T20 World Cup
ಮೊದಲ ಬಾರಿಗೆ ಐಸಿಸಿ ವಿಶ್ವ ಟ್ವೆಂಟಿ-20 ಪಂದ್ಯಾವಳಿಯನ್ನು ಎರಡು ವರ್ಷಗಳಿಗೊಮ್ಮೆ ನಡೆಸಲು ನಿರ್ಧರಿಸಲಾಯಿತು. ಅದೇ ವರ್ಷ ಕ್ರಿಕೆಟ್ ವಿಶ್ವಕಪ್ ನಡೆದರೆ ಬದಲಾವಣೆಯಾಗಲಿದೆ. 2007ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಮೊದಲ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿತ್ತು. ನಂತರ 21 ಜೂನ್ 2009 ರಂದು ಇಂಗ್ಲೆಂಡ್ನಲ್ಲಿ ಪಾಕಿಸ್ತಾನವು ಶ್ರೀಲಂಕಾವನ್ನು 8 ವಿಕೆಟ್ಗಳಿಂದ ಸೋಲಿಸುವ ಮೂಲಕ ಎರಡನೇ ಪಂದ್ಯಾವಳಿಯನ್ನು ಗೆದ್ದುಕೊಂಡಿತು. 2010ರ ICC ವಿಶ್ವ ಟ್ವೆಂಟಿ20 ಪಂದ್ಯಾವಳಿಯು ಮೇ 2010ರಲ್ಲಿ ವೆಸ್ಟ್ ಇಂಡೀಸ್ನಲ್ಲಿ ನಡೆಯಿತು. ಆಸ್ಟ್ರೇಲಿಯವನ್ನು ಇಂಗ್ಲೆಂಡ್ 7 ವಿಕೆಟ್ಗಳಿಂದ ಸೋಲಿಸಿತು. ಶ್ರೀಲಂಕಾವನ್ನು ಸೋಲಿಸುವ ಮೂಲಕ ವೆಸ್ಟ್ ಇಂಡೀಸ್ 2012 ರ ಐಸಿಸಿ ವಿಶ್ವ ಟ್ವೆಂಟಿ 20 ಫೈನಲ್ ಅನ್ನು ಗೆದ್ದುಕೊಂಡಿತು. ಐಸಿಸಿ ವಿಶ್ವ ಟ್ವೆಂಟಿ-20 ಫೈನಲ್ನಲ್ಲಿ ಆತಿಥೇಯ ರಾಷ್ಟ್ರ ಭಾಗವಹಿಸಿದ್ದು ಇದೇ ಮೊದಲು. 2012ರ ಐಸಿಸಿ ವಿಶ್ವ ಟ್ವೆಂಟಿ20 ಕ್ವಾಲಿಫೈಯರ್ನಲ್ಲಿ ಐರ್ಲೆಂಡ್ ಮತ್ತು ಅಫ್ಘಾನಿಸ್ತಾನ ಸೇರಿದಂತೆ 12 ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸಿದ್ದವು. ಏಷ್ಯಾದ ರಾಷ್ಟ್ರವೊಂದರಲ್ಲಿ ಟಿ20 ವಿಶ್ವಕಪ್ ಟೂರ್ನಿ ನಡೆಯುತ್ತಿರುವುದು ಇದೇ ಮೊದಲು. ಜುಲೈ 2020 ರಲ್ಲಿ, ಕರೋನಾ ಸಾಂಕ್ರಾಮಿಕ ರೋಗದಿಂದಾಗಿ ICC 2020 ಮತ್ತು 2021 ರ ಆವೃತ್ತಿಗಳನ್ನು ತಲಾ ಒಂದು ವರ್ಷ ಮುಂದೂಡುವುದಾಗಿ ಘೋಷಿಸಿತು. ಆದ್ದರಿಂದ, 2020 ರ ಪಂದ್ಯಾವಳಿಯನ್ನು (ಮೂಲತಃ ಆಸ್ಟ್ರೇಲಿಯಾವು ಆಯೋಜಿಸುತ್ತದೆ) ನವೆಂಬರ್ 2021 ಕ್ಕೆ ಸ್ಥಳಾಂತರಿಸಲಾಯಿತು. ಅಲ್ಲದೆ, 2021 ರ ಪಂದ್ಯಾವಳಿಯನ್ನು (ಮೂಲತಃ ಭಾರತವು ಆಯೋಜಿಸಿತ್ತು) ಅಕ್ಟೋಬರ್ 2022 ಕ್ಕೆ ಸ್ಥಳಾಂತರಿಸಲಾಗಿದೆ. ಆದರೆ ಹಿಮ್ಮುಖ ಕ್ರಮದಲ್ಲಿ ಭಾರತವು 2021 ರಲ್ಲಿ ಮತ್ತು ಆಸ್ಟ್ರೇಲಿಯಾ 2022 ರಲ್ಲಿ ಆತಿಥ್ಯ ವಹಿಸಲಿದೆ. ಜೂನ್ 2021 