ಆದೇಶ
ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಹಕ್ಕುಗಳು ಮತ್ತು ಆಕ್ಷೇಪಣೆಗಳ ನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡಲು ನ್ಯಾಯಾಂಗ ಅಧಿಕಾರಿಗಳನ್ನು ನಿಯೋಜಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪಿನ್ ಪಾಂಚೋಲಿ ಅವರ ಪೀಠ ಈ ಆದೇಶ ನೀಡಿದೆ.
- Sushma Chakre
- Updated on: Feb 20, 2026
- 5:48 pm
ಯಾರನ್ನೂ ನಂಬಬೇಡಿ; ಮದುವೆಗೂ ಮುನ್ನ ಲೈಂಗಿಕ ಕ್ರಿಯೆ ನಡೆಸದಂತೆ ಸುಪ್ರೀಂ ಕೋರ್ಟ್ ಸಲಹೆ
ಇತ್ತೀಚೆಗೆ ಮದುವೆಗೂ ಮುಂಚೆ ದೈಹಿಕ ಸಂಬಂಧ ಹೊಂದಿ, ಮೋಸ ಹೋಗುವ ಹೆಣ್ಣುಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ, ಈ ಬಗ್ಗೆ ಪ್ರಕರಣವೊಂದರ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು 'ಮದುವೆಗೆ ಮುನ್ನ ಯಾರನ್ನೂ ನಂಬಬೇಡಿ. ವಿವಾಹಪೂರ್ವ ಲೈಂಗಿಕ ಕ್ರಿಯೆ ನಡೆಸುವ ಮುನ್ನ ಎಚ್ಚರ ವಹಿಸಿ' ಎಂದು ಎಚ್ಚರಿಕೆ ನೀಡಿದ್ದಾರೆ. ಮದುವೆಯಾಗುವ ಭರವಸೆ ನೀಡಿ ಅತ್ಯಾಚಾರ ನಡೆಸಿದ ಪ್ರಕರಣವೊಂದರ ವಿಚಾರಣೆ ವೇಳೆ ಈ ಸಲಹೆ ನೀಡಿದ್ದಾರೆ.
- Sushma Chakre
- Updated on: Feb 16, 2026
- 9:52 pm
ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ಗೆ ಫೆ. 21ರವರೆಗೆ ಗಡುವು ವಿಸ್ತರಿಸಿದ ಸುಪ್ರೀಂ ಕೋರ್ಟ್
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಅಡಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸುವ ಗಡುವನ್ನು ಸುಪ್ರೀಂ ಕೋರ್ಟ್ ಒಂದು ವಾರ ವಿಸ್ತರಿಸಿದೆ. ಈ ಮೊದಲು ಫೆಬ್ರವರಿ 14ಕ್ಕೆ ಗಡುವು ನಿಗದಿಪಡಿಸಲಾಗಿತ್ತು. ಸುಪ್ರೀಂ ಕೋರ್ಟ್ ಫೆಬ್ರವರಿ 14ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಹಾಗೇ, ವಿಶೇಷ ತೀವ್ರ ಪರಿಷ್ಕರಣೆ (SIR) ಕರ್ತವ್ಯಗಳಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಬೆದರಿಕೆ ಮತ್ತು ಹಿಂಸಾಚಾರವನ್ನು ಆರೋಪಿಸಿ ಚುನಾವಣಾ ಆಯೋಗದ ಅಫಿಡವಿಟ್ಗೆ ಪ್ರತಿಕ್ರಿಯಿಸಲು ಪಶ್ಚಿಮ ಬಂಗಾಳದ ಪೊಲೀಸ್ ಮಹಾನಿರ್ದೇಶಕರಿಗೆ ಸುಪ್ರೀಂ ಕೋರ್ಟ್ ಶೋಕಾಸ್ ನೋಟಿಸ್ ನೀಡಿದೆ.
- Sushma Chakre
- Updated on: Feb 9, 2026
- 6:30 pm
ಮಹಿಳೆಗೆ ಇಷ್ಟವಿಲ್ಲದಿದ್ದರೆ 30ನೇ ವಾರದಲ್ಲೂ ಗರ್ಭಪಾತ ಮಾಡಿಸಿಕೊಳ್ಳಬಹುದು; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ಭಾರತದಲ್ಲಿ 20 ವಾರಗಳವರೆಗೆ ಮಾತ್ರ ಗರ್ಭಪಾತಕ್ಕೆ ಕಾನೂನಿನಲ್ಲಿ ಅನುಮತಿಯಿದೆ. 5 ತಿಂಗಳು ತುಂಬಿದ ಬಳಿಕ ಗರ್ಭಪಾತ ಮಾಡಿಸಿಕೊಳ್ಳುವುದಕ್ಕೆ ಅನುಮತಿಯಿಲ್ಲ. ಆದರೆ, ಕೆಲವು ವೈದ್ಯಕೀಯ ಪರಿಸ್ಥಿತಿಯಲ್ಲಿ ಮಾತ್ರ 6 ತಿಂಗಳವರೆಗೆ ವಿಶೇಷ ಅನುಮತಿ ಪಡೆದು ಗರ್ಭಪಾತಕ್ಕೆ ಅನುಮತಿ ನೀಡಲಾಗುತ್ತದೆ. ಇದೀಗ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪೊಂದನ್ನು ನೀಡಿದ್ದು, 30 ವಾರಗಳ ಗರ್ಭವನ್ನು ಕೂಡ ತೆಗೆಸುವ ಹಕ್ಕು ಗರ್ಭಿಣಿಗಿರುತ್ತದೆ ಎಂದು ಹೇಳಿದೆ.
