AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending

Trending

ದೇಶದಲ್ಲಿ ನಡೆಯುವ ಅಚ್ಚರಿಯ ಘಟನೆಗಳನ್ನು ಹಾಗೂ ವೈರಲ್​​ ಆಗಿರುವ ಸುದ್ದಿಗಳನ್ನು ಇಲ್ಲಿ ಪ್ರಕಟ ಮಾಡಲಾಗುವುದು. ಜನರಿಗೆ ಆಸಕ್ತಿದಾಯಕ ವಿಡಿಯೋಗಳನ್ನು ಇಲ್ಲಿ ನೀಡಲಾಗಿದೆ, ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿರುವ ವಿಡಿಯೋಗಳನ್ನು ಹಾಗೂ ಸುದ್ದಿಗಳನ್ನು ಇಲ್ಲಿ ಅಪ್ಡೇಟ್​​​ ಮಾಡಲಾಗುವುದು. ಓದುಗರಿಗೆ ಈ ಜಗತ್ತಿನಲ್ಲಿ ತಿಳಿಯದ ಸುದ್ದಿಗಳನ್ನು ಟ್ರೆಂಡಿಂಗ್​​​ನಲ್ಲಿ ನೀಡಲಾಗುವುದು. ಅದೆಷ್ಟು ಜನರಿಗೆ ನಮ್ಮ ಸುತ್ತ-ಮುತ್ತಲಿನಲ್ಲಿ ನಡೆಯುವ ವಿಚಾರಗಳು ತಿಳಿದಿರುವುದಿಲ್ಲ. ಹಾಗೂ ಅದನ್ನು ತಿಳಿಸುವ ಕೆಲಸವನ್ನು ಟ್ರೆಂಡಿಂಗ್​​​ ಕ್ಯಾಟಗರಿಯಲ್ಲಿ ತಿಳಿಸಲಾಗುವುದು

ಇನ್ನೂ ಹೆಚ್ಚು ಓದಿ

Viral: ಮೊದಲ ಬಾರಿಗೆ ಚೆನ್ನೈಗೆ ಭೇಟಿ ನೀಡಿ ಅನುಭವ ಹಂಚಿಕೊಂಡ ಟ್ರಾವೆಲರ್

ಕೆಲವರಿಗೆ ಊರು ಸುತ್ತುವುದು ಅಂದ್ರೆ ಅದೇನೋ ಕ್ರೇಜ್. ದೆಹಲಿಯಿಂದ ಮೊದಲ ಬಾರಿಗೆ ಚೆನ್ನೈಗೆ ಬಂದಿಳಿದ ಟ್ರಾವೆಲರ್ ಒಬ್ಬರು ಈ ನಗರವನ್ನು ಮೆಚ್ಚಿಕೊಂಡಿದ್ದಾರೆ. ದೆಹಲಿಗೆ ಹೋಲಿಸಿದ್ರೆ ಚೆನ್ನೈನ ಜನರ ಜೀವನದ ವೇಗಕ್ಕೂ, ನಗರವು ಜನಸಂದಣಿಯನ್ನು ನಿರ್ವಹಿಸುವ ವಿಧಾನಕ್ಕೂ ಹಲವು ವ್ಯತ್ಯಾಸಗಳಿವೆ. ಇಲ್ಲಿನ ಶಾಂತ ವಾತಾವರಣ ಹಾಗೂ ಸ್ವಚ್ಛತೆಯನ್ನು ಶ್ಲಾಘಿಸಿದ್ದಾರೆ. ಈ ಕುರಿತಾದ ಪೋಸ್ಟ್ ಸದ್ಯ ವೈರಲ್ ಆಗಿದೆ.

