AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Upendra

Upendra

ಉಪೇಂದ್ರ ಅವರು ನಟ, ನಿರ್ದೇಶಕ ಮತ್ತು ಚಿತ್ರಕಥೆಗಾರ. ಅವರು ಕನ್ನಡ ಚಿತ್ರರಂಗದಲ್ಲಿ ಹೆಚ್ಚು ಗುರುತಿಸಿಕೊಂಡಿದ್ದು, ತೆಲುಗು ಹಾಗೂ ತಮಿಳು ರಂಗದಲ್ಲೂ ಹೆಸರು ಮಾಡಿದ್ದಾರೆ. ಅವರು ರಾಜಕೀಯಕ್ಕೂ ಕಾಲಿಟ್ಟಿದ್ದು, ‘ಪ್ರಜಾಕೀಯ’ ಹೆಸರಿನ ಪಕ್ಷ ಆರಂಭಿಸಿದ್ದಾರೆ. ಅವರು ‘ಎ’, ‘ಓಂ’ ‘ಉಪೇಂದ್ರ ರೀತಿಯ ಸಿನಿಮಾಗಳನ್ನು ನಿರ್ದೇಶನ ಮಾಡಿ ಖ್ಯಾತಿ ಪಡೆದಿದ್ದಾರೆ. ಅವರ ನಿರ್ದೇಶನದ, ಶಿವರಾಜ್‌ಕುಮಾರ್ ನಟನೆಯ ‘ಓಂ’ ಸಿನಿಮಾ ನೂರಾರು ಬಾರಿ ಥಿಯೇಟರ್‌ ‌ನಲ್ಲಿ ರೀ-ರಿಲೀಸ್ ಆಗಿ ದಾಖಲೆ ಬರೆದಿತ್ತು. ಉಪೇಂದ್ರ ಅವರ ಆಲೋಚನೆಗಳು ಭಿನ್ನವಾಗಿ ಇರುತ್ತವೆ. ಈ ಕಾರಣಕ್ಕೆ ಅವರ ಸಿನಿಮಾಗಳು ಜನರಿಗೆ ಇಷ್ಟ ಆಗುತ್ತವೆ. ಉಪೇಂದ್ರ ಬೆಂಗಳೂರಿನಲ್ಲಿ ಸ್ವಂತ ಮನೆ ಹೊಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಪ್ರಿಯಾಂಕ ಅವರನ್ನು ಉಪೇಂದ್ರ ಮದುವೆ ಆಗಿದ್ದು, ಈ ದಂಪತಿಗೆ ಇಬ್ಬರು ಮಕ್ಕಳು

ಇನ್ನೂ ಹೆಚ್ಚು ಓದಿ

ಬೆಂಗಳೂರು ಸೇರಿ 8 ಕಡೆಗಳಲ್ಲಿ ಏಕಕಾಲಕ್ಕೆ ‘45’ ಟ್ರೇಲರ್ ಬಿಡುಗಡೆಗೆ ಪ್ಲ್ಯಾನ್

ಬೆಂಗಳೂರಿನಲ್ಲಿ ಡಿಸೆಂಬರ್ 15ರಂದು ಗ್ರ್ಯಾಂಡ್ ಆಗಿ ‘45’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲು ಪ್ಲ್ಯಾನ್ ಸಜ್ಜಾಗಿದೆ. ಈ ಕಾರ್ಯಕ್ರಮ 7 ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ನೇರ ಪ್ರಸಾರ ಆಗಲಿದೆ. ಆ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಎಲ್ಲ ಅಭಿಮಾನಿಗಳು ಬೆಂಗಳೂರಿಗೆ ಬರೋಕೆ ಆಗಲ್ಲ ಎಂಬುದನ್ನು ಗಮನದಲ್ಲಿ ಇಟ್ಟುಕೊಂಡು ಈ ರೀತಿ ಮಾಡಲಾಗುತ್ತಿದೆ.

100 ಕೋಟಿ ರೂಪಾಯಿ ಬಜೆಟ್​​ನಲ್ಲಿ ಸಿದ್ಧವಾಯ್ತು ‘45’ ಸಿನಿಮಾ?

ಬಹುನಿರೀಕ್ಷಿತ ‘45’ ಸಿನಿಮಾದ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲದಂತೆ ಸಿನಿಮಾ ನಿರ್ಮಾಣ ಮಾಡಿರುವುದಾಗಿ ಚಿತ್ರತಂಡ ಹೇಳಿದೆ. ಈ ಚಿತ್ರದ ಬಜೆಟ್ 100 ಕೋಟಿ ರೂಪಾಯಿ ಎಂದು ಹೇಳಲಾಗುತ್ತಿದೆ. ಡಿ.25ಕ್ಕೆ ‘45’ ರಿಲೀಸ್ ಆಗಲಿದೆ.

