
Upendra
ಉಪೇಂದ್ರ ಅವರು ನಟ, ನಿರ್ದೇಶಕ ಮತ್ತು ಚಿತ್ರಕಥೆಗಾರ. ಅವರು ಕನ್ನಡ ಚಿತ್ರರಂಗದಲ್ಲಿ ಹೆಚ್ಚು ಗುರುತಿಸಿಕೊಂಡಿದ್ದು, ತೆಲುಗು ಹಾಗೂ ತಮಿಳು ರಂಗದಲ್ಲೂ ಹೆಸರು ಮಾಡಿದ್ದಾರೆ. ಅವರು ರಾಜಕೀಯಕ್ಕೂ ಕಾಲಿಟ್ಟಿದ್ದು, ‘ಪ್ರಜಾಕೀಯ’ ಹೆಸರಿನ ಪಕ್ಷ ಆರಂಭಿಸಿದ್ದಾರೆ. ಅವರು ‘ಎ’, ‘ಓಂ’ ‘ಉಪೇಂದ್ರ ರೀತಿಯ ಸಿನಿಮಾಗಳನ್ನು ನಿರ್ದೇಶನ ಮಾಡಿ ಖ್ಯಾತಿ ಪಡೆದಿದ್ದಾರೆ. ಅವರ ನಿರ್ದೇಶನದ, ಶಿವರಾಜ್ಕುಮಾರ್ ನಟನೆಯ ‘ಓಂ’ ಸಿನಿಮಾ ನೂರಾರು ಬಾರಿ ಥಿಯೇಟರ್ ನಲ್ಲಿ ರೀ-ರಿಲೀಸ್ ಆಗಿ ದಾಖಲೆ ಬರೆದಿತ್ತು. ಉಪೇಂದ್ರ ಅವರ ಆಲೋಚನೆಗಳು ಭಿನ್ನವಾಗಿ ಇರುತ್ತವೆ. ಈ ಕಾರಣಕ್ಕೆ ಅವರ ಸಿನಿಮಾಗಳು ಜನರಿಗೆ ಇಷ್ಟ ಆಗುತ್ತವೆ. ಉಪೇಂದ್ರ ಬೆಂಗಳೂರಿನಲ್ಲಿ ಸ್ವಂತ ಮನೆ ಹೊಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಪ್ರಿಯಾಂಕ ಅವರನ್ನು ಉಪೇಂದ್ರ ಮದುವೆ ಆಗಿದ್ದು, ಈ ದಂಪತಿಗೆ ಇಬ್ಬರು ಮಕ್ಕಳು
‘45’ ಚಿತ್ರದ ಪ್ರಚಾರಕ್ಕಾಗಿ ಮುಂಬೈಗೆ ಹಾರಿದ ಶಿವಣ್ಣ, ಉಪೇಂದ್ರ, ಅರ್ಜುನ್ ಜನ್ಯ
ಶಿವರಾಜ್ಕುಮಾರ್ ಹಾಗೂ ಉಪೇಂದ್ರ ‘ಕಬ್ಜ’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಈಗ ಇವರು ‘45’ ಚಿತ್ರದಲ್ಲಿ ಮತ್ತೆ ಒಂದಾಗಿದ್ದಾರೆ. ಇವರ ಜೊತೆ ರಾಜ್ ಬಿ. ಶೆಟ್ಟಿ ಕೂಡ ಸೇರ್ಪಡೆ ಆಗಿದ್ದಾರೆ. ಸಂಗೀತ ಸಂಯೋಜಕ ಅರ್ಜುನ್ ಜನ್ಯ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.
- Rajesh Duggumane
- Updated on: Apr 15, 2025
- 10:42 am
‘ವಿವಾದಗಳೇ ಇಲ್ಲದ ಕಲಾವಿದ’: ಬ್ಯಾಂಕ್ ಜನಾರ್ದನ್ ಅಗಲಿಕೆಗೆ ಉಪೇಂದ್ರ ಸಂತಾಪ
ಉಪೇಂದ್ರ ಅವರು ವೃತ್ತಿಜೀವನದ ಆರಂಭದ ದಿನಗಳಲ್ಲಿ ನಿರ್ದೇಶಿಸಿದ್ದ ‘ತರ್ಲೆ ನನ್ಮಗ’, ‘ಶ್’ ಸಿನಿಮಾಗಳಲ್ಲಿ ಬ್ಯಾಂಕ್ ಜನಾರ್ದನ್ ಅವರು ನಟಿಸಿದ್ದರು. ಇಂದು (ಏಪ್ರಿಲ್ 14) ಬ್ಯಾಂಕ್ ಜನಾರ್ದನ್ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ಉಪೇಂದ್ರ ಅವರು ಆ ದಿನಗಳನ್ನು ಸ್ಮರಿಸಿಕೊಂಡಿದ್ದಾರೆ. ಈ ವೇಳೆ ಸಾಧು ಕೋಕಿಲ ಕೂಡ ಮಾತನಾಡಿದ್ದಾರೆ.
