Budget
ಬಜೆಟ್ ಎಂದರೆ ಆಯವ್ಯಯ ಪತ್ರ. ಆಯ ಎಂದರೆ ಆದಾಯ, ವ್ಯಯ ಎಂದರೆ ಖರ್ಚು. ಯೂನಿಯನ್ ಬಜೆಟ್ ಅಥವಾ ಕೇಂದ್ರ ಬಜೆಟ್ ಎಂಬುದು ಕೇಂದ್ರ ಸರ್ಕಾರ ರೂಪಿಸುವ ಬಜೆಟ್. ಇದು ಒಂದು ಹಣಕಾಸು ವರ್ಷದ ಹಣಕಾಸು ಲೆಕ್ಕಾಚಾರವಾಗಿದೆ. ಮುಂದಿನ ಹಣಕಾಸು ವರ್ಷಕ್ಕೆ ಸರ್ಕಾರದ ಆದಾಯ ಮತ್ತು ಖರ್ಚುಗಳ ಒಂದು ಲೆಕ್ಕಪುಸ್ತಕವೇ ಬಜೆಟ್. ಇಡೀ ಒಂದು ವರ್ಷದಲ್ಲಿ ಸರ್ಕಾರದಿಂದ ಯಾವುದೆಲ್ಲಾ ಮತ್ತು ಎಷ್ಟೆಲ್ಲಾ ಆದಾಯ ಬರಬಹುದು. ಯಾವ್ಯಾವುದಕ್ಕೆ ಎಷ್ಟೆಷ್ಟು ವೆಚ್ಚ ಮಾಡಬೇಕು ಎಂದು ನಮೂದಿಸಲಾಗುತ್ತದೆ. ಒಂದು ಹಣಕಾಸು ವರ್ಷ ಎಂದರೆ ಏಪ್ರಿಲ್ 1ರಿಂದ ಮುಂದಿನ ವರ್ಷದ ಮಾರ್ಚ್ 31ರವರೆಗಿನ ಅವಧಿ. ಬಜೆಟ್ ಅನ್ನು ರೆವೆನ್ಯೂ ಬಜೆಟ್ ಮತ್ತು ಕ್ಯಾಪಿಟಲ್ ಬಜೆಟ್ ಎಂದು ವರ್ಗೀಕರಿಸಲಾಗುತ್ತದೆ. ರೆವೆನ್ಯೂ ಬಜೆಟ್ನಲ್ಲಿ ತೆರಿಗೆ ಮತ್ತು ತೆರಿಗೆಯೇತರ ಮೂಲಗಳಿಂದ ಬರುವ ಆದಾಯಗಳು, ಮತ್ತು ಆ ಆದಾಯ ಹಣವನ್ನು ಹೇಗೆಲ್ಲಾ ವಿನಿಯೋಗಿಸಲಾಗುತ್ತದೆ ಎಂಬುದನ್ನು ನಿರ್ದಿಷ್ಟಪಡಿಸಲಾಗುತ್ತದೆ. ಕ್ಯಾಪಿಟಲ್ ಬಜೆಟ್ನಲ್ಲಿ ಸರ್ಕಾರ ಸಾರ್ವಜನಿಕ ಸಾಲಗಳಿಂದ ಪಡೆಯಬಹುದಾದ ಹಣದ ವಿವರ ಹಾಗೂ ಆ ಹಣ ಎಲ್ಲೆಲ್ಲಿ ಬಳಕೆ ಆಗುತ್ತದೆ ಎಂಬುದನ್ನು ನಿರ್ದಿಷ್ಟಪಡಿಸಲಾಗುತ್ತದೆ.
