
Upendra
ಉಪೇಂದ್ರ ಅವರು ನಟ, ನಿರ್ದೇಶಕ ಮತ್ತು ಚಿತ್ರಕಥೆಗಾರ. ಅವರು ಕನ್ನಡ ಚಿತ್ರರಂಗದಲ್ಲಿ ಹೆಚ್ಚು ಗುರುತಿಸಿಕೊಂಡಿದ್ದು, ತೆಲುಗು ಹಾಗೂ ತಮಿಳು ರಂಗದಲ್ಲೂ ಹೆಸರು ಮಾಡಿದ್ದಾರೆ. ಅವರು ರಾಜಕೀಯಕ್ಕೂ ಕಾಲಿಟ್ಟಿದ್ದು, ‘ಪ್ರಜಾಕೀಯ’ ಹೆಸರಿನ ಪಕ್ಷ ಆರಂಭಿಸಿದ್ದಾರೆ. ಅವರು ‘ಎ’, ‘ಓಂ’ ‘ಉಪೇಂದ್ರ ರೀತಿಯ ಸಿನಿಮಾಗಳನ್ನು ನಿರ್ದೇಶನ ಮಾಡಿ ಖ್ಯಾತಿ ಪಡೆದಿದ್ದಾರೆ. ಅವರ ನಿರ್ದೇಶನದ, ಶಿವರಾಜ್ಕುಮಾರ್ ನಟನೆಯ ‘ಓಂ’ ಸಿನಿಮಾ ನೂರಾರು ಬಾರಿ ಥಿಯೇಟರ್ ನಲ್ಲಿ ರೀ-ರಿಲೀಸ್ ಆಗಿ ದಾಖಲೆ ಬರೆದಿತ್ತು. ಉಪೇಂದ್ರ ಅವರ ಆಲೋಚನೆಗಳು ಭಿನ್ನವಾಗಿ ಇರುತ್ತವೆ. ಈ ಕಾರಣಕ್ಕೆ ಅವರ ಸಿನಿಮಾಗಳು ಜನರಿಗೆ ಇಷ್ಟ ಆಗುತ್ತವೆ. ಉಪೇಂದ್ರ ಬೆಂಗಳೂರಿನಲ್ಲಿ ಸ್ವಂತ ಮನೆ ಹೊಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಪ್ರಿಯಾಂಕ ಅವರನ್ನು ಉಪೇಂದ್ರ ಮದುವೆ ಆಗಿದ್ದು, ಈ ದಂಪತಿಗೆ ಇಬ್ಬರು ಮಕ್ಕಳು
‘ಪುಷ್ಪ’ ನಿರ್ದೇಶಕ ಸಿನಿಮಾಗೆ ಕನ್ನಡದ ಈ ಚಿತ್ರಗಳೇ ಸ್ಫೂರ್ತಿ; ನಾಚಿಕೆಬಿಟ್ಟು ಹೇಳಿದ ಸುಕುಮಾರ್
ಸುಕುಮಾರ್ ಅವರು ತಮ್ಮ ಯಶಸ್ವಿ ಚಿತ್ರಗಳಾದ ‘ಪುಷ್ಪ 2’ ಸೇರಿದಂತೆ ಅನೇಕ ಚಿತ್ರಗಳ ಚಿತ್ರಕಥೆ ರಚನೆಗೆ ಕನ್ನಡದ ಖ್ಯಾತ ನಿರ್ದೇಶಕನ ಸಿನಿಮಾಗಳು ಪ್ರಮುಖ ಸ್ಫೂರ್ತಿ ಎಂದು ಬಹಿರಂಗಪಡಿಸಿದ್ದಾರೆ. ಆ ಚಿತ್ರಗಳು ತಮ್ಮ ಮೇಲೆ ಬಲವಾದ ಪ್ರಭಾವ ಬೀರಿವೆ ಎಂದು ಅವರು ಹೇಳಿದ್ದಾರೆ. ಈ ಹೇಳಿಕೆ ಸಿನಿಮಾ ರಂಗದಲ್ಲಿ ಅಚ್ಚರಿ ಮೂಡಿಸಿದೆ.
