T20 World Cup
ಮೊದಲ ಬಾರಿಗೆ ಐಸಿಸಿ ವಿಶ್ವ ಟ್ವೆಂಟಿ-20 ಪಂದ್ಯಾವಳಿಯನ್ನು ಎರಡು ವರ್ಷಗಳಿಗೊಮ್ಮೆ ನಡೆಸಲು ನಿರ್ಧರಿಸಲಾಯಿತು. ಅದೇ ವರ್ಷ ಕ್ರಿಕೆಟ್ ವಿಶ್ವಕಪ್ ನಡೆದರೆ ಬದಲಾವಣೆಯಾಗಲಿದೆ. 2007ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಮೊದಲ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿತ್ತು. ನಂತರ 21 ಜೂನ್ 2009 ರಂದು ಇಂಗ್ಲೆಂಡ್ನಲ್ಲಿ ಪಾಕಿಸ್ತಾನವು ಶ್ರೀಲಂಕಾವನ್ನು 8 ವಿಕೆಟ್ಗಳಿಂದ ಸೋಲಿಸುವ ಮೂಲಕ ಎರಡನೇ ಪಂದ್ಯಾವಳಿಯನ್ನು ಗೆದ್ದುಕೊಂಡಿತು. 2010ರ ICC ವಿಶ್ವ ಟ್ವೆಂಟಿ20 ಪಂದ್ಯಾವಳಿಯು ಮೇ 2010ರಲ್ಲಿ ವೆಸ್ಟ್ ಇಂಡೀಸ್ನಲ್ಲಿ ನಡೆಯಿತು. ಆಸ್ಟ್ರೇಲಿಯವನ್ನು ಇಂಗ್ಲೆಂಡ್ 7 ವಿಕೆಟ್ಗಳಿಂದ ಸೋಲಿಸಿತು. ಶ್ರೀಲಂಕಾವನ್ನು ಸೋಲಿಸುವ ಮೂಲಕ ವೆಸ್ಟ್ ಇಂಡೀಸ್ 2012 ರ ಐಸಿಸಿ ವಿಶ್ವ ಟ್ವೆಂಟಿ 20 ಫೈನಲ್ ಅನ್ನು ಗೆದ್ದುಕೊಂಡಿತು. ಐಸಿಸಿ ವಿಶ್ವ ಟ್ವೆಂಟಿ-20 ಫೈನಲ್ನಲ್ಲಿ ಆತಿಥೇಯ ರಾಷ್ಟ್ರ ಭಾಗವಹಿಸಿದ್ದು ಇದೇ ಮೊದಲು. 2012ರ ಐಸಿಸಿ ವಿಶ್ವ ಟ್ವೆಂಟಿ20 ಕ್ವಾಲಿಫೈಯರ್ನಲ್ಲಿ ಐರ್ಲೆಂಡ್ ಮತ್ತು ಅಫ್ಘಾನಿಸ್ತಾನ ಸೇರಿದಂತೆ 12 ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸಿದ್ದವು. ಏಷ್ಯಾದ ರಾಷ್ಟ್ರವೊಂದರಲ್ಲಿ ಟಿ20 ವಿಶ್ವಕಪ್ ಟೂರ್ನಿ ನಡೆಯುತ್ತಿರುವುದು ಇದೇ ಮೊದಲು. ಜುಲೈ 2020 ರಲ್ಲಿ, ಕರೋನಾ ಸಾಂಕ್ರಾಮಿಕ ರೋಗದಿಂದಾಗಿ ICC 2020 ಮತ್ತು 2021 ರ ಆವೃತ್ತಿಗಳನ್ನು ತಲಾ ಒಂದು ವರ್ಷ ಮುಂದೂಡುವುದಾಗಿ ಘೋಷಿಸಿತು. ಆದ್ದರಿಂದ, 2020 ರ ಪಂದ್ಯಾವಳಿಯನ್ನು (ಮೂಲತಃ ಆಸ್ಟ್ರೇಲಿಯಾವು ಆಯೋಜಿಸುತ್ತದೆ) ನವೆಂಬರ್ 2021 ಕ್ಕೆ ಸ್ಥಳಾಂತರಿಸಲಾಯಿತು. ಅಲ್ಲದೆ, 2021 ರ ಪಂದ್ಯಾವಳಿಯನ್ನು (ಮೂಲತಃ ಭಾರತವು ಆಯೋಜಿಸಿತ್ತು) ಅಕ್ಟೋಬರ್ 2022 ಕ್ಕೆ ಸ್ಥಳಾಂತರಿಸಲಾಗಿದೆ. ಆದರೆ ಹಿಮ್ಮುಖ ಕ್ರಮದಲ್ಲಿ ಭಾರತವು 2021 ರಲ್ಲಿ ಮತ್ತು ಆಸ್ಟ್ರೇಲಿಯಾ 2022 ರಲ್ಲಿ ಆತಿಥ್ಯ ವಹಿಸಲಿದೆ. ಜೂನ್ 2021 ರಲ್ಲಿ, 2024, 2026, 2028 ಮತ್ತು 2030 ರಲ್ಲಿ ನಡೆಯಲಿರುವ T20 ವಿಶ್ವಕಪ್ ಪಂದ್ಯಾವಳಿಯನ್ನು 20 ತಂಡಗಳನ್ನು ಸೇರಿಸಲು