T20 World Cup

T20 World Cup

ಮೊದಲ ಬಾರಿಗೆ ಐಸಿಸಿ ವಿಶ್ವ ಟ್ವೆಂಟಿ-20 ಪಂದ್ಯಾವಳಿಯನ್ನು ಎರಡು ವರ್ಷಗಳಿಗೊಮ್ಮೆ ನಡೆಸಲು ನಿರ್ಧರಿಸಲಾಯಿತು. ಅದೇ ವರ್ಷ ಕ್ರಿಕೆಟ್ ವಿಶ್ವಕಪ್ ನಡೆದರೆ ಬದಲಾವಣೆಯಾಗಲಿದೆ. 2007ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಮೊದಲ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿತ್ತು. ನಂತರ 21 ಜೂನ್ 2009 ರಂದು ಇಂಗ್ಲೆಂಡ್‌ನಲ್ಲಿ ಪಾಕಿಸ್ತಾನವು ಶ್ರೀಲಂಕಾವನ್ನು 8 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಎರಡನೇ ಪಂದ್ಯಾವಳಿಯನ್ನು ಗೆದ್ದುಕೊಂಡಿತು. 2010ರ ICC ವಿಶ್ವ ಟ್ವೆಂಟಿ20 ಪಂದ್ಯಾವಳಿಯು ಮೇ 2010ರಲ್ಲಿ ವೆಸ್ಟ್ ಇಂಡೀಸ್‌ನಲ್ಲಿ ನಡೆಯಿತು. ಆಸ್ಟ್ರೇಲಿಯವನ್ನು ಇಂಗ್ಲೆಂಡ್ 7 ವಿಕೆಟ್‌ಗಳಿಂದ ಸೋಲಿಸಿತು. ಶ್ರೀಲಂಕಾವನ್ನು ಸೋಲಿಸುವ ಮೂಲಕ ವೆಸ್ಟ್ ಇಂಡೀಸ್ 2012 ರ ಐಸಿಸಿ ವಿಶ್ವ ಟ್ವೆಂಟಿ 20 ಫೈನಲ್ ಅನ್ನು ಗೆದ್ದುಕೊಂಡಿತು. ಐಸಿಸಿ ವಿಶ್ವ ಟ್ವೆಂಟಿ-20 ಫೈನಲ್‌ನಲ್ಲಿ ಆತಿಥೇಯ ರಾಷ್ಟ್ರ ಭಾಗವಹಿಸಿದ್ದು ಇದೇ ಮೊದಲು. 2012ರ ಐಸಿಸಿ ವಿಶ್ವ ಟ್ವೆಂಟಿ20 ಕ್ವಾಲಿಫೈಯರ್‌ನಲ್ಲಿ ಐರ್ಲೆಂಡ್ ಮತ್ತು ಅಫ್ಘಾನಿಸ್ತಾನ ಸೇರಿದಂತೆ 12 ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸಿದ್ದವು. ಏಷ್ಯಾದ ರಾಷ್ಟ್ರವೊಂದರಲ್ಲಿ ಟಿ20 ವಿಶ್ವಕಪ್ ಟೂರ್ನಿ ನಡೆಯುತ್ತಿರುವುದು ಇದೇ ಮೊದಲು. ಜುಲೈ 2020 ರಲ್ಲಿ, ಕರೋನಾ ಸಾಂಕ್ರಾಮಿಕ ರೋಗದಿಂದಾಗಿ ICC 2020 ಮತ್ತು 2021 ರ ಆವೃತ್ತಿಗಳನ್ನು ತಲಾ ಒಂದು ವರ್ಷ ಮುಂದೂಡುವುದಾಗಿ ಘೋಷಿಸಿತು. ಆದ್ದರಿಂದ, 2020 ರ ಪಂದ್ಯಾವಳಿಯನ್ನು (ಮೂಲತಃ ಆಸ್ಟ್ರೇಲಿಯಾವು ಆಯೋಜಿಸುತ್ತದೆ) ನವೆಂಬರ್ 2021 ಕ್ಕೆ ಸ್ಥಳಾಂತರಿಸಲಾಯಿತು. ಅಲ್ಲದೆ, 2021 ರ ಪಂದ್ಯಾವಳಿಯನ್ನು (ಮೂಲತಃ ಭಾರತವು ಆಯೋಜಿಸಿತ್ತು) ಅಕ್ಟೋಬರ್ 2022 ಕ್ಕೆ ಸ್ಥಳಾಂತರಿಸಲಾಗಿದೆ. ಆದರೆ ಹಿಮ್ಮುಖ ಕ್ರಮದಲ್ಲಿ ಭಾರತವು 2021 ರಲ್ಲಿ ಮತ್ತು ಆಸ್ಟ್ರೇಲಿಯಾ 2022 ರಲ್ಲಿ ಆತಿಥ್ಯ ವಹಿಸಲಿದೆ. ಜೂನ್ 2021 ರಲ್ಲಿ, 2024, 2026, 2028 ಮತ್ತು 2030 ರಲ್ಲಿ ನಡೆಯಲಿರುವ T20 ವಿಶ್ವಕಪ್ ಪಂದ್ಯಾವಳಿಯನ್ನು 20 ತಂಡಗಳನ್ನು ಸೇರಿಸಲು ವಿಸ್ತರಿಸಲಾಗುವುದು ಎಂದು ICC ಘೋಷಿಸಿತು. ಈ ಮಾದರಿಯಲ್ಲಿ 20 ತಂಡಗಳನ್ನು 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೂಪರ್ 8 ಗೆ ಮುನ್ನಡೆಯುತ್ತವೆ. ಅದರ ನಂತರ ಅವುಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಮುನ್ನಡೆಯುತ್ತವೆ.

