AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Supreme Court

Supreme Court

ನವದೆಹಲಿಯಲ್ಲಿ ನೆಲೆಗೊಂಡಿರುವ ಭಾರತದ ಸರ್ವೋಚ್ಚ ನ್ಯಾಯಾಲಯವು ದೇಶದ ಅತ್ಯುನ್ನತ ನ್ಯಾಯಾಂಗ ವ್ಯವಸ್ಥೆಯಾಗಿದೆ. ಇದನ್ನು ಜನವರಿ 28, 1950 ರಂದು ಸ್ಥಾಪಿಸಲಾಯಿತು, ಇದು ಮೇಲ್ಮನವಿಯ ಅಂತಿಮ ನ್ಯಾಯಾಲಯವಾಗಿ ಮತ್ತು ಸಂವಿಧಾನದ ಖಾತರಿಗಾರನಾಗಿ ಕಾರ್ಯನಿರ್ವಹಿಸುತ್ತದೆ. ನ್ಯಾಯಾಲಯವು ಭಾರತದ ಮುಖ್ಯ ನ್ಯಾಯಾಧೀಶರ ನೇತೃತ್ವದಲ್ಲಿದೆ ಮತ್ತು ಗರಿಷ್ಠ 34 ನ್ಯಾಯಾಧೀಶರನ್ನು ಒಳಗೊಂಡಿದೆ. ಸಂವಿಧಾನವನ್ನು ವ್ಯಾಖ್ಯಾನಿಸುವಲ್ಲಿ, ನ್ಯಾಯಾಂಗ ಪರಿಶೀಲನೆಯನ್ನು ಖಾತ್ರಿಪಡಿಸುವಲ್ಲಿ ಮತ್ತು ಮೂಲಭೂತ ಹಕ್ಕುಗಳನ್ನು ರಕ್ಷಿಸುವಲ್ಲಿ ಸುಪ್ರೀಂ ಕೋರ್ಟ್ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇದು ಮೇಲ್ಮನವಿಗಳು, ರಿಟ್ ಅರ್ಜಿಗಳು ಮತ್ತು ವಿಶೇಷ ರಜೆ ಅರ್ಜಿಗಳನ್ನು ಆಲಿಸುತ್ತದೆ. ಅದರ ನಿರ್ಧಾರಗಳು ದೇಶದ ಇತರ ಎಲ್ಲಾ ನ್ಯಾಯಾಲಯಗಳಿಗೆ ಬದ್ಧವಾಗಿರುತ್ತವೆ. ನ್ಯಾಯಾಲಯವು ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ನಡುವಿನ ಅಥವಾ ರಾಜ್ಯಗಳ ನಡುವಿನ ವಿವಾದಗಳನ್ನು ಸಹ ನಿರ್ಣಯಿಸುತ್ತದೆ.ಸುಪ್ರೀಂ ಕೋರ್ಟ್ ನ್ಯಾಯದ ಸ್ತಂಭವಾಗಿ ನಿಂತಿದ್ದು, ಕಾನೂನಿನ ನಿಯಮವನ್ನು ಎತ್ತಿಹಿಡಿಯುತ್ತದೆ ಮತ್ತು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಪ್ರಜಾಪ್ರಭುತ್ವದ ತತ್ವಗಳನ್ನು ರಕ್ಷಿಸುತ್ತದೆ.

ಇನ್ನೂ ಹೆಚ್ಚು ಓದಿ

ನೀಟ್ ಪ್ರತಿಭಟನೆ ವೇಳೆ ಪೋಲಿಸ್ ದೌರ್ಜನ್ಯದ ತನಿಖೆ; ಉನ್ನತ ಮಟ್ಟದ ವಿಚಾರಣಾ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್

ದೆಹಲಿಯ ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಪೋಲೀಸರು ಮತ್ತು ಭದ್ರತಾ ಪಡೆಗಳು ನಡೆಸಿದ ದೌರ್ಜನ್ಯದ ಕುರಿತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಇಂದು ಉನ್ನತ ಮಟ್ಟದ ವಿಚಾರಣಾ ಸಮಿತಿಯನ್ನು ರಚಿಸಿದೆ. ಪ್ರತಿಭಟನಾಕಾರರ ವಿರುದ್ಧ ಅತಿಯಾದ ಬಲಪ್ರಯೋಗ ಮಾಡಲಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಸ್ವತಂತ್ರ ಹಾಗೂ ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ಸರ್ವೋಚ್ಚ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಜುಲೈ 20ರಂದು ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು.

