AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Upendra

Upendra

ಉಪೇಂದ್ರ ಅವರು ನಟ, ನಿರ್ದೇಶಕ ಮತ್ತು ಚಿತ್ರಕಥೆಗಾರ. ಅವರು ಕನ್ನಡ ಚಿತ್ರರಂಗದಲ್ಲಿ ಹೆಚ್ಚು ಗುರುತಿಸಿಕೊಂಡಿದ್ದು, ತೆಲುಗು ಹಾಗೂ ತಮಿಳು ರಂಗದಲ್ಲೂ ಹೆಸರು ಮಾಡಿದ್ದಾರೆ. ಅವರು ರಾಜಕೀಯಕ್ಕೂ ಕಾಲಿಟ್ಟಿದ್ದು, ‘ಪ್ರಜಾಕೀಯ’ ಹೆಸರಿನ ಪಕ್ಷ ಆರಂಭಿಸಿದ್ದಾರೆ. ಅವರು ‘ಎ’, ‘ಓಂ’ ‘ಉಪೇಂದ್ರ ರೀತಿಯ ಸಿನಿಮಾಗಳನ್ನು ನಿರ್ದೇಶನ ಮಾಡಿ ಖ್ಯಾತಿ ಪಡೆದಿದ್ದಾರೆ. ಅವರ ನಿರ್ದೇಶನದ, ಶಿವರಾಜ್‌ಕುಮಾರ್ ನಟನೆಯ ‘ಓಂ’ ಸಿನಿಮಾ ನೂರಾರು ಬಾರಿ ಥಿಯೇಟರ್‌ ‌ನಲ್ಲಿ ರೀ-ರಿಲೀಸ್ ಆಗಿ ದಾಖಲೆ ಬರೆದಿತ್ತು. ಉಪೇಂದ್ರ ಅವರ ಆಲೋಚನೆಗಳು ಭಿನ್ನವಾಗಿ ಇರುತ್ತವೆ. ಈ ಕಾರಣಕ್ಕೆ ಅವರ ಸಿನಿಮಾಗಳು ಜನರಿಗೆ ಇಷ್ಟ ಆಗುತ್ತವೆ. ಉಪೇಂದ್ರ ಬೆಂಗಳೂರಿನಲ್ಲಿ ಸ್ವಂತ ಮನೆ ಹೊಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಪ್ರಿಯಾಂಕ ಅವರನ್ನು ಉಪೇಂದ್ರ ಮದುವೆ ಆಗಿದ್ದು, ಈ ದಂಪತಿಗೆ ಇಬ್ಬರು ಮಕ್ಕಳು

ಇನ್ನೂ ಹೆಚ್ಚು ಓದಿ

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..

ಉಪೇಂದ್ರ, ರಾಜ್​ ಬಿ. ಶೆಟ್ಟಿ, ಶಿವರಾಜ್​​ಕುಮಾರ್ ನಟನೆಯ ‘45’ ಚಿತ್ರ ಬಿಡುಗಡೆ ಆಗಿದೆ. ಈ ಸಿನಿಮಾದ ಬಾಕ್ಸ್ ಆಫೀಸ್​ ಕಲೆಕ್ಷನ್ ಎಷ್ಟು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಅಲ್ಲದೇ, ಈ ಚಿತ್ರದ ಪೈರಸಿ ಆಗಿರುವುದು ಬೇಸರದ ಸಂಗತಿ. ಈ ಬಗ್ಗೆ ನಿರ್ಮಾಪಕ ರಮೇಶ್ ರೆಡ್ಡಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

‘45’ ಸಿನಿಮಾ ಪ್ರೀಮಿಯರ್ ಶೋ: ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ಫ್ಯಾನ್ಸ್ ಸಂಭ್ರಮ ನೋಡಿ

ಶಿವರಾಜ್​​ಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಅವರು ‘45’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸ್ಟಾರ್ ಹೀರೋಗಳ ಅಭಿಮಾನಿಗಳು ಚಿತ್ರಮಂದಿರಗಳ ಎದುರು ಜೋರಾಗಿ ಸಂಭ್ರಮಿಸುತ್ತಿದ್ದಾರೆ. ಈಗಾಗಲೇ ‘45’ ಚಿತ್ರ ನೋಡಿದ ಅಭಿಮಾನಿಗಳು ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಫ್ಯಾನ್ಸ್ ಸಂಭ್ರಮದ ವಿಡಿಯೋ ನೋಡಿ..

