AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget

Budget

ಬಜೆಟ್ ಎಂದರೆ ಆಯವ್ಯಯ ಪತ್ರ. ಆಯ ಎಂದರೆ ಆದಾಯ, ವ್ಯಯ ಎಂದರೆ ಖರ್ಚು. ಯೂನಿಯನ್ ಬಜೆಟ್ ಅಥವಾ ಕೇಂದ್ರ ಬಜೆಟ್ ಎಂಬುದು ಕೇಂದ್ರ ಸರ್ಕಾರ ರೂಪಿಸುವ ಬಜೆಟ್. ಇದು ಒಂದು ಹಣಕಾಸು ವರ್ಷದ ಹಣಕಾಸು ಲೆಕ್ಕಾಚಾರವಾಗಿದೆ. ಮುಂದಿನ ಹಣಕಾಸು ವರ್ಷಕ್ಕೆ ಸರ್ಕಾರದ ಆದಾಯ ಮತ್ತು ಖರ್ಚುಗಳ ಒಂದು ಲೆಕ್ಕಪುಸ್ತಕವೇ ಬಜೆಟ್. ಇಡೀ ಒಂದು ವರ್ಷದಲ್ಲಿ ಸರ್ಕಾರದಿಂದ ಯಾವುದೆಲ್ಲಾ ಮತ್ತು ಎಷ್ಟೆಲ್ಲಾ ಆದಾಯ ಬರಬಹುದು. ಯಾವ್ಯಾವುದಕ್ಕೆ ಎಷ್ಟೆಷ್ಟು ವೆಚ್ಚ ಮಾಡಬೇಕು ಎಂದು ನಮೂದಿಸಲಾಗುತ್ತದೆ. ಒಂದು ಹಣಕಾಸು ವರ್ಷ ಎಂದರೆ ಏಪ್ರಿಲ್ 1ರಿಂದ ಮುಂದಿನ ವರ್ಷದ ಮಾರ್ಚ್ 31ರವರೆಗಿನ ಅವಧಿ. ಬಜೆಟ್ ಅನ್ನು ರೆವೆನ್ಯೂ ಬಜೆಟ್ ಮತ್ತು ಕ್ಯಾಪಿಟಲ್ ಬಜೆಟ್ ಎಂದು ವರ್ಗೀಕರಿಸಲಾಗುತ್ತದೆ. ರೆವೆನ್ಯೂ ಬಜೆಟ್​ನಲ್ಲಿ ತೆರಿಗೆ ಮತ್ತು ತೆರಿಗೆಯೇತರ ಮೂಲಗಳಿಂದ ಬರುವ ಆದಾಯಗಳು, ಮತ್ತು ಆ ಆದಾಯ ಹಣವನ್ನು ಹೇಗೆಲ್ಲಾ ವಿನಿಯೋಗಿಸಲಾಗುತ್ತದೆ ಎಂಬುದನ್ನು ನಿರ್ದಿಷ್ಟಪಡಿಸಲಾಗುತ್ತದೆ. ಕ್ಯಾಪಿಟಲ್ ಬಜೆಟ್​ನಲ್ಲಿ ಸರ್ಕಾರ ಸಾರ್ವಜನಿಕ ಸಾಲಗಳಿಂದ ಪಡೆಯಬಹುದಾದ ಹಣದ ವಿವರ ಹಾಗೂ ಆ ಹಣ ಎಲ್ಲೆಲ್ಲಿ ಬಳಕೆ ಆಗುತ್ತದೆ ಎಂಬುದನ್ನು ನಿರ್ದಿಷ್ಟಪಡಿಸಲಾಗುತ್ತದೆ.

ಇನ್ನೂ ಹೆಚ್ಚು ಓದಿ

Union Budget 2026: ಜನವರಿ 28ರಿಂದ ಸಂಸತ್ ಅಧಿವೇಶನ ಆರಂಭ; ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್ ಮಂಡನೆ