ಅಧಿಕಾರ ಹಂಚಿಕೆ ಮುಸುಕಿನ ಗುದ್ದಾಟದ ನಡುವೆ ರಾಜ್ಯ ಬಜೆಟ್ಗೆ ಅಧಿಕೃತ ಮುಹೂರ್ತ ಫಿಕ್ಸ್
Karnataka Budget 2026: ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಮುಸುಕಿನ ಗುದ್ದಾಟ ಜೋರಾಗಿದೆ. ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿರುವ ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್ ನಾಯಕರ ಮನವೊಲಿಸಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಮತ್ತೊಂದೆಡೆ ಸಿದ್ದರಾಮಯ್ಯನವರೇ ಸಿಎಂ ಆಗಿ ಐದು ವರ್ಷ ಪೂರ್ಣಗೊಳಿಸಲಿದ್ದಾರೆ ಎನ್ನುವುದು ಅವರ ಬಣದ ನಾಯಕರ ಮಾತು. ಹೀಗೆ ಎರಡು ಬಣಗಳ ಕಿತ್ತಾಟದ ಮಧ್ಯೆ 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ.
- Ramesh B Jawalagera
- Updated on: Feb 16, 2026
- 7:32 pm
ರಾಜ್ಯಸಭೆಯಲ್ಲಿ ಮತ್ತೆ ಕರ್ನಾಟಕದ ಪರ ಧ್ವನಿ ಎತ್ತಿದ ದೇವೇಗೌಡ್ರು, ಈ ಬಾರಿ ಕೇಳಿದ್ದೇನು?
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-2027ನೇ ಸಾಲಿನ ಕೇಂದ್ರದ ಆಯ-ವ್ಯಯವು ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಪ್ರತಿಪಾದಿಸಿರುವ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು, ಎರಡು ಪ್ರಮುಖ ಸಲಹೆಗಳನ್ನು ನೀಡಿದ್ದಾರೆ. ಇನ್ನು ಕರ್ನಾಟಕದ ಪರ ಏನೆಲ್ಲಾ ಮಾತನಾಡಿದ್ದಾರೆ ಎನ್ನುವ ವಿವರ ಇಲ್ಲಿದೆ.
- Ramesh B Jawalagera
- Updated on: Feb 11, 2026
- 8:18 pm
ಎಲೆಕ್ಟ್ರಾನಿಕ್ಸ್ ಘಟಕಗಳ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ರೂ. ಅನುದಾನ; ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಈ ವರ್ಷದ ಬಜೆಟ್ ಅನ್ನು 2047ರ ಮಾರ್ಗಸೂಚಿಯಾಗಿ ಮಂಡಿಸಲಾಗಿದೆ. 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು ನಾವು ಸ್ಪಷ್ಟ ಗುರಿಯನ್ನು ಹೊಂದಿದ್ದೇವೆ. ಹೀಗಾಗಿ, ಈ ವರ್ಷದ ಬಜೆಟ್ 2047ರ ಮಾರ್ಗಸೂಚಿಯಾಗಿದೆ. ಬಹಳ ಸಮಗ್ರ ರೀತಿಯಲ್ಲಿ ನಮ್ಮ ಪ್ರಧಾನಿ ನರೇಂದ್ರ ಮೋದಿ ಮತ್ತು ನಮ್ಮ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2047ರ ಮಾರ್ಗಸೂಚಿಯನ್ನು ರೂಪಿಸಿದ್ದಾರೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
- Sushma Chakre
- Updated on: Feb 7, 2026
- 5:31 pm
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
ಮೋದಿ ಭಾಷಣ ನೇರಪ್ರಸಾರ: ಕೇಂದ್ರ ಬಜೆಟ್ ಅಧಿವೇಶನ (Union Budget session 2026) ಅಂತಿಮ ಹಂತಕ್ಕೆ ಬಂದಿದೆ. ನಿನ್ನೆ (ಫೆಬ್ರವರಿ 04) ಲೋಕಸಭಾ ಬಜೆಟ್ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾಷಣ ಮಾಡಬೇಕಿತ್ತು. ಆದರೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆಗಳ ಅಂಶಗಳನ್ನು ಉಲ್ಲೇಖಿಸಲು ಸದನದಲ್ಲಿ ಅವಕಾಶ ನೀಡದ ಕಾರಣದಿಂದ ವಿರೋಧ ಪಕ್ಷಗಳ ಸಂಸದರು ಗಲಾಟೆ ಮಾಡಿದ್ದರು. ಹೀಗಾಗಿ ಲೋಕಸಭೆಯಲ್ಲಿ ಮೋದಿ ಮಾಡಬೇಕಿದ್ದ ಭಾಷಣವನ್ನು ರದ್ದು ಮಾಡಲಾಗಿದ್ದು, ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಉತ್ತರ ನೀಡುತ್ತಿದ್ದು, ಇದರ ನೇರಪ್ರಸಾರ ಇಲ್ಲಿದೆ ನೋಡಿ.
