AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Upendra

Upendra

ಉಪೇಂದ್ರ ಅವರು ನಟ, ನಿರ್ದೇಶಕ ಮತ್ತು ಚಿತ್ರಕಥೆಗಾರ. ಅವರು ಕನ್ನಡ ಚಿತ್ರರಂಗದಲ್ಲಿ ಹೆಚ್ಚು ಗುರುತಿಸಿಕೊಂಡಿದ್ದು, ತೆಲುಗು ಹಾಗೂ ತಮಿಳು ರಂಗದಲ್ಲೂ ಹೆಸರು ಮಾಡಿದ್ದಾರೆ. ಅವರು ರಾಜಕೀಯಕ್ಕೂ ಕಾಲಿಟ್ಟಿದ್ದು, ‘ಪ್ರಜಾಕೀಯ’ ಹೆಸರಿನ ಪಕ್ಷ ಆರಂಭಿಸಿದ್ದಾರೆ. ಅವರು ‘ಎ’, ‘ಓಂ’ ‘ಉಪೇಂದ್ರ ರೀತಿಯ ಸಿನಿಮಾಗಳನ್ನು ನಿರ್ದೇಶನ ಮಾಡಿ ಖ್ಯಾತಿ ಪಡೆದಿದ್ದಾರೆ. ಅವರ ನಿರ್ದೇಶನದ, ಶಿವರಾಜ್‌ಕುಮಾರ್ ನಟನೆಯ ‘ಓಂ’ ಸಿನಿಮಾ ನೂರಾರು ಬಾರಿ ಥಿಯೇಟರ್‌ ‌ನಲ್ಲಿ ರೀ-ರಿಲೀಸ್ ಆಗಿ ದಾಖಲೆ ಬರೆದಿತ್ತು. ಉಪೇಂದ್ರ ಅವರ ಆಲೋಚನೆಗಳು ಭಿನ್ನವಾಗಿ ಇರುತ್ತವೆ. ಈ ಕಾರಣಕ್ಕೆ ಅವರ ಸಿನಿಮಾಗಳು ಜನರಿಗೆ ಇಷ್ಟ ಆಗುತ್ತವೆ. ಉಪೇಂದ್ರ ಬೆಂಗಳೂರಿನಲ್ಲಿ ಸ್ವಂತ ಮನೆ ಹೊಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಪ್ರಿಯಾಂಕ ಅವರನ್ನು ಉಪೇಂದ್ರ ಮದುವೆ ಆಗಿದ್ದು, ಈ ದಂಪತಿಗೆ ಇಬ್ಬರು ಮಕ್ಕಳು

ಇನ್ನೂ ಹೆಚ್ಚು ಓದಿ

‘ಕತ್ತರಿಗುಪ್ಪೆಯಲ್ಲಿ ನಾನು ಚುನಾವಣೆಗೆ ನಿಲ್ಲಬಹುದು’: ಏನಿದು ಉಪೇಂದ್ರ ಪ್ಲ್ಯಾನ್?

ನಟ ಉಪೇಂದ್ರ ಅವರು ಹೊಸ ಆಲೋಚನೆಗಳ ಮೂಲಕ ಹೆಸರಾದವರು. ಈಗ ಅವರು ಪ್ರಜಾಕೀಯದ ಮೂಲಕ ಮತ್ತೆ ಜನರ ಎದುರು ಬಂದಿದ್ದಾರೆ. ತಮ್ಮ ಪಕ್ಷದ ಹೊಸ ಆ್ಯಪ್ ಶುರು ಮಾಡಿದ್ದಾರೆ. ಆದರೆ ಈವರೆಗೂ ಅವರು ಚುನಾವಣೆಗೆ ಸ್ಪರ್ಧಿಸಿಲ್ಲ. ಆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಅವರೇ ಮಾತನಾಡಿದ್ದಾರೆ.

