Budget
ಬಜೆಟ್ ಎಂದರೆ ಆಯವ್ಯಯ ಪತ್ರ. ಆಯ ಎಂದರೆ ಆದಾಯ, ವ್ಯಯ ಎಂದರೆ ಖರ್ಚು. ಯೂನಿಯನ್ ಬಜೆಟ್ ಅಥವಾ ಕೇಂದ್ರ ಬಜೆಟ್ ಎಂಬುದು ಕೇಂದ್ರ ಸರ್ಕಾರ ರೂಪಿಸುವ ಬಜೆಟ್. ಇದು ಒಂದು ಹಣಕಾಸು ವರ್ಷದ ಹಣಕಾಸು ಲೆಕ್ಕಾಚಾರವಾಗಿದೆ. ಮುಂದಿನ ಹಣಕಾಸು ವರ್ಷಕ್ಕೆ ಸರ್ಕಾರದ ಆದಾಯ ಮತ್ತು ಖರ್ಚುಗಳ ಒಂದು ಲೆಕ್ಕಪುಸ್ತಕವೇ ಬಜೆಟ್. ಇಡೀ ಒಂದು ವರ್ಷದಲ್ಲಿ ಸರ್ಕಾರದಿಂದ ಯಾವುದೆಲ್ಲಾ ಮತ್ತು ಎಷ್ಟೆಲ್ಲಾ ಆದಾಯ ಬರಬಹುದು. ಯಾವ್ಯಾವುದಕ್ಕೆ ಎಷ್ಟೆಷ್ಟು ವೆಚ್ಚ ಮಾಡಬೇಕು ಎಂದು ನಮೂದಿಸಲಾಗುತ್ತದೆ. ಒಂದು ಹಣಕಾಸು ವರ್ಷ ಎಂದರೆ ಏಪ್ರಿಲ್ 1ರಿಂದ ಮುಂದಿನ ವರ್ಷದ ಮಾರ್ಚ್ 31ರವರೆಗಿನ ಅವಧಿ. ಬಜೆಟ್ ಅನ್ನು ರೆವೆನ್ಯೂ ಬಜೆಟ್ ಮತ್ತು ಕ್ಯಾಪಿಟಲ್ ಬಜೆಟ್ ಎಂದು ವರ್ಗೀಕರಿಸಲಾಗುತ್ತದೆ. ರೆವೆನ್ಯೂ ಬಜೆಟ್ನಲ್ಲಿ ತೆರಿಗೆ ಮತ್ತು ತೆರಿಗೆಯೇತರ ಮೂಲಗಳಿಂದ ಬರುವ ಆದಾಯಗಳು, ಮತ್ತು ಆ ಆದಾಯ ಹಣವನ್ನು ಹೇಗೆಲ್ಲಾ ವಿನಿಯೋಗಿಸಲಾಗುತ್ತದೆ ಎಂಬುದನ್ನು ನಿರ್ದಿಷ್ಟಪಡಿಸಲಾಗುತ್ತದೆ. ಕ್ಯಾಪಿಟಲ್ ಬಜೆಟ್ನಲ್ಲಿ ಸರ್ಕಾರ ಸಾರ್ವಜನಿಕ ಸಾಲಗಳಿಂದ ಪಡೆಯಬಹುದಾದ ಹಣದ ವಿವರ ಹಾಗೂ ಆ ಹಣ ಎಲ್ಲೆಲ್ಲಿ ಬಳಕೆ ಆಗುತ್ತದೆ ಎಂಬುದನ್ನು ನಿರ್ದಿಷ್ಟಪಡಿಸಲಾಗುತ್ತದೆ.