- Madan Kumar
- Updated on: Apr 14, 2025
- 3:13 pm
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಶಿವರಾಜ್ಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಅವರು ‘45’ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದಾರೆ. ಈ ಸಿನಿಮಾದ ಟೀಸರ್ ರಿಲೀಸ್ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಟೀಸರ್ ಬಿಡುಗಡೆ ವೇಳೆ ಉಪೇಂದ್ರ ಅವರು ಈ ಸಿನಿಮಾ ತಂಡದ ಬಗ್ಗೆ ಮಾತಾಡಿದರು. ಶಿವರಾಜ್ಕುಮಾರ್ ಹಾಗೂ ರಾಜ್ ಬಿ. ಶೆಟ್ಟಿ ಜತೆ ಕೆಲಸ ಮಾಡಿದ ಅನುಭವವನ್ನು ಉಪೇಂದ್ರ ಹಂಚಿಕೊಂಡರು.
- Madan Kumar
- Updated on: Mar 31, 2025
- 9:09 pm
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಭರ್ಜರಿ ಅಪ್ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಶಿವರಾಜ್ಕುಮಾರ್ ಅವರು ಕ್ಯಾನ್ಸರ್ ಮುಕ್ತರಾಗಿ ಬಂದಿದ್ದಾರೆ. ಈ ವಿಚಾರ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಈಗ ಅವರು ವಿವಿಧ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈಗ ಅವರ ಕಡೆಯಿಂದ ಒಂದು ಬಿಗ್ ಅಪ್ಡೇಟ್ ಬಂದಿದೆ. ‘ಓಂ 2’ ಸಿನಿಮಾ ಬರಲಿದೆ ಎಂದು 45 ಚಿತ್ರದ ಟ್ರೇಲರ್ ಲಾಂಚ್ನಲ್ಲಿ ಹೇಳಿದ್ದಾರೆ.
- Rajesh Duggumane
- Updated on: Mar 31, 2025
- 10:44 am
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಮತ್ತು ಶಿವರಾಜ್ಕುಮಾರ್ ಅವರದ್ದು ಹಲವು ವರ್ಷಗಳ ಸ್ನೇಹ. ಉಪೇಂದ್ರ ಹೇಗೆ ಊಟ ಮಾಡುತ್ತಿದ್ದರು ಎಂಬದನ್ನು ಈಗ ಶಿವಣ್ಣ ಹೇಳಿದ್ದಾರೆ. ‘45’ ಸಿನಿಮಾದ ಟೀಸರ್ ಲಾಂಚ್ ಕಾರ್ಯಕ್ರಮದ ವೇದಿಕೆಯಲ್ಲಿ ಅವರು ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಅವರ ಮಾತು ಕೇಳಿ ಎಲ್ಲರಿಗೂ ಅಚ್ಚರಿ ಆಗಿದೆ.
- Madan Kumar
- Updated on: Mar 30, 2025
- 10:38 pm
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯ ಮೊದಲ ಬಾರಿಗೆ ಆ್ಯಕ್ಷನ್-ಕಟ್ ಹೇಳಿರುವ ‘45’ ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಈ ಕಾರ್ಯಕ್ರಮದಲ್ಲಿ ಉಪೇಂದ್ರ, ಶಿವರಾಜ್ಕುಮಾರ್, ರಾಜ್ ಬಿ. ಶೆಟ್ಟಿ, ನಿರ್ಮಾಪಕ ರಮೇಶ್ ರೆಡ್ಡಿ, ಅರ್ಜುನ್ ಜನ್ಯ ಸೇರಿದಂತೆ ಇಡೀ ತಂಡ ಭಾಗಿ ಆಗಿದೆ.
- Madan Kumar
- Updated on: Mar 30, 2025
- 7:37 pm
ಯುಗಾದಿಗೆ ನಿಮ್ಮ ಮುಂದೆ ಬರ್ತಿದೆ ‘ಯುಐ’ ಸಿನಿಮಾ; ಎಲ್ಲಿ? ಎಷ್ಟು ಗಂಟೆಗೆ?
