AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varanasi Movie

Varanasi Movie

ವಾರಣಾಸಿ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಇದಕ್ಕೆ ಕಾರಣ, ಈ ಚಿತ್ರವನ್ನು ನಿರ್ದೇಶನ ಮಾಡುತ್ತಿರುವುದು ರಾಜಮೌಳಿ ಹಾಗೂ ಈ ಚಿತ್ರದಲ್ಲಿ ನಟಿಸುತ್ತಿರುವುದು ಮಹೇಶ್ ಬಾಬು. ಇವರ ಕಾಂಬಿನೇನ್​ನಲ್ಲಿ ಮೂಡಿ ಬರುತ್ತಿರುವ ಮೊದಲ ಸಿನಿಮಾ ಇದಾಗಿದೆ. ಈ ಕಾರಣದಿಂದಲೇ ಸಾಕಷ್ಟು ನಿರೀಕ್ಷೆ ಮೂಡಿದೆ. ಈ ಚಿತ್ರಕ್ಕೆ ಪ್ರಿಯಾಂಕಾ ಚೋಪ್ರಾ ನಾಯಕಿ. ಹಲವು ವರ್ಷಗಳ ಬಳಿಕ ಅವರು ಭಾರತೀಯ ಸಿನಿಮಾ ರಂಗಕ್ಕೆ ಕಂಬ್ಯಾಕ್ ಮಾಡಿದ್ದಾರೆ. ಈ ಚಿತ್ರಕ್ಕೆ ಆಸ್ಕರ್ ವಿಜೇತ ಎಂಎಂ ಕಿರವಾಣಿ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. 2027ರ ಸಮ್ಮರ್​ಗೆ ಈ ಚಿತ್ರ ರಿಲೀಸ್ ಆಗುವ ಸಾಧ್ಯತೆ ಇದೆ. ಕೀನ್ಯಾ ಸೇರಿದಂತೆ ಅನೇಕ ಕಡೆಗಳಲ್ಲಿ ಸಿನಿಮಾ ಶೂಟ್ ಮಾಡಲಾಗುತ್ತಿದೆ ಅನ್ನೋದು ವಿಶೇಷ. ‘ಆರ್​ಆರ್​ಆರ್’ ಯಶಸ್ಸಿನ ಬಳಿಕ ರಾಜಮೌಳಿ ಕೈಗೆತ್ತಿಕೊಂಡ ಸಿನಿಮಾ ಇದು ಎಂಬ ಕಾರಣದಿಂದಲೂ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ.

ಇನ್ನೂ ಹೆಚ್ಚು ಓದಿ

‘ವಾರಣಾಸಿ’ ಸಿನಿಮಾದ ಕತೆಯೇನು? ರುದ್ರ, ಮಂದಾಕಿನಿ, ಕುಂಭರ ಗುರಿಗಳೇನು?

Varanasi movie story: ‘ವಾರಣಾಸಿ’ ಸಿನಿಮಾ ಪ್ರಸ್ತುತ ವಿಶ್ವ ಚಿತ್ರರಂಗದ ಬಲು ನಿರೀಕ್ಷಿತ ಸಿನಿಮಾಗಳಲ್ಲಿ ಒಂದೆನಿಸಿಕೊಂಡಿದೆ. ಸಿನಿಮಾದ ಚಿತ್ರೀಕರಣ ಕ್ಲೈಮ್ಯಾಕ್ಸ್ ಹಂತದಲ್ಲಿದ್ದು, ಮುಂದಿನ ವರ್ಷ ಏಪ್ರಿಲ್ ತಿಂಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾದ ಬಿಡುಗಡೆ ಹತ್ತಿರ ಬರು-ಬರುತ್ತಾ, ಸಿನಿಮಾದ ಬಗ್ಗೆ, ಸಿನಿಮಾದ ಕತೆಯ ಬಗ್ಗೆ ಸಾಕಷ್ಟು ವಿಷಯಗಳು ಹೊರಬೀಳುತ್ತಿವೆ. ಇದೀಗ ಸಿನಿಮಾದ ಕತೆ ಏನೆಂಬ ಬಗ್ಗೆ ಮಾಹಿತಿ ಹರಿದಾಡುತ್ತಿದೆ.

