AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Toxic Movie

Toxic Movie

‘ಕೆಜಿಎಫ್ 2’ ಬಳಿಕ ಯಶ್ ಒಪ್ಪಿಕೊಂಡ ಮೊದಲ ಸಿನಿಮಾ ಇದು. ಯಶ್ ನಟಿಸುತ್ತಿರುವ 19ನೇ ಸಿನಿಮಾ ಇದಾಗಿದೆ. ಈ ಚಿತ್ರಕ್ಕೆ ಕೆವಿಎನ್​ ಪ್ರೊಡಕ್ಷನ್ಸ್ ಬಂಡವಾಳ ಹೂಡಿದೆ. ಕೆ.ವೆಂಕಟ್ ನಾರಾಯಣ್ ಅವರು ಇದನ್ನು ದೊಡ್ಡ ಬಜೆಟ್​ನಲ್ಲಿ ನಿರ್ಮಾಣ ಮಾಡಿದ್ದಾರೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಕನ್ನಡದ ಜೊತೆಗೆ ಮಲಯಾಳಂ, ತಮಿಳು ಮೊದಲಾದ ಭಾಷೆಗಳಲ್ಲಿ ಸಿನಿಮಾ ಮೂಡಿ ಬಂದಿದೆ. ಈ ಚಿತ್ರದಲ್ಲಿ ಯಶ್​ ಜೊತೆ ನಯನತಾರಾ, ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್​ ನಟಿಸಿದ್ದಾರೆ. ಆಗಸ್ಟ್ 8ರಂದು ಸಿನಿಮಾದ ಮುಹೂರ್ತ ನೆರವೇರಿದೆ. 2026ರ ಮಾರ್ಚ್ 19ರಂದು ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರವನ್ನು ಹಾಲಿವುಡ್​ ಮಟ್ಟದಲ್ಲಿ ಸಿದ್ಧಪಡಿಸಲಾಗಿದೆ. ಯಶ್ ಅವರು ಈ ಚಿತ್ರಕ್ಕಾಗಿ ಬೇರೆ ಅವತಾರ ತಾಳಿದ್ದಾರೆ. ಈ ಸಿನಿಮಾದ ಬಗ್ಗೆ ಕೇವಲ ಕನ್ನಡದವರಿಗೆ ಮಾತ್ರವಲ್ಲದೆ ಪರಭಾಷೆಯ ಸಿನಿ ಪ್ರಿಯರಿಗೂ ನಿರೀಕ್ಷೆ ಸೃಷ್ಟಿ ಆಗಿದೆ ಅನ್ನೋದು ವಿಶೇಷ.

ಇನ್ನೂ ಹೆಚ್ಚು ಓದಿ

‘ಟಾಕ್ಸಿಕ್’ ಸಿನಿಮಾದ ಮತ್ತೊಂದು ಸಾಂಗ್​​ ರಿಲೀಸ್​​ಗೆ ಕೌಂಟ್​​ಡೌನ್; ಈ ಬಾರಿಯೂ ರೊಮ್ಯಾಂಟಿಕ್ ಹಾಡು

‘ಟಾಕ್ಸಿಕ್’ ಸಿನಿಮಾದ ಬ್ಯಾಕ್-ಟು-ಬ್ಯಾಕ್ ರೊಮ್ಯಾಂಟಿಕ್ ಹಾಡುಗಳ ಯಶಸ್ಸಿನ ಬೆನ್ನಲ್ಲೇ ಈಗ ಮೂರನೇ ಸಾಂಗ್ ರಿಲೀಸ್‌ಗೆ ಕೌಂಟ್​​ಡೌನ್ ಶುರುವಾಗಿದೆ. ಗ್ಯಾಂಗ್‌ಸ್ಟರ್ ಹಿನ್ನೆಲೆಯ ಈ ಚಿತ್ರದಲ್ಲಿ ಯಶ್ ಹಾಗೂ ಕಿಯಾರಾ ಅಡ್ವಾಣಿ ಕಾಂಬಿನೇಷನ್‌ನ ಮತ್ತೊಂದು ಪ್ರಣಯ ಗೀತೆ ವಿಶಾಲ್ ಮಿಶ್ರಾ ಸಂಗೀತದಲ್ಲಿ ಮೂಡಿಬರಲಿದ್ದು, ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ.