2024 ರ ಟಿ20 ವಿಶ್ವಕಪ್ ಅನ್ನು ವೆಸ್ಟ್ ಇಂಡೀಸ್ ಮತ್ತು ಯುಎಸ್ಎ ಆಯೋಜಿಸುತ್ತದೆ. ಇದೇ ಮೊದಲ ಬಾರಿಗೆ ಯುಎಸ್ ಐಸಿಸಿ ಪಂದ್ಯಾವಳಿಯನ್ನು ಆಯೋಜಿಸಿದೆ. 2026ರ ಟೂರ್ನಿಯನ್ನು ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿವೆ. 2028ರ ಆವೃತ್ತಿಯು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನಲ್ಲಿ ನಡೆಯಲಿದ್ದು, 2030ರ ಟೂರ್ನಿ ಇಂಗ್ಲೆಂಡ್, ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್‌ನಲ್ಲಿ ನಡೆಯಲಿದೆ.

ಇನ್ನೂ ಹೆಚ್ಚು ಓದಿ

IND vs ENG: ಭಾರತ vs ಇಂಗ್ಲೆಂಡ್: ಯಾರು ಬಲಿಷ್ಠ?

T20 World Cup 2024: ಟಿ20 ವಿಶ್ವಕಪ್​ನ ಸೆಮಿಫೈನಲ್​ನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಎರಡನೇ ಬಾರಿ ಮುಖಾಮುಖಿಯಾಗುತ್ತಿದೆ. 2022 ರಲ್ಲಿ ಉಭಯ ತಂಡಗಳು ಸೆಮಿಫೈನಲ್​ನಲ್ಲಿ ಮುಖಾಮುಖಿಯಾಗಿದ್ದವು. ಈ ವೇಳೆ ಟೀಮ್ ಇಂಡಿಯಾ ವಿರುದ್ಧ ಜಯ ಸಾಧಿಸಿ ಇಂಗ್ಲೆಂಡ್ ಫೈನಲ್​ಗೆ ಪ್ರವೇಶಿಸಿತ್ತು. ಇದೀಗ ಟೀಮ್ ಇಂಡಿಯಾ ಎರಡು ವರ್ಷಗಳ ಹಳೆಯ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕಲ್ಲಿದೆ.

T20 World Cup 2024: ಭಾರತ ತಂಡ ಮೋಸದಿಂದ ಗೆದ್ದಿದೆ: ಪಾಕ್ ಮಾಜಿ ನಾಯಕನ ಗಂಭೀರ ಆರೋಪ

T20 World Cup 2024: ಜೂನ್ 24 ರಂದು ನಡೆದ ಟಿ20 ವಿಶ್ವಕಪ್​ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 205 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡ 181 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 24 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಇದೀಗ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಮೋಸದಾಟವಾಡಿದೆ ಎಂದು ಪಾಕ್ ಕ್ರಿಕೆಟಿಗ ಆರೋಪಿಸಿದ್ದಾರೆ.

ಕ್ರಿಕೆಟ್ ದಿಗ್ಗಜನಿಗೆ ಕೊಟ್ಟ ಮಾತು ಉಳಿಸಿದ ಅಫ್ಘಾನ್ ಪಡೆ

T20 World Cup 2024: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು ಬಗ್ಗು ಬಡಿದು ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್​ಗೆ ಪ್ರವೇಶಿಸಿದೆ. ಜೂನ್ 26 ರಂದು ಟ್ರಿನಿಡಾಡ್- ಟೊಬಾಗೊದ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡ ಸೌತ್ ಆಫ್ರಿಕಾವನ್ನು ಎದುರಿಸಲಿದೆ.