ರಲ್ಲಿ, 2024, 2026, 2028 ಮತ್ತು 2030 ರಲ್ಲಿ ನಡೆಯಲಿರುವ T20 ವಿಶ್ವಕಪ್ ಪಂದ್ಯಾವಳಿಯನ್ನು 20 ತಂಡಗಳನ್ನು ಸೇರಿಸಲು ವಿಸ್ತರಿಸಲಾಗುವುದು ಎಂದು ICC ಘೋಷಿಸಿತು. ಈ ಮಾದರಿಯಲ್ಲಿ 20 ತಂಡಗಳನ್ನು 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೂಪರ್ 8 ಗೆ ಮುನ್ನಡೆಯುತ್ತವೆ. ಅದರ ನಂತರ ಅವುಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್ಗೆ ಮುನ್ನಡೆಯುತ್ತವೆ.
2024 ರ ಟಿ20 ವಿಶ್ವಕಪ್ ಅನ್ನು ವೆಸ್ಟ್ ಇಂಡೀಸ್ ಮತ್ತು ಯುಎಸ್ಎ ಆಯೋಜಿಸುತ್ತದೆ. ಇದೇ ಮೊದಲ ಬಾರಿಗೆ ಯುಎಸ್ ಐಸಿಸಿ ಪಂದ್ಯಾವಳಿಯನ್ನು ಆಯೋಜಿಸಿದೆ. 2026ರ ಟೂರ್ನಿಯನ್ನು ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿವೆ. 2028ರ ಆವೃತ್ತಿಯು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ನಲ್ಲಿ ನಡೆಯಲಿದ್ದು, 2030ರ ಟೂರ್ನಿ ಇಂಗ್ಲೆಂಡ್, ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ನಲ್ಲಿ ನಡೆಯಲಿದೆ.
IND vs NZ: ಟಿ20 ಸರಣಿ ಮೊದಲ 3 ಪಂದ್ಯಗಳಿಂದ ತಿಲಕ್ ವರ್ಮಾ ಔಟ್; ಉಳಿದೆರಡು ಪಂದ್ಯಗಳಿಗೂ ಅನುಮಾನ!
Tilak Varma Out of NZ T20 Series: ಭಾರತ ಮತ್ತು ನ್ಯೂಜಿಲೆಂಡ್ ಟಿ20 ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ. ಯುವ ಬ್ಯಾಟ್ಸ್ಮನ್ ತಿಲಕ್ ವರ್ಮಾ ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿ, ಅವರು ನ್ಯೂಜಿಲೆಂಡ್ ವಿರುದ್ಧದ ಮೊದಲ ಮೂರು T20 ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಅವರ ಚೇತರಿಕೆ ವಿಳಂಬವಾಗಿದ್ದು, ಮುಂಬರುವ T20 ವಿಶ್ವಕಪ್ನಲ್ಲಿಯೂ ಆಡುವ ಅವಕಾಶ ಅನುಮಾನವಾಗಿದೆ. ಶ್ರೇಯಸ್ ಅಯ್ಯರ್ಗೆ ಅವಕಾಶ ಸಿಗುವ ಸಾಧ್ಯತೆ ಇದೆ.
- pruthvi Shankar
- Updated on: Jan 8, 2026
- 9:23 pm
T20 World Cup 2026: ಟಿ20 ವಿಶ್ವಕಪ್ನಿಂದ ಬಾಂಗ್ಲಾ ಹಿಂದೆ ಸರಿದರೆ ಯಾವ ತಂಡಕ್ಕೆ ಅವಕಾಶ?
T20 World Cup 2026: 2026ರ ಟಿ20 ವಿಶ್ವಕಪ್ಗೂ ಮುನ್ನವೇ ಬಾಂಗ್ಲಾದೇಶ ಕ್ರಿಕೆಟ್ ತಂಡದ ವಿವಾದ ಭುಗಿಲೆದ್ದಿದೆ. ಭಾರತದಲ್ಲಿ ಆಡಲು ನಿರಾಕರಿಸಿದ ಬಾಂಗ್ಲಾದೇಶ, ತನ್ನೆಲ್ಲಾ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವಂತೆ ಐಸಿಸಿಯನ್ನು ಕೋರಿದೆ. ಆದರೆ, ಐಸಿಸಿ ಹಾಗೂ ಬಿಸಿಸಿಐ ಈ ಬೇಡಿಕೆಯನ್ನು ತಿರಸ್ಕರಿಸಿವೆ. ಒಂದು ವೇಳೆ ಬಾಂಗ್ಲಾದೇಶ ಸ್ಪರ್ಧೆಯಿಂದ ಹೊರಗುಳಿದರೆ, ಸ್ಕಾಟ್ಲೆಂಡ್ಗೆ ಆಡುವ ಅವಕಾಶ ಸಿಗುವ ಸಾಧ್ಯತೆ ಇದೆ.
- pruthvi Shankar
- Updated on: Jan 8, 2026
- 8:53 pm
ಖುಲಾಯಿಸಲಿದೆಯಾ ಅದೃಷ್ಟ… ಟಿ20 ವಿಶ್ವಕಪ್ಗೆ ಶ್ರೇಯಸ್ ಅಯ್ಯರ್ ಆಯ್ಕೆ ಸಾಧ್ಯತೆ
T20 World Cup 2026 India Squad : ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್ಗಳಾಗಿ ವಿಂಗಡಿಸಲಾಗಿದೆ. ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಭಾರತ ತಂಡದಿಂದ ಯುವ ಆಟಗಾರನೊರ್ವ ಹೊರಗುಳಿಯುವ ಸಾಧ್ಯತೆಯಿದೆ.
- Zahir Yusuf
- Updated on: Jan 8, 2026
- 2:29 pm
ಭಾರತ ನಮ್ಮನ್ನು ಅವಮಾನಿಸಿದೆ… ನಾವು ಶ್ರೀಲಂಕಾದಲ್ಲಿ ಆಡ್ತೀವಿ..!
T20 World Cup 2026: ಬಾಂಗ್ಲಾದೇಶ ತಂಡವು ಮುಂಬರುವ ಟಿ20 ವಿಶ್ವಕಪ್ನ ಮೊದಲ ಸುತ್ತಿನಲ್ಲಿ ಒಟ್ಟು 4 ಪಂದ್ಯಗಳನ್ನಾಡಲಿದೆ. ಮೊದಲ ಮೂರು ಪಂದ್ಯಗಳು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಿಗದಿಯಾದರೆ, ಕೊನೆಯ ಪಂದ್ಯವನ್ನು ಮುಂಬೈನಲ್ಲಿ ಆಡಬೇಕಿದೆ. ಆದರೀಗ ಆಟಗಾರರ ಸುರಕ್ಷತೆಯ ದೃಷ್ಟಿಯಿಂದ ಪಂದ್ಯವನ್ನು ಶ್ರೀಲಂಕಾಗೆ ಸ್ಥಳಾಂತರಿಸುವಂತೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ಗೆ ಐಸಿಸಿಗೆ ಮನವಿ ಮಾಡಿದೆ.