ರಾಜ್ಯ ಬಜೆಟ್ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಇದೇ ಮಾರ್ಚ್ 6ರಂದು ಸಿಎಂ ಸಿದ್ದರಾಮಯ್ಯ ಮಂಡಿಸಿದ 2026ನೇ ಸಾಲಿನ ರಾಜ್ಯ ಬಜೆಟ್ ಗೆ ಆಡಳಿತರೂಢ ಪಕ್ಷದ ಶಾಸಕ ಇಕ್ಬಾಲ್ ಹುಸೇನ್ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು, ಪಕ್ಷದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಹೌದು...ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು ಮಾತನಾಡಿ ರಾಜ್ಯ ಬಜೆಟ್ ನನಗೆ ಸಮಾಧಾನ ತಂದಿಲ್ಲ. ಮುಖ್ಯಮಮಂತ್ರಿಯವರ ಮೇಲಿನ ಭರವಸೆ ಹುಸಿಯಾಗಿದೆ ಎಂದು ಸಿದ್ದರಾಮಯ್ಯ ಮೇಲೆ ಅಸಮಾಧಾನ ಹೊರಹಾಕಿದ್ದು, ಈ ಸಂಬಂಧ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇನ್ನು ಬಜೆಟ್ ಬಗ್ಗೆ ಅಸಮಾಧಾನಗೊಂಡಿರುವುದ್ಯಾಕೆ ಎನ್ನುವುದಕ್ಕೆ ಇಕ್ಬಾಲ್ ಹುಸೇನ್ ಕಾರಣ ನೀಡಿದ್ದು, ತಮ್ಮ ಕ್ಷೇತ್ರಕ್ಕೆ ಅನುದಾನ ಕೊಡದಿದ್ದರಿಂದ ಅಸಮಾಧಾನಗೊಂಡಿರುವುದಾಗಿ ಹೇಳಿಕೊಂಡಿದ್ದಾರೆ.
- Prashantha B
- Updated on: Mar 14, 2026
- 5:01 pm
ಎಕರೆಗಟ್ಟಲೆ ಜಾಗದಲ್ಲಿ ಕನ್ವೆನ್ಷನ್ ಸೆಂಟರ್, ಫೈವ್ ಸ್ಟಾರ್ ಹೋಟೆಲ್ ; ಪರಿಸರವಾದಿರಳು ಗರಂ!
ಮಲ್ಲೇಶ್ವರಂನ ಮೈಸೂರು ಲ್ಯಾಂಪ್ ವರ್ಕರ್ಸ್ ಲಿಮಿಟೆಡ್ನ 22 ಎಕರೆ ಭೂಮಿಯಲ್ಲಿ ಕನ್ವೆನ್ಷನ್ ಸೆಂಟರ್ ನಿರ್ಮಾಣ ಯೋಜನೆ ಚರ್ಚೆಗೆ ಗ್ರಾಸವಾಗಿದೆ. ಈ ಯೋಜನೆಯು ನಗರದ ಅಭಿವೃದ್ಧಿಗೆ ಅಗತ್ಯ ಎಂದು ಸರ್ಕಾರ ಹೇಳಿದ್ದರೆ, ಪರಿಸರವಾದಿಗಳು ಸಾವಿರಾರು ಮರಗಳ ಕಡಿತದ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಹಸಿರು ಪ್ರದೇಶವನ್ನು ಉಳಿಸಿ ಸಾರ್ವಜನಿಕ ಉದ್ಯಾನವನವಾಗಿ ಅಭಿವೃದ್ಧಿಪಡಿಸಬೇಕು ಎಂಬುದು ಅವರ ಆಗ್ರಹವಾಗಿದೆ.