ಅಂದು ಸುಲೋಚನಾ, ಇಂದು ಶಿವಣ್ಣ; ‘45’ ಟ್ರೇಲರ್​ಗೆ ಭಾರಿ ಮೆಚ್ಚುಗೆ

ನಟ ಶಿವರಾಜ್‌ಕುಮಾರ್ ಅವರ '45' ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಭಾರಿ ಮೆಚ್ಚುಗೆ ಗಳಿಸಿದೆ. ಸೀರೆ ಉಟ್ಟು ಕಾಣಿಸಿಕೊಂಡಿರುವ ಶಿವಣ್ಣನ ಪಾತ್ರ ಎಲ್ಲರ ಗಮನ ಸೆಳೆದಿದೆ. ಈ ಹಿಂದೆ 'ಸು ಫ್ರಮ್ ಸೋ' ಚಿತ್ರದಲ್ಲಿ ಜೆಪಿ ತುಮ್ಮಿನಾಡು ಸೀರೆ ಲುಕ್ ಪ್ರಸಿದ್ಧವಾಗಿತ್ತು. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಚೊಚ್ಚಲ ಚಿತ್ರ ‘45’ ಡಿಸೆಂಬರ್ 25ಕ್ಕೆ ತೆರೆಗೆ ಬರಲಿದೆ.

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..

ರಾಜ್ ಬಿ. ಶೆಟ್ಟಿ, ಶಿವರಾಜ್​​ಕುಮಾರ್, ಉಪೇಂದ್ರ ಅವರು ಒಟ್ಟಿಗೆ ನಟಿಸಿದ ‘45’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನಲ್ಲಿ ಅದ್ದೂರಿಯಾಗಿ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕ ಅರ್ಜುನ್ ಜನ್ಯ ಸೇರಿದಂತೆ ಇಡೀ ‘45’ ಚಿತ್ರತಂಡ ಭಾಗಿ ಆಗಿದೆ. ಲೈವ್ ವಿಡಿಯೋ ಇಲ್ಲಿದೆ ನೋಡಿ..

ಬೆಂಗಳೂರು ಸೇರಿ 8 ಕಡೆಗಳಲ್ಲಿ ಏಕಕಾಲಕ್ಕೆ ‘45’ ಟ್ರೇಲರ್ ಬಿಡುಗಡೆಗೆ ಪ್ಲ್ಯಾನ್

ಬೆಂಗಳೂರಿನಲ್ಲಿ ಡಿಸೆಂಬರ್ 15ರಂದು ಗ್ರ್ಯಾಂಡ್ ಆಗಿ ‘45’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲು ಪ್ಲ್ಯಾನ್ ಸಜ್ಜಾಗಿದೆ. ಈ ಕಾರ್ಯಕ್ರಮ 7 ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ನೇರ ಪ್ರಸಾರ ಆಗಲಿದೆ. ಆ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಎಲ್ಲ ಅಭಿಮಾನಿಗಳು ಬೆಂಗಳೂರಿಗೆ ಬರೋಕೆ ಆಗಲ್ಲ ಎಂಬುದನ್ನು ಗಮನದಲ್ಲಿ ಇಟ್ಟುಕೊಂಡು ಈ ರೀತಿ ಮಾಡಲಾಗುತ್ತಿದೆ.

100 ಕೋಟಿ ರೂಪಾಯಿ ಬಜೆಟ್​​ನಲ್ಲಿ ಸಿದ್ಧವಾಯ್ತು ‘45’ ಸಿನಿಮಾ?

ಬಹುನಿರೀಕ್ಷಿತ ‘45’ ಸಿನಿಮಾದ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲದಂತೆ ಸಿನಿಮಾ ನಿರ್ಮಾಣ ಮಾಡಿರುವುದಾಗಿ ಚಿತ್ರತಂಡ ಹೇಳಿದೆ. ಈ ಚಿತ್ರದ ಬಜೆಟ್ 100 ಕೋಟಿ ರೂಪಾಯಿ ಎಂದು ಹೇಳಲಾಗುತ್ತಿದೆ. ಡಿ.25ಕ್ಕೆ ‘45’ ರಿಲೀಸ್ ಆಗಲಿದೆ.

