AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video

Viral Video

ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿರುವ ವಿಡಿಯೋಗಳನ್ನು ಹಾಗೂ ಸುದ್ದಿಗಳನ್ನು ಇಲ್ಲಿ ಅಪ್ಡೇಟ್​​​ ಮಾಡಲಾಗುವುದು. ಓದುಗರಿಗೆ ಈ ಜಗತ್ತಿನಲ್ಲಿ ತಿಳಿಯದ ಸುದ್ದಿಗಳನ್ನು ಟ್ರೆಂಡಿಂಗ್​​​ನಲ್ಲಿ ನೀಡಲಾಗುವುದು. ಅದೆಷ್ಟು ಜನರಿಗೆ ನಮ್ಮ ಸುತ್ತ-ಮುತ್ತಲಿನಲ್ಲಿ ನಡೆಯುವ ವಿಚಾರಗಳು ತಿಳಿದಿರುವುದಿಲ್ಲ. ಹಾಗೂ ಅದನ್ನು ತಿಳಿಸುವ ಕೆಲಸವನ್ನು ಟ್ರೆಂಡಿಂಗ್​​​ ಕ್ಯಾಟಗರಿಯಲ್ಲಿ ತಿಳಿಸಲಾಗುವುದು. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್​​ ಆಗಿರುವ ಸುದ್ದಿಗಳು, ತಕ್ಷಣಕ್ಕೆ ವೈರಲ್​​​​​ ಕ್ಯಾಟಗರಿಗಳಲ್ಲಿ ನೀಡಿಲಾಗುವುದು. ಜಗತ್ತಿನಲ್ಲಿ ಆಗುವ ವೈರಲ್​​ ಸುದ್ದಿಗಳನ್ನು ಇಲ್ಲಿ ತಿಳಿಸಲಾಗುತ್ತದೆ,

ಇನ್ನೂ ಹೆಚ್ಚು ಓದಿ

Video: ಹೆರಿಗೆ ನೋವಿನಲ್ಲಿದ್ದ ಹೆಂಡ್ತಿ ಮೊಗದಲ್ಲಿ ನಗು ತರಿಸಲು ಡ್ಯಾನ್ಸ್ ಮಾಡಿದ ಗಂಡ

ಮಗುವಿಗೆ ಜನ್ಮ ನೀಡುವುದು ಎಂದರೆ ಸುಲಭದ ಮಾತಲ್ಲ. ಇದೀಗ ಹೆರಿಗೆ ನೋವಿನಲ್ಲಿದ್ದ ಹೆಂಡತಿ ಮೊಗದಲ್ಲಿ ನಗು ತರಿಸಲು  ಪ್ರಯತ್ನ ಪಟ್ಟಿದ್ದಾನೆ. ಹೌದು, ಆಸ್ಪತ್ರೆಯಲ್ಲಿದ್ದ ಪತ್ನಿಯ ಮುಂದೆ ಡ್ಯಾನ್ಸ್ ಮಾಡಿ, ನೋವಿನ ನಡುವೆಯೂ ಆಕೆ ನಗುವಂತೆ ಮಾಡಿದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಕಣ್ಣೀರು ಹಾಕುತ್ತಿದ್ದ ಯುವಕನನ್ನು ತಬ್ಬಿಕೊಂಡು ಸಮಾಧಾನ ಪಡಿಸಿದ ಗೋಮಾತೆ

