AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Upendra

Upendra

ಉಪೇಂದ್ರ ಅವರು ನಟ, ನಿರ್ದೇಶಕ ಮತ್ತು ಚಿತ್ರಕಥೆಗಾರ. ಅವರು ಕನ್ನಡ ಚಿತ್ರರಂಗದಲ್ಲಿ ಹೆಚ್ಚು ಗುರುತಿಸಿಕೊಂಡಿದ್ದು, ತೆಲುಗು ಹಾಗೂ ತಮಿಳು ರಂಗದಲ್ಲೂ ಹೆಸರು ಮಾಡಿದ್ದಾರೆ. ಅವರು ರಾಜಕೀಯಕ್ಕೂ ಕಾಲಿಟ್ಟಿದ್ದು, ‘ಪ್ರಜಾಕೀಯ’ ಹೆಸರಿನ ಪಕ್ಷ ಆರಂಭಿಸಿದ್ದಾರೆ. ಅವರು ‘ಎ’, ‘ಓಂ’ ‘ಉಪೇಂದ್ರ ರೀತಿಯ ಸಿನಿಮಾಗಳನ್ನು ನಿರ್ದೇಶನ ಮಾಡಿ ಖ್ಯಾತಿ ಪಡೆದಿದ್ದಾರೆ. ಅವರ ನಿರ್ದೇಶನದ, ಶಿವರಾಜ್‌ಕುಮಾರ್ ನಟನೆಯ ‘ಓಂ’ ಸಿನಿಮಾ ನೂರಾರು ಬಾರಿ ಥಿಯೇಟರ್‌ ‌ನಲ್ಲಿ ರೀ-ರಿಲೀಸ್ ಆಗಿ ದಾಖಲೆ ಬರೆದಿತ್ತು. ಉಪೇಂದ್ರ ಅವರ ಆಲೋಚನೆಗಳು ಭಿನ್ನವಾಗಿ ಇರುತ್ತವೆ. ಈ ಕಾರಣಕ್ಕೆ ಅವರ ಸಿನಿಮಾಗಳು ಜನರಿಗೆ ಇಷ್ಟ ಆಗುತ್ತವೆ. ಉಪೇಂದ್ರ ಬೆಂಗಳೂರಿನಲ್ಲಿ ಸ್ವಂತ ಮನೆ ಹೊಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಪ್ರಿಯಾಂಕ ಅವರನ್ನು ಉಪೇಂದ್ರ ಮದುವೆ ಆಗಿದ್ದು, ಈ ದಂಪತಿಗೆ ಇಬ್ಬರು ಮಕ್ಕಳು

ಇನ್ನೂ ಹೆಚ್ಚು ಓದಿ

ಉಪೇಂದ್ರ ನಟನೆಯ ‘ನೆಕ್ಸ್ಟ್ ಲೆವೆಲ್’ ಸಿನಿಮಾಗೆ ಮಾಲಾಶ್ರೀ ಪುತ್ರಿ ಆರಾಧನಾ ನಾಯಕಿ

ಉಪೇಂದ್ರ ಅವರ ಹೊಸ ಸಿನಿಮಾಗೆ ಮಾಲಾಶ್ರೀ ಮಗಳು ಆರಾಧನಾ ರಾಮ್ ಅವರು ನಾಯಕಿ ಆಗಿದ್ದಾರೆ. ಈ ಸಿನಿಮಾಗೆ ‘ನೆಕ್ಸ್ಟ್ ಲೆವೆಲ್’ ಎಂದು ಶೀರ್ಷಿಕೆ ಇಡಲಾಗಿದೆ. ಅದ್ದೂರಿಯಾಗಿ ಮುಹೂರ್ತ ಮಾಡಲಾಗಿದೆ. ತರುಣ್ ಶಿವಪ್ಪ ಅವರ ನಿರ್ಮಾಣ, ಅರವಿಂದ್ ಕೌಶಿಕ್ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.

‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ ಉಪೇಂದ್ರ

ನಟಿ ಪ್ರಿಯಾಂಕಾ ಉಪೇಂದ್ರ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಇದ್ದಾರೆ. ಆದರೂ ಕೂಡ ಕೆಲವು ಹೀರೋಗಳ ಜೊತೆ ನಟಿಸಲು ಅವರಿಗೆ ಸಾಧ್ಯವಾಗಲಿಲ್ಲ. ಆ ಬಗ್ಗೆ ಅವರು ಮಾತನಾಡಿದ್ದಾರೆ. ಟಿವಿ9 ಜೊತೆ ಮಾತನಾಡಿದ ಅವರು ಆ ದಿನಗಳನ್ನು ನೆನಪಿಸಿಕೊಂಡರು. ಪ್ರಿಯಾಂಕಾ ಉಪೇಂದ್ರ ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ..

ಅಂದು ಶಿವಣ್ಣ, ಇಂದು ಧನುಷ್; ‘ಓಂ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಘೋಷಣೆ

‘ಓಂ’ ಸಿನಿಮಾದ ಹೆಸರು ಕೇಳಿದರೆ ಸಿನಿಪ್ರಿಯರಿಗೆ ಥ್ರಿಲ್ ಆಗುತ್ತದೆ. ಆ ಚಿತ್ರದ ಶೀರ್ಷಿಕೆಗೆ ಇರುವ ಪವರ್ ಅಂಥದ್ದು. ನಿರ್ದೇಶಕ ಉಪೇಂದ್ರ ಮತ್ತು ನಟ ಶಿವರಾಜ್​ಕುಮಾರ್ ಅವರ ಕಾಂಬಿನೇಷನ್​ನಲ್ಲಿ ಬಂದ ಆ ಸಿನಿಮಾದ ಕ್ರೇಜ್ ಸಾಮಾನ್ಯದ್ದಲ್ಲ. ‘ಓಂ’ ಶೀರ್ಷಿಕೆ ಈಗ ಕಾಲಿವುಡ್​ನಲ್ಲಿ ಕೂಡ ಸದ್ದು ಮಾಡುತ್ತಿದೆ.

ಉಪೇಂದ್ರ ಅಣ್ಣನ ಮಗ ನಿರಂಜನ್ ನಿಶ್ಚಿತಾರ್ಥ; ಹುಡುಗಿ ಬಗ್ಗೆ ಇಲ್ಲಿದೆ ಮಾಹಿತಿ

ಸ್ಯಾಂಡಲ್‌ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರ ಕುಟುಂಬದಲ್ಲಿ ಈಗ ಮದುವೆ ಸಂಭ್ರಮ ಮನೆಮಾಡಿದೆ. ಅವರ ಅಣ್ಣನ ಮಗ, ನಟ ನಿರಂಜನ್ ಸುಧೀಂದ್ರ ಅವರು ವೈದ್ಯೆ ಸಂಜನಾ ಬಿ ರಾಜ್ ಅವರೊಂದಿಗೆ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಈ ಸಮಾರಂಭದಲ್ಲಿ ಆಪ್ತರು ಮಾತ್ರ ಭಾಗಿಯಾಗಿದ್ದರು. ಸಂಜನಾ ಬಿ ರಾಜ್ ಸ್ತ್ರೀರೋಗ ತಜ್ಞರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

‘ಉಪೇಂದ್ರ’ ಸಿನಿಮಾ ಮರುಬಿಡುಗಡೆ: ಸರಿಯಾದ ಉತ್ತರ ನೀಡಿದರೆ 1 ಕೋಟಿ ರೂ. ಬಹುಮಾನ

‘ಉಪೇಂದ್ರ’ ಸಿನಿಮಾ ಮೂಲಕ ಬುದ್ಧಿವಂತ ಪ್ರೇಕ್ಷಕರಿಗೆ ಪ್ರಶ್ನೆ ಕೇಳಲಾಗುತ್ತದೆ. ಸರಿ ಉತ್ತರ ನೀಡಿದರೆ ಕೋಟ್ಯಂತರ ರೂಪಾಯಿ ಬಹುಮಾನ ಸಿಗಲಿದೆ. ಕೋಟ್ಯಾಧಿಪತಿ ಆಗುವ ಅವಕಾಶ ಯಾರಿಗೆ ಸಿಗಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ‘ಉಪೇಂದ್ರ’ ಸಿನಿಮಾದ ಮರು ಬಿಡುಗಡೆ ಪ್ರಯುಕ್ತ ಈ ಆಫರ್ ನೀಡಲಾಗಿದೆ.