ತಮ್ಮ ಯಾವುದೇ ಸಿನಿಮಾ ರಿಲೀಸ್ ಆದರೂ ಉಪ್ಪಿ ಏಕೆ ಥಿಯೇಟರ್​ಗೆ ಹೋಗಲ್ಲ?

ಉಪೇಂದ್ರ ನಟನೆಯ ‘ಆಂಧ್ರ ಕಿಂಗ್ ತಾಲೂಕಾ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ರಾಮ್ ಪೋತಿನೇನಿ ಹೀರೋ. ಈ ಸಿನಿಮಾದಲ್ಲಿ ಉಪೇಂದ್ರ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಪ್ರಚಾರಕ್ಕಾಗಿ ಹಲವು ಸಂದರ್ಶನಗಳನ್ನು ನೀಡಿದ್ದಾರೆ. ಈ ವೇಳೆ ಅವರು ಒಂದು ವಿಷಯ ಹಂಚಿಕೊಂಡಿದ್ದಾರೆ.

ಕನ್ನಡ ಸಿನಿಮಾ ಟೀಕಿಸಲು ಬಂದ ಸಂದರ್ಶಕನಿಗೆ ಉಪೇಂದ್ರ ಖಡಕ್ ಉತ್ತರ

ತೆಲುಗು ಸಂದರ್ಶಕರೊಬ್ಬರ ಪ್ರಶ್ನೆಗೆ ಉಪೇಂದ್ರ ಅವರು ಕನ್ನಡ ಚಿತ್ರರಂಗದ ದೊಡ್ಡ ಬಜೆಟ್ ಸಿನಿಮಾಗಳ ಇತಿಹಾಸವನ್ನು ಅನಾವರಣಗೊಳಿಸಿದ್ದಾರೆ.ವಿಷ್ಣುವರ್ಧನ್ ಕಾಲದಲ್ಲೇ ಸಿಂಗಾಪುರದಲ್ಲಿ ಚಿತ್ರೀಕರಣಗೊಂಡ ರಾಜಾ ಕುಳ್ಳದಂತಹ ಅದ್ಧೂರಿ ಸಿನಿಮಾಗಳು ಬಂದಿದ್ದವು ಎಂದು ಉಪ್ಪಿ ವಿವರಿಸಿದರು. ಕಾಂತಾರ, ಕೆಜಿಎಫ್​ಗೂ ಮುನ್ನವೇ ಕನ್ನಡದಲ್ಲಿ ದೊಡ್ಡ ಬಜೆಟ್ ಚಿತ್ರಗಳು ಸಿದ್ಧವಾಗಿದ್ದವು ಎಂಬ ಸತ್ಯವನ್ನು ತೆರೆದಿಟ್ಟರು.

ಶಂಕರ್​ ನಾಗ್ ಬಯೋಪಿಕ್ ಬಗ್ಗೆ ಮಾತನಾಡಿದ ಉಪೇಂದ್ರ; ಸಿಕ್ತು ದೊಡ್ಡ ಅಪ್​ಡೇಟ್

ಶಂಕರ್ ನಾಗ್ ಜನ್ಮದಿನದಂದು ಉಪೇಂದ್ರ ಅವರು ಅವರ ಬಯೋಪಿಕ್ ಕುರಿತು ಮಾತನಾಡಿದ್ದಾರೆ. ಬಯೋಪಿಕ್ ನಿರ್ಮಾಣವು ಫಿಕ್ಷನ್ ಸಿನಿಮಾ ಮಾಡಿದಷ್ಟು ಸುಲಭವಲ್ಲ.ಅನಂತ್ ನಾಗ್ ಮತ್ತು ಗಾಯತ್ರಿ ಅವರ ಒಪ್ಪಿಗೆ, ಸ್ಕ್ರಿಪ್ಟ್ ತಯಾರಿ ಹಾಗೂ ವಾಣಿಜ್ಯಕ ಅಂಶಗಳ ಸಮತೋಲನ ಕಾಯ್ದುಕೊಳ್ಳುವುದು ಮುಖ್ಯ ಎಂದು ಅವರು ಹೇಳಿದ್ದಾರೆ.