ಮನುಷ್ಯನಿಗೆ ಹೋಲಿಸಿದ್ರೆ ಈ ಪ್ರಾಣಿಗಳೇ ಭಾವನೆಗೆ ಸ್ಪಂದಿಸುತ್ತವೆ. ಸೋಶಿಯಲ್‌ ಮೀಡಿಯಾದಲ್ಲಿ ಇಂತಹ ಸಾಕಷ್ಟು ದೃಶ್ಯಗಳು ವೈರಲ್‌ ಆಗುತ್ತಿರುತ್ತವೆ. ಇದೀಗ ಇದಕ್ಕೆ ಸಾಕ್ಷಿಯೆನ್ನುವಂತಿದೆ ಈ ದೃಶ್ಯ. ವೈರಲ್ ಆಗಿರುವ ವಿಡಿಯೋದಲ್ಲಿ ಯುವಕನೊಬ್ಬ ಕಣ್ಣೀರು ಹಾಕುತ್ತಿದ್ದಂತೆ ಹಸುವೊಂದು ತಬ್ಬಿಕೊಂಡು ಸಮಾಧಾನ ಪಡಿಸುವಂತಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಜೆಸಿಬಿ ಜೊತೆ ಆನೆಯ ಕಾಳಗ; ಇದು ನನ್ನ ಕಾಡು ಎಂದ ಗಜರಾಜ

ಕಾಡನ್ನು ರಕ್ಷಿಸಲು ಜೆಸಿಬಿ ಮುಂದೆ ಆನೆಯೊಂದು ನಿಂತಿರುವುದನ್ನು ತೋರಿಸುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತ ವೈರಲ್ ಆಗುತ್ತಿದೆ. ಅಸ್ಸಾಂನಿಂದ ಬಂದಿದೆ ಎಂದು ಪ್ರಚಾರ ಮಾಡಲಾಗುತ್ತಿರುವ ಈ ವಿಡಿಯೋದಲ್ಲಿ, ಒಂದು ದೊಡ್ಡ ಆನೆ ಮತ್ತು ಜೆಸಿಬಿ ಯಂತ್ರ ಪರಸ್ಪರ ಎದುರಾಗಿ ನಿಂತಿರುವುದು ಕಾಣಿಸುತ್ತಿದ್ದು, ಇದು ನೆಟ್ಟಿಗರ ಗಮನ ಸೆಳೆಯುತ್ತಿದೆ. ಈ ವಿಡಿಯೊದಲ್ಲಿ, ಆನೆಯೊಂದು ಹಸಿರು ಪ್ರದೇಶದ ಮಧ್ಯದಲ್ಲಿ ನಿಂತಿದೆ, ಅದರ ಮುಂದೆ ಒಂದು ಜೆಸಿಬಿ ಯಂತ್ರವಿದೆ. ಯಂತ್ರವು ಮುಂದೆ ಚಲಿಸುತ್ತಿರುವಂತೆ ತೋರುತ್ತಿದೆ ಮತ್ತು ಆನೆಯನ್ನು ಪಕ್ಕಕ್ಕೆ ತಳ್ಳಲು ಪ್ರಯತ್ನಿಸುತ್ತಿದೆ. ಆನೆ ಸ್ವಲ್ಪವೂ ಹಿಂದೆ ಸರಿಯುವುದಿಲ್ಲ, ಆದರೆ ಅಲ್ಲಿಯೇ ನಿಂತು, ತನ್ನ ಸೊಂಡಿಲನ್ನು ಎತ್ತಿ ಜೆಸಿಬಿಯನ್ನು ಎದುರಿಸುತ್ತಿದೆ.

Video: ಮಾಲೀಕನ ತೊಡೆ ಮೇಲೆ ತಲೆಯಿಟ್ಟು ಮಲಗಿದ ಮರಿಯಾನೆ

ಪುಟಾಣಿಗಳು ಆನೆಮರಿಗಳು ಹಾಯಾಗಿ ನಿದ್ರಿಸುವುದನ್ನು ನೋಡೋದೇ ಚಂದ. ಗಜರಾಜನ ವಿಡಿಯೋಗಳು ಸೋಶಿಯಲ್‌ ಮೀಡಿಯಾದಲ್ಲಿ ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಮರಿಯಾನೆಯೊಂದು ಮಾಲೀಕನ ತೊಡೆ ಮೇಲೆ ಹಾಯಾಗಿ ನಿದ್ರಿಸಿದೆ. ಈ ಕ್ಯೂಟ್ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ.  ಈ ಸ್ವಾರ್ಥ ಬಯಸದ ಪರಿಶುದ್ಧ ಪ್ರೀತಿಯನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ

Video: ಬೆಂಗಳೂರಿನ ಆಟೋ ಚಾಲಕನ ಆತ್ಮೀಯತೆಗೆ ಫಿದಾ ಆದ ವಿದೇಶಿಗ

ವಿದೇಶಿಗರು ಭಾರತಕ್ಕೆ ಭೇಟಿ ನೀಡಿದ್ರೆ ಇಲ್ಲಿನ ಅತಿಥಿ ಸತ್ಕಾರಕ್ಕೆ, ಅಪರಿಚಿತ ವ್ಯಕ್ತಿಗಳ ಜತೆಗೆ ಬೆರೆಯುವ ರೀತಿಗೆ ಫಿದಾ ಆಗೋದಿದೆ. ಭಾರತೀಯರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ವಿದೇಶಿಗರ ವಿಡಿಯೋಗಳನ್ನು ನೀವು ನೋಡಿರುತ್ತೀರಿ. ಇದೀಗ ವಿದೇಶಿಗನೊಬ್ಬ ಬೆಂಗಳೂರಿನ ಆಟೋ ಚಾಲಕನ ಆತ್ಮೀಯ ಮಾತಿಗೆ ಮನಸೋತಿದ್ದಾನೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಹಾಯಾಗಿ ಮಲಗಿರುವ ಶ್ವಾನಕ್ಕೆ ಬೀಸಣಿಗೆಯಲ್ಲಿ ಗಾಳಿ ಬೀಸುತ್ತಿರುವ ವೃದ್ಧ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ಹೃದಯಕ್ಕೆ ತುಂಬಾನೇ ಹತ್ತಿರವಾಗುತ್ತದೆ. ಇದೀಗ ಇಂತಹದ್ದೇ ದೃಶ್ಯ ಇದಾಗಿದೆ. ಬೀದಿ ಬದಿಯಲ್ಲಿ ಹಾಯಾಗಿ ಮಲಗಿರುವ ಶ್ವಾನಕ್ಕೆ ಬೀಸಣಿಗೆಯಲ್ಲಿ ಗಾಳಿ ಬೀಸುತ್ತಾ ವೃದ್ಧನೊಬ್ಬ ಕುಳಿತುಕೊಂಡಿದ್ದಾನೆ. ಈ ಹೃದಯ ಸ್ಪರ್ಶಿ ಕ್ಲಿಪ್‌ ನೆಟ್ಟಿಗರ ಮನಸ್ಸು ಗೆದ್ದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಬಿಎಂಟಿಸಿ ಪ್ರಯಾಣಿಕರೇ ಎಚ್ಚರ: ಪ್ರಯಾಣಿಕರ ಸೋಗಿನಲ್ಲಿ ಬಂದು ಕಂಡಕ್ಟರ್ ಬ್ಯಾಗನ್ನೇ ಎಗಿರಿಸಿದ ಮಹಿಳೆ, ವಿಡಿಯೋ ವೈರಲ್

ಪ್ರಯಾಣಿಕಳ ಸೋಗಿನಲ್ಲಿ ಬಿಎಂಟಿಸಿ ಬಸ್‌ಗೆ ಹತ್ತಿದ ಮಹಿಳೆಯೊಬ್ಬಳು ನಿರ್ವಾಹಕರ ಹಣದ ಬ್ಯಾಗ್ ಕದ್ದು ಪರಾರಿಯಾಗಲು ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬ್ಯಾಗ್ ಸಮೇತ ಮಹಿಳೆಯನ್ನು ಹಿಡಿದ ಬಸ್ ಸಿಬ್ಬಂದಿ ಪೊಲೀಸರಿಗೆ ಒಪ್ಪಿಸಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ ಇಲ್ಲಿದೆ ನೋಡಿ.