- Zahir Yusuf
- Updated on: Jan 8, 2026
- 1:12 pm
‘ನಮ್ಮ ಬ್ಯಾಟ್ ಬಳಸಬೇಡಿ’; ಬಾಂಗ್ಲಾ ಆಟಗಾರರೊಂದಿಗಿನ ಒಪ್ಪಂದ ಮುರಿದ ಭಾರತೀಯ ಬ್ಯಾಟ್ ಕಂಪನಿ
BCCI vs BCB Dispute: ಭಾರತ-ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗಳ ಭಿನ್ನಾಭಿಪ್ರಾಯ ತೀವ್ರಗೊಂಡಿದೆ. ಬಾಂಗ್ಲಾದೇಶದಲ್ಲಿ ಐಪಿಎಲ್ ಪ್ರಸಾರ ನಿಷೇಧದ ನಂತರ, ಎಸ್ಜಿ ಬ್ಯಾಟ್ ಕಂಪನಿ ಬಾಂಗ್ಲಾದೇಶ ಆಟಗಾರರೊಂದಿಗಿನ ಪ್ರಾಯೋಜಕತ್ವ ರದ್ದುಗೊಳಿಸಿದೆ. ಮುಸ್ತಾಫಿಜುರ್ ಅವರನ್ನು ಐಪಿಎಲ್ನಿಂದ ಹೊರಗಿಟ್ಟಿದ್ದರಿಂದ ಹುಟ್ಟಿಕೊಂಡ ಈ ವಿವಾದ, ಟಿ20 ವಿಶ್ವಕಪ್ ಸ್ಥಳಾಂತರದ ಬಾಂಗ್ಲಾದೇಶದ ಬೇಡಿಕೆಯನ್ನು ಐಸಿಸಿ ತಿರಸ್ಕರಿಸುವುದರೊಂದಿಗೆ ಹೊಸ ತಿರುವು ಪಡೆದಿದೆ.
- pruthvi Shankar
- Updated on: Jan 7, 2026
- 4:03 pm
ಟಿ20 ವಿಶ್ವಕಪ್ಗೆ 10 ತಂಡಗಳು ಪ್ರಕಟ
T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್ಗಳಾಗಿ ವಿಂಗಡಿಸಲಾಗಿದ್ದು, ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಟೀಮ್ ಇಂಡಿಯಾ ಮೊದಲ ಸುತ್ತಿನಲ್ಲಿ ಯುಎಸ್ಎ, ನಮೀಬಿಯಾ, ಪಾಕಿಸ್ತಾನ್ ಮತ್ತು ನೆದರ್ಲೆಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ.
- Zahir Yusuf
- Updated on: Jan 7, 2026
- 2:45 pm
ಬೇಕಿದ್ರೆ ಆಡಿ, ಇಲ್ಲಾಂದ್ರೆ ಹೊರ ನಡೀರಿ… ಬಾಂಗ್ಲಾಗೆ ಖಡಕ್ ಸೂಚನೆ!
ಬಾಂಗ್ಲಾದೇಶ್ ತಂಡದ ವೇಗದ ಬೌಲರ್ ಮುಸ್ತಫಿಝುರ್ ರೆಹಮಾನ್ ಅವರನ್ನು ಐಪಿಎಲ್ನಿಂದ ಕೈ ಬಿಡಲಾಗಿದೆ. ಕೆಕೆಆರ್ ತಂಡಕ್ಕೆ ಆಯ್ಕೆಯಾಗಿದ್ದ ಆಟಗಾರನನ್ನು ಬಿಸಿಸಿಐ ಸೂಚನೆ ಮೇರೆಗೆ ತಂಡದಿಂದ ರಿಲೀಸ್ ಮಾಡಲಾಗಿದೆ. ಇದಕ್ಕೆ ಮುಖ್ಯ ಕಾರಣ ಬಾಂಗ್ಲಾದೇಶ್ನಲ್ಲಿ ಹಿಂದೂಗಳ ಮೇಲಿನ ನಡೆಯುತ್ತಿರುವ ದೌರ್ಜನ್ಯ. ಅತ್ತ ಬಾಂಗ್ಲಾದಲ್ಲಿ ಹಿಂದೂಗಳ ಹತ್ಯೆ ನಡೆಯುತ್ತಿದೆ. ಹೀಗಾಗಿ ಕೆಕೆಆರ್ ಪರ ಮುಸ್ತಫಿಝುರ್ ರೆಹಮಾನ್ ಅವರನ್ನು ಕಣಕ್ಕಿಳಿಯಲು ಬಿಡುವುದಿಲ್ಲ ಎಂದು ಕೆಲ ಸಂಘಟನೆಗಳು ಘೋಷಿಸಿದ್ದವು. ಹೀಗಾಗಿ ಐಪಿಎಲ್ನಿಂದ ಬಾಂಗ್ಲಾ ವೇಗಿಯನ್ನು ಕೈ ಬಿಡುವಂತೆ ಬಿಸಿಸಿಐ ಸೂಚಿಸಿತ್ತು.
