AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Toxic Movie

Toxic Movie

‘ಕೆಜಿಎಫ್ 2’ ಬಳಿಕ ಯಶ್ ಒಪ್ಪಿಕೊಂಡ ಮೊದಲ ಸಿನಿಮಾ ಇದು. ಯಶ್ ನಟಿಸುತ್ತಿರುವ 19ನೇ ಸಿನಿಮಾ ಇದಾಗಿದೆ. ಈ ಚಿತ್ರಕ್ಕೆ ಕೆವಿಎನ್​ ಪ್ರೊಡಕ್ಷನ್ಸ್ ಬಂಡವಾಳ ಹೂಡಿದೆ. ಕೆ.ವೆಂಕಟ್ ನಾರಾಯಣ್ ಅವರು ಇದನ್ನು ದೊಡ್ಡ ಬಜೆಟ್​ನಲ್ಲಿ ನಿರ್ಮಾಣ ಮಾಡಿದ್ದಾರೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಕನ್ನಡದ ಜೊತೆಗೆ ಮಲಯಾಳಂ, ತಮಿಳು ಮೊದಲಾದ ಭಾಷೆಗಳಲ್ಲಿ ಸಿನಿಮಾ ಮೂಡಿ ಬಂದಿದೆ. ಈ ಚಿತ್ರದಲ್ಲಿ ಯಶ್​ ಜೊತೆ ನಯನತಾರಾ, ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್​ ನಟಿಸಿದ್ದಾರೆ. ಆಗಸ್ಟ್ 8ರಂದು ಸಿನಿಮಾದ ಮುಹೂರ್ತ ನೆರವೇರಿದೆ. 2026ರ ಮಾರ್ಚ್ 19ರಂದು ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರವನ್ನು ಹಾಲಿವುಡ್​ ಮಟ್ಟದಲ್ಲಿ ಸಿದ್ಧಪಡಿಸಲಾಗಿದೆ. ಯಶ್ ಅವರು ಈ ಚಿತ್ರಕ್ಕಾಗಿ ಬೇರೆ ಅವತಾರ ತಾಳಿದ್ದಾರೆ. ಈ ಸಿನಿಮಾದ ಬಗ್ಗೆ ಕೇವಲ ಕನ್ನಡದವರಿಗೆ ಮಾತ್ರವಲ್ಲದೆ ಪರಭಾಷೆಯ ಸಿನಿ ಪ್ರಿಯರಿಗೂ ನಿರೀಕ್ಷೆ ಸೃಷ್ಟಿ ಆಗಿದೆ ಅನ್ನೋದು ವಿಶೇಷ.

ಇನ್ನೂ ಹೆಚ್ಚು ಓದಿ

‘ಟಾಕ್ಸಿಕ್’ ಎದುರು ಬರಲು ರೆಡಿ ಆಯ್ತು ಬಾಲಿವುಡ್​​ನ ಸ್ಟಾರ್ ನಟನ ಸಿನಿಮಾ

'ಟಾಕ್ಸಿಕ್' ಚಿತ್ರದ ಬಿಡುಗಡೆ ದಿನಾಂಕ ಜೂನ್ 4ಕ್ಕೆ ಮುಂದೂಡಲಾಗಿದೆ. ಈ ನಡುವೆ ಸಲ್ಮಾನ್ ಖಾನ್ ಅಭಿನಯದ 'ಮಾತೃಭೂಮಿ' ಸಿನಿಮಾ (ಹಿಂದಿನ 'ಬ್ಯಾಟಲ್ ಆಫ್ ಗಲ್ವಾನ್') ಕೂಡ ಜೂನ್ ತಿಂಗಳಲ್ಲಿ ಬಿಡುಗಡೆಗೆ ಸಜ್ಜಾಗಿದೆ. ರೀಶೂಟ್, ಸೆನ್ಸಾರ್ ವಿಳಂಬದಿಂದ ಮೇ 15ರ ಬಿಡುಗಡೆ ಸಾಧ್ಯವಾಗಿಲ್ಲ. 'ಮಾತೃಭೂಮಿ' 'ಟಾಕ್ಸಿಕ್' ಜೊತೆ ಕ್ಲಾಶ್ ಆಗುವ ಸಾಧ್ಯತೆ ಇದೆ.