Union Budget Session 2026: ಈ ವರ್ಷದ ಸಂಸತ್ ಬಜೆಟ್ ಅಧಿವೇಶನ ಜನವರಿ 28ರಿಂದ ಆರಂಭವಾಗಲಿದೆ. 2026-27ರ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1ರಂದು ಸಂಸತ್ತಿನಲ್ಲಿ ಮಂಡಿಸಲಾಗುವುದು. ಇದಕ್ಕೂ ಮೊದಲು, ಆರ್ಥಿಕ ಸಮೀಕ್ಷೆಯ ವರದಿಯನ್ನು ಜನವರಿ 29ರಂದು ಬಿಡುಗಡೆ ಮಾಡಲಾಗುತ್ತದೆ. ಈ ಅಧಿವೇಶನದಲ್ಲಿ ಬಜೆಟ್ ಚರ್ಚೆಗಳು, ಸಬ್ಸಿಡಿ ಬೇಡಿಕೆಗಳು ಮತ್ತು ಪ್ರಮುಖ ಆರ್ಥಿಕ ನೀತಿಗಳ ಕುರಿತು ವಿವರವಾದ ಚರ್ಚೆಗಳು ನಡೆಯಲಿವೆ. ಸಾರ್ವಜನಿಕರು, ವ್ಯಾಪಾರಿಗಳು, ಕೈಗಾರಿಕೋದ್ಯಮಿಗಳು ಮತ್ತು ತೆರಿಗೆದಾರರು ಎಲ್ಲರೂ ಈ ಬಜೆಟ್ ಬಗ್ಗೆ ಬಹಳ ನಿರೀಕ್ಷೆಯಿಟ್ಟುಕೊಂಡಿದ್ದಾರೆ.

ಬರಲಿದೆ ಹೊಸ ಆದಾಯ ತೆರಿಗೆ ಕಾಯ್ದೆ; ಬಜೆಟ್​ನಲ್ಲಿ ಘೋಷಣೆ, ಏ. 1ರಿಂದ ಜಾರಿ

New Income Tax law come into effect from 2026 April 1st: 1961ರ ಇನ್ಕಮ್ ಟ್ಯಾಕ್ಸ್ ಕಾಯ್ದೆಯನ್ನು ರದ್ದುಗೊಳಿಸಿ ಹೊಸ ಆದಾಯ ತೆರಿಗೆ ಕಾಯ್ದೆ ರೂಪಿಸಲಾಗಿದೆ. ಮುಂಬರುವ ಬಜೆಟ್​ನಲ್ಲಿ ಇದನ್ನು ಘೋಷಿಸಲಾಗುತ್ತಿದ್ದು, ಏಪ್ರಿಲ್ 1ರಂದು ಜಾರಿಗೆ ತರಲಾಗುತ್ತದೆ. ಈ ಕಾಯ್ದೆಗೆ ಸಂಸತ್ತಿನ ಅನುಮೋದನೆ ಇದೆ. ಹೊಸ ಕಾಯ್ದೆಯಲ್ಲಿ ನಿಯಮಗಳು ಸರಳಗೊಂಡಿವೆ.

Railway stocks: ಬಜೆಟ್​ಗೆ ಮುಂಚೆ ರೈಲ್ವೆ ಕ್ಷೇತ್ರದ ಯಾವ ಷೇರುಗಳನ್ನು ಖರೀದಿಸಬಹುದು?

Railway stocks to Buy Ahead of Budget 2026: ಫೆಬ್ರುವರಿ 1ರಂದು ಬಜೆಟ್ ಮಂಡನೆಯಾಗಲಿದ್ದು, ಈ ಬಾರಿ ರೈಲ್ವೆ ಕ್ಷೇತ್ರದ ಮತ್ತಷ್ಟು ಬಲವರ್ಧನೆಗೆ ಗಮನ ಹರಿಸುವ ನಿರೀಕ್ಷೆ ಇದೆ. ಇತ್ತೀಚೆಗೆ ಇಲಾಖೆಯ ರೈಲು ಪ್ರಯಾಣ ದರವನ್ನು ಏರಿಸಿದೆ. ಇದರಿಂದ ಈ ಕ್ಷೇತ್ರಕ್ಕೆ ಹೆಚ್ಚಿನ ಆದಾಯ ಬರುವ ನಿರೀಕ್ಷೆ ಇದೆ. ಬಜೆಟ್​ನಲ್ಲಿ 1.3 ಲಕ್ಷ ಕೋಟಿ ರೂ ಬಂಡವಾಳ ವೆಚ್ಚ ಬರುವ ನಿರೀಕ್ಷೆ ಇದೆ. ಹೀಗಾಗಿ, ರೈಲ್ವೆ ಸ್ಟಾಕ್​ಗಳಿಗೆ ಬೇಡಿಕೆ ಹೆಚ್ಚಿದೆ.