- Zahir Yusuf
- Updated on: Jan 7, 2026
- 12:35 pm
T20 World Cup 2026: ವಿವಿಐಪಿ ಭದ್ರತೆ ನೀಡಿದರೂ ಭಾರತದಲ್ಲಿ ಆಡಲ್ಲ ಎಂದ ಬಾಂಗ್ಲಾ
T20 World Cup 2026: 2026ರ ಟಿ20 ವಿಶ್ವಕಪ್ಗೆ ಒಂದು ತಿಂಗಳು ಬಾಕಿ ಇರುವಾಗ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಭಾರತದಲ್ಲಿ ಆಡಲು ಭದ್ರತಾ ಕಾಳಜಿ ಮುಂದಿಟ್ಟುಕೊಂಡು ನಿರಾಕರಿಸಿದೆ. ಬಿಸಿಸಿಐ ವಿವಿಐಪಿ ಭದ್ರತೆ ನೀಡಲು ಮುಂದಾದರೂ ಬಾಂಗ್ಲಾ ತನ್ನ ನಿಲುವನ್ನು ಬದಲಿಸಿಲ್ಲ. ಪಾಕಿಸ್ತಾನದ ಹಾದಿಯನ್ನೇ ಅನುಸರಿಸುತ್ತಿರುವ ಬಾಂಗ್ಲಾ ಮಂಡಳಿ, ಐಸಿಸಿ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಿದೆ. ಈ ಪ್ರತಿಷ್ಠೆಯ ಹೋರಾಟ ಐಸಿಸಿಗೆ ದೊಡ್ಡ ಸವಾಲಾಗಿದೆ.
- pruthvi Shankar
- Updated on: Jan 6, 2026
- 5:26 pm
ಬಿಸಿಸಿಐ ವಿರುದ್ಧ ತೊಡೆ ತಟ್ಟಿರುವ ಬಾಂಗ್ಲಾ ತಂಡದ ಟಿ20 ವಿಶ್ವಕಪ್ ಪ್ರದರ್ಶನ ಹೇಗಿದೆ?
Bangladesh T20 World Cup: ಬಾಂಗ್ಲಾದೇಶ 2026ರ ಟಿ20 ವಿಶ್ವಕಪ್ಗೆ ಭಾರತಕ್ಕೆ ತೆರಳದಿರಲು ನಿರ್ಧರಿಸಿದೆ. ಮುಸ್ತಾಫಿಜುರ್ ಐಪಿಎಲ್ನಿಂದ ಹೊರಹಾಕಿದ್ದೇ ಇದಕ್ಕೆ ಕಾರಣ. ತಂಡದ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವಂತೆ ಐಸಿಸಿಗೆ ವಿನಂತಿಸಿದೆ. ಬಾಂಗ್ಲಾ ತಂಡದ ಟಿ20 ವಿಶ್ವಕಪ್ ಪ್ರದರ್ಶನ ಐತಿಹಾಸಿಕವಾಗಿ ಕಳಪೆ. ಇದುವರೆಗೆ ಸೆಮಿಫೈನಲ್ ತಲುಪಿಲ್ಲ.
