AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Upendra

Upendra

ಉಪೇಂದ್ರ ಅವರು ನಟ, ನಿರ್ದೇಶಕ ಮತ್ತು ಚಿತ್ರಕಥೆಗಾರ. ಅವರು ಕನ್ನಡ ಚಿತ್ರರಂಗದಲ್ಲಿ ಹೆಚ್ಚು ಗುರುತಿಸಿಕೊಂಡಿದ್ದು, ತೆಲುಗು ಹಾಗೂ ತಮಿಳು ರಂಗದಲ್ಲೂ ಹೆಸರು ಮಾಡಿದ್ದಾರೆ. ಅವರು ರಾಜಕೀಯಕ್ಕೂ ಕಾಲಿಟ್ಟಿದ್ದು, ‘ಪ್ರಜಾಕೀಯ’ ಹೆಸರಿನ ಪಕ್ಷ ಆರಂಭಿಸಿದ್ದಾರೆ. ಅವರು ‘ಎ’, ‘ಓಂ’ ‘ಉಪೇಂದ್ರ ರೀತಿಯ ಸಿನಿಮಾಗಳನ್ನು ನಿರ್ದೇಶನ ಮಾಡಿ ಖ್ಯಾತಿ ಪಡೆದಿದ್ದಾರೆ. ಅವರ ನಿರ್ದೇಶನದ, ಶಿವರಾಜ್‌ಕುಮಾರ್ ನಟನೆಯ ‘ಓಂ’ ಸಿನಿಮಾ ನೂರಾರು ಬಾರಿ ಥಿಯೇಟರ್‌ ‌ನಲ್ಲಿ ರೀ-ರಿಲೀಸ್ ಆಗಿ ದಾಖಲೆ ಬರೆದಿತ್ತು. ಉಪೇಂದ್ರ ಅವರ ಆಲೋಚನೆಗಳು ಭಿನ್ನವಾಗಿ ಇರುತ್ತವೆ. ಈ ಕಾರಣಕ್ಕೆ ಅವರ ಸಿನಿಮಾಗಳು ಜನರಿಗೆ ಇಷ್ಟ ಆಗುತ್ತವೆ. ಉಪೇಂದ್ರ ಬೆಂಗಳೂರಿನಲ್ಲಿ ಸ್ವಂತ ಮನೆ ಹೊಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಪ್ರಿಯಾಂಕ ಅವರನ್ನು ಉಪೇಂದ್ರ ಮದುವೆ ಆಗಿದ್ದು, ಈ ದಂಪತಿಗೆ ಇಬ್ಬರು ಮಕ್ಕಳು

ಇನ್ನೂ ಹೆಚ್ಚು ಓದಿ

ಉಪೇಂದ್ರ, ರಮ್ಯಾ ನಟನೆಯ ‘ರಕ್ತ ಕಾಶ್ಮೀರ’ ಸಿನಿಮಾ ಜನವರಿ 30ಕ್ಕೆ ರಿಲೀಸ್

ಎಸ್.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ರಕ್ತ ಕಾಶ್ಮೀರ’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ರಮ್ಯಾ, ಉಪೇಂದ್ರ, ದೊಡ್ಡಣ್ಣ, ಕುರಿ ಪ್ರತಾಪ್ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ದೇಶಭಕ್ತಿ ಕಥಾಹಂದರ ಹೊಂದಿರುವ ಈ ಸಿನಿಮಾ ಜನವರಿ 30ಕ್ಕೆ ರಾಜ್ಯಾದ್ಯಂತ ರಿಲೀಸ್ ಆಗಲಿದೆ.

‘45’ ಸಿನಿಮಾ ಒಟಿಟಿ ರಿಲೀಸ್: ಜೀ5 ಮೂಲಕ ಜನವರಿ 23ರಿಂದ ಪ್ರಸಾರ ಶುರು

ಜನವರಿ 23ರಿಂದ ಜೀ5 ಒಟಿಟಿ ಮೂಲಕ ‘45’ ಸಿನಿಮಾ ಪ್ರಸಾರ ಆಗಲಿದೆ. ಶಿವರಾಜ್​​ಕುಮಾರ್, ರಾಜ್ ಬಿ. ಶೆಟ್ಟಿ, ಉಪೇಂದ್ರ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಅರ್ಜುನ್ ಜನ್ಯ ನಿರ್ದೇಶನದ ಈ ಸಿನಿಮಾಗೆ ಎಂ. ರಮೇಶ್ ರೆಡ್ಡಿ ಅವರು ಬಂಡವಾಳ ಹೂಡಿದ್ದಾರೆ.