ತಮ್ಮ ಯಾವುದೇ ಸಿನಿಮಾ ರಿಲೀಸ್ ಆದರೂ ಉಪ್ಪಿ ಏಕೆ ಥಿಯೇಟರ್​ಗೆ ಹೋಗಲ್ಲ?

ಉಪೇಂದ್ರ ನಟನೆಯ ‘ಆಂಧ್ರ ಕಿಂಗ್ ತಾಲೂಕಾ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ರಾಮ್ ಪೋತಿನೇನಿ ಹೀರೋ. ಈ ಸಿನಿಮಾದಲ್ಲಿ ಉಪೇಂದ್ರ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಪ್ರಚಾರಕ್ಕಾಗಿ ಹಲವು ಸಂದರ್ಶನಗಳನ್ನು ನೀಡಿದ್ದಾರೆ. ಈ ವೇಳೆ ಅವರು ಒಂದು ವಿಷಯ ಹಂಚಿಕೊಂಡಿದ್ದಾರೆ.

ಕನ್ನಡ ಸಿನಿಮಾ ಟೀಕಿಸಲು ಬಂದ ಸಂದರ್ಶಕನಿಗೆ ಉಪೇಂದ್ರ ಖಡಕ್ ಉತ್ತರ

ತೆಲುಗು ಸಂದರ್ಶಕರೊಬ್ಬರ ಪ್ರಶ್ನೆಗೆ ಉಪೇಂದ್ರ ಅವರು ಕನ್ನಡ ಚಿತ್ರರಂಗದ ದೊಡ್ಡ ಬಜೆಟ್ ಸಿನಿಮಾಗಳ ಇತಿಹಾಸವನ್ನು ಅನಾವರಣಗೊಳಿಸಿದ್ದಾರೆ.ವಿಷ್ಣುವರ್ಧನ್ ಕಾಲದಲ್ಲೇ ಸಿಂಗಾಪುರದಲ್ಲಿ ಚಿತ್ರೀಕರಣಗೊಂಡ ರಾಜಾ ಕುಳ್ಳದಂತಹ ಅದ್ಧೂರಿ ಸಿನಿಮಾಗಳು ಬಂದಿದ್ದವು ಎಂದು ಉಪ್ಪಿ ವಿವರಿಸಿದರು. ಕಾಂತಾರ, ಕೆಜಿಎಫ್​ಗೂ ಮುನ್ನವೇ ಕನ್ನಡದಲ್ಲಿ ದೊಡ್ಡ ಬಜೆಟ್ ಚಿತ್ರಗಳು ಸಿದ್ಧವಾಗಿದ್ದವು ಎಂಬ ಸತ್ಯವನ್ನು ತೆರೆದಿಟ್ಟರು.

ಶಂಕರ್​ ನಾಗ್ ಬಯೋಪಿಕ್ ಬಗ್ಗೆ ಮಾತನಾಡಿದ ಉಪೇಂದ್ರ; ಸಿಕ್ತು ದೊಡ್ಡ ಅಪ್​ಡೇಟ್

ಶಂಕರ್ ನಾಗ್ ಜನ್ಮದಿನದಂದು ಉಪೇಂದ್ರ ಅವರು ಅವರ ಬಯೋಪಿಕ್ ಕುರಿತು ಮಾತನಾಡಿದ್ದಾರೆ. ಬಯೋಪಿಕ್ ನಿರ್ಮಾಣವು ಫಿಕ್ಷನ್ ಸಿನಿಮಾ ಮಾಡಿದಷ್ಟು ಸುಲಭವಲ್ಲ.ಅನಂತ್ ನಾಗ್ ಮತ್ತು ಗಾಯತ್ರಿ ಅವರ ಒಪ್ಪಿಗೆ, ಸ್ಕ್ರಿಪ್ಟ್ ತಯಾರಿ ಹಾಗೂ ವಾಣಿಜ್ಯಕ ಅಂಶಗಳ ಸಮತೋಲನ ಕಾಯ್ದುಕೊಳ್ಳುವುದು ಮುಖ್ಯ ಎಂದು ಅವರು ಹೇಳಿದ್ದಾರೆ.