ಯಶ್ ರಾವಣನ ಪಾತ್ರ ಒಪ್ಪಿಕೊಳ್ಳಲು ಕಾರಣ ಆಗಿದ್ದು ಆ ಒಂದು ವಿಷಯ

ರಾಕಿಂಗ್ ಸ್ಟಾರ್ ಯಶ್ ‘ರಾಮಾಯಣ’ ಚಿತ್ರದಲ್ಲಿ ರಾವಣನ ಪಾತ್ರ ಒಪ್ಪಿಕೊಳ್ಳಲು ಕಾರಣ ಬಹಿರಂಗವಾಗಿದೆ. ನಿರ್ದೇಶಕ ನಿತೇಶ್ ತಿವಾರಿ ರಾವಣನನ್ನು ಕೇವಲ ಕೆಟ್ಟವನಾಗಿ ತೋರಿಸದೆ, ಅವನ ಜ್ಞಾನ, ಭಕ್ತಿ ಮತ್ತು ಬಹುಮುಖಿ ಗುಣಗಳನ್ನು ಅನಾವರಣಗೊಳಿಸಿದ್ದಾರೆ. ರಣಬೀರ್ ಕಪೂರ್ ಕೂಡ ಈ ಪಾತ್ರದ ವಿಶಿಷ್ಟ ವ್ಯಾಖ್ಯಾನವನ್ನು ವಿವರಿಸಿದ್ದಾರೆ. ಅಹಂಕಾರ ಮತ್ತು ಪ್ರತೀಕಾರದ ಸಂದೇಶದೊಂದಿಗೆ, ಯಶ್ ಈ ಭಿನ್ನವಾದ ರಾವಣನ ಪಾತ್ರಕ್ಕೆ ಆಕರ್ಷಿತರಾಗಿದ್ದಾರೆ.

‘ಟಾಕ್ಸಿಕ್’ ಚಿತ್ರವನ್ನು ಕಿಯಾರಾ ಒಪ್ಪಿಕೊಂಡಿದ್ದೇಕೆ? ಅಸಲಿ ಕಾರಣ ಬಯಲು

ಯಶ್ ನಟನೆಯ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಜೂನ್ 4ರಂದು ತೆರೆಗೆ ಬರಲು ಸಜ್ಜಾಗಿದೆ. ಕಿಯಾರಾ ಅಡ್ವಾಣಿ ತಮ್ಮ ನಾಡಿಯಾ ಪಾತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ನಿರ್ದೇಶಕಿ ಗೀತು ಮೋಹನ್‌ದಾಸ್ ಅವರ ವಿಶೇಷ ದೃಷ್ಟಿಗೆ ಶ್ರೇಯಸ್ಸು ನೀಡಿದ್ದಾರೆ. ಸಿನಿಮಾದಲ್ಲಿ ತಮ್ಮ ಪಾತ್ರದ ಸವಾಲು ಮತ್ತು ವಿಶಿಷ್ಟತೆಯನ್ನು ಕಿಯಾರಾ ವಿವರಿಸಿದ್ದಾರೆ.

‘ಟಾಕ್ಸಿಕ್’ ರಿಲೀಸ್ ಸಂದರ್ಭದಲ್ಲೇ ‘ಧುರಂಧರ್ 3’ ಸಿನಿಮಾ? ವೈರಲ್ ಪೋಸ್ಟ್ ಅಸಲಿಯತ್ತೇನು?

ಧುರಂಧರ್ 2 ಚಿತ್ರದ ಬ್ಲಾಕ್‌ಬಸ್ಟರ್ ಯಶಸ್ಸಿನ ನಡುವೆ, ಟಾಕ್ಸಿಕ್ ಚಿತ್ರದ ರಿಲೀಸ್ ಕುರಿತು ಚರ್ಚೆಗಳು ನಡೆದಿವೆ. 450 ಕೋಟಿ ಗಳಿಸಿದ ಧುರಂಧರ್ 2 ಎದುರು ಟಾಕ್ಸಿಕ್ ಬರಬೇಕಿತ್ತು. ಆದರೆ, ರಿಲೀಸ್ ಮುಂದೂಡಲ್ಪಟ್ಟಿದೆ. ಇದೇ ವೇಳೆ, ಧುರಂಧರ್ 3 ಜೂನ್ 14ರಂದು ಬರಲಿದೆ ಎಂಬ ಸುಳ್ಳು ಪೋಸ್ಟರ್ ವೈರಲ್ ಆಗಿದ್ದು, ಟಾಕ್ಸಿಕ್ ಅಭಿಮಾನಿಗಳಲ್ಲಿ ಗೊಂದಲ ಸೃಷ್ಟಿಸಿದೆ.