ವಿಸ್ತರಿಸಲಾಗುವುದು ಎಂದು ICC ಘೋಷಿಸಿತು. ಈ ಮಾದರಿಯಲ್ಲಿ 20 ತಂಡಗಳನ್ನು 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೂಪರ್ 8 ಗೆ ಮುನ್ನಡೆಯುತ್ತವೆ. ಅದರ ನಂತರ ಅವುಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್ಗೆ ಮುನ್ನಡೆಯುತ್ತವೆ.
2024 ರ ಟಿ20 ವಿಶ್ವಕಪ್ ಅನ್ನು ವೆಸ್ಟ್ ಇಂಡೀಸ್ ಮತ್ತು ಯುಎಸ್ಎ ಆಯೋಜಿಸುತ್ತದೆ. ಇದೇ ಮೊದಲ ಬಾರಿಗೆ ಯುಎಸ್ ಐಸಿಸಿ ಪಂದ್ಯಾವಳಿಯನ್ನು ಆಯೋಜಿಸಿದೆ. 2026ರ ಟೂರ್ನಿಯನ್ನು ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿವೆ. 2028ರ ಆವೃತ್ತಿಯು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ನಲ್ಲಿ ನಡೆಯಲಿದ್ದು, 2030ರ ಟೂರ್ನಿ ಇಂಗ್ಲೆಂಡ್, ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ನಲ್ಲಿ ನಡೆಯಲಿದೆ.
ಸಂಜು ಸ್ಯಾಮ್ಸನ್ ಫೋಟೋ ಎಡಿಟ್ ಮಾಡಿ ಹಂಚಿಕೊಂಡ್ರಾ ಗಿಲ್: ಇಲ್ಲಿದೆ ನಿಜಾಂಶ
T20 World Cup 2026: ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಝಿಲೆಂಡ್ ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಈ ಪಂದ್ಯದ ಬಳಿಕ ನಡೆದ ಸಂಭ್ರಮಾಚರಣೆಯ ಫೋಟೋವನ್ನು ಶುಭ್ಮನ್ ಗಿಲ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಆದರೆ ಈ ಫೋಟೋದಲ್ಲಿ ಸಂಜು ಸ್ಯಾಮ್ಸನ್ ಇರಲಿಲ್ಲ.
- Zahir Yusuf
- Updated on: Mar 14, 2026
- 12:54 pm
ಭಾರತವನ್ನು ಹೊರಹಾಕಬಹುದಿತ್ತು, ಸೌತ್ ಆಫ್ರಿಕನ್ನರು ದಡ್ಡರು..!
T20 World Cup 2026: ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿದಿದ್ದವು. ಈ ಇಪ್ಪತ್ತು ತಂಡಗಳಲ್ಲಿ ಫೈನಲ್ಗೇರಿದ್ದು ಭಾರತ ಮತ್ತು ನ್ಯೂಝಿಲೆಂಡ್. ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು 96 ರನ್ಗಳಿಂದ ಸೋಲಿಸಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿತು.
- Zahir Yusuf
- Updated on: Mar 14, 2026
- 8:12 am
ಮುಂಬೈನಲ್ಲಿ ಐಷರಾಮಿ ಫ್ಲಾಟ್ ಖರೀದಿಸಿದ ಶಿವಂ ದುಬೆ..! ಬೆಲೆ ಎಷ್ಟು ಕೋಟಿ ಗೊತ್ತಾ?