ಮಾರುಕಟ್ಟೆಗೆ ಬರಲಿದೆ ‘ವಾರಣಾಸಿ’ ‘ರುದ್ರ ಲಾಕೆಟ್’ ಹಾಗೂ ಟೀ-ಶರ್ಟ್ಸ್

ಸೂಪರ್ ಸ್ಟಾರ್ ಮಹೇಶ್ ಬಾಬು ಅಭಿನಯದ 'ವಾರಾಣಸಿ' ಸಿನಿಮಾದಿಂದ ಹೊಸ ಅಪ್‌ಡೇಟ್ ಹೊರಬಿದ್ದಿದೆ. ಚಿತ್ರತಂಡವು ಅಧಿಕೃತ ಮರ್ಚಂಡೈಸ್ ಬಿಡುಗಡೆ ಮಾಡಲು ನಿರ್ಧರಿಸಿದ್ದು, ಇದರಲ್ಲಿ ರುದ್ರ ಲಾಕೆಟ್ ಹಾಗೂ ಟೀ-ಶರ್ಟ್‌ಗಳು ಲಭ್ಯವಿರಲಿವೆ. ಈ ಅಪರೂಪದ ಪ್ರಚಾರದ ವೈಖರಿ ಮಹೇಶ್ ಬಾಬು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಹಾಗೂ ಸಂಭ್ರಮವನ್ನು ಹೆಚ್ಚಿಸಿದೆ.

ಮಹೇಶ್ ಬಾಬು ಹುಟ್ಟುಹಬ್ಬ: ‘ವಾರಣಾಸಿ’ಯ ‘ರುದ್ರ’ನ ಲುಕ್ ರಿಲೀಸ್

Mahesh Babu Birthday: ರಾಜಮೌಳಿ ನಿರ್ದೇಶನದ ‘ವಾರಣಾಸಿ’ ಸಿನಿಮಾದ ಅಪ್​​ಡೇಟ್​​ಗಳಿಗಾಗಿ ಸಿನಿಮಾ ಪ್ರೇಮಿಗಳು ಕಾಯುತ್ತಿದ್ದಾರೆ. ಇಂದು (ಆಗಸ್ಟ್ 09) ನಟ ಮಹೇಶ್ ಬಾಬು ಹುಟ್ಟುಹಬ್ಬ. ಈ ದಿನ ರಾಜಮೌಳಿ ಅವರು ಮಹೇಶ್ ಬಾಬು ಅವರ ಪಾತ್ರ ‘ರುದ್ರ’ನ ಲುಕ್ ಅನ್ನು ಅನಾವರಣ ಮಾಡಿದ್ದಾರೆ. ಆದರೆ ಮಹೇಶ್ ಬಾಬು ಅಭಿಮಾನಿಗಳಿಗೆ ತೃಪ್ತಿ ಇಲ್ಲ.