ಕ್ಯಾಲಿಫೋರ್ನಿಯಾದಲ್ಲಿ ಯಶ್ ನೋಡಿ ‘ಡ್ಯಾಡಿಸ್ ಹೋಂ’ ಎಂದ ಫ್ಯಾನ್ಸ್

'ರಾಮಾಯಣ' ಸಿನಿಮಾದ ಪ್ರಚಾರಕ್ಕಾಗಿ ಅಮೆರಿಕಕ್ಕೆ ತೆರಳಿರುವ ರಾಕಿಂಗ್ ಸ್ಟಾರ್ ಯಶ್, ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಕಾಮಿಕ್ ಕಾನ್ ಈವೆಂಟ್‌ನಲ್ಲಿ ಭಾರಿ ಸದ್ದು ಮಾಡಿದ್ದಾರೆ. ಯಶ್ ಅವರನ್ನು ನೋಡಲು ಮತ್ತು ಸೆಲ್ಫಿ ತೆಗೆದುಕೊಳ್ಳಲು ಭಾರತೀಯ ಅಭಿಮಾನಿಗಳು ಮುಗಿಬಿದ್ದಿದ್ದು, ಇದೇ ವೇಳೆ ಅವರ ಮುಂದಿನ ಚಿತ್ರ 'ಟಾಕ್ಸಿಕ್' ನ ಪ್ರಸಿದ್ಧ 'ಡ್ಯಾಡಿಸ್ ಹೋಂ' ಡೈಲಾಗ್ ಕೂಡ ಜಾಗತಿಕ ವೇದಿಕೆಯಲ್ಲಿ ಭಾರಿ ಸದ್ದು ಮಾಡಿದೆ.

‘ಟಾಕ್ಸಿಕ್’ ಸಿನಿಮಾ ಬಗ್ಗೆ ನಿರ್ಮಾಪಕ ಕೆವಿಎನ್ ಹೇಳಿದ್ದೇನು?

Toxic movie story: ‘ಟಾಕ್ಸಿಕ್’ ಸಿನಿಮಾದ ಆಫ್​​ಲೈನ್ ಪ್ರಚಾರ ಆರಂಭವಾಗಿಲ್ಲ ಆದರೆ ಸಿನಿಮಾದ ನಟ-ನಟಿಯರು, ತಂತ್ರಜ್ಞರು ಬೇರೆ ಬೇರೆ ಸಿನಿಮಾಗಾಳ ಸಂದರ್ಶನಗಳಲ್ಲಿ ಭಾಗವಹಿಸಿದಾಗ ‘ಟಾಕ್ಸಿಕ್’ ಬಗ್ಗೆ ಪ್ರಶ್ನೆಗಳು ಎದುರಾಗುತ್ತಿದ್ದು, ಉತ್ತರಗಳನ್ನು ನೀಡುತ್ತಿದ್ದಾರೆ. ಇದೀಗ ಸಿನಿಮಾದ ನಿರ್ಮಾಪಕ ವೆಂಕಟ್ ಅವರು ತಮ್ಮದೇ ನಿರ್ಮಾಣದ ‘ಜನ ನಾಯಗನ್’ ಸಿನಿಮಾದ ಬಿಡುಗಡೆಗೆ ಸಜ್ಜಾಗಿ ಅದರ ಪ್ರಚಾರದಲ್ಲಿ ನಿರತರಾಗಿದ್ದಾರೆ. ಆದರೆ ಅಲ್ಲಿಯೂ ಅವರಿಗೆ ‘ಟಾಕ್ಸಿಕ್’ ಬಗ್ಗೆ ಪ್ರಶ್ನೆ ಎದುರಾಗಿದೆ. ಈ ವೇಳೆ ಅವರು ಸಿನಿಮಾದ ಬಗ್ಗೆ ಮಾತನಾಡಿದ್ದಾರೆ.

