Sign In

By signing in or creating an account, you agree with Associated Broadcasting Company's Terms & Conditions and Privacy Policy.

Upendra

Upendra

ಉಪೇಂದ್ರ ಅವರು ನಟ, ನಿರ್ದೇಶಕ ಮತ್ತು ಚಿತ್ರಕಥೆಗಾರ. ಅವರು ಕನ್ನಡ ಚಿತ್ರರಂಗದಲ್ಲಿ ಹೆಚ್ಚು ಗುರುತಿಸಿಕೊಂಡಿದ್ದು, ತೆಲುಗು ಹಾಗೂ ತಮಿಳು ರಂಗದಲ್ಲೂ ಹೆಸರು ಮಾಡಿದ್ದಾರೆ. ಅವರು ರಾಜಕೀಯಕ್ಕೂ ಕಾಲಿಟ್ಟಿದ್ದು, ‘ಪ್ರಜಾಕೀಯ’ ಹೆಸರಿನ ಪಕ್ಷ ಆರಂಭಿಸಿದ್ದಾರೆ. ಅವರು ‘ಎ’, ‘ಓಂ’ ‘ಉಪೇಂದ್ರ ರೀತಿಯ ಸಿನಿಮಾಗಳನ್ನು ನಿರ್ದೇಶನ ಮಾಡಿ ಖ್ಯಾತಿ ಪಡೆದಿದ್ದಾರೆ. ಅವರ ನಿರ್ದೇಶನದ, ಶಿವರಾಜ್‌ಕುಮಾರ್ ನಟನೆಯ ‘ಓಂ’ ಸಿನಿಮಾ ನೂರಾರು ಬಾರಿ ಥಿಯೇಟರ್‌ ‌ನಲ್ಲಿ ರೀ-ರಿಲೀಸ್ ಆಗಿ ದಾಖಲೆ ಬರೆದಿತ್ತು. ಉಪೇಂದ್ರ ಅವರ ಆಲೋಚನೆಗಳು ಭಿನ್ನವಾಗಿ ಇರುತ್ತವೆ. ಈ ಕಾರಣಕ್ಕೆ ಅವರ ಸಿನಿಮಾಗಳು ಜನರಿಗೆ ಇಷ್ಟ ಆಗುತ್ತವೆ. ಉಪೇಂದ್ರ ಬೆಂಗಳೂರಿನಲ್ಲಿ ಸ್ವಂತ ಮನೆ ಹೊಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಪ್ರಿಯಾಂಕ ಅವರನ್ನು ಉಪೇಂದ್ರ ಮದುವೆ ಆಗಿದ್ದು, ಈ ದಂಪತಿಗೆ ಇಬ್ಬರು ಮಕ್ಕಳು

ಇನ್ನೂ ಹೆಚ್ಚು ಓದಿ

‘45’ ಚಿತ್ರದ ಪ್ರಚಾರಕ್ಕಾಗಿ ಮುಂಬೈಗೆ ಹಾರಿದ ಶಿವಣ್ಣ, ಉಪೇಂದ್ರ, ಅರ್ಜುನ್ ಜನ್ಯ

ಶಿವರಾಜ್​ಕುಮಾರ್ ಹಾಗೂ ಉಪೇಂದ್ರ ‘ಕಬ್ಜ’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಈಗ ಇವರು ‘45’ ಚಿತ್ರದಲ್ಲಿ ಮತ್ತೆ ಒಂದಾಗಿದ್ದಾರೆ. ಇವರ ಜೊತೆ ರಾಜ್ ಬಿ. ಶೆಟ್ಟಿ ಕೂಡ ಸೇರ್ಪಡೆ ಆಗಿದ್ದಾರೆ. ಸಂಗೀತ ಸಂಯೋಜಕ ಅರ್ಜುನ್ ಜನ್ಯ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

‘ವಿವಾದಗಳೇ ಇಲ್ಲದ ಕಲಾವಿದ’: ಬ್ಯಾಂಕ್ ಜನಾರ್ದನ್ ಅಗಲಿಕೆಗೆ ಉಪೇಂದ್ರ ಸಂತಾಪ

ಉಪೇಂದ್ರ ಅವರು ವೃತ್ತಿಜೀವನದ ಆರಂಭದ ದಿನಗಳಲ್ಲಿ ನಿರ್ದೇಶಿಸಿದ್ದ ‘ತರ್ಲೆ ನನ್ಮಗ’, ‘ಶ್’ ಸಿನಿಮಾಗಳಲ್ಲಿ ಬ್ಯಾಂಕ್ ಜನಾರ್ದನ್ ಅವರು ನಟಿಸಿದ್ದರು. ಇಂದು (ಏಪ್ರಿಲ್ 14) ಬ್ಯಾಂಕ್ ಜನಾರ್ದನ್ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ಉಪೇಂದ್ರ ಅವರು ಆ ದಿನಗಳನ್ನು ಸ್ಮರಿಸಿಕೊಂಡಿದ್ದಾರೆ. ಈ ವೇಳೆ ಸಾಧು ಕೋಕಿಲ ಕೂಡ ಮಾತನಾಡಿದ್ದಾರೆ.