Viral: ಆರ್ಡರ್ ಮಾಡಿದ್ದು ಸ್ಮಾರ್ಟ್‌ ಫೋನ್, ಆದ್ರೆ ಮನೆಗೆ ಬಂದ ಪಾರ್ಸೆಲ್ ನೋಡಿ ಯುವಕ ಫುಲ್ ಶಾಕ್

ಪ್ರತಿಯೊಂದನ್ನು ಆನ್ಲೈನ್ ನಲ್ಲಿ ಖರೀದಿ ಮಾಡುವವರೇ ಹೆಚ್ಚು. ಇದೀಗ ಇಲ್ಲೊಬ್ಬ ಯುವಕನು ಆನ್ಲೈನ್ ನಲ್ಲಿ ಸ್ಮಾರ್ಟ್‌ಫೋನ್ ಆರ್ಡರ್ ಮಾಡಿದ್ದಾನೆ. ಆದರೆ ಈ ಆರ್ಡರ್ ಮಾಡಿದ್ದ 35,000 ರೂಪಾಯಿ ಬೆಲೆಯ ವಿವೋ ಮೊಬೈಲ್ ಬದಲಿಗೆ ಸೋಪ್‌ ಬಾಕ್ಸ್ ಕೈ ಸೇರಿದ್ದು, ಯುವಕನು ಬಾಕ್ಸ್ ತೆರೆಯುತ್ತಿದ್ದಂತೆ ಶಾಕ್ ಆಗಿದ್ದಾನೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಗೂಗಲ್‌ನಲ್ಲಿ ಉದ್ಯೋಗ ಗಿಟ್ಟಿಸಿಕೊಂಡು ಭಾವನಾತ್ಮಕ ಜರ್ನಿ ಹಂಚಿಕೊಂಡ ಯುವತಿ

ಕೆಲಸ ಗಿಟ್ಟಿಸಿಕೊಳ್ಳೋದು ಅಷ್ಟು ಸುಲಭವಲ್ಲ. ಹೀಗಿರುವಾಗ ಪ್ರಸಿದ್ಧ ಟೆಕ್ ದೈತ್ಯ ಗೂಗಲ್ ಸಂಸ್ಥೆಯಲ್ಲಿ ದೆಹಲಿ ಮೂಲದ ಯುವತಿಯೊಬ್ಬಳು ಕೆಲಸ ಗಿಟ್ಟಿಸಿಕೊಂಡಿದ್ದಾಳೆ. ಈ ಯುವತಿ ತನ್ನ ವೃತ್ತಿಜೀವನ ಭಾವನಾತ್ಮಕ ಪ್ರಯಾಣದ ಬಗ್ಗೆ ಹೇಳಿಕೊಂಡಿದ್ದಾಳೆ. ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ಪೋಸ್ಟ್‌ಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Viral: ಹಳ್ಳಿಯಿಂದ ಬೆಂಗಳೂರಿಗೆ ಬಂದ ಯುವಕರಿಂದ ಹೆಚ್ಚುವರಿ ಹಣ ವಸೂಲಿ ಮಾಡಿದ ಆಟೋಚಾಲಕ

ಬೆಂಗಳೂರಿಗೆ ಹೊಸಬರು ಯಾರಾದ್ರೂ ಬಂದರೆ ಆಟೋ ಚಾಲಕರು ಹೆಚ್ಚುವರಿ ಹಣ ಸುಲಿಗೆ ಮಾಡುತ್ತಾರೆ. ಆದರೆ ಇದೀಗ ಹಳ್ಳಿಯಿಂದ ಬಂದ ಯುವಕರಿಬ್ಬರಿಂದ ಆಟೋ ಚಾಲಕ ಹಣ ದೋಚಿದ್ದಾನೆ. ಟೆಕ್ಕಿಯೊಬ್ಬರು ಮಾಡಿದ ಪೋಸ್ಟ್ ಸದ್ಯ ವೈರಲ್ ಆಗಿದ್ದು ನೆಟ್ಟಿಗರು ಆಟೋ ಚಾಲಕನ ವಿರುದ್ಧ ಗರಂ ಆಗಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ

Viral: ಮನೆ ಖಾಲಿ ಮಾಡ್ತೇನೆ ಎಂದ ಯುವತಿಗೆ ಮನ ಮುಟ್ಟುವಂತೆ ರಿಪ್ಲೈ ಕೊಟ್ಟ ಓನರ್

ಬಾಡಿಗೆ ಮನೆಯಲ್ಲಿದ್ದರೆ ಈ ಮನೆ ಮಾಲೀಕರು ಒಂದಲ್ಲ ಒಂದು ವಿಷ್ಯಕ್ಕೆ ಕಿರಿಕಿರಿ ಮಾಡೋದನ್ನು ನೀವು ನೋಡಿರುತ್ತೀರಿ. ಹೀಗಿರುವಾಗ ಮನೆ ಖಾಲಿ ಮಾಡ್ತೇನೆ ಎಂದ ಯುವತಿ ಮನೆ ಓನರ್ ಕೊಟ್ಟ ಉತ್ತರ ಕೇಳಿದ್ರೆ ನೀವು ಶಾಕ್ ಆಗ್ತೀರಾ. ಓನರ್ ಮಾಡಿದ ಮೆಸೇಜ್ ಸ್ಕ್ರೀನ್ ಶಾಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಈ ಎರಡು ಚಿತ್ರಗಳಲ್ಲಿನ ಮೂರು ವ್ಯತ್ಯಾಸಗಳನ್ನು ಗುರುತಿಸಬಲ್ಲಿರಾ

ಆಪ್ಟಿಕಲ್‌ ಇಲ್ಯೂಷನ್‌ ಸೇರಿದಂತೆ ಒಗಟಿನ ಚಿತ್ರಗಳನ್ನು ಬಿಡಿಸುವುದಲ್ಲಿರುವ ಖುಷಿಯೇ ಬೇರೆ. ಈ ಚಿತ್ರಗಳು ನಿಮ್ಮ ದೃಷ್ಟಿ ಸಾಮರ್ಥ್ಯ ಹಾಗೂ ಬುದ್ಧಿವಂತಿಕೆಗೆ ನೂರಕ್ಕೆ ನೂರರಷ್ಟು ಸವಾಲೊಡ್ದುತ್ತವೆ. ನೀವು ಈ ಎರಡು ಇಲ್ಯೂಷನ್ ಚಿತ್ರಗಳಲ್ಲಿನ ಮೂರು ವ್ಯತ್ಯಾಸಗಳನ್ನು ಗುರುತಿಸಬಲ್ಲಿರಾ. ಈ ಟ್ರಿಕ್ಕಿ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಿ.

Viral: ರಾಜೀನಾಮೆ ನೀಡಿದ್ರೂ ಕಂಪನಿ ಕೆಲಸದ ಕೊನೆಯ ದಿನವನ್ನು ದೃಢಪಡಿಸಿಲ್ಲ; ನೆಟ್ಟಿಗರಲ್ಲಿ ಸಲಹೆ ಕೇಳಿದ ಉದ್ಯೋಗಿ

ಕಂಪನಿಯಿಂದ ಉದ್ಯೋಗ ತೊರೆಯುವಾಗ ಔಪಚಾರಿಕವಾಗಿ ರಾಜೀನಾಮೆ ನೀಡಲಾಗುತ್ತದೆ. ಇದೇ ವೇಳೆ ಕಂಪನಿಗಳು ತೊಂಭತ್ತು ದಿನಗಳ ಕಾಲ ನೋಟೀಸ್ ಅವಧಿಯನ್ನು ನೀಡುತ್ತವೆ. ಆದರೆ ಉದ್ಯೋಗಿಯೊಬ್ಬರು ರಾಜೀನಾಮೆ ನೀಡಿದ್ರೂ ಕಂಪನಿ ಕೆಲಸದ ಕೊನೆಯ ದಿನವನ್ನು ದೃಢೀಕರಿಸುತ್ತಿಲ್ಲ ಎಂದು ಹೇಳಿದ್ದಾರೆ. ಹೊಸ ಕಂಪನಿಗೆ ಸೇರಬೇಕಾಗಿದೆ, ತಾನೇನು ಮಾಡಬೇಕು ಎಂದು ನೆಟ್ಟಿಗರಲ್ಲಿ ಸಲಹೆ ಕೇಳಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ತಿಂಗಳ ಸಂಬಳ 3.5 ಲಕ್ಷ ರೂಯಿದ್ರೂ ಉಳಿತಾಯ ಮಾತ್ರ ಶೂನ್ಯ; ಬೆಂಗಳೂರಿನ ವ್ಯಕ್ತಿ ಹೀಗೆಂದಿದ್ದೇಕೆ?