IND vs ENG: ಇಂಗ್ಲೆಂಡ್ ತಂಡದ ಚಿಂತೆ ಹೆಚ್ಚಿಸಿದ 4 ಗಂಟೆ 16 ನಿಮಿಷಗಳು..!

T20 World Cup 2024: ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಪಂದ್ಯಕ್ಕೆ ಮೀಸಲು ದಿನ ನಿಗದಿ ಮಾಡಲಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಜೂನ್ 29 ರಂದು ಫೈನಲ್ ಪಂದ್ಯ ನಡೆಯುತ್ತಿರುವುದು. ಅಂದರೆ ಜೂನ್ 27 ರಂದು ನಡೆಯುವ ಸೆಮಿಫೈನಲ್ ಪಂದ್ಯಕ್ಕೆ ಮೀಸಲು ದಿನ ನಿಗದಿ ಮಾಡಿದರೆ, ಜೂನ್ 28 ರಂದು ಆಡಬೇಕಾಗುತ್ತದೆ. ಇದರಿಂದ 2ನೇ ಸೆಮಿಫೈನಲ್ ಆಡುವ ತಂಡ 24 ಗಂಟೆಯೊಳಗೆ, ಅಂದರೆ ಜೂನ್ 29 ರಂದು ಫೈನಲ್​ಗೂ ಸಜ್ಜಾಗಬೇಕಾಗುತ್ತದೆ. ಹೀಗಾಗಿ ದ್ವಿತೀಯ ಸೆಮಿಫೈನಲ್ ಪಂದ್ಯಕ್ಕೆ ಮೀಸಲು ದಿನದ ಬದಲು ಹೆಚ್ಚುವರಿ 250 ನಿಮಿಷಗಳನ್ನು ನೀಡಲಾಗಿದೆ.

VIDEO: ಬಣ್ಣದೋಕುಳಿ, ರಸ್ತೆಗಳು ಬಂದ್… ಕುಣಿದು ಕುಪ್ಪಳಿಸಿದ ಅಫ್ಘಾನಿಸ್ತಾನ್ ಅಭಿಮಾನಿಗಳು

T20 World Cup 2024: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯದಲ್ಲಿ ಭಾರತ, ಅಫ್ಘಾನಿಸ್ತಾನ್, ಇಂಗ್ಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಕಣಕ್ಕಿಳಿಯಲಿದೆ. ಇಲ್ಲಿ ಅಫ್ಘಾನಿಸ್ತಾನ್ ತಂಡಕ್ಕೆ ಸೌತ್ ಆಫ್ರಿಕಾ ಎದುರಾಳಿಯಾದರೆ, ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಗಳಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸಲಿದೆ.

ಬಾಂಬೈ ಸೆ ಆಯಾ ಮೇರಾ ದೋಸ್ತ್: ರೋಹಿತ್ ಶರ್ಮಾ ಕೊಡುಗೆ ನೆನೆದ ರಶೀದ್ ಖಾನ್

T20 World Cup 2024: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ರೋಚಕ ಜಯ ಸಾಧಿಸಿ ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್​ಗೆ ಪ್ರವೇಶಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ 20 ಓವರ್​ಗಳಲ್ಲಿ 115 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡ 105 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಅಫ್ಘಾನ್ ಪಡೆ ಚೊಚ್ಚಲ ಬಾರಿಗೆ ವಿಶ್ವಕಪ್​ನ ಸೆಮಿಫೈನಲ್ ಹಂತಕ್ಕೇರಿದೆ.

T20 World Cup 2024: ಟಿ20 ವಿಶ್ವಕಪ್ ಸೆಮಿಫೈನಲ್ ವೇಳಾಪಟ್ಟಿ

T20 World Cup 2024: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿದಿದ್ದವು. ಆಸ್ಟ್ರೇಲಿಯಾ, ಪಾಕಿಸ್ತಾನ್, ಬಾಂಗ್ಲಾದೇಶ್, ಕೆನಡಾ, ಐರ್ಲೆಂಡ್, ನಮೀಬಿಯಾ, ನೇಪಾಳ, ನೆದರ್​ಲೆಂಡ್ಸ್, ನ್ಯೂಝಿಲೆಂಡ್, ಒಮಾನ್, ಪಪುವಾ ನ್ಯೂ ಗಿನಿಯಾ, ಸ್ಕಾಟ್ಲೆಂಡ್, ಶ್ರೀಲಂಕಾ, ಉಗಾಂಡ, ಯುಎಸ್​ಎ, ವೆಸ್ಟ್ ಇಂಡೀಸ್​ ನಡುವಣ ಕದನದಲ್ಲಿ ಇದೀಗ ಭಾರತ, ಅಫ್ಘಾನಿಸ್ತಾನ್, ಸೌತ್ ಆಫ್ರಿಕಾ ಮತ್ತು ಇಂಗ್ಲೆಂಡ್ ತಂಡಗಳು ಮಾತ್ರ ಉಳಿದಿವೆ.