‘ವಾರಣಾಸಿ’ ಸಿನಿಮಾ ಅಬ್ಬರ; 3,500 ಜೂನಿಯರ್ ಆರ್ಟಿಸ್ಟ್‌ಗಳ ಜತೆ ಮಹೇಶ್ ಬಾಬು ಮಹಾಯುದ್ಧ

ಹಿಂದೆಂದೂ ಕಂಡಿರದ ದೃಶ್ಯವೈಭವ ಸೃಷ್ಟಿಸಲು ನಿರ್ದೇಶಕ ರಾಜಮೌಳಿ ಅವರು ತಯಾರಾಗಿದ್ದಾರೆ. ‘ವಾರಣಾಸಿ’ ಸಿನಿಮಾದಲ್ಲಿ ಅತಿ ದೊಡ್ಡ ಯುದ್ಧದ ಸೀನ್ ಇರಲಿದೆ. ಇದು ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತಿ ದೊಡ್ಡ ಆ್ಯಕ್ಷನ್ ಸೀಕ್ವೆನ್ಸ್ ಆಗಿರಲಿದೆ ಎನ್ನಲಾಗಿದೆ. ಆ ಬಗ್ಗೆ ಇಂಟರೆಸ್ಟಿಂಗ್ ವಿಷಯ ಕೇಳಿಬಂದಿದೆ.

ರಾಜಮೌಳಿಯ ಐಮ್ಯಾಕ್ಸ್ ಥಿಯೇಟರ್ ಕನಸು ನನಸು ಮಾಡಿದ ನಟ ಮಹೇಶ್ ಬಾಬು

ದೃಶ್ಯ ವೈಭವ ಹಾಗೂ ಬಿಗ್ ಬಜೆಟ್ ಸಿನಿಮಾಗಳಿಗೆ ಹೆಸರಾಗಿರುವ ತೆಲುಗು ಚಿತ್ರರಂಗಕ್ಕೆ ಈ ಬೆಳವಣಿಗೆಯು ಬಹುದೊಡ್ಡ ಮೈಲಿಗಲ್ಲಾಗಿದೆ. ಪ್ರೇಕ್ಷಕರು ಇನ್ಮುಂದೆ ಜಾಗತಿಕ ಮಟ್ಟದ ಸಿನಿಮಾ ವೀಕ್ಷಣೆಯ ಅನುಭವವನ್ನು ಹೈದರಾಬಾದ್‌ನಲ್ಲೇ ಪಡೆಯಬಹುದಾಗಿದೆ ಎಂದು ಟಾಲಿವುಡ್ ಮಂದಿ ಖುಷಿಪಡುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ವಾರಣಾಸಿ’ ಸಿನಿಮಾಗೆ ಲೀಕ್ ಕಾಟ; ಭದ್ರತೆ ಹೆಚ್ಚಿಸಿದ ನಿರ್ದೇಶಕ ರಾಜಮೌಳಿ

ಈಗ ಲೀಕ್ ಆಗಿರುವ ಫೋಟೋದಲ್ಲಿ ಯಾವುದೇ ಕಲಾವಿದರು ಕಾಣಿಸಿಕೊಂಡಿಲ್ಲವಾದರೂ, ಚಿತ್ರದಲ್ಲಿ ಬಳಸಲಾಗುತ್ತಿರುವ ಬೃಹತ್ ಬ್ಲೂ-ಸ್ಕ್ರೀನ್‌ಗಳು ಈ ಸೀಕ್ವೆನ್ಸ್‌ಗೆ ಬೇಕಾದ ಹೈ-ಲೆವೆಲ್ ಗ್ರಾಫಿಕ್ಸ್ ಮತ್ತು ದೃಶ್ಯ ವೈಭವದ ಮುನ್ಸೂಚನೆಯನ್ನು ನೀಡುತ್ತಿವೆ. ಆದರೆ ಪದೇ ಪದೇ ಈ ರೀತಿ ಲೀಕ್ ಆಗುತ್ತಿರುವುದರಿಂದ ಸಿನಿಮಾದ ಹಲವು ಅಂಶಗಳು ಬಹಿರಂಗ ಆದಂತೆ ಆಗುತ್ತಿದೆ.