ತ್ರಿಭಾಷಾ ಸೂತ್ರ ಮರುಪರಿಶೀಲನೆಗೆ ಸಿಬಿಎಸ್‌ಇಗೆ ಸುಪ್ರೀಂ ಕೋರ್ಟ್ ಸೂಚನೆ; 6ನೇ ತರಗತಿ ವಿದ್ಯಾರ್ಥಿಗಳಿಗೆ ವಿನಾಯಿತಿಗೆ ಸಲಹೆ

ಕೇಂದ್ರ ಪ್ರೌಢಶಿಕ್ಷಣ ಮಂಡಳಿಯ (CBSE) ತ್ರಿಭಾಷಾ ನೀತಿಯನ್ನು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಇಂದು ಸೂಚನೆ ನೀಡಿದ್ದು, 6ನೇ ತರಗತಿ ವಿದ್ಯಾರ್ಥಿಗಳಿಗೆ ಈ ನಿಯಮದಿಂದ ವಿನಾಯಿತಿ ನೀಡುವ ಸಾಧ್ಯತೆಗಳ ಕುರಿತು ಪರಿಶೀಲನೆ ನಡೆಸಿದೆ. ಇದೇ ವೇಳೆ, ಇಂಗ್ಲಿಷ್ ಭಾಷೆಯನ್ನು "ಸ್ಥಳೀಯವಲ್ಲದ ಅಥವಾ ಅನ್ಯ ಭಾಷೆ" ಎಂದು ಪರಿಗಣಿಸುವ ಸಿಬಿಎಸ್‌ಇಯ ಧೋರಣೆಗೆ ನ್ಯಾಯಾಲಯವು ತನ್ನ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದೆ. 6ನೇ ತರಗತಿಯಿಂದ ಮೂರನೇ ಭಾಷೆಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳುವ ಪ್ರಕ್ರಿಯೆಯಲ್ಲಿರುವ ಪ್ರಮುಖ ಲೋಪಗಳನ್ನು ಸಂಸದೀಯ ಸಮಿತಿಯೊಂದು ಇತ್ತೀಚೆಗೆ ಹೈಲೈಟ್ ಮಾಡಿತ್ತು.

‘ಕಾಲಾ ಹಿರಣ್’ ವಿವಾದ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ

ಸಲ್ಮಾನ್ ಖಾನ್ ಅವರ ಕೃಷ್ಣಮೃಗ ಬೇಟೆ ಪ್ರಕರಣವನ್ನು ಆಧಾರವಾಗಿಟ್ಟುಕೊಂಡು ‘ಕಾಲಾ ಹಿರಣ್’ ಸಿನಿಮಾ ನಿರ್ಮಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಈ ವಿವಾದ ತೀವ್ರಗೊಂಡಿದೆ. ಈ ಚಿತ್ರದ ಟೀಸರ್ ಡಿಲೀಟ್ ಮಾಡಬೇಕು ಎಂದು ದೆಹಲಿ ಹೈಕೋರ್ಟ್ ಆದೇಶ ನೀಡಿತ್ತು. ಅದನ್ನು ಪ್ರಶ್ನಿಸಿ ನಿರ್ಮಾಪಕರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.

ಪೊಲೀಸರಿಂದ ಸೋಷಿಯಲ್ ಮೀಡಿಯಾದಲ್ಲಿ ಆರೋಪಿಗಳ ಫೋಟೋ ಪ್ರಕಟಣೆ; X, ಮೆಟಾ, ಕೇಂದ್ರಕ್ಕೆ ಸುಪ್ರೀಂಕೋರ್ಟ್ ನೋಟೀಸ್

Supreme Court On Social Media Guidelines for Police: ಪೊಲೀಸರು ಆರೋಪಿಗಳ ಫೋಟೋ ಬಹಿರಂಗಪಡಿಸುವ ಸಂಬಂಧ ಸಾಮಾಜಿಕ ಜಾಲತಾಣಗಳು ಹಾಗೂ ಸರ್ಕಾರಕ್ಕೆ ಸರ್ವೋಚ್ಚ ನ್ಯಾಯಾಲಯ ನೋಟೀಸ್ ನೀಡಿದೆ. ಪೊಲೀಸ್ ಇಲಾಖೆಗಳು ಸೋಷಿಯಲ್ ಮೀಡಿಯಾದಲ್ಲಿ ಆರೋಪಿಗಳ ಫೋಟೋ ಮತ್ತು ವಿಡಿಯೋ ಹಂಚಿಕೊಳ್ಳುವುದನ್ನು ನಿಲ್ಲಿಸಲು ನಿರ್ದೇಶಿಸಬೇಕೆಂದು ಕೋರಿ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು.