Australia: ಆಸ್ಟ್ರೇಲಿಯಾ ತಂಡದ ವಿಶ್ವ ದಾಖಲೆಯ ಕನಸು ಚೂರು ಚೂರು..!

T20 World Cup 2024: ಕ್ರಿಕೆಟ್ ಇತಿಹಾಸದಲ್ಲಿ ಯಾವುದೇ ತಂಡ ಮೂರು ಸ್ವರೂಪಗಳಲ್ಲೂ ಏಕ ಕಾಲಕ್ಕೆ ಚಾಂಪಿಯನ್ ಪಟ್ಟ ಅಲಂಕರಿಸಿಲ್ಲ. ಅಂದರೆ ಟೆಸ್ಟ್, ಏಕದಿನ ಮತ್ತು ಟಿ20 ವಿಶ್ವಕಪ್​ನಲ್ಲಿ ಬ್ಯಾಕ್ ಟು ಬ್ಯಾಕ್ ವಿಶ್ವ ಚಾಂಪಿಯನ್ ಪಟ್ಟಕ್ಕೇರಿಲ್ಲ. ಅಂತಹದೊಂದು ವಿಶೇಷ ಸಾಧನೆ ಮಾಡುವ ಅವಕಾಶ ಆಸ್ಟ್ರೇಲಿಯಾ ತಂಡದ ಮುಂದಿತ್ತು. ಆದರೀಗ ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಸೇರಿ ಈ ಕನಸನ್ನು ನುಚ್ಚು ನೂರು ಮಾಡಿದೆ.

IND vs ENG: ಭಾರತ ಇಂಗ್ಲೆಂಡ್ ಸೆಮಿಫೈನಲ್​ಗೆ ಮಳೆ ಭೀತಿ; ಪಂದ್ಯ ರದ್ದಾದರೆ ಫೈನಲ್​ಗೆ ಯಾರು? ಮೀಸಲು ದಿನ ಇದೆಯೇ? ಇಲ್ಲಿದೆ ಉತ್ತರ

IND vs ENG T20 World Cup Semi Final; ಟಿ20 ವಿಶ್ವಕಪ್​​ನಲ್ಲಿ ಭಾರತ ಹಾಗೂ ಇಂಗ್ಲೆಂಡ್ ಮಧ್ಯೆ ಸೆಮಿಫೈನಲ್ ಹಣಾಹಣಿಗೆ ವೇದಿಕೆ ಸಿದ್ಧವಾಗಿದೆ. ಜೂನ್ 27 ರಂದು ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಕಳೆದ ಬಾರಿಯ ವಿಶ್ವಕಪ್ ಸೆಮಿಫೈನಲ್ ಸೋಲಿನ ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಸಿದ್ಧವಾಗಿದೆ. ಮತ್ತೊಂದೆಡೆ ಪಂದ್ಯಕ್ಕೆ ಮಳೆ ಭೀತಿಯೂ ಎದುರಾಗಿದೆ. ಒಂದು ವೇಳೆ ಮಳೆಯಿಂದ ಪಂದ್ಯಕ್ಕೆ ಅಡ್ಡಿಯಾದರೆ ಏನೆಲ್ಲ ಸಾಧ್ಯತೆಗಳಿವೆ ಎಂಬ ವಿವರ ಇಲ್ಲಿದೆ.

AFG vs BAN: ವಿಶ್ವಕಪ್ ರೇಸ್​ನಿಂದ ಬಾಂಗ್ಲಾದೇಶ, ಆಸ್ಟ್ರೇಲಿಯಾ ಔಟ್; ಸೆಮಿಫೈನಲ್ ಪ್ರವೇಶಿಸಿದ ಅಫ್ಘಾನಿಸ್ತಾನ

AFG vs BAN T20 World Cup 2024: ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ಅಫ್ಘಾನಿಸ್ತಾನ ಟಿ20 ವಿಶ್ವಕಪ್ ಸೆಮಿಫೈನಲ್‌ಗೆ ಟಿಕೆಟ್ ಖಚಿತಪಡಿಸಿಕೊಂಡಿದೆ. ಅಫ್ಘಾನಿಸ್ತಾನ ತಂಡ ವಿಶ್ವಕಪ್ ಸೆಮಿಫೈನಲ್ ತಲುಪಿದ್ದು ಇದೇ ಮೊದಲು. ಇದರೊಂದಿಗೆ 2024ರ ಟಿ20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ತಂಡ ಹೊರಬಿದ್ದಿದೆ.

‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..