ಉಪೇಂದ್ರ ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ರಿಯಲ್ ಸ್ಟಾರ್

ನಟ, ನಿರ್ದೇಶಕ ಉಪೇಂದ್ರ ಅವರು ಮತ್ತೆ ಪ್ರಜಾಕೀಯ ಕೆಲಸಗಳಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಇಂದು (ಏಪ್ರಿಲ್ 1) ಅವರು ‘ದಿ ರಿಯಲ್ ಪ್ರಜಾಕೀಯ’ ಆ್ಯಪ್ ಬಿಡುಗಡೆ ಮಾಡಿದರು. ಈ ವೇಳೆ ಅವರು ಸುದ್ದಿಗೋಷ್ಠಿ ನಡೆಸಿದರು. ಮಾಧ್ಯಮದ ಪ್ರಶ್ನೆಗಳಿಗೆ ಉತ್ತರ ನೀಡಿದರು. ವಿಡಿಯೋ ನೋಡಿ..

Upendra on April Fool Day: ಏಪ್ರಿಲ್ ಮೂರ್ಖರ ದಿನವಲ್ಲ, ಬುದ್ಧಿವಂತರ ದಿನ: ಉಪೇಂದ್ರ

Upendra Press Meet on April Fool Day: ಏಪ್ರಿಲ್ 1ರಂದು ಮೂರ್ಖರ ದಿನ ಎಂದು ಆಚರಣೆ ಮಾಡಲಾಗುತ್ತದೆ. ಜನರನ್ನು ಮೂರ್ಖರನ್ನಾಗಿ ಮಾಡುವ ಕೆಲಸ ಇಂದು ಆಗುತ್ತದೆ. ಆದರೆ, ಈ ದಿನವನ್ನು ಬುದ್ಧಿವಂತರ ದಿನವನ್ನಾಗಿ ಆಚರಿಸಬೇಕು ಎಂದು ಉಪೇಂದ್ರ ಕೋರಿದ್ದಾರೆ. ಈ ಸಂದರ್ಭದ ವಿಡಿಯೋ ಗಮನ ಸೆಳೆದಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಥ್ರಿಲ್ಲರ್ ಮಂಜು, ಉಪೇಂದ್ರ ನಡುವಿನ 35 ವರ್ಷಗಳ ಸ್ನೇಹ ಎಂಥದ್ದು ನೋಡಿ

ಉಪೇಂದ್ರ ಮತ್ತು ಥ್ರಿಲ್ಲರ್ ಮಂಜು ಒಟ್ಟಿಗೆ ಪ್ರಯಾಣ ಮಾಡಿದ್ದಾರೆ. ಎಲ್ಲಿಗೆ ಎಂಬುದನ್ನು ಮಂಜು ವಿವರಿಸಿದ್ದಾರೆ. ಆತ್ಮೀಯ ಆಹ್ವಾನವನ್ನು ಸ್ವೀಕರಿಸಿ ಬಂದಿದ್ದಕ್ಕೆ ಉಪೇಂದ್ರ ಅವರಿಗೆ ಥ್ರಿಲ್ಲರ್ ಮಂಜು ಧನ್ಯವಾದ ತಿಳಿಸಿದ್ದಾರೆ. ‘ಉಪೇಂದ್ರ ಅವರು ನನ್ನ ಆತ್ಮೀಯರು, ಸ್ನೇಹಿತರು, ನನ್ನ ಸಹೋದರ. ಎಲ್ಲಕ್ಕಿಂತ ಮಿಗಿಲಾಗಿ ಒಳ್ಳೆಯ ವ್ಯಕ್ತಿ’ ಎಂದು ಥ್ರಿಲ್ಲರ್ ಮಂಜು ಹೇಳಿದ್ದಾರೆ.