ಸಿಜೆಪಿ ಪ್ರತಿಭಟನೆ ವೇಳೆ ಸಂಘರ್ಷ ಪ್ರಕರಣ: ತನಿಖೆಗಾಗಿ ಉನ್ನತ ಸಮಿತಿ ರಚನೆಗೆ ಸುಪ್ರೀಂ ಕೋರ್ಟ್ ನಿರ್ಧಾರ

ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆದ ಪರೀಕ್ಷಾ ಹಗರಣಗಳ ವಿರುದ್ಧದ ಪ್ರತಿಭಟನೆ ಹಾಗೂ ಪೊಲೀಸ್ ಸಂಘರ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಲು ಸುಪ್ರೀಂಕೋರ್ಟ್​​ ನಿರ್ಧರಿಸಿದೆ. ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹಾಗೂ ಮಾಜಿ ಸಿಬಿಐ ನಿರ್ದೇಶಕರನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿ ರಚಿಸಲು ತೀರ್ಮಾನಿಸಲಾಗಿದ್ದು, ಅಂತಿಮ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

ಮರಣದಂಡನೆ ಶಿಕ್ಷೆ ಜಾರಿ ಹೇಗೆ ಇರಲಿ? ಇಂಜೆಕ್ಷನ್, ಶೂಟ್, ಗ್ಯಾಸ್ ವಿಧಾನ ಬೇಡ, ಗಲ್ಲಿಗೇರಿಸುವ ಪದ್ಧತಿಯೇ ಇರಲಿ ಎಂದ ಸುಪ್ರೀಂ

Supreme Court wants hanging to be continued for death sentence execution: ಭಾರತದಲ್ಲಿ ಮರಣದಂಡನೆ ಜಾರಿಗೊಳಿಸುವ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಗಲ್ಲಿಗೇರಿಸುವ ಪದ್ಧತಿಗಿಂತ ಕಡಿಮೆ ನೋವು ತರುವ ಇತರ ಪರ್ಯಾಯ ವಿಧಾನಗಳಿಂದ ಮರಣದಂಡನೆ ಜಾರಿಗೊಳಿಸಿ ಎನ್ನುವ ಮನವಿಯನ್ನು ಕೋರ್ಟ್ ತಳ್ಳಿಹಾಕಿದೆ. ಸರಿಯಾದ ವೈಜ್ಞಾನಿಕ ಆಧಾರ ಸಿಗುವವರೆಗೂ ಸದ್ಯಕ್ಕೆ ಮರಣದಂಡನೆ ಪದ್ಧತಿಯೇ ಮುಂದುವರಿಯಲಿ ಎಂದು ಸರ್ವೋಚ್ಚ ನ್ಯಾಯಾಲಯ ತೀರ್ಮಾನಿಸಿದೆ.

ರಾಹುಲ್ ವಿರುದ್ಧ ಅಕ್ರಮ ಆಸ್ತಿ ಪ್ರಕರಣ: ವಿಚಾರಣೆ ಸದ್ಯಕ್ಕೆ ನಿಲ್ಲಿಸುವಂತೆ ಅಲಹಾಬಾದ್ ಹೈಕೋರ್ಟ್​ಗೆ ಸುಪ್ರೀಂ ನಿರ್ದೇಶನ

If case is so serious, why probe agencies are silent, asks Supreme Court on Rahul Gandhi assets case: ರಾಹುಲ್ ಗಾಂಧಿ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ತನಿಖಾ ಸಂಸ್ಥೆಗಳಾದ ಸಿಬಿಐ, ಇಡಿ ಅನ್ನು ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ರಾಹುಲ್ ವಿರುದ್ಧ ವಿಚಾರಣೆ ನಿಲ್ಲಿಸುವಂತೆ ಅಲಹಾಬಾದ್ ಹೈಕೋರ್ಟ್​ಗೆ ನಿರ್ದೇಶನ ನೀಡಿದೆ.

ಕಾವೇರಿ ವಿವಾದ: ಕರ್ನಾಟಕಕ್ಕೆ ಬಿಗ್ ಶಾಕ್, ತಮಿಳುನಾಡಿಗೆ ನೀರು ಹರಿಸುವ CWMA ಸೂಚನೆ ಪಾಲಿಸಲು ಸುಪ್ರೀಂ ಆದೇಶ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶವನ್ನು ಪಾಲಿಸುವಂತೆ ಕರ್ನಾಟಕಕ್ಕೆ ಸೂಚಿಸಿದೆ. ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನೀಡಲಾಗಿದ್ದ ನಿರ್ದೇಶನವನ್ನು ನ್ಯಾಯಾಲಯ ಎತ್ತಿಹಿಡಿದಿದೆ.