‘ಕತ್ತರಿಗುಪ್ಪೆಯಲ್ಲಿ ನಾನು ಚುನಾವಣೆಗೆ ನಿಲ್ಲಬಹುದು’: ಏನಿದು ಉಪೇಂದ್ರ ಪ್ಲ್ಯಾನ್?

ನಟ ಉಪೇಂದ್ರ ಅವರು ಹೊಸ ಆಲೋಚನೆಗಳ ಮೂಲಕ ಹೆಸರಾದವರು. ಈಗ ಅವರು ಪ್ರಜಾಕೀಯದ ಮೂಲಕ ಮತ್ತೆ ಜನರ ಎದುರು ಬಂದಿದ್ದಾರೆ. ತಮ್ಮ ಪಕ್ಷದ ಹೊಸ ಆ್ಯಪ್ ಶುರು ಮಾಡಿದ್ದಾರೆ. ಆದರೆ ಈವರೆಗೂ ಅವರು ಚುನಾವಣೆಗೆ ಸ್ಪರ್ಧಿಸಿಲ್ಲ. ಆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಅವರೇ ಮಾತನಾಡಿದ್ದಾರೆ.

ಉಪೇಂದ್ರ ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ರಿಯಲ್ ಸ್ಟಾರ್

ನಟ, ನಿರ್ದೇಶಕ ಉಪೇಂದ್ರ ಅವರು ಮತ್ತೆ ಪ್ರಜಾಕೀಯ ಕೆಲಸಗಳಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಇಂದು (ಏಪ್ರಿಲ್ 1) ಅವರು ‘ದಿ ರಿಯಲ್ ಪ್ರಜಾಕೀಯ’ ಆ್ಯಪ್ ಬಿಡುಗಡೆ ಮಾಡಿದರು. ಈ ವೇಳೆ ಅವರು ಸುದ್ದಿಗೋಷ್ಠಿ ನಡೆಸಿದರು. ಮಾಧ್ಯಮದ ಪ್ರಶ್ನೆಗಳಿಗೆ ಉತ್ತರ ನೀಡಿದರು. ವಿಡಿಯೋ ನೋಡಿ..

Upendra on April Fool Day: ಏಪ್ರಿಲ್ ಮೂರ್ಖರ ದಿನವಲ್ಲ, ಬುದ್ಧಿವಂತರ ದಿನ: ಉಪೇಂದ್ರ

Upendra Press Meet on April Fool Day: ಏಪ್ರಿಲ್ 1ರಂದು ಮೂರ್ಖರ ದಿನ ಎಂದು ಆಚರಣೆ ಮಾಡಲಾಗುತ್ತದೆ. ಜನರನ್ನು ಮೂರ್ಖರನ್ನಾಗಿ ಮಾಡುವ ಕೆಲಸ ಇಂದು ಆಗುತ್ತದೆ. ಆದರೆ, ಈ ದಿನವನ್ನು ಬುದ್ಧಿವಂತರ ದಿನವನ್ನಾಗಿ ಆಚರಿಸಬೇಕು ಎಂದು ಉಪೇಂದ್ರ ಕೋರಿದ್ದಾರೆ. ಈ ಸಂದರ್ಭದ ವಿಡಿಯೋ ಗಮನ ಸೆಳೆದಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಥ್ರಿಲ್ಲರ್ ಮಂಜು, ಉಪೇಂದ್ರ ನಡುವಿನ 35 ವರ್ಷಗಳ ಸ್ನೇಹ ಎಂಥದ್ದು ನೋಡಿ