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ

ಶಿವರಾಜ್​ಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಅವರು ‘45’ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದಾರೆ. ಈ ಸಿನಿಮಾದ ಟೀಸರ್ ರಿಲೀಸ್ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಟೀಸರ್ ಬಿಡುಗಡೆ ವೇಳೆ ಉಪೇಂದ್ರ ಅವರು ಈ ಸಿನಿಮಾ ತಂಡದ ಬಗ್ಗೆ ಮಾತಾಡಿದರು. ಶಿವರಾಜ್​ಕುಮಾರ್​ ಹಾಗೂ ರಾಜ್​ ಬಿ. ಶೆಟ್ಟಿ ಜತೆ ಕೆಲಸ ಮಾಡಿದ ಅನುಭವವನ್ನು ಉಪೇಂದ್ರ ಹಂಚಿಕೊಂಡರು.

‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಭರ್ಜರಿ ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ

ಶಿವರಾಜ್​ಕುಮಾರ್ ಅವರು ಕ್ಯಾನ್ಸರ್​ ಮುಕ್ತರಾಗಿ ಬಂದಿದ್ದಾರೆ. ಈ ವಿಚಾರ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಈಗ ಅವರು ವಿವಿಧ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈಗ ಅವರ ಕಡೆಯಿಂದ ಒಂದು ಬಿಗ್ ಅಪ್​​ಡೇಟ್ ಬಂದಿದೆ. ‘ಓಂ 2’ ಸಿನಿಮಾ ಬರಲಿದೆ ಎಂದು 45 ಚಿತ್ರದ ಟ್ರೇಲರ್ ಲಾಂಚ್​ನಲ್ಲಿ ಹೇಳಿದ್ದಾರೆ.

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ

ಉಪೇಂದ್ರ ಮತ್ತು ಶಿವರಾಜ್​ಕುಮಾರ್ ಅವರದ್ದು ಹಲವು ವರ್ಷಗಳ ಸ್ನೇಹ. ಉಪೇಂದ್ರ ಹೇಗೆ ಊಟ ಮಾಡುತ್ತಿದ್ದರು ಎಂಬದನ್ನು ಈಗ ಶಿವಣ್ಣ ಹೇಳಿದ್ದಾರೆ. ‘45’ ಸಿನಿಮಾದ ಟೀಸರ್ ಲಾಂಚ್ ಕಾರ್ಯಕ್ರಮದ ವೇದಿಕೆಯಲ್ಲಿ ಅವರು ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಅವರ ಮಾತು ಕೇಳಿ ಎಲ್ಲರಿಗೂ ಅಚ್ಚರಿ ಆಗಿದೆ.

ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ

ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯ ಮೊದಲ ಬಾರಿಗೆ ಆ್ಯಕ್ಷನ್-ಕಟ್ ಹೇಳಿರುವ ‘45’ ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಈ ಕಾರ್ಯಕ್ರಮದಲ್ಲಿ ಉಪೇಂದ್ರ, ಶಿವರಾಜ್​ಕುಮಾರ್​, ರಾಜ್ ಬಿ. ಶೆಟ್ಟಿ, ನಿರ್ಮಾಪಕ ರಮೇಶ್ ರೆಡ್ಡಿ, ಅರ್ಜುನ್ ಜನ್ಯ ಸೇರಿದಂತೆ ಇಡೀ ತಂಡ ಭಾಗಿ ಆಗಿದೆ.

ಯುಗಾದಿಗೆ ನಿಮ್ಮ ಮುಂದೆ ಬರ್ತಿದೆ ‘ಯುಐ’ ಸಿನಿಮಾ; ಎಲ್ಲಿ? ಎಷ್ಟು ಗಂಟೆಗೆ?

