AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending

Trending

ದೇಶದಲ್ಲಿ ನಡೆಯುವ ಅಚ್ಚರಿಯ ಘಟನೆಗಳನ್ನು ಹಾಗೂ ವೈರಲ್​​ ಆಗಿರುವ ಸುದ್ದಿಗಳನ್ನು ಇಲ್ಲಿ ಪ್ರಕಟ ಮಾಡಲಾಗುವುದು. ಜನರಿಗೆ ಆಸಕ್ತಿದಾಯಕ ವಿಡಿಯೋಗಳನ್ನು ಇಲ್ಲಿ ನೀಡಲಾಗಿದೆ, ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿರುವ ವಿಡಿಯೋಗಳನ್ನು ಹಾಗೂ ಸುದ್ದಿಗಳನ್ನು ಇಲ್ಲಿ ಅಪ್ಡೇಟ್​​​ ಮಾಡಲಾಗುವುದು. ಓದುಗರಿಗೆ ಈ ಜಗತ್ತಿನಲ್ಲಿ ತಿಳಿಯದ ಸುದ್ದಿಗಳನ್ನು ಟ್ರೆಂಡಿಂಗ್​​​ನಲ್ಲಿ ನೀಡಲಾಗುವುದು. ಅದೆಷ್ಟು ಜನರಿಗೆ ನಮ್ಮ ಸುತ್ತ-ಮುತ್ತಲಿನಲ್ಲಿ ನಡೆಯುವ ವಿಚಾರಗಳು ತಿಳಿದಿರುವುದಿಲ್ಲ. ಹಾಗೂ ಅದನ್ನು ತಿಳಿಸುವ ಕೆಲಸವನ್ನು ಟ್ರೆಂಡಿಂಗ್​​​ ಕ್ಯಾಟಗರಿಯಲ್ಲಿ ತಿಳಿಸಲಾಗುವುದು

ಇನ್ನೂ ಹೆಚ್ಚು ಓದಿ

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಕಳ್ಳ ಬೆಕ್ಕನ್ನು ಕಂಡು ಹಿಡಿಯಬಲ್ಲಿರಾ

ಮೆದುಳಿಗೆ ಕಸರತ್ತು ನೀಡುವ ಆಟಗಳನ್ನು ಆಡುವುದರಲ್ಲಿರುವ ಮಜಾನೇ ಬೇರೆ. ಹೀಗಾಗಿ ಹೆಚ್ಚಿನವರು ಬಿಡುವು ಸಿಕ್ಕಾಗಲೆಲ್ಲಾ ಇಂತಹ ಒಗಟಿನ ಚಿತ್ರಗಳನ್ನು ಬಿಡಿಸುತ್ತಾರೆ. ಇದೀಗ ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಬೆಕ್ಕನ್ನು ಕಂಡು ಹಿಡಿಯುವ ಸವಾಲು ನೀಡಲಾಗಿದೆ. ಈ ಟ್ರಿಕ್ಕಿ ಒಗಟು ಬಿಡಿಸಿ ನಿಮ್ಮ ಬುದ್ಧಿವಂತಿಕೆ ಪರೀಕ್ಷಿಸಿಕೊಳ್ಳಿ ನೋಡೋಣ.

ಬೆಂಗಳೂರಲ್ಲಿ 2BHK ಮನೆಗೆ 70 ಸಾವಿರ ರೂ. ಬಾಡಿಗೆ!, ಭಯಾನಕ ಅನುಭವ ಬಿಚ್ಚಿಟ್ಟ ವ್ಯಕ್ತಿ

ಬೆಂಗಳೂರಿನಲ್ಲಿ ಮನೆ ಬಾಡಿಗೆ ದರಗಳು ಗಗನಕ್ಕೇರಿವೆ. 2BHK ಅಪಾರ್ಟ್‌ಮೆಂಟ್‌ಗೆ 70 ಸಾವಿರ ರೂ. ಬಾಡಿಗೆ ಕೇಳಲಾಗ್ತಿದ್ದು, ಇದು ಸಾಮಾನ್ಯರನ್ನು ಕಂಗಡಿಸಿದೆ. ಐಟಿ ಉದ್ಯಮದ ಬೆಳವಣಿಗೆಯಿಂದ ಆಸ್ತಿ ಬೆಲೆಗಳು ಹಾಗೂ ಬಾಡಿಗೆ ದರಗಳು ಮೂರು ಪಟ್ಟು ಹೆಚ್ಚಾಗಿವೆ. ಬೆಂಗಳೂರಿನಲ್ಲಿ ಮನೆ ಹುಡುಕುವ ಅನುಭವ 'ಭಯಾನಕ' ಎಂದು ನಿವಾಸಿಗಳೊಬ್ಬರು ಹಂಚಿಕೊಂಡಿದ್ದು, ಕೈಗೆಟಕುವ ದರದಲ್ಲಿ ವಸತಿ ದೊರೆಯುವುದು ಕಷ್ಟಕರ ಎಂದು ಅಲವತ್ತುಕೊಂಡಿದ್ದಾರೆ.