- Sushma Chakre
- Updated on: Feb 6, 2026
- 4:23 pm
ಎಸ್ಐಆರ್ ಒತ್ತಡದಿಂದ ಬಂಗಾಳದಲ್ಲಿ 150 ಜನ ಸಾವು; ಸುಪ್ರೀಂ ಕೋರ್ಟ್ನಲ್ಲಿ ಮಮತಾ ಬ್ಯಾನರ್ಜಿ ವಾದ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಮಧ್ಯಾಹ್ನ ತಮ್ಮ ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR)ಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ವಾದಿಸಲು ಭಾರತದ ಮುಖ್ಯ ನ್ಯಾಯಾಧೀಶರ (CJI) ಕೊಠಡಿಗೆ ಪ್ರವೇಶಿಸಿದರು. ಈ ವೇಳೆ ಸಿಎಂ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗದ ಮೇಲೆ ಹರಿಹಾಯ್ದರು. ಎಸ್ಐಆರ್ ಒತ್ತಡದಿಂದ ಬಂಗಾಳದಲ್ಲಿ ಇದುವರೆಗೂ 150 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದರು.
- Sushma Chakre
- Updated on: Feb 4, 2026
- 5:11 pm
ಭಾರತದ ಕಾನೂನು ಅನುಸರಿಸಲು ಆಗಲ್ಲವೆಂದರೆ ಇಲ್ಲಿಂದ ನಿರ್ಗಮಿಸಿ: ವಾಟ್ಸಾಪ್ ವಿರುದ್ಧ ಸುಪ್ರೀಂ ಎಚ್ಚರಿಕೆ
Supreme Court asks WhatsApp and Meta to exit India if they can't obey Indian laws: ಬಳಕೆದಾರರ ದತ್ತಾಂಶವನ್ನು ಕಮರ್ಷಿಯಲ್ ಆಗಿ ಬಳಸುತ್ತಿರುವ ಆರೋಪ ಎದುರಿಸುತ್ತಿರುವ ವಾಟ್ಸಾಪ್ ಮೇಲೆ ಸುಪ್ರೀಂಕೋರ್ಟ್ ಹರಿಹಾಯ್ದಿದೆ. ಭಾರತೀಯರ ಪ್ರೈವೆಸಿ ಜೊತೆ ಚೆಲ್ಲಾಟ ಬೇಡ. ಸ್ವಲ್ಪವೂ ಡಾಟಾ ಪಡೆಯಲು ನಿಮಗೆ ಅನುಮತಿಸಲ್ಲ ಎಂದು ಎಚ್ಚರಿಕೆ ನೀಡಿದೆ. ಭಾರತೀಯ ಕಾನೂನುಗಳಿಗೆ ಬದ್ಧವಿರಲು ಆಗಲ್ಲ ಎಂದರೆ ಇಲ್ಲಿಂದ ನಿರ್ಗಮಿಸಿ ಎಂದು ವಾಟ್ಸಾಪ್ಗೆ ಸಿಜೆಐ ಸೂರ್ಯಕಾಂತ್ ವಾರ್ನಿಂಗ್ ನೀಡಿದ್ದಾರೆ.
- Vijaya Sarathy SN
- Updated on: Feb 3, 2026
- 1:31 pm
ಪಾಕಿಸ್ತಾನದಿಂದ ವಲಸೆ ಬಂದ ದಲಿತ ಹಿಂದೂಗಳಿಗೆ ವಸತಿ ಕಲ್ಪಿಸಿ; ಸುಪ್ರೀಂ ಕೋರ್ಟ್ ಆದೇಶ
ಪಾಕಿಸ್ತಾನ ಮೂಲದ ದಲಿತ ಹಿಂದೂಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು. ಅವರನ್ನು ಗಡಿಪಾರು ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಮೂಲಕ ದೆಹಲಿಯಲ್ಲಿ ಪಾಕ್ ವಲಸಿಗರ ತೆರವು ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಪಾಕಿಸ್ತಾನದಿಂದ ಭಾರತಕ್ಕೆ ವಲಸೆ ಬಂದ ದಲಿತ ಹಿಂದೂಗಳಿಗೆ ಪೌರತ್ವ ನೀಡುವುದು ಮಾತ್ರವಲ್ಲದೆ ಅವರಿಗೆ ಗೌರವಯುತವಾಗಿ ಬದುಕಲು ಅವಕಾಶ ಹಾಗೂ ಸೌಲಭ್ಯ ಕಲ್ಪಿಸಬೇಕು ಎಂದು ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ.
- Sushma Chakre
- Updated on: Feb 2, 2026
- 3:11 pm
ಪೆನ್ನಾರ್ ನದಿ ನೀರು ಹಂಚಿಕೆ ವಿವಾದ: ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕಕ್ಕೆ ಹಿನ್ನಡೆ
ಕರ್ನಾಟಕ-ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಪೆನ್ನಾರ್ ಜಲ ವಿವಾದ ಇತ್ಯರ್ಥಕ್ಕೆ ಒಂದು ತಿಂಗಳೊಳಗೆ ನ್ಯಾಯಾಧೀಕರಣ ರಚಿಸುವಂತೆ ಕೇಂದ್ರಕ್ಕೆ ಸೂಚಿಸಿದೆ. ಕರ್ನಾಟಕದ ಮಾತುಕತೆ ವಾದವನ್ನು ತಿರಸ್ಕರಿಸಿ, ತಮಿಳುನಾಡಿನ ನ್ಯಾಯಾಧಿಕರಣ ರಚನೆ ಬೇಡಿಕೆಯನ್ನು ಪುರಸ್ಕರಿಸಲಾಗಿದೆ.
- Harish GR
- Updated on: Feb 2, 2026
- 1:45 pm