35 ವರ್ಷಗಳ ಹಿಂದಿನ ಉಪೇಂದ್ರ ಧಾರಾವಾಹಿಯ ಕ್ಲಿಪ್ ವೈರಲ್; ಆಗ ಉಪ್ಪಿ ಹೇಗಿದ್ರು ನೋಡಿ

Upendra Serial Clip: ಉಪೇಂದ್ರ ಅವರು ಯಾವುದೇ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಬಂದು, ನಿರ್ದೇಶಕ-ನಟನಾಗಿ ಬೆಳೆದ ರೋಚಕ ಪಯಣ ಈ ಲೇಖನದಲ್ಲಿ ಅನಾವರಣಗೊಂಡಿದೆ. 1991ರ 'ನಿರ್ಮಲೆಯ ಸಾಕ್ಷಿ' ಧಾರಾವಾಹಿಯ ಅವರ ಹಳೆಯ ವಿಡಿಯೋ ಕ್ಲಿಪ್ ವೈರಲ್ ಆಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..

ಉಪೇಂದ್ರ, ರಾಜ್​ ಬಿ. ಶೆಟ್ಟಿ, ಶಿವರಾಜ್​​ಕುಮಾರ್ ನಟನೆಯ ‘45’ ಚಿತ್ರ ಬಿಡುಗಡೆ ಆಗಿದೆ. ಈ ಸಿನಿಮಾದ ಬಾಕ್ಸ್ ಆಫೀಸ್​ ಕಲೆಕ್ಷನ್ ಎಷ್ಟು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಅಲ್ಲದೇ, ಈ ಚಿತ್ರದ ಪೈರಸಿ ಆಗಿರುವುದು ಬೇಸರದ ಸಂಗತಿ. ಈ ಬಗ್ಗೆ ನಿರ್ಮಾಪಕ ರಮೇಶ್ ರೆಡ್ಡಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

‘45’ ಸಿನಿಮಾ ಪ್ರೀಮಿಯರ್ ಶೋ: ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ಫ್ಯಾನ್ಸ್ ಸಂಭ್ರಮ ನೋಡಿ

ಶಿವರಾಜ್​​ಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಅವರು ‘45’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸ್ಟಾರ್ ಹೀರೋಗಳ ಅಭಿಮಾನಿಗಳು ಚಿತ್ರಮಂದಿರಗಳ ಎದುರು ಜೋರಾಗಿ ಸಂಭ್ರಮಿಸುತ್ತಿದ್ದಾರೆ. ಈಗಾಗಲೇ ‘45’ ಚಿತ್ರ ನೋಡಿದ ಅಭಿಮಾನಿಗಳು ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಫ್ಯಾನ್ಸ್ ಸಂಭ್ರಮದ ವಿಡಿಯೋ ನೋಡಿ..

ಅಂದು ಸುಲೋಚನಾ, ಇಂದು ಶಿವಣ್ಣ; ‘45’ ಟ್ರೇಲರ್​ಗೆ ಭಾರಿ ಮೆಚ್ಚುಗೆ

ನಟ ಶಿವರಾಜ್‌ಕುಮಾರ್ ಅವರ '45' ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಭಾರಿ ಮೆಚ್ಚುಗೆ ಗಳಿಸಿದೆ. ಸೀರೆ ಉಟ್ಟು ಕಾಣಿಸಿಕೊಂಡಿರುವ ಶಿವಣ್ಣನ ಪಾತ್ರ ಎಲ್ಲರ ಗಮನ ಸೆಳೆದಿದೆ. ಈ ಹಿಂದೆ 'ಸು ಫ್ರಮ್ ಸೋ' ಚಿತ್ರದಲ್ಲಿ ಜೆಪಿ ತುಮ್ಮಿನಾಡು ಸೀರೆ ಲುಕ್ ಪ್ರಸಿದ್ಧವಾಗಿತ್ತು. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಚೊಚ್ಚಲ ಚಿತ್ರ ‘45’ ಡಿಸೆಂಬರ್ 25ಕ್ಕೆ ತೆರೆಗೆ ಬರಲಿದೆ.

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..