Optical Illusion: ಬುದ್ಧಿವಂತರಿಗೊಂದು ಸವಾಲ್;‌ ಜಸ್ಟ್ 9 ಸೆಕೆಂಡುಗಳಲ್ಲಿ ಈ ಗಾರ್ಡನ್‌ನಲ್ಲಿರುವ ಚಿಟ್ಟೆಯನ್ನು ಗುರುತಿಸಬಲ್ಲಿರಾ

ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಟ್ರೆಂಡಿಂಗ್ ಆಗುತ್ತಿದೆ. ಹೀಗಾಗಿ ಹೆಚ್ಚಿನವರು ಈ ಚಿತ್ರಗಳತ್ತ ಸಹಜವಾಗಿ ಗಮನ ಹರಿಸುತ್ತಾರೆ. ಆದರೆ ಈ ಟ್ರಿಕ್ಕಿ ಚಿತ್ರಗಳು ಬುದ್ಧಿವಂತಿಕೆ ಹಾಗೂ ದೃಷ್ಟಿ ಸಾಮರ್ಥ್ಯವನ್ನು ಪರೀಕ್ಷಿಸುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಇದೀಗ ಇಂತಹದೊಂದು ಚಿತ್ರ ವೈರಲ್ ಆಗಿದ್ದು ಉದ್ಯಾನವನದಲ್ಲಿರುವ ಬಣ್ಣದ ಚಿಟ್ಟೆಯನ್ನು ಕಂಡು ಹಿಡಿಯಬೇಕು. ಈ ಒಗಟು ಬಿಡಿಸಲು ನೀವು ರೆಡಿನಾ.

Viral: ಎಂಟು ವರ್ಷಗಳ ಕಾಲ ಕೆಲಸ ಮಾಡಿದ ಬಾಸ್‌ನ್ನು ವಜಾಗೊಳಿಸಿದ ಕಂಪನಿ ನಿರ್ಧಾರದಿಂದ ಉದ್ಯೋಗಿ ಶಾಕ್

ಈಗಿನ ಕಾಲದಲ್ಲಿ ಕೆಲಸಗಿಟ್ಟಿಸಿಕೊಳ್ಳುವುದು ಒಂದು ರೀತಿಯ ಕಷ್ಟ ಅದನ್ನು ಉಳಿಸಿಕೊಳ್ಳುವುದು ಮತ್ತೊಂದು ರೀತಿಯ ಸವಾಲು. ಹೀಗಾಗಿ ಯಾವುದೇ ಉದ್ಯೋಗಕ್ಕೂ ಗ್ಯಾರಂಟಿ ಇಲ್ಲ. ಏಕಾಏಕಿ ಕಂಪನಿಗಳು ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕುವ ನಿರ್ಧಾರಕ್ಕೆ ಬರುತ್ತೆ. ಇಲ್ಲೊಬ್ಬರು ಉದ್ಯೋಗಿ ತನ್ನ ಬಾಸ್‌ನ್ನು ಅಂತಹ ಪರಿಸ್ಥಿತಿಯಲ್ಲಿ ನೋಡಿದ್ದಾರೆ. ಎಂಟು ವರ್ಷಗಳ ಕಾಲ ಒಂದೇ ಕಂಪನಿಯಲ್ಲಿ ಕೆಲಸ ಮಾಡಿದ್ದ ಬಾಸ್‌ನ್ನು ಯಾವುದೇ ಸೂಚನೆ ನೀಡದೇ ವಜಾಗೊಳಿಸಿದ್ದಾರೆ. ತನ್ನ ಕಣ್ಣಾರೆ ನಡೆದ ಘಟನೆಯನ್ನು ಉದ್ಯೋಗಿ ಹಂಚಿಕೊಂಡಿದ್ದು, ಈ ಕುರಿತಾದ ಪೋಸ್ಟ್ ಸದ್ಯ ವೈರಲ್ ಆಗಿದೆ.

Viral: ವಿಶ್ವದ ಅತ್ಯಂತ ದುಬಾರಿ ವೈನ್ 7.63 ಕೋಟಿ ರೂಗೆ ಮಾರಾಟ, ಏನಿದರ ವಿಶೇಷತೆ?