- pruthvi Shankar
- Updated on: Jan 4, 2026
- 7:22 pm
T20 World Cup: ಭಾರತದ ನೆಲದಲ್ಲಿ ಆಡುವುದಿಲ್ಲ ಎಂದ ಬಾಂಗ್ಲಾ; ತಕ್ಕ ಪ್ರತ್ಯುತ್ತರ ನೀಡಿದ ಬಿಸಿಸಿಐ
T20 World Cup 2026: 2026ರ ಟಿ20 ವಿಶ್ವಕಪ್ಗೆ ಮುನ್ನ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ಭಾರತದಲ್ಲಿ ಆಡಲು ನಿರಾಕರಿಸಿದೆ. ಮುಸ್ತಾಫಿಜುರ್ ರೆಹಮಾನ್ ಐಪಿಎಲ್ನಿಂದ ಹೊರಗಿಟ್ಟಿದ್ದಕ್ಕೆ ಕೋಪಗೊಂಡ BCB, ಭದ್ರತಾ ಕಾರಣ ನೀಡಿ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸಲು ಐಸಿಸಿಗೆ ಇಮೇಲ್ ಮಾಡಿದೆ. ಆದರೆ BCCI ವೇಳಾಪಟ್ಟಿ ಬದಲಾವಣೆಗೆ ಅಸಾಧ್ಯ ಎಂದಿದೆ, ಇದರಿಂದ ಉಭಯ ಮಂಡಳಿಗಳ ನಡುವೆ ತೀವ್ರ ವಿವಾದ ಸೃಷ್ಟಿಯಾಗಿದೆ.
- pruthvi Shankar
- Updated on: Jan 4, 2026
- 4:46 pm
T20 World Cup: ಭಾರತಕ್ಕೆ ಬರಲ್ಲ ಎನ್ನುತ್ತಲೇ ಟಿ20 ವಿಶ್ವಕಪ್ಗೆ ತಂಡ ಪ್ರಕಟಿಸಿದ ಬಾಂಗ್ಲಾ
T20 World Cup Squad: ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್ನಿಂದ ಹೊರಹಾಕಿದ ವಿವಾದದ ನಡುವೆ, ಬಾಂಗ್ಲಾದೇಶವು 2026ರ ಟಿ20 ವಿಶ್ವಕಪ್ ತಂಡವನ್ನು ಪ್ರಕಟಿಸಿದೆ, ಇದರಲ್ಲಿ ಮುಸ್ತಾಫಿಜುರ್ ಕೂಡ ಸೇರಿದ್ದಾರೆ. ಈ ಘಟನೆ ಭಾರತ-ಬಾಂಗ್ಲಾ ಸಂಬಂಧದಲ್ಲಿ ಬಿರುಕು ಮೂಡಿಸಿದ್ದು, ಬಾಂಗ್ಲಾ ಕ್ರಿಕೆಟ್ ಮಂಡಳಿ (BCB) ಐಸಿಸಿಗೆ ಪಂದ್ಯಗಳ ಸ್ಥಳ ಬದಲಾವಣೆಗೆ ಮನವಿ ಮಾಡಿದೆ. ಐಪಿಎಲ್ ನಿಷೇಧದ ವದಂತಿಗಳೂ ಹಬ್ಬಿವೆ.
- pruthvi Shankar
- Updated on: Jan 4, 2026
- 4:12 pm
ಭಾರತದಿಂದ ಬಾಂಗ್ಲಾದೇಶ್ ಟಿ20 ವಿಶ್ವಕಪ್ ಪಂದ್ಯಗಳು ಶಿಫ್ಟ್?
ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲಿನ ದಾಳಿಯನ್ನು ಖಂಡಿಸಿ ಇಂಡಿಯನ್ ಪ್ರೀಮಿಯರ್ ಲೀಗ್ನಿಂದ ಬಾಂಗ್ಲಾ ಆಟಗಾರರನ್ನು ಕೈ ಬಿಡುವಂತೆ ಪ್ರತಿಭಟನೆಗಳು ನಡೆದಿದ್ದವು. ಇದರ ಬೆನ್ನಲ್ಲೇ ಬಿಸಿಸಿಐ, ಕೆಕೆಆರ್ ತಂಡದಲ್ಲಿದ್ದ ಮುಸ್ತಫಿಝುರ್ ರೆಹಮಾನ್ ಅವರನ್ನು ಕೈ ಬಿಡುವಂತೆ ಸೂಚಿಸಿತ್ತು. ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಮುಸ್ತಫಿಝುರ್ ರೆಹಮಾನ್ ಅವರನ್ನು ತಂಡದಿಂದ ಕೈ ಬಿಟ್ಟಿದ್ದಾರೆ.
- Zahir Yusuf
- Updated on: Jan 4, 2026
- 8:32 am