‘ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ’; ಕಾಕ್ರೋಚ್ ವಿವಾದಕ್ಕೆ ಸಿಜೆಐ ಸೂರ್ಯಕಾಂತ್ ಬೇಸರ

ಸೂಕ್ತ ಸಂದರ್ಭ ಮತ್ತು ಹಿನ್ನೆಲೆಯಿಲ್ಲದೆ ನ್ಯಾಯಾಲಯದ ಕಲಾಪಗಳ ವೀಡಿಯೊ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ದೇಶದ ಯುವಜನರನ್ನು ಹಾದಿತಪ್ಪಿಸುವ ದುರುದ್ದೇಶದಿಂದ ತಮ್ಮ ಹೇಳಿಕೆಗಳನ್ನು "ತಪ್ಪಾಗಿ ಬಿಂಬಿಸಲಾಗಿದೆ" ಮತ್ತು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಕೋರ್ಟ್ ವಿಚಾರಣೆಯ ವೇಳೆ ಸಿಜೆಐ ಸೂರ್ಯಕಾಂತ್ ನಿರುದ್ಯೋಗಿಗಳನ್ನು ಕಾಕ್ರೋಚ್​ (ಜಿರಳೆ) ಎಂದು ಕರೆದಿದ್ದಾರೆಂದು ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಯಾಗಿತ್ತು.

ಘಟಿಕೋತ್ಸವಕ್ಕೆ ಸಿಜೆಐ ಆಹ್ವಾನಿಸಬೇಡಿ ಎಂದಿದ್ದ ನಲ್ಸಾರ್ ವಿದ್ಯಾರ್ಥಿಗಳ ಈ ವರ್ಷದ ನೋಂದಣಿ ತಡೆಹಿಡಿದ ಬಾರ್ ಕೌನ್ಸಿಲ್!

ಹೈದರಾಬಾದ್‌ನ ಪ್ರತಿಷ್ಠಿತ NALSAR ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರನ್ನು ಆಹ್ವಾನಿಸುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಬೆನ್ನಲ್ಲೇ, 2026ರಲ್ಲಿ ಈ ಸಂಸ್ಥೆಯಿಂದ ಪದವಿ ಪಡೆಯುವ ಯಾವುದೇ ವಿದ್ಯಾರ್ಥಿಯನ್ನು ಮುಂದಿನ ಆದೇಶದವರೆಗೆ ವಕೀಲರನ್ನಾಗಿ ನೋಂದಾಯಿಸಿಕೊಳ್ಳದಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ಎಲ್ಲಾ ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಮುಂಬರುವ ಘಟಿಕೋತ್ಸವಕ್ಕೆ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸುವ ವಿಶ್ವವಿದ್ಯಾಲಯದ ಪ್ರಸ್ತಾವನೆಗೆ ಪದವಿ ಪಡೆಯಲಿರುವ ವಿದ್ಯಾರ್ಥಿಗಳ ಒಂದು ಗುಂಪು ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕಾವೇರಿ ವಿವಾದ: ಸುಪ್ರೀಂ ಕೋರ್ಟ್​​ಗೆ ತಮಿಳುನಾಡು ಅರ್ಜಿ ಸಂಬಂಧ ಕರ್ನಾಟಕದಿಂದ ಪ್ರತ್ಯುತ್ತರ ಸಲ್ಲಿಕೆ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ಸಂಬಂಧ Cauvery Dispute: ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಸುದೀರ್ಘ ಪ್ರತ್ಯುತ್ತರ ಸಲ್ಲಿಕೆ ಮಾಡಿದೆ. ರಾಜ್ಯದಲ್ಲಿ 'ಎಲ್ ನಿನೋ' ಪರಿಣಾಮದಿಂದಾಗಿ ಭೀಕರ ಮಳೆ ಕೊರತೆ ಎದುರಾಗಿದ್ದರೂ ಸಿಡಬ್ಲ್ಯೂಎಂಎ (CWMA) ಶಿಫಾರಸಿಗಿಂತ ಹೆಚ್ಚಿನ ನೀರನ್ನು ತಮಿಳುನಾಡಿಗೆ ಹರಿಸಲಾಗಿದೆ ಎಂದು ಕರ್ನಾಟಕ ಸ್ಪಷ್ಟಪಡಿಸಿದೆ.

‘ಜಿರಳೆ’ ಹೇಳಿಕೆ ವಾಣಿಜ್ಯ ದುರುಪಯೋಗ ಸಂಬಂಧ ಪಿಐಎಲ್​​: ಕೇಂದ್ರ ಸರ್ಕಾರ, CBIಗೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರ ‘ಜಿರಳೆ’ ಮೌಖಿಕ ಹೇಳಿಕೆಯನ್ನು ಉದ್ದೇಶಪೂರ್ವಕವಾಗಿ ಎಡಿಟ್ ಮಾಡಿ ವಾಣಿಜ್ಯ ಹಾಗೂ ಸೋಶಿಯಲ್ ಮೀಡಿಯಾ ಲಾಭಕ್ಕಾಗಿ ದುರುಪಯೋಗಪಡಿಸಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ಸಿಬಿಐಗೆ ನೋಟಿಸ್ ಜಾರಿಗೊಳಿಸಿದೆ.