Shivam Dube Mumbai flat: ಟಿ20 ವಿಶ್ವಕಪ್ ಗೆಲುವಿನ ನಂತರ ಟೀಂ ಇಂಡಿಯಾ ಸ್ಟಾರ್ ಶಿವಂ ದುಬೆ ಸದ್ದು ಮಾಡಿದ್ದಾರೆ. ಮುಂಬೈನಲ್ಲಿ ₹27.50 ಕೋಟಿ ಮೌಲ್ಯದ ಎರಡು ಐಷಾರಾಮಿ ಫ್ಲಾಟ್ಗಳನ್ನು ಖರೀದಿಸಿ ಅವರು ಸುದ್ದಿಯಲ್ಲಿದ್ದಾರೆ. ಬಿಸಿಸಿಐ ಒಪ್ಪಂದ, T20 ಪಂದ್ಯಗಳ ಶುಲ್ಕ ಮತ್ತು ಐಪಿಎಲ್ ಮೂಲಕ ದುಬೆಯ ಆದಾಯದ ಮೂಲಗಳನ್ನು ಲೇಖನವು ವಿವರಿಸುತ್ತದೆ. ವಿಶ್ವಕಪ್ನಲ್ಲಿ ಅವರ ಅದ್ಭುತ ಪ್ರದರ್ಶನವನ್ನು ಸಹ ಇಲ್ಲಿ ಚರ್ಚಿಸಲಾಗಿದೆ.
- pruthvi Shankar
- Updated on: Mar 13, 2026
- 8:11 pm
T20 World Cup 2026: ಜಾಹೀರಾತಿನಿಂದಲೇ 1500 ಕೋಟಿ ರೂ. ಆದಾಯ..!
T20 World Cup 2026: 2026ರ ಟಿ20 ವಿಶ್ವಕಪ್ನಲ್ಲಿ ಭಾರತ ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಟೂರ್ನಿಯಿಂದ ಐಸಿಸಿಗೆ ಜಾಹೀರಾತು ಪ್ರಸಾರದಿಂದಲೇ ಬರೋಬ್ಬರಿ 1500 ಕೋಟಿ ರೂ.ಗೂ ಅಧಿಕ ಆದಾಯ ಹರಿದುಬಂದಿದೆ. ಭಾರತ-ಪಾಕ್ ಪಂದ್ಯ, ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳು ಈ ಆದಾಯದ ಬಹುಪಾಲು ಗಳಿಕೆಗೆ ಪ್ರಮುಖ ಕಾರಣವಾಗಿವೆ. ಪ್ರಾಯೋಜಕರ ಭಾರಿ ಹೂಡಿಕೆ ಐಸಿಸಿಯ ಖಜಾನೆಯನ್ನು ತುಂಬಿಸಿದೆ.
- pruthvi Shankar
- Updated on: Mar 13, 2026
- 7:06 pm
ಸಂಜು ಸ್ಯಾಮ್ಸನ್ಗಿಂತಲೂ ಈತ ಟೂರ್ನಮೆಂಟ್ ಆಟಗಾರ ಪ್ರಶಸ್ತಿಗೆ ಅರ್ಹ ಎಂದ ಡಿವಿಲಿಯರ್ಸ್
T20 World Cup 2026: 2026ರ ಟಿ20 ವಿಶ್ವಕಪ್ನಲ್ಲಿ ಭಾರತ ಚಾಂಪಿಯನ್ ಪಟ್ಟಕ್ಕೇರಿತು. ಸಂಜು ಸ್ಯಾಮ್ಸನ್ ಪಂದ್ಯಾವಳಿಯ ಆಟಗಾರ ಪ್ರಶಸ್ತಿ ಗೆದ್ದರು. ಆದರೆ, ಜಸ್ಪ್ರೀತ್ ಬುಮ್ರಾ ಅವರ ನಿರ್ಣಾಯಕ ಪ್ರದರ್ಶನವನ್ನು ಶ್ಲಾಘಿಸಿದ ಎಬಿ ಡಿವಿಲಿಯರ್ಸ್, ಆ ಪ್ರಶಸ್ತಿಯನ್ನು ಬುಮ್ರಾಗೆ ನೀಡಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ಬುಮ್ರಾ ಫೈನಲ್ನಲ್ಲಿ ಉತ್ತಮ ಪ್ರದರ್ಶನ ನೀಡಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಈ ಕುರಿತು ಕ್ರಿಕೆಟ್ ವಲಯದಲ್ಲಿ ಚರ್ಚೆ ಆರಂಭವಾಗಿದೆ.