‘ಟಾಕ್ಸಿಕ್’ ಎಫೆಕ್ಟ್: ರಿಲೀಸ್ ದಿನಾಂಕ ಬದಲಾಯಿಸಿಕೊಂಡ ಬಾಲಿವುಡ್ ಸ್ಟಾರ್ ಹೀರೋ

‘ಟಾಕ್ಸಿಕ್’ ಸಿನಿಮಾದ ಹವಾ ಜೋರಾಗಿದೆ. ಬಾಲಿವುಡ್ ಸಿನಿಮಾಗಳ ಮೇಲೂ ಪರಿಣಾಮ ಬೀರುತ್ತಿದೆ. ಯಶ್ ನಟನೆಯ ಈ ಸಿನಿಮಾ ಜೂನ್ 4ರಂದು ಬಿಡುಗಡೆ ಆಗಲಿದೆ. ಈ ಚಿತ್ರದ ಜೊತೆ ಕ್ಲ್ಯಾಶ್ ತಪ್ಪಿಸಲು ವರುಣ್ ಧವನ್ ನಟನೆಯ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಸಿನಿಮಾದ ರಿಲೀಸ್ ದಿನಾಂಕ ಮುಂದೂಡಲಾಗಿದೆ.

ರಾಧಿಕಾ ಜೊತೆ ಮುಂಬೈನಲ್ಲಿ ಯಶ್ ಸುತ್ತಾಟ; ಗಮನ ಸೆಳೆದ ಹೊಸ ಲುಕ್

ರಾಕಿಂಗ್ ಸ್ಟಾರ್ ಯಶ್ ‘ಟಾಕ್ಸಿಕ್’ ಚಿತ್ರದ ‘ಟಿಕೆಟ್’ ಪಾತ್ರಕ್ಕಾಗಿ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ‘ಕೆಜಿಎಫ್ 2’ ನಂತರ ಉದ್ದ ಕೂದಲು, ಗಡ್ಡ ಬಿಟ್ಟಿದ್ದ ಯಶ್, ಈಗ ಶಾರ್ಟ್ ಹೇರ್ ಹಾಗೂ ಸಣ್ಣ ಗಡ್ಡದಲ್ಲಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಮುಂಬೈನಲ್ಲಿ ಪಾಪರಾಜಿಗಳ ಕ್ಯಾಮರಾದಲ್ಲಿ ಸೆರೆಯಾದ ಈ ಹೊಸ ಲುಕ್ ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿದೆ.

‘ಟಾಕ್ಸಿಕ್’ ಬಿಡುಗಡೆಗೂ ಮುನ್ನ 31.5 ಕೋಟಿ ರೂ. ಮೌಲ್ಯದ ಮನೆ ಖರೀದಿಸಿದ ನಯನತಾರಾ

ಭಾರತೀಯ ಚಿತ್ರರಂಗದ ಅತಿ ಶ್ರೀಮಂತ ನಟಿಯರ ಪಟ್ಟಿಯಲ್ಲಿ ನಯನತಾರಾ ಅವರ ಹೆಸರು ಕೂಡ ಇದೆ. ದಿನದಿಂದ ದಿನಕ್ಕೆ ಅವರ ಶ್ರೀಮಂತಿಕೆ ಹೆಚ್ಚುತ್ತಲೇ ಇದೆ. ಈಗ ಅವರು ಹೊಸ ಮನೆ ಖರೀದಿಸಿದ್ದಾರೆ. ಚೆನ್ನೈನ ಪ್ರತಿಷ್ಠಿತ ಪೋಯಿಸ್ ಗಾರ್ಡನ್ ಏರಿಯಾದಲ್ಲಿ ಅವರು ಹೊಸ ಮನೆಗೆ ಒಡತಿ ಆಗಿದ್ದಾರೆ.

‘ಟಾಕ್ಸಿಕ್’ ಚಿತ್ರಕ್ಕೆ ಮಾತ್ರ ಯುದ್ಧದ ಬಿಸಿ: ‘ಧುರಂಧರ್ 2’ ಸಿನಿಮಾಗೆ ಚಿಂತೆ ಇಲ್ಲ ಯಾಕೆ?

ಯುದ್ಧದ ಪರಿಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ‘ಟಾಕ್ಸಿಕ್’ ಬಿಡುಗಡೆಯನ್ನು ಮುಂದೂಡಲಾಗಿದೆ. ಆದರೆ ‘ಧುರಂಧರ್ 2’ ಸಿನಿಮಾಗೆ ಮಧ್ಯಪ್ರಾಚ್ಯ ರಾಷ್ಟ್ರಗಳ ಸದ್ಯದ ಪರಿಸ್ಥಿತಿಯಿಂದ ಯಾವುದೇ ತೊಂದರೆ ಇಲ್ಲ. ಯಾಕೆಂದರೆ ಗಲ್ಫ್ ರಾಷ್ಟ್ರಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುವುದೇ ಇಲ್ಲ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ಧುರಂಧರ್ 2’ ಎದುರು ರಿಲೀಸ್ ಆಗಲಿದೆ ಪವನ್ ಕಲ್ಯಾಣ್ ಸಿನಿಮಾ ‘ಉಸ್ತಾದ್ ಭಗತ್ ಸಿಂಗ್’