- Bhavana Hegde
- Updated on: Mar 10, 2026
- 10:10 am
ಲೆಕ್ಕರಾಮಯ್ಯ ಅಲ್ಲ ಸಾಲರಾಮಯ್ಯ: ಸಿದ್ದರಾಮಯ್ಯ ಬಜೆಟ್ಗೆ ಪ್ರಹ್ಲಾದ ಜೋಶಿ ವ್ಯಂಗ್ಯ
ಸಿಎಂ ಸಿದ್ದರಾಮಮಯ್ಯ 2026ನೇ ಸಾಲಿನ ಬಜೆಟ್ ಮಂಡಿಸಿದ್ದು, ಈ ಸಲ ಕೂಡ 1 ಕೋಟಿ 32 ಸಾವಿರ ರೂ. ಸಾಲ ಮಾಡಲಾಗಿದೆ. ಇದರೊಂದಿಗೆ ರಾಜ್ಯದ ಸಾಲ 8 ಕೋಟಿ 24 ಸಾವಿರಕ್ಕೆ ತಲುಪಿದೆ. ಹೀಗಾಗಿ ಇದಕ್ಕೆ ವಿಪಕ್ಷ ಬಿಜೆಪಿ ನಾಯಕರು ಸಿದ್ದರಾಮಯ್ಯರದ್ದು ಸಾಲದ ಬಜೆಟ್ ಎಂದು ಕಿಡಿಕಾರಿದ್ದಾರೆ. ಇನ್ನು ಕರ್ನಾಟಕ ಬಜೆಟ್ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದ್ದಾರೆ.
- Ramesh B Jawalagera
- Updated on: Mar 6, 2026
- 9:17 pm
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ಕೇಂದ್ರಕ್ಕಿಂತ ರಾಜ್ಯದ ಬೆಳವಣಿಗೆ ಉತ್ತಮ ಎಂದ ಸಿದ್ದು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ 2026-27ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಇದರ ಗಾತ್ರ 4 ಲಕ್ಷದ 48 ಸಾವಿರದ 4 ಕೋಟಿ ರೂಪಾಯಿ. ಬಜೆಟ್ 9.4% ಬೆಳವಣಿಗೆ ಕಂಡಿದೆ. ಕೇಂದ್ರ ಸರ್ಕಾರದ ಜಿಎಸ್ಟಿ ತರ್ಕಬದ್ಧಗೊಳಿಸುವಿಕೆಯಿಂದ ರಾಜ್ಯದ ತೆರಿಗೆ ಬೆಳವಣಿಗೆ ದರವು 10-12% ರಿಂದ 4% ಕ್ಕೆ ಕುಸಿದಿದೆ. ಆದರೂ, ಜಿಎಸ್ಟಿ ಸಂಗ್ರಹದಲ್ಲಿ ಕರ್ನಾಟಕ ರಾಷ್ಟ್ರದಲ್ಲಿ ಎರಡನೇ ಸ್ಥಾನದಲ್ಲಿದೆ.
- Gangadhar Saboji
- Updated on: Mar 6, 2026
- 8:19 pm
ದಾಖಲೆ ಬಜೆಟ್, ಮಿತಿಮೀರದ ಸಾಲ, ವಿತ್ತೀಯ ಶಿಸ್ತು: ಸರ್ಕಾರದ ಸಾಧನೆ ಹೇಳಿದ ಸಿದ್ದರಾಮಯ್ಯ
Karnataka Budget and Debt: ಬಜೆಟ್ ಮಂಡನೆ ಬಳಿಕ ತಮ್ಮ ಗೃಹ ಕಚೇರಿಯಾದ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಸಾಲ, ಜಿಎಸ್ಟಿ ಇತ್ಯಾದಿ ವಿಚಾರ ಪ್ರಸ್ತಾಪಿಸಿದರು. ಕೇಂದ್ರದ ಸಾಲ ಮಿತಿಮೀರಿ ಹೋದರೆ, ರಾಜ್ಯದ ಸಾಲ ಇತಿಮಿತಿಯಲ್ಲೇ ಇದೆ. ಜಿಡಿಪಿ ವೃದ್ದಿಯಲ್ಲಿ ಕೇಂದ್ರಕ್ಕಿಂತ ರಾಜ್ಯದ್ದೇ ಹೆಚ್ಚು ಎಂದೂ ಅವರು ತುಲನೆ ಮಾಡಿಕೊಂಡರು.