- pruthvi Shankar
- Updated on: Mar 12, 2026
- 7:36 pm
ತಪ್ಪು ನನ್ನದೇ.. ಟಿ20 ವಿಶ್ವಕಪ್ ಗೆದ್ದು ಅಕ್ಷರ್ ಪಟೇಲ್ ಬಳಿ ಕ್ಷಮೆಯಾಚಿಸಿದ ಸೂರ್ಯ
Suryakumar Yadav Apologizes to Axar Patel: ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದಲ್ಲಿ, ನಾಯಕ ಸೂರ್ಯಕುಮಾರ್ ಯಾದವ್ ಉಪನಾಯಕ ಅಕ್ಷರ್ ಪಟೇಲ್ ಅವರನ್ನು ಸೂಪರ್-8 ಪಂದ್ಯದಲ್ಲಿ ಕೈಬಿಟ್ಟಿದ್ದಕ್ಕೆ ಕ್ಷಮೆಯಾಚಿಸಿದ್ದಾರೆ. ತಂಡದ ಸೋಲಿಗೆ ಕಾರಣವಾದ ಆ ನಿರ್ಧಾರ ತಪ್ಪಾಗಿತ್ತು ಎಂದು ಸೂರ್ಯ ಒಪ್ಪಿಕೊಂಡಿದ್ದಾರೆ. ಅಕ್ಷರ್ ತಮ್ಮ ವೃತ್ತಿಪರ ಪ್ರತಿಕ್ರಿಯೆ ನೀಡಿದ್ದು, ನಾಯಕನ ಪ್ರಾಮಾಣಿಕತೆ ಮೆಚ್ಚುಗೆಗೆ ಪಾತ್ರವಾಗಿದೆ.
- pruthvi Shankar
- Updated on: Mar 12, 2026
- 6:44 pm
ಹಾರ್ದಿಕ್ ಪಾಂಡ್ಯ ವಿರುದ್ಧ ದೂರು ದಾಖಲು: 3 ವರ್ಷಗಳ ಜೈಲು ಶಿಕ್ಷೆ ಭೀತಿ
Hardik Pandya: ಟಿ20 ವಿಶ್ವಕಪ್ ಗೆದ್ದ ಬಳಿಕ ಟೀಮ್ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಸಂಭ್ರಮಾಚರಣೆಯೊಂದಿಗೆ ಮೈಮರೆತಿದ್ದರು. ಇದೀಗ ಈ ಮೈಮರೆಯುವಿಕೆಯಿಂದಾಗಿ ಟೀಮ್ ಇಂಡಿಯಾ ಆಟಗಾರ ಇಕ್ಕಟ್ಟಿಗೆ ಸಿಲುಕಿದ್ದಾರೆ. ಅಂದರೆ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ ಹಿನ್ನಲೆ ಪಾಂಡ್ಯ ವಿರುದ್ಧ ದೂರು ದಾಖಲಾಗಿದೆ.
- Zahir Yusuf
- Updated on: Mar 12, 2026
- 12:36 pm
ICC T20I Rankings: ಐಸಿಸಿ ಟಿ20 ಬ್ಯಾಟರ್ಗಳ ರ್ಯಾಂಕಿಂಗ್ ಪ್ರಕಟ
ICC T20I Rankings: ಟಿ20 ಕ್ರಿಕೆಟ್ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಬ್ಯಾಟರ್ಗಳ ನೂತನ ರ್ಯಾಂಕಿಂಗ್ ಪಟ್ಟಿ ಪ್ರಕಟವಾಗಿದೆ. ಈ ಬಾರಿ ಕೂಡ ಅಭಿಷೇಕ್ ಶರ್ಮಾ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇದಾಗ್ಯೂ ಅವರಿಗೆ ಪೈಪೋಟಿ ನೀಡಲು ಇಶಾನ್ ಕಿಶನ್ ಎಂಟ್ರಿ ಕೊಟ್ಟಿದ್ದಾರೆ. ಅದರಂತೆ ನೂತನ ಶ್ರೇಯಾಂಕ ಪಟ್ಟಿಯಲ್ಲಿರುವ 10 ಬ್ಯಾಟರ್ಗಳ ಪಟ್ಟಿ ಈ ಕೆಳಗಿನಂತಿದೆ...