‘ಧುರಂಧರ್ 2’ ಸಿನಿಮಾಗೆ ಪೈಪೋಟಿ ನೀಡಲು ತೆಲುಗಿನ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಬರುತ್ತಿದೆ. ‘ಟಾಕ್ಸಿಕ್’ ಬಿಡುಗಡೆ ದಿನಾಂಕ ಮುಂದೂಡಿಕೆ ಆಗುತ್ತಿದ್ದಂತೆಯೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಾಕ್ಸ್ ಆಫೀಸ್​​ನಲ್ಲಿ ರಣವೀರ್ ಸಿಂಗ್ ಸಿನಿಮಾ ಎದುರು ಪವನ್ ಕಲ್ಯಾಣ್ ಸಿನಿಮಾ ಪೈಪೋಟಿ ನೀಡಲಿದೆ.

ಇಷ್ಟೆಲ್ಲ ಆದ್ರೂ ಕೆವಿಎನ್​​ಗೆ ಇಲ್ಲ ಚಿಂತೆ; ಕೈಯಲ್ಲಿವೆ ಇನ್ನೂ ಹಲವು ಬಿಗ್ ಬಜೆಟ್ ಸಿನಿಮಾಗಳು

KVN Production Movies : ಕೆವಿಎನ್ ಪ್ರೊಡಕ್ಷನ್ಸ್ ದೊಡ್ಡ ಬಜೆಟ್ ಸಿನಿಮಾಗಳ ವಿಳಂಬದಿಂದ ಚಿಂತಿತವಾಗಿಲ್ಲ. ಸಂಸ್ಥೆಯು 'ಜನ ನಾಯಗನ್', 'ಟಾಕ್ಸಿಕ್' ಸೇರಿದಂತೆ ಹಲವು ಬಹುಕೋಟಿ ಯೋಜನೆಗಳನ್ನು ಒಟ್ಟಿಗೇ ನಿರ್ಮಿಸುತ್ತಿದೆ. ಅಕ್ಷಯ್ ಕುಮಾರ್, ಚಿರಂಜೀವಿ ಅವರಂತಹ ಸೂಪರ್‌ಸ್ಟಾರ್‌ಗಳೊಂದಿಗೆ ಹೊಸ ಚಿತ್ರಗಳು ಅಂತಿಮ ಹಂತದಲ್ಲಿವೆ.

‘ಟಾಕ್ಸಿಕ್’ ಬಿಡುಗಡೆ ದಿನಾಂಕ ಮುಂದಕ್ಕೆ; ಮತ್ತೊಬ್ಬ ಬಾಲಿವುಡ್ ಹೀರೋಗೆ ಚಿಂತೆ ಶುರು

ಮಾರ್ಚ್ 19ರಂದು ರಿಲೀಸ್ ಆಗಬೇಕಿದ್ದ ‘ಟಾಕ್ಸಿಕ್’ ಸಿನಿಮಾ ಜೂನ್ 4ಕ್ಕೆ ಮುಂದೂಡಿಕೆ ಆಗಿದೆ. ಜೂನ್ ಮೊದಲ ವಾರದಲ್ಲಿ ರಿಲೀಸ್ ಆಗಬೇಕು ಎಂದುಕೊಂಡಿದ್ದ ಬೇರೆ ಚಿತ್ರಗಳಿಗೆ ಈಗ ಆತಂಕ ಶುರು ಆಗಿದೆ. ವರುಣ್ ಧವನ್ ನಟನೆಯ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಸಿನಿಮಾಗೆ ಸಂಕಷ್ಟ ಎದುರಾಗಿದೆ.

ಮಾರ್ಚ್ 19ಕ್ಕೆ ‘ಟಾಕ್ಸಿಕ್’ ಬದಲು ರಿಲೀಸ್ ಆಗಲಿದೆ ‘ಲವ್ ಮಾಕ್ಟೇಲ್ 3’ ಸಿನಿಮಾ

ಏಪ್ರಿಲ್ ತಿಂಗಳಲ್ಲಿ ರಿಲೀಸ್ ಆಗಬೇಕಿದ್ದ ‘ಲವ್ ಮಾಕ್ಟೇಲ್ 3’ ಚಿತ್ರ ಮಾರ್ಚ್ 19ರಂದು ಬರಲಿದೆ. ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋದ ಬೆನ್ನಲ್ಲೇ ಈ ತೀರ್ಮಾನ ಮಾಡಲಾಗಿದೆ. ‘ಕೆವಿಎನ್’ ಸಂಸ್ಥೆಯೇ ‘ಲವ್ ಮಾಕ್ಟೇಲ್ 3’ ಸಿನಿಮಾವನ್ನು ವಿತರಣೆ ಮಾಡಲಿದೆ. ಆ ಬಗ್ಗೆ ಇಲ್ಲಿದೆ ವಿವರ..

ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?