ಬೆಂಗಳೂರಿನಂತಹ ದೊಡ್ಡ ನಗರದಲ್ಲಿ ಜೀವನ ನಿರ್ವಹಣೆಯೇ ಕಷ್ಟಕರ. ತಿಂಗಳಿಗೆ ಲಕ್ಷ ಲಕ್ಷ ರೂ ದುಡಿದ್ರೂ ಕೈಯಲ್ಲಿ ಮಾತ್ರ ದುಡ್ಡೇ ನಿಲ್ಲಲ್ಲ. ಇದೀಗ ಬೆಂಗಳೂರಿನ ಟೆಕ್ಕಿಯೊಬ್ಬರದ್ದು ಇದೆ ಕಥೆ. ತಿಂಗಳಿಗೆ 3.5 ಲಕ್ಷ ರೂ ಸಂಪಾದಿಸುತ್ತಿದ್ದರೂ ದಿನೇ ದಿನೇ ಹೆಚ್ಚುತ್ತಿರುವ ವೆಚ್ಚದಿಂದಾಗಿ ತಿಂಗಳಿಗೆ 50,000 ರೂ ಉಳಿಸಲು ಕಷ್ಟಪಡುತ್ತಿದ್ದಾರಂತೆ. ಈ ಬಗ್ಗೆ ಪೋಸ್ಟ್ ಹಂಚಿಕೊಂಡು ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Optical Illusion: ನಿಮ್ಮ ಬುದ್ಧಿವಂತಿಕೆಗೊಂದು ಸವಾಲ್; ಈ ಮೂವರಲ್ಲಿ ಬಾಸ್ ಯಾರೆಂದು ಹೇಳಬಲ್ಲಿರಾ

ಒಗಟಿನ ಆಟಗಳನ್ನು ಆಡುವುದರಲ್ಲಿರುವ ಮಜಾನೇ ಬೇರೆ. ಹೀಗಾಗಿ ಕೆಲವರು ಬಿಡುವು ಸಿಕ್ಕಾಗಲೆಲ್ಲಾ ಇಲ್ಯೂಷನ್ ಚಿತ್ರಗಳತ್ತ ಕಣ್ಣು ಹಾಯಿಸುತ್ತಾರೆ. ಇದೀಗ ವೈರಲ್ ಆಗಿರುವ ಭ್ರಮೆ ಉಂಟು ಮಾಡುವ ಚಿತ್ರದಲ್ಲಿ ಬಾಸ್ ಯಾರೆಂದು ಹೇಳಬೇಕು. ಈ ಒಗಟು ಬಿಡಿಸಿ ನೀವು ಜಾಣರು ಎನಿಸಿಕೊಳ್ಳಲು ರೆಡಿ ಇದ್ದೀರಾ.