ಫೆಬ್ರುವರಿ 1, ಭಾನುವಾರ; ಅಂದೇ ಕೇಂದ್ರ ಬಜೆಟ್ ಮಂಡನೆ ಆಗುತ್ತಾ?

Union Budget 2026-27 to be presented on Feb 1st, Sunday: ಬಜೆಟ್ ಮಂಡನೆಯ ದಿನವಾದ ಫೆಬ್ರುವರಿ 1, ಸಮೀಪಿಸುತ್ತಿದೆ. ಅಂದು ವಾರಾಂತ್ಯ, ಅದರಲ್ಲೂ ಭಾನುವಾರವಾದ್ದರಿಂದ ಬೇರೆ ದಿನ ಬಜೆಟ್ ಮಂಡಿಸಬಹುದಾ ಎನ್ನುವ ಪ್ರಶ್ನೆ ಎದ್ದಿದೆ. ಆದರೆ, ಭಾನುವಾರವಾಗಲೀ, ಯಾವುದೇ ದಿನವಾಗಲೀ ಬಜೆಟ್ ಮಂಡನೆಯ ದಿನ ಬದಲಾಗುವುದಿಲ್ಲ ಎಂದು ಮೂಲಗಳು ಹೇಳುತ್ತಿವೆ. ಫೆಬ್ರುವರಿ 1, ಭಾನುವಾರದಂದೇ 2026-27ರ ಬಜೆಟ್ ಮಂಡನೆ ಆಗಲಿದೆ.

IPL 2025: ಬಂದ್ಬಿಟ್ಟ… RCB ತಂಡಕ್ಕೆ ರಣ ಬೇಟೆಗಾರ ಬಂದೇ ಬಿಟ್ಟ..!

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್​ಗೆ ಪ್ರವೇಶಿಸಿದೆ. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಇನ್ನೂ ಒಂದು ಲೀಗ್ ಪಂದ್ಯ ಉಳಿದಿದ್ದು, ಈ ಮ್ಯಾಚ್​ನಲ್ಲಿ ಜಯ ಸಾಧಿಸಿದರೆ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನ ಅಲಂಕರಿಸಬಹುದು.

BBMP Budget 2025: ಬ್ರ್ಯಾಂಡ್ ಬೆಂಗಳೂರಿಗೆ ಒತ್ತು ನೀಡಿದ ಬಿಬಿಎಂಪಿ ಬಜೆಟ್, ಯಾವ ಕ್ಷೇತ್ರಕ್ಕೆ ಎಷ್ಟು ಸಿಕ್ತು? ಇಲ್ಲಿದೆ ವಿವರ

ಬಿಬಿಎಂಪಿ ಬಜೆಟ್ 2025: ಬಿಬಿಎಂಪಿಯ 2025-26ನೇ ಸಾಲಿನ ಬಜೆಟ್​ ಅನ್ನು ವಿಶೇಷ ಆಯುಕ್ತ ಹರೀಶ್ ಕುಮಾರ್​ ಅವರು ಮಂಡಿಸಿದ್ದಾರೆ. ಈ ಭಾರಿಯ ಪಾಲಿಕೆ ಬಜೆಟ್​ನಲ್ಲಿ ಬ್ರ್ಯಾಂಡ್ ಬೆಂಗಳೂರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, 8 ಪರಿಕಲ್ಪನೆ ಆಧಾರದಲ್ಲಿ ಬಜೆಟ್ ಮಂಡಿಸಲಾಗಿದೆ. ಹಾಗಾದರೆ ಯಾವೆಲ್ಲಾ ಯೋಜನೆಗಳಿಗೆ ಎಷ್ಟು ಅನುದಾನ ಮೀಸಲಿಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ಮುಸ್ಲಿಂ ಮೀಸಲಾತಿ ವಿಧೇಯಕ ಪಾಸು ಮಾಡಿಕೊಳ್ಳಲು ಬಿಜೆಪಿಯ 18 ಶಾಸಕರನ್ನು ಸಸ್ಪೆಂಡ್ ಮಾಡಲಾಗಿದೆ: ಯತ್ನಾಳ್