Video: ದೈಹಿಕ ನ್ಯೂನತೆಯಿದ್ರೂ ಜೀವನಕ್ಕಾಗಿ ಗುಂಡಿ ಅಗೆಯುವ ಕೆಲಸ ನೆಚ್ಚಿಕೊಂಡ ಕೂಲಿ ಕಾರ್ಮಿಕ

ಸ್ವಾಭಿಮಾನದ ಬದುಕೇ ಹಾಗೆ, ಬೇರೆ ಯಾರ ಬಳಿ ಕೈಯೊಡ್ಡದೇ ಮೂರು ಹೊತ್ತಿನ ಊಟಕ್ಕಾಗಿ ಹಾಗೂ ತನ್ನನ್ನೇ ನಂಬಿದ ಕುಟುಂಬಕ್ಕಾಗಿ ಕಷ್ಟಪಡುತ್ತಾರೆ. ಇದಕ್ಕೆ ಸಾಕ್ಷಿಯಂತಿದೆ ಈ ವಿಡಿಯೋ. ದೈಹಿಕ ಹಾಗೂ ಮಾನಸಿಕ ನೂನ್ಯತೆ ಮೆಟ್ಟಿ ನಿಂತು ಕೂಲಿ ಕಾರ್ಮಿಕನಾಗಿ ಕುಟುಂಬಕ್ಕಾಗಿ ದುಡಿಯುವ ಈ ವ್ಯಕ್ತಿಯನ್ನು ಕಂಡಾಗ ಕಣ್ಣಲ್ಲಿ ನೀರು ಜಿನುಗುತ್ತದೆ. ಈ ವಿಡಿಯೋ ವೈರಲ್ ಆಗಿದ್ದು, ಈ ದೃಶ್ಯ ನೋಡಿದ ನೆಟ್ಟಿಗರ ಕಣ್ಣು ಒದ್ದೆಯಾಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ತಂದೆಯ ಅಗಲುವಿಕೆಯ ನೋವಿನಲ್ಲಿದ್ದ ಯುವಕನಿಗೆ ಸಾಂತ್ವನ ನೀಡಿದ ಶ್ವಾನ

ಮನುಷ್ಯ ಹಾಗೂ ಮೂಕ ಪ್ರಾಣಿಗಳ ನಡುವಿನ ನಿಷ್ಕಲ್ಮಶ ಸಂಬಂಧವನ್ನು ವಿವರಿಸಲು ಅಸಾಧ್ಯ. ನೀವು ಅವುಗಳನ್ನು ಪ್ರೀತಿ, ಕಾಳಜಿಯಿಂದ ನೋಡಿಕೊಂಡರೆ ಅವು ನಿಮ್ಮ ಜತೆಗೆ ಜೀವನ ಪರ್ಯಂತ ಇರುತ್ತವೆ. ಇದೀಗ ತಂದೆಯನ್ನು ಕಳೆದುಕೊಂಡು ನೋವಿನಲ್ಲಿದ್ದ ಯುವಕನಿಗೆ ಶ್ವಾನವೊಂದು ಸಾಂತ್ವನ ನೀಡಿದೆ. ಈ ಹೃದಯ ಸ್ಪರ್ಶಿ ಕ್ಷಣದ ವಿಡಿಯೋ ವೈರಲ್ ಆಗಿದೆ.

ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಮೊದಲ ಬಾರಿ ಕಡಲ ಡ್ರೋನ್ ದಾಳಿ

ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ ಉಲ್ಬಣಗೊಂಡಿರುವ ಬೆನ್ನಲ್ಲೇ ಅಮೆರಿಕ ಸೇನೆಯು ಇರಾನ್‌ನಲ್ಲಿರುವ ಜಲಾಂತರ್ಗಾಮಿ ಮತ್ತು ಯುದ್ಧನೌಕೆಗಳ ನಿರ್ವಹಣಾ ಕೇಂದ್ರದ ಮೇಲೆ ಭಾರಿ ದಾಳಿ ನಡೆಸಿದೆ. ಅಮೆರಿಕ ಈ ದಾಳಿಯ ವಿಡಿಯೋ ಬಿಡುಗಡೆ ಮಾಡಿದೆ. ಇದೇ ಮೊದಲ ಬಾರಿಗೆ ಅಮೆರಿಕ ಪಡೆಗಳು ಯುದ್ಧ ಕಾರ್ಯಾಚರಣೆಯಲ್ಲಿ ಅತ್ಯಾಧುನಿಕ 'ಸೀ ಡ್ರೋನ್' ಅಥವಾ ಸ್ವಯಂಚಾಲಿತ ಕಡಲ ಡ್ರೋನ್‌ಗಳನ್ನು ಬಳಸಿರುವುದು ಈ ದಾಳಿಯ ವಿಶೇಷತೆಯಾಗಿದೆ.

Video: ಮಧ್ಯರಾತ್ರಿ ಊಟ ಕದ್ದು ತಿನ್ನುವಾಗ್ಲೇ ಅಮ್ಮನ ಕೈಯಲ್ಲಿ ಸಿಕ್ಕಿ ಬಿದ್ದ ಯುವಕ

ಮಕ್ಕಳು ಎದೆಯೆತ್ತರ ಬೆಳೆದು ನಿಂತಿದ್ರು ತಾಯಿಗೆ ಯಾವತ್ತಿದ್ರೂ ಪುಟ್ಟ ಮಗುನೇ. ಹೆತ್ತವರ ಮುಂದೆ ಸಣ್ಣ ಮಕ್ಕಳಂತೆ ಮಾಡುವ ವಿಡಿಯೋಗಳನ್ನು ನೀವು ನೋಡಿರುತ್ತೀರಿ. ಆದರೆ ಇದೀಗ ಇಲ್ಲೊಬ್ಬ ಯುವಕನು ಅಮ್ಮನ ಜತೆಗೆ ಜಗಳ ಮಾಡಿ ಊಟ ಬಿಟ್ಟಿದ್ದಾನೆ. ಆದ್ರೆ ಮಧ್ಯರಾತ್ರಿ ಕದ್ದು ಊಟ ಮಾಡುತ್ತಿದ್ದಾಗ ತನ್ನ ತಾಯಿಯ ಕೈಯಲ್ಲೇ ಸಿಕ್ಕಿ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಅಗಲಿದ ಪತ್ನಿಯ ಫೋಟೋ ಆಟೋದಲ್ಲಿಟ್ಟು ದಿನನಿತ್ಯ ಪೂಜಿಸುವ ಬೆಂಗಳೂರಿನ ಆಟೋ ಚಾಲಕ

ಹೆಣ್ಣಿಗೆ ಜೀವಕ್ಕಿಂತ ಹೆಚ್ಚು ಪ್ರೀತಿಸುವ ಗಂಡ ಸಿಕ್ಕರೆ ಅದಕ್ಕಿಂತ ಅದೃಷ್ಟ ಬೇರೆ ಏನು ಇಲ್ಲ. ಇಲ್ಲೊಬ್ಬ ಆಟೋಚಾಲಕನದ್ದು ಅಂತಹದ್ದೇ ಪ್ರೀತಿ. ಮಡದಿ ಅಗಲಿ 8 ವರ್ಷವಾದ್ರೂ ತಾನು ಆಟೋ ಓಡಿಸುವಾಗ ಆಕೆಯನ್ನು ನೆನಪಿಸಿಕೊಳ್ಳುತ್ತಾನೆ. ಆಟೋ ಚಾಲಕನೊಬ್ಬ ತನ್ನ ಮಡದಿಯ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸಿದ ರೀತಿ ನೆಟ್ಟಿಗರ ಹೃದಯ ಗೆದ್ದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ
ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK