Union Budget

Union Budget

ಬಜೆಟ್ ಎಂದರೆ ಆಯವ್ಯಯ ಪತ್ರ. ಆಯ ಎಂದರೆ ಆದಾಯ, ವ್ಯಯ ಎಂದರೆ ಖರ್ಚು. ಯೂನಿಯನ್ ಬಜೆಟ್ ಅಥವಾ ಕೇಂದ್ರ ಬಜೆಟ್ ಎಂಬುದು ಕೇಂದ್ರ ಸರ್ಕಾರ ರೂಪಿಸುವ ಬಜೆಟ್. ಇದು ಒಂದು ಹಣಕಾಸು ವರ್ಷದ ಹಣಕಾಸು ಲೆಕ್ಕಾಚಾರವಾಗಿದೆ. ಮುಂದಿನ ಹಣಕಾಸು ವರ್ಷಕ್ಕೆ ಸರ್ಕಾರದ ಆದಾಯ ಮತ್ತು ಖರ್ಚುಗಳ ಒಂದು ಲೆಕ್ಕಪುಸ್ತಕವೇ ಬಜೆಟ್. ಇಡೀ ಒಂದು ವರ್ಷದಲ್ಲಿ ಸರ್ಕಾರದಿಂದ ಯಾವುದೆಲ್ಲಾ ಮತ್ತು ಎಷ್ಟೆಲ್ಲಾ ಆದಾಯ ಬರಬಹುದು. ಯಾವ್ಯಾವುದಕ್ಕೆ ಎಷ್ಟೆಷ್ಟು ವೆಚ್ಚ ಮಾಡಬೇಕು ಎಂದು ನಮೂದಿಸಲಾಗುತ್ತದೆ. ಒಂದು ಹಣಕಾಸು ವರ್ಷ ಎಂದರೆ ಏಪ್ರಿಲ್ 1ರಿಂದ ಮುಂದಿನ ವರ್ಷದ ಮಾರ್ಚ್ 31ರವರೆಗಿನ ಅವಧಿ. ಬಜೆಟ್ ಅನ್ನು ರೆವೆನ್ಯೂ ಬಜೆಟ್ ಮತ್ತು ಕ್ಯಾಪಿಟಲ್ ಬಜೆಟ್ ಎಂದು ವರ್ಗೀಕರಿಸಲಾಗುತ್ತದೆ. ರೆವೆನ್ಯೂ ಬಜೆಟ್​ನಲ್ಲಿ ತೆರಿಗೆ ಮತ್ತು ತೆರಿಗೆಯೇತರ ಮೂಲಗಳಿಂದ ಬರುವ ಆದಾಯಗಳು, ಮತ್ತು ಆ ಆದಾಯ ಹಣವನ್ನು ಹೇಗೆಲ್ಲಾ ವಿನಿಯೋಗಿಸಲಾಗುತ್ತದೆ ಎಂಬುದನ್ನು ನಿರ್ದಿಷ್ಟಪಡಿಸಲಾಗುತ್ತದೆ. ಕ್ಯಾಪಿಟಲ್ ಬಜೆಟ್​ನಲ್ಲಿ ಸರ್ಕಾರ ಸಾರ್ವಜನಿಕ ಸಾಲಗಳಿಂದ ಪಡೆಯಬಹುದಾದ ಹಣದ ವಿವರ ಹಾಗೂ ಆ ಹಣ ಎಲ್ಲೆಲ್ಲಿ ಬಳಕೆ ಆಗುತ್ತದೆ ಎಂಬುದನ್ನು ನಿರ್ದಿಷ್ಟಪಡಿಸಲಾಗುತ್ತದೆ.

ಇನ್ನೂ ಹೆಚ್ಚು ಓದಿ

2025ರ ಬಜೆಟ್: ಮುಂದಿನ ತಿಂಗಳಿಂದಲೇ ತಯಾರಿ; ಅಕ್ಟೋಬರ್ ಎರಡನೇ ವಾರದಿಂದ ಪೂರ್ವಭಾವಿ ಸಭೆಗಳು

Union Budget 2025 preparations: 2025ರ ಫೆಬ್ರುವರಿ 1ರಂದು ಮಂಡನೆ ಆಗಲಿರುವ ಯೂನಿಯನ್ ಬಜೆಟ್ ತಯಾರಿಕೆಗೆ ಈಗಿನಿಂದಲೇ ಸಿದ್ಧತೆಗಳಾಗಲಿವೆ. ಅಕ್ಟೋಬರ್ ಎರಡನೇ ವಾರದಿಂದ ಬಜೆಟ್ ಪೂರ್ವಭಾವಿ ಸಭೆಗಳು ನಡೆಯಲಿವೆ. ನವೆಂಬರ್ ತಿಂಗಳ ಮಧ್ಯಭಾಗದವರೆಗೂ ಈ ಸಭೆಗಳು ನಡೆಯುತ್ತವೆ.

ಇಂಡೆಕ್ಸೇಶನ್ ಬೇಕೋ ಬೇಡವೋ? ನಿಮ್ಮ ಆಯ್ಕೆಗೆ ಬಿಟ್ಟಿದ್ದು ಎಂದ ಸರ್ಕಾರ; ಎಷ್ಟು ತೆರಿಗೆ ಹೊರೆ ಇಳಿಸುತ್ತೆ ಈ ಕ್ರಮ?

Indexation benefit and capital gain tax: ಆಸ್ತಿ ಮಾರಾಟದಿಂದ ಬಂದ ಲಾಭಕ್ಕೆ ಇಂಡೆಕ್ಸೇಶನ್ ಅನುಕೂಲದೊಂದಿಗೆ ಶೇ. 20ರಷ್ಟು ತೆರಿಗೆ ವಿಧಿಸಲಾಗುತ್ತದೆ. ಈ ಬಾರಿಯ ಬಜೆಟ್​ನಲ್ಲಿ ತೆರಿಗೆಯನ್ನು ಶೇ. 12.5ಕ್ಕೆ ಇಳಿಸಲಾಯಿತು. ಆದರೆ, ಇಂಡೆಕ್ಸೇಶನ್ ಫೀಚರ್ ತೆಗೆಯಲಾಯಿತು. ಇದಕ್ಕೆ ಬಹಳಷ್ಟು ವಿರೋಧ ಬಂದಿದೆ. ಸರ್ಕಾರ ಈ ಎರಡನ್ನೂ ಮುಂದುವರಿಸಿದೆ. ಹೂಡಿಕೆದಾರರು ಯಾವುದು ಅನುಕೂಲವೋ ಅದನ್ನು ಬಳಸಬಹುದು.

ನೀವ್ಯಾವ ಬಜೆಟ್​ನಲ್ಲಿ ಎಲ್ಲಾ ರಾಜ್ಯಗಳ ಹೆಸರು ಎತ್ತಿದ್ದೀರಿ? ಕಾಂಗ್ರೆಸ್​ಗೆ ನಿರ್ಮಲಾ ಸೀತಾರಾಮನ್ ಸವಾಲು

Nirmala Sitharaman speaks at Rajya Sabha: ಜುಲೈ 23ರಂದು ಮಂಡಿಸಲಾದ ಕೇಂದ್ರ ಬಜೆಟ್​ನ ಭಾಷಣದಲ್ಲಿ ಬಿಹಾರ ಮತ್ತು ಆಂಧ್ರ ಹೆಸರನ್ನು ಪ್ರಸ್ತಾಪಿಸಲಾಗಿದೆ. ಬೇರೆ ಹಲವು ರಾಜ್ಯಗಳ ಹೆಸರನ್ನೇ ಎತ್ತಿಲ್ಲ. ಬಜೆಟ್​ನಲ್ಲಿ ಸಾಮಾಜಿಕ ವಲಯಕ್ಕೆ ಫಂಡಿಂಗ್ ಹೆಚ್ಚಿಸಿಲ್ಲ ಎನ್ನುವ ವಿಪಕ್ಷಗಳ ಆರೋಪಗಳನ್ನು ರಾಜ್ಯಸಭೆಯಲ್ಲಿಂದು ನಿರ್ಮಲಾ ಸೀತಾರಾಮನ್ ತಳ್ಳಿಹಾಕಿದ್ದಾರೆ.

ನನ್ನ ಅವಧಿಯಲ್ಲೇ ಭಾರತ ಮೂರನೇ ಅತಿದೊಡ್ಡ ಆರ್ಥಿಕತೆಯ ದೇಶವಾಗಲಿದೆ: ನರೇಂದ್ರ ಮೋದಿ

PM Narendra Modi at CII meeting: ಸಿಐಐ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಜೆಟ್ ನಂತರದ ಭಾಷಣ ಮಾಡುತ್ತಾ, ಕಳೆದ 10 ವರ್ಷದಲ್ಲಿ ಆಗಿರುವ ಬದಲಾವಣೆಯ ಸಂಗತಿಯನ್ನೂ ಪ್ರಸ್ತಾಪಿಸಿದ್ದಾರೆ. ಹತ್ತು ವರ್ಷದ ಹಿಂದೆ ಅಂದಿನ ಸರ್ಕಾರ ಇನ್​ಫ್ರಾಸ್ಟ್ರಕ್ಚರ್​ಗೆ ಹಣ ಎತ್ತಿ ಇಡುತ್ತಿತ್ತಾದರೂ ಅದರ ಪೂರ್ಣ ಬಳಕೆ ಆಗುತ್ತಿರಲಿಲ್ಲ. ಈಗ ಬಜೆಟ್ ಪೂರ್ತಿ ಬಳಕೆ ಆಗುತ್ತಿದೆ. ಇಂದು ಆರ್ಥಿಕತೆಯ ಪ್ರತಿಯೊಂದು ವಲಯದ ಮೇಲೂ ಗಮನ ಹರಿಸಲಾಗುತ್ತಿದೆ ಎಂದು ಪ್ರಧಾನಿಯವರು ಹೇಳಿದ್ದಾರೆ.

Rajnath Singh: ದಾರಿ ತಪ್ಪಿಸುವ ಪ್ರಯತ್ನ; ಅಗ್ನಿಪಥ್ ಯೋಜನೆ ಬಗ್ಗೆ ರಾಹುಲ್ ಗಾಂಧಿಗೆ ರಾಜನಾಥ್ ಸಿಂಗ್ ತಿರುಗೇಟು

Agnipath Scheme: ಅಗ್ನಿವೀರ್ ಯೋಜನೆಯ ಬಗ್ಗೆ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಹೇಳಿಕೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಸಾರ್ವಜನಿಕರನ್ನು ದಾರಿ ತಪ್ಪಿಸುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ರಾಜನಾಥ್ ಸಿಂಗ್ ಈ ವಿಷಯವನ್ನು ಸದನದಲ್ಲಿ ಸ್ಪಷ್ಟಪಡಿಸಲು ಮುಂದಾಗಿದ್ದಾರೆ.

6 ಜನ ರಚಿಸಿರುವ ‘ಚಕ್ರವ್ಯೂಹ’ದಲ್ಲಿ ಆಧುನಿಕ ಭಾರತ ಸಿಲುಕಿದೆ; ಲೋಕಸಭೆಯಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

2024ನೇ ಸಾಲಿನ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 23ರಂದು ಲೋಕಸಭೆಯಲ್ಲಿ ಮಂಡಿಸಿದರು. ಸಂಸತ್ತಿನಲ್ಲಿ ಬಜೆಟ್ ಮೇಲಿನ ಚರ್ಚೆ ನಡೆಯುತ್ತಿದೆ. ಈ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಭಾರತವನ್ನು ಭಯದ ಚಕ್ರವ್ಯೂಹದಲ್ಲಿ ಸಿಲುಕಿಸಿದ್ದಾರೆ ಎಂದು ರಾಹುಲ್ ಗಾಂಧಿ ಇಂದು ಆರೋಪಿಸಿದ್ದಾರೆ.

ದೇಶ ಬಿಟ್ಟುಹೋಗುವವರಿಗೆ ಟ್ಯಾಕ್ಸ್ ಕ್ಲಿಯರೆನ್ಸ್ ನಿಯಮ; ಇದು ಎಲ್ಲರಿಗೂ ಕಡ್ಡಾಯವಲ್ಲ ಎಂದ ಸಿಬಿಡಿಟಿ

Mandatory tax clearance certificate: ಈ ಬಾರಿಯ ಬಜೆಟ್​ನಲ್ಲಿ, ದೇಶದಿಂದ ಹೊರಹೋಗಿ ನೆಲಸುವವರು ಟ್ಯಾಕ್ಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯಬೇಕು ಎಂದು ಘೋಷಿಸಲಾಗಿತ್ತು. ಬ್ಲ್ಯಾಕ್ ಮನಿ ಹೊರಹೋಗುವುದನ್ನು ತಡೆಯಲು ಸರ್ಕಾರ ಕೈಗೊಂಡ ಈ ಕ್ರಮದ ಬಗ್ಗೆ ಹಲವರಿಗೆ ಗೊಂದಲ ಇದೆ. ಆದರೆ, ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 230 ಪ್ರಕಾರ ಕೆಲ ವಿಶೇಷ ಪ್ರಕರಣಗಳಲ್ಲಿ ವ್ಯಕ್ತಿಗಳು ಟಿಸಿಎಸ್ ಪಡೆಯುವುದು ಕಡ್ಡಾಯ ಎಂದಿದೆ. ಎಲ್ಲರೂ ಪಡೆಯಬೇಕಿಲ್ಲ.