ಇವತ್ತು ಸದನದಲ್ಲಿ ನಡೆದ ಎಲ್ಲ ವಿದ್ಯಮಾನಗಳನ್ನು ಕೇಂದ್ರದ ನಾಯಕರ ಗಮನಕ್ಕೆ ತರಲಾಗಿದೆ, ಚೀಟಿ ವಿಷಯದ ಬಗ್ಗೆ ತನಗೇನೂ ಗೊತ್ತಿಲ್ಲವೆಂದ ಬಸನಗೌಡ ಯತ್ನಾಳ್, ಸರಕಾರದ ವಿರುದ್ಧ ಬಿಜೆಪಿಯ ಹೋರಾಟ ಮುಂದುವರಿಯುತ್ತದೆ, ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚಿಸಲು ವಿರೋಧ ಪಕ್ಷದ ನಾಯಕ ಅಶೋಕ ಸಭೆಯೊಂದನ್ನು ಕರೆದಿದ್ದಾರೆ, ಅದರಲ್ಲಿ ಭಾಗವಹಿಸಲು ಹೋಗುತ್ತಿರುವುದಾಗಿ ಹೇಳಿದರು.

Karnataka Budget session: ಸಭಾಧ್ಯಕ್ಷನ ಪೀಠಕ್ಕೆ ಅಗೌರವ, 18 ಬಿಜೆಪಿ ಶಾಸಕರನ್ನು ಸಸ್ಪೆಂಡ್ ಮಾಡಿದ ಸ್ಪೀಕರ್ ಯುಟಿ ಖಾದರ್

ಸಭಾಧ್ಯಕ್ಷ ಖಾದರ್ ಸದಸ್ಯರನ್ನು ಸಸ್ಪೆಂಡ್ ಮಾಡುವ ಮೊದಲು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್, ಬಿಜೆಪಿ ಶಾಸಕರು ತಮ್ಮ ವರ್ತನೆಯಿಂದ ಸ್ಪೀಕರ್ ಸ್ಥಾನಕ್ಕೆ ಅಗೌರವ ತಂದಿದ್ದಾರೆ, ಅವರ ವರ್ತನೆಯನ್ನು ಸದನ ಕ್ಷಮಿಸುವುದು ಸಾಧ್ಯವಿಲ್ಲ, ಅವರನ್ನು ಸಸ್ಪೆಂಡ್ ಮಾಡಬೇಕೆಂದು ಪ್ರಸ್ತಾವನೆಯನ್ನು ಸಲ್ಲಿಸುತ್ತಾರೆ. ನಂತರ ಖಾದರ್ ಶಾಸಕರ ಹೆಸರುಗಳನ್ನು ಓದಿ ವಜಾ ಮಾಡಿರುವುದಾಗಿ ಘೋಷಿಸುತ್ತಾರೆ.

Karnataka Budget Session; ನಂಬಿಕೆ, ವಿಶ್ವಾಸಗಳಿಗೆ ವಿಷಪ್ರಾಶನ ಮಾಡಿರುವಂಥ ಘಟನೆ ಹನಿ ಟ್ರ್ಯಾಪ್: ಸುನೀಲ ಕುಮಾರ

ಆಡಳಿತ ಪಕ್ಷದ ಸಚಿವರರೊಬ್ಬರ ಕೈವಾಡ ಹನಿಟ್ರ್ಯಾಪ್ ಪ್ರಕರಣದಲ್ಲಿ ಇದ್ದಿದ್ದೇಯಾದರೆ ಮುಖ್ಯಮಂತ್ರಿಯವರು ಸಚಿವನನ್ನು ನಿರ್ದಾಕ್ಷಿಣ್ಯವಾಗಿ ವಜಾ ಮಾಡಬೇಕೆಂದು ಸುನೀಲ ಕುಮಾರ್ ಹೇಳಿದಾಗ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಏನನ್ನೋ ಹೇಳಲು ಪ್ರಯತ್ನಿಸುತ್ತಾರೆ. ಆರೋಪಗಳನ್ನು ತಾನು ಮಾಡಿದ್ದಲ್ಲ, ಇಂಟಿಲೆನ್ಸ್ ವಿಭಾಗ ಮುಖ್ಯಮಂತ್ರಿಯವರ ಸುಪರ್ದಿಯಲ್ಲಿರುತ್ತದೆ, ಅವರು ಉತ್ತರ ಕೊಡಲಿ ಎಂದು ಸುನೀಲ ಹೇಳುತ್ತಾರೆ.