ಉಪೇಂದ್ರ ನಿರ್ದೇಶನದ ‘ಯುಐ’ ಚಿತ್ರವು ಮಾರ್ಚ್​ 30ರಂದು ಟಿವಿಯಲ್ಲಿ ಪ್ರಸಾರ ಕಾಣುತ್ತಿದೆ. ಯೇಟರ್‌ನಲ್ಲಿ ಯಶಸ್ವಿಯಾದ ಈ ಚಿತ್ರ ಒಟಿಟಿಗೆ ಬಿಡುಗಡೆಯಾಗದೆ ನೇರವಾಗಿ ಟಿವಿಯಲ್ಲಿ ಪ್ರಸಾರವಾಗುತ್ತಿದೆ. ಚಿತ್ರದಲ್ಲಿ ಸಮಾಜದ ವಿವಿಧ ಅಂಶಗಳನ್ನು ಪ್ರಸ್ತಾಪಿಸಲಾಗಿದೆ. "ಟ್ರೋಲ್" ಹಾಡು ವಿಶೇಷ ಆಕರ್ಷಣೆಯಾಗಿದೆ. ದುನಿಯಾ ವಿಜಯ್ ನಟಿಸಿ, ನಿರ್ದೇಶಿಸಿರುವ ‘ಭೀಮ’ ಸಿನಿಮಾ ಕೂಡ ಅದೇ ದಿನ ಪ್ರಸಾರ ಕಾಣುತ್ತಿದೆ.

ಒಟಿಟಿಯಲ್ಲಿ ‘ಯುಐ’ ಚಿತ್ರಕ್ಕಾಗಿ ಕಾದವರಿಗೆ ಸಿಹಿ ಸುದ್ದಿ? ಇಲ್ಲಿದೆ ಅಪ್​ಡೇಟ್

ಉಪೇಂದ್ರ ನಟನೆಯ ಹಾಗೂ ನಿರ್ದೇಶನದ ‘ಯುಐ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಯಶಸ್ಸು ಕಂಡಿತು. ಈಗ ಒಟಿಟಿ ರಿಲೀಸ್ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲವಿದೆ. ಮಾರ್ಚ್ ಅಂತ್ಯಕ್ಕೆ ಜೀ5 ನಲ್ಲಿ ಈ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ, ಆದರೆ ಅಧಿಕೃತ ಘೋಷಣೆ ಇನ್ನೂ ಬಾಕಿ ಇದೆ.

ಉಪೇಂದ್ರ ಮೆಚ್ಚಿದ ‘ಸೂರಿ ಲವ್ಸ್ ಸಂಧ್ಯಾ’ ಸಿನಿಮಾ ಮಾರ್ಚ್​ 6ಕ್ಕೆ ಬಿಡುಗಡೆ

ಮಾರ್ಚ್​ 6ರಂದು ‘ಸೂರಿ ಲವ್ಸ್ ಸಂಧ್ಯಾ’ ಸಿನಿಮಾ ತೆರೆಕಾಣಲಿದೆ. ನಟ ಉಪೇಂದ್ರ ಅವರು ಈಗಾಗಲೇ ಈ ಸಿನಿಮಾವನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ಕಾಶಿನಾಥ್ ಪುತ್ರ ಅಭಿಮನ್ಯು ಹಾಗೂ ಅಪೂರ್ವಾ ಅವರು ಈ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದಾರೆ. ಯಾದವ್ ರಾಜ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

ಕಾಶಿನಾಥ್​ಗೆ ಆ್ಯಸಿಡ್ ಹಾಕಲು ಬಂದಿದ್ದರು: ಭಯಾನಕ ಘಟನೆ ನೆನೆದ ಉಪೇಂದ್ರ

ಕಾಶಿನಾಥ್ ಪುತ್ರ ಅಭಿಮನ್ಯು ನಟನೆಯ ‘ಸೂರಿ ಲವ್ಸ್ ಸಂಧ್ಯಾ’ ಸಿನಿಮಾದ ಟ್ರೇಲರ್​ ಲಾಂಚ್​ ವೇಳೆ ಉಪೇಂದ್ರ ಅವರು ನೆನಪಿನ ಪುಟ ತೆರೆದಿದ್ದಾರೆ. ಕಾಶಿನಾಥ್ ವ್ಯಕ್ತಿತ್ವ ಹೇಗಿತ್ತು ಎಂಬುದನ್ನು ಅವರು ವಿವರಿಸಿದ್ದಾರೆ. ಒಮ್ಮೆ ಕಾಶಿನಾಥ್ ಮೇಲೆ ಆ್ಯಸಿಡ್ ಹಾಕುವ ಪ್ರಯತ್ನ ನಡೆದಿತ್ತು ಎಂದು ಉಪೇಂದ್ರ ಅವರು ಹೇಳಿದ್ದಾರೆ.

ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್
ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್
ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್
ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್
ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..
ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