- Rajesh Duggumane
- Updated on: May 29, 2025
- 7:58 am
‘ಎ ಹಾಗೂ ಓಂ ಚಿತ್ರವನ್ನು ನಾನು ಮಾಡಿದ್ದರೆ ಈಗಾಗಲೇ ನಿವೃತ್ತಿ ಪಡೆದಿರುತ್ತಿದ್ದೆ’; ‘ಪುಷ್ಪ’ ನಿರ್ದೇಶಕ ಸುಕುಮಾರ್
ಸುಕುಮಾರ್ ಅವರು ಉಪೇಂದ್ರ ನಿರ್ದೇಶನದ 'ಎ', 'ಓಂ', ಮತ್ತು 'ಉಪೇಂದ್ರ' ಚಿತ್ರಗಳನ್ನು ಹೊಗಳಿದ್ದಾರೆ. ಈ ಚಿತ್ರಗಳು ಅವರನ್ನು ಬೆರಗುಗೊಳಿಸಿವೆ ಎಂದು ಹೇಳಿದ್ದಾರೆ. ಅವರು ಈ ಚಿತ್ರಗಳಿಂದ ಸ್ಫೂರ್ತಿ ಪಡೆದು ತಮ್ಮ ಚಿತ್ರಗಳಲ್ಲಿ ಅಳವಡಿಸಿಕೊಂಡಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
- Rajesh Duggumane
- Updated on: May 29, 2025
- 7:28 am
ಆಂಧ್ರ ಕಿಂಗ್ ಆಗಿದ್ದಾರೆ ಉಪೇಂದ್ರ, ಚಿತ್ರೀಕರಣ ಶುರು, ಆದರೆ…
Upendra: ಕನ್ನಡ ಸಿನಿಮಾ ಪ್ರೇಮಿಗಳ ಪಾಲಿಗೆ, ರಿಯಲ್ ಸ್ಟಾರ್, ಸೂಪರ್ ಸ್ಟಾರ್ ಆಗಿರುವ ಉಪೇಂದ್ರ ಇನ್ನು ಮುಂದೆ ‘ ಆಂಧ್ರ ಕಿಂಗ್. ಹೌದು, ಅವರ ಅಭಿಮಾನಿಗಳು ಉಪೇಂದ್ರ ಅವರ ಭಾರಿ ದೊಡ್ಡ ಕಟೌಟ್ ನಿಲ್ಲಿಸಿ, ಅದಕ್ಕೆ ಸ್ಪರ್ಧೆಗೆ ಬಿದ್ದು ಹಾರಗಳನ್ನು ಹಾಕುತ್ತಿದ್ದಾರೆ. ಉಪೇಂದ್ರ ಚಿತ್ರವಿರುವ ಟಿ-ಶರ್ಟ್ ತೊಟ್ಟುಕೊಂಡು ಉಪೇಂದ್ರಗೆ ‘ಆಂಧ್ರ ಕಿಂಗ್’ ಎಂದು ಜೈಕಾರಗಳನ್ನು ಹಾಕುತ್ತಿದ್ದಾರೆ. ಏನಿದು ಕತೆ? ಇಲ್ಲಿದೆ ಮಾಹಿತಿ...