‘ಯುಐ’ ಸಿನಿಮಾಗೆ ಜನ ನೀಡಿದ ರೆಸ್ಪಾನ್ಸ್ ಬಗ್ಗೆ ಉಪೇಂದ್ರಗೆ ಬೇಸರ ಇದೆಯಾ?

ನಟ, ನಿರ್ದೇಶಕ ಉಪೇಂದ್ರ ಅವರ ಅಭಿಮಾನಿಗಳು ‘ಯುಐ’ ಸಿನಿಮಾ ಬಗ್ಗೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಎಲ್ಲರಿಗೂ ಆ ಸಿನಿಮಾ ಇಷ್ಟ ಆಗಲಿಲ್ಲ. ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದ್ದಕ್ಕೆ ಉಪೇಂದ್ರ ಅವರಿಗೆ ಬೇಸರ ಇದೆಯಾ? ಈ ಪ್ರಶ್ನೆಗೆ ಸ್ವತಃ ಉಪೇಂದ್ರ ಅವರು ಉತ್ತರ ನೀಡಿದ್ದಾರೆ.

‘ಬ್ರ್ಯಾಟ್’ ಸಿನಿಮಾ ನೋಡಿ ಸಿಕ್ಕಾಪಟ್ಟೆ ಮೆಚ್ಚಿಕೊಂಡ ರಿಯಲ್ ಸ್ಟಾರ್ ಉಪೇಂದ್ರ

ಶಶಾಂಕ್ ನಿರ್ದೇಶನದ ಬ್ರ್ಯಾಟ್ ಚಿತ್ರ ಹಿಟ್ ಆಗಿದೆ. ಈ ಸಿನಿಮಾ ವೀಕ್ಷಿಸಿದ ಸೆಲೆಬ್ರಿಟಿಗಳು ಸಹ ಮೆಚ್ಚುಗೆ ಸೂಚಿಸಿದ್ದಾರೆ. ಡಾರ್ಲಿಂಗ್ ಕೃಷ್ಣ ನಟನೆಗೆ ಫ್ಯಾನ್ಸ್ ಭೇಷ್ ಎಂದಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಕೂಡ ಈಗ ‘ಬ್ರ್ಯಾಟ್’ ನೋಡಿದ್ದಾರೆ. ಅವರಿಗೆ ಈ ಚಿತ್ರ ತುಂಬ ಇಷ್ಟ ಆಗಿದೆ.

I Am God Review: ರಿಯಲ್ ಸ್ಟಾರ್ ಫ್ಯಾನ್ಸ್ ಇಷ್ಟಪಡುವಂತಿದೆ ಉಪ್ಪಿ ಶಿಷ್ಯನ ‘ಎ’ ಫ್ಲೇವರ್ ಸಿನಿಮಾ

ಉಪೇಂದ್ರ ಅವರ ಗರಡಿಯಲ್ಲಿ ಪಳಗಿದ ರವಿ ಗೌಡ ಅವರು ‘ಐ ಆ್ಯಮ್ ಗಾಡ್’ ಚಿತ್ರದಲ್ಲಿ ನಟಿಸಿ, ನಿರ್ದೇಶಿಸಿದ್ದಾರೆ. ಉಪೇಂದ್ರ ಅವರ ‘ಎ’ ಚಿತ್ರವನ್ನು ನೆನಪಿಸುವ ರೀತಿಯಲ್ಲಿ ರವಿ ಗೌಡ ಅವರು ‘ಐ ಆ್ಯಮ್ ಗಾಡ್’ ಸಿನಿಮಾ ಮಾಡಿದ್ದಾರೆ. ಸಿನಿಮಾದ ಕಥೆ ಏನು? ಒಟ್ಟಾರೆ ಚಿತ್ರ ಯಾವ ರೀತಿ ಇದೆ? ಕಲಾವಿದರ ಅಭಿನಯ ಹೇಗಿದೆ? ಈ ವಿಮರ್ಶೆಯಲ್ಲಿದೆ ಉತ್ತರ..

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?