- Ramesh B Jawalagera
- Updated on: Feb 5, 2026
- 4:54 pm
ಕರ್ನಾಟಕ ರೈಲ್ವೆಗೆ ಭರಪೂರ ಕೊಡುಗೆ: ಬಜೆಟ್ನಲ್ಲಿ ಏನೂ ಸಿಕ್ಕಿಲ್ಲ ಎಂದವರಿಗೆ ಅಂಕಿಅಂಶ ಸಮೇತ ಅಶ್ವಿನಿ ವೈಷ್ಣವ್ ತಿರುಗೇಟು
ಕರ್ನಾಟಕಕ್ಕೆ ಕೇಂದ್ರ ಬಜೆಟ್ನಲ್ಲಿ ಏನೂ ಕೊಟ್ಟಿಲ್ಲ ಎಂದು ಟೀಕಿಸಿದವರಿಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅಂಕಿಅಂಶ ಸಮೇತ ತಿರುಗೇಟು ಕೊಟ್ಟಿದ್ದಾರೆ. ಕರ್ನಾಟಕದ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ 2026-27ರ ಕೇಂದ್ರ ಬಜೆಟ್ನಲ್ಲಿ 7,748 ಕೋಟಿ ರೂ. ಹಂಚಿಕೆಯಾಗಿದ್ದು, ಇದು ದಾಖಲೆ ಮಟ್ಟದ ಅನುದಾನವಾಗಿದೆ ಎಂದು ಅವರು ಹೇಳಿದ್ದಾರೆ. ಅಶ್ವಿನಿ ವೈಷ್ಣವ್ ಹೇಳಿದ ಪ್ರಕಾರ ಕೇಂದ್ರ ಬಜೆಟ್ನಲ್ಲಿ ಕರ್ನಾಟಕಕ್ಕೆ ಏನೇನು ಕೊಡುಗೆ ಕೊಟ್ಟಿದ್ದಾರೆ? ಇಲ್ಲಿದೆ ಮಾಹಿತಿ.
- Ganapathi Sharma
- Updated on: Feb 3, 2026
- 9:17 am
ಬಜೆಟ್ 2026: ಸರ್ಕಾರಕ್ಕೆ ಎಲ್ಲೆಲ್ಲಿಂದ ಆದಾಯ; ಎಲ್ಲೆಲ್ಲಿಗೆ ಖರ್ಚು? ಇಲ್ಲಿದೆ ಆಯ ಮತ್ತು ವ್ಯಯಗಳ ಲೆಕ್ಕ
Government's revenue and expenditure estimates for upcoming year: 2026ರ ಬಜೆಟ್ ಗಾತ್ರ 53 ಲಕ್ಷ ಕೋಟಿ ರೂ ದಾಟಿದೆ. ಸಾರಿಗೆ ಮತ್ತು ರಕ್ಷಣಾ ಕ್ಷೇತ್ರಕ್ಕೆ ಅತಿಹೆಚ್ಚು ಅನುದಾನ ಸಿಕ್ಕಿದೆ. ಸರ್ಕಾರಕ್ಕೆ ಬರುವ ಇಷ್ಟು ಪ್ರಮಾಣದ ಆದಾಯದಲ್ಲಿ ಯಾವ್ಯಾವುದು ಎಲ್ಲೆಲ್ಲಿಂದ ಎಷ್ಟೆಷ್ಟು ಬರುತ್ತದೆ ಎನ್ನುವ ಮಾಹಿತಿ ಇಲ್ಲಿದೆ. ಹಾಗೆಯೇ ಸರ್ಕಾರವು ಬಡ್ಡಿ ಕಟ್ಟಲು, ಪಿಂಚಣಿ ನೀಡಲು ಇತ್ಯಾದಿ ಯಾವ್ಯಾವುದಕ್ಕೆ ಎಷ್ಟು ವ್ಯಯಿಸುತ್ತದೆ ಎನ್ನುವ ಲೆಕ್ಕಾಚಾರವೂ ಇಲ್ಲಿದೆ.