- Manjunatha C
- Updated on: May 24, 2025
- 8:57 pm
ಉಪೇಂದ್ರ ನಿರ್ದೇಶನಕ್ಕೆ ನಾನು ದೊಡ್ಡ ಫ್ಯಾನ್ ಎಂದ ರಜನಿ ಸಿನಿಮಾ ಡೈರೆಕ್ಟರ್
ಲೋಕೇಶ್ ಕನಗರಾಜ್ ಅವರು ತಮ್ಮ ಸಂದರ್ಶನದಲ್ಲಿ ರಜನಿಕಾಂತ್ ನಟನೆಯ 'ಕೂಲಿ' ಚಿತ್ರದಲ್ಲಿ ಉಪೇಂದ್ರರೊಂದಿಗೆ ಕೆಲಸ ಮಾಡುವ ಅನುಭವ ಹಂಚಿಕೊಂಡಿದ್ದಾರೆ. ಅವರು ಉಪೇಂದ್ರ ಅವರ ಅಭಿಮಾನಿಯಾಗಿದ್ದು, ಅವರ ನಿರ್ದೇಶನದ ಶಕ್ತಿಯನ್ನು ಅರ್ಥಮಾಡಿಕೊಂಡ ಬಳಿಕ ಈ ಚಿತ್ರದಲ್ಲಿ ಕೆಲಸ ಮಾಡಲು ಸಾಧ್ಯವಾಯಿತು ಎಂದು ಹೇಳಿದ್ದಾರೆ.
- Shreelaxmi H
- Updated on: May 14, 2025
- 7:48 am
ಸ್ಯಾಂಡಲ್ವುಡ್ಗೆ ರಿಯಲ್ ಸ್ಟಾರ್ ಉಪ್ಪಿ ಮಗ ಆಯುಷ್ ಎಂಟ್ರಿ; ಯಶ್ ಸಿನಿಮಾ ಡೈರೆಕ್ಟರ್ ನಿರ್ದೇಶನ
ಉಪೇಂದ್ರರ ಪುತ್ರ ಆಯುಷ್ ಅವರು ಬಣ್ಣದ ಲೋಕಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಅವರ ಮೊದಲ ಸಿನಿಮಾದ ಸ್ಕ್ರಿಪ್ಟ್ ಪೂಜೆ ಮಂತ್ರಾಲಯದಲ್ಲಿ ನಡೆದಿದೆ. ಪುರುಷೋತ್ತಮ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ವೇಣು ಗೋಪಾಲ್ ಛಾಯಾಗ್ರಹಣ ಮಾಡಲಿದ್ದಾರೆ. ಆಯುಷ್ ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದಾರೆ ಮತ್ತು ಫಿಟ್ನೆಸ್ ಮೇಲೆ ಗಮನ ಹರಿಸಿದ್ದಾರೆ.
- Rajesh Duggumane
- Updated on: May 12, 2025
- 1:39 pm
ಆಸ್ಪತ್ರೆಯಿಂದ ಉಪೇಂದ್ರ ಡಿಸ್ಚಾರ್ಜ್; ರಿಯಲ್ ಸ್ಟಾರ್ಗೆ ಎದುರಾದ ಆರೋಗ್ಯ ಸಮಸ್ಯೆ ಏನು?
ರಿಯಲ್ ಸ್ಟಾರ್ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಯಿತು. ಆದ್ದರಿಂದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಕೆಲವು ಗಂಟೆಗಳ ಕಾಲ ಚಿಕಿತ್ಸೆ ಪಡೆದ ಅವರು ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಉಪೇಂದ್ರ ಈಗ ಚೇತರಿಸಿಕೊಂಡಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
- Madan Kumar
- Updated on: May 5, 2025
- 6:17 pm
ಉಪೇಂದ್ರ-ಪ್ರಿಯಾಂಕಾ ಮಗಳಿಗೆ ಹುಟ್ಟುಹಬ್ಬದ ಸಂಭ್ರಮ; ಐಶ್ವರ್ಯಾಗೆ ಈಗೆಷ್ಟು ವರ್ಷ?
ನಟ ಉಪೇಂದ್ರ ಹಾಗೂ ಅವರ ಪತ್ನಿ ಪ್ರಿಯಾಂಕಾ ಆಗಾಗ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಾರೆ. ಅವರ ಮಕ್ಕಳು ಕೂಡ ಅಲ್ಲಲ್ಲಿ ಕಾಣಿಸಿಕೊಂಡಿದ್ದು ಇದೆ. ಈಗ ಪ್ರಿಯಾಂಕಾ ಮಗಳು ಐಶ್ವರ್ಯಾಗೆ ಹುಟ್ಟುಹಬ್ಬದ ಸಂಭ್ರಮ. ಆ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ. ಆ ಬಗ್ಗೆ ಇಲ್ಲಿದೆ ವಿವರ.