‘ಮನಮೋಹಕ’ ಮೂಲಕ ಕಮಾಲ್ ಮಾಡಿದ ಪ್ರಮೋದ್ ಮರವಂತೆ; ಸ್ಯಾಂಡಲ್‌ವುಡ್ ಸ್ಟಾರ್ ಲಿರಿಸಿಸ್ಟ್ ಜರ್ನಿ

ಗೀತಸಾಹಿತಿ ಪ್ರಮೋದ್ ಮರವಂತೆ 'ಟಾಕ್ಸಿಕ್' ಚಿತ್ರದ 'ಮನಮೋಹಕ' ಹಾಡಿನ ಮೂಲಕ ಮತ್ತೊಮ್ಮೆ ಪ್ರೇಕ್ಷಕರ ಮನ ಗೆದ್ದಿದ್ದಾರೆ. 'ಕಾಂತಾರ'ದ 'ಸಿಂಗಾರ ಸಿರಿಯೇ' ಹಾಡಿಗೆ ಸಾಹಿತ್ಯ ಬರೆದು ಭಾರಿ ಯಶಸ್ಸು ಗಳಿಸಿದ್ದ ಇವರು, ಮೆಲೋಡಿ ಹಾಗೂ ಮಾಸ್ ಹಾಡು ಎರಡರಲ್ಲೂ ಅದ್ಭುತವಾಗಿ ಸಾಹಿತ್ಯ ರಚಿಸುವ ಸಾಮರ್ಥ್ಯ ಹೊಂದಿದ್ದಾರೆ. ಕರಾವಳಿಯಿಂದ ಗಾಂಧಿನಗರದವರೆಗೆ ತಮ್ಮದೇ ಆದ ಛಾಪು ಮೂಡಿಸಿರುವ ಇವರು, ಇಂದು ಸ್ಯಾಂಡಲ್‌ವುಡ್‌ನ ಅತಿ ಬೇಡಿಕೆಯ ಸಾಹಿತಿಗಳಲ್ಲಿ ಒಬ್ಬರು.

Toxic Song: ‘ಮನಮೋಹಕ’ ಹಾಡಿನ ಮಾದಕತೆ ಏರಿಸಿದ ತಾರಾ ಸುತಾರಿಯಾ

Manamohaka Song: ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರದ ಎರಡನೇ ಹಾಡು ‘ಮನಮೋಹಕ’ 5 ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಯಶ್-ತಾರಾ ಸುತಾರಿಯಾ ರೋಮ್ಯಾಂಟಿಕ್ ಕೆಮಿಸ್ಟ್ರಿ ಜೊತೆಗೆ ಕಿಯಾರಾ ಅಡ್ವಾಣಿ ಹಾಗೂ ಲೇಡಿ ಸೂಪರ್‌ಸ್ಟಾರ್ ನಯನತಾರಾ ಅವರ ಸಸ್ಪೆನ್ಸ್ ಎಂಟ್ರಿ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

‘ಟಾಕ್ಸಿಕ್’: ‘ಮನಮೋಹಕ’ ಹಾಡಿನಲ್ಲಿ ‘ಕಿರಾತಕ’ನ ಹುಡುಕಿದ ಅಭಿಮಾನಿಗಳು

Toxic movie song: ಇದೀಗ ‘ಟಾಕ್ಸಿಕ್’ ಸಿನಿಮಾದ ‘ಮನಮೋಹಕ’ ಎಂಬ ಹಾಡು ಬಿಡುಗಡೆ ಆಗಿದೆ. ಹಾಡಿನಲ್ಲಿ ಈ ಬಾರಿ ಯಶ್, ತಾರಾ ಸುತಾರಿಯಾ ಜೊತೆಗೆ ರೊಮ್ಯಾನ್ಸ್ ಮಾಡಿದ್ದಾರೆ. ಆದರೆ ಹಾಡು ನೋಡಿದ ಕೆಲವರು ‘ಕಿರಾತಕ’ ಸಿನಿಮಾ ಅನ್ನು ನೆನಪು ಮಾಡಿಕೊಂಡಿದ್ದಾರೆ. ‘ಟಾಕ್ಸಿಕ್’ ಹಾಡಿಗೂ ‘ಕಿರಾತಕ’ ಸಿನಿಮಾಕ್ಕೂ ಏನು ಸಂಬಂಧ? ಇಲ್ಲಿದೆ ಮಾಹಿತಿ...