ಹಳೆಯ ಮದ್ಯಕ್ಕೆ ಹೆಚ್ಚು ಬೆಲೆ ಎನ್ನುವುದು ತಿಳಿದೇ ಇದೆ. ಆದರೆ ಇದೀಗ ಅಕರ್ ಹರಾಜಿನಲ್ಲಿ 1945ರ ಡೊಮೈನ್ ಡೆ ಲಾ ರೊಮಾನಿ ಕಾಂಟಿ ವೈನ್ ಬಾಟಲಿ 7.63 ಕೋಟಿ ರೂಗೆ ಮಾರಾಟವಾಗುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದೆ. ಹಾಗಾದ್ರೆ ಅಪರೂಪದ 1945ರ ಈ ವೈನ್ ವಿಶೇಷತೆಯೇನು? ಈ ಕುರಿತಾದ ಇನ್ನಷ್ಟು ಮಾಹಿತಿ ಇಲ್ಲಿದೆ.

Optical Illusion: ಈ ಚಿತ್ರದಲ್ಲಿ ಹುಲಿಗಳ ನಡುವೆ ಅಡಗಿರುವ ಜೀಬ್ರಾವನ್ನು ಕಂಡು ಹಿಡಿಯಬಲ್ಲಿರಾ

ಸಾಮಾಜಿಕ ಜಾಲತಾಣದಲ್ಲಿ ಕಣ್ಣು ಹಾಗೂ ಮೆದುಳಿಗೆ ಸವಾಲೊಡ್ಡುವ ಕುತೂಹಲಕಾರಿ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ವೈರಲ್ ಆಗುತ್ತಿರುತ್ತವೆ. ಆದರೆ ಈ ಒಗಟಿನ ಚಿತ್ರಗಳು ನಿಮ್ಮ ಮೆದುಳಿಗೆ ಖಂಡಿತ ಕೆಲಸ ಕೊಡುತ್ತದೆ. ಈ ಒಗಟಿನ ಚಿತ್ರಗಳನ್ನು ಬಿಡಿಸುವುದು ಹೇಳುವಷ್ಟು ಸುಲಭವಲ್ಲ. ಇದೀಗ ಈ ಚಿತ್ರದಲ್ಲಿ ಹುಲಿಗಳ ನಡುವೆ ಅಡಗಿ ಕುಳಿತಿರುವ ಜೀಬ್ರಾವನ್ನು ಕಂಡು ಹಿಡಿಯಲು ನಿಮ್ಮಿಂದ ಸಾಧ್ಯವೇ ನೋಡಿ.

Optical Illusion: ಈ ಚಿತ್ರದಲ್ಲಿ ಮರೆ ಮಾಡಲಾಗಿರುವ ಬಾಳೆಹಣ್ಣನ್ನು ಗುರುತಿಸಬಲ್ಲಿರಾ

ನಿಮ್ಮ ಬುದ್ಧಿವಂತಿಕೆ ಪರೀಕ್ಷಿಸಿಕೊಳ್ಳಬೇಕೇ.. ಹಾಗಾದ್ರೆ ನೀವು ಆಫ್ಟಿಕಲ್ ಇಲ್ಯೂಷನ್ ಚಿತ್ರದತ್ತ ಒಮ್ಮೆ ಕಣ್ಣಾಯಿಸಿ. ಆದರೆ ಈ ಚಿತ್ರವು ಒಂದು ಕ್ಷಣ ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸಬಹುದು. ಆದರೆ ವೈರಲ್ ಆಗಿರುವ ಈ ಇಲ್ಯೂಷನ್‌ ಚಿತ್ರದಲ್ಲಿ ಬಾಳೆಹಣ್ಣು ಎಲ್ಲಿದೆ ಎಂದು ಪತ್ತೆ ಹಚ್ಚಬೇಕು. ಈ ಒಗಟು ಬಿಡಿಸಲು ನಿಮ್ಮಿಂದ ಸಾಧ್ಯವೇ ಎಂದು ಒಮ್ಮೆ ನೋಡಿ.