ಉಪೇಂದ್ರ ನಿರ್ದೇಶನದ ‘ಯುಐ’ ಚಿತ್ರವು ಮಾರ್ಚ್ 30ರಂದು ಟಿವಿಯಲ್ಲಿ ಪ್ರಸಾರ ಕಾಣುತ್ತಿದೆ. ಯೇಟರ್ನಲ್ಲಿ ಯಶಸ್ವಿಯಾದ ಈ ಚಿತ್ರ ಒಟಿಟಿಗೆ ಬಿಡುಗಡೆಯಾಗದೆ ನೇರವಾಗಿ ಟಿವಿಯಲ್ಲಿ ಪ್ರಸಾರವಾಗುತ್ತಿದೆ. ಚಿತ್ರದಲ್ಲಿ ಸಮಾಜದ ವಿವಿಧ ಅಂಶಗಳನ್ನು ಪ್ರಸ್ತಾಪಿಸಲಾಗಿದೆ. "ಟ್ರೋಲ್" ಹಾಡು ವಿಶೇಷ ಆಕರ್ಷಣೆಯಾಗಿದೆ. ದುನಿಯಾ ವಿಜಯ್ ನಟಿಸಿ, ನಿರ್ದೇಶಿಸಿರುವ ‘ಭೀಮ’ ಸಿನಿಮಾ ಕೂಡ ಅದೇ ದಿನ ಪ್ರಸಾರ ಕಾಣುತ್ತಿದೆ.
- Shreelaxmi H
- Updated on: Mar 26, 2025
- 9:17 am
ಒಟಿಟಿಯಲ್ಲಿ ‘ಯುಐ’ ಚಿತ್ರಕ್ಕಾಗಿ ಕಾದವರಿಗೆ ಸಿಹಿ ಸುದ್ದಿ? ಇಲ್ಲಿದೆ ಅಪ್ಡೇಟ್
ಉಪೇಂದ್ರ ನಟನೆಯ ಹಾಗೂ ನಿರ್ದೇಶನದ ‘ಯುಐ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ದೊಡ್ಡ ಯಶಸ್ಸು ಕಂಡಿತು. ಈಗ ಒಟಿಟಿ ರಿಲೀಸ್ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲವಿದೆ. ಮಾರ್ಚ್ ಅಂತ್ಯಕ್ಕೆ ಜೀ5 ನಲ್ಲಿ ಈ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ, ಆದರೆ ಅಧಿಕೃತ ಘೋಷಣೆ ಇನ್ನೂ ಬಾಕಿ ಇದೆ.
- Rajesh Duggumane
- Updated on: Mar 6, 2025
- 12:39 pm
ಉಪೇಂದ್ರ ಮೆಚ್ಚಿದ ‘ಸೂರಿ ಲವ್ಸ್ ಸಂಧ್ಯಾ’ ಸಿನಿಮಾ ಮಾರ್ಚ್ 6ಕ್ಕೆ ಬಿಡುಗಡೆ
ಮಾರ್ಚ್ 6ರಂದು ‘ಸೂರಿ ಲವ್ಸ್ ಸಂಧ್ಯಾ’ ಸಿನಿಮಾ ತೆರೆಕಾಣಲಿದೆ. ನಟ ಉಪೇಂದ್ರ ಅವರು ಈಗಾಗಲೇ ಈ ಸಿನಿಮಾವನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ಕಾಶಿನಾಥ್ ಪುತ್ರ ಅಭಿಮನ್ಯು ಹಾಗೂ ಅಪೂರ್ವಾ ಅವರು ಈ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದಾರೆ. ಯಾದವ್ ರಾಜ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.
- Madan Kumar
- Updated on: Mar 4, 2025
- 7:36 pm
ಕಾಶಿನಾಥ್ಗೆ ಆ್ಯಸಿಡ್ ಹಾಕಲು ಬಂದಿದ್ದರು: ಭಯಾನಕ ಘಟನೆ ನೆನೆದ ಉಪೇಂದ್ರ
ಕಾಶಿನಾಥ್ ಪುತ್ರ ಅಭಿಮನ್ಯು ನಟನೆಯ ‘ಸೂರಿ ಲವ್ಸ್ ಸಂಧ್ಯಾ’ ಸಿನಿಮಾದ ಟ್ರೇಲರ್ ಲಾಂಚ್ ವೇಳೆ ಉಪೇಂದ್ರ ಅವರು ನೆನಪಿನ ಪುಟ ತೆರೆದಿದ್ದಾರೆ. ಕಾಶಿನಾಥ್ ವ್ಯಕ್ತಿತ್ವ ಹೇಗಿತ್ತು ಎಂಬುದನ್ನು ಅವರು ವಿವರಿಸಿದ್ದಾರೆ. ಒಮ್ಮೆ ಕಾಶಿನಾಥ್ ಮೇಲೆ ಆ್ಯಸಿಡ್ ಹಾಕುವ ಪ್ರಯತ್ನ ನಡೆದಿತ್ತು ಎಂದು ಉಪೇಂದ್ರ ಅವರು ಹೇಳಿದ್ದಾರೆ.
- Madan Kumar
- Updated on: Feb 21, 2025
- 10:56 pm