‘ಯುಐ’ ಸಿನಿಮಾಗೆ ಜನ ನೀಡಿದ ರೆಸ್ಪಾನ್ಸ್ ಬಗ್ಗೆ ಉಪೇಂದ್ರಗೆ ಬೇಸರ ಇದೆಯಾ?

ನಟ, ನಿರ್ದೇಶಕ ಉಪೇಂದ್ರ ಅವರ ಅಭಿಮಾನಿಗಳು ‘ಯುಐ’ ಸಿನಿಮಾ ಬಗ್ಗೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಎಲ್ಲರಿಗೂ ಆ ಸಿನಿಮಾ ಇಷ್ಟ ಆಗಲಿಲ್ಲ. ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದ್ದಕ್ಕೆ ಉಪೇಂದ್ರ ಅವರಿಗೆ ಬೇಸರ ಇದೆಯಾ? ಈ ಪ್ರಶ್ನೆಗೆ ಸ್ವತಃ ಉಪೇಂದ್ರ ಅವರು ಉತ್ತರ ನೀಡಿದ್ದಾರೆ.

‘ಬ್ರ್ಯಾಟ್’ ಸಿನಿಮಾ ನೋಡಿ ಸಿಕ್ಕಾಪಟ್ಟೆ ಮೆಚ್ಚಿಕೊಂಡ ರಿಯಲ್ ಸ್ಟಾರ್ ಉಪೇಂದ್ರ

ಶಶಾಂಕ್ ನಿರ್ದೇಶನದ ಬ್ರ್ಯಾಟ್ ಚಿತ್ರ ಹಿಟ್ ಆಗಿದೆ. ಈ ಸಿನಿಮಾ ವೀಕ್ಷಿಸಿದ ಸೆಲೆಬ್ರಿಟಿಗಳು ಸಹ ಮೆಚ್ಚುಗೆ ಸೂಚಿಸಿದ್ದಾರೆ. ಡಾರ್ಲಿಂಗ್ ಕೃಷ್ಣ ನಟನೆಗೆ ಫ್ಯಾನ್ಸ್ ಭೇಷ್ ಎಂದಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಕೂಡ ಈಗ ‘ಬ್ರ್ಯಾಟ್’ ನೋಡಿದ್ದಾರೆ. ಅವರಿಗೆ ಈ ಚಿತ್ರ ತುಂಬ ಇಷ್ಟ ಆಗಿದೆ.

I Am God Review: ರಿಯಲ್ ಸ್ಟಾರ್ ಫ್ಯಾನ್ಸ್ ಇಷ್ಟಪಡುವಂತಿದೆ ಉಪ್ಪಿ ಶಿಷ್ಯನ ‘ಎ’ ಫ್ಲೇವರ್ ಸಿನಿಮಾ

ಉಪೇಂದ್ರ ಅವರ ಗರಡಿಯಲ್ಲಿ ಪಳಗಿದ ರವಿ ಗೌಡ ಅವರು ‘ಐ ಆ್ಯಮ್ ಗಾಡ್’ ಚಿತ್ರದಲ್ಲಿ ನಟಿಸಿ, ನಿರ್ದೇಶಿಸಿದ್ದಾರೆ. ಉಪೇಂದ್ರ ಅವರ ‘ಎ’ ಚಿತ್ರವನ್ನು ನೆನಪಿಸುವ ರೀತಿಯಲ್ಲಿ ರವಿ ಗೌಡ ಅವರು ‘ಐ ಆ್ಯಮ್ ಗಾಡ್’ ಸಿನಿಮಾ ಮಾಡಿದ್ದಾರೆ. ಸಿನಿಮಾದ ಕಥೆ ಏನು? ಒಟ್ಟಾರೆ ಚಿತ್ರ ಯಾವ ರೀತಿ ಇದೆ? ಕಲಾವಿದರ ಅಭಿನಯ ಹೇಗಿದೆ? ಈ ವಿಮರ್ಶೆಯಲ್ಲಿದೆ ಉತ್ತರ..