ರಾಜ್ ಬಿ. ಶೆಟ್ಟಿ, ಶಿವರಾಜ್​​ಕುಮಾರ್, ಉಪೇಂದ್ರ ಅವರು ಒಟ್ಟಿಗೆ ನಟಿಸಿದ ‘45’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನಲ್ಲಿ ಅದ್ದೂರಿಯಾಗಿ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕ ಅರ್ಜುನ್ ಜನ್ಯ ಸೇರಿದಂತೆ ಇಡೀ ‘45’ ಚಿತ್ರತಂಡ ಭಾಗಿ ಆಗಿದೆ. ಲೈವ್ ವಿಡಿಯೋ ಇಲ್ಲಿದೆ ನೋಡಿ..

ಬೆಂಗಳೂರು ಸೇರಿ 8 ಕಡೆಗಳಲ್ಲಿ ಏಕಕಾಲಕ್ಕೆ ‘45’ ಟ್ರೇಲರ್ ಬಿಡುಗಡೆಗೆ ಪ್ಲ್ಯಾನ್

ಬೆಂಗಳೂರಿನಲ್ಲಿ ಡಿಸೆಂಬರ್ 15ರಂದು ಗ್ರ್ಯಾಂಡ್ ಆಗಿ ‘45’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲು ಪ್ಲ್ಯಾನ್ ಸಜ್ಜಾಗಿದೆ. ಈ ಕಾರ್ಯಕ್ರಮ 7 ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ನೇರ ಪ್ರಸಾರ ಆಗಲಿದೆ. ಆ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಎಲ್ಲ ಅಭಿಮಾನಿಗಳು ಬೆಂಗಳೂರಿಗೆ ಬರೋಕೆ ಆಗಲ್ಲ ಎಂಬುದನ್ನು ಗಮನದಲ್ಲಿ ಇಟ್ಟುಕೊಂಡು ಈ ರೀತಿ ಮಾಡಲಾಗುತ್ತಿದೆ.

100 ಕೋಟಿ ರೂಪಾಯಿ ಬಜೆಟ್​​ನಲ್ಲಿ ಸಿದ್ಧವಾಯ್ತು ‘45’ ಸಿನಿಮಾ?

ಬಹುನಿರೀಕ್ಷಿತ ‘45’ ಸಿನಿಮಾದ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲದಂತೆ ಸಿನಿಮಾ ನಿರ್ಮಾಣ ಮಾಡಿರುವುದಾಗಿ ಚಿತ್ರತಂಡ ಹೇಳಿದೆ. ಈ ಚಿತ್ರದ ಬಜೆಟ್ 100 ಕೋಟಿ ರೂಪಾಯಿ ಎಂದು ಹೇಳಲಾಗುತ್ತಿದೆ. ಡಿ.25ಕ್ಕೆ ‘45’ ರಿಲೀಸ್ ಆಗಲಿದೆ.

ತಮ್ಮ ಯಾವುದೇ ಸಿನಿಮಾ ರಿಲೀಸ್ ಆದರೂ ಉಪ್ಪಿ ಏಕೆ ಥಿಯೇಟರ್​ಗೆ ಹೋಗಲ್ಲ?

ಉಪೇಂದ್ರ ನಟನೆಯ ‘ಆಂಧ್ರ ಕಿಂಗ್ ತಾಲೂಕಾ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ರಾಮ್ ಪೋತಿನೇನಿ ಹೀರೋ. ಈ ಸಿನಿಮಾದಲ್ಲಿ ಉಪೇಂದ್ರ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಪ್ರಚಾರಕ್ಕಾಗಿ ಹಲವು ಸಂದರ್ಶನಗಳನ್ನು ನೀಡಿದ್ದಾರೆ. ಈ ವೇಳೆ ಅವರು ಒಂದು ವಿಷಯ ಹಂಚಿಕೊಂಡಿದ್ದಾರೆ.