- Vijaya Sarathy SN
- Updated on: Feb 2, 2026
- 7:05 pm
ತತ್ಕ್ಷಣದ ಪರಿಹಾರ ಮತ್ತು ಭವಿಷ್ಯದ ಪ್ರಗತಿ ಮಧ್ಯೆ ನೀತಿ ಸೇತುವಾಗಿರುವ ಬಜೆಟ್ 2026
Budget 2026: A Policy Bridge from Immediate Relief to Future Growth: ಕೇಂದ್ರ ಬಜೆಟ್ 2026, 'ನೀತಿ ಸೇತು'ವಾಗಿ ಹಿಂದಿನ ಸಾಧನೆಗಳು ಮತ್ತು ಭವಿಷ್ಯದ ಆಶಯಗಳನ್ನು ಜೋಡಿಸುತ್ತದೆ. ಮ್ಯಾನುಫ್ಯಾಕ್ಚರಿಂಗ್, AI ಮತ್ತು ವಿತ್ತೀಯ ಶಿಸ್ತಿಗೆ ಒತ್ತು ನೀಡುವ ಈ ಬಜೆಟ್ ಭಾರತವನ್ನು ವಿಶ್ವದ ಅತಿವೇಗದ ಆರ್ಥಿಕತೆಯಾಗಿ ಉಳಿಸಿದೆ. ಮೂಲಸೌಕರ್ಯ, MSME ಹಾಗೂ ಹೊಸ ತಂತ್ರಜ್ಞಾನಕ್ಕೆ ಬಲ ನೀಡುವ ಜೊತೆಗೆ, ಕುಟುಂಬಗಳಿಗೆ ತೆರಿಗೆ ವಿನಾಯಿತಿ, ಆರೋಗ್ಯ ಸುಧಾರಣೆ ಮೂಲಕ ಸರ್ವತೋಮುಖ ಪ್ರಗತಿಗೆ ಅನುವು ಮಾಡಿಕೊಡುತ್ತದೆ.
- Vijaya Sarathy SN
- Updated on: Feb 2, 2026
- 6:24 pm
ಸಿಗರೇಟ್ ಮೇಲೆ ಹೊಸ ಅಬಕಾರಿ ಸುಂಕ; ಧೂಮಪಾನಿಗಳಿಗೆ ಮತ್ತಷ್ಟು ದುಬಾರಿ ಜೀವನ
Additional excise duty on Cigarette, prices surge upto Rs 55 per pack: ಹೊಸ ಜಿಎಸ್ಟಿ ಸಿಸ್ಟಂ ಪ್ರಕಾರ ತಂಬಾಕು ಉತ್ಪನ್ನಗಳ ಮೇಲೆ ಶೇ. 40 ಜಿಎಸ್ಟಿ ಜೊತೆಗೆ ಹೆಚ್ಚುವರಿ ಅಬಕಾರಿ ಸುಂಕ ಹೇರಿಕೆ ಮಾಡಲಾಗಿದೆ. ಸಿಗರೇಟ್ ವಿತರಕರು ಭಾನುವಾರದಿಂದಲೇ (ಫೆ. 1) ಹಳೆಯ ಸಿಗರೇಟು ಪ್ಯಾಕುಗಳಿಗೆ ಹೊಸ ದರದ ಲೇಬಲ್ ಹಾಕತೊಡಗಿದ್ದಾರೆ. ಸಿಗರೇಟು ಪ್ಯಾಕಿನ ಬೆಲೆ 55ರೂವರೆಗೆ ಏರಿಕೆ ಆಗುತ್ತಿದೆ.