ಉಪೇಂದ್ರ, ರಮ್ಯಾ ನಟನೆಯ ‘ರಕ್ತ ಕಾಶ್ಮೀರ’ ಸಿನಿಮಾ ಜನವರಿ 30ಕ್ಕೆ ರಿಲೀಸ್

ಎಸ್.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ರಕ್ತ ಕಾಶ್ಮೀರ’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ರಮ್ಯಾ, ಉಪೇಂದ್ರ, ದೊಡ್ಡಣ್ಣ, ಕುರಿ ಪ್ರತಾಪ್ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ದೇಶಭಕ್ತಿ ಕಥಾಹಂದರ ಹೊಂದಿರುವ ಈ ಸಿನಿಮಾ ಜನವರಿ 30ಕ್ಕೆ ರಾಜ್ಯಾದ್ಯಂತ ರಿಲೀಸ್ ಆಗಲಿದೆ.

‘45’ ಸಿನಿಮಾ ಒಟಿಟಿ ರಿಲೀಸ್: ಜೀ5 ಮೂಲಕ ಜನವರಿ 23ರಿಂದ ಪ್ರಸಾರ ಶುರು

ಜನವರಿ 23ರಿಂದ ಜೀ5 ಒಟಿಟಿ ಮೂಲಕ ‘45’ ಸಿನಿಮಾ ಪ್ರಸಾರ ಆಗಲಿದೆ. ಶಿವರಾಜ್​​ಕುಮಾರ್, ರಾಜ್ ಬಿ. ಶೆಟ್ಟಿ, ಉಪೇಂದ್ರ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಅರ್ಜುನ್ ಜನ್ಯ ನಿರ್ದೇಶನದ ಈ ಸಿನಿಮಾಗೆ ಎಂ. ರಮೇಶ್ ರೆಡ್ಡಿ ಅವರು ಬಂಡವಾಳ ಹೂಡಿದ್ದಾರೆ.

35 ವರ್ಷಗಳ ಹಿಂದಿನ ಉಪೇಂದ್ರ ಧಾರಾವಾಹಿಯ ಕ್ಲಿಪ್ ವೈರಲ್; ಆಗ ಉಪ್ಪಿ ಹೇಗಿದ್ರು ನೋಡಿ

Upendra Serial Clip: ಉಪೇಂದ್ರ ಅವರು ಯಾವುದೇ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಬಂದು, ನಿರ್ದೇಶಕ-ನಟನಾಗಿ ಬೆಳೆದ ರೋಚಕ ಪಯಣ ಈ ಲೇಖನದಲ್ಲಿ ಅನಾವರಣಗೊಂಡಿದೆ. 1991ರ 'ನಿರ್ಮಲೆಯ ಸಾಕ್ಷಿ' ಧಾರಾವಾಹಿಯ ಅವರ ಹಳೆಯ ವಿಡಿಯೋ ಕ್ಲಿಪ್ ವೈರಲ್ ಆಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..

ಉಪೇಂದ್ರ, ರಾಜ್​ ಬಿ. ಶೆಟ್ಟಿ, ಶಿವರಾಜ್​​ಕುಮಾರ್ ನಟನೆಯ ‘45’ ಚಿತ್ರ ಬಿಡುಗಡೆ ಆಗಿದೆ. ಈ ಸಿನಿಮಾದ ಬಾಕ್ಸ್ ಆಫೀಸ್​ ಕಲೆಕ್ಷನ್ ಎಷ್ಟು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಅಲ್ಲದೇ, ಈ ಚಿತ್ರದ ಪೈರಸಿ ಆಗಿರುವುದು ಬೇಸರದ ಸಂಗತಿ. ಈ ಬಗ್ಗೆ ನಿರ್ಮಾಪಕ ರಮೇಶ್ ರೆಡ್ಡಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

‘45’ ಸಿನಿಮಾ ಪ್ರೀಮಿಯರ್ ಶೋ: ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ಫ್ಯಾನ್ಸ್ ಸಂಭ್ರಮ ನೋಡಿ