ಕನ್ನಡ ಸಿನಿಮಾ ಟೀಕಿಸಲು ಬಂದ ಸಂದರ್ಶಕನಿಗೆ ಉಪೇಂದ್ರ ಖಡಕ್ ಉತ್ತರ

ತೆಲುಗು ಸಂದರ್ಶಕರೊಬ್ಬರ ಪ್ರಶ್ನೆಗೆ ಉಪೇಂದ್ರ ಅವರು ಕನ್ನಡ ಚಿತ್ರರಂಗದ ದೊಡ್ಡ ಬಜೆಟ್ ಸಿನಿಮಾಗಳ ಇತಿಹಾಸವನ್ನು ಅನಾವರಣಗೊಳಿಸಿದ್ದಾರೆ.ವಿಷ್ಣುವರ್ಧನ್ ಕಾಲದಲ್ಲೇ ಸಿಂಗಾಪುರದಲ್ಲಿ ಚಿತ್ರೀಕರಣಗೊಂಡ ರಾಜಾ ಕುಳ್ಳದಂತಹ ಅದ್ಧೂರಿ ಸಿನಿಮಾಗಳು ಬಂದಿದ್ದವು ಎಂದು ಉಪ್ಪಿ ವಿವರಿಸಿದರು. ಕಾಂತಾರ, ಕೆಜಿಎಫ್​ಗೂ ಮುನ್ನವೇ ಕನ್ನಡದಲ್ಲಿ ದೊಡ್ಡ ಬಜೆಟ್ ಚಿತ್ರಗಳು ಸಿದ್ಧವಾಗಿದ್ದವು ಎಂಬ ಸತ್ಯವನ್ನು ತೆರೆದಿಟ್ಟರು.

ಶಂಕರ್​ ನಾಗ್ ಬಯೋಪಿಕ್ ಬಗ್ಗೆ ಮಾತನಾಡಿದ ಉಪೇಂದ್ರ; ಸಿಕ್ತು ದೊಡ್ಡ ಅಪ್​ಡೇಟ್

ಶಂಕರ್ ನಾಗ್ ಜನ್ಮದಿನದಂದು ಉಪೇಂದ್ರ ಅವರು ಅವರ ಬಯೋಪಿಕ್ ಕುರಿತು ಮಾತನಾಡಿದ್ದಾರೆ. ಬಯೋಪಿಕ್ ನಿರ್ಮಾಣವು ಫಿಕ್ಷನ್ ಸಿನಿಮಾ ಮಾಡಿದಷ್ಟು ಸುಲಭವಲ್ಲ.ಅನಂತ್ ನಾಗ್ ಮತ್ತು ಗಾಯತ್ರಿ ಅವರ ಒಪ್ಪಿಗೆ, ಸ್ಕ್ರಿಪ್ಟ್ ತಯಾರಿ ಹಾಗೂ ವಾಣಿಜ್ಯಕ ಅಂಶಗಳ ಸಮತೋಲನ ಕಾಯ್ದುಕೊಳ್ಳುವುದು ಮುಖ್ಯ ಎಂದು ಅವರು ಹೇಳಿದ್ದಾರೆ.

ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ?
ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ?
ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್!
ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್!
ಕೇಸರಿ ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ಬೆಂಬಲಕ್ಕೆ ನಿಂತ ಹೆಬ್ಬಾಳ್ಕರ್!
ಕೇಸರಿ ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ಬೆಂಬಲಕ್ಕೆ ನಿಂತ ಹೆಬ್ಬಾಳ್ಕರ್!
ನಾಳೆ ಕಾಂಗ್ರೆಸ್​ನಿಂದ ರಾಜಭವನ ಚಲೋ: ಡಿಕೆಶಿ ಹೇಳಿದ್ದೇನು ನೋಡಿ
ನಾಳೆ ಕಾಂಗ್ರೆಸ್​ನಿಂದ ರಾಜಭವನ ಚಲೋ: ಡಿಕೆಶಿ ಹೇಳಿದ್ದೇನು ನೋಡಿ
ಅಭಿಷೇಕ್ ಶರ್ಮಾ ಬ್ಯಾಟ್ ಚೆಕ್ ಮಾಡಿದ ನ್ಯೂಝಿಲೆಂಡ್ ಆಟಗಾರರು
ಅಭಿಷೇಕ್ ಶರ್ಮಾ ಬ್ಯಾಟ್ ಚೆಕ್ ಮಾಡಿದ ನ್ಯೂಝಿಲೆಂಡ್ ಆಟಗಾರರು
ಚುನಾವಣೆಗೆಂದು ಹಣ ಸಾಗಿಸುವಾಗ ನಡೀತಾ 400 ಕೋಟಿ ದರೋಡೆ?
ಚುನಾವಣೆಗೆಂದು ಹಣ ಸಾಗಿಸುವಾಗ ನಡೀತಾ 400 ಕೋಟಿ ದರೋಡೆ?