- Zahir Yusuf
- Updated on: Mar 12, 2026
- 9:26 am
ಅವರೇನಾ ಇವರು? ವಿಶ್ವಕಪ್ ಗೆದ್ದ ಬೆನ್ನಲ್ಲೇ ರೈಲು ಹತ್ತಿ ಬಂದ ಶಿವಂ ದುಬೆ!
T20 World Cup 2026 Final: ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19 ಓವರ್ಗಳಲ್ಲಿ 159 ರನ್ ಬಾರಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 96 ರನ್ಗಳ ಅಮೋಘ ಗೆಲುವು ದಾಖಲಿಸಿದೆ.
- Zahir Yusuf
- Updated on: Mar 12, 2026
- 8:55 am
ಯಾರೂ ಸಹ ನನಗೆ ಕರೆ ಮಾಡಿಲ್ಲ… ಗೌತಮ್ ಗಂಭೀರ್ ಬೇಸರ
Gautam Gambhir: ಗೌತಮ್ ಗಂಭೀರ್ ಟೀಮ್ ಇಂಡಿಯಾದ ಮುಖ್ಯ ಕೋಚ್ ಆದ ಬಳಿಕ ಭಾರತ ತಂಡವು ಏಕದಿನ ಹಾಗೂ ಟಿ20 ಕ್ರಿಕೆಟ್ನಲ್ಲಿ ಭರ್ಜರಿ ಪ್ರದರ್ಶನ ನೀಡಿದೆ. ಇದಾಗ್ಯೂ ಟೆಸ್ಟ್ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾದ ಪ್ರದರ್ಶನ ಅಷ್ಟಕ್ಕಷ್ಟೇ. ಅದರಲ್ಲೂ ಭಾರತ ತಂಡವು ಗಂಭೀರ್ ಗರಡಿಯಲ್ಲಿ ನ್ಯೂಝಿಲೆಂಡ್ ಹಾಗೂ ಸೌತ್ ಆಫ್ರಿಕಾ ವಿರುದ್ಧ ಸರಣಿ ಸೋತು ಭಾರೀ ಮುಖಭಂಗಕ್ಕೆ ಒಳಗಾಗಿತ್ತು. ಇದೀಗ ಇವೆಲ್ಲವನ್ನೂ ಮರೆಮಾಚುವಂತೆ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆದ್ದುಕೊಂಡಿದೆ.
- Zahir Yusuf
- Updated on: Mar 11, 2026
- 3:09 pm
ಭಾರತ ತಂಡ ಸೂರ್ಯಕುಮಾರ್, ಜಯ್ ಶಾ ಅವರ ಕುಟುಂಬ ಸ್ವತ್ತಲ್ಲ!
T20 World Cup 2026 Final: ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19 ಓವರ್ಗಳಲ್ಲಿ 159 ರನ್ ಬಾರಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 96 ರನ್ಗಳ ಅಮೋಘ ಗೆಲುವು ದಾಖಲಿಸಿದೆ.
- Zahir Yusuf
- Updated on: Mar 11, 2026
- 12:10 pm
ಹೊಸ ಗರ್ಲ್ ಫ್ರೆಂಡ್ ಎಂಟ್ರಿ… ಜೀವಕ್ಕೆ ಜೀವದಂತಿದ್ದ ಅಣ್ಣನೇ ದೂರ..!
Hardik Pandya vs Krunal Pandya: ಪಾಂಡ್ಯ ಸಹೋದರರು ಮೊದಲಿನಿಂದಲೂ ಅತ್ಯಂತ ಆತ್ಮೀಯರಾಗಿದ್ದವರು. ಆದರೆ ಈಗ ಹಾರ್ದಿಕ್ ಅವರ ವೈಯಕ್ತಿಕ ಜೀವನದ ಬದಲಾವಣೆಗಳು ಅವರ ನಡುವಿನ ಅಂತರಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ಅಂದರೆ ಹಾರ್ದಿಕ್ ಪಾಂಡ್ಯ ಸ್ವಂತ ಅಣ್ಣ ಕೃನಾಲ್ ಪಾಂಡ್ಯರಿಂದ ಅಂತರ ಕಾಯ್ದುಕೊಂಡಿದ್ದಾರೆ ಎಂದು ವರದಿಯಾಗಿದೆ.
- Zahir Yusuf
- Updated on: Mar 11, 2026
- 8:53 am