Viral: ಇದು ರೈತನ ವಿಭಿನ್ನ ರಾಮನವಮಿ ಸೆಲೆಬ್ರೇಶನ್; ಹೂಕೋಸಿನಲ್ಲಿ ಮೂಡಿ ಬಂದ ರಾಮ, ಸೀತೆ, ಹನುಮಂತ

ಯುಗಾದಿ ನಂತರ ಬರುವ ಹಬ್ಬವೇ ರಾಮನವಮಿ. ಹಿಂದೂಗಳ ಪ್ರಮುಖ ಹಬ್ಬವಾದ ರಾಮನವಮಿಯನ್ನು ದೇಶದಾದ್ಯಂತ ಅದ್ದೂರಿಯಿಂದ ಆಚರಿಸಲಾಗಿದೆ. ಈ ಆದರೆ ಇಲ್ಲೊಬ್ಬ ಯುವ ರೈತ ವಿಭಿನ್ನವಾಗಿ ರಾಮನವಮಿ ಆಚರಿಸಿದ್ದಾನೆ. ತಾನು ಬೆಳೆದ ಹೂಕೋಸಿನಲ್ಲಿ ರಾಮ, ಸೀತೆ ಹಾಗೂ ಹನುಮಂತ ಚಿತ್ರ ಬಿಡಿಸಿ ಹಬ್ಬವನ್ನು ಸಂಭ್ರಮಿಸಿದ್ದಾನೆ, ಈ ಕುರಿತಾದ ಸ್ಟೋರಿ ಇಲ್ಲಿದೆ.

Optical Illusion: ಬುದ್ಧಿವಂತರಿಗೊಂದು ಸವಾಲ್;‌ ಈ ಚಿತ್ರದಲ್ಲಿರುವ ಕರಡಿಯನ್ನು10 ಸೆಕೆಂಡುಗಳಲ್ಲಿ ಗುರುತಿಸಿ

ಮೆದುಳಿಗೆ ಕೆಲಸ ನೀಡುವ ಮ್ಯಾಥ್ಸ್‌ ಪಝಲ್‌ ಗೇಮ್‌ಗಳು, ಆಪ್ಟಿಕಲ್‌ ಇಲ್ಯೂಷನ್‌, ಬ್ರೈನ್‌ ಟೀಸರ್‌ ಸೇರಿದಂತೆ ಇನ್ನಿತ್ತರ ಒಗಟಿನ ಚಿತ್ರಗಳನ್ನು ಬಿಡಿಸುತ್ತ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ಇದೀಗ ಇಲ್ಲೊಂದು ಅಂತಹದ್ದೇ ಚಿತ್ರ ವೈರಲ್ ಆಗಿದ್ದು, ಆ ಫೋಟೋದಲ್ಲಿರುವ ಕರಡಿಯನ್ನು ಪತ್ತೆ ಹಚ್ಚುವ ಸವಾಲು ನೀಡಲಾಗಿದೆ. ನಿಮ್ಮ ಮೆದುಳಿಗೆ ಕೆಲಸ ನೀಡಿ ಒಗಟು ಬಿಡಿಸಿ. ಮೆದುಳಿಗೆ ಕೆಲಸ ನೀಡುವ ಮ್ಯಾಥ್ಸ್‌ ಪಝಲ್‌ ಗೇಮ್‌ಗಳು, ಆಪ್ಟಿಕಲ್‌ ಇಲ್ಯೂಷನ್‌, ಬ್ರೈನ್‌ ಟೀಸರ್‌ ಸೇರಿದಂತೆ ಇನ್ನಿತ್ತರ ಒಗಟಿನ ಚಿತ್ರಗಳನ್ನು ಬಿಡಿಸುತ್ತ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ಇದೀಗ ಇಲ್ಲೊಂದು ಅಂತಹದ್ದೇ ಚಿತ್ರ ವೈರಲ್ ಆಗಿದ್ದು, ಆ ಫೋಟೋದಲ್ಲಿರುವ ಕರಡಿಯನ್ನು ಪತ್ತೆ ಹಚ್ಚುವ ಸವಾಲು ನೀಡಲಾಗಿದೆ. ನಿಮ್ಮ ಮೆದುಳಿಗೆ ಕೆಲಸ ನೀಡಿ ಒಗಟು ಬಿಡಿಸಿ.