ಶಿವರಾಜ್​​ಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಅವರು ‘45’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸ್ಟಾರ್ ಹೀರೋಗಳ ಅಭಿಮಾನಿಗಳು ಚಿತ್ರಮಂದಿರಗಳ ಎದುರು ಜೋರಾಗಿ ಸಂಭ್ರಮಿಸುತ್ತಿದ್ದಾರೆ. ಈಗಾಗಲೇ ‘45’ ಚಿತ್ರ ನೋಡಿದ ಅಭಿಮಾನಿಗಳು ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಫ್ಯಾನ್ಸ್ ಸಂಭ್ರಮದ ವಿಡಿಯೋ ನೋಡಿ..

ಅಂದು ಸುಲೋಚನಾ, ಇಂದು ಶಿವಣ್ಣ; ‘45’ ಟ್ರೇಲರ್​ಗೆ ಭಾರಿ ಮೆಚ್ಚುಗೆ

ನಟ ಶಿವರಾಜ್‌ಕುಮಾರ್ ಅವರ '45' ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಭಾರಿ ಮೆಚ್ಚುಗೆ ಗಳಿಸಿದೆ. ಸೀರೆ ಉಟ್ಟು ಕಾಣಿಸಿಕೊಂಡಿರುವ ಶಿವಣ್ಣನ ಪಾತ್ರ ಎಲ್ಲರ ಗಮನ ಸೆಳೆದಿದೆ. ಈ ಹಿಂದೆ 'ಸು ಫ್ರಮ್ ಸೋ' ಚಿತ್ರದಲ್ಲಿ ಜೆಪಿ ತುಮ್ಮಿನಾಡು ಸೀರೆ ಲುಕ್ ಪ್ರಸಿದ್ಧವಾಗಿತ್ತು. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಚೊಚ್ಚಲ ಚಿತ್ರ ‘45’ ಡಿಸೆಂಬರ್ 25ಕ್ಕೆ ತೆರೆಗೆ ಬರಲಿದೆ.

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..

ರಾಜ್ ಬಿ. ಶೆಟ್ಟಿ, ಶಿವರಾಜ್​​ಕುಮಾರ್, ಉಪೇಂದ್ರ ಅವರು ಒಟ್ಟಿಗೆ ನಟಿಸಿದ ‘45’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನಲ್ಲಿ ಅದ್ದೂರಿಯಾಗಿ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕ ಅರ್ಜುನ್ ಜನ್ಯ ಸೇರಿದಂತೆ ಇಡೀ ‘45’ ಚಿತ್ರತಂಡ ಭಾಗಿ ಆಗಿದೆ. ಲೈವ್ ವಿಡಿಯೋ ಇಲ್ಲಿದೆ ನೋಡಿ..

ಬೆಂಗಳೂರು ಸೇರಿ 8 ಕಡೆಗಳಲ್ಲಿ ಏಕಕಾಲಕ್ಕೆ ‘45’ ಟ್ರೇಲರ್ ಬಿಡುಗಡೆಗೆ ಪ್ಲ್ಯಾನ್

ಬೆಂಗಳೂರಿನಲ್ಲಿ ಡಿಸೆಂಬರ್ 15ರಂದು ಗ್ರ್ಯಾಂಡ್ ಆಗಿ ‘45’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲು ಪ್ಲ್ಯಾನ್ ಸಜ್ಜಾಗಿದೆ. ಈ ಕಾರ್ಯಕ್ರಮ 7 ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ನೇರ ಪ್ರಸಾರ ಆಗಲಿದೆ. ಆ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಎಲ್ಲ ಅಭಿಮಾನಿಗಳು ಬೆಂಗಳೂರಿಗೆ ಬರೋಕೆ ಆಗಲ್ಲ ಎಂಬುದನ್ನು ಗಮನದಲ್ಲಿ ಇಟ್ಟುಕೊಂಡು ಈ ರೀತಿ ಮಾಡಲಾಗುತ್ತಿದೆ.