ಸಿನಿಮಾ ಪ್ರಚಾರ ಹೀಗೂ ಮಾಡ್ತಾರಾ? ರಾಜಮೌಳಿ ಬುದ್ಧಿವಂತಿಕೆ ಮೆಚ್ಚಲೇಬೇಕು

ರಾಜಮೌಳಿ ತಮ್ಮ 'ವಾರಣಾಸಿ' ಚಿತ್ರದ ಪ್ರಚಾರಕ್ಕೆ ವಿಶಿಷ್ಟ ತಂತ್ರ ಬಳಸಿದ್ದಾರೆ. ಸಿನಿಮಾ ಹೆಸರಿಲ್ಲದೆ, ಕೇವಲ ಬಿಲ್ ಬೋರ್ಡ್‌ಗಳಲ್ಲಿ ರಿಲೀಸ್ ದಿನಾಂಕ 'ಏಪ್ರಿಲ್ 7, 2027' ಘೋಷಿಸುವ ಮೂಲಕ ದೇಶಾದ್ಯಂತ ದೊಡ್ಡ ಮಟ್ಟದ ಚರ್ಚೆ ಹುಟ್ಟುಹಾಕಿದ್ದಾರೆ. ಮಹೇಶ್ ಬಾಬು, ಪ್ರಿಯಾಂಕಾ ಹಾಗೂ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಈ ಬಹುಕೋಟಿ ವೆಚ್ಚದ ಸಿನಿಮಾ.

‘ವಾರಣಾಸಿ’ ಸಿನಿಮಾದಲ್ಲಿ ಕನ್ನಡದ ಖ್ಯಾತ ಹೀರೋಗೆ ಅವಕಾಶ ಕೊಟ್ಟ ರಾಜಮೌಳಿ

ರಾಜಮೌಳಿ ನಿರ್ದೇಶನದ 'ವಾರಣಾಸಿ' ಸಿನಿಮಾ ಮಹೇಶ್ ಬಾಬು ನಾಯಕತ್ವದಲ್ಲಿ 2027ರಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಕನ್ನಡದ ಹೀರೋ ಪ್ರಮುಖ ಪಾತ್ರದಲ್ಲಿ, ಮಹೇಶ್ ಬಾಬು ಅವರ ತಂದೆಯಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಪ್ರಿಯಾಂಕಾ ಚೋಪ್ರಾ ಕೂಡ ನಟಿಸುತ್ತಿರುವ ಈ ಬಹುಭಾಷಾ ಚಿತ್ರವು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ದೇವರ ಮೇಲೆ ನಂಬಿಕೆ ಇಲ್ಲದಿದ್ದರೂ ರಾಜಮೌಳಿಗೆ ದೊಡ್ಡ ಗೆಲುವು ಸಿಕ್ಕಿದೆ: ಆರ್​ಜಿವಿ ಬೆಂಬಲ

‘ವಾರಾಣಸಿ’ ಸಿನಿಮಾದ ನಿರ್ದೇಶಕ ರಾಜಮೌಳಿ ಅವರು ದೇವರ ಬಗ್ಗೆ ನೀಡಿದ ಹೇಳಿಕೆಯಿಂದ ವಿವಾದ ಶುರುವಾಗಿದೆ. ಈ ವಿಚಾರದಲ್ಲಿ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ರಾಜಮೌಳಿ ಪರವಾಗಿ ವಾದ ಮುಂದಿಟ್ಟಿದ್ದಾರೆ. ದೇವರನ್ನು ನಂಬದೇ ಇರುವ ವಿಷಯಕ್ಕೆ ಸಂಬಂಧಿಸಿದಂತೆ ಅವರು ತಮ್ಮ ಅಭಿಪ್ರಾಯವನ್ನು ದೀರ್ಘವಾಗಿ ತಿಳಿಸಿದ್ದಾರೆ.

ಗ್ರ್ಯಾಂಡ್ ಟೈಟಲ್ ಲಾಂಚ್ ಈವೆಂಟ್ ವ್ಯರ್ಥ; ಬದಲಾಗಲಿದೆ ‘ವಾರಣಾಸಿ’ ಟೈಟಲ್?