Viral: ಬೆಂಗಳೂರಿಗೆ ಹೋಗಲು ಇಷ್ಟವಿಲ್ಲ; 34 ಲಕ್ಷ ರೂ ಸಂಬಳದ ಜಾಬ್ ಆಫರ್ ತಿರಸ್ಕರಿಸಿದ ಯುವಕ

ಕೈಯಲ್ಲಿ ಒಂದು ಉದ್ಯೋಗವಿದ್ದರೆ ಮಾತ್ರ ಮರ್ಯಾದೆ. ಹೀಗಾಗಿ ಎಷ್ಟೋ ಯುವಕನು ಊರು ಬಿಟ್ಟು ದೂರದ ಬೆಂಗಳೂರು, ಮುಂಬೈ ಹೀಗೆ ಇತರ ಊರುಗಳಿಗೆ ಹೋಗ್ತಾರೆ. ಆದರೆ ಇಲ್ಲೊಬ್ಬ ಯುವಕ ಬರೋಬ್ಬರಿ 34 ಲಕ್ಷ ರೂ ಪ್ಯಾಕೇಜ್‌ ಹೊಂದಿದ್ದ ಕೆಲಸದ ಆಫರ್ ತಿರಸ್ಕರಿಸಿದ್ದು, ಇದರ ಹಿಂದಿನ ಕಾರಣ ತಿಳಿದ್ರೆ ನೀವು ಶಾಕ್ ಆಗ್ತೀರಾ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ರಸ್ತೆ ದಾಟಲು ಸಹಾಯ ಮಾಡಿದ ವ್ಯಕ್ತಿಗೆ ಸೊಂಡಿಲೆತ್ತಿ ಧನ್ಯವಾದ ತಿಳಿಸಿದ ಆನೆಗಳ ಹಿಂಡು

ಆನೆಗಳು ಭಾವನಾತ್ಮಕ ಮಾತ್ರವಲ್ಲ, ಬುದ್ಧಿವಂತ ಜೀವಿಗಳು ಎನ್ನುವುದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ರಸ್ತೆ ದಾಟಲು ಸಹಾಯ ಮಾಡಿದ ವ್ಯಕ್ತಿಗೆ ಕೃತಜ್ಞತೆ ಸಲ್ಲಿಸಿದ ಆನೆಗಳ ವಿಡಿಯೋ ಸದ್ಯ ವೈರಲ್ ಆಗಿದೆ. ಈ ಕ್ಲಿಪಿಂಗ್ ನೋಡಿದ ನೆಟ್ಟಿಗರು ಪ್ರಾಣಿಗಳ ಗುಣಕ್ಕೆ ಕಳೆದು ಹೋಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಬೆಂಗ್ಳೂರಿನಲ್ಲಿ ತಿಂಗಳ ಬಾಡಿಗೆಗೆ 40,000 ರೂ ಖರ್ಚು ಮಾಡುವ ಹಿಂದಿನ ಕಾರಣ ವಿವರಿಸಿದ ವ್ಯಕ್ತಿ

ಮನೆ ಮಾಲೀಕರ ದುರಾಸೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಕಡಿಮೆ ವೆಚ್ಚದ ಬಾಡಿಗೆ ಮನೆ ಸಿಗೋದು ಕಷ್ಟನೇ. ಹೀಗಾಗಿ ಹೇಳಿದ್ದಷ್ಟು ಬಾಡಿಗೆ ಕೊಟ್ಟು ಕೆಲವರು ಬಾಡಿಗೆ ಮನೆಯಲ್ಲಿ ಉಳಿಯುತ್ತಾರೆ. ಆದರೆ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ 40,000 ರೂ ಬಾಡಿಗೆ ಏಕೆ ಪಾವತಿಸುತ್ತೇನೆಂದು ಎಂದು ವಿವರಿಸಿದ್ದು, ಹಿಂದಿನ ಕಾರಣವನ್ನು ಬಿಚ್ಚಿಟ್ಟಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಇದು ಪಾಕ್ ಲೀಗ್​​ ವಿಡಿಯೋನಾ? ವೈರಲ್ ಆದ ವಿಡಿಯೋ ಹಿಂದಿನ ಅಸಲಿಯತ್ತೇನು?
ಇದು ಪಾಕ್ ಲೀಗ್​​ ವಿಡಿಯೋನಾ? ವೈರಲ್ ಆದ ವಿಡಿಯೋ ಹಿಂದಿನ ಅಸಲಿಯತ್ತೇನು?
ಬೆಂಗಳೂರಿನ ಯುವತಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಐಐಟಿ ಬಾಬಾ
ಬೆಂಗಳೂರಿನ ಯುವತಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಐಐಟಿ ಬಾಬಾ
ನೀವು ಮನೆಯಲ್ಲಿ ಸರಿಯಾದ ದಿಕ್ಕಿನಲ್ಲೇ ಕಸ ಗುಡಿಸುತ್ತಿದ್ದೀರಾ?
ನೀವು ಮನೆಯಲ್ಲಿ ಸರಿಯಾದ ದಿಕ್ಕಿನಲ್ಲೇ ಕಸ ಗುಡಿಸುತ್ತಿದ್ದೀರಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್