ಮದರಸಾಗಳಲ್ಲಿ ದೇಶ ವಿರೋಧಿ ಚಟುವಟಿಕೆ ಹೇಳಿಕೊಡಲಾಗುತ್ತದೆ ಅಂತ ಯತ್ನಾಳ್ ಹೇಳಿದಾಗ ಸದನದಲ್ಲಿ ಗಲಾಟೆ

ರಿಜ್ವಾನ್ ಅರ್ಷದ್ ಮಾತಾಡವಾಗ ಯತ್ನಾಳ್​​ರನ್ನು ದೇಶ ವಿರೋಧಿ, ದೇಶ ದ್ರೋಹಿ ಅಂತೆಲ್ಲ ಕರೆಯುತ್ತಾರೆ. ಯತ್ನಾಳ್ ಮಾತಾಡುವುದು ಕೇಳಿಸಲ್ಲ. ಎಂಬಿ ಪಾಟೀಲ್ ಮಾತಾಡುವುದು ಸಹ ಕೇಳಿಸಲ್ಲ, ಏತನ್ಮಧ್ಯೆ ಕಾಂಗ್ರೆಸ್ ಸದಸ್ಯರೊಬ್ಬರು ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಮಾತುಗಳನ್ನಾಡಿರುವ ಯತ್ನಾಳ್ ಅವರನ್ನು ಸದನದಿಂದ ಸಸ್ಪೆಂಡ್ ಮಾಡಿ ಎಂದು ಹೇಳುತ್ತಾರೆ.

Karnataka Budget Session; ಅತ್ಯಾಚಾರದ ಸುಳ್ಳು ಆರೋಪ ಹೊರೆಸಿ ನನ್ನ ಬದುಕನ್ನೇ ಹಾಳು ಮಾಡಲಾಯಿತು: ಮುನಿರತ್ನ

ನೀವು ಯಾರ ಮೇಲೆ ಆಪಾದನೆ ಮಾಡುತ್ತಿದ್ದೀರಿ, ಅದನ್ನಾದರೂ ಹೇಳಿ ಅಂತ ಬಾಲಕೃಷ್ಣ ಹೇಳುತ್ತಾರೆ. ಮುನಿರತ್ನ ಮುಂದೆ ಕೂತಿದ್ದ ಸುನೀಲ ಕುಮಾರ್ ಸುಮ್ಮನಿರಿ ಅಂತ ಸನ್ನೆ ಮಾಡಿದರೂ ಆರ್ ಆರ್ ನಗರ ಶಾಸಕ ಸುಮ್ಮನಾಗಲ್ಲ. ನೀವು ಹೇಳುತ್ತಿರುವ ಪ್ರಕರಣ ನ್ಯಾಯಾಲಯಲ್ಲಿದೆ, ಮಾತಾಡುವುದು ಸರಿಯಲ್ಲ ಎಂದು ಖಾದರ್ ಮತ್ತು ಬಾಲಕೃಷ್ಣ ಹೇಳುತ್ತಾರೆ.

Karnataka Budget Session: ರಾಯರೆಡ್ಡಿ ಮತ್ತು ಯತ್ನಾಳ್ ಮಾತಿನ ಜಗಳದ ನಡುವೆ ಜೋಕ್ ಕಟ್ ಮಾಡಿ ಎಲ್ಲರನ್ನೂ ನಗಿಸಿದ ಸುರೇಶ್ ಕುಮಾರ್

ಒಂದು ಸಂದರ್ಭದಲ್ಲಿ ಬಸವರಾಜ ರಾಯರೆಡ್ಡಿ, ಯತ್ನಾಳ್ ಹೃದಯ ದೊಡ್ಡದು, ವಿಶಾಲ ಹೃದಯದವರು ಅಂತ ಹೇಳಿದಾಗ ಬಿಜೆಪಿ ಶಾಸಕ ಹಾಗೇನೂ ಇಲ್ಲ, ನಾನು ಸಂಕುಚಿತ ಹೃದಯದವನು ಅಂತ ಒಪ್ಕೋತೀನಿ ಅನ್ನುತ್ತಾರೆ. ಆಮೇಲೆ ಯತ್ನಾಳ್ ನಾವಿಬ್ಬರೂ ಉತ್ತರ ಕರ್ನಾಟಕದವರು ಅವರ ಹೆಸರಲ್ಲೂ ಬಸವರಾಜ ಇದೆ ನನ್ನ ಹೆಸರಲ್ಲೂ ಬಸವಣ್ಣ ಇದ್ದಾನೆ ಅಂತ ಹೇಳಿ ವಾಗ್ವಾದ ಮುಗಿಸುತ್ತಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