ಉಪೇಂದ್ರ ಮತ್ತು ಥ್ರಿಲ್ಲರ್ ಮಂಜು ಒಟ್ಟಿಗೆ ಪ್ರಯಾಣ ಮಾಡಿದ್ದಾರೆ. ಎಲ್ಲಿಗೆ ಎಂಬುದನ್ನು ಮಂಜು ವಿವರಿಸಿದ್ದಾರೆ. ಆತ್ಮೀಯ ಆಹ್ವಾನವನ್ನು ಸ್ವೀಕರಿಸಿ ಬಂದಿದ್ದಕ್ಕೆ ಉಪೇಂದ್ರ ಅವರಿಗೆ ಥ್ರಿಲ್ಲರ್ ಮಂಜು ಧನ್ಯವಾದ ತಿಳಿಸಿದ್ದಾರೆ. ‘ಉಪೇಂದ್ರ ಅವರು ನನ್ನ ಆತ್ಮೀಯರು, ಸ್ನೇಹಿತರು, ನನ್ನ ಸಹೋದರ. ಎಲ್ಲಕ್ಕಿಂತ ಮಿಗಿಲಾಗಿ ಒಳ್ಳೆಯ ವ್ಯಕ್ತಿ’ ಎಂದು ಥ್ರಿಲ್ಲರ್ ಮಂಜು ಹೇಳಿದ್ದಾರೆ.

ಉಪೇಂದ್ರ, ರಮ್ಯಾ ನಟನೆಯ ‘ರಕ್ತ ಕಾಶ್ಮೀರ’ ಸಿನಿಮಾ ಜನವರಿ 30ಕ್ಕೆ ರಿಲೀಸ್

ಎಸ್.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ರಕ್ತ ಕಾಶ್ಮೀರ’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ರಮ್ಯಾ, ಉಪೇಂದ್ರ, ದೊಡ್ಡಣ್ಣ, ಕುರಿ ಪ್ರತಾಪ್ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ದೇಶಭಕ್ತಿ ಕಥಾಹಂದರ ಹೊಂದಿರುವ ಈ ಸಿನಿಮಾ ಜನವರಿ 30ಕ್ಕೆ ರಾಜ್ಯಾದ್ಯಂತ ರಿಲೀಸ್ ಆಗಲಿದೆ.

‘45’ ಸಿನಿಮಾ ಒಟಿಟಿ ರಿಲೀಸ್: ಜೀ5 ಮೂಲಕ ಜನವರಿ 23ರಿಂದ ಪ್ರಸಾರ ಶುರು

ಜನವರಿ 23ರಿಂದ ಜೀ5 ಒಟಿಟಿ ಮೂಲಕ ‘45’ ಸಿನಿಮಾ ಪ್ರಸಾರ ಆಗಲಿದೆ. ಶಿವರಾಜ್​​ಕುಮಾರ್, ರಾಜ್ ಬಿ. ಶೆಟ್ಟಿ, ಉಪೇಂದ್ರ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಅರ್ಜುನ್ ಜನ್ಯ ನಿರ್ದೇಶನದ ಈ ಸಿನಿಮಾಗೆ ಎಂ. ರಮೇಶ್ ರೆಡ್ಡಿ ಅವರು ಬಂಡವಾಳ ಹೂಡಿದ್ದಾರೆ.

35 ವರ್ಷಗಳ ಹಿಂದಿನ ಉಪೇಂದ್ರ ಧಾರಾವಾಹಿಯ ಕ್ಲಿಪ್ ವೈರಲ್; ಆಗ ಉಪ್ಪಿ ಹೇಗಿದ್ರು ನೋಡಿ

Upendra Serial Clip: ಉಪೇಂದ್ರ ಅವರು ಯಾವುದೇ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಬಂದು, ನಿರ್ದೇಶಕ-ನಟನಾಗಿ ಬೆಳೆದ ರೋಚಕ ಪಯಣ ಈ ಲೇಖನದಲ್ಲಿ ಅನಾವರಣಗೊಂಡಿದೆ. 1991ರ 'ನಿರ್ಮಲೆಯ ಸಾಕ್ಷಿ' ಧಾರಾವಾಹಿಯ ಅವರ ಹಳೆಯ ವಿಡಿಯೋ ಕ್ಲಿಪ್ ವೈರಲ್ ಆಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