- Vijaya Sarathy SN
- Updated on: Mar 6, 2026
- 6:27 pm
karnataka budget 2026: ಈ ಬಾರಿ ಬಜೆಟ್ನಲ್ಲಿ ಘೋಷಣೆಯಾಗಿರುವ ಹೊಸ ಕಾರ್ಯಕ್ರಮಗಳು
ಸಿಎಂ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 06)ಕರ್ನಾಟಕದ 2026ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಒಟ್ಟು 4.48 ಲಕ್ಷ ಕೋಟಿ ರೂಪಾಯಿಯ ಬಜೆಟ್ ಮಂಡನೆಗೆ 3 ಗಂಟೆ 5 ನಿಮಿಷ ತೆಗೆದುಕೊಂಡಿದ್ದಾರೆ. ಇನ್ನು ಸಿದ್ದರಾಮಯ್ಯನವರು 17ನೇ ಬಜೆಟ್ ಮಂಡನೆ ಮಾಡುವ ಮೂಲಕ ಮತ್ತೊಂದು ದಾಖಲೆ ಸೃಷ್ಟಿಸಿದ್ದಾರೆ. ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪಣ. ಬೆಂಗಳೂರಿಗೆ ಭರಪೂರ ಅನುದಾನ. ಜಿಲ್ಲೆ ಜಿಲ್ಲೆಗೂ ಕೊಡುಗೆ. ಶಿಕ್ಷಣ, ರೈತರು, ಕೃಷಿಗೂ ಬಂಪರ್. ಮಹಿಳೆಯರು, ಮಕ್ಕಳಿಗೂ ಆದ್ಯತೆ ನೀಡಿದ್ದಾರೆ. ಇನ್ನು ಕರ್ನಾಟಕದ ಇತಿಹಾಸದಲ್ಲೇ ಐತಿಹಾಸಿಕ 17ನೇ ಬಜೆಟ್ನಲ್ಲಿ ಯಾವೆಲ್ಲಾ ಹೊಸ ಹೊಸ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದಾರೆ ಎನ್ನುವ ವಿವರ ಈ ಕೆಳಗಿನಂತಿದೆ.
- Ramesh B Jawalagera
- Updated on: Mar 6, 2026
- 5:27 pm
ಬೆಂಗಳೂರಿನ ನಂತರ ಎರಡನೇ ಐಟಿ ಹಬ್ ಆಗಿ ಮೈಸೂರು? ತಮ್ಮೂರಿಗೆ ಉಡುಗೊರೆ ಕೊಟ್ಟ ಸಿದ್ದು
Siddaramaiah's record budget aims to develop Mysore as another IT hub of Karnataka: ಬೆಂಗಳೂರಿನಲ್ಲಿ ವಾಹನ ದಟ್ಟಣೆ ಕಡಿಮೆ ಮಾಡಲು, ಮೂಲಭೂತ ಸೌಕರ್ಯಗಳ ಮೇಲಿನ ಒತ್ತಡ ತಗ್ಗಿಸಲು ಸರ್ಕಾರ ಉಪಾಯ ಹುಡುಕಿದೆ. ಮೈಸೂರನ್ನು ಎರಡನೇ ಐಟಿ ಹಬ್ ಆಗಿ ಅಭಿವೃದ್ಧಿಪಡಿಸಲು ಹೊರಟಿದೆ. ಈ ಬಾರಿಯ ಬಜೆಟ್ನಲ್ಲಿ ಇದನ್ನು ಘೋಷಿಸಲಾಗಿದೆ. ಏರೋಸ್ಪೇಸ್ ಪಾರ್ಕ್, ಸಿಲ್ಕ್ ಪಾರ್ಕ್ ಇತ್ಯಾದಿ ಇನ್ನೂ ಅನೇಕ ಕೊಡುಗೆಗಳನ್ನು ಸಿದ್ದರಾಮಯ್ಯ ತಮ್ಮ ತವರು ಜಿಲ್ಲೆಗೆ ಕೊಟ್ಟಿದ್ದಾರೆ.
- Vijaya Sarathy SN
- Updated on: Mar 6, 2026
- 5:25 pm
ಅಬಕಾರಿ ಇಲಾಖೆಗೆ ಕೋಟ್ಯಂತರ ರೂ ಟಾರ್ಗೆಟ್: ಸರ್ಕಾರದ ಹೊಸ ನೀತಿಗೆ ವ್ಯಾಪಾರಿಗಳ ವಿರೋಧ
ಸಿಎಂ ಸಿದ್ದರಾಮಯ್ಯ 17ನೇ ಬಜೆಟ್ನಲ್ಲಿ ಅಬಕಾರಿ ಇಲಾಖೆಗೆ 45 ಸಾವಿರ ಕೋಟಿ ರೂ. ಸಂಗ್ರಹದ ಗುರಿ ನೀಡಲಾಗಿದೆ. ಮದ್ಯದ ದರ ಹೆಚ್ಚಳದ ಸುಳಿವು ಕೂಡ ದೊರಕಿದೆ. ಸದ್ಯ ರಾಜ್ಯ ಸರ್ಕಾರದ ಹೊಸ ಅಬಕಾರಿ ನೀತಿಗೆ ವ್ಯಾಪಾರಿಗಳ ವಿರೋಧ ವ್ಯಕ್ತವಾಗಿದೆ. ತಮ್ಮ ಬೇಡಿಕೆಗಳಿಗೆ ಸರ್ಕಾರ ಮನ್ನಣೆ ನೀಡಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
- Gangadhar Saboji
- Updated on: Mar 6, 2026
- 5:05 pm
CM Siddaramaiah Press Meet Live: ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಸಿಎಂ ಸಿದ್ದರಾಮಯ್ಯ (Siddaramaiah) ಅವರು ಇಂದು (ಮಾರ್ಚ್ 06)ಕರ್ನಾಟಕದ 2026ನೇ ಸಾಲಿನ ಬಜೆಟ್ (Karnataka Budget 2026) ಮಂಡನೆ ಮಾಡಿದ್ದಾರೆ. ಒಟ್ಟು 4.48 ಲಕ್ಷ ಕೋಟಿ ರೂಪಾಯಿಯ ತಮ್ಮ 17ನೇ ಬಜೆಟ್ ಮಂಡನೆ ಮಾಡುವ ಮೂಲಕ ಸಿದ್ದರಾಮಯ್ಯ ಮತ್ತೊಂದು ದಾಖಲೆ ಸೃಷ್ಟಿಸಿದ್ದಾರೆ. ಇನ್ನು ಸಿದ್ದರಾಮಯ್ಯ ಅವರ ಬಜೆಟ್ ಬಗ್ಗೆ ಪರ - ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ. ಇದು ಜನಪರವಾದ ಬಜೆಟ್ ಎಂದು ಆಡಳಿತ ಪಕ್ಷ ಮೆಚ್ಚುಗೆ ಸೂಚಿಸದರೆ, ಸರ್ವರಿಗೂ ತೆರಿಗೆ, ಸರ್ವರಿಗೂ ಸಾಲದ ಬಜೆಟ್ ಇದಾಗಿದೆ ಎಂದು ವಿಪಕ್ಷ ಟೀಕಿಸಿದೆ. ಇನ್ನ ಬಜೆಟ್ ಬಳಿಕ ಸಿಎಂ ಸಿದ್ದರಾಮ್ಯಯ ಸುದ್ದಿಗೋಷ್ಠಿ ನಡೆಸಿದ್ದು, ನೇರಪ್ರಸಾರ ಇಲ್ಲಿದೆ ನೋಡಿ.