- Rajesh Duggumane
- Updated on: Apr 20, 2025
- 7:38 am
‘45’ ಚಿತ್ರದ ಪ್ರಚಾರಕ್ಕಾಗಿ ಮುಂಬೈಗೆ ಹಾರಿದ ಶಿವಣ್ಣ, ಉಪೇಂದ್ರ, ಅರ್ಜುನ್ ಜನ್ಯ
ಶಿವರಾಜ್ಕುಮಾರ್ ಹಾಗೂ ಉಪೇಂದ್ರ ‘ಕಬ್ಜ’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಈಗ ಇವರು ‘45’ ಚಿತ್ರದಲ್ಲಿ ಮತ್ತೆ ಒಂದಾಗಿದ್ದಾರೆ. ಇವರ ಜೊತೆ ರಾಜ್ ಬಿ. ಶೆಟ್ಟಿ ಕೂಡ ಸೇರ್ಪಡೆ ಆಗಿದ್ದಾರೆ. ಸಂಗೀತ ಸಂಯೋಜಕ ಅರ್ಜುನ್ ಜನ್ಯ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.
- Rajesh Duggumane
- Updated on: Apr 15, 2025
- 10:42 am
‘ವಿವಾದಗಳೇ ಇಲ್ಲದ ಕಲಾವಿದ’: ಬ್ಯಾಂಕ್ ಜನಾರ್ದನ್ ಅಗಲಿಕೆಗೆ ಉಪೇಂದ್ರ ಸಂತಾಪ
ಉಪೇಂದ್ರ ಅವರು ವೃತ್ತಿಜೀವನದ ಆರಂಭದ ದಿನಗಳಲ್ಲಿ ನಿರ್ದೇಶಿಸಿದ್ದ ‘ತರ್ಲೆ ನನ್ಮಗ’, ‘ಶ್’ ಸಿನಿಮಾಗಳಲ್ಲಿ ಬ್ಯಾಂಕ್ ಜನಾರ್ದನ್ ಅವರು ನಟಿಸಿದ್ದರು. ಇಂದು (ಏಪ್ರಿಲ್ 14) ಬ್ಯಾಂಕ್ ಜನಾರ್ದನ್ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ಉಪೇಂದ್ರ ಅವರು ಆ ದಿನಗಳನ್ನು ಸ್ಮರಿಸಿಕೊಂಡಿದ್ದಾರೆ. ಈ ವೇಳೆ ಸಾಧು ಕೋಕಿಲ ಕೂಡ ಮಾತನಾಡಿದ್ದಾರೆ.
- Madan Kumar
- Updated on: Apr 14, 2025
- 3:13 pm
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಶಿವರಾಜ್ಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಅವರು ‘45’ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದಾರೆ. ಈ ಸಿನಿಮಾದ ಟೀಸರ್ ರಿಲೀಸ್ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಟೀಸರ್ ಬಿಡುಗಡೆ ವೇಳೆ ಉಪೇಂದ್ರ ಅವರು ಈ ಸಿನಿಮಾ ತಂಡದ ಬಗ್ಗೆ ಮಾತಾಡಿದರು. ಶಿವರಾಜ್ಕುಮಾರ್ ಹಾಗೂ ರಾಜ್ ಬಿ. ಶೆಟ್ಟಿ ಜತೆ ಕೆಲಸ ಮಾಡಿದ ಅನುಭವವನ್ನು ಉಪೇಂದ್ರ ಹಂಚಿಕೊಂಡರು.
- Madan Kumar
- Updated on: Mar 31, 2025
- 9:09 pm