- Vijaya Sarathy SN
- Updated on: Feb 2, 2026
- 4:26 pm
ಭಾರತದ ಬಗ್ಗೆ ಇಲಾನ್ ಮಸ್ಕ್ ಟ್ವೀಟ್; ರಾಹುಲ್ ಮತ್ತು ವಿಪಕ್ಷಗಳನ್ನು ಝಾಡಿಸಿದ ಕೇಂದ್ರ ಸಚಿವರು
Nirmala Sitharaman, Kiren Rijiju lashes out against Opposition for criticizing Indian economy: ಭಾರತದ ಆರ್ಥಿಕ ಶಕ್ತಿಯನ್ನು ತೋರಿಸುವ ಟ್ವೀಟ್ವೋಂದನ್ನು ಇಲಾನ್ ಮಸ್ಕ್ ಹಂಚಿಕೊಂಡಿದ್ದು, ವಿಶ್ವದ ಪವರ್ ಬ್ಯಾಲನ್ಸ್ ಬದಲಾಗುತ್ತಿದೆ ಎಂದಿದ್ದಾರೆ. ವಿಶ್ವದ ಅತಿದೊಡ್ಡ ಶ್ರೀಮಂತನ ಈ ಟ್ವೀಟ್ ಈಗ ಭಾರತ ಸರ್ಕಾರಕ್ಕೆ ಅಸ್ತ್ರವಾಗಿದೆ. ಭಾರತದ ಆರ್ಥಿಕ ಪರಿಸ್ಥಿತಿ ಬಗ್ಗೆ ಲೇವಡಿ ಮಾಡುವ ವಿಪಕ್ಷಗಳಿಗೆ ಮಸ್ಕ್ ಟ್ವೀಟ್ ಉಲ್ಲೇಖಿಸಿ ಕೇಂದ್ರ ಸಚಿವರು ತಿರುಗೇಟು ನೀಡುತ್ತಿದ್ದಾರೆ.
- Vijaya Sarathy SN
- Updated on: Feb 2, 2026
- 3:44 pm
ಭಾರತದ ಪ್ರಗತಿಗೆ ಪೂರಕವಾಗಿದೆ ಈ ಬಜೆಟ್: ಅಪೋಲೋ ಹಾಸ್ಪಿಟಲ್ಸ್ ಮುಖ್ಯಸ್ಥ ಡಾ. ಪ್ರತಾಪ್ ಸಿ. ರೆಡ್ಡಿ
Budget 2026 sends reassuring message about India’s growth, says Apollo Hospitals Chairman: ಫೆಬ್ರುವರಿ 1ರಂದು ಮಂಡನೆಗೊಂಡ ಕೇಂದ್ರ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರವನ್ನು ಉತ್ತೇಜಿಸುವ ಕ್ರಮಗಳಿವೆ ಎಂದು ಅಪೋಲೋ ಹಾಸ್ಪಿಟಲ್ಸ್ನ ಛೇರ್ಮನ್ ಡಾ. ಪ್ರತಾಪ್ ಸಿ ರೆಡ್ಡಿ ಹೇಳಿದ್ದಾರೆ. ಆರೋಗ್ಯಕರ ಜನತೆ ಆರೋಗ್ಯಕರ ದೇಶ ಎನ್ನುವ ಪರಿಕಲ್ಪನೆಯಲ್ಲಿ ಬಜೆಟ್ ಇದೆ ಎಂದು ಪ್ರತಾಪ್ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.