Viral: 40 ಸಾವಿರ ರೂ ಮನೆ ಬಾಡಿಗೆ, 2.4 ಲಕ್ಷ ರೂ ಭದ್ರತಾ ಠೇವಣಿ; ಬೆಂಗಳೂರಿನಲ್ಲಿ ಮನೆ ಹುಡುಕುತ್ತಿದ್ದ ವ್ಯಕ್ತಿಗೆ ಫುಲ್ ಶಾಕ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆಮಾಲೀಕರು ಬಾಡಿಗೆ ಹಾಗೂ ಠೇವಣಿ ಹೆಸರಿನಲ್ಲಿ ಸುಲಿಗೆ ಮಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿಯಾಗಿದೆ ಈ ಪೋಸ್ಟ್. ಬೆಂಗಳೂರಿನಲ್ಲಿ ಫ್ಲಾಟ್‌ಗಾಗಿ ಹುಡುಕುತ್ತಿದ್ದಾಗ ಈ ವ್ಯಕ್ತಿಯೊಬ್ಬರ ಬಳಿ ಮನೆಮಾಲೀಕರು 40,000 ರೂ ಬಾಡಿಗೆ ಹಾಗೂ 2.4 ಲಕ್ಷ ರೂ ಭದ್ರತಾ ಠೇವಣಿ ನೀಡುವಂತೆ ಕೇಳಿದ್ದಾರೆ. ತನ್ನ ಸ್ನೇಹಿತನ ಮನೆ ಹುಡುಕಾಟದ ಅನುಭವದ ಬಗ್ಗೆ ವ್ಯಕ್ತಿಯೊಬ್ಬರು ಹಂಚಿಕೊಂಡ ಪೋಸ್ಟ್ ಚರ್ಚೆಗೆ ನಾಂದಿ ಹಾಡಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಇದು ಟೆಕ್ನಾಲಜಿ ಎಫೆಕ್ಟ್; ಸ್ಮಾರ್ಟ್‌ ವಾಚ್‌ನಲ್ಲೇ ಕ್ಯೂಆರ್ ಕೋಡ್ ಅಳವಡಿಸಿಕೊಂಡ ಬೆಂಗಳೂರಿನ ಆಟೋ ಡ್ರೈವರ್‌

ನಾವಿಂದು ತಂತ್ರಜ್ಞಾನಕ್ಕೆ ಎಷ್ಟು ಒಗ್ಗಿಕೊಂಡಿದ್ದೇವೆ ಅಂದ್ರೆ ಟೆಕ್ನಾಲಜಿ ಇಲ್ಲದೇ ನಾವಿಲ್ಲ. ಹೌದು, ಆಟೋ ಚಾಲಕರು, ಬೆಂಗಳೂರಿನ ಜನತೆ ಟೆಕ್ನಾಲಜಿಯನ್ನು ವಿಭಿನ್ನವಾಗಿ ಬಳಸಿಕೊಳ್ಳುತ್ತಾರೆ. ಇದೀಗ ಬೆಂಗಳೂರಿನ ಆಟೋ ಚಾಲಕನೊಬ್ಬ ಆಟೋದಲ್ಲಿ ಹಣ ಪಾವತಿ ಮಾಡಲು ಕ್ಯೂಆರ್ ಕೋಡ್‌ನ್ನು ಸ್ಮಾರ್ಟ್ ವಾಚ್‌ನಲ್ಲಿ ಅಳವಡಿಸಿಕೊಂಡಿದ್ದಾನೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಎಚ್ಎಸ್ಆರ್ ಲೇಔಟ್‌ನ 1BHK ನಲ್ಲಿ ವಾಸಿಸುವ ಮಹಿಳೆಯ ತಿಂಗಳ ಖರ್ಚು ಎಷ್ಟು ಗೊತ್ತಾ?

ಬೆಂಗಳೂರು ನಗರದಲ್ಲಿ ಜೀವನ ವೆಚ್ಚ ಎಷ್ಟು ದುಬಾರಿ ಆಗಿದೆ ಎಂಬುದಕ್ಕೆ ಈ ಪೋಸ್ಟ್ ನೈಜ ಉದಾಹರಣೆಯಾಗಿದೆ. ಬೆಂಗಳೂರಿನ ನಿವಾಸಿಯೊಬ್ಬರು ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ 1 ಬಿಎಚ್‌ಕೆ ಅಪಾರ್ಟ್‌ಮೆಂಟ್‌ ಗೆ 36000 ರೂ ಪಾವತಿಸುತ್ತಿದ್ದಾರೆ. ಈ ಮಹಿಳೆ ತನ್ನ ಮಾಸಿಕ ವೆಚ್ಚಗಳ ಮಾಹಿತಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಮತ್ತೊಮ್ಮೆ ದೊಡ್ಡ ಚರ್ಚೆ ನಾಂದಿ ಹಾಡಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!