ಎಸ್​ಎಸ್ ರಾಜಮೌಳಿ ಅವರ 'ವಾರಣಾಸಿ' ಸಿನಿಮಾದ ಶೀರ್ಷಿಕೆ ವಿವಾದ ಸೃಷ್ಟಿ ಮಾಡಿದೆ. ಸಿಎಚ್ ಸುಬ್ಬಾ ರೆಡ್ಡಿ 'ವಾರಣಾಸಿ' (Vaaranasi) ಟೈಟಲ್ ನೋಂದಾಯಿಸಿದ್ದರೆ, ರಾಜಮೌಳಿ 'ವಾರಣಾಸಿ' (Varanasi) ಟೈಟಲ್ ನೋಂದಾಯಿಸಿದ್ದಾರೆ. ಶೀರ್ಷಿಕೆ ಬದಲಾದರೆ ₹27 ಕೋಟಿ ನಷ್ಟವಾಗುವ ಸಾಧ್ಯತೆಯಿದೆ. ಈಗ ಈ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಮಾತುಕತೆ ನಡೆಯುತ್ತಿದೆ.

ಹಿಂದೂ ಭಾವನೆಗೆ ಧಕ್ಕೆ; ರಾಜಮೌಳಿ ವಿರುದ್ಧ ದಾಖಲಾಯ್ತು ದೂರು

ನಿರ್ದೇಶಕ ಎಸ್.ಎಸ್. ರಾಜಮೌಳಿ 'ವಾರಣಾಸಿ' ಚಿತ್ರದ ಕಾರ್ಯಕ್ರಮದಲ್ಲಿ ತಾಂತ್ರಿಕ ದೋಷದಿಂದ ಹನುಮಂತ ದೇವರ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಇದು ಹಿಂದೂ ಭಾವನೆಗೆ ಧಕ್ಕೆ ತಂದಿದೆ ಎಂದು ರಾಷ್ಟ್ರೀಯ ವಾನರ ಸೇನಾ ದೂರು ದಾಖಲಿಸಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕೆಂದು ದೂರುದಾರರು ಒತ್ತಾಯಿಸಿದ್ದಾರೆ.

‘ವಾರಣಾಸಿ’ ಈವೆಂಟ್ ಹಣದಲ್ಲಿ ಬಿಗ್ ಬಜೆಟ್ ಸಿನಿಮಾ ಮಾಡಬಹುದು; ಖರ್ಚಾಗಿದ್ದು ಇಷ್ಟೊಂದಾ?

ರಾಜಮೌಳಿ ಮತ್ತು ಮಹೇಶ್ ಬಾಬು ಅವರ ಬಹುನಿರೀಕ್ಷಿತ ಸಿನಿಮಾದ ಟೈಟಲ್ ಟೀಸರ್ ಲಾಂಚ್ ಕಾರ್ಯಕ್ರಮಕ್ಕೆ ಬರೋಬ್ಬರಿ ಸಾಕಷ್ಟು ಖರ್ಚಾದಿದೆ. ರಾಮೋಜಿ ಫಿಲ್ಮ್ ಸಿಟಿಯಲ್ಲಿ ಅದ್ದೂರಿಯಾಗಿ ನಡೆದ ಈವೆಂಟ್​ಗೆ ಪ್ರಿಯಾಂಕಾ ಚೋಪ್ರಾ, ಶ್ರುತಿ ಹಾಸನ್ ಮುಂತಾದವರು ಭಾಗವಹಿಸಿದ್ದರು. ಒಂದು ಸಣ್ಣ ಚಿತ್ರವನ್ನೇ ನಿರ್ಮಿಸುವಷ್ಟು ಹಣವನ್ನು ರಾಜಮೌಳಿ ತಮ್ಮ ಸಿನಿಮಾದ ಪ್ರಚಾರಕ್ಕೆ ಸುರಿದಿರುವುದು ಅಚ್ಚರಿ ಮೂಡಿಸಿದೆ.