ಆರ್ಥಿಕತೆ ಬೆಳವಣಿಗೆಗೆ ಧಕ್ಕೆಯಾಗದಂತೆ ಸಾಲವನ್ನು ಕಡಿಮೆ ಮಾಡಬೇಕು: ನಿರ್ಮಲಾ ಸೀತಾರಾಮನ್

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಂದರ್ಶನವೊಂದರಲ್ಲಿ ಭಾರತದ ಮೇಲಿರುವ ಸಾಲವನ್ನು ಕಡಿಮೆ ಮಾಡುವ ಬಗ್ಗೆ ಹಾಗೂ ಆರ್ಥಿಕತೆ ಬೆಳವಣಿಗೆಗೆ ಧಕ್ಕೆಯಾಗದಂತೆ ಸಾಲ ಕಡಿಮೆ ಮಾಡುವುದು ಹೇಗೆ ಎಂಬ ಬಗ್ಗೆ ಮಾತನಾಡಿದ್ದಾರೆ.

ಹೊರಹೋದ ಭಾರೀ ಹಣ; ಬಜೆಟ್ ನಂತರ ಷೇರು ಮಾರುಕಟ್ಟೆ ಸತತವಾಗಿ ಕುಸಿಯಲು ಇದು ಕಾರಣವಾ?

Stock market crash details: ಬಜೆಟ್ ಬಳಿಕ ಸತತ ಮೂರು ದಿನ ಷೇರು ಮಾರುಕಟ್ಟೆ ಕುಸಿತ ಕಂಡಿದೆ. ವಿವಿಧ ತೆರಿಗೆಗಳ ಹೆಚ್ಚಳ ಇದಕ್ಕೆ ಒಂದು ಕಾರಣ. ಹಾಗೆಯೇ, ವಿದೇಶೀ ಸಾಂಸ್ಥಿಕ ಹೂಡಿಕೆದಾರರು (ಎಫ್​ಐಐ) ಮತ್ತು ವಿದೇಶೀ ಪೋರ್ಟ್​ಫೋಲಿಯೋ ಹೂಡಿಕೆದಾರರು (ಎಫ್​ಪಿಐ) ಸಾಕಷ್ಟು ಬಂಡವಾಳ ಹೊರತೆಗೆದಿರುವುದು ಗೊತ್ತಾಗಿದೆ. ಜುಲೈ 23 ಮತ್ತು 24ರಂದು ಎರಡು ದಿನದಲ್ಲಿ ಹೊರಹೋದ ನಿವ್ವಳ ಬಂಡವಾಳ 8,000 ಕೋಟಿ ರೂಗೂ ಹೆಚ್ಚು ಎನ್ನಲಾಗಿದೆ.

ಭಾರತ ಬಿಟ್ಟುಹೋಗ್ತೀರಾ? ಟ್ಯಾಕ್ಸ್ ಕಟ್ಟಿ ಹೋಗಿ; ಟಿಸಿ ಸರ್ಟಿಫಿಕೇಟ್ ಕಡ್ಡಾಯ; ಅ. 1ರಿಂದ ಕಾನೂನು ಜಾರಿ

Tax clearance certificate: ಭಾರತವನ್ನು ಬಿಟ್ಟು ವಿದೇಶಗಳಿಗೆ ಹೋಗಬೇಕೆನ್ನುವವರು ತೆರಿಗೆ ಇಲಾಖೆಯಿಂದ ಟ್ಯಾಕ್ಸ್ ಕ್ಲಿಯರೆನ್ಸ್ ಪ್ರಮಾಣ ಪತ್ರ ಪಡೆಯುವುದು ಕಡ್ಡಾಯ ಎಂದು ಬಜೆಟ್​ನಲ್ಲಿ ಘೋಷಿಸಲಾಗಿದೆ. ಕಪ್ಪು ಹಣ ಕಾಯ್ದೆ ಅಡಿ ಈಗಾಗಲೇ ಇಂಥದ್ದೊಂದು ನಿಯಮ ಇದೆ. ಈ ನಿಯಮವನ್ನು ಸರ್ಕಾರ ಇನ್ನಷ್ಟು ಬಿಗಿಗೊಳಿಸಿದೆ ಎಂದು ಹೇಳಲಾಗುತ್ತಿದೆ. ಸದ್ಯದಲ್ಲೇ ಈ ಬಗ್ಗೆ ಅಧಿಸೂಚನೆ ಬಂದ ಬಳಿಕ ಸ್ಪಷ್ಟತೆ ಸಿಗಲಿದೆ.

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