- Ramesh B Jawalagera
- Updated on: Mar 6, 2026
- 4:36 pm
Karnataka Budget 2026: ಕರ್ನಾಟಕದಲ್ಲಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್ನಲ್ಲಿ ಸಿದ್ದರಾಮಯ್ಯ ಘೋಷಣೆ
ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿಯನ್ನು ಸ್ಥಾಪನೆ ಮಾಡುವುದಾಗಿ 2026-27ರ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹವ್ಯಕ ಭಾಷೆಗೆ ಸಂಬಂಧಿಸಿದ ಅಕಾಡೆಮಿ ಸ್ಥಾಪನೆ ಮಾಡಬೇಕು ಎಂದು ಹವ್ಯಕ ಬ್ರಾಹ್ಮಣರು ಸುದೀರ್ಘ ಸಮಯದಿಂದ ಬೇಡಿಕೆ ಇಟ್ಟಿದ್ದರು.ಶ್ರೀ ಅಖಿಲ ಹವ್ಯಕ ಮಹಾಸಭಾ ಸೇರಿದಂತೆ ಹಲವರ ಪ್ರಯತ್ನ ಇದರ ಹಿಂದಿತ್ತು. ಇದೇ ವೇಳೆ ಗೋರ್ ಬಂಜಾರ ಸಮುದಾಯದ ಇತಿಹಾಸ, ಸಂಸ್ಕೃತಿ, ಭಾಷೆ, ಆಚಾರ-ವಿಚಾರ, ಉಡುಗೆ, ಆಹಾರ ಪದ್ದತಿ, ಕಸುಬು ಇತ್ಯಾದಿಗಳನ್ನು ದಾಖಲಿಸಲು ಬಂಜಾರ ವಿಶ್ವಕೋಶವನ್ನು ಪ್ರಕಟಿಸಲಾಗುವುದು.
- Nayana Rajeev
- Updated on: Mar 6, 2026
- 3:39 pm
Karnataka Budget 2026 Highlights: ಸಿಎಂ ಸಿದ್ದರಾಮಯ್ಯ 3 ಗಂಟೆ 5 ನಿಮಿಷ ಮಂಡಿಸಿದ 2026-27ರ ಬಜೆಟ್ ಮುಖ್ಯಾಂಶ ಇಲ್ಲಿದೆ
ಸಿದ್ದರಾಮಯ್ಯ ಬಜೆಟ್ 2026-27 ಹೈಲೈಟ್ಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 06) ಕರ್ನಾಟಕದ 2026, 27ನೇ ಸಾಲಿನ ವಾರ್ಷಿಕ ಬಜೆಟ್ ಮಂಡಿಸಿದ್ದಾರೆ: ಒಟ್ಟು 4 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ನಲ್ಲಿ ವಲಯವಾರು ವಿಂಗಡಣೆ ಮಾಡಿದ್ದಾರೆ. ಹಾಗಾದ್ರೆ, ಈ ಬಾರಿಯ ಬಜೆಟ್ನಲ್ಲಿ ಪ್ರಮುಖವಾಗಿ ಏನೆಲ್ಲಾ ಹೊಸ ಘೋಷಣೆಗಳನ್ನು ಮಾಡಿದ್ದಾರೆ ಎನ್ನುವ 30 ಹೈಲೈಟ್ಸ್ ಇಲ್ಲಿ ಈ ಕೆಳಗಿನಂತಿವೆ ನೋಡಿ.
- Ramesh B Jawalagera
- Updated on: Mar 6, 2026
- 3:25 pm
ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಬಜೆಟ್ ಗಾತ್ರ ಎಷ್ಟು? ಇಲ್ಲಿದೆ ಕುತೂಹಲಕಾರಿ ತುಲನೆ
Budget size comparison of Karnataka and other major Indian states: ಕರ್ನಾಟಕದ ಬಜೆಟ್ ಗಾತ್ರ 2026-27ನೇ ಸಾಲಿನಲ್ಲಿ 4.48 ಲಕ್ಷ ಕೋಟಿ ರೂ ಇದೆ. ಕಳೆದ ವರ್ಷದಲ್ಲಿ ಇದರ ಬಜೆಟ್ ಗಾತ್ರ 4.09 ಲಕ್ಷ ಕೋಟಿ ರೂ ಇತ್ತು. ಈ ಬಾರಿ ಶೇ. 10ರಷ್ಟು ಬಜೆಟ್ ಗಾತ್ರ ಹೆಚ್ಚಿದೆ. ಭಾರತದಲ್ಲಿ ಅತಿದೊಡ್ಡ ಬಜೆಟ್ ಮಂಡಿಸಿರುವ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ 4 ಅಥವಾ 5ನೇ ಸ್ಥಾನ ಪಡೆಯುತ್ತದೆ.
- Vijaya Sarathy SN
- Updated on: Mar 6, 2026
- 3:22 pm