- Vijaya Sarathy SN
- Updated on: Feb 2, 2026
- 2:37 pm
ಟ್ಯಾಕ್ಸ್ ಪಾಲು ಕರ್ನಾಟಕಕ್ಕೆ ಅತಿಹೆಚ್ಚು ಏರಿಕೆ ಆಗಿದ್ದು ಯಾಕೆ? ಇಲ್ಲಿದೆ ಕಾರಣ, ಮತ್ತು ವಿವಿಧ ರಾಜ್ಯಗಳ ತೆರಿಗೆ ಪಟ್ಟಿ
Tax devolution formula of 16th Finance Commission: 15ನೇ ಹಣಕಾಸು ಆಯೋಗದಲ್ಲಿ ಶೇ. 3.647 ತೆರಿಗೆ ಪಾಲು ಪಡೆದಿದ್ದ ಕರ್ನಾಟಕ್ಕೆ 16ನೇ ಹಣಕಾಸು ಆಯೋಗ ಶೇ. 4.13 ಪಾಲು ಕೊಟ್ಟಿದೆ. ಅತಿಹೆಚ್ಚು ಟ್ಯಾಕ್ಸ್ ಪಾಲು ಪಡೆಯುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 13ನೇ ಸ್ಥಾನದಿಂದ 9ನೇ ಸ್ಥಾನಕ್ಕೆ ಏರಿದೆ. 16ನೇ ಹಣಕಾಸು ಆಯೋಗದ ಟ್ಯಾಕ್ಸ್ ಡೆವಲ್ಯೂಶನ್ ಫಾರ್ಮುಲಾ 15ನೇ ಆಯೋಗದಕ್ಕಿಂತ ಹೇಗೆ ಭಿನ್ನ ಎಂಬುದು ಸೇರಿದಂತೆ ವಿವಿಧ ಮಾಹಿತಿ ಇಲ್ಲಿದೆ.
- Vijaya Sarathy SN
- Updated on: Feb 2, 2026
- 12:54 pm
16ನೇ ಹಣಕಾಸು ಆಯೋಗದ ಸೂತ್ರದಡಿ ಕರ್ನಾಟಕಕ್ಕೆ ಅತಿ ಹೆಚ್ಚು ಲಾಭ; ರಾಜ್ಯಕ್ಕೆ 63,050 ಕೋಟಿ ರೂ. ತೆರಿಗೆ ಪಾಲು
ತೆರಿಗೆ ಪಾಲಿನಲ್ಲಿ ಕರ್ನಾಟಕಕ್ಕೆ ಪದೇಪದೆ ಅನ್ಯಾಯವಾಗುತ್ತಿದೆ, ಬಜೆಟ್ನಲ್ಲಿ ಕರ್ನಾಟಕಕ್ಕೆ ಏನನ್ನೂ ಕೊಟ್ಟಿಲ್ಲ ಎಂದು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಆರೋಪಿಸುತ್ತಲೇ ಇದೆ. ಆದರೆ, ಇದೀಗ ಕೇಂದ್ರ ಸರ್ಕಾರ 16ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ಶೇ 4.13ರಷ್ಟು ತೆರಿಗೆ ಪಾಲು ಹಂಚಿಕೆಗೆ ಶಿಫಾರಸು ಮಾಡಿದೆ. ಇದು ಎಲ್ಲ ರಾಜ್ಯಗಳಿಗಿಂತಲೂ ಅತಿ ಹೆಚ್ಚಾಗಿದೆ. ಮಧ್ಯಪ್ರದೇಶಕ್ಕೆ ಅತಿ ಕಡಿಮೆ ತೆರಿಗೆ ಹಂಚಿಕೆ ಸಿಕ್ಕಿದೆ.
- Sushma Chakre
- Updated on: Feb 1, 2026
- 11:06 pm