Toxic Song: ‘ಟಾಕ್ಸಿಕ್’ ಚಿತ್ರದ ‘ಮನಮೋಹಕ..’ ಸಾಂಗ್; ಯಶ್-ತಾರಾ ಸುತಾರಿಯಾ ಕೆಮಿಸ್ಟ್ರಿಗೆ ಫ್ಯಾನ್ಸ್ ಫಿದಾ

ಟಾಕ್ಸಿಕ್​ ಮನಮೋಹಕ ಹಾಡು: ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರದ ಎರಡನೇ ಹಾಡು ‘ಮನಮೋಹಕ’ ಇಂದು ಬಿಡುಗಡೆಯಾಗಿದ್ದು, ಪ್ರಮೋದ್ ಮರವಂತೆ ಸಾಹಿತ್ಯ ಹಾಗೂ ಸಿದ್ದಾರ್ಥ್ ಬಸರೂರ್ ಧ್ವನಿಯಲ್ಲಿ ಮೂಡಿಬಂದಿರುವ ಈ ಮಧುರ ಪ್ರಣಯಗೀತೆಯಲ್ಲಿ ಯಶ್ ಮತ್ತು ತಾರಾ ಸುತಾರಿಯಾ ಕೆಮಿಸ್ಟ್ರಿ ಅಭಿಮಾನಿಗಳ ಮನಗೆದ್ದಿದೆ.

‘ಟಾಕ್ಸಿಕ್’ ಸಿನಿಮಾ ಟಿಕೆಟ್ ಬೆಲೆ ಬಗ್ಗೆ ಅಭಿಮಾನಿಗಳಿಗೆ ಶುರುವಾಗಿದೆ ಭಯ

ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ‘ಜನ ನಾಯಗನ್’ ಚಿತ್ರದ ಸಾವಿರ ರೂಪಾಯಿ ಟಿಕೆಟ್ ಬೆಲೆ ನೋಡಿ ಅಭಿಮಾನಿಗಳು ಶಾಕ್ ಆಗಿದ್ದಾರೆ. ಈಗ ರಾಕಿಂಗ್ ಸ್ಟಾರ್ ಯಶ್ ಅಭಿನಯದ, 500 ಕೋಟಿ ಬಜೆಟ್‌ನ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಟಿಕೆಟ್ ದರವೂ ಗಗನಕ್ಕೇರಬಹುದೇ ಎಂಬ ಭೀತಿ ಎದುರಾಗಿದೆ. ಹಾಗಾಗದಿರಲಿ ಎಂಬುದು ಅಭಿಮಾನಿಗಳ ಕೋರಿಕೆ.

‘ತಬಾಹಿ..’ ಬಳಿಕ ಬರ್ತಿದೆ ‘ಮನಮೋಹಕ’ ಸಾಂಗ್; ‘ಟಾಕ್ಸಿಕ್’ ತಂಡದ ಕಡೆಯಿಂದ ಸಿಕ್ತು ಅಪ್​​ಡೇಟ್

ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ 'ಮನಮೋಹಕ' ಹಾಡಿನ ರಿಲೀಸ್ ಬಗ್ಗೆ ಅಪ್​​ಡೇಟ್ ಸಿಕ್ಕಿದೆ. 'ತಬಾಹಿ' ಸಾಂಗ್ ಭರ್ಜರಿ ಯಶಸ್ಸು ಕಂಡ ಬೆನ್ನಲ್ಲೇ ಈ ರೊಮ್ಯಾಂಟಿಕ್ ಟ್ರ್ಯಾಕ್‌ ಬರುತ್ತಿದೆ. ಯಶ್ ಮತ್ತು ತಾರಾ ಸುತಾರಿಯಾ ಕೆಮಿಸ್ಟ್ರಿ ಹೈಲೈಟ್ ಆಗೋ ಸಾಧ್ಯತೆ ಇದೆ. ಗೀತು ಮೋಹನ್​ದಾಸ್ ನಿರ್ದೇಶನದ ಈ ಸಿನಿಮಾದಲ್ಲಿ ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಸದ್ಯ ಈ ಹೊಸ ಹಾಡು ಸೋಶಿಯಲ್ ಮೀಡಿಯಾದಲ್ಲಿ ಹೊಸ ಟ್ರೆಂಡ್ ಸೃಷ್ಟಿಸುತ್ತಿದೆ.

ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್

ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ‘ತಬಾಹಿ’ ಹಾಡಿನ ಕನ್ನಡ ವರ್ಷನ್​ಗೆ ಯೋಗರಾಜ್ ಭಟ್ ಅವರು ಸಾಹಿತ್ಯ ಬರೆದಿದ್ದಾರೆ. ಈಗಾಗಲೇ ಈ ಹಾಡು ಬಿಡುಗಡೆ ಆಗಿ ಗಮನ ಸೆಳೆದಿದೆ. ಯಶ್, ಕಿಯಾರಾ ಅಡ್ವಾಣಿ ಕಾಣಿಸಿಕೊಂಡಿರುವ ಈ ಗೀತೆಯ ಕೆಲಸ ಹೇಗೆ ನಡೆಯಿತು ಎಂಬುದನ್ನು ಯೋಗರಾಜ್ ಭಟ್ ವಿವರಿಸಿದ್ದಾರೆ.

ಭಾರತದ ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ ‘ಟಾಕ್ಸಿಕ್’ ಚಿತ್ರಕ್ಕೆ 1ನೇ ಸ್ಥಾನ

ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ದಾಖಲೆ ನಿರ್ಮಿಸುತ್ತಿದೆ. ನೆಗೆಟಿವ್ ಸುದ್ದಿಗಳು ಹರಿದಾಡುತ್ತಿದ್ದರೂ ಚಿತ್ರದ ಕ್ರೇಜ್ ಕಡಿಮೆಯಾಗಿಲ್ಲ. ಐಎಂಡಿಬಿ ಬಿಡುಗಡೆ ಮಾಡಿರುವ ಭಾರತದ ಅತ್ಯಂತ ನಿರೀಕ್ಷಿತ ಹೊಸ ಚಿತ್ರಗಳ ಪಟ್ಟಿಯಲ್ಲಿ 'ಟಾಕ್ಸಿಕ್' ಶೇಕಡಾ 47 ರಷ್ಟು ಮತಗಳೊಂದಿಗೆ ಅಗ್ರಸ್ಥಾನದಲ್ಲಿದೆ, ಇದು ಯಶ್ ಅವರ ಜಾಗತಿಕ ಜನಪ್ರಿಯತೆಯನ್ನು ತೋರಿಸುತ್ತದೆ.

‘ಒಂದಿನ ದೊಡ್ಡದಾಗಿ ಬೆಳಿತೀನಿ’; ಹೇಳಿದ್ದನ್ನು ಮಾಡಿ ತೋರಿಸಿದ ಯಶ್

ರಾಕಿಂಗ್ ಸ್ಟಾರ್ ಯಶ್ ಅವರ 'ಟಾಕ್ಸಿಕ್' ಸಿನಿಮಾ ವಿಶ್ವಮಟ್ಟದಲ್ಲಿ ಅದ್ದೂರಿಯಾಗಿ ತೆರೆಗೆ ಬರಲು ಸಿದ್ಧವಾಗಿದೆ. ಸಣ್ಣ ಮಟ್ಟದಿಂದ ಬೆಳೆದು ಬಂದ ಯಶ್ ಹಳೆಯ ಸಂದರ್ಶನದಲ್ಲಿ ತಮ್ಮ ಪ್ರಯಾಣ ನೆನಪಿಸಿಕೊಂಡಿದ್ದಾರೆ. ಭಾರಿ ಬಜೆಟ್, ವಿವಾದಿತ ದೃಶ್ಯಗಳು ಮತ್ತು ಹಾಲಿವುಡ್ ಮಟ್ಟದ ಮೇಕಿಂಗ್‌ನಿಂದ ಗಮನ ಸೆಳೆದಿರುವ 'ಟಾಕ್ಸಿಕ್' ಸಿನಿಮಾ ಆಗಸ್ಟ್ 26ರಂದು ಬಿಡುಗಡೆಯಾಗಲಿದೆ.

ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ
ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ
ಪಂಜಾಬ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ
ಪಂಜಾಬ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