‘ಎ’ ಸಿನಿಮಾದಲ್ಲಿ ನಟಿಸಿದ ಬಾಲಕ ಬೆಳೆದು ದೊಡ್ಡವನಾಗಿ ಸುದ್ದಿಗೋಷ್ಠಿಯಲ್ಲಿ ಉಪೇಂದ್ರಗೆ ಸಿಕ್ಕಾಗ

'ಎ' ಸಿನಿಮಾದಲ್ಲಿ ಉಪೇಂದ್ರ ಹೇಳಿದ ಮಾತು ಕೇಳಿ ಓಡಿ ಹೋದ ಬಾಲಕ 27 ವರ್ಷಗಳ ಬಳಿಕ ಮತ್ತೆ ನಟ ಉಪೇಂದ್ರಗೆ ಸಿಕ್ಕಿದ್ದರು. ‘ಯುಐ’ ಚಿತ್ರದ ಸುದ್ದಿಗೋಷ್ಠಿ ವೇಳೆ ಈ ಅನಿರೀಕ್ಷಿತ ಭೇಟಿ ನಡೆದಿತ್ತು, ಉಪೇಂದ್ರ ಅವರಿಗೆ ಈ ವಿಚಾರ ಅಚ್ಚರಿ ತಂದಿದೆ. ಬಾಲಕ ಈಗ ದೊಡ್ಡವನಾಗಿ ತಮ್ಮನ್ನು ಭೇಟಿಯಾದ ಕ್ಷಣವನ್ನು ಉಪೇಂದ್ರ ಅಚ್ಚರಿಗೊಂಡರು.

18 ವರ್ಷಗಳ ಬಳಿಕ ರಿಲೀಸ್​ಗೆ ‘ರಕ್ತ ಕಾಶ್ಮೀರ’ ರೆಡಿ; 10 ನಿಮಿಷದ ಹಾಡಲ್ಲಿ 15 ಹೀರೋಗಳು

ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರ 'ರಕ್ತ ಕಾಶ್ಮೀರ' ಸಿನಿಮಾ 18 ವರ್ಷಗಳ ನಂತರ ಬಿಡುಗಡೆಗೆ ಸಿದ್ಧವಾಗಿದೆ. ಉಪೇಂದ್ರ ಮತ್ತು ರಮ್ಯಾ ನಟಿಸಿರುವ ಈ ಚಿತ್ರ ಭಯೋತ್ಪಾದನೆ, ದೇಶಭಕ್ತಿಯನ್ನು ಕುರಿತಾಗಿದೆ. ಕಾಶ್ಮೀರದಲ್ಲಿ ಚಿತ್ರೀಕರಣಗೊಂಡ ಈ ಸಿನಿಮಾದಲ್ಲಿ 15 ನಾಯಕರು ಒಂದು ಹಾಡಿನಲ್ಲಿ ಬರುತ್ತಾರೆ ಅನ್ನೋದು ವಿಶೇಷ.

ಉಪೇಂದ್ರ ಶಿಷ್ಯನ ‘ಐ ಆ್ಯಮ್ ಗಾಡ್’ ಟ್ರೇಲರ್; ನ.7ಕ್ಕೆ ಸಿನಿಮಾ ಬಿಡುಗಡೆ

ರವಿ ಗೌಡ ಹಾಗೂ ವಿಜೇತಾ ಜೋಡಿಯಾಗಿ ನಟಿಸಿರುವ ‘ಐ ಆ್ಯಮ್ ಗಾಡ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಅಜನೀಶ್‌ ಲೋಕನಾಥ್‌ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ಜಿತಿನ್‌ ದಾಸ್‌ ಅವರು ಛಾಯಾಗ್ರಹಣ ಮಾಡಿದ್ದಾರೆ. ನವೆಂಬರ್‌ 7ರಂದು ಈ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಈಗ ಟ್ರೇಲರ್ ಮೂಲಕ ಕುತೂಹಲ ಮೂಡಿಸಲಾಗಿದೆ.

ಪ್ರಿಯಾಂಕಾ ಉಪೇಂದ್ರ ಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಹೇಗಿದೆ ನೋಡಿ..

ನಾಡಿನೆಲ್ಲೆಡೆ ಆಯುಧ ಪೂಜೆಯನ್ನು ಸಡಗರದಿಂದ ಮಾಡಲಾಗುತ್ತಿದೆ. ಆಯುಧಗಳಿಗೆ, ವಾಹನಗಳಿಗೆ, ಯಂತ್ರಗಳಿಗೆ ಪೂಜೆ ಮಾಡಿ ಸಂಭ್ರಮಿಸಲಾಗುತ್ತಿದೆ. ಸೆಲೆಬ್ರಿಟಿಗಳ ಮನೆಯಲ್ಲೂ ಆಯುಧ ಪೂಜೆ ಸಂಭ್ರಮ ಕಳೆ ಕಟ್ಟಿದೆ. ಉಪೇಂದ್ರ ಅವರ ಮನೆಯಲ್ಲಿ ಸಡಗರದಿಂದ ಆಯುಧ ಪೂಜೆ ಮಾಡಲಾಗಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